ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.
3 ದಶಕಗಳ ಬಳಿಕ ಮಂಗಳೂರು ಕಡಲ ತೀರದಲ್ಲಿ ಕಾಣಿಸಿಕೊಂಡ ಕಡಲಾಮೆ
ಮಂಗಳೂರಿನ ಸಸಿಹಿತ್ಲು ಕಡಲ ತೀರದಲ್ಲಿ ಮೂರು ದಶಕಗಳ ಬಳಿಕ ಅಳಿವಿನಂಚಿನಲ್ಲಿರುವ ಆಲಿವ್ ರಿಡ್ಲೆ ಕಡಲಾಮೆಗಳು ಮೊಟ್ಟೆ ಇಟ್ಟಿರುವುದು ಕಂಡುಬಂದಿದೆ. ಸ್ಥಳೀಯ ಮೀನುಗಾರರು ಮೊಟ್ಟೆಗಳ ರಕ್ಷಣೆಗೆ ನಿಗಾ ವಹಿಸುತ್ತಿದ್ದಾರೆ. ಈ ಹಿಂದೆ ಮಂಗಳೂರಿನ ಸುತ್ತಮುತ್ತಲಿನ 12 ಕಡೆಗಳಲ್ಲಿ ಕಡಲಾಮೆ ಮೊಟ್ಟೆಗಳು ಪತ್ತೆಯಾಗಿದ್ದವು. ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಈ ಆಮೆಗಳನ್ನು ರಕ್ಷಿಸಲಾಗಿದೆ. ತಾವು ಹುಟ್ಟಿದ ಸ್ಥಳಕ್ಕೆ ಮರಳಿ ಮೊಟ್ಟೆ ಇಡುವ ಈ ಆಮೆಗಳ ಮರಳುವಿಕೆ ವಿಶೇಷವಾಗಿದೆ.
- Pruthviraj
- Updated on: Feb 4, 2025
- 2:52 pm
ತಪ್ಪಿಸಿಕೊಳ್ಳಲು ಯತ್ನಿಸಿದ ಮಂಗಳೂರು ಬ್ಯಾಂಕ್ ದರೋಡೆಕೋರನಿಗೆ ಗುಂಡೇಟು!
ಅದು ಕರ್ನಾಟಕವನ್ನು ಬೆಚ್ಚಿ ಬೀಳಿಸಿದ್ದ ರಾಬರಿ ಕೇಸ್. ಮಟಮಟ ಮಧ್ಯಾಹ್ನವೇ ಸಹಕಾರಿ ಬ್ಯಾಂಕ್ಗೆ ನುಗ್ಗಿದ್ದ ದರೋಡೆಕೋರರು, ಪಿಸ್ತೂಲ್, ತಲ್ವಾರ್ ತೋರಿಸಿ ಕೆಜಿ ಕೆಜಿ ಚಿನ್ನದೊಂದಿಗೆ ಎಸ್ಕೇಪ್ ಆಗಿದ್ದರು. ಬಳಿಕ ಪೊಲೀಸರು ಅವರನ್ನು ಬಂಧಿಸಿದ್ದರು. ಇತ್ತೀಚೆಗೆ ಮಹಜರ್ ಸಂದರ್ಭದಲ್ಲಿ ಪೊಲೀಸರ ಮೇಲೆ ದಾಳಿ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿಗೆ ಗುಂಡು ಹಾರಿಸಲಾಗಿತ್ತು. ಇದೀಗ ಮತ್ತೊಬ್ಬ ಆರೋಪಿಗೆ ಗುಂಡು ಹಾರಿಸಲಾಗಿತ್ತು.
