AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿ ಭಟ್​, ಗುಣವಂತೆ

ಪ್ರೀತಿ ಭಟ್​, ಗುಣವಂತೆ

Author - TV9 Kannada

preetibhat802@gmail.com

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
Follow On:
ಗರ್ಭಾವಸ್ಥೆಯಲ್ಲಿ ಯೋಗ, ಸ್ಟ್ರೆಚಿಂಗ್ ಸುರಕ್ಷಿತವೇ? ತಜ್ಞರು ನೀಡಿರುವ ಮಾಹಿತಿ ನಿಮಗಾಗಿ

ಗರ್ಭಾವಸ್ಥೆಯಲ್ಲಿ ಯೋಗ, ಸ್ಟ್ರೆಚಿಂಗ್ ಸುರಕ್ಷಿತವೇ? ತಜ್ಞರು ನೀಡಿರುವ ಮಾಹಿತಿ ನಿಮಗಾಗಿ

ಗರ್ಭಾವಸ್ಥೆಯಲ್ಲಿ, ದೇಹವು ಅನೇಕ ದೈಹಿಕ ಮತ್ತು ಹಾರ್ಮೋನುಗಳ ಬದಲಾವಣೆಗಳಿಗೆ ಒಳಗಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಅನೇಕ ಮಹಿಳೆಯರು ತಮ್ಮನ್ನು ಸಕ್ರಿಯವಾಗಿ ಮತ್ತು ಸದೃಢವಾಗಿಡಲು ಯೋಗ ಮತ್ತು ಸ್ಟ್ರೆಚಿಂಗ್ ಮಾಡುವ ಬಗ್ಗೆ ಯೋಚಿಸುತ್ತಾರೆ. ಆದರೆ ಯಾವಾಗ ಪ್ರಾರಂಭಿಸುವುದು ಸುರಕ್ಷಿತ ಮತ್ತು ಪ್ರಾರಂಭಿಸುವ ಮೊದಲು ಯಾವ ವಿಷಯಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳಬೇಕು ಎಂಬುದನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ. ಅದರ ಜೊತೆಗೆ ಯಾರಿಗೆ ವೈದ್ಯರ ಸಲಹೆ ಬೇಕು ತಿಳಿದುಕೊಳ್ಳಿ. ಸಂಪೂರ್ಣ ಮಾಹಿತಿ ಸ್ಟೋರಿಯಲ್ಲಿದೆ.

ಊಟ ಮಾಡಿದ ತಕ್ಷಣ ಚಹಾ ಕುಡಿಯುವ ಅಭ್ಯಾಸ ನಿಮಗಿದ್ಯಾ? ಇದು ಆರೋಗ್ಯಕ್ಕೆ ಒಳ್ಳೆಯದಾ, ಕೆಟ್ಟದಾ?

ಊಟ ಮಾಡಿದ ತಕ್ಷಣ ಚಹಾ ಕುಡಿಯುವ ಅಭ್ಯಾಸ ನಿಮಗಿದ್ಯಾ? ಇದು ಆರೋಗ್ಯಕ್ಕೆ ಒಳ್ಳೆಯದಾ, ಕೆಟ್ಟದಾ?

