ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.
ಸ್ಟಾಕ್ ಮಾರ್ಕೆಟ್ ಹೆಸರಲ್ಲಿ ಲಕ್ಷಾಂತರ ವಂಚನೆ: ಕನ್ನಡಿಗರನ್ನು ನಿಂದಿಸಿ ಠಾಣೆ ಮುಂಭಾಗವೇ ಕ್ಷಮೆ ಕೇಳಿದ ಮಹಿಳೆ!
ಬೆಂಗಳೂರಿನ ಪೀಣ್ಯದಲ್ಲಿ ಸ್ಟಾಕ್ ಮಾರ್ಕೆಟ್ ಹೆಸರಲ್ಲಿ ಲಕ್ಷಾಂತರ ರೂಪಾಯಿ ವಂಚನೆ ಹಗರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಪ್ರಶ್ನಿಸಲು ಹೋದ ಹೂಡಿಕೆದಾರರಿಗೆ 'ಕನ್ನಡ ಗೊತ್ತಿಲ್ಲ' ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಪ್ರಿಯಾಂಕ ಎಂಬ ಮಹಿಳೆ, ಸಾರ್ವಜನಿಕರ ಆಕ್ರೋಶ ಹಾಗೂ ಪೊಲೀಸ್ ಮಧ್ಯಸ್ಥಿಕೆ ಬಳಿಕ ಪೀಣ್ಯ ಠಾಣೆಯ ಮುಂಭಾಗದಲ್ಲೇ ಕನ್ನಡಿಗರ ಬಹಿರಂಗ ಕ್ಷಮೆಯಾಚಿಸಿದ್ದಾಳೆ. ವಂಚನೆ ಪ್ರಕರಣದ ತನಿಖೆ ಮುಂದುವರಿದಿದೆ.
- Rachappaji Naik S
- Updated on: Aug 7, 2026
- 11:30 am
ಬ್ಯಾಂಕ್ ಸಿಬ್ಬಂದಿಯಿಂದಲೇ ನಕಲಿ ಚಿನ್ನ ಅಡವಿಟ್ಟು 1.5 ಕೋಟಿ ರೂ. ವಂಚನೆ!
ಬೆಂಗಳೂರಿನ ಪೀಣ್ಯ ಇಂಡಸ್ಇಂಡ್ ಬ್ಯಾಂಕ್ನಲ್ಲಿ ಉದ್ಯೋಗಿ ನಾಗೇಶ್ ಎಂಬಾತ ನಕಲಿ ಚಿನ್ನ ಅಡವಿಟ್ಟು 1.53 ಕೋಟಿ ರೂ. ವಂಚನೆ ನಡೆಸಿದ್ದಾನೆ. ಬ್ಯಾಂಕ್ ಆಡಿಟ್ನಲ್ಲಿ ಕೃತ್ಯ ಬಯಲಾಗುತ್ತಿದ್ದಂತೆ, ಹಣ ಹೊಂದಿಸಲು ಉದ್ಯಮಿ ಜಗದೀಶ್ ಎಂಬವರಿಗೆ ಮೋಸ ಮಾಡಿ ತಲೆಮರೆಸಿಕೊಂಡಿದ್ದಾನೆ. ಸದ್ಯ, ಜಗದೀಶ್ ಪೀಣ್ಯ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಯ ಪತ್ತೆಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.
- Rachappaji Naik S
- Updated on: Aug 7, 2026
- 6:00 pm
ಪೀಣ್ಯದಲ್ಲಿ ಪುಡಿ ರೌಡಿಗಳ ಪುಂಡಾಟ, ಕಲ್ಲು ತೂರಿ ಕಾರು ಧ್ವಂಸ!
ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಕರಿಹೋಬನಹಳ್ಳಿಯಲ್ಲಿ ಪುಡಿ ರೌಡಿಗಳ ಹಾವಳಿ ಮಿತಿಮೀರಿದ್ದು, ಸ್ಥಳೀಯರು ಭೀತಿಯಲ್ಲಿ ದಿನ ದೂಡುವಂತಾಗಿದೆ. ಗಣಿ ಮತ್ತು ನಂಜುಂಡ ಎಂಬ ಪುಂಡರು ಗಾಂಜಾ ಹಾಗೂ ಡ್ರಗ್ಸ್ ಸೇವಿಸಿ ಏರಿಯಾದಲ್ಲಿ ವ್ಹೀಲಿಂಗ್ ಮಾಡುತ್ತಾ ಸಾರ್ವಜನಿಕರಿಗೆ ನಿರಂತರ ಕಿರುಕುಳ ನೀಡುತ್ತಿದ್ದಾರೆ. ಕಳೆದ 3ನೇ ತಾರೀಖಿನಂದು ರಾತ್ರಿ ಸ್ಥಳೀಯರು ಇವರ ಪುಂಡಾಟವನ್ನು ಪ್ರಶ್ನಿಸಿದ್ದಕ್ಕೆ, ಆಕ್ರೋಶಗೊಂಡ ಆರೋಪಿಗಳು ಕಾರಿನ ಮೇಲೆ ಕಲ್ಲು ಎತ್ತಿಹಾಕಿ ಗ್ಲಾಸ್ ಒಡೆದು ದಾಂಧಲೆ ನಡೆಸಿದ್ದಾರೆ.
- Rachappaji Naik S
- Updated on: Aug 4, 2026
- 7:57 am
ಬನ್ನೇರುಘಟ್ಟ ರಸ್ತೆಯಲ್ಲಿ ಹೈಡ್ರಾಮಾ: ಕಾರು ಚಾಲಕರ ನಡುವೆ ಇಲಿ-ಬೆಕ್ಕಿನಾಟ!
ನಗರದ ಬನ್ನೇರುಘಟ್ಟ ರಸ್ತೆಯಲ್ಲಿ ರಸ್ತೆ ಅಪಘಾತವೊಂದರ ಹಿನ್ನೆಲೆಯಲ್ಲಿ ಇನ್ನೋವಾ ಮತ್ತು ಸ್ವಿಫ್ಟ್ ಕಾರು ಚಾಲಕರ ನಡುವೆ ಸಿನಿಮಾ ಮಾದರಿಯ ಚೇಸಿಂಗ್ ಹಾಗೂ ಹೈಡ್ರಾಮಾ ನಡೆದಿದೆ. ಸ್ವಿಫ್ಟ್ ಕಾರಿಗೆ ಸ್ಪರ್ಶಿಸಿದ ಇನ್ನೋವಾ ಚಾಲಕ, ಸ್ವಿಫ್ಟ್ ಚಾಲಕನ ಕಾರಿನ ಕೀ ಕಿತ್ತುಕೊಂಡು ಪರಾರಿಯಾಗಲು ಯತ್ನಿಸಿದ್ದಾನೆ. ತಕ್ಷಣ ಜಾಗೃತನಾದ ಸ್ವಿಫ್ಟ್ ಚಾಲಕ, ಬೈಕ್ ಸವಾರನ ನೆರವು ಪಡೆದು ಇನ್ನೋವಾ ಕಾರನ್ನು ಚೇಸ್ ಮಾಡಿ ಹಿಡಿದಿದ್ದಾರೆ. ಈ ವೇಳೆ ಠಾಣೆಗೆ ಬರುವುದಾಗಿ ಹೇಳಿ ಇನ್ನೋವಾ ಚಾಲಕ ಮತ್ತೆ ರ್ಯಾಶ್ ಡ್ರೈವಿಂಗ್ ಮಾಡುತ್ತಾ ಎಸ್ಕೇಪ್ ಆಗಲು ಯತ್ನಿಸಿದಾಗ, ಮತ್ತೆ ಬೈಕ್ನಲ್ಲಿ ಬೆನ್ನಟ್ಟಿ ಕೊನೆಗೂ ಆತನನ್ನು ತಡೆಯಲಾಗಿದೆ. ಹುಳಿಮಾವು ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಈ ಸಂಪೂರ್ಣ ಘಟನೆಯ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
- Rachappaji Naik S
- Updated on: Jul 27, 2026
- 7:46 am
ಅಣ್ಣನ ಜೊತೆ ಮದುವೆ ನಿರಾಕರಿಸಿದ್ದಕ್ಕೆ ತಮ್ಮನಿಂದ ಯುವತಿ ಕೊಲೆ ಕೇಸ್ಗೆ ಬಿಗ್ ಟ್ವಿಸ್ಟ್: ಯುವತಿ ಪಾಲಿಗೆ ಮುಳುವಾದ ತಾಯಿಯ ಚೀಟಿ ವ್ಯವಹಾರ!
