ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.
ಕುತ್ತಿಗೆಯ ಭಾಗದಲ್ಲಿ ನೋವು ಬಂದು ತಲೆ ಭಾರವೆನಿಸುವುದು ಸರ್ವಿಕಲ್ ಸ್ಪಾಂಡಿಲೋಸಿಸ್ನ ಆರಂಭವಾಗಿರಬಹುದು ಎಚ್ಚರ!
Cervical Spondylosis: ಗಂಟೆಗಳ ಕಾಲ ಒಂದೇ ಕಡೆ ಕುಳಿತು ಕೆಲಸ ಮಾಡುವುದು, ಬಿಡುವಿನ ವೇಳೆಯಲ್ಲಿ ಫೋನ್ ನೋಡುವುದು ಆರೋಗ್ಯಕ್ಕೆ ದೊಡ್ಡ ಹೊಡೆತ ನೀಡಬಹುದು. ಹೌದು, ಇತ್ತೀಚಿನ ದಿನಗಳಲ್ಲಿ ಭುಜ ಮತ್ತು ಕುತ್ತಿಗೆ ನೋವು ಕೆಲವರಲ್ಲಿ ತಲೆನೋವು ಕಾಣಿಸಿಕೊಳ್ಳುತ್ತಿದೆ. ಇದು ಸಾಮಾನ್ಯ ಸಮಸ್ಯೆಯಲ್ಲ, ಬದಲಾಗಿ ಸರ್ವಿಕಲ್ ಸ್ಪಾಂಡಿಲೋಸಿಸ್ನ ಸಂಕೇತವೂ ಆಗಿರಬಹುದು. ಹಾಗಾದರೆ ಸರ್ವಿಕಲ್ ಸ್ಪಾಂಡಿಲೋಸಿಸ್ ಎಂದರೇನು, ಲಕ್ಷಣಗಳು ಹೇಗಿರುತ್ತವೆ, ಇದನ್ನು ತಡೆಯಲು ಯಾವ ರೀತಿ ಮುನ್ನೆಚ್ಚರಿಕೆ ವಹಿಸಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.
- Preethi Bhat Gunavante
- Updated on: Jan 6, 2026
- 6:06 pm
ಪಾದಗಳು ತಣ್ಣಗಾಗುವುದಕ್ಕೆ ಮಧುಮೇಹ ಕಾರಣವೇ? ಇಲ್ಲಿದೆ ಸ್ಪಷ್ಟ ಮಾಹಿತಿ
ಚಳಿಗಾಲದಲ್ಲಿ, ಅನೇಕರ ಪಾದ ತಂಪಗಾಗುತ್ತದೆ. ಹಲವರು ಈ ರೀತಿಯಾಗುವುದಕ್ಕೆ ಹವಾಮಾನದ ಕಾರಣ ನೀಡಿ ನಿರ್ಲಕ್ಷಿಸುತ್ತಾರೆ. ಆದರೆ ಇದು ಗಂಭೀರ ಆರೋಗ್ಯ ಸಮಸ್ಯೆಯ ಲಕ್ಷಣವಾಗಿರಬಹುದು ಎಂಬುದನ್ನು ಮರೆಯಬಾರದು. ಹೌದು, ಇದು ಮಧುಮೇಹದ ಲಕ್ಷಣವೂ ಆಗಿರಬಹುದು. ಆದರೆ ಪಾದಗಳು ತಂಪಾಗುವುದಕ್ಕೆ ಕೇವಲ ಮಧುಮೇಹವೂ ಕಾರಣವಲ್ಲ. ಒಬ್ಬ ವ್ಯಕ್ತಿಯಲ್ಲಿ ಪಾದಗಳು ತಣ್ಣಗಾಗುವ ಸಮಸ್ಯೆ ದೀರ್ಘಕಾಲದಿಂದ ಪದೇ ಪದೇ ಕಂಡುಬರುತ್ತಿದ್ದರೆ ಅಥವಾ ಇತರ ದೈಹಿಕ ಬದಲಾವಣೆಗಳೊಂದಿಗೆ ಇದ್ದರೆ, ಜಾಗರೂಕರಾಗಿರುವುದು ಅಗತ್ಯವಾಗುತ್ತದೆ. ಹಾಗಾಗಿ ಈ ಬಗ್ಗೆ ಸರಿಯಾಗಿ ತಿಳಿದುಕೊಳ್ಳಿ, ಸಂಪೂರ್ಣ ಮಾಹಿತಿ ಸ್ಟೋರಿಯಲ್ಲಿದೆ.