ಕೆಲವರಿಗೆ ಚಹಾ ಕುಡಿಯುವುದಕ್ಕೆ ಸಮಯವಿರುವುದಿಲ್ಲ. ಮನಸ್ಸಿಗೆ ಬಂದರೆ ಸಾಕು ಟೀ ಮಾಡಿಕೊಂಡು ಕುಡಿಯುತ್ತಾರೆ. ಇನ್ನು ಕೆಲವರು ಊಟವಾದ ಕೂಡಲೇ ಒಂದು ಕಪ್ ಚಹಾ ಕುಡಿಯುತ್ತಾರೆ. ಹಾಗಾದರೆ ಈ ಒಂದು ಅಭ್ಯಾಸ ಆರೋಗ್ಯದ ಮೇಲೆ ಯಾವ ರೀತಿ ಪರಿಣಾಮ ಬೀರಬಹುದು ಅಥವಾ ಇದು ಒಳ್ಳೆಯ ಅಭ್ಯಾಸವೋ, ಅಲ್ಲವೋ ಎಂಬುದನ್ನು ತಿಳಿದುಕೊಳ್ಳುವುದು ಒಳ್ಳೆಯದು. ಇಲ್ಲವಾದಲ್ಲಿ ಈ ಅಭ್ಯಾಸ ಮುಂದುವರೆಯುತ್ತದೆ. ಇದೆಲ್ಲದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳಲು ಚಹಾ ಯಾವಾಗ ಕುಡಿಯುವುದು ಒಳ್ಳೆಯದು ಎಂಬುದನ್ನು ಕೂಡ ತಿಳಿಯಬೇಕಾಗುತ್ತದೆ.

ಪದೇ ಪದೇ ತಲೆಸುತ್ತು ಬರುತ್ತಿದೆಯೇ? ಇದು ವಿಟಮಿನ್ ಕೊರತೆಯ ಲಕ್ಷಣವಾಗಿರಬಹುದು!

ಪದೇ ಪದೇ ತಲೆಸುತ್ತು ಬರುತ್ತಿದೆಯೇ? ಇದು ವಿಟಮಿನ್ ಕೊರತೆಯ ಲಕ್ಷಣವಾಗಿರಬಹುದು!

ಅನೇಕರಿಗೆ ಪದೇ ಪದೇ ತಲೆತಿರುಗುವಿಕೆಯ ಅನುಭವವಾಗುತ್ತಿರುತ್ತದೆ. ಆದರೆ ಕೆಲವರು ಇದನ್ನು ಕೇವಲ ಆಯಾಸ ಅಥವಾ ಸಾಮಾನ್ಯ ದೌರ್ಬಲ್ಯ ಎಂದು ಭಾವಿಸಿ ನಿರ್ಲಕ್ಷಿಸುತ್ತಾರೆ, ಆದರೆ ಕೆಲವು ಸಂದರ್ಭಗಳಲ್ಲಿ, ದೇಹದಲ್ಲಿ ವಿಟಮಿನ್ ಕೊರತೆಯೂ ಸಹ ಒಂದು ಕಾರಣವಾಗಬಹುದು. ಹಾಗಾದರೆ ಯಾವ ವಿಟಮಿನ್ ಕೊರತೆಯಾದಾಗ ತಲೆತಿರುಗುವಿಕೆ ಉಂಟಾಗಬಹುದು ಮತ್ತು ಯಾವ ರೀತಿ ಲಕ್ಷಣಗಳನ್ನು ನಿರ್ಲಕ್ಷ್ಯ ಮಾಡಬಾರದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಪ್ರತಿದಿನ ತಪ್ಪದೆ ಬೀಟ್ರೂಟ್ ಜ್ಯೂಸ್ ಕುಡಿದರೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ?

ಪ್ರತಿದಿನ ತಪ್ಪದೆ ಬೀಟ್ರೂಟ್ ಜ್ಯೂಸ್ ಕುಡಿದರೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ?

