AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೃಥ್ವಿರಾಜ್​ ಬಿ.ಯು. ಮಂಗಳೂರು

ಪೃಥ್ವಿರಾಜ್​ ಬಿ.ಯು. ಮಂಗಳೂರು

Author - TV9 Kannada

udhayashankar.pruthviraj@tv9.com

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
ಬುರುಡೆ ಕೇಸ್​​ಗೆ ಎಂಟ್ರಿಕೊಟ್ಟ ಶ್ರೀಕ್ಷೇತ್ರ ಧರ್ಮಸ್ಥಳ: ಕೋರ್ಟ್​​ನಲ್ಲಿ ವಕಾಲತ್ತು ಸಲ್ಲಿಕೆ

ಬುರುಡೆ ಕೇಸ್​​ಗೆ ಎಂಟ್ರಿಕೊಟ್ಟ ಶ್ರೀಕ್ಷೇತ್ರ ಧರ್ಮಸ್ಥಳ: ಕೋರ್ಟ್​​ನಲ್ಲಿ ವಕಾಲತ್ತು ಸಲ್ಲಿಕೆ

ಬುರುಡೆ ಪ್ರಕರಣ ಸಂಬಂಧ ಶ್ರೀಕ್ಷೇತ್ರ ಧರ್ಮಸ್ಥಳದ ಪರವಾಗಿ ಬೆಳ್ತಂಗಡಿ ನ್ಯಾಯಾಲಯಕ್ಕೆ ವಕಾಲತ್ತು ಸಲ್ಲಿಕೆಯಾಗಿದೆ. ಪ್ರಕರಣ ಸಂಬಂಧ  ಸಂಬಂಧ SIT ವರದಿಯಲ್ಲಿ ಧರ್ಮಸ್ಥಳ ವಿರುದ್ಧ ಷಡ್ಯಂತ್ರ ನಡೆಸಿರೋದು ಬಹಿರಂಗವಾಗಿದ್ದರೂ ಆರೋಪಿಗಳ ವಿರುದ್ದ ಕ್ರಮ ಕೈಗೊಂಡಿಲ್ಲ. ಹೀಗಾಗಿ ಪ್ರಕರಣ ಸಂಬಂಧ ಇದೇ ಮೊದಲ ಬಾರಿಗೆ ಶ್ರೀಕ್ಷೇತ್ರ ಧರ್ಮಸ್ಥಳದ ಪರವಾಗಿ ವಾದಮಂಡನೆ ನಡೆಯಲಿದೆ.

ಧರ್ಮಸ್ಥಳ ಕೇಸ್​: ‘ಬುರುಡೆ’ ಕಾಟಕ್ಕೆ ಬೆಚ್ಚಿಬಿದ್ದಿದ್ದ ಆತ​​; SIT ವರದಿಯಲ್ಲಿ ಸ್ಫೋಟಕ ಮಾಹಿತಿ

ಧರ್ಮಸ್ಥಳ ಕೇಸ್​: ‘ಬುರುಡೆ’ ಕಾಟಕ್ಕೆ ಬೆಚ್ಚಿಬಿದ್ದಿದ್ದ ಆತ​​; SIT ವರದಿಯಲ್ಲಿ ಸ್ಫೋಟಕ ಮಾಹಿತಿ

ಧರ್ಮಸ್ಥಳ ಷಡ್ಯಂತ್ರ ಪ್ರಕರಣದಲ್ಲಿ ಎಸ್​ಐಟಿ ವರದಿ ಸ್ಫೋಟಕ ಮಾಹಿತಿ ಬಹಿರಂಗಪಡಿಸಿದೆ. ಅಪಪ್ರಚಾರಕ್ಕೆ ಬಳಸಿದ 'ಬುರುಡೆ' ಜೊತೆಗಿದ್ದಾಗ ಗ್ಯಾಂಗ್ ಸದಸ್ಯ ಜಯಂತ್​ಗೆ ಕೆಟ್ಟ ಕನಸುಗಳು ಬಿದ್ದು ಭಯಭೀತನಾಗಿದ್ದ. ದೆಹಲಿಯಲ್ಲಿ ಬುರುಡೆ ಬಿಟ್ಟು ಬೆಂಗಳೂರಿಗೆ ಮರಳಿದ್ದ ಆತ, ನಂತರ ಅದನ್ನು ಮತ್ತೆ ತಂದಿದ್ದ. ಸುಜಾತಾ ಭಟ್ ಅರಿವಿಲ್ಲದೆ ಬುರುಡೆ ಪಕ್ಕ ಮಲಗಿದ್ದ ಘಟನೆ ಬಗ್ಗೆಯೂ ಉಲ್ಲೇಖಿಸಲಾಗಿದೆ. ಈ ವರದಿ ಹಲವು ಕುತೂಹಲಕಾರಿ ಅಂಶಗಳನ್ನು ತೆರೆದಿಟ್ಟಿದೆ.

