ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.
ಪುತ್ತೂರು ದರ್ಬೆ ಗಲಾಟೆ: ನಾಳೆ ಸ್ವಯಂಪ್ರೇರಿತ ‘ಪುತ್ತೂರು ಬಂದ್’ಗೆ ಹಿಂದೂ ಜಾಗರಣ ವೇದಿಕೆ ಕರೆ
ಪುತ್ತೂರಿನ ದರ್ಬೆ ಡಿಜಿಟಲ್ ಸೇವಾ ಕೇಂದ್ರದಲ್ಲಿ ನಡೆದ ಗಲಾಟೆ ಮತ್ತು ಪೊಲೀಸ್ ವೈಫಲ್ಯ ಖಂಡಿಸಿ ಆಗಸ್ಟ್ 25ರಂದು ಹಿಂದೂ ಜಾಗರಣ ವೇದಿಕೆ ‘ಪುತ್ತೂರು ಬಂದ್’ಗೆ ಕರೆ ನೀಡಿದೆ. ಘಟನೆಯ ಹಿಂದೆ ನಿಷೇಧಿತ PFI ಸಂಘಟನೆಯ ವ್ಯವಸ್ಥಿತ ಸಂಚಿದೆ ಎಂದು ಆರೋಪಿಸಲಾಗಿದ್ದು, ನೈತಿಕ ಪೊಲೀಸ್ಗಿರಿ ನಡೆಸಿದವರ ವಿರುದ್ಧ ಮತ್ತು ಕರ್ತವ್ಯಕ್ಕೆ ಅಡ್ಡಿಪಡಿಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದೆ.
- Pruthviraj
- Updated on: Aug 24, 2026
- 4:21 pm
ಕೋಮು ಸಂಘರ್ಷಕ್ಕೆ ತಿರುಗಿದ ಪುತ್ತೂರು ಡಿಜಿಟಲ್ ಸೇವಾ ಕೇಂದ್ರ ಗಲಾಟೆ: ಎಸ್ಪಿ ಖಡಕ್ ಎಚ್ಚರಿಕೆ
Puttur digital seva kendra conflict: ಪುತ್ತೂರಿನ ದರ್ಬೆ ಡಿಜಿಟಲ್ ಸೇವಾ ಕೇಂದ್ರದಲ್ಲಿ ನಡೆದ ಗಲಾಟೆ ಮಂಗಳೂರಿನಲ್ಲಿ ಕೋಲಾಹಲ ಸೃಷ್ಟಿಸಿದೆ. ಘಟನೆ ಸಂಬಂಧ ಓರ್ವನ ಬಂಧನವಾಗಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಬಂದ್ಗೆ ಕರೆ ನೀಡಿ, ಧಾರ್ಮಿಕ ವೈಮನಸ್ಸು ಹರಡಿದ ವ್ಯಕ್ತಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪೊಲೀಸರು ಶಾಂತಿ ಕಾಪಾಡಲು ಮನವಿ ಮಾಡಿದ್ದು, ವದಂತಿಗಳಿಗೆ ಕಿವಿಗೊಡದಂತೆ ತಿಳಿಸಿದ್ದಾರೆ.
- Pruthviraj
- Updated on: Aug 23, 2026
- 4:03 pm
ಆನೆ ಓಡಿಸುವ ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆ ಎಡವಟ್ಟು: ವ್ಯಕ್ತಿಗೆ ತಗುಲಿದ ಗುಂಡು, ಮತ್ತೋರ್ವ ಪಾರು
Mangaluru News: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದಲ್ಲಿ ಕಾಡಾನೆ ಓಡಿಸುವ ಕಾರ್ಯಾಚರಣೆಯ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಹಾರಿಸಿದ ಗುಂಡು ಇಬ್ಬರಿಗೆ ತಗುಲಿದೆ. ಓರ್ವನಿಗೆ ಗಾಯವಾಗಿದ್ದು, ಮತ್ತೊಬ್ಬ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆಯಿಂದ ಅರಣ್ಯ ಇಲಾಖೆ ಮತ್ತೆ ಎಡವಟ್ಟು ಮಾಡಿಕೊಂಡಿದೆ.
- Pruthviraj
- Updated on: Aug 21, 2026
- 3:11 pm
ದೇವಸ್ಥಾನಕ್ಕೆ ಕನ್ನ ಹಾಕಲು ಬಂದ ಖದೀಮನನ್ನು ಲಾಕ್ ಮಾಡಿದ ಸಿಸಿಟಿವಿ ಅಲಾರಾಂ!
