AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಚಪ್ಪಾಜಿ ನಾಯ್ಕ್

ರಾಚಪ್ಪಾಜಿ ನಾಯ್ಕ್

ಹಿರಿಯ ಜಿಲ್ಲಾ ವರದಿಗಾರ - TV9 Kannada

rachappaji.naik@tv9.com

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
ಬೆಂಗಳೂರಿನಲ್ಲಿ ವ್ಹೀಲಿಂಗ್ ಪುಂಡರ ಹುಚ್ಚಾಟಕ್ಕೆ ಟಿಟಿ ವಾಹನ ಅಪಘಾತ: ಓರ್ವ ಸಾವು, ಐವರಿಗೆ ಗಾಯ!

ಬೆಂಗಳೂರಿನಲ್ಲಿ ವ್ಹೀಲಿಂಗ್ ಪುಂಡರ ಹುಚ್ಚಾಟಕ್ಕೆ ಟಿಟಿ ವಾಹನ ಅಪಘಾತ: ಓರ್ವ ಸಾವು, ಐವರಿಗೆ ಗಾಯ!

ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಪುಂಡರನ್ನು ತಪ್ಪಿಸಲು ಹೋಗಿ ಟಿಟಿ ವಾಹನ ಎಲೆಕ್ಟ್ರಿಕ್ ಪೋಲ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಮನೋಜ್ ಎಂಬ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ನಡೆದು ಒಂದು ಗಂಟೆ ತಡವಾಗಿ ಆಂಬುಲೆನ್ಸ್ ಬಂದಿದ್ದಕ್ಕೆ ಸ್ಥಳೀಯರು ಹಾಗೂ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಜ್ಞಾನಭಾರತಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಲೋಕ್ ಕುಮಾರ್ ದಿಟ್ಟ ಕ್ರಮ: ಕರ್ನಾಟಕದ ಹಲವು ಜೈಲುಗಳಲ್ಲಿ ಬರೋಬ್ಬರಿ 410 ಮೊಬೈಲ್‌ ಸೀಜ್

ಅಲೋಕ್ ಕುಮಾರ್ ದಿಟ್ಟ ಕ್ರಮ: ಕರ್ನಾಟಕದ ಹಲವು ಜೈಲುಗಳಲ್ಲಿ ಬರೋಬ್ಬರಿ 410 ಮೊಬೈಲ್‌ ಸೀಜ್

ಕರ್ನಾಟಕದ ಕಾರಾಗೃಹಗಳಲ್ಲಿ ಕೈದಿಗಳಿಗೆ ಮೊಬೈಲ್‌ ನಿಷೇಧವಿದ್ದರೂ ಆಗಾಗ್ಗೆ ಕಂಬಿ ಹಿಂದೆ ಮೊಬೈಲ್‌ ಸದ್ದು ಮಾಡುತ್ತಿರುವುದು ಕಾರ್ಯಚರಣೆಗಳಲ್ಲಿ ಬಯಲಾಗಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದಂತೆ ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ಕಳೆದ 9 ತಿಂಗಳಲ್ಲಿ 410 ಮೊಬೈಲ್‌ಗಳು ಪತ್ತೆಯಾಗಿವೆ. ಈ ಪೈಕಿ ಪರಪ್ಪನ ಅಗ್ರಹಾರ ಜೈಲಿನಲ್ಲೇ ಬರೋಬ್ಬರಿ 334 ಮೊಬೈಲ್ ಗಳನ್ನು ಸೀಜ್ ಮಾಡಲಾಗಿದೆ

ಕೆಪಿಎಸ್​ಸಿ ನೇಮಕಾತಿ ಹಗರಣ: ಇಡಿಯಿಂದ ಐಎಎಸ್​​ ಅಧಿಕಾರಿ ಜ್ಞಾನೇಂದ್ರ ಕುಮಾರ್, ಮಧ್ಯವರ್ತಿ ಕನ್ನಾಳೆ ಬಂಧನ

