ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್ ಪ್ರೊಡ್ಯೂಸರ್ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.
IND vs NZ: ಮೊದಲ ಟಿ20 ಪಂದ್ಯವನ್ನು 48 ರನ್ಗಳಿಂದ ಗೆದ್ದ ಟೀಂ ಇಂಡಿಯಾ
India vs New Zealand T20: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ನಾಗ್ಪುರದಲ್ಲಿ ನಡೆದ ಈ ಪಂದ್ಯದಲ್ಲಿ ಭಾರತ ಮೊದಲು ಬ್ಯಾಟಿಂಗ್ ಮಾಡಿ 239 ರನ್ ಗಳಿಸಿತು. ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ 190 ರನ್ ಗಳಿಸಿ 48 ರನ್ಗಳಿಂದ ಸೋಲಪ್ಪಿತು. ಈ ಗೆಲುವಿನೊಂದಿಗೆ ಭಾರತ ಸರಣಿಯಲ್ಲಿ ಶುಭಾರಂಭ ಮಾಡಿದೆ.
- pruthvi Shankar
- Updated on: Jan 21, 2026
- 11:09 pm
IND vs NZ: ಟಿ20 ಸರಣಿ ಟ್ರೋಫಿಯ ವಿಶೇಷತೆ ಏನು ಗೊತ್ತಾ? ವಿಡಿಯೋ ನೋಡಿ
India vs New Zealand T20 Series Trophy: ಭಾರತ-ನ್ಯೂಜಿಲೆಂಡ್ ನಡುವಿನ ಟಿ20 ಸರಣಿಯ ಟ್ರೋಫಿ ವಿಶೇಷವಾಗಿದೆ. ಇದನ್ನು ಮರ ಮತ್ತು ಚರ್ಮದಿಂದ, ಅದರಲ್ಲೂ ಮುಖ್ಯವಾಗಿ ಬಳಸಲಾಗದ ಕ್ರಿಕೆಟ್ ಬ್ಯಾಟ್ಗಳು ಹಾಗೂ ಚರ್ಮದ ಚೆಂಡುಗಳನ್ನು ಮರುಬಳಕೆ ಮಾಡಿ ತಯಾರಿಸಲಾಗಿದೆ. ಲೋಹದ ಟ್ರೋಫಿಗಳ ಬದಲಿಗೆ ಪರಿಸರ ಸ್ನೇಹಿ ವಿನ್ಯಾಸವನ್ನು ಅಳವಡಿಸಿಕೊಂಡಿರುವುದು ಇದರ ವಿಶೇಷ. ಈ ವಿಶಿಷ್ಟ ಟ್ರೋಫಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸರಣಿಯ ಪ್ರಮುಖ ಆಕರ್ಷಣೆಯಾಗಿದೆ.
- pruthvi Shankar
- Updated on: Jan 21, 2026
- 10:18 pm
IND vs NZ: 6,6,4,4.. ಕೊನೆಯ ಓವರ್ನಲ್ಲಿ ಅಬ್ಬರಿಸಿದ ರಿಂಕು ಸಿಂಗ್; ವಿಡಿಯೋ
Rinku Singh's Explosive 44: ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾದ ಗೇಮ್ ಫಿನಿಶರ್ ರಿಂಕು ಸಿಂಗ್ ಕೊನೆಯ ಓವರ್ಗಳಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿ ತಂಡವನ್ನು 239 ರನ್ಗಳ ಬೃಹತ್ ಮೊತ್ತಕ್ಕೆ ಕೊಂಡೊಯ್ದರು. ಕೇವಲ 20 ಎಸೆತಗಳಲ್ಲಿ ಅಜೇಯ 44 ರನ್ ಬಾರಿಸಿದ ರಿಂಕು, 4 ಬೌಂಡರಿ ಮತ್ತು 3 ಸಿಕ್ಸರ್ಗಳನ್ನು ಸಿಡಿಸಿದರು. ಅವರ ಈ ಆಕ್ರಮಣಕಾರಿ ಇನ್ನಿಂಗ್ಸ್ ಭಾರತಕ್ಕೆ ಭಾರಿ ಮೊತ್ತ ಗಳಿಸಲು ನೆರವಾಯಿತು.