ಬೀಟ್ರೂಟ್ ರಸವು ಜೀವಸತ್ವ, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿದೆ, ಇದು ರಕ್ತದೊತ್ತಡವನ್ನು ನಿಯಂತ್ರಿಸುವುದರಿಂದ ಹಿಡಿದು ಚರ್ಮದ ಹೊಳಪನ್ನು ಹೆಚ್ಚಿಸುವವರೆಗೆ ಅನೇಕ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಆರೋಗ್ಯ ತಜ್ಞರು ಕೂಡ ಪ್ರತಿದಿನ ಒಂದು ಲೋಟ ಬೀಟ್ರೂಟ್ ರಸವನ್ನು ಕುಡಿಯುವುದರಿಂದ ದೇಹಕ್ಕೆ ಅಗತ್ಯವಾದ ಪೋಷಕಾಂಶಗಳು ದೊರೆಯುತ್ತವೆ ಎಂದು ಹೇಳುತ್ತಾರೆ. ಹಾಗಾದರೆ ಪ್ರತಿನಿತ್ಯ ಒಂದು ಗ್ಲಾಸ್ ಬೀಟ್ರೂಟ್ ಜ್ಯೂಸ್‌ ಕುಡಿಯುವುದರಿಂದ ಯಾವ ರೀತಿ ಪ್ರಯೋಜನಗಳು ಸಿಗುತ್ತದೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಹೂಸು ಬಿಡುವಾಗ ಕೆಟ್ಟ ವಾಸನೆ ಯಾಕೆ ಬರುತ್ತೆ ಗೊತ್ತಾ? ಇದರ ಹಿಂದಿರುವ ವೈಜ್ಞಾನಿಕ ಕಾರಣಗಳು ಇಲ್ಲಿವೆ

ಹೂಸು ಬಿಡುವಾಗ ಕೆಟ್ಟ ವಾಸನೆ ಯಾಕೆ ಬರುತ್ತೆ ಗೊತ್ತಾ? ಇದರ ಹಿಂದಿರುವ ವೈಜ್ಞಾನಿಕ ಕಾರಣಗಳು ಇಲ್ಲಿವೆ

ದೇಹದಲ್ಲಿನ ಅತ್ಯಂತ ನೈಸರ್ಗಿಕ ಮತ್ತು ಸಾಮಾನ್ಯ ದೈಹಿಕ ಕಾರ್ಯಗಳಲ್ಲಿ ಒಂದು ಅನಿಲ ಬಿಡುಗಡೆ (ವಾಯು ಅಥವಾ ಹೊಟ್ಟೆ ಉಬ್ಬರ). ಆರೋಗ್ಯವಂತ ವ್ಯಕ್ತಿಯು ದಿನಕ್ಕೆ ಸರಾಸರಿ 10 ರಿಂದ 20 ಬಾರಿ ಹೂಸು ಬಿಡುತ್ತಾರೆ ಎಂದು ವೈದ್ಯರು ತಜ್ಞರು ಹೇಳುತ್ತಾರೆ. ಹಾಗಿದ್ದರೂ, ಅನೇಕರು ಅದರ ಬಗ್ಗೆ ಬಹಿರಂಗವಾಗಿ ಮಾತನಾಡಲು ನಾಚಿಕೆಪಡುತ್ತಾರೆ ಮತ್ತು ಕೆಲವರು ಅದನ್ನು ಮುಜುಗರದ ಸಂಗತಿಯೆಂದು ಪರಿಗಣಿಸುತ್ತಾರೆ. ಅದರಲ್ಲಿಯೂ ಕೆಲವರಿಗೆ ಹೂಸು ಬಿಟ್ಟಾಗ ತೀವ್ರ ದುರ್ವಾಸನೆ ಬರುತ್ತದೆ. ಹಾಗಾದರೆ ಈ ರೀತಿ ವಾಸನೆ ಬರುವುದಕ್ಕೆ ಯಾವ ಆಹಾರ ಕಾರಣ ಮತ್ತು ಇದನ್ನು ತಡೆಗಟ್ಟುವುದು ಹೇಗೆ ತಿಳಿದುಕೊಳ್ಳಿ.

