AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೃಥ್ವಿರಾಜ್​ ಬಿ.ಯು. ಮಂಗಳೂರು

ಪೃಥ್ವಿರಾಜ್​ ಬಿ.ಯು. ಮಂಗಳೂರು

Author - TV9 Kannada

udhayashankar.pruthviraj@tv9.com

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
ಚಿಕ್ಕಬಳ್ಳಾಪುರದ ರಾಜೀವ್​​ ಗೌಡನಿಗೂ ಮಂಗಳೂರಿನ ಉದ್ಯಮಿ ಮೈಕಲ್​​ಗೂ ಎಲ್ಲಿಂದ ನಂಟು? ಇಲ್ಲಿದೆ ಮಾಹಿತಿ

ಚಿಕ್ಕಬಳ್ಳಾಪುರದ ರಾಜೀವ್​​ ಗೌಡನಿಗೂ ಮಂಗಳೂರಿನ ಉದ್ಯಮಿ ಮೈಕಲ್​​ಗೂ ಎಲ್ಲಿಂದ ನಂಟು? ಇಲ್ಲಿದೆ ಮಾಹಿತಿ

ಮಹಿಳಾ ಅಧಿಕಾರಿಗೆ ಬೆದರಿಕೆ ಕೇಸ್​​ನಲ್ಲಿ ತಲೆಮರೆಸಿಕೊಂಡಿದ್ದ ರಾಜೀವ್​​ ಗೌಡನನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಜೊತೆಗೆ ಆತನಿಗೆ ಅಶ್ರಯ ನೀಡಿದ್ದ ಮಂಗಳೂರಿನ ಉದ್ಯಮಿ ಮೈಕಲ್​​ ಕೂಡ ಅರೆಸ್ಟ್​ ಆಗಿದ್ದಾರೆ. ಅಷ್ಟಕ್ಕೂ ಚಿಕ್ಕಬಳ್ಳಾಪುರದ ರಾಜೀವ್​​ ಗೌಡನಿಗೂ ಮಂಗಳೂರಿನ ಉದ್ಯಮಿ ಮೈಕಲ್​​ಗೂ ಎಲ್ಲಿಂದ ನಂಟು? ಎಂಬ ಕುರಿತು ಮಾಹಿತಿ ಇಲ್ಲಿದೆ.

ರಾಜೀವ್​ ಗೌಡನಿಗೆ ಆಶ್ರಯ ನೀಡಿದ್ದ ಮಂಗಳೂರಿನ ಉದ್ಯಮಿ ಯಾರು? ಸಿಕ್ಕಿಬಿದಿದ್ದು ಹೇಗೆ?

ರಾಜೀವ್​ ಗೌಡನಿಗೆ ಆಶ್ರಯ ನೀಡಿದ್ದ ಮಂಗಳೂರಿನ ಉದ್ಯಮಿ ಯಾರು? ಸಿಕ್ಕಿಬಿದಿದ್ದು ಹೇಗೆ?

ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಧಮ್ಕಿ ಹಾಕಿದ್ದ ಕಾಂಗ್ರೆಸ್‌ ಮುಂಖಂಡ ರಾಜೀವ್ ಗೌಡ (Rajeev Gowda) ಬಂಧಿಸಲಾಗಿದೆ. ಇದರ ಜೊತೆಗೆ ಆರೋಪಿಗೆ ತನ್ನ ಫಾರ್ಮ್​ ಹೌಸ್​​ನಲ್ಲಿ ಆಶ್ರಯ ನೀಡಿದ್ದ ಮಂಗಳೂರಿನ ಉದ್ಯಮಿ ಮೈಕಲ್ ಎನ್ನುವರನ್ನು ಸಹ ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಇನ್ನು ರಾಜೀವ್ ಗೌಡ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಮಂಗಳೂರಿನ ಉದ್ಯಮಿ ಮೈಕಲ್​ ಫಾರ್ಮ್​ ಹೌಸ್​​​ನಲ್ಲಿ ಆಶ್ರಯ ಪಡೆದಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗಾದ್ರೆ, ಮಂಗಳೂರಿನಲ್ಲಿ ಉದ್ಯಮಿ ಮೈಕಲ್ ಫಾರ್ಮ್ ಹೌಸ್ ಎಲ್ಲಿದೆ? ಹೇಗಿದೆ? ಎನ್ನುವುದನ್ನು ವಿಡಿಯೋನಲ್ಲಿ ನೋಡಿ.

