ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.
ಹಿಂದೂ ಯುವಕರು ಅನ್ಯ ಧರ್ಮದ ಯುವತಿಯರನ್ನು ಮದ್ವೆಯಾಗ್ಬೇಕೆಂದ ಸೂಲಿಬೆಲೆಗೆ ಸಂಕಷ್ಟ
ಹಿಂದೂ ಯುವಕರು ಅನ್ಯ ಧರ್ಮದ ಯುವತಿಯರನ್ನು ಮದುವೆಯಾಗಬೇಕೆಂದು ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಮಂಗಳೂರಿನಲ್ಲಿ ಕರೆ ನೀಡಿದ್ದು, ವಿವಾದಕ್ಕೆ ಕಾರಣವಾಗಿದೆ. ಸಾಮಾಜಿ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಅದರಲ್ಲೂ ಸೂಲಿಬೆಲೆ ಹೇಳಿಕೆಗೆ ಡಿವೈಎಫ್ಐ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿತ್ತು. ಇದರ ಬೆನ್ನಲ್ಲೇ ಚಕ್ರವರ್ತಿ ಸೂಲಿಬೆಲೆಗೆ ಸಂಕಷ್ಟ ಎದುರಾಗಿದೆ.
- Pruthviraj
- Updated on: Mar 17, 2025
- 3:11 pm
ಕರ್ನಾಟಕದ ಇತಿಹಾಸದಲ್ಲಿ ಅತೀ ದೊಡ್ಡ ಕಾರ್ಯಾಚರಣೆ: 75 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ
ಮಂಗಳೂರು ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ 75 ಕೋಟಿ ರೂಪಾಯಿ ಮೌಲ್ಯದ 37.87 ಕೆಜಿ ಎಂಡಿಎಂಎ ಡ್ರಗ್ಸ್ ಅನ್ನು ವಶಪಡಿಸಿಕೊಂಡಿದ್ದಾರೆ. ದಕ್ಷಿಣ ಆಫ್ರಿಕಾದ ಇಬ್ಬರು ಪ್ರಜೆಗಳನ್ನು ಬಂಧಿಸಲಾಗಿದೆ. ಐದು ತಿಂಗಳ ಕಾಲ ನಡೆದ ಕಾರ್ಯಾಚರಣೆಯ ಫಲವಾಗಿ ಈ ದೊಡ್ಡ ಪ್ರಮಾಣದ ಡ್ರಗ್ಸ್ ಜಾಲವನ್ನು ಭೇದಿಸಲಾಗಿದೆ. ದೆಹಲಿಯಿಂದ ಬೆಂಗಳೂರಿಗೆ ಡ್ರಗ್ಸ್ ಸಾಗಾಟ ಮಾಡುವಲ್ಲಿ ವಿಮಾನ ನಿಲ್ದಾಣದ ಅಧಿಕಾರಿಗಳ ಪಾತ್ರವೂ ಇದೆ ಎಂಬ ಆರೋಪ ಕೇಳಿಬಂದಿದೆ.
- Pruthviraj
- Updated on: Mar 16, 2025
- 10:50 am
ಎದೆ ಝಲ್ ಎನ್ನಿಸುವ ದೃಶ್ಯ: ಇದು ಅಪಘಾತವಲ್ಲ..ಕೊಲೆಯತ್ನ: ಅಸಲಿಯತ್ತು ಏನು ಗೊತ್ತಾ?
ಅದೊಂದು ಅಪಘಾತದ ದೃಷ್ಯಾವಳಿಯನ್ನು ನೋಡಿ ಕಡಲನಗರಿ ಮಂಗಳೂರು ಬೆಚ್ಚಿ ಬಿದ್ದಿತ್ತು. ಅರೆ ಇದೆಂಥಾ ಅಪಘಾತ. ಇದನ್ನು ನೋಡಲಾಗದೇ ಕಣ್ಣಮುಚ್ಚಿಕೊಳ್ಳಬೇಕು ಎನ್ನಿಸುವ ಅಪಘಾತವಾಗಿತ್ತು. ಈ ಅಪಘಾತದ ಮಸಲತ್ತು ಹತ್ಯೆಯ ಸ್ಕೆಚ್ ಆಗಿತ್ತು. ಅದು ಅಪಘಾತವಲ್ಲ. ಅಪಘಾತದ ಸೋಗಿನ ಕೊಲೆಯತ್ನ. ತಲೆತಿರುಕನ ಮಸಲತ್ತು ಏನು ಎನ್ನುವ ಸಂಪೂರ್ಣ ವಿವರ ಇಲ್ಲಿದೆ .