Mulki temple theft: ದೇವಸ್ಥಾನಕ್ಕೆ ಕನ್ನ ಹಾಕಲು ಬಂದಿದ್ದ ಕಳ್ಳ ಸಿಸಿಟಿವಿ ಅಲರಾಮ್ನಿಂದ ಪೊಲೀಸರಿಗೆ ಸಿಕ್ಕಿಬಿದ್ದ ಘಟನೆ ದಕ್ಷಿಣ ಕನ್ನಡದ ಮುಲ್ಕಿ ತಾಲೂಕಿನ ಬೆಳ್ಳಾಯರು ಶ್ರೀ ಚಂದ್ರಮೌಳೀಶ್ವರ ದೇವಸ್ಥಾನದಲ್ಲಿ ನಡೆದಿದೆ. ಸದ್ಯ ಸಿಸಿಟಿವಿ ಅಲರಾಮ್ನಿಂದ ಅನಾಹುತ ತಪ್ಪಿದೆ. ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Pruthviraj
- Updated on: Aug 20, 2026
- 5:10 pm
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್
ಉದ್ದೇಶಪೂರ್ವಕವಾಗಿ ಶಾಂತಿಭಂಗ ಮಾಡಿದ್ದಾರೆ ಎಂದು ಆರೋಪಿಸಿ ಮಂಗಳೂರು ಬಿಜೆಪಿ ಮುಖಂಡ ವಿಕಾಸ್ ಪುತ್ತೂರು ಎಂಬುವರು ಸೋನಿಯಾ ಗಾಂಧಿ ವಿರುದ್ಧ ಉರ್ವಾ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ವಿಕಾಸ್, 'ವಂದೇ ಮಾತರಂ' ನಮ್ಮ ರಾಷ್ಟ್ರಗೀತೆಯಾದ 'ಜನ ಗಣ ಮನ'ಕ್ಕೆ ಸಮಾನವಾಗಿದೆ. ಯಾರೇ ಆಗಲಿ ಅವರ ಹುದ್ದೆ ಅಥವಾ ಅಧಿಕಾರ ಏನೇ ಇರಲಿ ಇದನ್ನು ಅವಮಾನಿಸಿದರೆ ಕ್ರಮ ಕೈಗೊಳ್ಳಲಾಗುತ್ತದೆ. ಆದ್ದರಿಂದ, ಸೋನಿಯಾ ಗಾಂಧಿ ವಿರುದ್ಧ ದಂಡನಾತ್ಮಕ ಕ್ರಮ ಕೈಗೊಳ್ಳುವಂತೆ ಮತ್ತು ಅವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ನಾನು ಉರ್ವ ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ನೀಡಿದ್ದೇನೆ' ಎಂದಿದ್ದಾರೆ.
- Pruthviraj
- Updated on: Aug 16, 2026
- 6:17 pm
ಕಡಬ ತಾಲೂಕಿನ ಕೋಲ್ಪೆಯಲ್ಲಿ ನೈತಿಕ ಪೊಲೀಸ್ಗಿರಿ: 9 ಜನರ ವಿರುದ್ಧ FIR ದಾಖಲು
ಕಡಬ ತಾಲೂಕಿನ ಕೋಲ್ಪೆಯಲ್ಲಿ ಯುವತಿ ಮತ್ತು ಕುಟುಂಬದ ಮೇಲೆ ನಡೆದ ನೈತಿಕ ಪೊಲೀಸ್ಗಿರಿ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ವೇಳೆಯೇ ಈ ಸಂಬಂಧ ಸಂತ್ರಸ್ತೆ ವಿಡಿಯೋ ಹರಿಬಿಟ್ಟಿದ್ದರು. ಸಂತ್ರಸ್ತೆ ದೂರಿನ ಅನ್ವಯ BNS ಕಾಯ್ದೆಯಡಿ ಪೊಲೀಸರು ದೂರು ದಾಖಲಿಸಿದ್ದಾರೆ.
- Pruthviraj
- Updated on: Aug 16, 2026
- 9:59 am
ಚಿಕನ್ ಫೆರಿ ಫೆರಿಯಲ್ಲಿ ಕೆಟ್ಟ ವಾಸನೆ: ದಾಳಿ ವೇಳೆ ಮಂಗಳೂರಿನ KFCಯಲ್ಲಿ ಹಳೇ ಮಾಂಸ ಪತ್ತೆ!
