AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಚಪ್ಪಾಜಿ ನಾಯ್ಕ್

ರಾಚಪ್ಪಾಜಿ ನಾಯ್ಕ್

ಹಿರಿಯ ಜಿಲ್ಲಾ ವರದಿಗಾರ - TV9 Kannada

rachappaji.naik@tv9.com

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
ಅಣ್ಣನ ಜೊತೆ ಮದುವೆ ನಿರಾಕರಿಸಿದ್ದಕ್ಕೆ ತಮ್ಮನಿಂದ ಯುವತಿ ಕೊಲೆ ಕೇಸ್​​ಗೆ ಬಿಗ್​​ ಟ್ವಿಸ್ಟ್​​: ಯುವತಿ ಪಾಲಿಗೆ ಮುಳುವಾದ ತಾಯಿಯ ಚೀಟಿ ವ್ಯವಹಾರ!

ಅಣ್ಣನ ಜೊತೆ ಮದುವೆ ನಿರಾಕರಿಸಿದ್ದಕ್ಕೆ ತಮ್ಮನಿಂದ ಯುವತಿ ಕೊಲೆ ಕೇಸ್​​ಗೆ ಬಿಗ್​​ ಟ್ವಿಸ್ಟ್​​: ಯುವತಿ ಪಾಲಿಗೆ ಮುಳುವಾದ ತಾಯಿಯ ಚೀಟಿ ವ್ಯವಹಾರ!

ಬೆಂಗಳೂರಿನ ಕೋಡಿಹಳ್ಳಿಯ ಅಮೃತಾ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಮದುವೆ ನಿರಾಕರಣೆ ಮಾತ್ರವಲ್ಲದೆ ಲಕ್ಷಾಂತರ ರೂಪಾಯಿ ಚೀಟಿ ಹಣದ ವಿವಾದವೂ ಕೊಲೆಗೆ ಪ್ರಮುಖ ಕಾರಣಗಳಲ್ಲೊಂದು ಎಂಬ ಆಘಾತಕಾರಿ ಮಾಹಿತಿ ತನಿಖೆಯಲ್ಲಿ ಬಯಲಾಗಿದೆ. ಮೃತ ಯುವತಿ ಅಮೃತಾಳ ತಾಯಿ ಬಳಿ ಸೂರ್ಯ ಸಹೋದರರು ಚೀಟಿ ಹಾಕಿದ್ದರು. ಆದರೆ ಅವರು ಆ ಹಣವನ್ನು ಹಿಂತಿರುಗಿಸದೇ ಇರೋದು ಕೂಡ ಆರೋಪಿ ಸಿಟ್ಟಿಗೆ ಕಾರಣವಾಗಿತ್ತು ಎಂಬುದೀಗ ಗೊತ್ತಾಗಿದೆ.

ಅಣ್ಣನ ಮದುವೆಯಾಗಲು ನಿರಾಕರಿಸಿದ್ದಕ್ಕೆ ತಮ್ಮನಿಂದ ಚಾಕು ಇರಿತ: ದುರಂತ ಅಂತ್ಯ ಕಂಡ LLB ವಿದ್ಯಾರ್ಥಿನಿ

ಅಣ್ಣನ ಮದುವೆಯಾಗಲು ನಿರಾಕರಿಸಿದ್ದಕ್ಕೆ ತಮ್ಮನಿಂದ ಚಾಕು ಇರಿತ: ದುರಂತ ಅಂತ್ಯ ಕಂಡ LLB ವಿದ್ಯಾರ್ಥಿನಿ

