ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.
ಪಶು ವೈಧ್ಯಾಧಿಕಾರಿಗಳ ನೇಮಕಾತಿ ಹಗರಣ: ಜ್ಞಾನೇಂದ್ರ ಕುಮಾರ್ ಬಂಧನದ ಬೆನ್ನಲ್ಲೇ ಉಳಿದವರಿಗೂ ಢವಢವ
ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ ಸಂಬಂಧ ಎಕ್ಸಾಂ ಕಂಟ್ರೋಲರ್ ಆಗಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಬಂಧನವಾಗಿದ್ದು, ಸಿಐಡಿ ತನಿಖೆ ತೀವ್ರಗೊಂಡಿದೆ. ಇದರಿಂದ ಕೆಪಿಎಸ್ಸಿ ಮಾಜಿ ಅಧ್ಯಕ್ಷರು, ಅಧಿಕಾರಿಗಳು ಹಾಗೂ ಸದಸ್ಯರಲ್ಲಿ ತೀವ್ರ ಆತಂಕ ಶುರುವಾಗಿದ್ದು, ಕಳೆದ 3 ವರ್ಷಗಳಲ್ಲಿ KPSC ನಡೆಸಿರುವ ನಾಲ್ಕು ಪರೀಕ್ಷೆಗಳ ಬಗ್ಗೆಯೂ ಅಧಿಕಾರಿಗಳು ವಿವರ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.
- Rachappaji Naik S
- Updated on: Aug 30, 2026
- 2:08 pm
ಬೆಂಗಳೂರಿನಲ್ಲಿ ಮಧ್ಯರಾತ್ರಿ ಪೊಲೀಸರಿಂದ ಫೈರಿಂಗ್: ಹಲ್ಲೆಗೆ ಯತ್ನಿಸಿದ ಜಿಶಾನ್ ಕಾಲಿಗೆ ಗುಂಡು!
ಬೆಂಗಳೂರಿನ ಬಂಡೆಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ಮಧ್ಯರಾತ್ರಿ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಮಾರಕಾಸ್ತ್ರದೊಂದಿಗೆ ಓಡಾಡುತ್ತಿದ್ದ ಆರೋಪಿ ಜಿಶಾನ್ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದಾಗ, ಪಿಎಸ್ಐ ಸಚಿನ್ ಆತನ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ. ಗಾಯಾಳು ಪೊಲೀಸ್ ಸಿಬ್ಬಂದಿ ಹಾಗೂ ಆರೋಪಿಯನ್ನು ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ.
- Rachappaji Naik S
- Updated on: Aug 28, 2026
- 12:21 pm
ಬಸವನಗುಡಿಯಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಘರ್ಷಣೆ ಸಂಬಂಧ 3 ಎಫ್ಐಆರ್: 8 ಮಂದಿ ಪೊಲೀಸ್ ವಶಕ್ಕೆ
ಬೆಂಗಳೂರಿನಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಮೂರು ಎಫ್ಐಆರ್ ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಎಂಟು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಪುನೀತ್ ಕೆರೆಹಳ್ಳಿ ಬೆಂಬಲಿಗರ ವಿರುದ್ಧ ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್ ದೂರು ನೀಡಿದ್ದಾರೆ.
