AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಚಪ್ಪಾಜಿ ನಾಯ್ಕ್

ರಾಚಪ್ಪಾಜಿ ನಾಯ್ಕ್

ಹಿರಿಯ ಜಿಲ್ಲಾ ವರದಿಗಾರ - TV9 Kannada

rachappaji.naik@tv9.com

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
ಬೆಚ್ಚಿಬೀಳಿಸುವಂತಿದೆ ಗೃಹ ಇಲಾಖೆಯ ವರದಿ: ರಾಜ್ಯದಲ್ಲಿರುವ ಅಕ್ರಮ ವಲಸಿಗರ ಸಂಖ್ಯೆ ಎಷ್ಟು ಗೊತ್ತಾ?

ಬೆಚ್ಚಿಬೀಳಿಸುವಂತಿದೆ ಗೃಹ ಇಲಾಖೆಯ ವರದಿ: ರಾಜ್ಯದಲ್ಲಿರುವ ಅಕ್ರಮ ವಲಸಿಗರ ಸಂಖ್ಯೆ ಎಷ್ಟು ಗೊತ್ತಾ?

Illegal Immigrants: ರಾಜ್ಯ ಗೃಹ ಇಲಾಖೆ ಸಿದ್ಧಪಡಿಸಿದ ಪಟ್ಟಿಯ ಪ್ರಕಾರ ಕರ್ನಾಟಕದಲ್ಲಿ ಒಟ್ಟು 13,675 ಅಕ್ರಮ ವಲಸಿಗರು ಪತ್ತೆಯಾಗಿದ್ದು, ರಾಜಧಾನಿ ಬೆಂಗಳೂರು ನಗರವೊಂದರಲ್ಲೇ 10,650 ಕ್ಕೂ ಹೆಚ್ಚು ಮಂದಿ ಇರುವುದು ಬೆಳಕಿಗೆ ಬಂದಿದೆ. ಮತ್ತೊಂದೆಡೆ ಮೈಸೂರಿಗೆ ಕಳೆದವಾರ ಅಕ್ರಮ ಬಾಂಗ್ಲಾ ವಲಸಿಗರು ಬಂದಿರುವ ಬಗ್ಗೆ ವದಂತಿ ಉಂಟಾಗಿದ್ದ ಹಿನ್ನೆಲೆ ಎಚ್ಚೆತ್ತ ರೈಲ್ವೆ ಪೊಲೀಸರು ಪಶ್ಚಿಮ ಬಂಗಾಳದಿಂದ ಆಗಮಿಸಿದ ಹೌರಾ ಎಕ್ಸ್‌ಪ್ರೆಸ್‌‌‌ ರೈಲಿನಲ್ಲಿ ಪರಿಶೀಲನೆ ನಡೆಸಿದ್ದಾರೆ.

ಅಪಘಾತದವೇಳೆ ದರ್ಶನ್ ಪುತ್ರ ವಿನೀಶ್ ಕಾರು ಓಡಿಸುತ್ತಿದ್ದರಾ? ಅಸಲಿ ವಿಷಯ ರಿವೀಲ್

ಅಪಘಾತದವೇಳೆ ದರ್ಶನ್ ಪುತ್ರ ವಿನೀಶ್ ಕಾರು ಓಡಿಸುತ್ತಿದ್ದರಾ? ಅಸಲಿ ವಿಷಯ ರಿವೀಲ್

Vineesh Car Accident: ಸ್ಯಾಂಡಲ್‌ವುಡ್ ನಟ ದರ್ಶನ್ ಪುತ್ರ ವಿನೀಶ್ ಪ್ರಯಾಣಿಸುತ್ತಿದ್ದ ಕಾರು ಬೆಂಗಳೂರಿನಲ್ಲಿ ದ್ವಿಚಕ್ರ ವಾಹನಕ್ಕೆ ಟಚ್ ಆದ ಬಗ್ಗೆ ವರದಿಯಾಗಿದೆ. ಆದರೆ, ವಿನೀಶ್ ಕಾರು ಚಲಾಯಿಸುತ್ತಿರಲಿಲ್ಲ ಎಂದು ಅವರ ತಾಯಿ ವಿಜಯಲಕ್ಷ್ಮೀ ಸ್ಪಷ್ಟಪಡಿಸಿದ್ದಾರೆ. ಇದು ಸಾಮಾನ್ಯ ರಸ್ತೆ ಘಟನೆ ಮಾತ್ರ, ಯಾವುದೇ ದೊಡ್ಡ ಅಪಘಾತವಲ್ಲ. ವಿನೀಶ್ ಸುರಕ್ಷಿತವಾಗಿದ್ದು, ಯಾವುದೇ ಅಧಿಕೃತ ದೂರು ದಾಖಲಾಗಿಲ್ಲ ಎಂದು ತಿಳಿಸಿದ್ದಾರೆ. ಸುಳ್ಳು ವರದಿಗಳನ್ನು ನಂಬದಂತೆ ಮನವಿ ಮಾಡಿದ್ದಾರೆ.