Bengaluru News: ಅಣ್ಣನ ಮದುವೆಯಾಗಲು ನಿರಾಕರಿಸಿದ್ದಕ್ಕೆ ತಮ್ಮನಿಂದ ಚಾಕು ಇರಿತಕ್ಕೊಳಗಾಗಿದ್ದ ಎಲ್‌ಎಲ್‌ಬಿ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಯುವತಿ ಮತ್ತು ಆರೋಪಿಗಳ ಕುಟುಂಬಸ್ಥರು ಪರಿಚಿತರು ಎನ್ನಲಾಗಿದ್ದು, , ಜೀವನ್​ಭೀಮಾನಗರ ಠಾಣೆಯಲ್ಲಿ ಈ ಬಗ್ಗೆ ಕೇಸ್​ ದಾಖಲಾಗಿದೆ. ಮತ್ತೊಂದೆಡೆ ಮಗಳ ಸಾವಿನ ನಡುವೆಯೂ ಕುಟುಂಬಸ್ಥರು ಆಕೆಯ ನೇತ್ರದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಸಿಸಿಬಿ ಪೊಲೀಸರ ಸೋಗಿನಲ್ಲಿ ಜಿಮ್ ಟ್ರೈನರ್ ಅಪಹರಣ: 5 ಲಕ್ಷಕ್ಕೆ ಬೇಡಿಕೆ, ರೌಡಿಶೀಟರ್ ಸೇರಿ ಐವರ ಬಂಧನ

ಸಿಸಿಬಿ ಪೊಲೀಸರ ಸೋಗಿನಲ್ಲಿ ಜಿಮ್ ಟ್ರೈನರ್ ಅಪಹರಣ: 5 ಲಕ್ಷಕ್ಕೆ ಬೇಡಿಕೆ, ರೌಡಿಶೀಟರ್ ಸೇರಿ ಐವರ ಬಂಧನ

Bangalore Crime: ಸಿಸಿಬಿ ಪೊಲೀಸರ ಸೋಗಿನಲ್ಲಿ ಜಿಮ್ ಟ್ರೈನರ್‌ನನ್ನು ಸಿನಿಮೀಯ ರೀತಿಯಲ್ಲಿ ಅಪಹರಿಸಿ, ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಸಿ 5 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣವನ್ನು ಬೆಂಗಳೂರು ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ರೌಡಿಶೀಟರ್ ಸೇರಿ ಐವರನ್ನು ಬಂಧಿಸಲಾಗಿದೆ.

ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!

ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!

ಬೆಂಗಳೂರು ಹೊರವಲಯದ ಬ್ಯಾಡರಹಳ್ಳಿ ಮತ್ತು ಭಾರತ ನಗರ ಪ್ರದೇಶಗಳಲ್ಲಿ ಚಿರತೆ ಆತಂಕ ಸಾರ್ವಜನಿಕರಲ್ಲಿ ಮುಂದುವರಿದಿದೆ. ಸತತ ಮೂರು ದಿನಗಳಿಂದ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಸ್ಥಳೀಯರು ಭಯಭೀತರಾಗಿದ್ದಾರೆ. ನಿನ್ನೆ ಇಡೀ ದಿನ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರೂ, ಚಿರತೆ ಪತ್ತೆಯಾಗಿರಲಿಲ್ಲ. ಆದರೆ, ನಿನ್ನೆ ರಾತ್ರಿ ಸುಮಾರು 9.30ರ ಸುಮಾರಿಗೆ ಹಾಗೂ ಇಂದು ಮುಂಜಾನೆ 4.30ರ ಸುಮಾರಿಗೆ ಅದೇ ಜಾಗದಲ್ಲಿ ಚಿರತೆ ಮತ್ತೆ ಕಾಣಿಸಿಕೊಂಡಿದೆ.

ಮನೆಯಲ್ಲಿ ಪೂಜೆ ಮಾಡಿಸುವ ನೆಪದಲ್ಲಿ ಬಾಬಾ ಕಿಡ್ನಾಪ್: 4.25 ಲಕ್ಷ ಸುಲಿಗೆ ಮಾಡಿದ ಗ್ಯಾಂಗ್ ಪೊಲೀಸರ ವಶಕ್ಕೆ!