- Pruthviraj
- Updated on: Mar 15, 2025
- 4:59 pm
ಮಂಗಳೂರಿನಲ್ಲಿ ದುಷ್ಕೃತ್ಯಕ್ಕೆ ಸಂಚು: ಪಿಸ್ತೂಲ್, ಜೀವಂತ ಗುಂಡುಗಳ ಸಮೇತ ಐವರ ಬಂಧನ
ಮಂಗಳೂರಿನಲ್ಲಿ ಪೊಲೀಸರು ಒಂದು ದೊಡ್ಡ ಅಪರಾಧ ಜಾಲವನ್ನು ಬೇಧಿಸಿದ್ದಾರೆ. ಕೇರಳ ಮೂಲದ ಐವರು ನಟೋರಿಯಸ್ ಅಪರಾಧಿಗಳನ್ನು ಬಂಧಿಸಲಾಗಿದ್ದು, ಅವರಿಂದ ಮೂರು ಪಿಸ್ತೂಲುಗಳು, ಸಜೀವ ಗುಂಡುಗಳು ಮತ್ತು ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ವಾಮಂಜೂರಿನಲ್ಲಿ ನಡೆದ ಮಿಸ್ಫೈರ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ.
- Pruthviraj
- Updated on: Mar 13, 2025
- 10:30 pm
ತುಳುನಾಡಿನ ಕಾರ್ಣಿಕ ದೈವ ನೇಮೋತ್ಸವದಲ್ಲಿ ರಾಜಕೀಯ: ಇರಂತಬೆಟ್ಟು ಮನೆತನ ಅಸಮಾಧಾನ
ರಾಜಕೀಯ ಗುದ್ದಾಟಕ್ಕೆ ತುಳುನಾಡಿನ ಕಾರ್ಣಿಕ ದೈವದ ನೇಮೋತ್ಸವ ಸ್ಥಗಿತ ಎನ್ನುವ ವ್ಯವಸ್ಥಾಪನಾ ಸಮಿತಿಯ ಆರೋಪಕ್ಕೆ ಗುತ್ತು ಮನೆತನಗಳ ಪ್ರಮುಖರು ಸ್ಪಷ್ಟನೆ ನೀಡಿದ್ದಾರೆ. ಮಂಗಳೂರಿನಲ್ಲಿ ಇರಂತಬೆಟ್ಟು ಮನೆತನದ ಪ್ರಮುಖರಾದ ಕಿರಣ್ ಕುಮಾರ್ ಕೋಡಿಕಲ್ ಮಾತನಾಡಿ, ಮನೆತನದ ಪ್ರಮುಖರಲ್ಲದವರು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
- Pruthviraj
- Updated on: Mar 11, 2025
- 3:50 pm
ಅನ್ಯ ಧರ್ಮದ ಯುವತಿಯರನ್ನ ಪ್ರೀತಿಸಿ ಮದುವೆಯಾಗಿ: ನನ್ನ ಹೇಳಿಕೆಗೆ ನಾನು ಬದ್ಧ ಎಂದ ಸೂಲಿಬೆಲೆ
ಮಂಗಳೂರಿನಲ್ಲಿ ಟಿವಿ9 ಜೊತೆಗೆ ಮಾತನಾಡಿರುವ ಚಕ್ರವರ್ತಿ ಸೂಲಿಬೆಲೆ, ಲವ್ ಜಿಹಾದ್ ಅಂದರೆ ಅವರು ಪ್ರೀತಿ ಅಂತಾರೆ. ಅದಕ್ಕೆ ನಾನು ನೀವು ಕೂಡ ಪ್ರೀತಿ ಮಾಡಿ ಮದುವೆ ಆಗಿ ಅಂತಾ ಹೇಳಿದ್ದೀನಿ. ನಿನ್ನೆಯ ಹೇಳಿಕೆಗೆ ನಾನು ಬದ್ದವಾಗಿದ್ದೇನೆ ಎಂದು ಹೇಳಿದ್ದಾರೆ. ಸದ್ಯ ಈ ಹೇಳಿಕೆಗೆ DYFI ಮತ್ತು SDPI ನಂತಹ ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ.