- pruthvi Shankar
- Updated on: Jan 21, 2026
- 9:35 pm
IND vs NZ: ವಿಶೇಷ ಶತಕ ಪೂರೈಸಿ ಬಾಬರ್ ದಾಖಲೆ ಮುರಿದ ಸೂರ್ಯಕುಮಾರ್
Suryakumar Yadav's Historic 100th T20I: ಭಾರತ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಒಂದು ವರ್ಷದಿಂದ ಫಾರ್ಮ್ ಕೊರತೆ ಎದುರಿಸುತ್ತಿದ್ದರೂ, 100ನೇ ಅಂತರರಾಷ್ಟ್ರೀಯ ಟಿ20 ಪಂದ್ಯ ಆಡುವ ಮೂಲಕ ಐತಿಹಾಸಿಕ ಮೈಲಿಗಲ್ಲು ತಲುಪಿದ್ದಾರೆ. ಅವರು ಕೇವಲ 1174 ದಿನಗಳಲ್ಲಿ ಈ ಸಾಧನೆ ಮಾಡಿ, ಬಾಬರ್ ಅಜಮ್ ಅವರ ವೇಗದ 100 ಟಿ20 ಪಂದ್ಯಗಳ ದಾಖಲೆ ಮುರಿದಿದ್ದಾರೆ. ಈ ಮೂಲಕ ರೋಹಿತ್, ಕೊಹ್ಲಿ ನಂತರ ಈ ಸಾಧನೆ ಮಾಡಿದ ನಾಲ್ಕನೇ ಭಾರತೀಯ ಎನಿಸಿದ್ದಾರೆ.
- pruthvi Shankar
- Updated on: Jan 21, 2026
- 9:22 pm
IND vs NZ: ಗುರು ಯುವರಾಜ್ ದಾಖಲೆ ಮುರಿದು ವಿಶ್ವ ದಾಖಲೆ ನಿರ್ಮಿಸಿದ ಅಭಿಷೇಕ್ ಶರ್ಮಾ
Abhishek Sharma Shatters Records: ಅಭಿಷೇಕ್ ಶರ್ಮಾ ನ್ಯೂಜಿಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ಸ್ಫೋಟಕ ಅರ್ಧಶತಕ ಬಾರಿಸಿ ದಾಖಲೆ ಸೃಷ್ಟಿಸಿದ್ದಾರೆ. ಕೇವಲ 22 ಎಸೆತಗಳಲ್ಲಿ ಅರ್ಧಶತಕ ಗಳಿಸಿ, ನ್ಯೂಜಿಲೆಂಡ್ ವಿರುದ್ಧ ಅತಿ ವೇಗದ ಭಾರತೀಯರೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದರ ಜೊತೆಗೆ ಯುವರಾಜ್ ಸಿಂಗ್ ಅವರ T20I ಸಿಕ್ಸರ್ ದಾಖಲೆ ಮುರಿದು, 25 ಎಸೆತಗಳಲ್ಲಿ ಅತಿ ಹೆಚ್ಚು ಅರ್ಧಶತಕಗಳನ್ನು ಬಾರಿಸಿದ ವಿಶ್ವ ದಾಖಲೆ ನಿರ್ಮಿಸಿ ಗಮನ ಸೆಳೆದಿದ್ದಾರೆ. ಅವರ 84 ರನ್ ಇನ್ನಿಂಗ್ಸ್ ತಂಡಕ್ಕೆ ಬಲ ನೀಡಿತು.