- Pruthviraj
- Updated on: Feb 1, 2025
- 2:53 pm
ಸ್ನೇಹಮಯಿ ಕೃಷ್ಣ ಫೋಟೋಗೆ ರಕ್ತಾಭಿಷೇಕ: ಬಲಿ ಚೀಟಿಯಲ್ಲಿ ಮಹಿಳಾ PSI ಹೆಸರು ಪತ್ತೆ
ಸ್ನೇಹಮಯಿ ಕೃಷ್ಣ ಮತ್ತು ಗಂಗರಾಜು ಫೋಟೋಗೆ ರಕ್ತಾಭಿಷೇಕ ಮತ್ತು ಮದ್ಯದ ಅಭಿಷೇಕ ಮಾಡಿರುವ ವಿಡಿಯೋ ಪತ್ತೆ ಆಗಿದೆ. ಈ ವಿಡಿಯೋ ಬಂಧಿತ ಶ್ರೀರಾಮ ಸೇನೆ ಮುಖಂಡ ಪ್ರಸಾದ್ ಅತ್ತಾವರ ಮೊಬೈಲ್ನಲ್ಲಿ ಪತ್ತೆಯಾಗಿರುವುದು ಪೊಲೀಸ್ ವಿಚಾರಣೆಯಲ್ಲಿ ಬಯಲಾಗಿದೆ. ಆದರೆ ಸ್ನೇಹಮಯಿ ಕೃಷ್ಣ, ಗಂಗರಾಜುರೊಂದಿಗೆ ಪ್ರಸಾದ್ ಅತ್ತಾವರ ಪತ್ನಿ ಸುಮಾ ಆಚಾರ್ಯ ಹೆಸರು ಕೂಡ ಬಲಿ ಚೀಟಿಯಲ್ಲಿರುವುದು ಸದ್ಯ ಕುತೂಹಲಕ್ಕೆ ಕಾರಣವಾಗಿದೆ.
- Pruthviraj
- Updated on: Jan 31, 2025
- 5:32 pm
ಮಂಗಳೂರು: ಪೆದಮಲೆ ಗ್ರಾಮದಲ್ಲಿ ಮಣ್ಣಿನಡಿ ಹುದುಗಿ ಹೋಗಿದ್ದ 300 ವರ್ಷ ಹಳೆಯ ದೈವಸ್ಥಾನ ಪತ್ತೆ
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ನೀರುಮಾರ್ಗದ ಪೆದಮಲೆ ಗ್ರಾಮದಲ್ಲಿ ದೈವದ ಪವಾಡ ಕಂಡು ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ದೇಗುಲವೊಂದರ ಜೀರ್ಣೋದ್ಧಾರ ಸಂಬಂಧ ಮಾಡಲಾದ ಪ್ರಶ್ನಾ ಚಿಂತನೆಯಲ್ಲಿ ಕಂಡುಬಂದ ಪ್ರಕಾರ, ಖಾಲಿ ಸೈಟ್ನಲ್ಲಿ ಶೋಧಕಾರ್ಯ ನಡೆಸಿದಾಗ 300 ವರ್ಷಗಳ ಹಳೆಯ ದೈವಸ್ಥಾನದ ಕುರುಹು ಕಂಡುಬಂದಿದೆ. ವಿವರಗಳು ಇಲ್ಲಿವೆ.
- Pruthviraj
- Updated on: Jan 30, 2025
- 11:14 am
ಮಂಗಳೂರಿನಲ್ಲಿ ಪ್ರೇತ ಉಚ್ಚಾಟನೆಗಾಗಿ ರಸ್ತೆ ಸಂಚಾರ ಬಂದ್: ಕಾರಣವೇನು?
ಮಂಗಳೂರಿನ ಕೊಟ್ಟಾರದಲ್ಲಿ ಬ್ರಹ್ಮರಾಕ್ಷಸ ಮತ್ತು ಇತರ ಪ್ರೇತಗಳ ಉಚ್ಚಾಟನಾ ಕಾರ್ಯಕ್ರಮದಿಂದಾಗಿ ರಾತ್ರಿ 10 ರಿಂದ ಬೆಳಿಗ್ಗೆ 3 ರವರೆಗೆ ರಸ್ತೆ ಸಂಚಾರವನ್ನು ಬಂದ್ ಮಾಡಲಾಗಿದೆ. ದೈವಸ್ಥಾನದ ಜೀರ್ಣೋದ್ಧಾರಕ್ಕೂ ಮುಂಚೆ ಈ ಅಗತ್ಯ ಕಂಡುಬಂದಿದೆ ಎಂದು ಆಯೋಜಕರು ಹೇಳಿದ್ದಾರೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
- Pruthviraj
- Updated on: Jan 29, 2025
- 8:09 pm
ಮಂಗಳೂರು ಉದ್ಯಮಿಗೆ ಭೂಗತ ಪಾತಕಿಯಿಂದ ಬೆದರಿಕೆ ಕರೆ: 3 ಕೋಟಿ ರೂ ಡಿಮ್ಯಾಂಡ್
ಮಂಗಳೂರಿನ ಬಜ್ಪೆಯ ಉದ್ಯಮಿಗೆ ಕಲಿ ಯೋಗೇಶ್ ಹೆಸರಿನಲ್ಲಿ ಭೂಗತ ಪಾತಕಿ ಜನವರಿ 17 ರಂದು ಬೆದರಿಕೆ ಕರೆ ಬಂದಿದೆ. 3 ಕೋಟಿ ರೂ. ನೀಡುವಂತೆ ಬೆದರಿಕೆ ಹಾಕಲಾಗಿದೆ. ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಪ್ರಕರಣ ಬಜ್ಪೆ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದ್ದು, ತನಿಖೆ ಆರಂಭಿಸಿದ್ದಾರೆ.