ಗೋಮಾಂಸ ಸಾಗಿಸುವಾಗ ತಡೆದು ನೈತಿಕ ಪೊಲೀಸ್​ಗಿರಿ: ಮಗಳನ್ನು ಬಿಟ್ಟು ಓಡಿಹೋದ ತಂದೆ

ಗೋಮಾಂಸ ಸಾಗಿಸುವಾಗ ತಡೆದು ನೈತಿಕ ಪೊಲೀಸ್​ಗಿರಿ: ಮಗಳನ್ನು ಬಿಟ್ಟು ಓಡಿಹೋದ ತಂದೆ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ಮುಂದುವರೆದಿದೆ. ದ್ವಿಚಕ್ರ ವಾಹನದಲ್ಲಿ ಗೋಮಾಂಸ ಸಾಗಿಸುವಾಗ ತಡೆದು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ನೈತಿಕ ಪೊಲೀಸ್ ಗಿರಿ ನಡೆಸಿದವರ ವಿರುದ್ಧ ಹಾಗೂ ಅಕ್ರಮ ಗೋಮಾಂಸ ಸಾಗಾಟ ಮಾಡಿದವರ ವಿರುದ್ಧ ಬಜ್ಪೆ ಠಾಣೆಯಲ್ಲಿ ಸ್ವತಂಪ್ರೇರಿತ ಪ್ರಕರಣ ದಾಖಲಿಸಲಾಗಿದೆ.

6 ತಿಂಗಳಿಂದ ಪಾವತಿಯಾಗಿಲ್ಲ ಸಂಬಳ! ಗುತ್ತಿಗೆ ವೈದ್ಯಾಧಿಕಾರಿ ರಾಜೀನಾಮೆ

6 ತಿಂಗಳಿಂದ ಪಾವತಿಯಾಗಿಲ್ಲ ಸಂಬಳ! ಗುತ್ತಿಗೆ ವೈದ್ಯಾಧಿಕಾರಿ ರಾಜೀನಾಮೆ

ದಕ್ಷಿಣ ಕನ್ನಡ ಜಿಲ್ಲೆಯ ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದ ಗುತ್ತಿಗೆ ವೈದ್ಯಾಧಿಕಾರಿ ಡಾ. ಕುಲದೀಪ್ ಎಂ.ಡಿ. ಆರು ತಿಂಗಳ ಸಂಬಳ ದೊರೆಯದ ಕಾರಣಕ್ಕೆ ರಾಜೀನಾಮೆ ನೀಡಿದ್ದಾರೆ. ಕಳೆದ ಎರಡೂವರೆ ವರ್ಷದಿಂದ ಸೇವೆ ಸಲ್ಲಿಸುತ್ತಿದ್ದ ಅವರಿಗೆ ಜೀವನ ನಿರ್ವಹಣೆ ಕಷ್ಟಕರವಾಗಿದ್ದರಿಂದ ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ಮಂಗಳೂರು: ಜೇನುಕೃಷಿ ಕಲಿಸುವ ನೆಪದಲ್ಲಿ ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ; ಆರೋಪಿ ಅಂದರ್

ಮಂಗಳೂರು: ಜೇನುಕೃಷಿ ಕಲಿಸುವ ನೆಪದಲ್ಲಿ ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ; ಆರೋಪಿ ಅಂದರ್

ಮಂಗಳೂರಿನ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ಬೆಳಗಾವಿ ಮೂಲದ ಅಪ್ರಾಪ್ತ ಬಾಲಕಿಯ ಮೇಲೆ ಜೇನುಕೃಷಿ ತರಬೇತಿ ಹೆಸರಿನಲ್ಲಿ 17 ದಿನಗಳ ಕಾಲ ನಿರಂತರ ಅತ್ಯಾಚಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆರೋಪಿ ವಿರುದ್ಧ ಪೋಕ್ಸೋ ಮತ್ತು ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಅರೆಸ್ಟ್ ಮಾಡಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

ಧರ್ಮಸ್ಥಳ ಬುರುಡೆ ಪ್ರಕರಣ: ಜೈಲಿನಿಂದ ಹೊರಬರುತ್ತಲೇ ಹೋರಾಟಗಾರರ ವಿರುದ್ಧವೇ ತಿರುಗಿ ಬಿದ್ದ ಚಿನ್ನಯ್ಯ!