- Pruthviraj
- Updated on: Mar 10, 2025
- 6:44 pm
ಮಂಗಳೂರು: ದಿಗಂತ್ ಪತ್ತೆಗೆ ಆಗ್ರಹಿಸಿ ಪ್ರತಿಭಟಿಸಿದ್ದ ಭಜರಂಗದಳ ಮುಖಂಡನಿಗೆ ಕೊಲೆ ಬೆದರಿಕೆ
ಬಂಟ್ವಾಳ ತಾಲೂಕಿನ ಫರಂಗಿಪೇಟೆಯಲ್ಲಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಪತ್ತೆಯಾದ ನಂತರ ಭಜರಂಗದಳ ಮುಖಂಡ ಭರತ್ ಕುಮ್ಡೇಲ್ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಕೊಲೆ ಬೆದರಿಕೆ ಹಾಕಲಾಗಿದೆ. ದಿಗಂತ್ ಪತ್ತೆಗೆ ಆಗ್ರಹಿಸಿ ನಡೆದ ಪ್ರತಿಭಟನೆಯ ನಂತರ ಈ ಬೆದರಿಕೆಗಳು ಹೆಚ್ಚಾಗಿವೆ. ಈ ಬೆದರಿಕೆಗಳನ್ನು BEARY_ROYAL_NAWAB ಮುಂತಾದ ಪೇಜ್ಗಳು ಹಂಚಿಕೊಂಡಿವೆ ಎಂದು ಹೇಳಲಾಗಿದೆ.
- Pruthviraj
- Updated on: Mar 10, 2025
- 11:39 am
ನೆಲ್ಲಿದಡಿಯಲ್ಲಿ ಈವರೆಗೂ ದೈವಾರಾಧನೆ ನಿಂತಿಲ್ಲ: ಡಿಸಿ ಮುಲ್ಲೈ ಮುಗಿಲನ್ ಸ್ಪಷ್ಟನೆ
ಮಂಗಳೂರಿನ MSEZ ವಲಯದಲ್ಲಿ ದೈವಾರಾಧನಾ ಸಂಪ್ರದಾಯಕ್ಕೆ ತಡೆ ಒಡ್ಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಇದೀಗ ಜಿಲ್ಲಾಧಿಕಾರಿ ಮಧ್ಯಪ್ರವೇಶಿಸಿ, ಯಥಾಸ್ಥಿತಿ ಕಾಪಾಡಲು ಸೂಚಿಸಿದ್ದಾರೆ. ಕುಟುಂಬಸ್ಥರು ಶಾಶ್ವತ ಪರಿಹಾರಕ್ಕಾಗಿ ಒತ್ತಾಯಿಸುತ್ತಿದ್ದಾರೆ. ಸಮಸ್ಯೆಗೆ ಕಾನೂನಿನ ಚೌಕಟ್ಟಿನಲ್ಲಿ ಶಾಶ್ವತ ಪರಿಹಾರ ಕಂಡುಕೊಳ್ಳುವುದಾಗಿ ಸಂಸದ ಬ್ರಿಜೇಶ್ ಚೌಟ ಹೇಳಿದ್ದಾರೆ.
- Pruthviraj
- Updated on: Mar 9, 2025
- 8:49 pm
ಮಂಗಳೂರು: ನಾಪತ್ತೆಯಾಗಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಹಾಗೂ ಆಟೋ ಚಾಲಕ ಶವವಾಗಿ ಪತ್ತೆ
ಕಾಸರಗೋಡು ಜಿಲ್ಲೆಯ ಮಂಡೆಕಾಪು ಗ್ರಾಮದಲ್ಲಿ ನಾಪತ್ತೆಯಾಗಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಮತ್ತು ಆಟೋ ಚಾಲಕ ಇಬ್ಬರು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಫೆಬ್ರುವರಿ 11ರಿಂದ ನಾಪತ್ತೆಯಾಗಿದ್ದ ಇವರಿಬ್ಬರೂ ಪ್ರೀತಿಸುತ್ತಿದ್ದರೆ ಎನ್ನಲಾಗುತ್ತಿದೆ. ಹೈಕೋರ್ಟ್ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದ ಬಳಿಕ ಪೊಲೀಸರು ಹುಡುಕಾಟ ನಡೆಸಿ ಶವಗಳನ್ನು ಪತ್ತೆ ಹಚ್ಚಿದ್ದಾರೆ.
