ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.
ಗ್ಯಾಸ್ ಸಂಕಷ್ಟ ಬೆನ್ನಲ್ಲೇ ಇರಾನ್-ಇಸ್ರೇಲ್ ಯುದ್ಧದಿಂದ ಗ್ರ್ಯಾನೈಟ್ ಉದ್ಯಮಕ್ಕೂ ಕುತ್ತು
ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಯುದ್ಧದ ಪರಿಣಾಮವಾಗಿ ಭಾರತದ ಗ್ರಾನೈಟ್ ಮತ್ತು ಟೈಲ್ಸ್ ಉದ್ಯಮ ತೀವ್ರ ಸಂಕಷ್ಟ ಎದುರಿಸುತ್ತಿದೆ. ಗ್ಯಾಸ್ ಕೊರತೆಯಿಂದಾಗಿ ದೇಶಾದ್ಯಂತ ನೂರಾರು ಉತ್ಪಾದನಾ ಘಟಕಗಳು ಬಂದ್ ಆಗಿವೆ. ಇದು ವೆಟ್ರಿಫೈಡ್ ಟೈಲ್ಸ್ ಮತ್ತು ಗ್ರಾನೈಟ್ ಉತ್ಪನ್ನಗಳ ಕೊರತೆ ಮತ್ತು ಬೆಲೆ ಏರಿಕೆಗೆ ಕಾರಣವಾಗಿದೆ, ಗ್ರಾಹಕರು ಮತ್ತು ಕಾರ್ಮಿಕರ ಮೇಲೆ ಪರಿಣಾಮ ಬೀರಿದೆ.
- Pruthviraj
- Updated on: Mar 13, 2026
- 8:10 am
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ತೀವ್ರ ವಿರೋಧ; ಯುವತಿಯರಿಗೆ ಬಂತು ಬೆದರಿಕೆ ಕರೆ!
ಪುತ್ತೂರಿನಲ್ಲಿ 'ದಿ ಕೇರಳ ಸ್ಟೋರಿ 2' ಚಿತ್ರದ ಉಚಿತ ಪ್ರದರ್ಶನವು ಲವ್ ಜಿಹಾದ್ ಕುರಿತು ಜಾಗೃತಿ ಮೂಡಿಸಲು ಆಯೋಜಿಸಲಾಗಿದೆ. 16-22 ವರ್ಷದ ಕಾಲೇಜು ವಿದ್ಯಾರ್ಥಿನಿಯರಿಗಾಗಿ ಸೀತಾ ಪರಿವಾರ ಸಂಘಟನೆಯಿಂದ ನಡೆದ ಈ ಕಾರ್ಯಕ್ರಮ ಹಲವು ವಿವಾದಗಳಿಗೆ ಕಾರಣವಾಗಿದೆ. ಈ ಹಿನ್ನೆಲೆ ಮಾಲ್ ಬಹಿಷ್ಕಾರದ ಕರೆಗಳು ಹಾಗೂ ಸಂಘಟಕರಿಗೆ ಬೆದರಿಕೆಗಳು ಬಂದಿದ್ದು, ಪೊಲೀಸರು ಪರಿಸ್ಥಿತಿಯನ್ನು ಗಮನಿಸುತ್ತಿದ್ದಾರೆ.
- Pruthviraj
- Updated on: Mar 6, 2026
- 10:17 am
ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನ
‘ದಿ ಕೇರಳ ಸ್ಟೋರಿ 2’ ಸಿನಿಮಾ ಉಚಿತ ಪ್ರದರ್ಶನ ಮಾಡಲಾಗಿದೆ. ಮಂಗಳೂರಿನಲ್ಲಿ ಈ ಕೆಲಸ ನಡೆದಿದೆ. ಸೀತಾ ಪರಿವಾರ್ ಅವರ ಕಡೆಯಿಂದ ಈ ಕೆಲಸ ಆಗಿದೆ. ಈ ರೀತಿಯಲ್ಲಿ ಸಿನಿಮಾ ತೋರಿಸಲು ಸಾಕಷ್ಟು ಬೆದರಿಕೆ ಬಂದಿದೆ ಎಂದು ಅವರು ಹೇಳಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.