- Preethi Bhat Gunavante
- Updated on: Jan 6, 2026
- 5:00 pm
ಕೂದಲು ತುಂಬಾ ಉದುರುತ್ತಿದ್ದರೆ ಶಾಂಪೂ, ಸೀರಮ್ ಬದಲಿಸುವ ಬದಲು ಈ ಒಂದು ಕೊರತೆಯನ್ನು ಸರಿದೂಗಿಸಿಕೊಳ್ಳಿ
ಸಾಮಾನ್ಯವಾಗಿ ಒಮ್ಮೆ ಕೂದಲು ಉದುರಲು ಪ್ರಾರಂಭವಾದ ತಕ್ಷಣ, ಶಾಂಪೂ, ಎಣ್ಣೆ ಅಥವಾ ಸೀರಮ್ಗಳನ್ನು ಬದಲಾಯಿಸುತ್ತೇವೆ. ಆದರೆ ನಿಜವಾದ ಸಮಸ್ಯೆ ಸೇವನೆ ಮಾಡುವ ಆಹಾರದಲ್ಲಿರಬಹುದು ಎಂಬುದು ಯಾರೂ ಕೂಡ ಗಮನಿಸುವುದಿಲ್ಲ. ಈ ಆಂತರಿಕ ಪೌಷ್ಟಿಕಾಂಶದ ಕೊರತೆಯನ್ನು ಸರಿಯಾಗಿ ಗುರುತಿಸಿ, ಆಹಾರದ ಮೂಲಕ ಕೂದಲನ್ನು ಮತ್ತೆ ಬಲಪಡಿಸಿಕೊಳ್ಳುವುದು ಇಂದಿನ ದಿನಗಳಲ್ಲಿ ಬಹಳ ಮುಖ್ಯವಾಗಿದೆ. ಹಾಗಾದರೆ ಪ್ರೋಟೀನ್ ಕೊರತೆಯಿಂದ ಏನೆಲ್ಲಾ ಆಗುತ್ತದೆ, ದೇಹಕ್ಕೆ ಎಷ್ಟು ಪ್ರಮಾಣದಲ್ಲಿ ಪ್ರೋಟೀನ್ ಬೇಕಾಗುತ್ತದೆ ಮತ್ತು ಕೂದಲು ಉದುರದಂತೆ ಕಾಪಾಡಿಕೊಳ್ಳಲು ಯಾವ ರೀತಿಯ ಆಹಾರಗಳನ್ನು ಸೇವನೆ ಮಾಡಬೇಕು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.
- Preethi Bhat Gunavante
- Updated on: Jan 6, 2026
- 3:20 pm
ಈ ಆರೋಗ್ಯ ಸಮಸ್ಯೆ ನಿಮಗಿದ್ದು ರಾತ್ರಿ ಹಾಲು ಕುಡಿಯುತ್ತಿದ್ದರೆ ನೀವು ತುಂಬಾ ಅಪಾಯದಲ್ಲಿದ್ದೀರಿ ಎಂದರ್ಥ!
ಮಲಗುವ ಮುನ್ನ ಹಾಲು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಹಲವರು ನಂಬುತ್ತಾರೆ. ಅದಕ್ಕಾಗಿಯೇ ಹಿರಿಯರಿಂದ ಹಿಡಿದು ಮಕ್ಕಳವರೆಗೆ ಎಲ್ಲರೂ ಮಲಗುವಾಗ ಒಂದು ಲೋಟ ಬಿಸಿ ಬಿಸಿ ಹಾಲು ಕುಡಿದು ಮಲಗುತ್ತಾರೆ. ಅದಲ್ಲದೆ ಹಾಲು ನಿದ್ರೆಯ ಗುಣಮಟ್ಟವನ್ನು ಹೆಚ್ಚಿಸುತ್ತದೆ ಎಂದು ನಂಬಲಾಗುತ್ತದೆ. ಆದರೆ ವೈದ್ಯಕೀಯ ತಜ್ಞರ ಪ್ರಕಾರ, ರಾತ್ರಿ ಸಮಯದಲ್ಲಿ ಹಾಲಿನ ಸೇವನೆ ಎಲ್ಲರಿಗೂ ಪ್ರಯೋಜನಕಾರಿಯಲ್ಲ. ಹೌದು ಕೆಲವು ಆರೋಗ್ಯ ಸಮಸ್ಯೆಗಳಿರುವವರಿಗೆ ಹಾಲು ಒಳ್ಳೆಯದಲ್ಲ, ಬದಲಾಗಿ ಅದು ಆ ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸುತ್ತದೆ ಎಂದು ಹೇಳಲಾಗುತ್ತದೆ. ಹಾಗಾದ್ರೆ ಇದು ಯಾರಿಗೆ ಒಳ್ಳೆಯದಲ್ಲ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.