- Rachappaji Naik S
- Updated on: Aug 27, 2026
- 7:33 am
ಬೆಂಗಳೂರಿನಲ್ಲಿ 800 ಕೆಜಿಗೂ ಹೆಚ್ಚು ಜಿಲೆಟಿನ್ ಸೀಜ್: ಬಂಡೆ ಒಡೆಯಲು ಅಕ್ರಮ ಸ್ಫೋಟ ಆರೋಪ
ಬೆಂಗಳೂರಿನ ಬೆಳ್ಳಂದೂರು ಠಾಣಾ ವ್ಯಾಪ್ತಿಯ ಭೋಗನಹಳ್ಳಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕಾಮಗಾರಿ ವೇಳೆ ಅಕ್ರಮವಾಗಿ ಜಿಲೆಟಿನ್ ಬಳಸಿ ಕಲ್ಲಿನ ಬಂಡೆ ಸ್ಫೋಟಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಪೊಲೀಸರು 800 ಕೆಜಿಗೂ ಹೆಚ್ಚು ಜಿಲೆಟಿನ್ ವಶಪಡಿಸಿಕೊಂಡಿದ್ದು, ಸ್ಥಳೀಯರ ದೂರಿನ ಬೆನ್ನಲ್ಲೇ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
- Rachappaji Naik S
- Updated on: Aug 17, 2026
- 7:22 am
ಬೆಂಗಳೂರು: ಕರ್ತವ್ಯನಿರತ ಮಹಿಳಾ ಪಿಎಸ್ಐ ಮೇಲೆ ಹಲ್ಲೆ; ಬಾಡಿ ಶೇಮಿಂಗ್ ಮಾಡಿದ ನಾಲ್ವರ ವಿರುದ್ಧ FIR
Bengaluru News: ಬೆಂಗಳೂರಿನ ಕೆ.ಆರ್. ಪುರಂನಲ್ಲಿ ಸಂಚಾರಿ ಮಹಿಳಾ ಪಿಎಸ್ಐ ಮೇಲೆ ಹಲ್ಲೆ ನಡೆಸಿ, ಬಾಡಿ ಶೇಮಿಂಗ್ ಮಾಡಿದ ನಾಲ್ವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಸಂಪೂರ್ಣ ಕೃತ್ಯ ಬಾಡಿವೋರ್ನ್ ಕ್ಯಾಮರಾದಲ್ಲಿ ವಿಡಿಯೋ ಸೆರೆಯಾಗಿದ್ದು, ಸದ್ಯ ಅದನ್ನ ಆಧರಿಸಿ ಎಫ್ಐಆರ್ ದಾಖಲಿಸಲಾಗಿದೆ.
- Rachappaji Naik S
- Updated on: Aug 16, 2026
- 3:11 pm
ಪ್ರಜ್ವಲ್ ರೇವಣ್ಣ ಬ್ಯಾರಕ್ನಲ್ಲಿ ಮೊಬೈಲ್ ಪತ್ತೆ ಪ್ರಕರಣ ತನಿಖೆಗೆ ಡಿಐಜಿ ನೇತೃತ್ವದಲ್ಲಿ ತಂಡ ರಚನೆ
ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿ (CCB) ನಡೆಸಿದ ದಾಳಿಯಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬ್ಯಾರಕ್ನಲ್ಲಿ ಮೊಬೈಲ್ ಫೋನ್ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ತನಿಖೆಗೆ ಕಾರಾಗೃಹ ಮತ್ತು ಸುಧಾರಣೆ ಇಲಾಖೆ ಡಿಐಜಿ ನೇತೃತ್ವದಲ್ಲು ತಂಡ ರಚಿಸಲಾಗಿದೆ. ಪ್ರಜ್ವಲ್ ರೇವಣ್ಣಗೆ ಫೋನ್ ತಂದು ಕೊಟ್ಟವರು ಯಾರು? ಎಷ್ಟು ದಿನಗಳಿಂದ ಮೊಬೈಲ್ ಬಳಕೆ ಮಾಡುತ್ತಿದ್ದಾನೆ? ಎಂಬ ಬಗ್ಗೆ ತನಿಖೆಗೆ ಸೂಚಿಸಲಾಗಿದೆ.
