ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.
ಪದೇ ಪದೇ ಗ್ಯಾಸ್, ಅಸಿಡಿಟಿ ಸಮಸ್ಯೆಯಿಂದ ಬಳಲುತ್ತಿದ್ದರೆ ಪುದೀನಾ ಎಲೆಗಳನ್ನು ಈ ರೀತಿ ಸೇವಿಸಿ
ಅಡುಗೆಮನೆಯಲ್ಲಿ ಸಿಗುವ ಮಸಾಲೆಗಳು ಮತ್ತು ಗಿಡಮೂಲಿಕೆಗಳಲ್ಲಿ, ಪುದೀನ ವಿಶೇಷ ಸ್ಥಾನ ಪಡೆದಿದೆ. ಬಿರಿಯಾನಿ ಅಥವಾ ಚಟ್ನಿಗಳಲ್ಲಿ ಸುವಾಸನೆಗಾಗಿ ಮಾತ್ರ ಬಳಸುವ ಈ ಹಸಿರು ಎಲೆಗಳಲ್ಲಿ ಔಷಧೀಯ ಪ್ರಯೋಜನಗಳು ಹೇರಳವಾಗಿದೆ. ವಿಶೇಷವಾಗಿ ಅಧಿಕ ತೂಕ ಅಥವಾ ಜೀರ್ಣಕಾರಿ ಸಮಸ್ಯೆಗಳಿಂದ ಬಳಲುತ್ತಿರುವವರಿಗೆ, ಪುದೀನ ಅಮೃತವೆಂದರೆ ತಪ್ಪಾಗಲಾರದು. ಅಷ್ಟು ಮಾತ್ರವಲ್ಲ, ಈ ಎಲೆಗಳು ಇತರ ಹಲವು ರೀತಿಯ ಆರೋಗ್ಯ ಸಮಸ್ಯೆಗಳ ನಿವಾರಣೆಗೆ ಸಹಕಾರಿಯಾಗಿದೆ.
- Preethi Bhat Gunavante
- Updated on: Jul 17, 2026
- 9:14 am
ತೂಕ ಇಳಿಸಿಕೊಳ್ಳುವವರಿಗೆ ಬೆಲ್ಲ ಅಥವಾ ಖರ್ಜೂರ ಯಾವುದು ಬೆಸ್ಟ್ ತಿಳಿದುಕೊಳ್ಳಿ
ತೂಕ ಇಳಿಸಿಕೊಳ್ಳಲು ಆಹಾರಕ್ರಮವನ್ನು ಅನುಸರಿಸುವಾಗ ಅನೇಕರು ಮಾಡುವ ಮೊದಲ ಕೆಲಸವೆಂದರೆ ಚಹಾ ಅಥವಾ ಕಾಫಿಯಲ್ಲಿ ಸಕ್ಕರೆ ಬದಲಾಗಿ ಬೆಲ್ಲ ಬಳಸುವುದು ಅಥವಾ ಸಿಹಿ ತಿಂಡಿಗಳ ಬದಲಿಗೆ ಖರ್ಜೂರ ಸೇವನೆ ಮಾಡುವುದು. ಆದರೆ ಕ್ಯಾಲೊರಿಗಳ ವಿಷಯಕ್ಕೆ ಬಂದರೆ ಬೆಲ್ಲ ಮತ್ತು ಖರ್ಜೂರದ ಸೇವನೆ ದೇಹದಲ್ಲಿ ಒಂದೇ ರೀತಿಯ ಫಲಿತಾಂಶ ನೀಡುತ್ತದೆಯೇ? ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಯಾವುದು ಉತ್ತಮ? ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.
