ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.
ಪೊಲೀಸ್ರು ಹೋದಾಗ ಯುವತಿ ಬಾಲ್ಕನಿಯಿಂದ ಜಿಗಿದ ಕೇಸಿಗೆ ಟ್ವಿಸ್ಟ್: ಸಿಕ್ಕ ಸಾಕ್ಷಿ ಏನು?
ಬೆಂಗಳೂರಿನ ಹೋಟೆಲ್ನಲ್ಲಿ ವೈಷ್ಣವಿ ಎಂಬ ಯುವತಿ ಬಾಲ್ಕನಿಯಿಂದ ಜಿಗಿದು ಗಾಯಗೊಂಡ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಪೊಲೀಸರು ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪ ನಿರಾಧಾರ ಎಂದು ತನಿಖೆಯಿಂದ ಬಯಲಾಗಿದೆ. ಹಾಗಾದರೆ ಹೋಟೆಲ್ನಲ್ಲಿ ನಡೆದ್ದದರು ಏನು? ಪೊಲೀಸರು ನಡೆಸಿದ ತನಿಖೆಯಲ್ಲಿ ಮಹತ್ವದ ವಿಚಾರಗಳು ಬಯಲಾಗಿದೆ. ಈ ಬಗ್ಗೆ ಪೊಲೀಸರೇ ಸ್ಪಷ್ಟನೆ ನೀಡಿದ್ದಾರೆ. ಪೊಲೀಸರಿಗೆ ಸಿಕ್ಕ ಮಾಹಿತಿ ಏನು? ಎಂಬುದು ಇಲ್ಲಿದೆ ನೋಡಿ.
- Rachappaji Naik S
- Updated on: Dec 16, 2025
- 7:55 pm
ಪರಪ್ಪನ ಅಗ್ರಹಾರದಲ್ಲಿ ಅಕ್ರಮ ತಡೆಗೆ ಅಲೋಕ್ ಕುಮಾರ್ ಮಾಸ್ಟರ್ ಪ್ಲ್ಯಾನ್: ಇಲ್ಲಿದೆ ಮಾಹಿತಿ
ಡಿಜಿಪಿ ಅಲೋಕ್ ಕುಮಾರ್ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ಕಠಿಣ ಪರಿಶೀಲನೆ ನಡೆಸಿದ್ದಾರೆ. ಕೈದಿಗಳ ಅಕ್ರಮ ಚಟುವಟಿಕೆಗಳ ವಿರುದ್ಧ 15 ದಿನಗಳ ಗಡುವು ನೀಡಿದ್ದು, ಸೂಕ್ತ ಕ್ರಮಕ್ಕೆ ಸೂಚಿಸಿದ್ದಾರೆ. ದರ್ಶನ್ ಸೇರಿದಂತೆ ವಿಐಪಿ ಕೈದಿಗಳ ಸೆಲ್ಗಳಿಗೂ ಭೇಟಿ ನೀಡಿ ಸೌಲಭ್ಯಗಳ ಕುರಿತು ಮಾಹಿತಿ ಪಡೆದಿದ್ದಾರೆ. ಜೈಲು ಸುಧಾರಣೆಗೆ ಸಿಬ್ಬಂದಿ ಕೊರತೆ ನೀಗಿಸಲು ಎಐ ತಂತ್ರಜ್ಞಾನ ಬಳಕೆಗೆ ಒತ್ತು ನೀಡೋದಾಗಿ ತಿಳಿಸಿದ್ದಾರೆ.
- Rachappaji Naik S
- Updated on: Dec 16, 2025
- 12:03 pm
ಒಂದು ತಿಂಗಳಲ್ಲಿ 8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಪೊಲೀಸರ ಕಳ್ಳಾಟ
ಕಳೆದ ಒಂದು ತಿಂಗಳಲ್ಲಿ ಎಂಟು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಲಂಚ, ದರೋಡೆ ಹಾಗೂ ಹಲ್ಲೆ ಆರೋಪಗಳು ಪೊಲೀಸ್ ಇಲಾಖೆಯ ಮೇಲೆ ಸರಣಿ ಕಪ್ಪು ಚುಕ್ಕೆ ಇಟ್ಟಿವೆ. ಇತ್ತೀಚೆಗೆ ಕುಂದನಹಳ್ಳಿಯಲ್ಲಿ ಹಣಕ್ಕಾಗಿ ಬೆದರಿಸಿ ಯುವತಿ ಆತ್ಮಹತ್ಯೆ ಯತ್ನಕ್ಕೆ ಕಾರಣವಾದ ಪ್ರಕರಣವೂ ಬೆಳಕಿಗೆ ಬಂದಿದೆ. ಈ ಎಲ್ಲಾ ವಿಚಾರಗಳು ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಚರ್ಚೆಗೆ ಬರಲಿವೆ.
- Rachappaji Naik S
- Updated on: Dec 16, 2025
- 10:35 am
ಪಾರ್ಟಿ ಮಾಡುತ್ತಿದ್ದವರ ಬಳಿ ಹಣ ಕೇಳಿದ ಪೊಲೀಸರು; ಹೆದರಿ ಬಿಲ್ಡಿಂಗ್ನಿಂದ ಕೆಳಗೆ ಹಾರಿದ ಯುವತಿ?