ಆರೋಗ್ಯ ಕಾಪಾಡಿಕೊಳ್ಳಲು ಮಳೆಗಾಲದಲ್ಲಿ ಇಂತಹ ಆಹಾರಗಳಿಂದ ದೂರವಿರಿ

ಆರೋಗ್ಯ ಕಾಪಾಡಿಕೊಳ್ಳಲು ಮಳೆಗಾಲದಲ್ಲಿ ಇಂತಹ ಆಹಾರಗಳಿಂದ ದೂರವಿರಿ

ಮಳೆಗಾಲ ಆರಂಭವಾಗಿದೆ. ಹಾಗಾಗಿ ಪ್ರತಿನಿತ್ಯ ಸೇವನೆ ಮಾಡುವ ಆಹಾರದ ಬಗ್ಗೆ ವಿಶೇಷ ಗಮನ ಹರಿಸುವುದು ಬಹಳ ಮುಖ್ಯ, ಏಕೆಂದರೆ ಸಣ್ಣ ಅಜಾಗರೂಕತೆ ಕೂಡ ಸೋಂಕು ಮತ್ತು ಆರೋಗ್ಯ ಸಮಸ್ಯೆಗಳ ಅಪಾಯವನ್ನು ಹೆಚ್ಚಿಸುತ್ತದೆ. ಹಾಗಾಗಿ ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ಮಳೆಗಾಲದಲ್ಲಿ ಯಾವ ರೀತಿಯ ಆಹಾರಗಳನ್ನು ಸೇವನೆ ಮಾಡಬಾರದು ಮತ್ತು ಆರೋಗ್ಯ ಕಾಪಾಡಿಕೊಳ್ಳಲು ಏನು ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ದಿನಕ್ಕೆ 180 ಲೀಟರ್‌ಗೂ ಹೆಚ್ಚು ರಕ್ತವನ್ನು ಶುದ್ಧೀಕರಿಸುವ ಕಿಡ್ನಿಯನ್ನು ಆರೋಗ್ಯವಾಗಿಡಲು ಈ 5 ಅಭ್ಯಾಸಗಳನ್ನು ರೂಢಿಸಿಕೊಳ್ಳಿ

ದಿನಕ್ಕೆ 180 ಲೀಟರ್‌ಗೂ ಹೆಚ್ಚು ರಕ್ತವನ್ನು ಶುದ್ಧೀಕರಿಸುವ ಕಿಡ್ನಿಯನ್ನು ಆರೋಗ್ಯವಾಗಿಡಲು ಈ 5 ಅಭ್ಯಾಸಗಳನ್ನು ರೂಢಿಸಿಕೊಳ್ಳಿ

ಜನರು ಹೃದಯ ಮತ್ತು ಮನಸ್ಸನ್ನು ಆರೋಗ್ಯವಾಗಿಡಲು ಹಲವು ಮಾರ್ಗಗಳನ್ನು ಪ್ರಯತ್ನಿಸುತ್ತಾರೆ. ಆದರೆ ದೇಹದ ಶೋಧಕ ವ್ಯವಸ್ಥೆಯಾದ ಅಂದರೆ ಶುದ್ಧೀಕರಿಸುವ ಕೆಲಸ ಮಾಡುವ ಮೂತ್ರಪಿಂಡಗಳನ್ನು ಹೆಚ್ಚಾಗಿ ನಿರ್ಲಕ್ಷಿಸಲಾಗುತ್ತದೆ. ಅವುಗಳನ್ನು ಆರೋಗ್ಯವಾಗಿಡಲು, ಹೆಚ್ಚೇನೂ ಮಾಡಬೇಕಾಗಿಲ್ಲ ಬದಲಾಗಿ ನಿತ್ಯದ ದಿನಚರಿಯಲ್ಲಿ ಕೆಲವು ಅಭ್ಯಾಸಗಳನ್ನು ರೂಢಿಸಿಕೊಳ್ಳಬೇಕು. ಹಾಗಾದರೆ ಯಾವ ರೀತಿಯ ಅಭ್ಯಾಸಗಳನ್ನು ಕಿಡ್ನಿ ಆರೋಗ್ಯ ಕಾಪಾಡಲು ಸಹಾಯ ಮಾಡುತ್ತದೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಮೆನೋಪಾಸ್ ಎಂದರೇನು? ಈ ಹಂತದ ನಂತರ ಮಹಿಳೆಯರು ಆರೋಗ್ಯದ ಬಗ್ಗೆ ಹೇಗೆ ಕಾಳಜಿ ವಹಿಸಬೇಕು?