ಮನೆಯಲ್ಲಿ ಪೂಜೆ ಮಾಡಿಸುವ ನೆಪದಲ್ಲಿ ಬಾಬಾ ಕಿಡ್ನಾಪ್: 4.25 ಲಕ್ಷ ಸುಲಿಗೆ ಮಾಡಿದ ಗ್ಯಾಂಗ್ ಪೊಲೀಸರ ವಶಕ್ಕೆ!

ಮನೆಯಲ್ಲಿ ಶಾಂತಿ ಪೂಜೆ ಮಾಡಿಸುವ ನೆಪದಲ್ಲಿ ಯಲಹಂಕದ ಬಾಬಾ ತಾರಿಕ್ ಹುಸೇನ್ ಎಂಬುವರನ್ನು ಅಪಹರಿಸಿ, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರೋಬ್ಬರಿ 4.25 ಲಕ್ಷ ರೂ. ಸುಲಿಗೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಸಂಪಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿದ್ದು, ಬ್ಯಾಂಕ್‌ಗೆ ಕರೆದೊಯ್ದು ಹಣ ಡ್ರಾ ಮಾಡಿಸಿಕೊಂಡಿದ್ದ ಖತರ್ನಾಕ್ ಗ್ಯಾಂಗ್ ಈಗ ಜೈಲು ಪಾಲಾಗಿದೆ.

ಕರ್ನಾಟಕದ 7 ಜಿಲ್ಲೆಯ 10 ಅಧಿಕಾರಿಗಳ ಮನೆ-ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಕೋಟಿ ಕೋಟಿ ಆಸ್ತಿ, ಚಿನ್ನಾಭರಣ ಪತ್ತೆ

ಕರ್ನಾಟಕದ 7 ಜಿಲ್ಲೆಯ 10 ಅಧಿಕಾರಿಗಳ ಮನೆ-ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಕೋಟಿ ಕೋಟಿ ಆಸ್ತಿ, ಚಿನ್ನಾಭರಣ ಪತ್ತೆ

ರಾಜ್ಯಾದ್ಯಂತ ಲೋಕಾಯುಕ್ತ ಅಧಿಕಾರಿಗಳು ಇಂದು ಭರ್ಜರಿ ಬೇಟೆ ಆಡಿದ್ದಾರೆ. ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ದಾಳಿ ವೇಳೆ ಕೋಟಿಗಟ್ಟಲೆ ಮೌಲ್ಯದ ಅಕ್ರಮ ಆಸ್ತಿ, ನಗದು, ಚಿನ್ನಾಭರಣಗಳು ಪತ್ತೆಯಾಗಿದೆ. ಆ ಮೂಲಕ ಕಡಿಮೆ ಸಂಬಳದ ನಡುವೆಯೂ ಗಳಿಸಿದ ಬೃಹತ್ ಸಂಪತ್ತಿನ ರಹಸ್ಯ ಬಯಲಾಗಿದೆ.

ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು: 40 ನಿಮಿಷ ವಾಹನ ಸಂಚಾರ ಸ್ಥಗಿತ

ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು: 40 ನಿಮಿಷ ವಾಹನ ಸಂಚಾರ ಸ್ಥಗಿತ

ಬೆಂಗಳೂರಿನ ಬಿಡುವಿಲ್ಲದ ಪ್ಯಾಲೇಸ್ ರಸ್ತೆಯಲ್ಲಿ ನಿನ್ನೆ ಸಂಜೆ ಬೃಹತ್ ನಾಗರಹಾವೊಂದು ಪ್ರತ್ಯಕ್ಷವಾಗಿ ಕೆಲಕಾಲ ಭೀತಿ ಸೃಷ್ಟಿಸಿತು. ರಸ್ತೆಯ ಮಧ್ಯೆ ಹೆಡೆಬಿಚ್ಚಿ ಕುಳಿತಿದ್ದರಿಂದ ವಾಹನ ಸಂಚಾರ 30-40 ನಿಮಿಷ ಸ್ಥಗಿತಗೊಂಡು ಅಡಚಣೆಯಾಯಿತು. ಸುದ್ದಿ ತಿಳಿದ ಪೊಲೀಸರು ಸಂಚಾರ ನಿಯಂತ್ರಿಸಿದರೆ, ಸ್ಥಳಕ್ಕೆ ಬಂದ ಉರಗ ತಜ್ಞರು ನಾಗರಹಾವನ್ನು ಸುರಕ್ಷಿತವಾಗಿ ರಕ್ಷಿಸಿ, ಆತಂಕ ದೂರ ಮಾಡಿದರು.