ಧರ್ಮಸ್ಥಳ ಬುರುಡೆ ಪ್ರಕರಣ: ಜೈಲಿನಿಂದ ಹೊರಬರುತ್ತಲೇ ಹೋರಾಟಗಾರರ ವಿರುದ್ಧವೇ ತಿರುಗಿ ಬಿದ್ದ ಚಿನ್ನಯ್ಯ!

ಧರ್ಮಸ್ಥಳ ಪ್ರಕರಣದಲ್ಲಿ ಬಂಧಿತನಾಗಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯ ಜೈಲಿನಿಂದ ಬಿಡುಗಡೆಯಾದ ತಕ್ಷಣವೇ ವರಸೆ ಬದಲಿಸಿದ್ದಾನೆ . ತನ್ನ ಹಾಗೂ ಪತ್ನಿಯ ಜೀವಕ್ಕೆ ಅಪಾಯವಿದೆ ಎಂದು ಆರೋಪಿಸಿ, ಮಹೇಶ್ ತಿಮರೋಡಿ ಸೇರಿ ಐವರು ಹೋರಾಟಗಾರರ ವಿರುದ್ಧ ಜೀವ ಬೆದರಿಕೆ ದೂರು ದಾಖಲಿಸಿದ್ದಾನೆ. ಪೊಲೀಸರು ದೂರನ್ನು ಸ್ವೀಕರಿಸಿ ತನಿಖೆ ಆರಂಭಿಸಿದ್ದಾರೆ. ಈ ಬೆಳವಣಿಗೆ ಪ್ರಕರಣಕ್ಕೆ ಹೊಸ ಆಯಾಮ ನೀಡಿದೆ.

ಧರ್ಮಸ್ಥಳ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ನೋಟಿಸ್

ಧರ್ಮಸ್ಥಳ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ನೋಟಿಸ್

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷಗಳ ಕಾಲ ಗಡಿಪಾರು ಮಾಡಲಾಗಿದೆ. ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಈ ಆದೇಶ ನೀಡಿದ್ದು, 2026ರ ಡಿಸೆಂಬರ್ 17ರವರೆಗೆ ತಿಮರೋಡಿ ರಾಯಚೂರು ಜಿಲ್ಲೆಯಲ್ಲಿ ಇರಬೇಕಿದೆ. ಈ ಹಿಂದೆ ಹೈಕೋರ್ಟ್ ಸೂಚನೆ ಮೇರೆಗೆ ಕಾನೂನಾತ್ಮಕವಾಗಿ ಹೊಸ ಗಡಿಪಾರು ಆದೇಶವನ್ನು ಜಾರಿಗೊಳಿಸಲಾಗಿದೆ.

ಧರ್ಮಸ್ಥಳ ಕೇಸ್: ಕೊನೆಗೂ ಚಿನ್ನಯ್ಯನಿಗೆ ಜೈಲಿನಿಂದ ಬಿಡುಗಡೆ ಭಾಗ್ಯ, ಕೋರ್ಟಿಗೆ ಶ್ಯೂರಿಟಿ ಕೊಟ್ಟವರ್ಯಾರು?

ಧರ್ಮಸ್ಥಳ ಕೇಸ್: ಕೊನೆಗೂ ಚಿನ್ನಯ್ಯನಿಗೆ ಜೈಲಿನಿಂದ ಬಿಡುಗಡೆ ಭಾಗ್ಯ, ಕೋರ್ಟಿಗೆ ಶ್ಯೂರಿಟಿ ಕೊಟ್ಟವರ್ಯಾರು?

ಧರ್ಮಸ್ಥಳ ಪ್ರಕರಣದ ಮೂಲಕ ದೇಶಾದ್ಯಂತ ಸಂಚಲನ ಮೂಡಿಸಿದ್ದ ಮಾಸ್ಕ್​​ ಮ್ಯಾನ್ ಎಂದೇ ಪ್ರಖ್ಯಾತನಾಗಿದ್ದ ಸಿ.ಎನ್. ಚಿನ್ನಯ್ಯಗೆ ಕೊನೆಗೂ ಬಿಡುಗಡೆ ಭಾಗ್ಯ ಸಿಕ್ಕಿದೆ. ನ್ಯಾಯಾಲಯದಿಂದ ಜಾಮೀನು ಮಂಜೂರಾಗಿದ್ದರೂ, ಬಿಡುಗಡೆಯ ಭಾಗ್ಯವಿಲ್ಲದೆ ಜೈಲಿನಲ್ಲಿಯೇ ಉಳಿಯುವಂತಾಗಿತ್ತು. ಇದರಿಂದ ಮಂಕಾಗಿದ್ದ ಚಿನ್ನಯ್ಯ, ಇಂದು ಸಂಜೆ ವೇಳೆಗೆ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಹಾಗಾದ್ರೆ, ಮಾಸ್ಕ್​ ಮ್ಯಾನ್​​ಗೆ ಶ್ಯೂರಿಟಿ ಸಹಿ ಹಾಕಿದವರು ಯಾರು?