- Pruthviraj
- Updated on: Mar 6, 2026
- 9:42 am
ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಸಾಮಾಜಿಕ ಜಾಲತಾಣ ಪೋಸ್ಟ್ಗೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಪೋಸ್ಟ್ ಮಾಡಿದ ಕಿಡಿಗೇಡಿಗಾಗಿ ಶೋಧ ನಡೆಸುತ್ತಿದ್ದಾರೆ. ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಜವಾಬ್ದಾರಿಯುತವಾಗಿ ವರ್ತಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.
- Pruthviraj
- Updated on: Mar 3, 2026
- 12:23 pm
ಹೈದ್ರಾಬಾದ್ನಲ್ಲಿ ಮಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಸೈಬರ್ ವಂಚಕರ ಹೆಡೆಮುರಿ ಕಟ್ಟಿದ್ರು
ಮಂಗಳೂರು ಪೊಲೀಸರು ಹೈದರಾಬಾದ್ನಲ್ಲಿ ಸೈಬರ್ ವಂಚಕರ ದೊಡ್ಡ ಜಾಲವನ್ನು ಭೇದಿಸಿದ್ದಾರೆ. ವಿದೇಶಿಗರ ಸಹಭಾಗಿತ್ವದಲ್ಲಿ ಬ್ಯಾಂಕ್ ಖಾತೆದಾರರಿಗೆ ಆಮಿಷವೊಡ್ಡಿ OTP ಮೂಲಕ ಹಣ ದೋಚುತ್ತಿದ್ದ ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಆ ಮೂಲಕ ಕೋಟಿ ಕೋಟಿ ವಹಿವಾಟು ನಡೆಸುತ್ತಿದ್ದ ಖದೀಮರ ಬಣ ಬಯಲು ಮಾಡಿದ್ದಾರೆ.
- Pruthviraj
- Updated on: Feb 27, 2026
- 6:54 pm
ಹಗಲು ರಾತ್ರಿಯೆನ್ನದೆ ಬ್ಲಾಸ್ಟಿಂಗ್! ದಶಕಗಳ ಅಕ್ರಮ ಗಣಿಗಾರಿಕೆಗೆ ಹೈರಾಣಾದ ಜನ
ಮಂಗಳೂರಿನ ಪಲ್ಲಮಜಲು ಬಿ.ಮೂಡ ಗ್ರಾಮದಲ್ಲಿ ಕಳೆದ 17 ವರ್ಷಗಳಿಂದ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆಯಿಂದ ಗ್ರಾಮಸ್ಥರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಗಲು-ರಾತ್ರಿ ನಡೆಯುವ ಬ್ಲಾಸ್ಟಿಂಗ್ನಿಂದ ನೂರಾರು ಮನೆಗಳಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಸರ್ಕಾರಿ ಶಾಲೆ, ದೇವಸ್ಥಾನ, ಮಸೀದಿ ಹಾಗೂ ಚರ್ಚ್ ಕಟ್ಟಡಗಳಿಗೂ ಹಾನಿಯಾಗಿದೆ. ಸ್ಫೋಟದಿಂದ ಮತ್ತು ಭಾರೀ ಪ್ರಮಾಣದ ವಾಹನಗಳ ಓಡಾಟದಿಂದ ಜನರಿಗೆ ಆರೋಗ್ಯ ಸಮಸ್ಯೆಗಳು ಎದುರಾಗಿವೆ. ಗಣಿಗಾರಿಕೆ ಪ್ರದೇಶದಲ್ಲಿ ನೀರು ಸಂಗ್ರಹವಾಗಿ ಮಳೆಗಾಲದಲ್ಲಿ ಗ್ರಾಮಕ್ಕೆ ಪ್ರವಾಹದಂತೆಯೇ ನುಗ್ಗುತ್ತಿದೆ. ಹಲವು ಬಾರಿ ದೂರು ನೀಡಿದರೂ ಕ್ರಮ ಕೈಗೊಳ್ಳಲಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಜಿಲ್ಲಾಡಳಿತ ಸಭೆಯಲ್ಲಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ತಕ್ಷಣ ಅಕ್ರಮ ಗಣಿಗಾರಿಕೆ ನಿಲ್ಲಿಸಬೇಕೆಂದು ಒತ್ತಾಯಿಸಿದ್ದಾರೆ.