- Rachappaji Naik S
- Updated on: Aug 13, 2026
- 12:20 pm
ಪ್ರಜ್ವಲ್ಗೆ ಜೈಲಲ್ಲಿ ಮೊಬೈಲ್ ಕೊಟ್ಟಿದ್ದು ಅಧಿಕಾರಿಗಳು?: ಹೆತ್ತವರ ಹೆಸರನ್ನು ಶಿವಪ್ಪ, ಪಾರ್ವತಿ ಎಂದು ನೋಟ್ಬುಕ್ನಲ್ಲಿ ಬರೆದಿಟ್ಟಿದ್ದ ಮಾಜಿ ಸಂಸದ!
ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿ ಅಧಿಕಾರಿಗಳು ನಡೆಸಿದ ದಿಢೀರ್ ದಾಳಿಯ ವೇಳೆ, ಅತ್ಯಾಚಾರ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಬ್ಯಾರಕ್ನಲ್ಲಿ ಮೊಬೈಲ್ ಫೋನ್, ಪೆನ್ಡ್ರೈವ್ ಹಾಗೂ ಡೈರಿ/ನೋಟ್ಬುಕ್ ಪತ್ತೆಯಾಗಿರುವ ಪ್ರಕರಣ ಭಾರಿ ಸಂಚಲನ ಮೂಡಿಸಿದೆ. ಹಣ ಪಡೆದು ಮೊಬೈಲ್ ಬಳಕೆಗೆ ಅಧಿಕಾರಿಗಳೇ ಅವಕಾಶ ಮಾಡಿಕೊಟ್ರಾ? ಎಂಬ ಅನುಮಾನ ಉದ್ಭವಿಸಿದೆ.
- Rachappaji Naik S
- Updated on: Aug 13, 2026
- 10:34 am
ಸ್ಟಾಕ್ ಮಾರ್ಕೆಟ್ ಹೆಸರಲ್ಲಿ ಲಕ್ಷಾಂತರ ವಂಚನೆ: ಕನ್ನಡಿಗರನ್ನು ನಿಂದಿಸಿ ಠಾಣೆ ಮುಂಭಾಗವೇ ಕ್ಷಮೆ ಕೇಳಿದ ಮಹಿಳೆ!
ಬೆಂಗಳೂರಿನ ಪೀಣ್ಯದಲ್ಲಿ ಸ್ಟಾಕ್ ಮಾರ್ಕೆಟ್ ಹೆಸರಲ್ಲಿ ಲಕ್ಷಾಂತರ ರೂಪಾಯಿ ವಂಚನೆ ಹಗರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಪ್ರಶ್ನಿಸಲು ಹೋದ ಹೂಡಿಕೆದಾರರಿಗೆ 'ಕನ್ನಡ ಗೊತ್ತಿಲ್ಲ' ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಪ್ರಿಯಾಂಕ ಎಂಬ ಮಹಿಳೆ, ಸಾರ್ವಜನಿಕರ ಆಕ್ರೋಶ ಹಾಗೂ ಪೊಲೀಸ್ ಮಧ್ಯಸ್ಥಿಕೆ ಬಳಿಕ ಪೀಣ್ಯ ಠಾಣೆಯ ಮುಂಭಾಗದಲ್ಲೇ ಕನ್ನಡಿಗರ ಬಹಿರಂಗ ಕ್ಷಮೆಯಾಚಿಸಿದ್ದಾಳೆ. ವಂಚನೆ ಪ್ರಕರಣದ ತನಿಖೆ ಮುಂದುವರಿದಿದೆ.
- Rachappaji Naik S
- Updated on: Aug 7, 2026
- 11:30 am
ಬ್ಯಾಂಕ್ ಸಿಬ್ಬಂದಿಯಿಂದಲೇ ನಕಲಿ ಚಿನ್ನ ಅಡವಿಟ್ಟು 1.5 ಕೋಟಿ ರೂ. ವಂಚನೆ!