- Pruthviraj
- Updated on: Jan 26, 2025
- 3:54 pm
ಇನ್ಸ್ಟಾಗ್ರಾಮ್ನಲ್ಲಿ ಯುವತಿಯ ಫೋಟೋಗೆ ಲೈಕ್, ಪ್ರೇಯಸಿಯಿಂದ ತರಾಟೆ: ಪ್ರಿಯಕರ ಆತ್ಮಹತ್ಯೆಗೆ ಶರಣು
ಬಂಟ್ವಾಳ ತಾಲೂಕಿನ ಯುವಕನೊಬ್ಬ ಇನ್ಸ್ಟಾಗ್ರಾಮ್ನಲ್ಲಿ ಒಂದು ಫೋಟೋಗೆ ಲೈಕ್ ಕೊಟ್ಟಿದ್ದಕ್ಕಾಗಿ ಆತನ ಪ್ರೇಯಸಿ ಕೋಪಗೊಂಡು ತರಾಟೆಗೆ ತೆಗೆದುಕೊಂಡಿದ್ದಾಳೆ. ಇದರಿಂದ ಮನನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆಯು ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ಮತ್ತು ಅದರಿಂದ ಉಂಟಾಗುವ ಮಾನಸಿಕ ಒತ್ತಡದ ಬಗ್ಗೆ ಗಮನ ಸೆಳೆಯುತ್ತದೆ. ಯುವಕರಲ್ಲಿ ಸಾಮಾಜಿಕ ಮಾಧ್ಯಮದ ಚಟ ಹೆಚ್ಚುತ್ತಿರುವುದು ಚಿಂತಾಜನಕ.
- Pruthviraj
- Updated on: Jan 25, 2025
- 12:15 pm
ಮಸಾಜ್ ಪಾರ್ಲರ್ ಮೇಲೆ ದಾಳಿ ಕೇಸ್: 14 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ
ಮಂಗಳೂರಿನ ಬಿಜೈನಲ್ಲಿರುವ ಕಲರ್ಸ್ ಮಸಾಜ್ ಪಾರ್ಲರ್ ಮೇಲೆ ರಾಮಸೇನೆ ನಡೆಸಿದ ದಾಳಿ ಪ್ರಕರಣದಲ್ಲಿ ರಾಮಸೇನೆ ಸಂಸ್ಥಾಪಕ ಪ್ರಸಾದ್ ಅತ್ತಾವರ ಸೇರಿದಂತೆ 14 ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದೆ. ಬರ್ಕೆ ಠಾಣೆ ಪೊಲೀಸರು ಆರೋಪಿಗಳನ್ನು ಮಂಗಳೂರಿನ 6ನೇ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
- Pruthviraj
- Updated on: Jan 24, 2025
- 7:47 pm
ಮಂಗಳೂರು ಮಸಾಜ್ ಪಾರ್ಲರ್ ಮೇಲೆ ದಾಳಿ: ರಾಮಸೇನೆಯ ಸಂಸ್ಥಾಪಕ ಅರೆಸ್ಟ್
ಮಂಗಳೂರಿನ ಸ್ಪಾವೊಂದರಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿದೆ ಎಂದು ಆರೋಪಿಸಿ ರಾಮಸೇನೆ ದಾಳಿ ಮಾಡಿದ್ದು, ಪೀಠೋಪಕರಣ ಧ್ವಂಸ ಮಾಡಿದ್ದಾರೆ. ಈ ಸಂಬಂಧ ಇದೀಗ ಪೊಲೀಸರು ರಾಮಸೇನೆ ಸಂಸ್ಥಾಪಕ ಸೇರಿದಂತೆ ಸಂಘಟನೆಯ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನು ಸಂಬಂಧ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಸಂಘಟನೆ ವಿರುದ್ಧ ಕಿಡಿಕಾರಿದ್ದಾರೆ.
