ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.
20 ವರ್ಷಗಳ ಬಳಿಕ ಸಮಾಗಮ: 105 ವರ್ಷದ ತಾಯಿ ನೋಡಲು ದುರ್ಗಮ ಹಾದಿಯಲ್ಲಿ ಕ್ರಮಿಸಿ ಬಂದ 85 ವರ್ಷದ ಮಗಳು!
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕಾಡಂಚಿನ ಗ್ರಾಮದಲ್ಲಿ ಸರಿಯಾದ ರಸ್ತೆ ಸಂಪರ್ಕವಿಲ್ಲದೆ 20 ವರ್ಷಗಳಿಂದ ತವರು ಮನೆಗೆ ತೆರಳದೇ ಇದ್ದ 85 ವರ್ಷದ ಮಗಳು, ದುರ್ಗಮ ಹಾದಿ ಕ್ರಮಿಸಿ 105 ವರ್ಷದ ತಾಯಿಯನ್ನು ಭೇಟಿಯಾಗಿ ಭಾವುಕರಾಗಿದ್ದಾರೆ. ಮೊಮ್ಮಕ್ಕಳ ಸಹಾಯದಿಂದ ಕಾಡು-ಮೇಡಿನ ದುರ್ಗಮ ಹಾದಿಯಲ್ಲಿ ಕ್ರಮಿಸಿ ಕೊನೆಗೂ ಹೆತ್ತವಳನ್ನು ಭೇಟಿಯಾಗಿದ್ದಾರೆ.
- Pruthviraj
- Updated on: Sep 11, 2026
- 4:44 pm
ಸಂಘರ್ಷಕ್ಕೆ ಕಾರಣವಾದ ಮಂಗಳೂರು ವಿಶ್ವವಿದ್ಯಾಲಯದ ಕಾಲೇಜು ಚುನಾವಣೆ: ABVP ಗೆಲುವು; ಸಿಎಂಗೆ ದೂರು ನೀಡಲು ಮುಂದಾದ NSUI
ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು ಚುನಾವಣೆಯಲ್ಲಿ ಪರೋಕ್ಷ ಮತದಾನದ ಮೂಲಕ ಎಬಿವಿಪಿ ಗೆಲುವು ಸಾಧಿಸಿದ್ದು, ಸರ್ಕಾರದ ನೂತನ ಆದೇಶ ಉಲ್ಲಂಘಿಸಿ ಎಲೆಕ್ಷನ್ ನಡೆಸಿದ ಕುಲಪತಿ ವಿರುದ್ಧ ಸಿಎಂಗೆ ದೂರು ನೀಡಲು ಎನ್ಎಸ್ಯುಐ ಮುಂದಾಗಿದೆ. ಈವರೆಗೂ ಇದ್ದ ಪರೋಕ್ಷ ಚುನಾವಣೆ ಬದಲು, ನೇರ ಚುನಾವಣೆ ನಡೆಸಲು ನಿನ್ನೆರಾಜ್ಯ ಸರ್ಕಾರ ಆದೇಶಿಸಿರುವ ನಡೆದ ಈ ಚುನಾವಣೆ ವಿವಾದಕ್ಕೆ ಕಾರಣವಾಗಿದೆ.
- Pruthviraj
- Updated on: Sep 11, 2026
- 3:53 pm
ಸರ್ಕಾರಿ ಲೇಡೀಸ್ ಹಾಸ್ಟೆಲ್ಗೆ ನುಗ್ಗಿ ವಿದ್ಯಾರ್ಥಿನಿಯರ ಉಡುಪು ಕಳ್ಳತನ ಮಾಡ್ತಿದ್ದ ವ್ಯಕ್ತಿ ಬಂಧನ
ಸುಳ್ಯದ ಬೆಳ್ಳಾರೆ ಸರ್ಕಾರಿ ಮಹಿಳಾ ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿಯರ ಉಡುಪುಗಳನ್ನು ಕದಿಯುತ್ತಿದ್ದ ಕಿಡಿಗೇಡಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಆರೋಪಿ ಕೆ. ರಾಮಚಂದ್ರನನ್ನು ಹೆಡೆಮುರಿ ಕಟ್ಟಲಾಗಿದ್ದು, ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕೃತ್ಯದಿಂದ ವಿದ್ಯಾರ್ಥಿನಿಯರು ಆತಂಕಗೊಂಡಿದ್ದು, ಹಾಸ್ಟೆಲ್ ಸುರಕ್ಷತೆ ಬಗ್ಗೆ ಪ್ರಶ್ನೆಗಳು ಎದ್ದಿವೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
- Pruthviraj
- Updated on: Sep 9, 2026
- 2:43 pm
ಮಂಗಳೂರು ಜಿಲ್ಲಾ ಕಾರಾಗೃಹದ ಮೇಲೆ ಬರ್ಕೆ ಪೊಲೀಸರಿಂದ ರೇಡ್: 10 ಮೊಬೈಲ್ಗಳು ಪತ್ತೆ
ಮಂಗಳೂರು ಜಿಲ್ಲಾ ಕಾರಾಗೃಹದ ಮೇಲೆ ಬರ್ಕೆ ಠಾಣೆ ಪೊಲೀಸರು ಹಠಾತ್ ದಾಳಿ ನಡೆಸಿದ್ದು, ಎ-ಬ್ಲಾಕ್ನಲ್ಲಿದ್ದ 9 ಜೈಲುಬಂಧಿಗಳಿಂದ ಒಟ್ಟು 10 ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡು ತನಿಖೆ ಚುರುಕುಗೊಳಿಸಿದ್ದಾರೆ. ಜೈಲು ಬಂಧಿಗಳಿಂದ ಮೊಬೈಲ್ ಬಳಕೆ ಬಗ್ಗೆ ಖಚಿತ ಮಾಹಿತಿ ದೊರೆತಿದ್ದ ಹಿನ್ನೆಲೆಯೇ ಪೊಲೀಸರು ಈ ರೇಡ್ ನಡೆಸಿದ್ದಾರೆ ಎನ್ನಲಾಗಿದೆ.