ಸತ್ತ ಮೇಲೂ ಬಿಡ್ತಿಲ್ಲ ಆನ್‌ಲೈನ್ ವಂಚಕರು: ಬೆಂಗಳೂರಲ್ಲಿ ಚಿತಾಗಾರ ಬುಕ್ಕಿಂಗ್ ಹೆಸರಲ್ಲಿ ನಕಲಿ ವೆಬ್‌ಸೈಟ್; ಸಾರ್ವಜನಿಕರೇ ಈ ಜಾಲಕ್ಕೆ ಬೀಳಬೇಡಿ!

ಸತ್ತ ಮೇಲೂ ಬಿಡ್ತಿಲ್ಲ ಆನ್‌ಲೈನ್ ವಂಚಕರು: ಬೆಂಗಳೂರಲ್ಲಿ ಚಿತಾಗಾರ ಬುಕ್ಕಿಂಗ್ ಹೆಸರಲ್ಲಿ ನಕಲಿ ವೆಬ್‌ಸೈಟ್; ಸಾರ್ವಜನಿಕರೇ ಈ ಜಾಲಕ್ಕೆ ಬೀಳಬೇಡಿ!

ಬೆಂಗಳೂರಿನಲ್ಲಿ ವಿದ್ಯುತ್ ಚಿತಾಗಾರ ಸ್ಲಾಟ್ ಬುಕಿಂಗ್ ಹೆಸರಿನಲ್ಲಿ ಸೈಬರ್ ವಂಚನೆ ಹೆಚ್ಚಾಗಿದೆ. ನೋವಿನಲ್ಲಿರುವ ಕುಟುಂಬಗಳನ್ನು ಗುರಿಯಾಗಿಸಿಕೊಂಡು ನಕಲಿ ವೆಬ್‌ಸೈಟ್‌ಗಳನ್ನು ಸೃಷ್ಟಿಸಿ, ಅಧಿಕೃತ ಶುಲ್ಕ ₹250 ಇದ್ದರೂ ಸಾವಿರಾರು ರೂ. ವಸೂಲಿ ಮಾಡುತ್ತಿದ್ದಾರೆ. ಸಾರ್ವಜನಿಕರು ಮೂರನೇ ವ್ಯಕ್ತಿಯ ವೆಬ್‌ಸೈಟ್‌ಗಳಿಂದ ಎಚ್ಚರವಾಗಿರಬೇಕು. ಈ ಕುರಿತು ಯಲಹಂಕ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಚುರುಕುಗೊಂಡಿದೆ.

ಕನ್ನಡ ಬಾವುಟದಿಂದ ವಾಹನಕ್ಕೆ ಕ್ಯಾಪ್ ಕಟ್ಟಿ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ

ಕನ್ನಡ ಬಾವುಟದಿಂದ ವಾಹನಕ್ಕೆ ಕ್ಯಾಪ್ ಕಟ್ಟಿ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ

ನಮ್ಮ ಮೆಟ್ರೋ ಸಿಬ್ಬಂದಿ ಕನ್ನಡ ಧ್ವಜವನ್ನು ‘ಕರೆಂಟ್ ಕಲೆಕ್ಟರ್ ಶೂ ಕ್ಯಾಪ್’ ಕಟ್ಟಲು ವಾಹನದಲ್ಲಿ ಬಳಸಿದ್ದಕ್ಕೆ ಕನ್ನಡಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಡರಾತ್ರಿ ಕಬ್ಬನ್ ಪಾರ್ಕ್‌ನಲ್ಲಿ ಈ ಘಟನೆ ನಡೆದಿದ್ದು, ಮೆಟ್ರೋ ಸಿಬ್ಬಂದಿಯ ಈ ನಡೆಯನ್ನು ಧ್ವಜಕ್ಕೆ ಮಾಡಿದ ಅಪಮಾನ ಎಂದು ಸಾರ್ವಜನಿಕರು ಖಂಡಿಸಿದ್ದಾರೆ.