- Preethi Bhat Gunavante
- Updated on: Jul 16, 2026
- 6:35 pm
ಮಕ್ಕಳಲ್ಲಿ ಹೆಚ್ಚುತ್ತಿರುವ ಕೈ, ಕಾಲು, ಬಾಯಿ ಸೋಂಕಿನ ಲಕ್ಷಣಗಳು ಹೇಗಿರುತ್ತವೆ, ಇದನ್ನು ತಡೆಗಟ್ಟಲು ಏನು ಮಾಡಬೇಕು ತಿಳಿದುಕೊಳ್ಳಿ
ಹವಾಮಾನ ವೈಪರೀತ್ಯದಿಂದ ಐದು ವರ್ಷದೊಳಗಿನ ಮಕ್ಕಳಲ್ಲಿ ಕೈ, ಕಾಲು ಮತ್ತು ಬಾಯಿ ರೋಗ (HFMD) ತೀವ್ರವಾಗಿ ಹರಡುತ್ತಿದ್ದು, ಪಾಲಕರು ಈ ಬಗ್ಗೆ ಹೆಚ್ಚಿನ ಎಚ್ಚರಿಕೆ ವಹಿಸಬೇಕಾಗಿದೆ. ಅದಕ್ಕಾಗಿಯೇ ಟಿವಿ9 ಕನ್ನಡ ಈ ಸೋಂಕಿಗೆ ಸಂಬಂಧ ಪಟ್ಟಂತೆ ಬೆಂಗಳೂರು ಎಸ್.ಡಿ.ಎಂ. ಇನ್ಸ್ಟಿಟ್ಯೂಟ್ ಆಫ್ ಆಯುರ್ವೇದ ಮತ್ತು ಆಸ್ಪತ್ರೆಯ ಪ್ರಾಧ್ಯಾಪಕರು ಹಾಗೂ ವಿಭಾಗದ ಮುಖ್ಯಸ್ಥರಾದ ಡಾ. ರೀನಾ ಕುಲಕರ್ಣಿ ಮತ್ತು ಸಹ ಪ್ರಾಧ್ಯಾಪಕರಾಗಿರುವ ಡಾ. ಶ್ರೀಲಕ್ಷ್ಮಿ ಅವರನ್ನು ಸಂಪರ್ಕಿಸಿ ಹೆಚ್ಚಿನ ಮಾಹಿತಿ ಕಲೆಹಾಕಿದ್ದು ಈ ರೋಗ ಹೇಗೆ ಹರಡುತ್ತದೆ, ಇದರ ಲಕ್ಷಣಗಳೇನು, ತಡೆಗಟ್ಟಲು ಏನು ಮಾಡಬೇಕು ಎಂಬುದರ ಬಗ್ಗೆ ವಿವರವಾದ ಮಾಹಿತಿಯನ್ನು ಪಡೆದುಕೊಂಡಿದೆ.
- Preethi Bhat Gunavante
- Updated on: Jul 16, 2026
- 4:50 pm
ರಾತ್ರಿ ಊಟದ ನಂತರ ಈ ತಪ್ಪುಗಳನ್ನು ಮಾಡಬೇಡಿ; ಜೀರ್ಣಕ್ರಿಯೆ ಹಾಳಾಗಬಹುದು
ಆರೋಗ್ಯವಾಗಿರಲು ಕೇವಲ ಪೌಷ್ಟಿಕಾಂಶದಿಂದ ಸಮೃದ್ಧವಾಗಿರುವ ಆಹಾರ ಸೇವನೆ ಮಾಡಿದರೆ ಸಾಲುವುದಿಲ್ಲ. ಬದಲಾಗಿ ಊಟದ ನಂತರ ನೀವು ಅನುಸರಿಸುವ ಅಭ್ಯಾಸಗಳು ಸಹ ನಿಮ್ಮ ಆರೋಗ್ಯದ ಮೇಲೆ ದೊಡ್ಡ ಪರಿಣಾಮ ಬೀರುತ್ತವೆ. ಊಟವಾದ ತಕ್ಷಣ ಮಲಗುವುದು, ವ್ಯಾಯಾಮ ಮಾಡುವುದು, ಹೆಚ್ಚು ನೀರು ಕುಡಿಯುವುದು ಅಥವಾ ತಮ್ಮ ಫೋನ್ ಮತ್ತು ಲ್ಯಾಪ್ಟಾಪ್ಗಳಿಗೆ ಅಂಟಿಕೊಂಡಿರುವುದು ಮುಂತಾದ ಅಭ್ಯಾಸಗಳು ಜೀರ್ಣಕ್ರಿಯೆಯನ್ನು ಹಾಳುಮಾಡಬಹುದು.