- Pruthviraj
- Updated on: Sep 8, 2026
- 3:22 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲೋಕಾಯುಕ್ತ ದಾಳಿ: ಬಂಟ್ವಾಳದ ಪುದು, ಮಾಣಿ ಸೇರಿದಂತೆ 7 ಗ್ರಾಮ ಪಂಚಾಯತ್ಗಳ ಮೇಲೆ ಏಕಕಾಲಕ್ಕೆ ದಾಳಿ
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭ್ರಷ್ಟಾಚಾರ ನಿಯಂತ್ರಣಕ್ಕೆ ಲೋಕಾಯುಕ್ತ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಸಾರ್ವಜನಿಕರ ದೂರುಗಳ ಹಿನ್ನೆಲೆಯಲ್ಲಿ ಏಕಕಾಲಕ್ಕೆ ೭ ಗ್ರಾಮ ಪಂಚಾಯತಿ ಕಚೇರಿಗಳ ಮೇಲೆ ದಾಳಿ ನಡೆಸಿ, ಕಡತಗಳನ್ನು ಪರಿಶೀಲಿಸಿದ್ದಾರೆ. ಖಾತಾ ಬದಲಾವಣೆ, ಯೋಜನೆಗಳ ಅನುಷ್ಠಾನದಲ್ಲಿನ ಅಕ್ರಮ ಹಾಗೂ ಲಂಚದ ಬೇಡಿಕೆ ಕುರಿತು ತನಿಖೆ ನಡೆಯುತ್ತಿದೆ. ಈ ದಿಢೀರ್ ಕಾರ್ಯಾಚರಣೆಯಿಂದ ಭ್ರಷ್ಟ ಅಧಿಕಾರಿಗಳಲ್ಲಿ ಆತಂಕ ಸೃಷ್ಟಿಯಾಗಿದೆ.
- Pruthviraj
- Updated on: Sep 8, 2026
- 1:34 pm
ಪದ್ಮಶ್ರೀ ಹರೇಕಳ ಹಾಜಬ್ಬರಿಗೂ ಎಸ್ಐಆರ್ ನೋಟಿಸ್! ನಾಲ್ಕೇ ಗಂಟೆಯಲ್ಲಿ ವಾಪಸ್ ಪಡೆದ ಅಧಿಕಾರಿಗಳು
ಎಸ್ಐಆರ್ ಪ್ರಕ್ರಿಯೆಯಲ್ಲಿ ಮತದಾರರ ಪಟ್ಟಿಯ ಹೆಸರು ವ್ಯತ್ಯಾಸ ಹಿನ್ನೆಲೆಯಲ್ಲಿ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ದಾಖಲೆ ಹಾಜರುಪಡಿಸುವಂತೆ ನೋಟಿಸ್ ನೀಡಲಾಗಿತ್ತು. ಆದರೆ, ಅದಾದ ನಂತರದ ನಾಲ್ಕೇ ಗಂಟೆಗಳಲ್ಲಿ ಅಧಿಕಾರಿಗಳು ನೋಟಿಸ್ ವಾಪಸ್ ಪಡೆದು ಹೆಸರು ಸರಿಪಡಿಸುವ ಭರವಸೆ ನೀಡಿದ್ದಾರೆ. ಕಿತ್ತಲೆ ಮಾರಿ ಶಾಲೆ ಕಟ್ಟಿದ ಹಾಜಬ್ಬರಿಗೆ ನೋಟಿಸ್ ಕೊಟ್ಟಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಚ್ಚರಿಗೆ ಕಾರಣವಾಗಿತ್ತು.