ಕೆಪಿಎಸ್​ಸಿ ನೇಮಕಾತಿ ಹಗರಣ: ಇಡಿಯಿಂದ ಐಎಎಸ್​​ ಅಧಿಕಾರಿ ಜ್ಞಾನೇಂದ್ರ ಕುಮಾರ್, ಮಧ್ಯವರ್ತಿ ಕನ್ನಾಳೆ ಬಂಧನ

ಕೆಪಿಎಸ್ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣದಲ್ಲಿ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮತ್ತು ಮಧ್ಯವರ್ತಿ ಬಸವರಾಜ್ ಕನ್ನಾಳೆ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ. ವಿಚಾರಣೆಗೆ ಸಹಕರಿಸದ ಹಿನ್ನೆಲೆಯಲ್ಲಿ ಇಬ್ಬರನ್ನೂ ವಶಕ್ಕೆ ಪಡೆಯಲಾಗಿದ್ದು, ಇಡಿ ಕಚೇರಿಯಲ್ಲಿ ಪ್ರಶ್ನಿಸಲಾಗುತ್ತಿದೆ. ಮತ್ತೊಂದೆಡೆ, ಸಿಐಡಿ ಅಧಿಕಾರಿಗಳು ಕೆಪಿಎಸ್ಸಿ ಸದಸ್ಯೆ ಶಾಂತಾ ಹೊಸಮನಿ ಅವರನ್ನೂ ವಿಚಾರಣೆ ನಡೆಸುತ್ತಿದ್ದಾರೆ.

ನಕಲಿ ಔಷಧ ಜಾಲ: ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳಿಗೂ ಎಸ್ಐಟಿ ತನಿಖೆ ಬಿಸಿ ಸಾಧ್ಯತೆ

ನಕಲಿ ಔಷಧ ಜಾಲ: ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳಿಗೂ ಎಸ್ಐಟಿ ತನಿಖೆ ಬಿಸಿ ಸಾಧ್ಯತೆ

ದೊಡ್ಡೇರಿ ಫಾರ್ಮ್ ಹೌಸ್‌ನಲ್ಲಿ ಪತ್ತೆಯಾದ ನಕಲಿ ಔಷಧಿ ಜಾಲ ಪ್ರಕರಣದಲ್ಲಿ ಕೃಪಾ ಫಾರ್ಮಾ ಪಾತ್ರದ ಕುರಿತು ಎಸ್ಐಟಿ ತನಿಖೆ ನಡೆಸುತ್ತಿದೆ. ಈ ನಕಲಿ ಔಷಧಿಗಳು ರೋಗಿಗಳ ಜೀವಕ್ಕೆ ಅಪಾಯಕಾರಿಯಾಗಿದ್ದು, ಚಿಕಿತ್ಸೆಯನ್ನು ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿಸಬಹುದು. ಹಲವು ಪ್ರತಿಷ್ಠಿತ ಆಸ್ಪತ್ರೆಗಳಿಗೂ ನಕಲಿ ಔಷಧಿ ಸರಬರಾಜಾಗಿರುವ ಶಂಕೆ ವ್ಯಕ್ತವಾಗಿದ್ದು, ಎಸ್ಐಟಿ ಅವುಗಳ ಪಾತ್ರದ ಬಗ್ಗೆಯೂ ಪರಿಶೀಲಿಸುತ್ತಿದೆ.

ಪೂಜೆ ಹೆಸರಲ್ಲಿ 40 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ನಕಲಿ ಜ್ಯೋತಿಷಿ!

ಪೂಜೆ ಹೆಸರಲ್ಲಿ 40 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ನಕಲಿ ಜ್ಯೋತಿಷಿ!