- Preethi Bhat Gunavante
- Updated on: Jul 15, 2026
- 7:53 pm
ಕರ್ನಾಟಕ ಕಂದಾಯ ಇಲಾಖೆಯಲ್ಲಿ 572 ವಿಎಒ ಹುದ್ದೆಗಳ ನೇಮಕಾತಿ: ಪಿಯುಸಿ ಪಾಸಾದವರಿಗೆ ಸರ್ಕಾರಿ ಉದ್ಯೋಗದ ಅವಕಾಶ
ಕರ್ನಾಟಕ ಕಂದಾಯ ಇಲಾಖೆ 572 ಗ್ರಾಮ ಆಡಳಿತ ಅಧಿಕಾರಿ (VAO) ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ನೀಡಿದೆ. ಕನಿಷ್ಠ 12 ನೇ ತರಗತಿ ಉತ್ತೀರ್ಣರಾದ ಆಸಕ್ತ ಅಭ್ಯರ್ಥಿಗಳು ಗ್ರಾಮ ಆಡಳಿತ ಅಧಿಕಾರಿ (VAO) ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಕಂದಾಯ ಇಲಾಖೆಯಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.
- Preethi Bhat Gunavante
- Updated on: Jul 15, 2026
- 6:21 pm
ಗಾಣದ ಎಣ್ಣೆ Vs ರಿಫೈನ್ಡ್ ಎಣ್ಣೆ: ಆರೋಗ್ಯಕ್ಕೆ ಯಾವುದು ಒಳ್ಳೆಯದು ತಿಳಿದುಕೊಳ್ಳಿ
ಗಾಣದ ಎಣ್ಣೆಯ ಬಗ್ಗೆ ವಿಶೇಷವಾಗಿ ಮಾತನಾಡುವ ಅಗತ್ಯವಿಲ್ಲ, ಏಕೆಂದರೆ ಹಳೆಯ ಕಾಲದಲ್ಲಿ ಜನ ಇದನ್ನು ಬಳಸುತ್ತಿದ್ದರು. ಇಂದು ಬದಲಾಗುತ್ತಿರುವ ಜೀವನಶೈಲಿಯಲ್ಲಿ ವಿವಿಧ ರೀತಿಯ ತೈಲಗಳು ಲಭ್ಯವಿವೆ. ಮಾರುಕಟ್ಟೆಯಲ್ಲಿ ಪ್ಲಾಸ್ಟಿಕ್ ಕವರ್ಗಳಲ್ಲಿ ಸಂಸ್ಕರಿಸಿದ ರೂಪಗಳಲ್ಲಿ ನಾನಾ ರೀತಿಯ ಎಣ್ಣೆಗಳು ಸಿಗುತ್ತವೆ. ಆದರೆ, ಮೊದಲು ಜನ ಎತ್ತುಗಳ ಶಕ್ತಿಯನ್ನು ಬಳಸಿ ಎಣ್ಣೆಯನ್ನು ತಯಾರಿಸುತ್ತಿದ್ದಕ್ಕೆ ಕಾರಣವೇನು, ಇದರಿಂದ ಯಾವ ರೀತಿಯ ಪ್ರಯೋಜನಗಳನ್ನು ಪಡೆಯಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ,
- Preethi Bhat Gunavante
- Updated on: Jul 15, 2026
- 10:32 am
ಖಾಲಿ ಹೊಟ್ಟೆಯಲ್ಲಿ ಅರಿಶಿನ ನೀರು ಕುಡಿಯುವುದರಿಂದ ಜೀರ್ಣಕ್ರಿಯೆ ಮಾತ್ರವಲ್ಲ ಚರ್ಮದ ಕಾಂತಿಯೂ ಹೆಚ್ಚಾಗುತ್ತದೆ
ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾದಷ್ಟು ಒಳ್ಳೆಯ ಅಭ್ಯಾಸಗಳನ್ನು ರೂಢಿಸಿಕೊಳ್ಳಬೇಕಾಗುತ್ತದೆ. ಅದರಲ್ಲಿಯೂ ಬೆಳಗ್ಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಸೇವಿಸುವ ಕೆಲ ಆಹಾರ ಹಾಗೂ ಪಾನೀಯಗಳು ಆರೋಗ್ಯಕ್ಕೆ ನಾನಾ ರೀತಿಯ ಲಾಭಗಳನ್ನು ತಂದುಕೊಡುತ್ತದೆ. ನೀವು ಖಾಲಿ ಹೊಟ್ಟೆಯಲ್ಲಿ ಅರಶಿನ ನೀರು ಕುಡಿಯುತ್ತಿದ್ದರೆ ಆರೋಗ್ಯದಲ್ಲಿ ನಾನಾ ರೀತಿಯ ಬದಲಾವಣೆಗಳನ್ನು ಕಾಣಬಹುದು. ಅಷ್ಟು ಮಾತ್ರವಲ್ಲ, ಅರಿಶಿನ ನೀರಿಗೆ ಚಿಟಿಕೆ ಕರಿಮೆಣಸಿನ ಪುಡಿ ಸೇರಿಸಿ ಕುಡಿಯುವುದರಿಂದ ಮತ್ತಷ್ಟು ಪ್ರಯೋಜನಗಳನ್ನು ಕುಡಿಯಬಹುದು.