- pruthvi Shankar
- Updated on: Jan 21, 2026
- 8:37 pm
BBL: ‘ನೀವು ಗೆಲ್ಬೇಕಂದ್ರೆ ಬಾಬರ್ನ ತಂಡದಿಂದ ಹೊರಹಾಕಿ’; ಆಸೀಸ್ ದಿಗ್ಗಜನ ಹೇಳಿಕೆ
Babar Azam's BBL Struggles: ಬಿಗ್ ಬ್ಯಾಷ್ ಲೀಗ್ನಲ್ಲಿ ಸಿಡ್ನಿ ಸಿಕ್ಸರ್ಸ್ ಪರ ಬಾಬರ್ ಆಝಂ ಕಳಪೆ ಪ್ರದರ್ಶನ ನೀಡುತ್ತಿದ್ದಾರೆ. 11 ಪಂದ್ಯಗಳಲ್ಲಿ ಕೇವಲ 202 ರನ್ ಗಳಿಸಿದ್ದು, ಏಳು ಬಾರಿ ಒಂದೇ ಅಂಕಿಯ ಸ್ಕೋರ್ಗೆ ಔಟಾಗಿದ್ದಾರೆ. ಇದರಿಂದ ಕೆರಳಿದ ಆಸ್ಟ್ರೇಲಿಯಾದ ಮಾಜಿ ಆಟಗಾರ ಮಾರ್ಕ್ ವಾ, ಸಿಡ್ನಿ ಸಿಕ್ಸರ್ಸ್ ಪಂದ್ಯಗಳನ್ನು ಗೆಲ್ಲಬೇಕಾದರೆ ಬಾಬರ್ನನ್ನು ತಂಡದಿಂದ ಕೈಬಿಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
- pruthvi Shankar
- Updated on: Jan 21, 2026
- 8:19 pm
ಭಾರತದ ಪರ ನಿಂತ 14 ಮಂಡಳಿಗಳು; ಬಾಂಗ್ಲಾದೇಶಕ್ಕೆ 24 ಗಂಟೆ ಗಡುವು ನೀಡಿದ ಐಸಿಸಿ
T20 World Cup 2026: ಟಿ20 ವಿಶ್ವಕಪ್ ಪಂದ್ಯಗಳನ್ನು ಭಾರತದಿಂದ ಶ್ರೀಲಂಕಾಕ್ಕೆ ಸ್ಥಳಾಂತರಿಸಬೇಕೆಂಬ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ ಮನವಿಯನ್ನು ಐಸಿಸಿ ತಿರಸ್ಕರಿಸಿದೆ. ಬಾಂಗ್ಲಾ ಮಂಡಳಿ ತನ್ನ ನಿರ್ಧಾರದಿಂದ ಹಿಂದೆ ಸರಿಯದಿದ್ದರೆ, ತಂಡವನ್ನು ವಿಶ್ವಕಪ್ನಿಂದ ಹೊರಹಾಕುವ ಎಚ್ಚರಿಕೆ ನೀಡಿ 24 ಗಂಟೆ ಗಡುವು ನೀಡಿದೆ. ಮುಸ್ತಾಫಿಜುರ್ ಐಪಿಎಲ್ನಿಂದ ಕೈಬಿಟ್ಟಿದ್ದಕ್ಕೆ ಬಿಸಿಸಿಐ ವಿರುದ್ಧ ಬಾಂಗ್ಲಾ ಕೆರಳಿದೆ. ಬಹುಮತದಿಂದ ಬಾಂಗ್ಲಾ ಸೋತಿದ್ದು, ಭಾರತದಲ್ಲಿ ಆಡಲೇಬೇಕೆಂದು ಐಸಿಸಿ ಸೂಚಿಸಿದೆ.
