ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.
ಮಂಗಳೂರು: ಜೇನುಕೃಷಿ ಕಲಿಸುವ ನೆಪದಲ್ಲಿ ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ; ಆರೋಪಿ ಅಂದರ್
ಮಂಗಳೂರಿನ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ಬೆಳಗಾವಿ ಮೂಲದ ಅಪ್ರಾಪ್ತ ಬಾಲಕಿಯ ಮೇಲೆ ಜೇನುಕೃಷಿ ತರಬೇತಿ ಹೆಸರಿನಲ್ಲಿ 17 ದಿನಗಳ ಕಾಲ ನಿರಂತರ ಅತ್ಯಾಚಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆರೋಪಿ ವಿರುದ್ಧ ಪೋಕ್ಸೋ ಮತ್ತು ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಅರೆಸ್ಟ್ ಮಾಡಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.
- Pruthviraj
- Updated on: Dec 21, 2025
- 10:39 am
ಧರ್ಮಸ್ಥಳ ಬುರುಡೆ ಪ್ರಕರಣ: ಜೈಲಿನಿಂದ ಹೊರಬರುತ್ತಲೇ ಹೋರಾಟಗಾರರ ವಿರುದ್ಧವೇ ತಿರುಗಿ ಬಿದ್ದ ಚಿನ್ನಯ್ಯ!
ಧರ್ಮಸ್ಥಳ ಪ್ರಕರಣದಲ್ಲಿ ಬಂಧಿತನಾಗಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯ ಜೈಲಿನಿಂದ ಬಿಡುಗಡೆಯಾದ ತಕ್ಷಣವೇ ವರಸೆ ಬದಲಿಸಿದ್ದಾನೆ . ತನ್ನ ಹಾಗೂ ಪತ್ನಿಯ ಜೀವಕ್ಕೆ ಅಪಾಯವಿದೆ ಎಂದು ಆರೋಪಿಸಿ, ಮಹೇಶ್ ತಿಮರೋಡಿ ಸೇರಿ ಐವರು ಹೋರಾಟಗಾರರ ವಿರುದ್ಧ ಜೀವ ಬೆದರಿಕೆ ದೂರು ದಾಖಲಿಸಿದ್ದಾನೆ. ಪೊಲೀಸರು ದೂರನ್ನು ಸ್ವೀಕರಿಸಿ ತನಿಖೆ ಆರಂಭಿಸಿದ್ದಾರೆ. ಈ ಬೆಳವಣಿಗೆ ಪ್ರಕರಣಕ್ಕೆ ಹೊಸ ಆಯಾಮ ನೀಡಿದೆ.
- Pruthviraj
- Updated on: Dec 20, 2025
- 11:24 am
ಧರ್ಮಸ್ಥಳ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ನೋಟಿಸ್
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷಗಳ ಕಾಲ ಗಡಿಪಾರು ಮಾಡಲಾಗಿದೆ. ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಈ ಆದೇಶ ನೀಡಿದ್ದು, 2026ರ ಡಿಸೆಂಬರ್ 17ರವರೆಗೆ ತಿಮರೋಡಿ ರಾಯಚೂರು ಜಿಲ್ಲೆಯಲ್ಲಿ ಇರಬೇಕಿದೆ. ಈ ಹಿಂದೆ ಹೈಕೋರ್ಟ್ ಸೂಚನೆ ಮೇರೆಗೆ ಕಾನೂನಾತ್ಮಕವಾಗಿ ಹೊಸ ಗಡಿಪಾರು ಆದೇಶವನ್ನು ಜಾರಿಗೊಳಿಸಲಾಗಿದೆ.
- Pruthviraj
- Updated on: Dec 18, 2025
- 11:06 am
ಧರ್ಮಸ್ಥಳ ಕೇಸ್: ಕೊನೆಗೂ ಚಿನ್ನಯ್ಯನಿಗೆ ಜೈಲಿನಿಂದ ಬಿಡುಗಡೆ ಭಾಗ್ಯ, ಕೋರ್ಟಿಗೆ ಶ್ಯೂರಿಟಿ ಕೊಟ್ಟವರ್ಯಾರು?