- Pruthviraj
- Updated on: Sep 8, 2026
- 9:49 am
ಎಸ್ಡಿಎಂ ಇಂಜಿನಿಯರಿಂಗ್ ಕಾಲೇಜ್ ಬಳಿ ಒಂಟಿ ಸಲಗ ಪ್ರತ್ಯಕ್ಷ: ಕಾರ್ಯಾಚರಣೆ ವೇಳೆ ಕಾಡಾನೆಗೆ ಗುಂಡೇಟು ತಗುಲಿರುವ ಶಂಕೆ
ಮಂಗಳೂರು ಉಜಿರೆಯ ಎಸ್ಡಿಎಂ ಕಾಲೇಜು ಬಳಿ ಒಂಟಿ ಸಲಗವೊಂದು ಪ್ರತ್ಯಕ್ಷವಾಗಿ ಎಲ್ಲರ ಆತಂಕ್ಕೆ ಕಾರಣವಾಗಿದೆ. ಇನ್ನು ಕಾಡಾನೆಯನ್ನು ಕಾಡಿಗೆ ಓಡಿಸುವ ಕಾರ್ಯಾಚರಣೆ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಗುಂಡು ಹಾರಿಸಿದ್ದಾರೆ. ಈ ವೇಳೆ ಕಾಡಾನೆಗೆ ಗುಂಡು ತಗುಲಿರುವ ಶಂಕೆ ವ್ಯಕ್ತವಾಗಿದೆ. ಈ ಮಧ್ಯೆ ಹಿರಿಯ ಅಧಿಕಾರಿಗಳು ಈವರೆಗೂ ಸ್ಥಳಕ್ಕೆ ಭೇಟಿ ನೀಡಿಲ್ಲ.
- Pruthviraj
- Updated on: Sep 6, 2026
- 7:55 pm
ಆ ಮರವನ್ನು ಯಾವ ಕಾರಣಕ್ಕೂ ಮುಟ್ಟಬೇಡಿ, ಮುಂದೆ ದೊಡ್ಡ ಪರಿಣಾಮ ಎದುರಿಸಬೇಕಾಗುತ್ತೆ!”: NHAI ಅಧಿಕಾರಿಗಳಿಗೆ ರಾಹುಗುಳಿಗ ದೈವದಿಂದ ಎಚ್ಚರಿಕೆ
ಮಂಗಳೂರಿನ ನಂತೂರು ಪದವು ಬಳಿ ರಾಷ್ಟ್ರೀಯ ಹೆದ್ದಾರಿ ಯೋಜನೆಗೆಂದು ಪುರಾತನ ಸಂಪಿಗೆ ಮರ ತೆರವಿಗೆ NHAI ಮುಂದಾಗಿದೆ. ಆದರೆ, ರಾಹುಗುಳಿಗ ದೈವವು ಈ ಮರವನ್ನು ತನ್ನದು ಎಂದು ಬಲವಾಗಿ ವಿರೋಧಿಸಿದೆ. ಮರ ತೆರವುಗೊಳಿಸಿದರೆ ಪರಿಣಾಮ ನೆಟ್ಟಗಿರದು ಎಂದು ದೈವ ಸ್ಪಷ್ಟವಾಗಿ ಎಚ್ಚರಿಕೆ ನೀಡಿದೆ. ಹಿಂದೆಯೂ ಹಲವು ಬಾರಿ ರಕ್ಷಣೆ ಪಡೆದ ಈ ಮರ ಇದೀಗ ದೈವದ ನೇರ ಆದೇಶದ ಮೂಲಕ ಮತ್ತೊಮ್ಮೆ ಸುದ್ದಿಯಾಗಿದೆ.