- Preethi Bhat Gunavante
- Updated on: Jan 5, 2026
- 8:28 pm
ಚಳಿಗಾಲದಲ್ಲಿ ಬೆಂಕಿ ಕಾಯಿಸುವಾಗ ಈ ತಪ್ಪನ್ನು ಮಾಡಲೇಬೇಡಿ! ಉಪಯೋಗಕ್ಕಿಂತ ಅಪಾಯಕಾರಿಯಾಗಬಹುದು ಎಚ್ಚರ
ದೇಶದ ಹಲವು ರಾಜ್ಯಗಳಲ್ಲಿ ಪ್ರಸ್ತುತ ತೀವ್ರ ಚಳಿ ಇದೆ. ಬೆಚ್ಚಗಿರಲು ಜನರು ಬೆಂಕಿ ಮುಂದೆ ಕುಳಿತುಕೊಳ್ಳಲು ಇಷ್ಟ ಪಡುತ್ತಾರೆ, ಆದರೆ ಇದನ್ನು ಬಳಸುವಾಗ ಕೆಲವು ಮುನ್ನೆಚ್ಚರಿಕೆ ವಹಿಸದಿದ್ದಲ್ಲಿ ಪ್ರಯೋಜನಕ್ಕಿಂತ ಇದರಿಂದ ಉಂಟಾಗುವ ಅಪಾಯವೇ ಹೆಚ್ಚಾಗಬಹುದು. ಹೌದು, ಈ ಬಗ್ಗೆ ಡಾ. ಸುಭಾಷ್ ಗಿರಿ ಅವರು ಕೆಲವು ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಹಾಗಾಗಿ ತೀವ್ರ ಚಳಿಯಿಂದ ಮುಕ್ತಿ ಪಡೆಯಲು ಅಗ್ಗಿಷ್ಟಿಕೆ ಅಥವಾ ಅಂಗೀತಿಯ ಬಳಕೆ ಮಾಡುವ ಮೊದಲು ಅಥವಾ ಸೌದೆ ಒಲೆಗಳನ್ನು ಬಳಸುವ ಮೊದಲು ಈ ವಿಷಯಗಳನ್ನು ತಿಳಿದುಕೊಳ್ಳಿ.
- Preethi Bhat Gunavante
- Updated on: Jan 5, 2026
- 5:45 pm
ಸೌತೆಕಾಯಿ ತಿನ್ನುವ ಮೊದಲು ನಿಮಗೆ ಈ ಆರೋಗ್ಯ ಸಮಸ್ಯೆ ಇದೆಯೋ, ಇಲ್ಲವೋ ತಿಳಿದುಕೊಳ್ಳಿ
ಸಾಮಾನ್ಯವಾಗಿ ಸೌತೆಕಾಯಿ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ. ಆದರೆ ಆರೋಗ್ಯ ತಜ್ಞರು ಹಲವರಿಗೆ ಸೌತೆಕಾಯಿ ವಿಷಕ್ಕೆ ಸಮಾನ ಎನ್ನುತ್ತಾರೆ. ಹೌದು, ವಿಟಮಿನ್ ಕೆ, ವಿಟಮಿನ್ ಸಿ ಮತ್ತು ಪೊಟ್ಯಾಸಿಯಮ್ನಂತಹ ಅಗತ್ಯ ಪೋಷಕಾಂಶಗಳಿಂದ ಸಮೃದ್ಧವಾಗಿದ್ದರೂ ಕೂಡ ಇದು ಕೆಲವರಿಗೆ ಒಳ್ಳೆಯದಲ್ಲ. ಇದು ಆಶ್ಚರ್ಯ ಉಂಟು ಮಾಡಿದರು ಸತ್ಯ. ಹಾಗಾದರೆ ಇದು ಯಾರಿಗೆ ಒಳ್ಳೆಯದಲ್ಲ, ಯಾಕೆ ಇವುಗಳನ್ನು ಸೇವನೆ ಮಾಡಬಾರದು? ಇದರಿಂದ ಯಾವ ರೀತಿಯ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.