ಮೆನೋಪಾಸ್ ಎಂದರೇನು? ಈ ಹಂತದ ನಂತರ ಮಹಿಳೆಯರು ಆರೋಗ್ಯದ ಬಗ್ಗೆ ಹೇಗೆ ಕಾಳಜಿ ವಹಿಸಬೇಕು?

ಋತುಬಂಧ ಎಂದರೆ ಮಹಿಳೆಯರ ಋತುಚಕ್ರ ಶಾಶ್ವತವಾಗಿ ನಿಲ್ಲುವ ಸಮಯ.ಈ ಹಂತದ ನಂತರ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸುವುದು ಅಗತ್ಯ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಮೆನೋಪಾಸ್ ನಂತರ ಮಹಿಳೆಯ ದೇಹದಲ್ಲಿ ಯಾವ ರೀತಿಯ ಬದಲಾವಣೆಗಳಾಗುತ್ತವೆ ಮತ್ತು ಯಾವ ರೀತಿ ಜೀವನಶೈಲಿಯಲ್ಲಿ ಬದಲಾವಣೆಗಳನ್ನು ಮಾಡಿಕೊಳ್ಳುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಶಸ್ತ್ರಚಿಕಿತ್ಸೆಯ ಪಿತಾಮಹ ಸುಶ್ರುತರಿಗೆ ಸ್ಕಾಟ್ಲೆಂಡ್‌ನಲ್ಲಿ ಗೌರವ; ರಾಯಲ್ ಕಾಲೇಜ್‌ನಲ್ಲಿ ಪ್ರತಿಮೆ ಅನಾವರಣ

ಶಸ್ತ್ರಚಿಕಿತ್ಸೆಯ ಪಿತಾಮಹ ಸುಶ್ರುತರಿಗೆ ಸ್ಕಾಟ್ಲೆಂಡ್‌ನಲ್ಲಿ ಗೌರವ; ರಾಯಲ್ ಕಾಲೇಜ್‌ನಲ್ಲಿ ಪ್ರತಿಮೆ ಅನಾವರಣ

ಸ್ಕಾಟ್ಲೆಂಡ್‌ನ ರಾಯಲ್ ಕಾಲೇಜ್ ಆಫ್ ಸರ್ಜನ್ಸ್ ಆಫ್ ಎಡಿನ್‌ಬರಾ ಸಂಸ್ಥೆಯಲ್ಲಿ, ಶಸ್ತ್ರಚಿಕಿತ್ಸೆಯ ಪಿತಾಮಹ, ಪ್ರಾಚೀನ ಭಾರತದ ಶ್ರೇಷ್ಠ ವೈದ್ಯ ಮತ್ತು ಶಸ್ತ್ರಚಿಕಿತ್ಸಕ ಆಚಾರ್ಯ ಸುಶ್ರುತ ಅವರ ಪ್ರತಿಮೆ ಅನಾವರಣಗೊಳಿಸುವ ಮೂಲಕ ವಿಶೇಷ ಗೌರವ ಸಲ್ಲಿಸಲಾಗಿದೆ. ಈ ಪ್ರತಿಮೆ ಅನಾವರಣವು ವೈದ್ಯಕೀಯ ಮತ್ತು ಶಸ್ತ್ರಚಿಕಿತ್ಸೆ ಕ್ಷೇತ್ರದಲ್ಲಿ ಸುಶ್ರುತರು ನೀಡಿದ ಅಪಾರ ಕೊಡುಗೆಯನ್ನು ವಿಶ್ವ ಮಟ್ಟದಲ್ಲಿ ಮತ್ತೊಮ್ಮೆ ಸ್ಮರಿಸುವ ಮಹತ್ವದ ಕ್ಷಣವಾಗಿದೆ.

ಈ ಆರೋಗ್ಯ ಸಮಸ್ಯೆ ಇದ್ದಾಗ ಡೆಂಗ್ಯೂ ಸೋಂಕು ಗಂಭೀರ ಸಮಸ್ಯೆಗಳನ್ನು ಉಂಟುಮಾಡಬಹುದು ಎಚ್ಚರ!