ಬೆಂಗಳೂರಿನಲ್ಲಿ ಪೂಜೆ ನೆಪದಲ್ಲಿ ವೃದ್ಧೆಗೆ ಬರೋಬ್ಬರಿ 40 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ವಂಚಿಸಿದ ನಕಲಿ ಜ್ಯೋತಿಷಿಯೊಬ್ಬ, ತನ್ನ ಮೇಲೆ ಅಪಘಾತ ನಡೆದಿದೆ ಎಂದು ನಂಬಿಸಲು ಎಐ ವೀಡಿಯೋ ಬಳಸಿ ನಾಟಕವಾಡಿದ್ದಾನೆ. ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಖತರ್ನಾಕ್ ಜ್ಯೋತಿಷಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಕೆಪಿಎಸ್​​ಸಿ ಹಗರಣ: ಲಕ್ಷಾಂತರ ರೂಪಾಯಿಗಳಿಗೆ ಬಿಕರಿಯಾಗಿತ್ತು ಪ್ರಶ್ನೆ; ಸ್ಫೋಟಕ ಮಾಹಿತಿ ಬಹಿರಂಗ

ಕೆಪಿಎಸ್​​ಸಿ ಹಗರಣ: ಲಕ್ಷಾಂತರ ರೂಪಾಯಿಗಳಿಗೆ ಬಿಕರಿಯಾಗಿತ್ತು ಪ್ರಶ್ನೆ; ಸ್ಫೋಟಕ ಮಾಹಿತಿ ಬಹಿರಂಗ

ಕೆಪಿಎಸ್‍ಸಿ ಪಶುವೈದ್ಯಾಧಿಕಾರಿ ಪರೀಕ್ಷೆಯ ಅಕ್ರಮದ ತನಿಖೆ ತೀವ್ರಗೊಳಿಸಿರುವ ಸಿಐಡಿ, ಪರೀಕ್ಷೆಗೆ ಮುಂಚಿತವಾಗಿ ಲಕ್ಷಾಂತರ ರೂಪಾಯಿಗೆ ಪ್ರಶ್ನೆಪತ್ರಿಕೆ ಮಾರಾಟವಾಗಿದ್ದ ಸ್ಫೋಟಕ ಸತ್ಯ ಹಾಗೂ ಪ್ರಮುಖ ಆರೋಪಿ ಕನ್ನಾಳೆಯ ವಂಚನೆ ಜಾಲವನ್ನು ಬಯಲಿಗೆಳೆದಿದೆ. ಹಗರಣಕ್ಕೆ ಸಂಬಂಧಿಸಿ ಸಿಐಡಿ ಅಧಿಕಾರಿಗಳು ಈಗಾಗಲೇ ಬರೋಬ್ಬರಿ 400ಕ್ಕೂ ಹೆಚ್ಚು ಮಂದಿಯ ವಿಚಾರಣೆ ನಡೆಸಿದ್ದಾರೆ. ಆರೋಪಿಗಳು, ಅಭ್ಯರ್ಥಿಗಳು ಮತ್ತು ಕೆಪಿಎಸ್​ಸಿ ಸಿಬ್ಬಂದಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ.

ನಕಲಿ ಔಷಧ ಜಾಲ ಪತ್ತೆ ಕೇಸ್​​: ಇನ್ನೂ ಅಜರ್​ ಬೈಜಾನ್​​ನಲ್ಲೇ ಇದ್ದಾನೆ ಕಿಂಗ್​ಪಿನ್​ ಪ್ರಶಾಂತ್​!

ನಕಲಿ ಔಷಧ ಜಾಲ ಪತ್ತೆ ಕೇಸ್​​: ಇನ್ನೂ ಅಜರ್​ ಬೈಜಾನ್​​ನಲ್ಲೇ ಇದ್ದಾನೆ ಕಿಂಗ್​ಪಿನ್​ ಪ್ರಶಾಂತ್​!