ಧರ್ಮಸ್ಥಳ ಪ್ರಕರಣದ ಮೂಲಕ ದೇಶಾದ್ಯಂತ ಸಂಚಲನ ಮೂಡಿಸಿದ್ದ ಮಾಸ್ಕ್ ಮ್ಯಾನ್ ಎಂದೇ ಪ್ರಖ್ಯಾತನಾಗಿದ್ದ ಸಿ.ಎನ್. ಚಿನ್ನಯ್ಯಗೆ ಕೊನೆಗೂ ಬಿಡುಗಡೆ ಭಾಗ್ಯ ಸಿಕ್ಕಿದೆ. ನ್ಯಾಯಾಲಯದಿಂದ ಜಾಮೀನು ಮಂಜೂರಾಗಿದ್ದರೂ, ಬಿಡುಗಡೆಯ ಭಾಗ್ಯವಿಲ್ಲದೆ ಜೈಲಿನಲ್ಲಿಯೇ ಉಳಿಯುವಂತಾಗಿತ್ತು. ಇದರಿಂದ ಮಂಕಾಗಿದ್ದ ಚಿನ್ನಯ್ಯ, ಇಂದು ಸಂಜೆ ವೇಳೆಗೆ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಹಾಗಾದ್ರೆ, ಮಾಸ್ಕ್ ಮ್ಯಾನ್ಗೆ ಶ್ಯೂರಿಟಿ ಸಹಿ ಹಾಕಿದವರು ಯಾರು?
- Pruthviraj
- Updated on: Dec 17, 2025
- 4:58 pm
ರಿಷಬ್ ಶೆಟ್ಟಿ ಹರಕೆ ಕೋಲ ವಿವಾದ; ಪೊಲೀಸ್ ಠಾಣೆ ಮೆಟ್ಟಿಲೇರಿದ ದೇವಸ್ಥಾನದ ಆಡಳಿತ ಮಂಡಳಿ
ರಿಷಬ್ ಶೆಟ್ಟಿ ಭಾಗವಹಿಸಿದ್ದ ಹರಕೆ ಕೋಲದ ದೈವ ನರ್ತಕರ ವರ್ತನೆ ಕುರಿತು ವಿವಾದ ಮುಂದುವರೆದಿದೆ, ಈ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ದೃಶ್ಯಗಳ ಬಗ್ಗೆ ಆಕ್ಷೇಪ ವ್ಯಕ್ತವಾಗಿದ್ದು, ಜಾರಂದಾಯ ಬಂಟ ಮತ್ತು ವಾರಾಹಿ ಪಂಜುರ್ಲಿ ಕ್ಷೇತ್ರದ ಆಡಳಿತ ಮಂಡಳಿ ಕದ್ರಿ ಠಾಣೆಗೆ ದೂರು ನೀಡಿದೆ. ದೇವಸ್ಥಾನದ ಪ್ರಮುಖರು ಸುದ್ದಿಗೋಷ್ಠಿ ನಡೆಸಿ, ವಿವಾದವು ದೈವ ಕ್ಷೇತ್ರದ ಬೆಳವಣಿಗೆಯನ್ನು ತಡೆಯುವ ಯತ್ನ ಎಂದು ಸ್ಪಷ್ಟಪಡಿಸಿದ್ದಾರೆ.