ಬೆಂಗಳೂರಿನ ಕೋಡಿಹಳ್ಳಿಯ ಅಮೃತಾ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಮದುವೆ ನಿರಾಕರಣೆ ಮಾತ್ರವಲ್ಲದೆ ಲಕ್ಷಾಂತರ ರೂಪಾಯಿ ಚೀಟಿ ಹಣದ ವಿವಾದವೂ ಕೊಲೆಗೆ ಪ್ರಮುಖ ಕಾರಣಗಳಲ್ಲೊಂದು ಎಂಬ ಆಘಾತಕಾರಿ ಮಾಹಿತಿ ತನಿಖೆಯಲ್ಲಿ ಬಯಲಾಗಿದೆ. ಮೃತ ಯುವತಿ ಅಮೃತಾಳ ತಾಯಿ ಬಳಿ ಸೂರ್ಯ ಸಹೋದರರು ಚೀಟಿ ಹಾಕಿದ್ದರು. ಆದರೆ ಅವರು ಆ ಹಣವನ್ನು ಹಿಂತಿರುಗಿಸದೇ ಇರೋದು ಕೂಡ ಆರೋಪಿ ಸಿಟ್ಟಿಗೆ ಕಾರಣವಾಗಿತ್ತು ಎಂಬುದೀಗ ಗೊತ್ತಾಗಿದೆ.
- Rachappaji Naik S
- Updated on: Jul 19, 2026
- 10:02 am
ಅಣ್ಣನ ಮದುವೆಯಾಗಲು ನಿರಾಕರಿಸಿದ್ದಕ್ಕೆ ತಮ್ಮನಿಂದ ಚಾಕು ಇರಿತ: ದುರಂತ ಅಂತ್ಯ ಕಂಡ LLB ವಿದ್ಯಾರ್ಥಿನಿ
Bengaluru News: ಅಣ್ಣನ ಮದುವೆಯಾಗಲು ನಿರಾಕರಿಸಿದ್ದಕ್ಕೆ ತಮ್ಮನಿಂದ ಚಾಕು ಇರಿತಕ್ಕೊಳಗಾಗಿದ್ದ ಎಲ್ಎಲ್ಬಿ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಯುವತಿ ಮತ್ತು ಆರೋಪಿಗಳ ಕುಟುಂಬಸ್ಥರು ಪರಿಚಿತರು ಎನ್ನಲಾಗಿದ್ದು, , ಜೀವನ್ಭೀಮಾನಗರ ಠಾಣೆಯಲ್ಲಿ ಈ ಬಗ್ಗೆ ಕೇಸ್ ದಾಖಲಾಗಿದೆ. ಮತ್ತೊಂದೆಡೆ ಮಗಳ ಸಾವಿನ ನಡುವೆಯೂ ಕುಟುಂಬಸ್ಥರು ಆಕೆಯ ನೇತ್ರದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.