ಬೆಂಗಳೂರಿನ ಸ್ಯಾಂಕಿ ಕೆರೆಗೆ ಹಾರಿ 20 ವರ್ಷದ ವಿದ್ಯಾರ್ಥಿನಿ ತೇಜು ಆತ್ಮಹತ್ಯೆ

ಬೆಂಗಳೂರಿನ ಸ್ಯಾಂಕಿ ಕೆರೆಗೆ ಹಾರಿ 20 ವರ್ಷದ ವಿದ್ಯಾರ್ಥಿನಿ ತೇಜು ಆತ್ಮಹತ್ಯೆ

ಬೆಂಗಳೂರಿನ ಸ್ಯಾಂಕಿ ಕೆರೆಯಲ್ಲಿ 20 ವರ್ಷದ ತೇಜು ಎಂಬ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪ್ರಿಯಕರನಿಗೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸಂದೇಶ ಕಳುಹಿಸಿರುವ ತೇಜು, ಬಳಿಕ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದರು. ಸದಾಶಿವನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಾವಿನ ಹಿಂದೆ ಇತರ ಕಾರಣಗಳೇನಾದರೂ ಇದೆಯೇ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ.

ಬೆಂಗಳೂರಲ್ಲಿ ಖತರ್ನಾಕ್ ಗಾಂಜಾ ಪೆಡ್ಲರ್ ಅರೆಸ್ಟ್: ಆರೋಪಿ ಮನೆಯಲ್ಲಿ ಸಿಕ್ಕಿತು 230 ಮೊಬೈಲ್, 17 ಮಾರಕಾಸ್ತ್ರ!

ಬೆಂಗಳೂರಲ್ಲಿ ಖತರ್ನಾಕ್ ಗಾಂಜಾ ಪೆಡ್ಲರ್ ಅರೆಸ್ಟ್: ಆರೋಪಿ ಮನೆಯಲ್ಲಿ ಸಿಕ್ಕಿತು 230 ಮೊಬೈಲ್, 17 ಮಾರಕಾಸ್ತ್ರ!

ಬೆಂಗಳೂರಿನ ಬ್ಯಾಟರಾಯನಪುರ ಪೊಲೀಸರು ಶುಕ್ರವಾರ ತಡರಾತ್ರಿ ಖತರ್ನಾಕ್ ಡ್ರಗ್ ಪೆಡ್ಲರ್ ಅಕ್ಬರ್ ಶರೀಫ್ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿಯ ಮನೆಯ ಮೇಲೆ ದಾಳಿ ನಡೆಸಿದಾಗ ಬರೋಬ್ಬರಿ 230 ಮೊಬೈಲ್ ಫೋನ್‌ಗಳು, 17 ಮಾರಕಾಸ್ತ್ರಗಳು ಮತ್ತು 700 ಗ್ರಾಂ ಗಾಂಜಾ ಪತ್ತೆಯಾಗಿವೆ. ಇದನ್ನು ನೋಡಿ ಪೊಲೀಸರೇ ಬೆಚ್ಚಿಬಿದ್ದಿದ್ದಾರೆ.

