ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.
ನಟಿ ರುಕ್ಮಿಣಿ ವಸಂತ್ ಮಾರ್ಫ್ ವಿಡಿಯೋ ಹಂಚಿಕೊಂಡವರು ಸಿಕ್ಕಿ ಬೀಳೋದು ಬಹುತೇಕ ಖಚಿತ
ಸಾಮಾಜಿಕ ಜಾಲತಾಣಗಳಲ್ಲಿ ನಟಿ ರುಕ್ಮಿಣಿ ವಸಂತ್ ಅವರ ವಿಡಿಯೋಗಳನ್ನು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ಬಳಸಿ ಅಶ್ಲೀಲವಾಗಿ ಮಾರ್ಫ್ ಮಾಡಿ ಪೋಸ್ಟ್ ಮಾಡಲಾಗಿತ್ತು. ಈ ಬಗ್ಗೆ ನಟಿ ರುಕ್ಮಿಣಿ ವಸಂತ್ ಅವರು ನೀಡಿದ ಅಧಿಕೃತ ದೂರಿನ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಸಿಸಿಬಿ (CCB) ಸೈಬರ್ ಕ್ರೈಂ ಪೊಲೀಸರು, ಆರೋಪಿಗಳ ಪತ್ತೆಗೆ ತೀವ್ರ ಕ್ರಮ ಕೈಗೊಂಡಿದ್ದಾರೆ.
- Rachappaji Naik S
- Updated on: Jun 10, 2026
- 10:36 am
ಪಾಕ್ ವಿರುದ್ಧ ಗೆದ್ದು ಚಿನ್ನದ ಪದಕ ಮುಡಿಗೇರಿಸಿಕೊಂಡ ಬೆಂಗಳೂರು ASI ಪುತ್ರ
ಬೆಂಗಳೂರಿನ ಬನಶಂಕರಿ ಸಂಚಾರ ಠಾಣೆಯ ಎಎಸ್ಐ ಪುತ್ರ ಮುಯ್ ಥಾಯ್ ಕ್ರೀಡಾಕೂಟದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಸೋಲಿಸಿ ಚಿನ್ನದಪದಕ ಮುಡಿಗೇರಿಸಿಕೊಂಡಿದ್ದಾರೆ. ಈ ಮೂಲಕ ಎಎಸ್ಐ ಕಾಂತರಾಜು ಅವರ ಪುತ್ರ ಶ್ರೀಹರ್ಷ ಬಿ.ಕೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿ ಕರ್ನಾಟಕದ ಕೀರ್ತಿ ಹೆಚ್ಚಿಸಿದ್ದಾರೆ. ಇನ್ನು ಶ್ರೀ ಹರ್ಷ ಸಾಧನೆಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಅಭಿನಂದನೆ ತಿಳಿಸಿದ್ದಾರೆ.
- Rachappaji Naik S
- Updated on: Jun 9, 2026
- 8:25 pm
ಲಂಚ ಪಡೆಯುತ್ತಿರುವಾಗಲೇ ಲೋಕಾ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು: ಬೆಂಗಳೂರಿನಲ್ಲಿ ಲೋಕಾಯುಕ್ತ ಭರ್ಜರಿ ಟ್ರ್ಯಾಪ್
ಬೆಂಗಳೂರು ಲೋಕಾಯುಕ್ತ ಭ್ರಷ್ಟಾಚಾರ ನಿಗ್ರಹ ಕಾರ್ಯಾಚರಣೆಯಲ್ಲಿ, ದಕ್ಷಿಣ ವಿಭಾಗದ ಉಪ ಮುಖ್ಯ ವಿದ್ಯುತ್ ನಿರೀಕ್ಷಕ ಸಿದ್ದಪ್ಪ ಲಂಚ ಸ್ವೀಕರಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ. ಹೊಸ ಅಪಾರ್ಟ್ಮೆಂಟ್ಗೆ ವಿದ್ಯುತ್ ಸುರಕ್ಷತಾ ವರದಿ ನೀಡಲು ₹20,000 ಲಂಚಕ್ಕೆ ಬೇಡಿಕೆ ಇಟ್ಟಿದ್ದ ಸಿದ್ದಪ್ಪನನ್ನು ವಿದ್ಯುತ್ ಗುತ್ತಿಗೆದಾರರ ದೂರಿನ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಈ ಮೂಲಕ ಸಿಲಿಕಾನ್ ಸಿಟಿಯಲ್ಲಿ ಭ್ರಷ್ಟಾಚಾರಕ್ಕೆ ಬ್ರೇಕ್ ಬಿದ್ದಿದೆ.