- Rachappaji Naik S
- Updated on: Jul 16, 2026
- 3:27 pm
ಸಿಸಿಬಿ ಪೊಲೀಸರ ಸೋಗಿನಲ್ಲಿ ಜಿಮ್ ಟ್ರೈನರ್ ಅಪಹರಣ: 5 ಲಕ್ಷಕ್ಕೆ ಬೇಡಿಕೆ, ರೌಡಿಶೀಟರ್ ಸೇರಿ ಐವರ ಬಂಧನ
Bangalore Crime: ಸಿಸಿಬಿ ಪೊಲೀಸರ ಸೋಗಿನಲ್ಲಿ ಜಿಮ್ ಟ್ರೈನರ್ನನ್ನು ಸಿನಿಮೀಯ ರೀತಿಯಲ್ಲಿ ಅಪಹರಿಸಿ, ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಸಿ 5 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣವನ್ನು ಬೆಂಗಳೂರು ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ರೌಡಿಶೀಟರ್ ಸೇರಿ ಐವರನ್ನು ಬಂಧಿಸಲಾಗಿದೆ.
- Rachappaji Naik S
- Updated on: Jul 15, 2026
- 11:01 am
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬೆಂಗಳೂರು ಹೊರವಲಯದ ಬ್ಯಾಡರಹಳ್ಳಿ ಮತ್ತು ಭಾರತ ನಗರ ಪ್ರದೇಶಗಳಲ್ಲಿ ಚಿರತೆ ಆತಂಕ ಸಾರ್ವಜನಿಕರಲ್ಲಿ ಮುಂದುವರಿದಿದೆ. ಸತತ ಮೂರು ದಿನಗಳಿಂದ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಸ್ಥಳೀಯರು ಭಯಭೀತರಾಗಿದ್ದಾರೆ. ನಿನ್ನೆ ಇಡೀ ದಿನ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರೂ, ಚಿರತೆ ಪತ್ತೆಯಾಗಿರಲಿಲ್ಲ. ಆದರೆ, ನಿನ್ನೆ ರಾತ್ರಿ ಸುಮಾರು 9.30ರ ಸುಮಾರಿಗೆ ಹಾಗೂ ಇಂದು ಮುಂಜಾನೆ 4.30ರ ಸುಮಾರಿಗೆ ಅದೇ ಜಾಗದಲ್ಲಿ ಚಿರತೆ ಮತ್ತೆ ಕಾಣಿಸಿಕೊಂಡಿದೆ.
- Rachappaji Naik S
- Updated on: Jul 10, 2026
- 11:15 am
ಮನೆಯಲ್ಲಿ ಪೂಜೆ ಮಾಡಿಸುವ ನೆಪದಲ್ಲಿ ಬಾಬಾ ಕಿಡ್ನಾಪ್: 4.25 ಲಕ್ಷ ಸುಲಿಗೆ ಮಾಡಿದ ಗ್ಯಾಂಗ್ ಪೊಲೀಸರ ವಶಕ್ಕೆ!
ಮನೆಯಲ್ಲಿ ಶಾಂತಿ ಪೂಜೆ ಮಾಡಿಸುವ ನೆಪದಲ್ಲಿ ಯಲಹಂಕದ ಬಾಬಾ ತಾರಿಕ್ ಹುಸೇನ್ ಎಂಬುವರನ್ನು ಅಪಹರಿಸಿ, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರೋಬ್ಬರಿ 4.25 ಲಕ್ಷ ರೂ. ಸುಲಿಗೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಸಂಪಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿದ್ದು, ಬ್ಯಾಂಕ್ಗೆ ಕರೆದೊಯ್ದು ಹಣ ಡ್ರಾ ಮಾಡಿಸಿಕೊಂಡಿದ್ದ ಖತರ್ನಾಕ್ ಗ್ಯಾಂಗ್ ಈಗ ಜೈಲು ಪಾಲಾಗಿದೆ.