- Preethi Bhat Gunavante
- Updated on: Jul 15, 2026
- 9:50 am
ಪದೇ ಪದೇ ತುಟಿ ಒಡೆಯುವುದು ಕೇವಲ ಹವಾಮಾನದಿಂದಲ್ಲ ಇದಕ್ಕೆ ಈ ವಿಟಮಿನ್ ಕೊರತೆಯೂ ಕಾರಣವಾಗಿರಬಹುದು
ಅನೇಕರಿಗೆ ತುಟಿಗಳು ಪದೇ ಪದೇ ಒಡೆಯುತ್ತದೆ. ಆದರೆ ಇದನ್ನು ಸಾಮಾನ್ಯ ಸಮಸ್ಯೆ ಎಂದು ನಿರ್ಲಕ್ಷಿಸುವುದು ಸರಿಯಲ್ಲ. ಇದಕ್ಕೆ ಕಾರಣ ದೇಹದಲ್ಲಿನ ಕೆಲವು ಅಗತ್ಯ ಪೋಷಕಾಂಶಗಳ ಕೊರತೆಯೂ ಆಗಿರಬಹುದು. ಕೆಲವು ಸಂದರ್ಭಗಳಲ್ಲಿ ಅಲರ್ಜಿ, ಚರ್ಮದ ಸಮಸ್ಯೆಗಳು ಅಥವಾ ಇತರ ಆರೋಗ್ಯ ತೊಂದರೆಗಳೂ ಕಾರಣವಾಗಬಹುದು. ಹಾಗಾಗಿ ಈ ರೀತಿಯ ಸಮಸ್ಯೆ ತಡೆಗಟ್ಟಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.
- Preethi Bhat Gunavante
- Updated on: Jul 14, 2026
- 7:41 pm
ಕರ್ನಾಟಕ ಹೈಕೋರ್ಟ್ನಲ್ಲಿ 73 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳ ನೇಮಕಾತಿ; ಪದವೀಧರರಿಗೆ ಉತ್ತಮ ಅವಕಾಶ
73 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳು ಖಾಲಿ ಇವೆ! ಕರ್ನಾಟಕ ಹೈಕೋರ್ಟ್ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ನೀವು ಬೆಂಗಳೂರಿನಲ್ಲಿ ಉದ್ಯೋಗವನ್ನು ಹುಡುಕುತ್ತಿದ್ದರೆ, ಇದು ಸುವರ್ಣ ಅವಕಾಶ. ಆಸಕ್ತ ಅಭ್ಯರ್ಥಿಗಳು 30 ಜುಲೈ ರೊಳಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ. 44,900 ದಿಂದ ರೂ.1,42,400 ವರೆಗೆ ವೇತನ ನೀಡಲಾಗುತ್ತದೆ.
- Preethi Bhat Gunavante
- Updated on: Jul 14, 2026
- 4:44 pm
ಮಾವು ಮಧುಮೇಹಿಗಳಿಗೆ ಮಾತ್ರವಲ್ಲ, ಕೆಲವು ಆರೋಗ್ಯ ಸಮಸ್ಯೆ ಇರುವವರಿಗೆ ಒಳ್ಳೆಯದಲ್ಲ
ಮಾವಿನ ಹಣ್ಣು ಸಾಮಾನ್ಯವಾಗಿ ಎಲ್ಲರಿಗೂ ಇಷ್ಟವಾಗುವ ಹಣ್ಣು. ಅದರ ಅದ್ಭುತ ರುಚಿಗೆ ಎಲ್ಲರೂ ಮನಸೋಲುತ್ತಾರೆ. ಆದರೆ ಮಧುಮೇಹ ಇರುವವರು ಈ ಹಣ್ಣನ್ನು ಆದಷ್ಟು ಮಿತ ಪ್ರಮಾಣದಲ್ಲಿ ಸೇವಿಸಬೇಕು ಎಂದು ಹೇಳುತ್ತಾರೆ. ಆದರೆ ಅವರ ಹೊರತಾಗಿಯೂ ಕೆಲವು ಆರೋಗ್ಯ ಸಮಸ್ಯೆಗಳಿರುವವರು ಇದನ್ನು ಸೇವನೆ ಮಾಡುವಾಗ ಎಚ್ಚರಿಕೆ ವಹಿಸಬೇಕು. ಹಾಗಾದರೆ ಇದು ಯಾರಿಗೆ ಒಳ್ಳೆಯದಲ್ಲ, ಯಾಕೆ ಸೇವಿಸಬಾರದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.