- Rachappaji Naik S
- Updated on: Jun 8, 2026
- 10:13 pm
ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ಪುಂಡಾಟ: ವಾರ್ಡರ್ ಮೇಲೆ ಹಲ್ಲೆಗೆ ಯತ್ನ!
ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಾಂಬ್ ಸ್ಫೋಟ ಪ್ರಕರಣದ ಕೈದಿಗಳು ಜೈಲು ಸಿಬ್ಬಂದಿ ಜೊತೆ ವಾಗ್ವಾದ ನಡೆಸಿ ಪುಂಡಾಟಿಕೆ ತೋರಿದ್ದಾರೆ. ಬೇರೆ ಕೈದಿಯ ಹೆಸರಿನಲ್ಲಿ ಆಸ್ಪತ್ರೆಗೆ ಬಂದಿದ್ದನ್ನು ಪ್ರಶ್ನಿಸಿದ ವಾರ್ಡರ್ ಮೇಲೆ ಹಲ್ಲೆಗೆ ಯತ್ನಿಸಲಾಗಿದ್ದು, 50 ಕ್ಕೂ ಹೆಚ್ಚು ಕೈದಿಗಳು ಒಟ್ಟಾಗಿ ಧರ್ಮದ ಪರ ಘೋಷಣೆ ಕೂಗಿ ಪ್ರತಿಭಟಿಸಿದ್ದಾರೆ. ಪೊಲೀಸರು ಮತ್ತು ಜೈಲು ಅಧಿಕಾರಿಗಳು ಭೇಟಿ ನೀಡಿ ಸದ್ಯ ಪರಿಸ್ಥಿತಿಯನ್ನು ಶಾಂತಗೊಳಿಸಿದ್ದಾರೆ.
- Rachappaji Naik S
- Updated on: Jun 7, 2026
- 11:20 am
ಮದುವೆ ಆಗೋದಾಗಿ ನಂಬಿಸಿ ಯುವಕನಿಗೆ 35 ಲಕ್ಷ ರೂ ವಂಚಿಸಿದ ಯುವತಿ
ಮದುವೆ ಆಗುವ ನೆಪದಲ್ಲಿ ಯುವತಿಯೊಬ್ಬಳು ಯುವಕನಿಗೆ ಬರೋಬ್ಬರಿ 35 ಲಕ್ಷ ರೂ ವಂಚಿಸಿರುವಂತಹ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮ್ಯಾಟ್ರಿಮೋನಿ ವೆಬ್ಸೈಟ್ ಮೂಲಕ ಪರಿಚಯವಾಗಿ, ಕ್ರಿಪ್ಟೋ ಹೂಡಿಕೆಯ ಆಮಿಷವೊಡ್ಡಿ ಹಂತ ಹಂತವಾಗಿ ಹಣ ಪಡೆದು ವಂಚಿಸಿದ್ದಾಳೆ. ಸದ್ಯ ಬೆಂಗಳೂರಿನ ಆಗ್ನೇಯ ವಿಭಾಗ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Rachappaji Naik S
- Updated on: Jun 7, 2026
- 10:10 am
ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಅಗ್ನಿ ಅವಘಡ: ತಪ್ಪಿದ ಭಾರಿ ದುರಂತ!
ನಗರದ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ವಿಶ್ವೇಶ್ವರಯ್ಯ ಲೇಔಟ್ನಲ್ಲಿರುವ ಖಾಸಗಿ ಕೌಶಲ್ಯ ಶಾಲೆಯಲ್ಲಿ ಇಂದು (ಮೇ 30) ಬೆಳಗ್ಗೆ ಹಠಾತ್ ಅಗ್ನಿ ಅವಘಡ ಸಂಭವಿಸಿದೆ. ಶಾಲೆಯ ಆಡಿಟೋರಿಯಂನಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ ಹೊತ್ತಿಕೊಂಡಿದೆ ಎಂದು ಶಂಕಿಸಲಾಗಿದೆ. ಅದೃಷ್ಟವಶಾತ್ ಇಂದು ಶಾಲೆಗೆ ರಜೆ ಇದ್ದಿದ್ದರಿಂದ ಯಾವುದೇ ಪ್ರಾಣಾಪಾಯ ಅಥವಾ ಮಕ್ಕಳಿಗೆ ತೊಂದರೆ ಸಂಭವಿಸಿಲ್ಲ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಜ್ಞಾನಭಾರತಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
- Rachappaji Naik S
- Updated on: May 30, 2026
- 12:58 pm
ಸ್ನೇಹಿತನ ಮನೆಯಲ್ಲೇ ರಾಬರಿ ಮಾಡಿಸಿ ಸಿಕ್ಕಿಬಿದ್ದ ಮೇಸ್ತ್ರಿ: ದರೋಡೆ ವೇಳೆಯೂ ಮಾನವೀಯತೆ ತೋರಿದ್ದ ಆರೋಪಿಗಳು!