ಬೆಚ್ಚಿಬೀಳಿಸುವಂತಿದೆ ಗೃಹ ಇಲಾಖೆಯ ವರದಿ: ರಾಜ್ಯದಲ್ಲಿರುವ ಅಕ್ರಮ ವಲಸಿಗರ ಸಂಖ್ಯೆ ಎಷ್ಟು ಗೊತ್ತಾ?

ಬೆಚ್ಚಿಬೀಳಿಸುವಂತಿದೆ ಗೃಹ ಇಲಾಖೆಯ ವರದಿ: ರಾಜ್ಯದಲ್ಲಿರುವ ಅಕ್ರಮ ವಲಸಿಗರ ಸಂಖ್ಯೆ ಎಷ್ಟು ಗೊತ್ತಾ?

Illegal Immigrants: ರಾಜ್ಯ ಗೃಹ ಇಲಾಖೆ ಸಿದ್ಧಪಡಿಸಿದ ಪಟ್ಟಿಯ ಪ್ರಕಾರ ಕರ್ನಾಟಕದಲ್ಲಿ ಒಟ್ಟು 13,675 ಅಕ್ರಮ ವಲಸಿಗರು ಪತ್ತೆಯಾಗಿದ್ದು, ರಾಜಧಾನಿ ಬೆಂಗಳೂರು ನಗರವೊಂದರಲ್ಲೇ 10,650 ಕ್ಕೂ ಹೆಚ್ಚು ಮಂದಿ ಇರುವುದು ಬೆಳಕಿಗೆ ಬಂದಿದೆ. ಮತ್ತೊಂದೆಡೆ ಮೈಸೂರಿಗೆ ಕಳೆದವಾರ ಅಕ್ರಮ ಬಾಂಗ್ಲಾ ವಲಸಿಗರು ಬಂದಿರುವ ಬಗ್ಗೆ ವದಂತಿ ಉಂಟಾಗಿದ್ದ ಹಿನ್ನೆಲೆ ಎಚ್ಚೆತ್ತ ರೈಲ್ವೆ ಪೊಲೀಸರು ಪಶ್ಚಿಮ ಬಂಗಾಳದಿಂದ ಆಗಮಿಸಿದ ಹೌರಾ ಎಕ್ಸ್‌ಪ್ರೆಸ್‌‌‌ ರೈಲಿನಲ್ಲಿ ಪರಿಶೀಲನೆ ನಡೆಸಿದ್ದಾರೆ.

ಅಪಘಾತದವೇಳೆ ದರ್ಶನ್ ಪುತ್ರ ವಿನೀಶ್ ಕಾರು ಓಡಿಸುತ್ತಿದ್ದರಾ? ಅಸಲಿ ವಿಷಯ ರಿವೀಲ್

ಅಪಘಾತದವೇಳೆ ದರ್ಶನ್ ಪುತ್ರ ವಿನೀಶ್ ಕಾರು ಓಡಿಸುತ್ತಿದ್ದರಾ? ಅಸಲಿ ವಿಷಯ ರಿವೀಲ್

Vineesh Car Accident: ಸ್ಯಾಂಡಲ್‌ವುಡ್ ನಟ ದರ್ಶನ್ ಪುತ್ರ ವಿನೀಶ್ ಪ್ರಯಾಣಿಸುತ್ತಿದ್ದ ಕಾರು ಬೆಂಗಳೂರಿನಲ್ಲಿ ದ್ವಿಚಕ್ರ ವಾಹನಕ್ಕೆ ಟಚ್ ಆದ ಬಗ್ಗೆ ವರದಿಯಾಗಿದೆ. ಆದರೆ, ವಿನೀಶ್ ಕಾರು ಚಲಾಯಿಸುತ್ತಿರಲಿಲ್ಲ ಎಂದು ಅವರ ತಾಯಿ ವಿಜಯಲಕ್ಷ್ಮೀ ಸ್ಪಷ್ಟಪಡಿಸಿದ್ದಾರೆ. ಇದು ಸಾಮಾನ್ಯ ರಸ್ತೆ ಘಟನೆ ಮಾತ್ರ, ಯಾವುದೇ ದೊಡ್ಡ ಅಪಘಾತವಲ್ಲ. ವಿನೀಶ್ ಸುರಕ್ಷಿತವಾಗಿದ್ದು, ಯಾವುದೇ ಅಧಿಕೃತ ದೂರು ದಾಖಲಾಗಿಲ್ಲ ಎಂದು ತಿಳಿಸಿದ್ದಾರೆ. ಸುಳ್ಳು ವರದಿಗಳನ್ನು ನಂಬದಂತೆ ಮನವಿ ಮಾಡಿದ್ದಾರೆ.