ರಿಷಬ್ ಶೆಟ್ಟಿ ಹರಕೆ ಕೋಲ ವಿವಾದ; ಪೊಲೀಸ್ ಠಾಣೆ ಮೆಟ್ಟಿಲೇರಿದ ದೇವಸ್ಥಾನದ ಆಡಳಿತ ಮಂಡಳಿ

ರಿಷಬ್ ಶೆಟ್ಟಿ ಹರಕೆ ಕೋಲ ವಿವಾದ; ಪೊಲೀಸ್ ಠಾಣೆ ಮೆಟ್ಟಿಲೇರಿದ ದೇವಸ್ಥಾನದ ಆಡಳಿತ ಮಂಡಳಿ

ರಿಷಬ್ ಶೆಟ್ಟಿ ಭಾಗವಹಿಸಿದ್ದ ಹರಕೆ ಕೋಲದ ದೈವ ನರ್ತಕರ ವರ್ತನೆ ಕುರಿತು ವಿವಾದ ಮುಂದುವರೆದಿದೆ, ಈ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ದೃಶ್ಯಗಳ ಬಗ್ಗೆ ಆಕ್ಷೇಪ ವ್ಯಕ್ತವಾಗಿದ್ದು, ಜಾರಂದಾಯ ಬಂಟ ಮತ್ತು ವಾರಾಹಿ ಪಂಜುರ್ಲಿ ಕ್ಷೇತ್ರದ ಆಡಳಿತ ಮಂಡಳಿ ಕದ್ರಿ ಠಾಣೆಗೆ ದೂರು ನೀಡಿದೆ. ದೇವಸ್ಥಾನದ ಪ್ರಮುಖರು ಸುದ್ದಿಗೋಷ್ಠಿ ನಡೆಸಿ, ವಿವಾದವು ದೈವ ಕ್ಷೇತ್ರದ ಬೆಳವಣಿಗೆಯನ್ನು ತಡೆಯುವ ಯತ್ನ ಎಂದು ಸ್ಪಷ್ಟಪಡಿಸಿದ್ದಾರೆ.

ಮಾಸ್ಕ್​ಮ್ಯಾನ್ ಚಿನ್ನಯ್ಯ, ಪ್ರಭಾವಿ ಸ್ವಾಮೀಜಿ ನಡುವಣ ಮೀಟಿಂಗ್ ರಹಸ್ಯ ಬಿಚ್ಚಿಟ್ಟ ಮಹೇಶ್ ಶೆಟ್ಟಿ ತಿಮರೋಡಿ

ಮಾಸ್ಕ್​ಮ್ಯಾನ್ ಚಿನ್ನಯ್ಯ, ಪ್ರಭಾವಿ ಸ್ವಾಮೀಜಿ ನಡುವಣ ಮೀಟಿಂಗ್ ರಹಸ್ಯ ಬಿಚ್ಚಿಟ್ಟ ಮಹೇಶ್ ಶೆಟ್ಟಿ ತಿಮರೋಡಿ

ಸೌಜನ್ಯ ಪ್ರಕರಣದ ಕುರಿತು ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮಹತ್ವದ ವಿಷಯಗಳನ್ನು ಬಹಿರಂಗಪಡಿಸಿದ್ದಾರೆ. ಮಾಸ್ಕ್​ಮ್ಯಾನ್ ಚಿನ್ನಯ್ಯ ಪ್ರಭಾವಿ ಸ್ವಾಮೀಜಿಯೊಬ್ಬರನ್ನು ಭೇಟಿಯಾಗಿ ಎಲ್ಲವನ್ನೂ ತಿಳಿಸಿದ್ದ. ಸ್ವಾಮೀಜಿಗಳು ಕೂಡ ಮುಖ್ಯಮಂತ್ರಿಗಳಿಗೆ ಹೇಳಿ ನ್ಯಾಯಕೊಡಿಸುವ ಭರವಸೆ ನೀಡಿ ಸುಮ್ಮನಾಗಿದ್ದಾರೆ ತಿಮರೋಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾನೂನು ಹೋರಾಟ ಮುಂದುವರೆಸುವುದಾಗಿ ಹೇಳಿದ್ದಾರೆ.