- Preethi Bhat Gunavante
- Updated on: Jan 4, 2026
- 8:21 pm
ಮೊಟ್ಟೆ ತಿಂದ್ರೆ ಕೆಮ್ಮು ಕಡಿಮೆಯಾಗುತ್ತದೆಯೇ? ಇಲ್ಲಿದೆ ಅಚ್ಚರಿ ಮಾಹಿತಿ
ಮೊಟ್ಟೆ ತಿನ್ನುವುದರಿಂದ ದೇಹಕ್ಕೆ ಅಗತ್ಯವಾದ ಜೀವಸತ್ವಗಳು ಮತ್ತು ಪೋಷಕಾಂಶಗಳು ದೊರೆಯುತ್ತವೆ ಎಂಬುದು ತಿಳಿದ ವಿಚಾರ. ನಿಯಮಿತವಾಗಿ ಮೊಟ್ಟೆಗಳ ಸೇವನೆ ಮಾಡುವುದರಿಂದ ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನಗಳಿವೆ. ಮೊಟ್ಟೆಯ ಬಿಳಿ ಭಾಗ ಪ್ರೋಟೀನ್ ಮತ್ತು ನೀರಿನಾಂಶ ಹೊಂದಿದ್ದು, ಹಳದಿ ಭಾಗವು ಪ್ರೋಟೀನ್, ಕೊಬ್ಬು, ಜೀವಸತ್ವಗಳು ಮತ್ತು ಖನಿಜಗಳನ್ನು ಹೊಂದಿರುತ್ತದೆ. ಇಷ್ಟೆಲ್ಲಾ ಪ್ರಯೋಜನಗಳಿರುವ ಮೊಟ್ಟೆ ಕೆಮ್ಮು ಮತ್ತು ಶೀತಗಳಿಂದ ಮುಕ್ತಿ ನೀಡಲು ಸಹಾಯ ಮಾಡುತ್ತದೆಯೇ, ಇದು ಎಷ್ಟು ಸತ್ಯ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.
- Preethi Bhat Gunavante
- Updated on: Jan 4, 2026
- 4:00 pm
ಸುಸ್ತಾಗುತ್ತೆ ಎಂದು ಮಲ್ಟಿವಿಟಮಿನ್ ಸೇವನೆ ಮಾಡುತ್ತೀರಾ? ಹಾಗಿದ್ರೆ ಈ ವಿಷಯಗಳನ್ನು ತಿಳಿದುಕೊಳ್ಳಿ
ಇತ್ತೀಚಿನ ದಿನಗಳಲ್ಲಿ ಆಯಾಸ ಎಲ್ಲರಲ್ಲಿಯೂ ಹೆಚ್ಚಾಗುತ್ತಿದೆ. ಈ ಸಮಸ್ಯೆಯಿಂದ ಮುಕ್ತಿ ಪಡೆಯಲು ಅನೇಕರು ವೈದ್ಯರನ್ನು ಸಂಪರ್ಕಿಸದೆ ಮಲ್ಟಿವಿಟಮಿನ್ ಮಾತ್ರೆಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ ಪ್ರತಿದಿನ ವಿಟಮಿನ್ ಮಾತ್ರೆಗಳನ್ನು ತೆಗೆದುಕೊಳ್ಳುವುದು ನಿಜವಾಗಿಯೂ ಸುರಕ್ಷಿತವೇ? ಎಂದಾದರೂ ಯೋಚಿಸಿದ್ದೀರಾ? ಅದರಲ್ಲಿಯೂ ವಿದ್ಯಾರ್ಥಿಗಳಲ್ಲಿ ಕಂಡುಬರುವ ಆಯಾಸ, ನಿದ್ರಾಹೀನತೆ ಸಮಸ್ಯೆಗೆ ಮಾತ್ರೆಗಳ ಬದಲು ಸರಳ ಸಲಹೆಯ ಮೂಲಕ ಯಾವ ರೀತಿ ಪರಿಹಾರ ಕಂಡುಕೊಳ್ಳಬಹುದು ಎಂಬುದನ್ನು ತಿಳಿದುಕೊಳ್ಳಿ.