- pruthvi Shankar
- Updated on: Jan 21, 2026
- 7:33 pm
IND vs NZ: ಟಾಸ್ ಸೋತ ಭಾರತ, ಕಿಶನ್ಗೆ ಅವಕಾಶ; ಹೀಗಿದೆ ಪ್ಲೇಯಿಂಗ್ 11
IND vs NZ 1st T20: ನಾಗ್ಪುರದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ T20 ಪಂದ್ಯ ಶುರುವಾಗಿದೆ. ಏಕದಿನ ಸರಣಿ ಸೋಲಿಗೆ ಸೇಡು ತೀರಿಸಿಕೊಳ್ಳಲು ಮತ್ತು 2026ರ T20 ವಿಶ್ವಕಪ್ಗೆ ಸಿದ್ಧತೆ ನಡೆಸಲು ಟೀಂ ಇಂಡಿಯಾ ಸಜ್ಜಾಗಿದೆ. ಮಿಚೆಲ್ ಸ್ಯಾಂಟ್ನರ್ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡರೆ, ಸೂರ್ಯಕುಮಾರ್ ಯಾದವ್ ನಾಯಕತ್ವದ ಭಾರತ ಬ್ಯಾಟಿಂಗ್ ಮಾಡಲಿದೆ. ಉಭಯ ತಂಡಗಳ ಹೆಡ್-ಟು-ಹೆಡ್ ದಾಖಲೆ ಮತ್ತು ಆಡುವ ಹನ್ನೊಂದರ ಬಳಗ ಇಲ್ಲಿದೆ. ಭಾರತದ ಪ್ರಾಬಲ್ಯ ಮುಂದುವರಿಯುವುದೇ ಕಾದುನೋಡಬೇಕು.
- pruthvi Shankar
- Updated on: Jan 21, 2026
- 6:44 pm
IPL 2026: ‘ಐಪಿಎಲ್ಗೆ ಚಿನ್ನಸ್ವಾಮಿ ರೆಡಿ ಇದ್ರು ಆರ್ಸಿಬಿ ಮನಸ್ಸು ಮಾಡ್ತಿಲ್ಲ’; ವೆಂಕಟೇಶ್ ಪ್ರಸಾದ್
IPL 2026: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಒಂದು ವರ್ಷದಿಂದ ಪಂದ್ಯಗಳಿಲ್ಲ. ಕೆಎಸ್ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಕ್ರಿಕೆಟ್ ಮರಳಿ ತರಲು ಯತ್ನಿಸುತ್ತಿದ್ದಾರೆ. ಸರ್ಕಾರ ಬೆಂಬಲವಿದೆ, ಆದರೆ ಆರ್ಸಿಬಿ ಬೆಂಗಳೂರಿನಲ್ಲಿ ಪಂದ್ಯವಾಡಲು ಹಿಂದೇಟು ಹಾಕುತ್ತಿದೆ. ಕ್ರೀಡಾಂಗಣದ ದುರಸ್ತಿ ಕಾರ್ಯಗಳು ಪ್ರಗತಿಯಲ್ಲಿವೆ. ಭದ್ರತೆ ಸುಧಾರಿಸಲಾಗಿದೆ. ಆದರೂ IPL ಬೆಂಗಳೂರಿಗೆ ಮರಳುವ ಬಗ್ಗೆ ಅನುಮಾನ ಮೂಡಿದೆ.
- pruthvi Shankar
- Updated on: Jan 21, 2026
- 5:57 pm
ICC ODI Rankings: ವಾರದೊಳಗೆ ಅಗ್ರಸ್ಥಾನ ಕಳೆದುಕೊಂಡ ವಿರಾಟ್ ಕೊಹ್ಲಿ
ICC ODI Rankings: ಟೀಂ ಇಂಡಿಯಾ, ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿ ಸೋಲಿನ ಬಳಿಕ ವಿರಾಟ್ ಕೊಹ್ಲಿ ಏಕದಿನ ಬ್ಯಾಟ್ಸ್ಮನ್ಗಳ ಶ್ರೇಯಾಂಕದಲ್ಲಿ ನಂ.1 ಸ್ಥಾನವನ್ನು ಕಳೆದುಕೊಂಡಿದ್ದಾರೆ. ನ್ಯೂಜಿಲೆಂಡ್ನ ಡ್ಯಾರಿಲ್ ಮಿಚೆಲ್ ಸರಣಿಯಲ್ಲಿನ ಅದ್ಭುತ ಪ್ರದರ್ಶನದಿಂದ ಅಗ್ರಸ್ಥಾನಕ್ಕೇರಿದ್ದಾರೆ. ಕೊಹ್ಲಿ ಎರಡನೇ ಸ್ಥಾನಕ್ಕೆ ಕುಸಿದಿದ್ದರೂ, ರೋಹಿತ್ ಶರ್ಮಾ, ಶುಭ್ಮನ್ ಗಿಲ್ ಮತ್ತು ಕೆಎಲ್ ರಾಹುಲ್ ಟಾಪ್ 10ರಲ್ಲಿ ಸ್ಥಾನ ಪಡೆದಿರುವುದು ಭಾರತಕ್ಕೆ ಸಮಾಧಾನಕರ ಸಂಗತಿ.