ಮಹಿಳಾ ಅಧಿಕಾರಿಗೆ ಬೆದರಿಕೆ ಕೇಸ್​: ಕೈಗೆ ಸಿಗದ ರಾಜೀವ್​​ ಗೌಡನನ್ನು ಖಾಕಿ ಖೆಡ್ಡಾಕ್ಕೆ ಕೆಡವಿದ್ದೇಗೆ? ಇಲ್ಲಿದೆ ಇಂಟರೆಸ್ಟಿಂಗ್​​ ಮಾಹಿತಿ

ಮಹಿಳಾ ಅಧಿಕಾರಿಗೆ ಬೆದರಿಕೆ ಕೇಸ್​: ಕೈಗೆ ಸಿಗದ ರಾಜೀವ್​​ ಗೌಡನನ್ನು ಖಾಕಿ ಖೆಡ್ಡಾಕ್ಕೆ ಕೆಡವಿದ್ದೇಗೆ? ಇಲ್ಲಿದೆ ಇಂಟರೆಸ್ಟಿಂಗ್​​ ಮಾಹಿತಿ

ಮಹಿಳಾ ಅಧಿಕಾರಿಗೆ ಬೆದರಿಕೆ ಪ್ರಕರಣದಲ್ಲಿ ತಲೆಮರೆಸಿಕೊಂಡು ಓಡಾಡಯತ್ತಿದ್ದ ಆರೋಪಿ ರಾಜೀವ್​​ ಗೌಡನನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಖಾಕಿ ಖೆಡ್ಡಾಕ್ಕೆ ಬೀಳಿಸಿದ ರೀತಿಯೇ ರೋಚಕವಾಗಿದ್ದು, ಆತನಿಗೆ ಆಶ್ರಯ ನೀಡಿದ್ದ ಮಂಗಳೂರಿನ ಉದ್ಯಮಿಯನ್ನೂ ಈ ವೇಳೆ ಅರೆಸ್ಟ್​ ಮಾಡಲಾಗಿದೆ. ಅಷ್ಟಕ್ಕೂ ಪೊಲೀಸರ ಕಾರ್ಯಾಚರಣೆ ಹೇಗಿತ್ತು ಎನ್ನುವ ಮಾಹಿತಿ ಇಲ್ಲಿದೆ.

ಮಂಗಳೂರಿನ ಪ್ರತಿಷ್ಠಿತ ವ್ಯಕ್ತಿಯಿಂದ ರಾಜೀವ್​​ ಗೌಡಗೆ ಆಶ್ರಯ: ಆರೋಪಿ ಎಸ್ಕೇಪ್​​ ಆಗಿದ್ದೆಲ್ಲಿಗೆ?

ಮಂಗಳೂರಿನ ಪ್ರತಿಷ್ಠಿತ ವ್ಯಕ್ತಿಯಿಂದ ರಾಜೀವ್​​ ಗೌಡಗೆ ಆಶ್ರಯ: ಆರೋಪಿ ಎಸ್ಕೇಪ್​​ ಆಗಿದ್ದೆಲ್ಲಿಗೆ?

ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಬೆದರಿಕೆ ವಿಚಾರವಾಗಿ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ರಾಜೀವ್​​ ಗೌಡ ಎಸ್ಕೇಪ್​​ ಆಗಿದ್ದ. ನ್ಯಾಯಾಲಯ ಕೂಡ ಜಾಮೀನು ನಿರಾಕರಿಸಿರುವ ಹಿನ್ನೆಲೆ ತಲೆಮರೆಸಿಕೊಂಡು ಆರೋಪಿ ಓಡಾಡುತ್ತಿದ್ದು, ಆತ ಮಂಗಳೂರಿನಲ್ಲಿದ್ದ ಬಗ್ಗೆ ಮಾಹಿತಿ ಸಿಕ್ಕಿತ್ತು. ಸಹೋದರಿಗೆ ರಾಜೀವ್​​ ಗೌಡ ಕರೆ ಮಾಡಿದ್ದ ಹಿನ್ನೆಲೆ ಆಕೆಯ ವಿಚಾರಣೆಯನ್ನೂ ಪೊಲೀಸರು ನಡೆಸಿದ್ದರು. ಆರೋಪಿ ಮನೆಯಲ್ಲಿಯೂ ಶೋಧ ನಡೆದಿತ್ತು. ಆದ್ರೆ ಈತನಿಗೆ ತಲೆ ಮರೆಸಿಕೊಳ್ಳಲು ನೆರವಾಗಿದ್ದು ಮಂಗಳೂರಿನ ಪ್ರತಿಷ್ಠಿತ ವ್ಯಕ್ತಿ ಎಂಬ ಆಘಾತಕಾರಿ ವಿಚಾರವೀಗ ಬಯಲಾಗಿದೆ.

ಕೋಮುದ್ವೇಷದ ಭಾಷಣ: ಕಲ್ಲಡ್ಕ ಪ್ರಭಾಕರ್​​​ ಭಟ್ ಮೇಲೆ ಮತ್ತೆ ಎಫ್​​ಐಆರ್ ದಾಖಲು

ಕೋಮುದ್ವೇಷದ ಭಾಷಣ: ಕಲ್ಲಡ್ಕ ಪ್ರಭಾಕರ್​​​ ಭಟ್ ಮೇಲೆ ಮತ್ತೆ ಎಫ್​​ಐಆರ್ ದಾಖಲು

ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪುತ್ತೂರಿನಲ್ಲಿ ಪ್ರಚೋದನಾಕಾರಿ ಭಾಷಣ ಆರೋಪದಡಿ ಎಫ್‌ಐಆರ್ ದಾಖಲಾಗಿದೆ. ಜನವರಿ 12ರಂದು ಖಾಸಗಿ ಕಾಲೇಜು ಕಾರ್ಯಕ್ರಮದಲ್ಲಿ ಕೋಮುದ್ವೇಷ ಬಿತ್ತುವ ಮಾತುಗಳನ್ನಾಡಿದ ಕಾರಣ ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹಿಂದಿನ ಷರತ್ತುಗಳನ್ನು ಉಲ್ಲಂಘಿಸಿರುವ ಭಟ್ ಅವರಿಗೆ ಇದು ಗಂಭೀರ ಕಾನೂನು ಸಂಕಷ್ಟ ತಂದೊಡ್ಡಲಿದೆ. ವಿಕಸನ ಟಿವಿ ಮತ್ತು ಆಯೋಜಕರ ವಿರುದ್ಧವೂ ದೂರು ದಾಖಲಾಗಿದೆ.