- Preethi Bhat Gunavante
- Updated on: Jan 2, 2026
- 9:16 pm
ಹಗಲಿನಲ್ಲಿ ಮಲಗುವ ಅಭ್ಯಾಸ ನಿಮಗಿದ್ಯಾ? ಈ ಸಮಯಕ್ಕಿಂತ ಹೆಚ್ಚು ಮಲಗಿದ್ರೆ ಮಧುಮೇಹ ಬರಬಹುದು ಎಚ್ಚರ!
ಹಗಲಿನಲ್ಲಿ ನಿದ್ರೆ ಮಾಡುವುದು ಸಾಮಾನ್ಯ. ಆದರೆ, ಇತ್ತೀಚಿನ ಅಧ್ಯಯನವೊಂದು ಹಗಲಿನಲ್ಲಿ ಹೆಚ್ಚು ಹೊತ್ತು ಮಲಗುವುದರಿಂದ ಮಧುಮೇಹ ಬರುವ ಅಪಾಯ ಹೆಚ್ಚಾಗುತ್ತದೆ ಎಂದು ಬಹಿರಂಗಪಡಿಸಿದೆ. ಹೌದು, ದಿನಕ್ಕೆ 30 ನಿಮಿಷಕ್ಕಿಂತ ಹೆಚ್ಚು ಹೊತ್ತು ನಿದ್ರೆ ಮಾಡುವುದರಿಂದ ಎಷ್ಟೆಲ್ಲಾ ಸಮಸ್ಯೆಗಳಾಗುತ್ತದೆ, ಈ ರೀತಿ ಅಭ್ಯಾಸದಿಂದ ಮಧುಮೇಹದ ಅಪಾಯ ಹೆಚ್ಚಾಗುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದೆ. ಹಾಗಾದರೆ ಹಗಲಿನಲ್ಲಿ ಮಲಗುವುದರಿಂದ ನಿಜವಾಗಿಯೂ ಡಯಾಬಿಟಿಸ್ ಬರುತ್ತದೆಯೇ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.
- Preethi Bhat Gunavante
- Updated on: Jan 2, 2026
- 6:15 pm
ಅತಿಯಾದ ಆ್ಯಂಟಿಬಯಾಟಿಕ್ಸ್ ಸೇವನೆಯಿಂದ ಏನೆಲ್ಲ ಅಪಾಯವಿದೆ ಗೊತ್ತೇ? ಡಾ. ದೇವಿ ಪ್ರಸಾದ್ ಶೆಟ್ಟಿ ಕೊಟ್ಟ ಕಾರಣ ಇಲ್ಲಿದೆ
ಇತ್ತೀಚಿನ ದಿನಗಳಲ್ಲಿ ಆ್ಯಂಟಿಬಯಾಟಿಕ್ಸ್ ಇಲ್ಲದ ಮನೆಗಳೇ ಇಲ್ಲ ಎಂಬ ಪರಿಸ್ಥಿತಿ ಬಂದಿದೆ. ಸಣ್ಣ ಜ್ವರ, ಮೈಕೈ ನೋವು, ಕಫ ಹೀಗೆ ಏನಾದರೂ ಸಣ್ಣ ಬದಲಾವಣೆ ದೇಹದಲ್ಲಿ ಆದ ತಕ್ಷಣ ವೈದ್ಯರ ಸಲಹೆಯಿಲ್ಲದೆ ಆ್ಯಂಟಿಬಯೋಟಿಕ್ಗಳನ್ನು ಸೇವನೆ ಮಾಡುವುದರಿಂದ ದೇಹದಲ್ಲಿ ಎಷ್ಟೆಲ್ಲಾ ಸಮಸ್ಯೆಗಳಾಗಬಹುದು ಎಂಬುದರ ಬಗ್ಗೆ ಎಂದಾದರೂ ಯೋಚಿಸಿದ್ದೀರಾ? ಈ ವಿಷಯವಾಗಿ ಹೃದ್ರೋಗ ತಜ್ಞ ಡಾ. ದೇವಿ ಪ್ರಸಾದ್ ಶೆಟ್ಟಿ ಮಾಹಿತಿ ಹಂಚಿಕೊಂಡಿದ್ದು, ಇತ್ತೀಚಿನ ದಿನಗಳಲ್ಲಿ ರೋಗಿಯ ದೇಹದಲ್ಲಿ ಆ್ಯಂಟಿಬಯಾಟಿಕ್ಸ್ ಸರಿಯಾಗಿ ಕೆಲಸ ಮಾಡದಿರಲು ಕಾರಣವೇನು? ಹೀಗೆ ಮುಂದುವರಿದರೆ ಏನಾಗುತ್ತದೆ ಎಂಬುದರ ಬಗ್ಗೆ ವಿವರಿಸಿದ್ದಾರೆ.