ಬೆಂಗಳೂರಿನ ಪೀಣ್ಯ ಇಂಡಸ್ಇಂಡ್ ಬ್ಯಾಂಕ್ನಲ್ಲಿ ಉದ್ಯೋಗಿ ನಾಗೇಶ್ ಎಂಬಾತ ನಕಲಿ ಚಿನ್ನ ಅಡವಿಟ್ಟು 1.53 ಕೋಟಿ ರೂ. ವಂಚನೆ ನಡೆಸಿದ್ದಾನೆ. ಬ್ಯಾಂಕ್ ಆಡಿಟ್ನಲ್ಲಿ ಕೃತ್ಯ ಬಯಲಾಗುತ್ತಿದ್ದಂತೆ, ಹಣ ಹೊಂದಿಸಲು ಉದ್ಯಮಿ ಜಗದೀಶ್ ಎಂಬವರಿಗೆ ಮೋಸ ಮಾಡಿ ತಲೆಮರೆಸಿಕೊಂಡಿದ್ದಾನೆ. ಸದ್ಯ, ಜಗದೀಶ್ ಪೀಣ್ಯ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಯ ಪತ್ತೆಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.
- Rachappaji Naik S
- Updated on: Aug 7, 2026
- 6:00 pm
ಪೀಣ್ಯದಲ್ಲಿ ಪುಡಿ ರೌಡಿಗಳ ಪುಂಡಾಟ, ಕಲ್ಲು ತೂರಿ ಕಾರು ಧ್ವಂಸ!
ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಕರಿಹೋಬನಹಳ್ಳಿಯಲ್ಲಿ ಪುಡಿ ರೌಡಿಗಳ ಹಾವಳಿ ಮಿತಿಮೀರಿದ್ದು, ಸ್ಥಳೀಯರು ಭೀತಿಯಲ್ಲಿ ದಿನ ದೂಡುವಂತಾಗಿದೆ. ಗಣಿ ಮತ್ತು ನಂಜುಂಡ ಎಂಬ ಪುಂಡರು ಗಾಂಜಾ ಹಾಗೂ ಡ್ರಗ್ಸ್ ಸೇವಿಸಿ ಏರಿಯಾದಲ್ಲಿ ವ್ಹೀಲಿಂಗ್ ಮಾಡುತ್ತಾ ಸಾರ್ವಜನಿಕರಿಗೆ ನಿರಂತರ ಕಿರುಕುಳ ನೀಡುತ್ತಿದ್ದಾರೆ. ಕಳೆದ 3ನೇ ತಾರೀಖಿನಂದು ರಾತ್ರಿ ಸ್ಥಳೀಯರು ಇವರ ಪುಂಡಾಟವನ್ನು ಪ್ರಶ್ನಿಸಿದ್ದಕ್ಕೆ, ಆಕ್ರೋಶಗೊಂಡ ಆರೋಪಿಗಳು ಕಾರಿನ ಮೇಲೆ ಕಲ್ಲು ಎತ್ತಿಹಾಕಿ ಗ್ಲಾಸ್ ಒಡೆದು ದಾಂಧಲೆ ನಡೆಸಿದ್ದಾರೆ.
- Rachappaji Naik S
- Updated on: Aug 4, 2026
- 7:57 am
ಬನ್ನೇರುಘಟ್ಟ ರಸ್ತೆಯಲ್ಲಿ ಹೈಡ್ರಾಮಾ: ಕಾರು ಚಾಲಕರ ನಡುವೆ ಇಲಿ-ಬೆಕ್ಕಿನಾಟ!