ಬೆಂಗಳೂರಿನ ಚಿಕ್ಕಜಾಲದಲ್ಲಿ ಕಿರಿಕ್ ಮಾಡಿದ ಸ್ನೇಹಿತನ ಮನೆಯಲ್ಲೇ ಇಬ್ಬರು ಕಾರ್ಮಿಕರಿಂದ 12 ಲಕ್ಷ ನಗದು, ಚಿನ್ನ ದರೋಡೆ ಮಾಡಿಸಿದ್ದ ಮೇಸ್ತ್ರಿ ಹಾಗೂ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಮುಖ ಆರೋಪಿ ಸಂತ್ರಸ್ತ ಸ್ನೇಹಿತ ಮನೆಯ ಕಟ್ಟಡ ಕಾಮಗಾರಿ ಮಾಡುತ್ತಿದ್ದ. ಈ ವೇಳೆ ಅವರ ಕುಟುಂಬದ ಕಿರಿ ಕಿರಿಗೆ ರೋಸಿ ಹೋಗಿದ್ದ ಎಂಬುದು ಕೂಡ ತನಿಖೆ ವೇಳೆ ಗೊತ್ತಾಗಿದೆ.
- Rachappaji Naik S
- Updated on: May 22, 2026
- 12:17 pm
ಬೆಂಗಳೂರಿನ ಲಾಡ್ಜ್ನಲ್ಲಿ ಸಿಕ್ತು ಜೀವಂತ ಗುಂಡುಗಳಿದ್ದ ಮ್ಯಾಗಜೀನ್! ಅಮೇರಿಕ ನಿರ್ಮಿತ ಬುಲೆಟ್ಸ್ ತಂದಿದ್ದ ಯುವಕ ಅಂದರ್
ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ಒಂದರಲ್ಲಿ ಯುವತಿಯೊಂದಿಗೆ ತಂಗಿದ್ದ ಅರ್ಮಾನ್ ಮುತಾಹರ್ ಎಂಬಾತ ಅಮೆರಿಕ ನಿರ್ಮಿತ ಜೀವಂತ ಗುಂಡುಗಳಿದ್ದ ಮ್ಯಾಗಜೀನ್ ಬಿಟ್ಟು ಹೋಗಿದ್ದ. ಹೋಟೆಲ್ ಮ್ಯಾನೇಜರ್ ನೀಡಿದ ದೂರಿನ ಮೇರೆಗೆ ಜೆ.ಸಿ. ನಗರ ಪೊಲೀಸರು ಆರೋಪಿಯನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ರವಾನಿಸಿದ್ದಾರೆ.
- Rachappaji Naik S
- Updated on: May 19, 2026
- 12:41 pm
ಬೆಂಗಳೂರಲ್ಲಿ ಲೇಡಿ ಡಾನ್ ಹಾವಳಿ? ರಿಯಲ್ ಎಸ್ಟೇಟ್ ಉದ್ಯಮಿ ಕಚೇರಿಗೆ ನುಗ್ಗಿ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಮಹಿಳೆ
ಬೆಂಗಳೂರಿನ ಕೊಡಿಗೆಹಳ್ಳಿಯಲ್ಲಿ ತಾನು ಸಂಘಟನೆಯೊಂದರ ಮುಖ್ಯಸ್ಥೆ ಎಂದು ಹೇಳಿಕೊಂಡು ಸಂಗೀತ ರಾಮ್ ಎಂಬ ಮಹಿಳೆ ಇಬ್ಬರು ಸಹಚರರೊಂದಿಗೆ ರಿಯಲ್ ಎಸ್ಟೇಟ್ ಉದ್ಯಮಿ ವೆಂಕಟರಾಜು ಕಚೇರಿಗೆ ನುಗ್ಗಿ ಜೀವ ಬೆದರಿಕೆ ಹಾಕಿದ್ದಾಳೆ. ಸೈಟ್ ವಿವಾದಕ್ಕೆ ಸಂಬಂಧಿಸಿ 10 ಲಕ್ಷ ರೂ. ಹಫ್ತಾ ಕೇಳಿರುವ ಬಗ್ಗೆ ಆಕೆಯ ವಿರುದ್ಧ ಪ್ರಕರಣ ದಾಖಲಾಗಿದೆ.