ಮೆಟ್ರೋ ಸಂಚಾರ ಶುರುವಾಯ್ತಾ? ಬಿಗ್ ಅಪ್​ಡೇಟ್ ಕೊಟ್ಟ ಬಿಎಂಆರ್​ಸಿಎಲ್

ಮೆಟ್ರೋ ಸಂಚಾರ ಶುರುವಾಯ್ತಾ? ಬಿಗ್ ಅಪ್​ಡೇಟ್ ಕೊಟ್ಟ ಬಿಎಂಆರ್​ಸಿಎಲ್

ಬೆಂಗಳೂರಿನ ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಮಂಗಳವಾರ ಸಂಜೆ ಎದುರಾಗಿದ್ದ ತಾಂತ್ರಿಕ ದೋಷವನ್ನು ಬಿಎಂಆರ್‌ಸಿಎಲ್ ಸಿಬ್ಬಂದಿ ಯಶಸ್ವಿಯಾಗಿ ಸರಿಪಡಿಸಿದ್ದು, ಬುಧವಾರ ಮುಂಜಾನೆಯಿಂದಲೇ ಮೆಟ್ರೋ ರೈಲುಗಳ ಸಂಚಾರ ಎಂದಿನಂತೆ ಯಥಾಸ್ಥಿತಿಗೆ ಮರಳಿದೆ. ಕಬ್ಬನ್ ಪಾರ್ಕ್ ನಿಲ್ದಾಣದ ಬಳಿ ಉಂಟಾಗಿದ್ದ ಸಮಸ್ಯೆಯನ್ನು ಮುಂಜಾನೆ 3:30ರ ಸುಮಾರಿಗೆ ಬಗೆಹರಿಸಲಾಗಿದ್ದು, ನಿಗದಿತ ವೇಳಾಪಟ್ಟಿಯಂತೆ ರೈಲು ಸೇವೆ ಲಭ್ಯವಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಇಂದು (ಜೂನ್ 21) ಯೋಗ ದಿನಾಚರಣೆ ಆಚರಿಸಲಾಗಿದೆ. ಜೈಲಿನಲ್ಲಿ ಎಲ್ಲಾ ಕೈದಿಗಳಿಂದ ಯೋಗಭ್ಯಾಸ ಮಾಡಿಸಲಾಗಿದೆ. ದರ್ಶನ್ ಅವರು ಪ್ರಾಣಾಯಾಮ, ದೀರ್ಘಾದಂಡ ನಮಸ್ಕಾರ, ಶವಾಸನ ಮಾಡಿದ್ದಾರೆ. ಒಂದು ಗಂಟೆಯ ಕಾಲ ಯೋಗದಲ್ಲಿ ಭಾಗಿಯಾದ ಬಳಿಕ ಅವರು ಬ್ಯಾರಕ್​ಗೆ ತೆರಳಿದರು.