ನಗರದ ಬನ್ನೇರುಘಟ್ಟ ರಸ್ತೆಯಲ್ಲಿ ರಸ್ತೆ ಅಪಘಾತವೊಂದರ ಹಿನ್ನೆಲೆಯಲ್ಲಿ ಇನ್ನೋವಾ ಮತ್ತು ಸ್ವಿಫ್ಟ್ ಕಾರು ಚಾಲಕರ ನಡುವೆ ಸಿನಿಮಾ ಮಾದರಿಯ ಚೇಸಿಂಗ್ ಹಾಗೂ ಹೈಡ್ರಾಮಾ ನಡೆದಿದೆ. ಸ್ವಿಫ್ಟ್ ಕಾರಿಗೆ ಸ್ಪರ್ಶಿಸಿದ ಇನ್ನೋವಾ ಚಾಲಕ, ಸ್ವಿಫ್ಟ್ ಚಾಲಕನ ಕಾರಿನ ಕೀ ಕಿತ್ತುಕೊಂಡು ಪರಾರಿಯಾಗಲು ಯತ್ನಿಸಿದ್ದಾನೆ. ತಕ್ಷಣ ಜಾಗೃತನಾದ ಸ್ವಿಫ್ಟ್ ಚಾಲಕ, ಬೈಕ್ ಸವಾರನ ನೆರವು ಪಡೆದು ಇನ್ನೋವಾ ಕಾರನ್ನು ಚೇಸ್ ಮಾಡಿ ಹಿಡಿದಿದ್ದಾರೆ. ಈ ವೇಳೆ ಠಾಣೆಗೆ ಬರುವುದಾಗಿ ಹೇಳಿ ಇನ್ನೋವಾ ಚಾಲಕ ಮತ್ತೆ ರ್ಯಾಶ್ ಡ್ರೈವಿಂಗ್ ಮಾಡುತ್ತಾ ಎಸ್ಕೇಪ್ ಆಗಲು ಯತ್ನಿಸಿದಾಗ, ಮತ್ತೆ ಬೈಕ್ನಲ್ಲಿ ಬೆನ್ನಟ್ಟಿ ಕೊನೆಗೂ ಆತನನ್ನು ತಡೆಯಲಾಗಿದೆ. ಹುಳಿಮಾವು ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಈ ಸಂಪೂರ್ಣ ಘಟನೆಯ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
- Rachappaji Naik S
- Updated on: Jul 27, 2026
- 7:46 am
ಅಣ್ಣನ ಜೊತೆ ಮದುವೆ ನಿರಾಕರಿಸಿದ್ದಕ್ಕೆ ತಮ್ಮನಿಂದ ಯುವತಿ ಕೊಲೆ ಕೇಸ್ಗೆ ಬಿಗ್ ಟ್ವಿಸ್ಟ್: ಯುವತಿ ಪಾಲಿಗೆ ಮುಳುವಾದ ತಾಯಿಯ ಚೀಟಿ ವ್ಯವಹಾರ!
ಬೆಂಗಳೂರಿನ ಕೋಡಿಹಳ್ಳಿಯ ಅಮೃತಾ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಮದುವೆ ನಿರಾಕರಣೆ ಮಾತ್ರವಲ್ಲದೆ ಲಕ್ಷಾಂತರ ರೂಪಾಯಿ ಚೀಟಿ ಹಣದ ವಿವಾದವೂ ಕೊಲೆಗೆ ಪ್ರಮುಖ ಕಾರಣಗಳಲ್ಲೊಂದು ಎಂಬ ಆಘಾತಕಾರಿ ಮಾಹಿತಿ ತನಿಖೆಯಲ್ಲಿ ಬಯಲಾಗಿದೆ. ಮೃತ ಯುವತಿ ಅಮೃತಾಳ ತಾಯಿ ಬಳಿ ಸೂರ್ಯ ಸಹೋದರರು ಚೀಟಿ ಹಾಕಿದ್ದರು. ಆದರೆ ಅವರು ಆ ಹಣವನ್ನು ಹಿಂತಿರುಗಿಸದೇ ಇರೋದು ಕೂಡ ಆರೋಪಿ ಸಿಟ್ಟಿಗೆ ಕಾರಣವಾಗಿತ್ತು ಎಂಬುದೀಗ ಗೊತ್ತಾಗಿದೆ.
- Rachappaji Naik S
- Updated on: Jul 19, 2026
- 10:02 am