ದೇವಾಲಯದಲ್ಲಿ ಕೇಸರಿ ಧ್ವಜ ಹಾರಿಸಬೇಡಿ ಎಂದ ಕಾಂಗ್ರೆಸ್​​ನ ಮಾಜಿ ಸಚಿವ

ದೇವಾಲಯದಲ್ಲಿ ಕೇಸರಿ ಧ್ವಜ ಹಾರಿಸಬೇಡಿ ಎಂದ ಕಾಂಗ್ರೆಸ್​​ನ ಮಾಜಿ ಸಚಿವ

ಮಾಜಿ ಸಚಿವ ರಮಾನಾಥ ರೈ ಅವರು ದೇವಸ್ಥಾನಗಳಲ್ಲಿ ಕೇಸರಿ ಸೇರಿದಂತೆ ಯಾವುದೇ ರಾಜಕೀಯ ಧ್ವಜ ಹಾರಿಸಬಾರದು ಎಂಬ ವಿವಾದಾತ್ಮಕ ಹೇಳಿಕೆ ನೀಡಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಉಡುಪಿ ಡಿಸಿ ಕೇಸರಿ ಧ್ವಜ ಹಾರಿಸಿದ್ದನ್ನು ಖಂಡಿಸಿ, ಎಲ್ಲರಿಗೂ ಸಂಬಂಧಿಸಿದ ದೇಗುಲಗಳಲ್ಲಿ ತಟಸ್ಥತೆ ಕಾಪಾಡಬೇಕೆಂದರು. ಈ ಹೇಳಿಕೆಗೆ ಹಿಂದೂ ಪರ ಸಂಘಟನೆಗಳು ಮತ್ತು ಸಾರ್ವಜನಿಕರಿಂದ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಧರ್ಮಸ್ಥಳ ಬುರುಡೆ ಕೇಸ್​​: ಬಂಗ್ಲೆಗುಡ್ಡದಲ್ಲಿ ಸಿಕ್ಕ ಅಸ್ಥಿಪಂಜರಗಳು FSLಗೆ ರವಾನೆ, ಸಿಕ್ಕಿದ್ದೇಷ್ಟು

ಧರ್ಮಸ್ಥಳ ಬುರುಡೆ ಕೇಸ್​​: ಬಂಗ್ಲೆಗುಡ್ಡದಲ್ಲಿ ಸಿಕ್ಕ ಅಸ್ಥಿಪಂಜರಗಳು FSLಗೆ ರವಾನೆ, ಸಿಕ್ಕಿದ್ದೇಷ್ಟು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಸಮೀಪದ ಬಂಗ್ಲೆಗುಡ್ಡದಲ್ಲಿ ಕಾರ್ಯಾಚರಣೆ ವೇಳೆ ಸಿಕ್ಕ ಮಾನವರ 7 ಅಸ್ಥಿಪಂಜರಗಳ ರಹಸ್ಯ ಭೇದಿಸಲು ಎಸ್​ಐಟಿ ಅಧಿಕಾರಿಗಳು ಮುಂದಾಗಿದ್ದಾರೆ. ಸಿಕ್ಕ 7 ಅಸ್ಥಿಪಂಜರಗಳನ್ನು ಎಸ್​ಐಟಿ ಅಧಿಕಾರಿಗಳು ಹೆಚ್ಚಿನ ತನಿಖೆಗಾಗಿ ಬೆಂಗಳೂರಿಗೆ ಎಫ್​ಎಸ್​ಎಲ್​​ಗೆ ರವಾನಿಸಿದ್ದಾರೆ.

ಗೂಡ್ಸ್​​ ವಾಹನದಲ್ಲಿ ಗಾಂಜಾ ಸಾಗಾಟ: ಫಿಲ್ಮಿ ಸ್ಟೈಲ್​​ನಲ್ಲಿ ಖಾಕಿ ರೇಡ್​ ; ಇಬ್ಬರು ಅರೆಸ್ಟ್​​

ಗೂಡ್ಸ್​​ ವಾಹನದಲ್ಲಿ ಗಾಂಜಾ ಸಾಗಾಟ: ಫಿಲ್ಮಿ ಸ್ಟೈಲ್​​ನಲ್ಲಿ ಖಾಕಿ ರೇಡ್​ ; ಇಬ್ಬರು ಅರೆಸ್ಟ್​​