- Pruthviraj
- Updated on: Dec 12, 2025
- 12:37 pm
ಮಾಸ್ಕ್ಮ್ಯಾನ್ ಚಿನ್ನಯ್ಯ, ಪ್ರಭಾವಿ ಸ್ವಾಮೀಜಿ ನಡುವಣ ಮೀಟಿಂಗ್ ರಹಸ್ಯ ಬಿಚ್ಚಿಟ್ಟ ಮಹೇಶ್ ಶೆಟ್ಟಿ ತಿಮರೋಡಿ
ಸೌಜನ್ಯ ಪ್ರಕರಣದ ಕುರಿತು ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮಹತ್ವದ ವಿಷಯಗಳನ್ನು ಬಹಿರಂಗಪಡಿಸಿದ್ದಾರೆ. ಮಾಸ್ಕ್ಮ್ಯಾನ್ ಚಿನ್ನಯ್ಯ ಪ್ರಭಾವಿ ಸ್ವಾಮೀಜಿಯೊಬ್ಬರನ್ನು ಭೇಟಿಯಾಗಿ ಎಲ್ಲವನ್ನೂ ತಿಳಿಸಿದ್ದ. ಸ್ವಾಮೀಜಿಗಳು ಕೂಡ ಮುಖ್ಯಮಂತ್ರಿಗಳಿಗೆ ಹೇಳಿ ನ್ಯಾಯಕೊಡಿಸುವ ಭರವಸೆ ನೀಡಿ ಸುಮ್ಮನಾಗಿದ್ದಾರೆ ತಿಮರೋಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾನೂನು ಹೋರಾಟ ಮುಂದುವರೆಸುವುದಾಗಿ ಹೇಳಿದ್ದಾರೆ.
- Pruthviraj
- Updated on: Dec 8, 2025
- 2:11 pm
ಹರಕೆ ನೇಮೋತ್ಸವದಲ್ಲಿ ‘ಕಾಂತಾರ: ಚಾಪ್ಟರ್ 3’ ಸಿನಿಮಾಗೆ ಸಿಕ್ತು ದೈವದ ಗ್ರೀನ್ ಸಿಗ್ನಲ್
‘ಕಾಂತಾರ’ ಯಶಸ್ಸಿನ ಬಳಿಕ ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ಫಿಲ್ಮ್ಸ್ ವತಿಯಿಂದ ಹರಕೆ ನೇಮೋತ್ಸವ ಮಾಡಲಾಗಿದೆ. ಡಿಸೆಂಬರ್ 4ರಂದು ಮಧ್ಯರಾತ್ರಿವರೆಗೂ ವರಾಹ ಪಂಜುರ್ಲಿ-ಜಾರಂದಾಯ, ಬಂಟ ಕೋಲ ನಡೆಯಿತು. ಬಾಕಿ ಇರುವ ಹರಕೆ ತೀರಿಸಿದ ನಂತರ ‘ಕಾಂತಾರ: ಚಾಪ್ಟರ್ 3’ ಚಿತ್ರೀಕರಣ ಶುರು ಆಗುವ ಸಾಧ್ಯತೆ ಇದೆ.
- Pruthviraj
- Updated on: Dec 5, 2025
- 6:48 pm
ಮಂಗಳೂರಿನಲ್ಲಿ ವೇಣುಗೋಪಾಲ್ ಎದುರು ಡಿಕೆ ಡಿಕೆ ಘೋಷಣೆ: ಡಿಕೆಶಿ ಆಪ್ತನಿಗೆ ಹೈಕಮಾಂಡ್ ಬಿಗ್ ಶಾಕ್
ಸಿದ್ದರಾಮಯ್ಯ ಸರ್ಕಾರ ಮೊನ್ನೆ ಎರಡುವರೆ ವರ್ಷ ಪೂರೈಸುತ್ತಿದ್ದಂತೆಯೇ ಅಧಿಕಾರ ಹಂಚಿಕೆ ಕದನ ಜೋರಾಗಿತ್ತು. ಡಿಕೆ ಶಿವಕುಮಾರ್ ಹಾಗೂ ಅವರ ಬಣ ಸಿಎಂ ಕುರ್ಚಿ ಬೇಕೇಬೇಕೆಂದು ಪಟ್ಟು ಹಿಡಿದು ನಾನಾ ಕಸರತ್ತು ನಡೆಸಿತ್ತು. ಕೊನೆಗೆ ಹೈಕಮಾಂಡ್ ಮಧ್ಯೆಪ್ರವೇಶಿಸಿ ಸಿಎಂ ಮತ್ತು