- Preethi Bhat Gunavante
- Updated on: Jul 13, 2026
- 9:14 pm
ಗರ್ಭಾವಸ್ಥೆಯಲ್ಲಿ ಕ್ಯಾಲ್ಸಿಯಂ ಅಗತ್ಯವನ್ನು ಪೂರೈಸಿಕೊಳ್ಳಲು ಈ ಆಹಾರಗಳ ಸೇವನೆ ಮಾಡಿ!
ಗರ್ಭಾವಸ್ಥೆಯಲ್ಲಿ, ಪ್ರತಿನಿತ್ಯ ಸೇವಿಸುವ ಆಹಾರ ಮತ್ತು ಪೋಷಕಾಂಶಗಳ ಬಗ್ಗೆ ವಿಶೇಷ ಗಮನ ಹರಿಸುವುದು ಬಹಳ ಮುಖ್ಯ. ಅದರಲ್ಲಿಯೂ ಈ ಸಮಯದಲ್ಲಿ ಕ್ಯಾಲ್ಸಿಯಂ ಕೊರತೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ವೈದ್ಯರು ಶಿಫಾರಸು ಮಾಡುತ್ತಾರೆ. ಹಾಗಾದರೆ ಗರ್ಭಾವಸ್ಥೆಯಲ್ಲಿ ಕ್ಯಾಲ್ಸಿಯಂನ ಅಗತ್ಯತೆ ಹೆಚ್ಚಾಗಿರುವುದಕ್ಕೆ ಕಾರಣವೇನು ಮತ್ತು ಅದು ತಾಯಿ ಮತ್ತು ಮಗುವಿಗೆ ಏಕೆ ಮುಖ್ಯ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.
- Preethi Bhat Gunavante
- Updated on: Jul 13, 2026
- 6:51 pm
ಈರುಳ್ಳಿ ಕತ್ತರಿಸುವಾಗ ಕಣ್ಣೀರು ಬರುವುದಕ್ಕೂ ಕಾರಣವಿದೆ! ಇದಕ್ಕೆ ಬ್ರೇಕ್ ಹಾಕುವ ಸೂಪರ್ ಟಿಪ್ಸ್ ಇಲ್ಲಿದೆ
ಈರುಳ್ಳಿ ಪೋಷಕಾಂಶಗಳಿಂದ ಸಮೃದ್ಧವಾಗಿರುವ ತರಕಾರಿ, ಆದರೆ ಈರುಳ್ಳಿ ಕತ್ತರಿಸಲು ಶುರು ಮಾಡಿದ ಕೆಲವೇ ಕ್ಷಣಗಳಲ್ಲಿ ಕಣ್ಣು ಉರಿ, ನೀರು ಬರುತ್ತದೆ. ಈ ರೀತಿಯಾಗುವುದಕ್ಕೆ ಕಾರಣವಿದೆ. ಆರೋಗ್ಯ ತಜ್ಞರು ಇದನ್ನು ದೇಹದ ಸಹಜ ರಕ್ಷಣಾ ಪ್ರತಿಕ್ರಿಯೆ ಎಂದು ಹೇಳುತ್ತಾರೆ. ಹಾಗಾಗಿ ಈರುಳ್ಳಿ ಸೇವನೆಯನ್ನು ಕಡಿಮೆ ಮಾಡುವ ಬದಲು ಇದನ್ನು ತಡೆಯಲು ಕೆಲವು ಸಿಂಪಲ್ ಟ್ರಿಕ್ಸ್ ಪಾಲಿಸಬಹುದು. ಆ ಮೂಲಕ ಕಣ್ಣೀರು ಬರದಂತೆ ತಡೆಯಬಹುದು.
- Preethi Bhat Gunavante
- Updated on: Jul 11, 2026
- 8:22 pm