ದರೋಡೆ ಪ್ರಕರಣ: ಇನ್ಸ್​​ಪೆಕ್ಟರ್​​​ ಮಹೇಶ್ ಕನಕಗಿರಿಗೆ ನ್ಯಾಯಾಂಗ ಬಂಧನ; ಸವಾಲಾದ ವಿಚಾರಣೆ

ದರೋಡೆ ಪ್ರಕರಣ: ಇನ್ಸ್​​ಪೆಕ್ಟರ್​​​ ಮಹೇಶ್ ಕನಕಗಿರಿಗೆ ನ್ಯಾಯಾಂಗ ಬಂಧನ; ಸವಾಲಾದ ವಿಚಾರಣೆ

ಉದ್ಯಮಿಯೊಬ್ಬರ ದರೋಡೆ ಪ್ರಕರಣದಲ್ಲಿ ಬಂಧಿತರಾಗಿರುವ ಇನ್ಸ್‌ಪೆಕ್ಟರ್ ಮಹೇಶ್ ಕನಕಗಿರಿ ತನಿಖೆಗೆ ಸಹಕರಿಸದೆ ಇರುವುದು ಪೊಲೀಸರಿಗೆ ಸವಾಲಾಗಿದೆ. ಆರೋಪಿಗಳ ಪರಸ್ಪರ ವಿರೋಧಾತ್ಮಕ ಹೇಳಿಕೆಗಳಿಂದಾಗಿ ತಾಂತ್ರಿಕ ಸಾಕ್ಷ್ಯಗಳ ಸಂಗ್ರಹಕ್ಕೆ ಖಾಕಿ ಪಡೆ ಮುಂದಾಗಿದೆ. ಜೊತೆಗೆ, ಮಹೇಶ್​​ ಕನಕಗಿರಿ ಬಗ್ಗೆ ಸಂಪೂರ್ಣ ಮಾಹಿತಿ ಕಲೆಹಾಕಲು ಡಿಸಿಪಿ ಸುಜಿತಾಗೆ ನಗರ ಪೊಲೀಸ್ ಆಯುಕ್ತರು ಸೂಚನೆಯನ್ನೂ ನೀಡಿದ್ದಾರೆ.

ಬೆಂಗಳೂರಲ್ಲೊಂದು ವಿಚಿತ್ರ ಘಟನೆ: ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!

ಬೆಂಗಳೂರಲ್ಲೊಂದು ವಿಚಿತ್ರ ಘಟನೆ: ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!

ಮೊಬೈಲ್ ಕಸಿದು ಸ್ಕೂಟರ್ರಿನಲ್ಲಿ ಪರಾರಿಯಾಗಲು ಯತ್ನಿಸಿದ ಕಳ್ಳನನ್ನು ಕಾರ್ಮಿಕನೋರ್ವ ಹಿಡಿಯಲು ಯತ್ನಿಸಿದ್ದಾನೆ. ಈ ವೇಳೆ ನಿಯಂತ್ರಣ ತಪ್ಪಿ ಸ್ಕೂಟಿಯಿಂದ ಬಿದ್ದ ಬಳಿಕ ಸ್ಥಳದಿಂದ ಓಡುವಾಗ ಹೃದಯಾಘಾತದಿಂದ ಫುಟ್‌ಪಾತ್ ಮೇಲೆಯೇ ಕುಸಿದು ಬಿದ್ದು ಆತ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮತ್ತೋರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

ಬೆಂಗಳೂರಿನ ಬಾಗಲೂರಿನಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಕಾಂಪೌಂಡ್ ಗೋಡೆ ಮತ್ತು ಗೇಟ್ ಕುಸಿದು 5 ವರ್ಷದ ಅಫೀನ್ ಎಂಬ ಮಗು ಸಾವನ್ನಪ್ಪಿದೆ. ಮತ್ತೊಂದು ಮಗು ಸಮನ್ವಿಗೆ ಗಂಭೀರ ಗಾಯಗಳಾಗಿವೆ. ನೆರೆಮನೆಯ ಮಕ್ಕಳೊಂದಿಗೆ ಆಟವಾಡುತ್ತಿದ್ದಾಗ ಈ ದುರಂತ ಸಂಭವಿಸಿದೆ. ಅವೈಜ್ಞಾನಿಕ ನಿರ್ಮಾಣವೇ ಕಾರಣ ಎಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

‘ದೊಡ್ಡಣ್ಣ ನಿಧನ’ ಅಂತ ಸುಳ್ಳು ಸುದ್ದಿ ಹಬ್ಬಿಸಿದವರಿಗೆ ನಡುಕ; ಸೈಬರ್ ಪೊಲೀಸ್ ಠಾಣೆ ಮೆಟ್ಟಿಲೇರಿದ ನಟ

‘ದೊಡ್ಡಣ್ಣ ನಿಧನ’ ಅಂತ ಸುಳ್ಳು ಸುದ್ದಿ ಹಬ್ಬಿಸಿದವರಿಗೆ ನಡುಕ; ಸೈಬರ್ ಪೊಲೀಸ್ ಠಾಣೆ ಮೆಟ್ಟಿಲೇರಿದ ನಟ

ಹಿರಿಯ ನಟ ದೊಡ್ಡಣ್ಣ ಅವರ ನಿಧನದ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ದೊಡ್ಡಣ್ಣ, ಬೆಂಗಳೂರಿನ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಈ ದಿಟ್ಟ ಹೆಜ್ಜೆಯಿಂದ ಸಾಮಾಜಿಕ ಮಾಧ್ಯಮದಲ್ಲಿ ವಿಕೃತ ಪೋಸ್ಟ್‌ಗಳನ್ನು ಹಂಚುವವರಿಗೆ ಭಾರಿ ಆತಂಕ ಶುರುವಾಗಿದೆ.