ಸತ್ತ ಮೇಲೂ ಬಿಡ್ತಿಲ್ಲ ಆನ್‌ಲೈನ್ ವಂಚಕರು: ಬೆಂಗಳೂರಲ್ಲಿ ಚಿತಾಗಾರ ಬುಕ್ಕಿಂಗ್ ಹೆಸರಲ್ಲಿ ನಕಲಿ ವೆಬ್‌ಸೈಟ್; ಸಾರ್ವಜನಿಕರೇ ಈ ಜಾಲಕ್ಕೆ ಬೀಳಬೇಡಿ!

ಸತ್ತ ಮೇಲೂ ಬಿಡ್ತಿಲ್ಲ ಆನ್‌ಲೈನ್ ವಂಚಕರು: ಬೆಂಗಳೂರಲ್ಲಿ ಚಿತಾಗಾರ ಬುಕ್ಕಿಂಗ್ ಹೆಸರಲ್ಲಿ ನಕಲಿ ವೆಬ್‌ಸೈಟ್; ಸಾರ್ವಜನಿಕರೇ ಈ ಜಾಲಕ್ಕೆ ಬೀಳಬೇಡಿ!

ಬೆಂಗಳೂರಿನಲ್ಲಿ ವಿದ್ಯುತ್ ಚಿತಾಗಾರ ಸ್ಲಾಟ್ ಬುಕಿಂಗ್ ಹೆಸರಿನಲ್ಲಿ ಸೈಬರ್ ವಂಚನೆ ಹೆಚ್ಚಾಗಿದೆ. ನೋವಿನಲ್ಲಿರುವ ಕುಟುಂಬಗಳನ್ನು ಗುರಿಯಾಗಿಸಿಕೊಂಡು ನಕಲಿ ವೆಬ್‌ಸೈಟ್‌ಗಳನ್ನು ಸೃಷ್ಟಿಸಿ, ಅಧಿಕೃತ ಶುಲ್ಕ ₹250 ಇದ್ದರೂ ಸಾವಿರಾರು ರೂ. ವಸೂಲಿ ಮಾಡುತ್ತಿದ್ದಾರೆ. ಸಾರ್ವಜನಿಕರು ಮೂರನೇ ವ್ಯಕ್ತಿಯ ವೆಬ್‌ಸೈಟ್‌ಗಳಿಂದ ಎಚ್ಚರವಾಗಿರಬೇಕು. ಈ ಕುರಿತು ಯಲಹಂಕ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಚುರುಕುಗೊಂಡಿದೆ.