ಮಂಗಳೂರಿನ ಸಿಟಿ ಸೆಂಟರ್ ಮಾಲ್ನಲ್ಲಿರುವ KFC (ಕೆಎಫ್ಸಿ) ಔಟ್ಲೆಟ್ ಮೇಲೆ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದು, ಅವಧಿ ಮೀರಿದ ಹಳೇ ಮಾಂಸ ಹಾಗೂ ದುರ್ಬಳಕೆಯಾಗುತ್ತಿದ್ದ ಕಪ್ಪು ಎಣ್ಣೆಯನ್ನು ವಶಪಡಿಸಿಕೊಂಡು ಮಳಿಗೆಯನ್ನು ಬಂದ್ ಮಾಡಿಸಿದ್ದಾರೆ. ಫುಡ್ನಿಂದ ವಿಪರೀತ ದುರ್ವಾಸನೆ ಬರುತ್ತಿದ್ದ ಕಾರಣ ಗ್ರಾಹಕರೊಬ್ಬರು ಈ ಸಂಬಂಧ ಆಹಾರ ಇಲಾಖೆಗೆ ದೂರು ನೀಡಿದ್ದರು ಎನ್ನಲಾಗಿದೆ.
- Pruthviraj
- Updated on: Aug 16, 2026
- 8:46 am
ಉಡುಪಿಯಲ್ಲಿ ಶೂಟೌಟ್: ಕಾಂಗ್ರೆಸ್ ಮುಖಂಡನ ಮೇಲೆ ಗುಂಡಿನ ದಾಳಿ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಉಡುಪಿ ಜಿಲ್ಲೆಯ ಮುದರಂಗಡಿ ಪೇಟೆಯಲ್ಲಿರು ಶುಕ್ರವಾರ ಮಧಾಹ್ನ ಶೂಟೌಟ್ ನಡೆದಿದೆ. ಬೈಕ್ನಲ್ಲಿ ಬಂದ ದುಷ್ಕರ್ಮಿಗಳು, ಕಾಂಗ್ರೆಸ್ ಮುಖಂಡನ ಮೇಲೆ ಗುಂಡು ಹಾರಿಸಿದ್ದು, ಉದ್ಯಮಿ ದೇವ ಡೆವಿಡ್ ಡಿಸೋಜ ಸಾವನ್ನಪ್ಪಿದ್ದಾನೆ. ಇನ್ನು ದುಷ್ಕರ್ಮಿಯೋರ್ವ ಗುಂಡಿನ ದಾಳಿ ಮಾಡಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬೈಕ್ನಲ್ಲಿ ಬಂದಿದ್ದ ಇಬ್ಬರ ಪೈಕಿ ಓರ್ವ ನಡೆದುಕೊಂಡು ಡೆವಿಡ್ ಡಿಸೋಜ ಬಳಿ ಹೋಗಿ ಪಿಸ್ತೂಲ್ನಿಂದ ಮೂರ್ನಾಲ್ಕು ಬಾರಿ ಗುಂಡು ಹಾರಿಸಿದ್ದಾನೆ. ಬಳಿಕ ಬೈಕ್ ಏರಿ ಪರಾರಿಯಾಗಿದ್ದಾನೆ.
- Pruthviraj
- Updated on: Aug 7, 2026
- 10:43 pm
5 ಸ್ಟಾರ್ ಹೋಟೆಲ್ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ ಎಂದ ಸಚಿವ ಯುಟಿ ಖಾದರ್
ಆರೋಗ್ಯ ಸಚಿವ ಯು.ಟಿ.ಖಾದರ್ ಅವರು ಪಂಚತಾರಾ ಹೋಟೆಲ್ಗಳಲ್ಲಿ ಆಹಾರ ಸುರಕ್ಷತೆ ತಪಾಸಣೆ ಕುರಿತು ಮಾತನಾಡಿದ್ದಾರೆ. ಜನರಿಗೆ ಗುಣಮಟ್ಟದ ಆಹಾರ ಸಿಗುವುದನ್ನು ಖಚಿತಪಡಿಸಿಕೊಳ್ಳುವುದು ಇದರ ಉದ್ದೇಶ. ತಪಾಸಣೆಯ ವೇಳೆ ಅವಧಿ ಮೀರಿದ ಹಾಲು, ಕೊಳೆತ ಈರುಳ್ಳಿ ಮತ್ತು ಆಮದು ಮಾಡಿದ ಮಾಂಸ ಕಂಡುಬಂದಿದೆ. ರೋಗಗಳ ಹೆಚ್ಚಳವನ್ನು ತಡೆಗಟ್ಟಲು ಈ ಕ್ರಮಗಳು ಅವಶ್ಯಕ ಎಂದು ಅವರು ಹೇಳಿದ್ದಾರೆ.