ದಕ್ಷಿಣ ಕನ್ನಡ ಪೊಲೀಸರು ಡ್ರಗ್ಸ್ ದಂಧೆಕೋರರ ವಿರುದ್ಧ ಬಿರುಸಿನ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಪುತ್ತೂರು ತಾಲೂಕಿನಲ್ಲಿ ಗೂಡ್ಸ್ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ 106 ಕೆಜಿ ಗಾಂಜಾವನ್ನು ಜಪ್ತಿ ಮಾಡಿದ್ದು,  ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ಇತ್ತೀಚೆಗೆ ಮಂಗಳೂರು ಸಿಸಿಬಿ 4 ಕೋಟಿ ರೂ. ಮೌಲ್ಯದ ಎಂಡಿಎಂಎ ವಶಪಡಿಸಿಕೊಂಡು ಉಗಾಂಡ ಮಹಿಳೆಯನ್ನು ಬೆಂಗಳೂರಲ್ಲಿ ಬಂಧಿಸಿದ್ದು ಭಾರೀ ಸುದ್ದಿಯಾಗಿತ್ತು.

ದೇಗುಲಕ್ಕೆಂದು ಹೋದ ಬಾಲಕ ಕೆರೆಯಲ್ಲಿ ಹೆಣವಾಗಿ ಪತ್ತೆ: ಪ್ರಾಣಿ ದಾಳಿಯೋ? ಕೊಲೆಯೋ?

ದೇಗುಲಕ್ಕೆಂದು ಹೋದ ಬಾಲಕ ಕೆರೆಯಲ್ಲಿ ಹೆಣವಾಗಿ ಪತ್ತೆ: ಪ್ರಾಣಿ ದಾಳಿಯೋ? ಕೊಲೆಯೋ?

ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ ದೇಗುಲಕ್ಕೆ ಹೊರಟಿದ್ದ 15 ವರ್ಷದ ಬಾಲಕ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಆರಂಭದಲ್ಲಿ ಪ್ರಾಣಿ ದಾಳಿ ಎಂದು ಶಂಕಿಸಿದ್ದರೂ ತಲೆಯ ಮೇಲಿನ ಗಾಯಗಳು ಕೊಲೆ ಆಗಿರುವ ಅನುಮಾನಗಳನ್ನು ಮೂಡಿಸಿವೆ. ಸ್ಥಳಕ್ಕೆ ಎಸ್ಪಿ ಭೇಟಿ ನೀಡಿ ಪರಿಶೀಲಿಸಿದ್ದು, ಪೊಲೀಸರು ಎಲ್ಲಾ ಆಯಾಮಗಳಲ್ಲಿಯೂ ತೀವ್ರ ತನಿಖೆ ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆ ನಂತರ ಘಟನೆಗೆ ಕಾರಣ ಗೊತ್ತಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಖತರ್ನಾಕ್​​ ಡ್ರಗ್​​ ಜಾಲ ಭೇದಿಸಿದ ಮಂಗಳೂರು ಸಿಸಿಬಿ: ಮಹಿಳೆ ಅರೆಸ್ಟ್​, 4 ಕೋಟಿ ಮೌಲ್ಯದ MDMA ಸೀಜ್​

ಖತರ್ನಾಕ್​​ ಡ್ರಗ್​​ ಜಾಲ ಭೇದಿಸಿದ ಮಂಗಳೂರು ಸಿಸಿಬಿ: ಮಹಿಳೆ ಅರೆಸ್ಟ್​, 4 ಕೋಟಿ ಮೌಲ್ಯದ MDMA ಸೀಜ್​