- Rachappaji Naik S
- Updated on: Jul 10, 2026
- 10:37 am
ಕರ್ನಾಟಕದ 7 ಜಿಲ್ಲೆಯ 10 ಅಧಿಕಾರಿಗಳ ಮನೆ-ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಕೋಟಿ ಕೋಟಿ ಆಸ್ತಿ, ಚಿನ್ನಾಭರಣ ಪತ್ತೆ
ರಾಜ್ಯಾದ್ಯಂತ ಲೋಕಾಯುಕ್ತ ಅಧಿಕಾರಿಗಳು ಇಂದು ಭರ್ಜರಿ ಬೇಟೆ ಆಡಿದ್ದಾರೆ. ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ದಾಳಿ ವೇಳೆ ಕೋಟಿಗಟ್ಟಲೆ ಮೌಲ್ಯದ ಅಕ್ರಮ ಆಸ್ತಿ, ನಗದು, ಚಿನ್ನಾಭರಣಗಳು ಪತ್ತೆಯಾಗಿದೆ. ಆ ಮೂಲಕ ಕಡಿಮೆ ಸಂಬಳದ ನಡುವೆಯೂ ಗಳಿಸಿದ ಬೃಹತ್ ಸಂಪತ್ತಿನ ರಹಸ್ಯ ಬಯಲಾಗಿದೆ.
- Rachappaji Naik S
- Updated on: Jul 8, 2026
- 7:03 pm
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು: 40 ನಿಮಿಷ ವಾಹನ ಸಂಚಾರ ಸ್ಥಗಿತ
ಬೆಂಗಳೂರಿನ ಬಿಡುವಿಲ್ಲದ ಪ್ಯಾಲೇಸ್ ರಸ್ತೆಯಲ್ಲಿ ನಿನ್ನೆ ಸಂಜೆ ಬೃಹತ್ ನಾಗರಹಾವೊಂದು ಪ್ರತ್ಯಕ್ಷವಾಗಿ ಕೆಲಕಾಲ ಭೀತಿ ಸೃಷ್ಟಿಸಿತು. ರಸ್ತೆಯ ಮಧ್ಯೆ ಹೆಡೆಬಿಚ್ಚಿ ಕುಳಿತಿದ್ದರಿಂದ ವಾಹನ ಸಂಚಾರ 30-40 ನಿಮಿಷ ಸ್ಥಗಿತಗೊಂಡು ಅಡಚಣೆಯಾಯಿತು. ಸುದ್ದಿ ತಿಳಿದ ಪೊಲೀಸರು ಸಂಚಾರ ನಿಯಂತ್ರಿಸಿದರೆ, ಸ್ಥಳಕ್ಕೆ ಬಂದ ಉರಗ ತಜ್ಞರು ನಾಗರಹಾವನ್ನು ಸುರಕ್ಷಿತವಾಗಿ ರಕ್ಷಿಸಿ, ಆತಂಕ ದೂರ ಮಾಡಿದರು.
- Rachappaji Naik S
- Updated on: Jul 8, 2026
- 1:34 pm
ಬೆಂಗಳೂರಿನ ಸ್ಯಾಂಕಿ ಕೆರೆಗೆ ಹಾರಿ 20 ವರ್ಷದ ವಿದ್ಯಾರ್ಥಿನಿ ತೇಜು ಆತ್ಮಹತ್ಯೆ
ಬೆಂಗಳೂರಿನ ಸ್ಯಾಂಕಿ ಕೆರೆಯಲ್ಲಿ 20 ವರ್ಷದ ತೇಜು ಎಂಬ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪ್ರಿಯಕರನಿಗೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸಂದೇಶ ಕಳುಹಿಸಿರುವ ತೇಜು, ಬಳಿಕ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದರು. ಸದಾಶಿವನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಾವಿನ ಹಿಂದೆ ಇತರ ಕಾರಣಗಳೇನಾದರೂ ಇದೆಯೇ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ.
- Rachappaji Naik S
- Updated on: Jul 7, 2026
- 10:23 am