ಈ ಆರೋಗ್ಯ ಸಮಸ್ಯೆ ಇದ್ದಾಗ ಡೆಂಗ್ಯೂ ಸೋಂಕು ಗಂಭೀರ ಸಮಸ್ಯೆಗಳನ್ನು ಉಂಟುಮಾಡಬಹುದು ಎಚ್ಚರ!

ಯಾವಾಗಲೂ ಮಳೆಗಾಲದಲ್ಲಿ ಡೆಂಗ್ಯೂ ಅಪಾಯ ಹೆಚ್ಚಾಗುತ್ತದೆ. ಇದು ಸಾಮಾನ್ಯವಾಗಿ ತಿಳಿದಿರುವ ವಿಚಾರ ಹಾಗಾಗಿ ಈ ಸಮಯದಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸಲಾಗುತ್ತದೆ. ಆದರೆ ನಿಮಗೆ ಗೊತ್ತೆ? ಡೆಂಗ್ಯೂ ಕೆಲವು ಆರೋಗ್ಯ ಸಮಸ್ಯೆಗಳಿರುವರಿಗೆ ಗಂಭೀರ ಸಮಸ್ಯೆಗಳನ್ನು ಉಂಟುಮಾಡಬಹುದು. ಹೌದು, ಆರೋಗ್ಯ ತಜ್ಞರು ಕೂಡ ಈ ಬಗ್ಗೆ ಎಚ್ಚರ ವಹಿಸುವಂತೆ ಸಲಹೆ ನೀಡುತ್ತಾರೆ. ಆದರೆ ಯಾವ ಆರೋಗ್ಯ ಸಮಸ್ಯೆಗಳಿದ್ದವರು ಹೆಚ್ಚು ಎಚ್ಚರಿಕೆಯಿಂದ ಇರಬೇಕು ಮತ್ತು ಯಾವ ರೀತಿ ಮುನ್ನೆಚ್ಚರಿಕೆ ವಹಿಸಬೇಕು ಎಂಬುದು ನಿಮಗೆ ತಿಳಿದಿದೆಯೇ? ಈ ಕುರಿತ ಹೆಚ್ಚಿನ ಮಾಹಿತಿ ಸ್ಟೋರಿಯಲ್ಲಿದೆ.

ಕ್ಯಾನ್ಸರ್, ಅದರ ತಡೆಗಟ್ಟುವಿಕೆ, ಮುಂಚಿತವಾಗಿ ಪತ್ತೆಹಚ್ಚುವಿಕೆ ಮತ್ತು ಚಿಕಿತ್ಸೆಯ ವಿಧಗಳ ಬಗ್ಗೆ ಕಲಿಯುವುದು

ಕ್ಯಾನ್ಸರ್, ಅದರ ತಡೆಗಟ್ಟುವಿಕೆ, ಮುಂಚಿತವಾಗಿ ಪತ್ತೆಹಚ್ಚುವಿಕೆ ಮತ್ತು ಚಿಕಿತ್ಸೆಯ ವಿಧಗಳ ಬಗ್ಗೆ ಕಲಿಯುವುದು