ಡಿಸಿಎಂಗೆ ಕರೆ ಮಾಡಿ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿ ಗೊಂದಲ ಬಗೆಹರಿಸುವಂತೆ ಸೂಚಿಸಿತ್ತು. ಅದರಂತೆ ಎಲ್ಲಾ ಆಗಿ ಶಾಂತವಾಗಿತ್ತು. ಆದ್ರೆ, ಎಐಸಿಸಿ ಪ್ರಧಾನಿ ಕಾರ್ಯದರ್ಶಿ ವೇಣುಗೋಪಾಲ್ ಮಂಗಳೂರಿಗೆ ಆಗಮಿಸಿದ್ದ ವೇಳೆ ಡಿಕೆ ಡಿಕೆ ಘೋಷಣೆ ಮೊಳಗಿತ್ತು. ಈ ಸಂಬಂಧ ಇದೀಗ ಡಿಕೆಶಿ ಆಪ್ತನಿಗೆ ಹೈಕಮಾಂಡ್ ಶಾಕ್ ಕೊಟ್ಟಿದೆ.
- Pruthviraj
- Updated on: Dec 4, 2025
- 10:33 pm
ಪಂಜುರ್ಲಿಗೆ ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಹರಕೆ ತೀರಿಸಿದ ರಿಷಬ್ ಶೆಟ್ಟಿ
‘ಕಾಂತಾರ: ಚಾಪ್ಟರ್ 1’ ಚಿತ್ರದ ಭರ್ಜರಿ ಯಶಸ್ಸಿನ ಬೆನ್ನಲ್ಲೇ ಚಿತ್ರತಂಡದವರು ಹರಕೆ ತೀರಿಸಲು ಬಂದಿದ್ದಾರೆ. ವಾರಾಹಿ ಪಂಜುರ್ಲಿ ದೈವದ ನೇಮದಲ್ಲಿ ಚಿತ್ರತಂಡ ಭಾಗಿಯಾಗಿದೆ. ಪತ್ನಿ, ಮಕ್ಕಳ ಜತೆ ನೇಮೋತ್ಸವಕ್ಕೆ ರಿಷಬ್ ಶೆಟ್ಟಿ ಆಗಮಿಸಿದ್ದಾರೆ. ಕಳೆದ ಎಪ್ರಿಲ್ ತಿಂಗಳಲ್ಲಿ ಕೂಡ ಇದೇ ದೈವಸ್ಥಾನದ ನೇಮೋತ್ಸವದಲ್ಲಿ ರಿಷಬ್ ಶೆಟ್ಟಿ ಮತ್ತು ಕುಟುಂಬದವರು ಭಾಗಿ ಆಗಿದ್ದರು.
- Pruthviraj
- Updated on: Dec 4, 2025
- 9:53 pm
ಬ್ರೇಕ್ಫಾಸ್ಟ್ ಮೀಟಿಂಗ್ ಬಳಿಕವೂ ಬಣ ಬಡಿದಾಟಕ್ಕಿಲ್ಲ ಬ್ರೇಕ್: ವೇಣುಗೋಪಾಲ್ ಎದುರೇ ಡಿ.ಕೆ. ಶಿವಕುಮಾರ್-ಸಿದ್ದರಾಮಯ್ಯ ಬೆಂಬಲಿಗರಿಂದ ಘೋಷಣೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರಿನ ಮಹಾಪ್ರಸ್ಥಾನ ಗುರು ಗಾಂಧಿ ಉತ್ಸವಕ್ಕೆ ಆಗಮಿಸುತ್ತಿದ್ದಂತೆ, ಕಾಂಗ್ರೆಸ್ನಲ್ಲಿ ನಾಯಕತ್ವಕ್ಕಾಗಿನ ಶಕ್ತಿ ಪ್ರದರ್ಶನ ಮತ್ತೆ ಬಹಿರಂಗವಾಗಿದೆ. ಕೆ.ಸಿ. ವೇಣುಗೋಪಾಲ್ ಸಮ್ಮುಖದಲ್ಲೇ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಬೆಂಬಲಿಗರು ಘೋಷಣೆಗಳನ್ನು ಕೂಗಿದ್ದಾರೆ. ಡಿಕೆಶಿ ಅವರಿಗೆ ಕಾರ್ಯಕ್ರಮಕ್ಕೆ ಆಹ್ವಾನವಿರಲಿಲ್ಲ, ಆದರೂ ಅವರ ಪರ ಬೆಂಬಲಿಗರ ಕೂಗು ಕೇಳಿಬಂದಿದೆ.