- Pruthviraj
- Updated on: Feb 25, 2026
- 11:09 am
ಉಂಡ ಮನೆಗೇ ಕನ್ನ ಹಾಕಿದ BSNL ಅಧಿಕಾರಿಗಳು: 70 ಲಕ್ಷ ಮೌಲ್ಯದ ಕಾಪರ್ ಕೇಬಲ್ ಕಳವು
ಮಂಗಳೂರಿನಲ್ಲಿ 70 ಲಕ್ಷ ರೂ. ಮೌಲ್ಯದ ಬಿಎಸ್ಎನ್ಎಲ್ ಕಾಪರ್ ಕೇಬಲ್ ಕಳವು ಪ್ರಕರಣದಲ್ಲಿ ಮೂವರು ಅಧಿಕಾರಿಗಳು ಬಂಧಿತರಾಗಿದ್ದಾರೆ. ಉಂಡ ಮನೆಗೇ ಕನ್ನ ಹಾಕಿದವರೀಗ ಪೊಲೀಸರ ಅತಿಥಿಗಳಾಗಿದ್ದಾರೆ. ಮತ್ತೊಂದೆಡೆ ಬೆಂಗಳೂರಿನಲ್ಲಿ 100 ಕೋಟಿ ರೂ. CSR ನಿಧಿ ನೀಡುವ ನೆಪದಲ್ಲಿ 35 ಲಕ್ಷ ರೂ. ವಂಚಿಸಿದ ಆರೋಪ ಹಿನ್ನೆಲೆ 6 ಜನರ ವಿರುದ್ಧ ದೂರು ದಾಖಲಾಗಿದೆ.
- Pruthviraj
- Updated on: Feb 20, 2026
- 8:00 am
ಮಂಗಳೂರಿನಲ್ಲಿ ಘೋರ ದುರಂತ: ಬಾಲ್ ಎಂದು ಬಾಂಬ್ನಿಂದ ಬೌಲಿಂಗ್: ಬ್ಯಾಟ್ನಿಂದ ಹೊಡೆದಾಗ ಬ್ಲಾಸ್ಟ್
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದಲ್ಲಿ ಚೆಂಡಿನ ಆಕಾರದ ವಸ್ತುವೊಂದು ಸ್ಫೋಟಗೊಂಡು ಓರ್ವ ಬಾಲಕನಿಗೆ ಗಾಯವಾಗಿರುವಂತಹ ಘಟನೆ ನಡೆದಿದೆ. ಸದ್ಯ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ. ಸದ್ಯ ಘಟನೆಯಿಂದ ಜನರಲ್ಲಿ ಆತಂಕ ಶುರುವಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Pruthviraj
- Updated on: Feb 19, 2026
- 6:51 pm
31 ಕೇಸ್ ಇದ್ದರೂ 9 ವರ್ಷಗಳಿಂದ ಕಣ್ಣಾಮುಚ್ಚಾಲೆ: ರಂಜಾನ್ಗೆಂದು ವಿದೇಶದಿಂದ ಬಂದು ಲಾಕ್ ಆದ ಆರೋಪಿ
31 ಕೇಸ್ಗಳಿದ್ದ ಕುಖ್ಯಾತ ರೌಡಿಶೀಟರ್ ಓರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು 9 ವರ್ಷಗಳ ಬಳಿಕ ಬಂಧಿಸಿದ್ದಾರೆ. ಹೆಸರು ಬದಲಾಯಿಸಿಕೊಂಡು ವಿದೇಶದಲ್ಲಿದ್ದಆರೋಪಿ, ರಂಜಾನ್ ಹಿನ್ನೆಲೆ ದೇಶಕ್ಕೆ ಮರಳಿದ ಮಾಹಿತಿ ಆಧರಿಸಿ ಆಂಧ್ರ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಬಂಧಿನ ಮೇಲೆ ಕೊಲೆ, ಗ್ಯಾಂಗ್ ರೇಪ್, ದರೋಡೆ ಸೇರಿದಂತೆ ಗಂಭೀರ ಪ್ರಕರಣಗಳಿದ್ದು, ಹಲವು ಠಾಣೆಗಳಲ್ಲಿ ಕೇಸ್ಗಳಿರುವ ಮಾಹಿತಿ ಇದೆ.