- Pruthviraj
- Updated on: Jan 23, 2025
- 7:32 pm
ಅನೈತಿಕ ಚಟುವಟಿಕೆ ಆರೋಪ: ಮಂಗಳೂರಿನಲ್ಲಿ ಮಸಾಜ್ ಸೆಂಟರ್ ಮೇಲೆ ರಾಮಸೇನೆ ದಾಳಿ
ಮಂಗಳೂರಿನ ಬಿಜೈಯಲ್ಲಿರುವ ಕಲರ್ಸ್ ಎಂಬ ಮಸಾಜ್ ಸೆಂಟರ್ ಮೇಲೆ ರಾಮಸೇನೆ ಸಂಘಟನೆಯಿಂದ ದಾಳಿ ಮಾಡಲಾಗಿದೆ. ಅನೈತಿಕ ಚಟುವಟಿಕೆಗಳು ನಡೆಸುತ್ತಿರುವ ಆರೋಪ ಮೇಲೆ ದಾಳಿ ಮಾಡಲಾಗಿದೆ. ಸದ್ಯ ಮಂಗಳೂರಿನ ಎಲ್ಲಾ ಮಸಾಜ್ ಸೆಂಟರ್ಗಳನ್ನು ಮುಚ್ಚಿಸುವಂತೆ ರಾಮಸೇನೆ ಒತ್ತಾಯಿಸಿದೆ. ದಾಳಿ ಮಾಡಿದ್ದವರನ್ನು ಬಂಧಿಸುವಂತೆ ಗೃಹ ಸಚಿವ ಸೂಚಿಸಿದ್ದಾರೆ.
- Pruthviraj
- Updated on: Jan 23, 2025
- 3:25 pm
ಮಂಗಳೂರು: ರಥೋತ್ಸವದ ವೇಳೆ ವಿಟ್ಲ ಪಂಚಲಿಂಗೇಶ್ವರ ದೇವರ ಮೂರ್ತಿ, ಅರ್ಚಕರಿಗೆ ಬಡಿದ ಡ್ರೋನ್
ಇತ್ತೀಚೆಗೆ ಡ್ರೋನ್ ಹಾಗೂ ಡ್ರೋನ್ ಕ್ಯಾಮರಾಗಳ ಹಾವಳಿ ಜೋರಾಗಿದೆ. ಉತ್ಸವ, ಜಾತ್ರೆಗಳ ಸಂದರ್ಭಗಳಲ್ಲಿಯೂ ಡ್ರೋನ್ ಕ್ಯಾಮರಾ ಬಳಕೆ ಹೆಚ್ಚಾಗಿದೆ. ಆದರೆ, ಇದುವೇ ಎಡವಟ್ಟಿಗೂ ಕಾರಣವಾಗಿದೆ. ವಿಟ್ಲ ಶ್ರೀ ಪಂಚಲಿಂಗೇಶ್ವರ ರಥೋತ್ಸವದ ಸಂದರ್ಭ ನಿಯಂತ್ರಣ ತಪ್ಪಿದ ಡ್ರೋನ್ ಒಂದು ದೇವರ ಮೂರ್ತಿ, ಅರ್ಚಕರಿಗೆ ಬಡಿದಿದೆ. ವಿಡಿಯೋ ಈಗ ವೈರಲ್ ಆಗುತ್ತಿದೆ.
- Pruthviraj
- Updated on: Jan 23, 2025
- 11:03 am
ಹಲ್ಲೆಗೆ ಯತ್ನಿಸಿ ಪರಾರಿಯಾಗಲು ಪ್ರಯತ್ನ: ಮಂಗಳೂರು ಬ್ಯಾಂಕ್ ದರೋಡೆ ಆರೋಪಿಗೆ ಖಾಕಿ ಫೈರಿಂಗ್
ಮಂಗಳೂರಿನ ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಮೂವರನ್ನು ಬಂಧಿಸುವ ಮೂಲಕ ಪೊಲೀಸರು ಪ್ರಕರಣವನ್ನು ಬೇಧಿಸಿದ್ದರು. ಹೀಗಿರುವಾಗ ಇಂದು ಮಹಜರಿಗೆ ಕರೆದುಕೊಂಡು ಹೋಗುವ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಪ್ರಮುಖ ಆರೋಪಿಗೆ ಫೈರಿಂಗ್ ಮಾಡಿದ್ದಾರೆ. ಸದ್ಯ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
- Pruthviraj
- Updated on: Jan 21, 2025
- 6:32 pm