ಕ್ಯಾನ್ಸರ್ ನ ಘಟನೆಗಳು ಹೆಚ್ಚುತ್ತಿವೆ. ಸ್ಕ್ರೀನಿಂಗ್ ನ ಪ್ರಭಾವದಿಂದ ಹಿಡಿದು ತಳಿಶಾಸ್ತ್ರ ಮತ್ತು ಜೀವನಶೈಲಿಯ ಪಾತ್ರವನ್ನು ಅರ್ಥಮಾಡಿಕೊಳ್ಳುವವರೆಗೆ, ಈ ಸಂಚಿಕೆಯು ಕ್ಯಾನ್ಸರ್ ಅಪಾಯವನ್ನು ಹೇಗೆ ಕಡಿಮೆ ಮಾಡಬಹುದು ಮತ್ತು ಆರಂಭಿಕ ಪತ್ತೆಹಚ್ಚುವಿಕೆಯ ಮಹತ್ವವನ್ನು ಒತ್ತಿಹೇಳುತ್ತದೆ. ಕ್ಯಾನ್ಸರ್ ಆರೈಕೆಯಲ್ಲಿನ ಬೆಳವಣಿಗೆಗಳು, ಸಮಯೋಚಿತ ವೈದ್ಯಕೀಯ ಆರೈಕೆಯನ್ನು ಪಡೆಯುವುದರ ಪ್ರಾಮುಖ್ಯತೆ ಮತ್ತು ಕ್ಯಾನ್ಸರ್ ಅನ್ನು ಸುತ್ತುವರಿದಿರುವ ಅಪವಾದಗಳ ತಿಳುವಳಿಕೆ ವಿರುದ್ಧ ನಾವು ಹೇಗೆ ಹೋರಾಡಬಹುದು ಎಂಬುದರ ಬಗ್ಗೆ ಕಲಿಯಿರಿ.

ಋತುಮಾನಕ್ಕೆ ಅನುಗುಣವಾಗಿ ಬರುವ ರೋಗಗಳಿಂದ ದೂರವಿರಬೇಕು ಅಂದ್ರೆ ಈ ಆರೋಗ್ಯ ಸೂತ್ರಗಳನ್ನು ತಪ್ಪದೇ ಪಾಲಿಸಿ

ಋತುಮಾನಕ್ಕೆ ಅನುಗುಣವಾಗಿ ಬರುವ ರೋಗಗಳಿಂದ ದೂರವಿರಬೇಕು ಅಂದ್ರೆ ಈ ಆರೋಗ್ಯ ಸೂತ್ರಗಳನ್ನು ತಪ್ಪದೇ ಪಾಲಿಸಿ

ಮಳೆಗಾಲ ಆರಂಭವಾಗಿದೆ. ಈ ಸಮಯದಲ್ಲಿ ಋತುಮಾನಕ್ಕೆ ಅನುಗುಣವಾಗಿ ಬರುವ ರೋಗಗಳು ಕೂಡ ಹೆಚ್ಚಾಗುತ್ತದೆ. ಜನರು ಆಸ್ಪತ್ರೆಗಳಲ್ಲಿ ಸಾಲುಗಟ್ಟಿ ನಿಲ್ಲುವುದನ್ನು ನೀವು ನೋಡಿರಬಹುದು. ಅದಕ್ಕಾಗಿಯೇ ಆರೋಗ್ಯ ತಜ್ಞರು ಮುನ್ನೆಚ್ಚರಿಕೆ ವಹಿಸಲು ಸಲಹೆ ನೀಡುತ್ತಾರೆ. ಹಾಗಾಗಿ ಕೆಲವು ಆರೋಗ್ಯಕರ ಅಭ್ಯಾಸಗಳನ್ನು ರೂಢಿಸಿಕೊಳ್ಳುವುದರಿಂದ ಸೀಸನಲ್ ರೋಗಗಳಿಂದ ದೂರವಿರಬಹುದು. ಹಾಗಾದರೆ ಏನು ಮಾಡಬೇಕು, ಹೇಗೆ ಆರೋಗ್ಯವಾಗಿರಬೇಕು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಭಾವಿ ಪತ್ನಿಗೆ ಹಾಕಿದ್ದ ಚಿನ್ನ ನಕಲಿ: ಮದ್ವೆ ಕ್ಯಾನ್ಸಲ್, ಕಂಗಾಲಾದ ಯುವಕ
ಭಾವಿ ಪತ್ನಿಗೆ ಹಾಕಿದ್ದ ಚಿನ್ನ ನಕಲಿ: ಮದ್ವೆ ಕ್ಯಾನ್ಸಲ್, ಕಂಗಾಲಾದ ಯುವಕ
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?