- pruthvi Shankar
- Updated on: Jan 21, 2026
- 4:21 pm
IND vs SA: ದಕ್ಷಿಣ ಆಫ್ರಿಕಾಕ್ಕೆ ಹಾರಲಿದೆ ಟೀಂ ಇಂಡಿಯಾ; ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ
BCCI Unveils India Women's SA Tour 2026: ಭಾರತ ಮಹಿಳಾ ಕ್ರಿಕೆಟ್ ತಂಡವು ಏಪ್ರಿಲ್ 2026 ರಲ್ಲಿ ದಕ್ಷಿಣ ಆಫ್ರಿಕಾಕ್ಕೆ ಪ್ರವಾಸ ಕೈಗೊಳ್ಳಲಿದೆ ಎಂದು ಬಿಸಿಸಿಐ ಪ್ರಕಟಿಸಿದೆ. ಈ ಪ್ರವಾಸದಲ್ಲಿ 5 ಪಂದ್ಯಗಳ ಟಿ20 ಸರಣಿ ನಡೆಯಲಿದ್ದು, ಏಪ್ರಿಲ್ 17 ರಿಂದ ಆರಂಭವಾಗಲಿದೆ. ಡರ್ಬನ್, ಜೋಹಾನ್ಸ್ಬರ್ಗ್ ಮತ್ತು ಬೆನೋನಿಯಲ್ಲಿ ಪಂದ್ಯಗಳು ಜರುಗಲಿವೆ. ಇದು ಮುಂಬರುವ ಟಿ20 ವಿಶ್ವಕಪ್ಗೆ ಭಾರತ ತಂಡದ ಸಿದ್ಧತೆಯ ಪ್ರಮುಖ ಭಾಗವಾಗಿದೆ.
- pruthvi Shankar
- Updated on: Jan 21, 2026
- 3:59 pm
WPL 2026: ಸತತ 5ನೇ ಗೆಲುವು; ಪ್ಲೇಆಫ್ಗೆ ಎಂಟ್ರಿಕೊಟ್ಟ ಆರ್ಸಿಬಿ
RCB Playoffs Qualification: ಆರ್ಸಿಬಿ ವಡೋದರಾದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ಏಕಪಕ್ಷೀಯ ಗೆಲುವು ಸಾಧಿಸಿ ಪ್ಲೇಆಫ್ಗೆ ಅರ್ಹತೆ ಪಡೆದ ಮೊದಲ ತಂಡವಾಗಿದೆ. ತವರು ನೆಲದಲ್ಲಿ ಸೇಡು ತೀರಿಸಿಕೊಳ್ಳುವ ಗುಜರಾತ್ ನಿರೀಕ್ಷೆ ಹುಸಿಯಾಗಿದೆ. ಆರ್ಸಿಬಿ ತಂಡದ ಸಾಂಘಿಕ ಪ್ರದರ್ಶನದಿಂದಾಗಿ ಗುಜರಾತ್ ಭಾರಿ ಅಂತರದಿಂದ ಸೋಲೊಪ್ಪಿಕೊಂಡಿದೆ. ಇದು ಆರ್ಸಿಬಿಯ ಸತತ ಗೆಲುವಿನ ಓಟವನ್ನು ಮುಂದುವರೆಸಿದೆ.
- pruthvi Shankar
- Updated on: Jan 19, 2026
- 11:14 pm