- Preethi Bhat Gunavante
- Updated on: Jan 2, 2026
- 3:50 pm
ಚಳಿಗಾಲದಲ್ಲಿ ಐಸ್ ಕ್ರೀಮ್ ತಿಂದ್ರೆ ನಿಜವಾಗಿಯೂ ನೆಗಡಿ, ಕೆಮ್ಮು ಬರುತ್ತಾ? ಇಲ್ಲಿದೆ ತಜ್ಞರು ನೀಡಿದ ಅಚ್ಚರಿ ಮಾಹಿತಿ
ಐಸ್ ಕ್ರೀಮ್ ಯಾರಿಗೆ ತಾನೇ ಇಷ್ಟ ಆಗಲ್ಲ ಹೇಳಿ? ಕೆಲವರಂತೂ ಮಳೆಯಾಗಲಿ, ಚಳಿಯಾಗಲಿ ಸಮಯವನ್ನು ಲೆಕ್ಕಿಸದೆಯೇ ಐಸ್ ಕ್ರೀಮ್ ತಿನ್ನುತ್ತಾರೆ. ಆದರೆ, ಮನೆಯಲ್ಲಿ ಹಿರಿಯರು ಮಾತ್ರ ಚಳಿಗಾಲದಲ್ಲಿ ಐಸ್ ಕ್ರೀಮ್ ತಿನ್ನುವುದರಿಂದ ನೆಗಡಿ ಮತ್ತು ಕೆಮ್ಮು ಬರುತ್ತೆ ತಿನ್ನಬೇಡಿ ಎಂದು ಎಚ್ಚರಿಸುತ್ತಲೇ ಇರುತ್ತಾರೆ. ಹಾಗಾದರೆ, ಇದು ಎಷ್ಟು ನಿಜ! ಚಳಿಗಾಲದಲ್ಲಿ ತಣ್ಣನೆಯ ಆಹಾರ ಸೇವನೆ ಮಾಡುವುದರಿಂದ ನಿಜವಾಗಿಯೂ ಆರೋಗ್ಯ ಹಾಳಾಗುತ್ತದೆಯೇ... ಈ ಕುರಿತಂತೆ ತಜ್ಞರು ನೀಡಿದ ಅಚ್ಚರಿಯ ಮಾಹಿತಿ ಇಲ್ಲಿದೆ.
- Preethi Bhat Gunavante
- Updated on: Jan 1, 2026
- 8:20 pm
ಈ ಆರೋಗ್ಯ ಸಮಸ್ಯೆ ಇರುವವರು ಚಳಿಗಾಲದಲ್ಲಿ ಅಪ್ಪಿತಪ್ಪಿಯೂ ವಾಕಿಂಗ್ ಹೋಗಬಾರದು!
ಚಳಿಗಾಲದಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ. ಆದರೆ ಆರೋಗ್ಯ ಕಾಪಾಡಿಕೊಳ್ಳಲು ವಾಕಿಂಗ್ ಮಾಡುವುದೇ ದೇಹಕ್ಕೆ ಹಾನಿಯುಂಟುಮಾಡಬಹುದು. ಹೌದು, ಇದು ಆಶ್ಚರ್ಯ ಎನಿಸಿದರೂ ಸತ್ಯ. ಆರೋಗ್ಯ ತಜ್ಞರು ಹೇಳುವ ಪ್ರಕಾರ, ಬೆಳಗಿನ ನಡಿಗೆ ಹೃದಯಾಘಾತದ ಅಪಾಯವನ್ನು ಹೆಚ್ಚಿಸುತ್ತದೆ. ಹಾಗಾದರೆ ವಾಕಿಂಗ್ ಮಾಡುವುದರಿಂದ ನಿಜವಾಗಿಯೂ ಹೃದಯಾಘಾತವಾಗುತ್ತದೆಯೇ? ಯಾರಲ್ಲಿ ಈ ಅಪಾಯ ಹೆಚ್ಚಾಗಿ ಕಂಡುಬರುತ್ತದೆ ಎಂಬುದನ್ನು ತಿಳಿದುಕೊಳ್ಳಿ.
- Preethi Bhat Gunavante
- Updated on: Jan 1, 2026
- 7:05 pm