ಹರಕೆ ನೇಮೋತ್ಸವದಲ್ಲಿ ‘ಕಾಂತಾರ: ಚಾಪ್ಟರ್ 3’ ಸಿನಿಮಾಗೆ ಸಿಕ್ತು ದೈವದ ಗ್ರೀನ್ ಸಿಗ್ನಲ್

ಹರಕೆ ನೇಮೋತ್ಸವದಲ್ಲಿ ‘ಕಾಂತಾರ: ಚಾಪ್ಟರ್ 3’ ಸಿನಿಮಾಗೆ ಸಿಕ್ತು ದೈವದ ಗ್ರೀನ್ ಸಿಗ್ನಲ್

‘ಕಾಂತಾರ’ ಯಶಸ್ಸಿನ ಬಳಿಕ ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ಫಿಲ್ಮ್ಸ್ ವತಿಯಿಂದ ಹರಕೆ ನೇಮೋತ್ಸವ ಮಾಡಲಾಗಿದೆ. ಡಿಸೆಂಬರ್ 4ರಂದು ಮಧ್ಯರಾತ್ರಿವರೆಗೂ ವರಾಹ ಪಂಜುರ್ಲಿ-ಜಾರಂದಾಯ, ಬಂಟ ಕೋಲ ನಡೆಯಿತು. ಬಾಕಿ ಇರುವ ಹರಕೆ ತೀರಿಸಿದ ನಂತರ ‘ಕಾಂತಾರ: ಚಾಪ್ಟರ್ 3’ ಚಿತ್ರೀಕರಣ ಶುರು ಆಗುವ ಸಾಧ್ಯತೆ ಇದೆ.

ಮಂಗಳೂರಿನಲ್ಲಿ ವೇಣುಗೋಪಾಲ್ ಎದುರು ಡಿಕೆ ಡಿಕೆ ಘೋಷಣೆ: ಡಿಕೆಶಿ ಆಪ್ತನಿಗೆ ಹೈಕಮಾಂಡ್ ಬಿಗ್ ಶಾಕ್

ಮಂಗಳೂರಿನಲ್ಲಿ ವೇಣುಗೋಪಾಲ್ ಎದುರು ಡಿಕೆ ಡಿಕೆ ಘೋಷಣೆ: ಡಿಕೆಶಿ ಆಪ್ತನಿಗೆ ಹೈಕಮಾಂಡ್ ಬಿಗ್ ಶಾಕ್

ಸಿದ್ದರಾಮಯ್ಯ ಸರ್ಕಾರ ಮೊನ್ನೆ ಎರಡುವರೆ ವರ್ಷ ಪೂರೈಸುತ್ತಿದ್ದಂತೆಯೇ ಅಧಿಕಾರ ಹಂಚಿಕೆ ಕದನ ಜೋರಾಗಿತ್ತು. ಡಿಕೆ ಶಿವಕುಮಾರ್ ಹಾಗೂ ಅವರ ಬಣ ಸಿಎಂ ಕುರ್ಚಿ ಬೇಕೇಬೇಕೆಂದು ಪಟ್ಟು ಹಿಡಿದು ನಾನಾ ಕಸರತ್ತು ನಡೆಸಿತ್ತು. ಕೊನೆಗೆ ಹೈಕಮಾಂಡ್ ಮಧ್ಯೆಪ್ರವೇಶಿಸಿ ಸಿಎಂ ಮತ್ತು ಡಿಸಿಎಂಗೆ ಕರೆ ಮಾಡಿ ಬ್ರೇಕ್ ಫಾಸ್ಟ್​ ಮೀಟಿಂಗ್ ಮಾಡಿ ಗೊಂದಲ ಬಗೆಹರಿಸುವಂತೆ ಸೂಚಿಸಿತ್ತು. ಅದರಂತೆ ಎಲ್ಲಾ ಆಗಿ ಶಾಂತವಾಗಿತ್ತು. ಆದ್ರೆ, ಎಐಸಿಸಿ ಪ್ರಧಾನಿ ಕಾರ್ಯದರ್ಶಿ ವೇಣುಗೋಪಾಲ್ ಮಂಗಳೂರಿಗೆ ಆಗಮಿಸಿದ್ದ ವೇಳೆ ಡಿಕೆ ಡಿಕೆ ಘೋಷಣೆ ಮೊಳಗಿತ್ತು. ಈ ಸಂಬಂಧ ಇದೀಗ ಡಿಕೆಶಿ ಆಪ್ತನಿಗೆ ಹೈಕಮಾಂಡ್ ಶಾಕ್ ಕೊಟ್ಟಿದೆ.