ರಾಮನಗರದ ನಕಲಿ ಔಷಧ ಜಾಲದ ಕಿಂಗ್‌ಪಿನ್ ಪ್ರಶಾಂತ್ ಅಜರ್‌ಬೈಜಾನ್‌ನಲ್ಲಿ ವಶದಲ್ಲಿದ್ದು, ಪರಪ್ಪನ ಅಗ್ರಹಾರದಲ್ಲಿದ್ದ ಪ್ರಮುಖ ಆರೋಪಿ ವೀರೇಶ್ ಜೈನ್‌‌ನನ್ನು ಎಸ್‌ಐಟಿ ಇಂದು ಬಾಡಿ ವಾರಂಟ್ ಮೇರೆಗೆ ಕಸ್ಟಡಿಗೆ ಪಡೆಯಲಿದೆ. ಆರಂಭಿಕ ವಿಚಾರಣೆ ವೇಳೆ, ವೀರೇಶ್‌ ತನಗೆ ಮೆಡಿಸಿನ್ ಬರ್ತಾ ಇತ್ತು, ನಾನು ಸಪ್ಲೈ ಮಾಡ್ತಿದ್ದೆ ಎಂದು ಹೇಳಿಕೆ ನೀಡಿದ್ದ. ಆದರೆ, ಈ ನಕಲಿ ಔಷಧಗಳನ್ನು ತರಿಸುವ ಮತ್ತು ಸಪ್ಲೈ ಮಾಡುವ ಹಿಂದಿನ ಸಮಗ್ರ ಕಾರ್ಯಾಚರಣೆ, ಲಾಭಾಂಶ ಹಂಚಿಕೆ ಮತ್ತು ಜಾಲದ ರೂಪುರೇಷೆಗಳ ಬಗ್ಗೆ ಆಳವಾದ ಮಾಹಿತಿ ಕಲೆ ಹಾಕಲು ಅಧಿಕಾರಿಗಳು ಮುಂದಾಗಿದ್ದಾರೆ.

ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: ಸಿಐಡಿ-ಇಡಿ ಜಂಟಿ ತನಿಖೆ ಚುರುಕು, ಬಯಲಾಯ್ತು ಸ್ಫೋಟಕ ಸತ್ಯಗಳು

ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: ಸಿಐಡಿ-ಇಡಿ ಜಂಟಿ ತನಿಖೆ ಚುರುಕು, ಬಯಲಾಯ್ತು ಸ್ಫೋಟಕ ಸತ್ಯಗಳು

ಕರ್ನಾಟಕ ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ ತೀವ್ರಗೊಂಡಿದ್ದು, ಸಿಐಡಿ ತನಿಖೆ ಬೆನ್ನಲ್ಲೇ ಇಡಿ ಪ್ರವೇಶಿಸಿದೆ. ದೇವನಹಳ್ಳಿ ರೆಸಾರ್ಟ್‌ನಲ್ಲಿ ಪರೀಕ್ಷೆಗೂ ಮುನ್ನ ಅಭ್ಯರ್ಥಿಗಳಿಗೆ ಪ್ರಶ್ನೆಪತ್ರಿಕೆ ನೀಡಿ ಉತ್ತರ ಬರೆಸಿದ ಜಾಲ ಬಯಲಾಗಿದೆ. ಕೋಟ್ಯಂತರ ರೂ. ಅಕ್ರಮ ಹಣಕಾಸು ವ್ಯವಹಾರ ಪತ್ತೆಯಾದ ಹಿನ್ನೆಲೆಯಲ್ಲಿ ಇಡಿ ಆಸ್ತಿ ಮುಟ್ಟುಗೋಲಿಗೆ ಸಿದ್ಧತೆ ನಡೆಸಿದ್ದು, ಕಾವೇರಿ ನದಿಯಲ್ಲಿ ಸಾಕ್ಷ್ಯಗಳಿಗಾಗಿ ಸಿಐಡಿ ಶೋಧ ಮುಂದುವರಿಸಿದೆ.

ನಕಲಿ ಔಷಧಿ ದಂಧೆಯ ಅಸಲಿ ಕಿಂಗ್‌ಪಿನ್ ಕೃಪಾ ಫಾರ್ಮಾ ವೀರೇಶ್: ಎಸ್‌ಐಟಿ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು

ನಕಲಿ ಔಷಧಿ ದಂಧೆಯ ಅಸಲಿ ಕಿಂಗ್‌ಪಿನ್ ಕೃಪಾ ಫಾರ್ಮಾ ವೀರೇಶ್: ಎಸ್‌ಐಟಿ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು

ನಕಲಿ ಔಷಧಿ ಜಾಲದ ಅಸಲಿ ಕಿಂಗ್‌ಪಿನ್ ವೀರೇಶ್ ಮುಖವಾಡ ಕಳಚಿ ಬಿದ್ದಿದೆ. ಬೆಂಗಳೂರಿನ ಕೃಪಾ ಫಾರ್ಮಾ ಮಾಲೀಕ ವೀರೇಶ್, ವರ್ಷಕ್ಕೆ 15 ಕೋಟಿಗೂ ಹೆಚ್ಚು ವಹಿವಾಟು ನಡೆಸುತ್ತಿದ್ದ ಈ ದಂಧೆಯ ಮುಖ್ಯಸ್ಥನೆಂದು ಎಸ್ಐಟಿ ತನಿಖೆಯಲ್ಲಿ ಬಯಲಾಗಿದೆ. ಹೊರ ರಾಜ್ಯಗಳಿಗೂ ವಿಸ್ತರಿಸಿದ್ದ ಈ ಜಾಲಕ್ಕೆ ಟರ್ಕಿ ಲಿಂಕ್ ಕೂಡಾ ಇತ್ತು ಎನ್ನಲಾಗಿದೆ.

ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ದಾಳಿ: ಬೆಂಗಳೂರಿನಲ್ಲಿ ಇಡಿ ಮಹತ್ವದ ಸಭೆ

ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ದಾಳಿ: ಬೆಂಗಳೂರಿನಲ್ಲಿ ಇಡಿ ಮಹತ್ವದ ಸಭೆ

ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ನಡೆದ ಇಡಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆದಿದೆ. 3 ಕೋಟಿ ರೂಪಾಯಿಗೂ ಹೆಚ್ಚು ನಗದು, ವಿದೇಶಿ ಕರೆನ್ಸಿ, ವಿದೇಶಿ ಹೂಡಿಕೆ ಹಾಗೂ ಲೋಕೋಪಯೋಗಿ ಟೆಂಡರ್‌ಗಳಲ್ಲಿನ ಕಿಕ್‌ಬ್ಯಾಕ್ ಆರೋಪಗಳ ಕುರಿತು ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ. ಈ ಕುರಿತು ಸಭೆಯಲ್ಲಿ ಮಹತ್ವದ ಚರ್ಚೆ ನಡೆದಿದೆ.

ರಾಜಧಾನಿ ಬೆಂಗಳೂರಿನಲ್ಲಿ ಶಾಲಾ ಸಮಯ ಬದಲಾವಣೆಗೆ ಸರ್ಕಾರದ ಮಾಸ್ಟರ್ ಪ್ಲಾನ್: ಸಚಿವ ಮಧು ಬಂಗಾರಪ್ಪ ಸಮ್ಮತಿ, ಶೀಘ್ರವೇ ಮಹತ್ವದ ಸಭೆ

ರಾಜಧಾನಿ ಬೆಂಗಳೂರಿನಲ್ಲಿ ಶಾಲಾ ಸಮಯ ಬದಲಾವಣೆಗೆ ಸರ್ಕಾರದ ಮಾಸ್ಟರ್ ಪ್ಲಾನ್: ಸಚಿವ ಮಧು ಬಂಗಾರಪ್ಪ ಸಮ್ಮತಿ, ಶೀಘ್ರವೇ ಮಹತ್ವದ ಸಭೆ

ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆಯಿಂದಾಗಿ ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ತೊಂದರೆಯಾಗುತ್ತಿದೆ. ಇದನ್ನು ನಿವಾರಿಸಲು ಸರ್ಕಾರಿ ಶಾಲಾ ಅವಧಿಯನ್ನು ಬೆಳಗ್ಗೆ 8:30 ರಿಂದ ಮಧ್ಯಾಹ್ನ 3:30 ರವರೆಗೆ ಬದಲಾಯಿಸಲು ಶಾಲಾ ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. ಇದರಿಂದ ಸಂಚಾರ ಸಮಸ್ಯೆ ಕಡಿಮೆಯಾಗಿ, ಪಾಠ ಬೋಧನೆಗೆ ಹೆಚ್ಚು ಸಮಯ ಸಿಕ್ಕು ಶೈಕ್ಷಣಿಕ ಪ್ರಗತಿಯೂ ಸುಧಾರಿಸುತ್ತದೆ. ಈ ಕುರಿತು ಶೀಘ್ರವೇ ಉನ್ನತ ಮಟ್ಟದ ಸಭೆ ನಡೆಯಲಿದೆ.

ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!

ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!

ಪಾರ್ಶ್ವವಾಯು ಪೀಡಿತ ಪತಿ ಮುಬಾರಕ್‌ನನ್ನು ಪತ್ನಿ ಶಹೀನಾ ಬಾನು, ಆಕೆಯ ತಾಯಿ ಹಸೀನಾ ಬಾನು ಹಾಗೂ ಪ್ರಿಯಕರ ನಯೀಮುದ್ದೀನ್ ಖುರೇಶಿ ಸೇರಿ ಕೊಂದಿದ್ದಾರೆ. ಹೃದಯಾಘಾತದಿಂದ ಸಾವು ಎಂದು ಬಿಂಬಿಸಲು ಯತ್ನಿಸಿದ್ದು, ಆವಲಹಳ್ಳಿ ಪೊಲೀಸರ ತನಿಖೆಯಿಂದ ಸತ್ಯ ಬಯಲಾಗಿದೆ. ಪತಿಯ ಅನಾರೋಗ್ಯ ಮತ್ತು ಪ್ರಿಯಕರನೊಂದಿಗೆ ಅಕ್ರಮ ಸಂಬಂಧ ಕೊಲೆಗೆ ಪ್ರಮುಖ ಕಾರಣವಾಗಿದೆ.

ತುಂಗಭದ್ರಾ ಡ್ಯಾಂನಿಂದ ನೀರು ಕಳ್ಳತನ ಮಾಡುತ್ತಿರುವ ಕಾರ್ಖಾನೆಗಳು
ತುಂಗಭದ್ರಾ ಡ್ಯಾಂನಿಂದ ನೀರು ಕಳ್ಳತನ ಮಾಡುತ್ತಿರುವ ಕಾರ್ಖಾನೆಗಳು
ಕರ್ನಾಟಕದ ಹಲವು ಜೈಲುಗಳಲ್ಲಿ ಬರೋಬ್ಬರಿ 410 ಮೊಬೈಲ್‌ ಸೀಜ್
ಕರ್ನಾಟಕದ ಹಲವು ಜೈಲುಗಳಲ್ಲಿ ಬರೋಬ್ಬರಿ 410 ಮೊಬೈಲ್‌ ಸೀಜ್
ತಡರಾತ್ರಿ ಮಳೆಗೆ ತತ್ತರಿಸಿದ ಬೆಂಗಳೂರು!
ತಡರಾತ್ರಿ ಮಳೆಗೆ ತತ್ತರಿಸಿದ ಬೆಂಗಳೂರು!
ವಾರ ಭವಿಷ್ಯ: ಗ್ರಹಗಳ ಸ್ಥಾನಪಲ್ಲಟ, ದ್ವಾದಶ ರಾಶಿಗಳ ಮೇಲೆ ಪ್ರಭಾವ
ವಾರ ಭವಿಷ್ಯ: ಗ್ರಹಗಳ ಸ್ಥಾನಪಲ್ಲಟ, ದ್ವಾದಶ ರಾಶಿಗಳ ಮೇಲೆ ಪ್ರಭಾವ
ರವಿ ಕನ್ಯಾ ರಾಶಿಯಲ್ಲಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದ
ರವಿ ಕನ್ಯಾ ರಾಶಿಯಲ್ಲಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದ
ಮನೆ ಕಟ್ಟುವವರಿಗೆ ಗುಡ್​ನ್ಯೂಸ್: ನಿಮಿಷಗಳಲ್ಲಿ ಸಿಗಲಿದೆ ಪ್ಲಾನ್ ಅಪ್ರೂವಲ್
ಮನೆ ಕಟ್ಟುವವರಿಗೆ ಗುಡ್​ನ್ಯೂಸ್: ನಿಮಿಷಗಳಲ್ಲಿ ಸಿಗಲಿದೆ ಪ್ಲಾನ್ ಅಪ್ರೂವಲ್
7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಶಿಕ್ಷಕರಿಗೆ ನೊಟೀಸ್
7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಶಿಕ್ಷಕರಿಗೆ ನೊಟೀಸ್
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್