‘ಕಂದಮ್ಮ’ ಹಾಡಿನ ವಿಚಾರದಲ್ಲಿ ಮಗಳ ಜತೆ ದುನಿಯಾ ವಿಜಯ್ ಪ್ರೀತಿಯ ಗಲಾಟೆ
‘ಕಂದಮ್ಮ’ ಹಾಡಿನ ವಿಚಾರದಲ್ಲಿ ಮಗಳ ಜತೆ ದುನಿಯಾ ವಿಜಯ್ ಪ್ರೀತಿಯ ಗಲಾಟೆ
ಶಾಸ್ತ್ರದ ಪ್ರಕಾರ ಪತ್ನಿ ಚೆನ್ನಮ್ಮನನ್ನು ಕಳಿಸಿಕೊಟ್ಟ ದೇವೇಗೌಡ್ರು
ಶಾಸ್ತ್ರದ ಪ್ರಕಾರ ಪತ್ನಿ ಚೆನ್ನಮ್ಮನನ್ನು ಕಳಿಸಿಕೊಟ್ಟ ದೇವೇಗೌಡ್ರು
ತಾಯಿ ಚೆನ್ನಮ್ಮ ಅಂತಿಮ ಸಂಸ್ಕಾರದ ಬಳಿಕ ಕುಮಾರಸ್ವಾಮಿ ಭಾವುಕ ಮಾತು
ತಾಯಿ ಚೆನ್ನಮ್ಮ ಅಂತಿಮ ಸಂಸ್ಕಾರದ ಬಳಿಕ ಕುಮಾರಸ್ವಾಮಿ ಭಾವುಕ ಮಾತು
ಮಣ್ಣಲ್ಲಿ ಮಣ್ಣಾದ ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ‘ಚೆನ್ನಮ್ಮ‘
ಮಣ್ಣಲ್ಲಿ ಮಣ್ಣಾದ ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ‘ಚೆನ್ನಮ್ಮ‘
ಜಂತರ್ ಮಂತರ್ ಪ್ರತಿಭಟನೆ ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ
ಜಂತರ್ ಮಂತರ್ ಪ್ರತಿಭಟನೆ ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ
ಅಂತ್ಯಕ್ರಿಯೆಗೂ ಮುನ್ನ ಚೆನ್ನಮ್ಮನ ಬಗ್ಗೆ ಹೆಚ್​​​​ಡಿಡಿ ಭಾವುಕ ಮಾತು
ಅಂತ್ಯಕ್ರಿಯೆಗೂ ಮುನ್ನ ಚೆನ್ನಮ್ಮನ ಬಗ್ಗೆ ಹೆಚ್​​​​ಡಿಡಿ ಭಾವುಕ ಮಾತು
ಪ್ರೀತಿಯ ಚುಂಬನ: ಪುತ್ರ ರೇವಣ್ಣರಿಂದ ತಾಯಿಗೆ ಅಂತಿನ ನಮನ
ಪ್ರೀತಿಯ ಚುಂಬನ: ಪುತ್ರ ರೇವಣ್ಣರಿಂದ ತಾಯಿಗೆ ಅಂತಿನ ನಮನ
ತಾಯಿ ಹಣೆಗೆ ಮುತ್ತಿಟ್ಟು ಕಣ್ಣೀರು ಹಾಕಿದ ಹೆಚ್​​​​.ಡಿ ಕುಮಾರಸ್ವಾಮಿ
ತಾಯಿ ಹಣೆಗೆ ಮುತ್ತಿಟ್ಟು ಕಣ್ಣೀರು ಹಾಕಿದ ಹೆಚ್​​​​.ಡಿ ಕುಮಾರಸ್ವಾಮಿ
ಚೆನ್ನಮ್ಮರ ಅಂತಿಮ ವಿಧಿವಿಧಾನ ಕಾರ್ಯ ನೆರವೇರಿಸುವವರು ಇವರೇ
ಚೆನ್ನಮ್ಮರ ಅಂತಿಮ ವಿಧಿವಿಧಾನ ಕಾರ್ಯ ನೆರವೇರಿಸುವವರು ಇವರೇ
ಚನ್ನಮ್ಮ ಪಾರ್ಥಿವ ಶರೀರ ಹೊತ್ತು ತರಲು ಹೂವಿನ ಪಲ್ಲಕಿ ಹೇಗಿದೆ ನೋಡಿ
ಚನ್ನಮ್ಮ ಪಾರ್ಥಿವ ಶರೀರ ಹೊತ್ತು ತರಲು ಹೂವಿನ ಪಲ್ಲಕಿ ಹೇಗಿದೆ ನೋಡಿ