ಬೆಂಗಳೂರಿನಲ್ಲಿ ಭೀಕರ ಸರಣಿ ಅಪಘಾತ: ಪ್ರತ್ಯೇಕ ದುರಂತಗಳಲ್ಲಿ ನಾಲ್ವರ ದುರ್ಮರಣ, ಮೂವರಿಗೆ ಗಾಯ

ಬೆಂಗಳೂರಿನಲ್ಲಿ ಭೀಕರ ಸರಣಿ ಅಪಘಾತ: ಪ್ರತ್ಯೇಕ ದುರಂತಗಳಲ್ಲಿ ನಾಲ್ವರ ದುರ್ಮರಣ, ಮೂವರಿಗೆ ಗಾಯ

ಬೆಂಗಳೂರಿನ ವೈಟ್‌ಫೀಲ್ಡ್ ಮತ್ತು ಕೆಂಗೇರಿ ವ್ಯಾಪ್ತಿಯಲ್ಲಿ ನಡೆದ ಮೂರು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಬೈಕ್ ಸ್ಕಿಡ್ ಆಗಿ ಶಾಲಾ ಬಸ್ ಹರಿದು ತಾಯಿ ಮೃತಪಟ್ಟರೆ, ಡಿವೈಡರ್‌ಗೆ ಡಿಕ್ಕಿಯಾಗಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಹಾಗೂ ಕಾರು ಪಲ್ಟಿಯಾಗಿ ಓರ್ವ ವ್ಯಕ್ತಿ ದುರ್ಮರಣಕ್ಕೀಡಾಗಿದ್ದಾರೆ.

ಮುತ್ತಪ್ಪ ರೈ ಮಗನ ಮತ್ತೊಂದು ಪುಂಡಾಟದ ವಿಡಿಯೋ ವೈರಲ್: ಸೈಲೆನ್ಸರ್‌ನಲ್ಲಿ ಬೆಂಕಿ ಉಗುಳುತ್ತಾ ಏರ್ಪೋರ್ಟ್ ರಸ್ತೆಯಲ್ಲಿ ಕಾರು ರೇಸಿಂಗ್

ಮುತ್ತಪ್ಪ ರೈ ಮಗನ ಮತ್ತೊಂದು ಪುಂಡಾಟದ ವಿಡಿಯೋ ವೈರಲ್: ಸೈಲೆನ್ಸರ್‌ನಲ್ಲಿ ಬೆಂಕಿ ಉಗುಳುತ್ತಾ ಏರ್ಪೋರ್ಟ್ ರಸ್ತೆಯಲ್ಲಿ ಕಾರು ರೇಸಿಂಗ್

ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಒಡೆತನದ ಲ್ಯಾಂಬೋರ್ಗಿನಿ ಕಾರು ಬೆಂಗಳೂರಿನಲ್ಲಿ ಮತ್ತೊಮ್ಮೆ ಸಂಚಾರ ನಿಯಮ ಉಲ್ಲಂಘಿಸಿ ವಿವಾದಕ್ಕೆ ಸಿಲುಕಿದೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಅತಿವೇಗದ ಚಾಲನೆ ಮತ್ತು ಮಾರ್ಪಾಡುಗೊಂಡ ಸೈಲೆನ್ಸರ್‌ನಿಂದ ಕರ್ಕಶ ಶಬ್ದ ಉಂಟುಮಾಡಿದ ವೀಡಿಯೋ ವೈರಲ್ ಆಗಿದೆ. ಈ ಹಿಂದೆ ಡ್ರಿಫ್ಟಿಂಗ್ ಪ್ರಕರಣದಲ್ಲೂ ಇದೇ ಕಾರು ಭಾಗಿಯಾಗಿತ್ತು. ಪೊಲೀಸರು ಘಟನೆ ಕುರಿತು ತೀವ್ರ ತನಿಖೆ ನಡೆಸುತ್ತಿದ್ದು, ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.