- Pruthviraj
- Updated on: Sep 4, 2026
- 10:44 am
ಕಾಂಗ್ರೆಸ್ ಶಾಸಕರ ಎದುರಲ್ಲೇ ಬೆಂಬಲಿಗರು, ಕಾರ್ಯಕರ್ತರ ನಡುವೆಯೇ ಹೊಡೆದಾಟ: ದಾಖಲಾಯ್ತು ಎಫ್ಐಆರ್
Ashok Rain Supporters and Congress Workers clash: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಶಾಸಕ ಅಶೋಕ್ ಕುಮಾರ್ ರೈ ಬೆಂಬಲಿಗರ ನಡುವೆ ಗಲಾಟೆ ನಡೆದಿದೆ. ಶಾಸಕ ಅಶೋಕ್ ರೈ ಎದುರಲ್ಲೇ ನಡೆದ ಹೊಡೆದಾಟಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
- Pruthviraj
- Updated on: Sep 2, 2026
- 1:53 pm
ಮಂಗಳೂರು: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ, SIR ಪ್ರಕ್ರಿಯೆಯಲ್ಲಿ ಗಂಭೀರ ಲೋಪ ಬೆಳಕಿಗೆ
ಮಂಗಳೂರಿನ 61 ವರ್ಷದ ಡೊನಾಲ್ಡ್ ಜೋಸೆಫ್ ರೇಗೋ ಅವರನ್ನು ಚುನಾವಣಾ ಆಯೋಗದ ಕರಡು ಮತದಾರರ ಪಟ್ಟಿಯಲ್ಲಿ ಮೃತ ಎಂದು ತಪ್ಪಾಗಿ ನಮೂದಿಸಲಾಗಿದೆ. ಜೀವಂತವಿದ್ದರೂ ತನ್ನ ಹೆಸರನ್ನು ಪಟ್ಟಿಯಿಂದ ತೆಗೆದುಹಾಕಿದ್ದಕ್ಕೆ ರೇಗೋ ಆಘಾತ ವ್ಯಕ್ತಪಡಿಸಿದ್ದಾರೆ. ಈ ಲೋಪವನ್ನು ಸರಿಪಡಿಸಲು ಅವರು ಚುನಾವಣಾ ಕಚೇರಿಗಳಿಗೆ ಅಲೆದಾಡುತ್ತಿದ್ದಾರೆ.
- Pruthviraj
- Updated on: Sep 2, 2026
- 2:02 pm
ಸಿಹಿತಿಂಡಿ ತಯಾರಿಕಾ ಘಟಕಗಳ ಮೇಲೆ ಆಹಾರ ಇಲಾಖೆ ದಾಳಿ: ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಆರೋಗ್ಯ ಸಚಿವ ಯುಟಿ ಖಾದರ್, ಸಿಹಿತಿಂಡಿ ತಯಾರಿಕಾ ಘಟಕಗಳ ಮೇಲಿನ ದಾಳಿ, ಎರಡು ಘಟಕಗಳ ಬಂದ್ ಮತ್ತು ಶೋಕಾಸ್ ನೋಟಿಸ್ ಬಗ್ಗೆ ಮಾಹಿತಿ ನೀಡಿದ್ದಾರೆ. ಬೆಂಗಳೂರು ಮಾತ್ರವಲ್ಲದೆ ಮಂಗಳೂರು, ಹುಬ್ಬಳ್ಳಿ ಸೇರಿದಂತೆ ರಾಜ್ಯಾದ್ಯಂತ ತಪಾಸಣೆ ತೀವ್ರಗೊಳಿಸಲಾಗುವುದು ಎಂದರು. ಆಹಾರ ಗುಣಮಟ್ಟ, ಶುಚಿತ್ವಕ್ಕೆ ಆದ್ಯತೆ ನೀಡುವಂತೆ ಸೂಚಿಸಿದ ಅವರು, ಗ್ರಾಹಕರ ದೂರುಗಳಿಗಾಗಿ ಕ್ಯೂಆರ್ ಕೋಡ್ ವ್ಯವಸ್ಥೆ ಜನಪ್ರಿಯಗೊಳಿಸಲಾಗುವುದು ಎಂದು ತಿಳಿಸಿದರು.
- Pruthviraj
- Updated on: Sep 2, 2026
- 11:47 am
‘ಪೊಲೀಸರಿಗೆ ಶರಣಾಗೋ ಮುಂಚೆ ನಿನ್ನ ಕೊಲ್ಲದೆ ಬಿಡುವುದಿಲ್ಲ’: ಮಂಗಳೂರಿನ ನರ್ಸ್ಗೆ ವಾಟ್ಸಾಪ್ನಲ್ಲಿ ಜೀವಬೆದರಿಕೆ
ಬಂಟ್ವಾಳ ಘಟನೆ ಮಾಸುವ ಮುನ್ನವೇ ಮಂಗಳೂರಿನಲ್ಲಿ ನರ್ಸ್ ನಂದಿನಿಗೆ ವಾಟ್ಸಾಪ್ ಮೂಲಕ 'ತಲೆ ತೆಗೆಯುವುದಾಗಿ' ನೌಶದ್ ಕೊಲೆ ಬೆದರಿಕೆ ಹಾಕಿದ್ದಾನೆ. ಪ್ರಕರಣದಲ್ಲಿ ಪೊಲೀಸರ ವಿಳಂಬ ಧೋರಣೆ ಖಂಡಿಸಿ ವಿಎಚ್ಪಿ ಮೊರೆ ಹೋಗಲಾಗಿದೆ. ತಕ್ಷಣ ಬಂಧಿಸಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟನೆ ನೀಡಿದ್ದು, ಬೆನ್ನಲ್ಲೇ ಆರೋಪಿ ನೌಶದ್ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡಿದ್ದಾನೆ.
- Pruthviraj
- Updated on: Aug 28, 2026
- 9:13 am