- Rachappaji Naik S
- Updated on: May 18, 2026
- 2:32 pm
ಲಾಕಪ್ ಡೆತ್, ಪೊಲೀಸ್ ದೌರ್ಜನ್ಯಕ್ಕೆ ಬ್ರೇಕ್: ಐತಿಹಾಸಿಕ ‘ಸ್ಟ್ಯಾಂಡಿಂಗ್ ಆರ್ಡರ್-1060’ ಜಾರಿಗೊಳಿಸಿದ ಡಿಜಿಪಿ ಡಾ ಎಂಎ ಸಲೀಂ
ರಾಜ್ಯದಲ್ಲಿ ಲಾಕಪ್ ಡೆತ್ ಹಾಗೂ ಪೊಲೀಸ್ ದೌರ್ಜನ್ಯಗಳನ್ನು ತಡೆಗಟ್ಟಲು ಡಿಜಿ-ಐಜಿಪಿ ಡಾ. ಎಂ.ಎ. ಸಲೀಂ ಬಿಎನ್ಎಸ್ಎಸ್ ಕಾಯ್ದೆಯಡಿ ‘ಸ್ಟ್ಯಾಂಡಿಂಗ್ ಆರ್ಡರ್-1060’ ಜಾರಿಗೊಳಿಸಿದ್ದಾರೆ. ನಿಯಮ ಮೀರಿ ಸಾಕ್ಷ್ಯನಾಶಕ್ಕೆ ಯತ್ನಿಸುವ ಅಧಿಕಾರಿಗಳ್ನೇ ನೇರ ಹೊಣೆ ಮಾಡಲಾಗುವುದು ಮತ್ತು ಕಠಿಣ ಶಿಕ್ಷೆ ನೀಡಲಾಗುವುದು ಎಂದು ಡಿಜಿಪಿ ಎಚ್ಚರಿಕೆ ನೀಡಿದ್ದಾರೆ.
- Rachappaji Naik S
- Updated on: May 18, 2026
- 10:21 am
ಡಿಕೆ ಶಿವಕುಮಾರ್ಗೆ 64ನೇ ಹುಟ್ಟುಹಬ್ಬದ ಸಂಭ್ರಮ: ಅಭಿಮಾನಿಗಳ ಜತೆ ಕೇಕ್ ಕಟ್ ಮಾಡಿ ಜನ್ಮದಿನ ಆಚರಿಸಿಕೊಂಡ ಡಿಸಿಎಂ
DK Shivakumar Birthday; ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ 64ನೇ ಹುಟ್ಟುಹಬ್ಬದ ಸಂಭ್ರಮಾಚರಣೆ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಅದ್ಧೂರಿಯಾಗಿ ನಡೆಯಿತು. ಅಭಿಮಾನಿಗಳು, ಕಾರ್ಯಕರ್ತರು ಹಾಗೂ ಮಠಾಧೀಶರು ಭೇಟಿ ನೀಡಿ ಶುಭ ಹಾರೈಸಿದರು. ಡಿಕೆಶಿ ನಿವಾಸದ ಮುಂದೆ ಕೇಕ್ ಕಟ್ಟಿಂಗ್ ವಿಡಿಯೋ ಇಲ್ಲಿದೆ.
- Rachappaji Naik S
- Updated on: May 15, 2026
- 9:17 am
ರಸ್ತೆ ಬದಿ ಕಾರು ಪಾರ್ಕ್ ಮಾಡಿ ಹೋಗುವಾಗ ಬೆಲೆಬಾಳುವ ವಸ್ತು ಬಿಟ್ಟು ಹೋಗ್ತೀರಾ? ಹಾಗಿದ್ರೆ ಈ ಸಿಸಿಟಿವಿ ವಿಡಿಯೋ ನೋಡಲೇಬೇಕು
ಬೆಂಗಳೂರಿನ ಅಶೋಕನಗರದಲ್ಲಿ ರಸ್ತೆ ಪಕ್ಕ ನಿಲ್ಲಿಸಿದ್ದ ಕಾರಿನ ಗ್ಲಾಸ್ ಒಡೆದು ಅದರಲ್ಲಿದ್ದ ಟಿವಿ ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳ್ಳರು ದೋಚಿದ್ದಾರೆ. ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಬೆಂಗಳೂರಿನ ರಸ್ತೆಗಳಲ್ಲಿ ಕಾರು ಪಾರ್ಕ್ ಮಾಡಿ ಹೋಗುವಾಗ ಬೆಲೆಬಾಳುವ ವಸ್ತುಗಳನ್ನು ಅದರಲ್ಲಿ ಬಿಟ್ಟುಹೋಗುವ ಮುನ್ನ ಈ ಸಿಸಿಟಿವಿ ವಿಡಿಯೋ ಒಮ್ಮೆ ನೋಡಿ.
- Rachappaji Naik S
- Updated on: May 7, 2026
- 9:02 am