- Pruthviraj
- Updated on: Feb 19, 2026
- 7:59 am
ಬಂಟ್ವಾಳ ಹಿಂದೂ ರಾಷ್ಟ್ರ ಸಭೆಗೆ SDPI ವಿರೋಧ: ಸಂವಿಧಾನ ಉಲ್ಲಂಘನೆ ಆರೋಪ, ದೂರು ದಾಖಲು
ಬಂಟ್ವಾಳದ ಅರಳದಲ್ಲಿ ಫೆಬ್ರವರಿ 22ರಂದು ನಡೆಯಲಿರುವ 'ಹಿಂದೂ ರಾಷ್ಟ್ರ ಜಾಗೃತಿ ಸಭೆ'ಗೆ ಎಸ್ಡಿಪಿಐ ತೀವ್ರ ವಿರೋಧ ವ್ಯಕ್ತಪಡಿಸಿದೆ. ಯಾವುದೇ ಧರ್ಮ ಅಥವಾ ಜಾತಿಯ ಹೆಸರಿನಲ್ಲಿ ರಾಷ್ಟ್ರವನ್ನು ಗುರುತಿಸುವುದು ಸಂವಿಧಾನದ ಉಲ್ಲಂಘನೆ ಮತ್ತು ದೇಶದ್ರೋಹ ಎಂದು ಆರೋಪಿಸಿ, ಎಸ್ಡಿಪಿಐ ಮುಖಂಡರು ಸಭೆಯ ಆಯೋಜಕರ ವಿರುದ್ಧ ಬಂಟ್ವಾಳ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.
- Pruthviraj
- Updated on: Feb 15, 2026
- 7:10 pm
ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ
ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ ಹಾಕಿ ವಂಚಿಸುತ್ತಿದ್ದ ಮನೀಶ್ ಎಂಬ ವ್ಯಕ್ತಿಯ ಕಪಟ ಪ್ರೇಮದಾಟ ಬಯಲಾಗಿದೆ. ಮದುವೆ ಮತ್ತು ಪ್ರೀತಿ ಹೆಸರಿನಲ್ಲಿ ಯುವತಿಯರಿಂದ ಹಣ ಪಡೆದು, ಬ್ರೈನ್ ಟ್ಯೂಮರ್ ನಾಟಕವಾಡಿದ್ದ ಈತನ ವಿರುದ್ಧ ಪತ್ನಿಯೇ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ಇಂತಹ ವಂಚಕನ ಬಗ್ಗೆ ಎಚ್ಚರದಿಂದಿರಿ ಎಂದು ಮನವಿ ಮಾಡಿದ್ದಾರೆ.
- Pruthviraj
- Updated on: Feb 15, 2026
- 10:59 am
ಪಿಲಿಕುಳ ಮೃಗಾಲಯದ ಪ್ರಾಣಿಗಳ ಅಸಹಜ ಸಾವಿಗೆ ಕಾರಣವಾಯ್ತಾ ‘ಸ್ಲೋ ಪಾಯಿಸನ್’!
ಮಂಗಳೂರಿನ ಪಿಲಿಕುಳ ಮೃಗಾಲಯದಲ್ಲಿ ನಾಲ್ಕು ವರ್ಷಗಳಲ್ಲಿ 150ಕ್ಕೂ ಹೆಚ್ಚು ಪ್ರಾಣಿಗಳ ಅಸಹಜ ಸಾವು ಸಂಶಯ ಮೂಡಿಸಿದೆ. ಜಿಂಕೆಯ ಮರಣೋತ್ತರ ವರದಿಯಲ್ಲಿ ಹೈಡ್ರೋಸೈನೇಡ್, ನೈಟ್ರೇಟ್ ಪತ್ತೆಯಾಗಿದ್ದು, ಪ್ರಾಣಿಗಳಿಗೆ ಕೀಟನಾಶಕಯುಕ್ತ ಆಹಾರ ನೀಡಿದ್ದೇ ಅವುಗಳ ಸಾವಿಗೆ ಕಾರಣವೇ ಎಂಬ ಶಂಕೆ ವ್ಯಕ್ತವಾಗಿದೆ. ಇದು ಮೃಗಾಲಯದ ನಿರ್ಲಕ್ಷ್ಯವೆಂದು ಸಾರ್ವಜನಿಕರು ಸಮಗ್ರ ತನಿಖೆಗೆ ಆಗ್ರಹಿಸಿದ್ದಾರೆ.
- Pruthviraj
- Updated on: Feb 14, 2026
- 10:32 am