- Pruthviraj
- Updated on: Dec 3, 2025
- 1:19 pm
ಹಸಿವು ಕಂಡು ಹಿಡಿದು ಊಟ ಆರ್ಡರ್ ಮಾಡುವ ಆ್ಯಪ್! ಸ್ಟೆತೋಸ್ಕೋಪ್ ಬಳಸಿ ತಂತ್ರಜ್ಞಾನ ಆವಿಷ್ಕಾರ ಮಾಡಿದ ಮಂಗಳೂರಿನ ಯುವಕ
ಎಐ ತಂತ್ರಜ್ಞಾನ ಮತ್ತು ರೊಬೋಟಿಕ್ ವಿಜ್ಞಾನ ಇವತ್ತು ಇಡೀ ಜಗತ್ತನ್ನು ಆವರಿಸಿಕೊಳ್ಳುತ್ತಿದೆ. ಕಠಿಣ ಕೆಲಸಗಳನ್ನು ಸರಳಗೊಳಿಸುತ್ತಿದೆ. ಇದೇ ತಂತ್ರಜ್ಞಾನ ಬಳಸಿಕೊಂಡು ಮಂಗಳೂರಿನ ಯುವಕನೊಬ್ಬ ವಿಶೇಷ ಸಾಧನೆ ಮಾಡಿದ್ದಾನೆ. ಸ್ಟೆತೋಸ್ಕೋಪ್ ಬಳಸಿಕೊಂಡು ಹೊಟ್ಟೆ ಹಸಿವು ಕಂಡು ಹಿಡಿದು ಊಟ ಆರ್ಡರ್ ಮಾಡುವ ಆ್ಯಪ್ ಅಭಿವೃದ್ಧಿಪಡಿಸಿದ್ದಾನೆ!
- Pruthviraj
- Updated on: Dec 2, 2025
- 8:04 am
ಮಂಗಳೂರು: ತಾಯಿಯನ್ನೇ ಯದ್ವಾತದ್ವ ಥಳಿಸಿ ಚಪ್ಪಲಿಯಿಂದ ಹೊಡೆದ ಯುವತಿ, ವಿಡಿಯೋ ವೈರಲ್
ಉತ್ತರ ಕರ್ನಾಟಕ ಮೂಲದ ಕುಟುಂಬವೊಂದರ ತಾಯಿ ಮತ್ತು ಮಗಳು ಹೊಡೆದಾಡಿಕೊಂಡ ಘಟನೆ ಮಂಗಳೂರು ನಗರದ ಮೂಡುಶೆಡ್ಡೆ ಗ್ರಾಮ ಪಂಚಾಯತ್ ಆವರಣದಲ್ಲಿ ನಡೆದಿದೆ. ಮಗಳೇ ತಾಯಿಯನ್ನು ಅಮಾನುಷವಾಗಿ ಥಳಿಸಿ, ಚಪ್ಪಲಿಯಿಂದ ಹೊಡೆಯುತ್ತಿರುವ ವಿಡಿಯೋ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ವೈರಲ್ ವಿಡಿಯೋ ಇಲ್ಲಿದೆ.
- Pruthviraj
- Updated on: Nov 29, 2025
- 9:11 am