- Pruthviraj
- Updated on: Aug 7, 2026
- 7:43 pm
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಗ್ರಾಮಸ್ಥರು!
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹೆಡ್ಮೆ ಗ್ರಾಮದಲ್ಲಿ ಭೂಕುಸಿತದ ಭೀತಿ ಎದುರಾಗಿದೆ. ನಿರಂತರ ಮಳೆಯಿಂದಾಗಿ ಗುಡ್ಡದ ಮಣ್ಣು ಕ್ಷಣಕ್ಷಣಕ್ಕೂ ಜಾರಿ ಬರುತ್ತಿದ್ದು, ಮೂರಕ್ಕೂ ಹೆಚ್ಚು ಮನೆಗಳು ಅಪಾಯದಲ್ಲಿವೆ. ವಯನಾಡ್ ಮಾದರಿಯ ದುರಂತದ ಆತಂಕದಲ್ಲಿದ್ದು, ಸ್ಥಳಾಂತರ ಮತ್ತು ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಸ್ಥಳೀಯರು ಆಡಳಿತಕ್ಕೆ ಮನವಿ ಮಾಡಿದ್ದಾರೆ.
- Pruthviraj
- Updated on: Aug 7, 2026
- 2:52 pm
ನಿವೃತ್ತ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗೆ ಗುಡ್ನ್ಯೂಸ್: ಬರಲಿದೆ ‘ಸಂಧ್ಯಾ ಕಿರಣ’ ಉಚಿತ ಆರೋಗ್ಯ ಸೇವೆ
ಸಚಿವ ಯು.ಟಿ. ಖಾದರ್ ಅವರು ನಿವೃತ್ತ ಸರಕಾರಿ ನೌಕರರಿಗಾಗಿ ರೂಪಿಸಲಾದ ಸಂಧ್ಯಾಕಿರಣ ಯೋಜನೆಯ ಬಗ್ಗೆ ಮಾಹಿತಿ ನೀಡಿದ್ದಾರೆ. 60-70 ವರ್ಷ ವಯಸ್ಸಿನವರಿಗೆ ತಮ್ಮ ಪಿಂಚಣಿಯ 1.25% ಕೊಡುಗೆಯೊಂದಿಗೆ ಆರೋಗ್ಯ ಸೌಲಭ್ಯ ಒದಗಿಸಲಾಗುವುದು. 70 ವರ್ಷ ಮೇಲ್ಪಟ್ಟವರಿಗೆ ವಯೋ ವಂದನ ಯೋಜನೆ ಜಾರಿಗೆ ಕೇಂದ್ರ ಸರಕಾರದಿಂದ ಸ್ಪಷ್ಟತೆ ಕೇಳಿದ್ದಾರೆ. ಎಪಿಎಲ್ ಕುಟುಂಬಗಳಿಗೂ ಯೋಜನೆ ವಿಸ್ತರಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.
- Pruthviraj
- Updated on: Aug 6, 2026
- 10:26 pm
ಹಿಂದೂ ದೇವಸ್ಥಾನಗಳನ್ನ ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸುವಂತೆ ಆಂದೋಲನಕ್ಕೆ ಮುಂದಾದ ವಿಎಚ್ಪಿ
dakshina kannada news: ಸರ್ಕಾರದ ಹತೋಟಿಯಿಂದ ಹಿಂದೂ ದೇವಾಲಯಗಳನ್ನು ಮುಕ್ತಗೊಳಿಸಲು ಬೃಹತ್ ಆಂದೋಲನಕ್ಕೆ ವಿಶ್ವ ಹಿಂದೂ ಪರಿಷತ್ ಕರೆ ನೀಡಿದೆ. ಅಷ್ಟೇ ಅಲ್ಲದೆ ಅಯೋಧ್ಯೆ ರಾಮಮಂದಿರ ಕಾಣಿಕೆ ಕಳವು ಪ್ರಕರಣದ ತನಿಖೆಗೂ ವಿಹೆಚ್ಪಿ ಒತ್ತಾಯಿಸಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿದೆ ಎಂದು ಹೇಳಿದೆ.
- Pruthviraj
- Updated on: Aug 6, 2026
- 9:30 pm