ಮಂಗಳೂರು ಸಿಸಿಬಿ ಭರ್ಜರಿ ಕಾರ್ಯಾಚರಣೆ ನಡೆಸಿ, 4 ಕೋಟಿ ರೂ. ಮೌಲ್ಯದ ಎಂಡಿಎಂಎ ಡ್ರಗ್ಸ್ ಸಮೇತ ಉಗಾಂಡ ಮೂಲದ ಮಹಿಳೆಯನ್ನು ಬೆಂಗಳೂರಿನಲ್ಲಿ ಬಂಧಿಸಿದೆ. ಪುರುಷರ ಶರ್ಟ್‌ಗಳಲ್ಲಿ ಅಡಗಿಸಿ ಡ್ರಗ್ಸ್ ಸಾಗಿಸುತ್ತಿದ್ದ ಆರೋಪಿ ಮಂಗಳೂರಿನ ಆರು ಪೆಡ್ಲರ್‌ಗಳಿಗೆ ಪೂರೈಸುತ್ತಿದ್ದಳು. ಡ್ರಗ್ಸ್​​ ಕೇಸ್​​ ಸಂಬಂಧ ಮಂಗಳೂರು ಪೊಲೀಸರು ಪೆಡ್ಲರ್​​ಗಳನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಈಕೆಯ ಕುರಿತು ಮಾಹಿತಿ ಸಿಕ್ಕಿತ್ತು. ಅದರ ಆಧಾರದಲ್ಲಿ ಸಿಸಿಬಿ ದಾಳಿ ನಡೆಸಿತ್ತು.

ಬಾಂಗ್ಲಾದೇಶದ ಪ್ರಜೆ ಎಂದು ಆರೋಪಿಸಿ ಕಾರ್ಮಿಕನ ಮೇಲೆ ಮಾರಣಾಂತಿಕ ಹಲ್ಲೆ!

ಬಾಂಗ್ಲಾದೇಶದ ಪ್ರಜೆ ಎಂದು ಆರೋಪಿಸಿ ಕಾರ್ಮಿಕನ ಮೇಲೆ ಮಾರಣಾಂತಿಕ ಹಲ್ಲೆ!

ಮಂಗಳೂರಿನ ಕಾವೂರಿನಲ್ಲಿ ಜಾರ್ಖಂಡ್ ಮೂಲದ ಕಾರ್ಮಿಕನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. 'ಬಾಂಗ್ಲಾದೇಶದ ಪ್ರಜೆ' ಎಂದು ಆರೋಪಿಸಿ, ದಾಖಲೆ ಕೇಳಿ ತಕ್ಷಣ ನೀಡದ ಕಾರಣ ನಾಲ್ವರು ಯುವಕರು ದಾಳಿ ನಡೆಸಿದ್ದಾರೆ. ಆತನ ತಲೆಗೆ ಗಂಭೀರ ಗಾಯಗಳಾಗಿದ್ದು, ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳ ಪತ್ತೆಗೆ ಶೋಧ ಕಾರ್ಯ ನಡೆಸುತ್ತಿದ್ದು, ಕಾನೂನು ಕೈಗೆತ್ತಿಕೊಂಡವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಆಯುಕ್ತರು ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಮೇಲೆ ಹಲ್ಲೆ: ಇತ್ತ ಶಾಸಕಿಯ ಶ್ರದ್ಧಾಂಜಲಿ ಪೋಸ್ಟ್ ವೈರಲ್

ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಮೇಲೆ ಹಲ್ಲೆ: ಇತ್ತ ಶಾಸಕಿಯ ಶ್ರದ್ಧಾಂಜಲಿ ಪೋಸ್ಟ್ ವೈರಲ್

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಜೀವಂತವಿದ್ದರೂ ಸೋಶಿಯಲ್​ ಮೀಡಿಯಾದಲ್ಲಿ ನಕಲಿ ಶ್ರದ್ಧಾಂಜಲಿ ಪೋಸ್ಟ್ ವೈರಲ್ ಆಗಿದೆ. 'ಬಿಲ್ಲವ ಸಂದೇಶ್' ಹೆಸರಿನ ಖಾತೆಯಿಂದ ಪೋಸ್ಟ್ ಮಾಡಲಾಗಿದೆ. ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ್ದು, ತನಿಖೆ ನಡೆಸಿದ್ದಾರೆ.