- Pruthviraj
- Updated on: Mar 9, 2025
- 7:13 pm
ದಿಗಂತ್ ನಾಪತ್ತೆ ಕೆಸ್ಗೆ ಬಿಗ್ ಟ್ವಿಸ್ಟ್: ಎಸ್ಪಿ ಬಿಚ್ಚಿಟ್ಟ ಸ್ಫೋಟಕ ಮಾಹಿತಿ ಇಲ್ಲಿದೆ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ವಿದ್ಯಾರ್ಥಿ ದಿಗಂತ್ ಅವರ ನಾಪತ್ತೆ ಪ್ರಕರಣ ಸುಖಾಂತ್ಯ ಕಂಡಿದೆ. ಪೊಲೀಸರು 10 ತಂಡಗಳನ್ನು ರಚಿಸಿ ಹುಡುಕಾಟ ನಡೆಸಿದ್ದು, ಅವರನ್ನು ಸುರಕ್ಷಿತವಾಗಿ ಪತ್ತೆ ಹಚ್ಚಿದ್ದಾರೆ. ಪೊಲೀಸ್ ಅಧಿಕಾರಿ ಯತೀಶ್ ಅವರು ಕಾರ್ಯಾಚರಣೆಯ ವಿವರಗಳನ್ನು ಬಿಚ್ಚಿಟ್ಟಿದ್ದಾರೆ.
- Pruthviraj
- Updated on: Mar 9, 2025
- 2:22 pm
ಮಂಗಳೂರು: ಪಿಯುಸಿ ಪರೀಕ್ಷೆ ಭಯದಿಂದ ಮನೆಬಿಟ್ಟು ಊರೂರು ಸುತ್ತಿದ್ದ ವಿದ್ಯಾರ್ಥಿ ದಿಗಂತ್
ಮಂಗಳೂರಿನ ವಿದ್ಯಾರ್ಥಿ ದಿಗಂತ್ ಪ್ರಕರಣ ಸುಖಾಂತ್ಯ ಕಂಡಿದೆ. ಫೆಬ್ರವರಿ 25 ರಂದು ನಾಪತ್ತೆಯಾಗಿದ್ದ ದಿಗಂತ್ ಉಡುಪಿಯಲ್ಲಿ ಪತ್ತೆಯಾಗಿದ್ದಾರೆ. ಮನೆ ಬಿಟ್ಟು ಹೋಗಲು ಕಾರಣವೇನು ಎಂದು ದಿಗಂತ್ ಪೊಲೀಸರ ಮುಂದೆ ಬಾಯಿ ಬಿಟ್ಟಿದ್ದಾರೆ. ಮನೆ ಬಿಟ್ಟಿದ್ದ ದಿಗಂತ್ ಊರೂರು ಸುತ್ತಾಡಿ, ಹೊಟೇಲ್ ಒಂದರಲ್ಲಿ ಕೆಲಸ ಮಾಡಿದ್ದರು.
- Pruthviraj
- Updated on: Mar 9, 2025
- 12:13 pm
ಮಂಗಳೂರು ಜೈಲಿನಲ್ಲಿ 40ಕ್ಕೂ ಹೆಚ್ಚು ಕೈದಿಗಳಿಗೆ ಫುಡ್ ಪಾಯಿಸನ್: ವಾಂತಿ-ಭೇದಿ, ಓರ್ವನ ಸ್ಥಿತಿ ಗಂಭೀರ
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಫುಡ್ ಪಾಯಿಸನ್ನಿಂದ 15 ಕ್ಕೂ ಹೆಚ್ಚು ಕೈದಿಗಳು ಅಸ್ವಸ್ಥರಾಗಿದ್ದಾರೆ. ತೀವ್ರ ಹೊಟ್ಟೆ ನೋವು ಮತ್ತು ವಾಂತಿಯಿಂದ ಬಳಲುತ್ತಿರುವ ಕೈದಿಗಳನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೈಲಿನ ಆಹಾರದಲ್ಲಿ ಸಮಸ್ಯೆಯಿರುವ ಬಗ್ಗೆ ಕೈದಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆಯ ತನಿಖೆ ನಡೆಯುತ್ತಿದೆ.
- Pruthviraj
- Updated on: Mar 5, 2025
- 7:47 pm