ಕಳ್ಳನಿಂದಲೇ ಹಣ ಪಡೆತಂತಹ ಹಲವು ಆರೋಪಗಳು ಬೆಂಗಳೂರು ಪೊಲೀಸರ ವಿರುದ್ಧ ಕೇಳಿ ಬಂದಿತ್ತು. ಇದೇ ಬೆನ್ನಲ್ಲೇ ಬೆಂಗಳೂರು ಪೊಲೀಸರ ವಿರುದ್ಧ ಹಣ ವಸೂಲಿಯ ಗಂಭೀರ ಆರೋಪ ಕೇಳಿಬಂದಿದೆ. ಪಾರ್ಟಿ ನಡೆಸುತ್ತಿದ್ದ ಯುವಕರಿಂದ ಪೊಲೀಸರು ಹಣ ಕೇಳಿದಾಗ, ಭಯಭೀತಳಾದ 21 ವರ್ಷದ ವೈಷ್ಣವಿ ಹೋಟೆಲ್ ಬಾಲ್ಕನಿಯಿಂದ ಜಿಗಿದು ಗಂಭೀರವಾಗಿ ಗಾಯಗೊಂಡಿದ್ದಾಳೆ. ಆಕೆ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದು, ಘಟನೆ ಕುರಿತು ಹೆಚ್ಎಎಲ್ ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ.
- Rachappaji Naik S
- Updated on: Dec 15, 2025
- 10:46 am
ಸಂಜೆಯಾದ್ರೆ ಸಾಕು ಒಂಟಿಯಾಗಿ ಓಡಾಡೋ ಹೆಣ್ಣು ಮಕ್ಕಳೇ ಈತನ ಟಾರ್ಗೆಟ್: ಬೆಂಗಳೂರಿನಲ್ಲೊಬ್ಬ ವಿಚಿತ್ರ ಸೈಕೋ!
ಬೆಂಗಳೂರಿನಲ್ಲಿ ಓಡಾಡುವ ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡುತ್ತಿದ್ದ ವಿಚಿತ್ರ ಸೈಕೋಪಾತ್ನನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಈತ ಒಂದು ತಿಂಗಳಿನಿಂದ ಸಂಜೆ ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ. ಡಿ.2ರಂದೂ ಇದೇ ರೀತಿ ಮಹಿಳೆಯೊಬ್ಬರಿಗೆ ಕಿರುಕುಳ ನೀಡಿದಾಗ, ಮಹಿಳೆಯ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮಹಿಳೆಯರು ಇಂತಹ ಪ್ರಕರಣಗಳ ಬಗ್ಗೆ ತಕ್ಷಣ ದೂರು ನೀಡಲು ಪೊಲೀಸರು ಮನವಿ ಮಾಡಿದ್ದಾರೆ.
- Rachappaji Naik S
- Updated on: Dec 15, 2025
- 8:34 am
New Year: ಬೆಂಗಳೂರಿನಲ್ಲಿ ನ್ಯೂ ಇಯರ್ ಸೆಲೆಬ್ರೆಷನ್ ತಯಾರಿ ಜೋರು, ನಗರದಾದ್ಯಂತ ಪೊಲೀಸರು ಹೈ ಅಲರ್ಟ್
2026ರ ನ್ಯೂ ಇಯರ್ ಸೆಲೆಬ್ರೆಷನ್ಗೆ ದಿನಗಣನೆ ಆರಂಭವಾಗಿದೆ. ಈಗಿನಿಂದಲೇ ಬೆಂಗಳೂರು ನಗರದಲ್ಲಿ ಹೊಸ ವರ್ಷಾಚರಣೆಯ ವೈಬ್ ಶುರುವಾಗಿದೆ. ಹೀಗಾಗಿ ಪೊಲೀಸರು ಕೂಡ ಈಗಿನಿಂದಲೇ ಹೈ ಅಲರ್ಟ್ ಆಗಿದ್ದಾರೆ. ರಾತ್ರಿ ವೇಳೆ ನಗರದಾದ್ಯಂತ ಪೊಲೀಸರ ಸ್ಪೆಷಲ್ ಡ್ರೈವ್ ನಡೆಸಿ ಪಬ್, ರೆಸ್ಟೋರೆಂಟ್ಗಳಲ್ಲಿ ಪರಿಶೀಲನೆ ನಡೆಸಿದ್ದಾರೆ.
- Rachappaji Naik S
- Updated on: Dec 15, 2025
- 7:41 am
ಹೊಸ ವರ್ಷಕ್ಕೆ ಕೌಂಟ್ಡೌನ್: ಬೆಂಗಳೂರಲ್ಲಿ ಅದಾಗಲೇ ಫೀಲ್ಡ್ಗೆ ಇಳಿದಿದ್ದೇಕೆ ಖಾಕಿ?
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಪೂರ್ವಭಾವಿಯಾಗಿ ಪೊಲೀಸರು ಬಿಗಿ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಸಂಭಾವ್ಯ ಅಹಿತಕರ ಘಟನೆಗಳನ್ನು ತಡೆಯಲು ನಗರದ ಎಲ್ಲ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ವಾಹನಗಳ ತಪಾಸಣೆ ನಡೆಸಲಾಗ್ತಿದೆ. ಪಬ್, ರೆಸ್ಟೋರೆಂಟ್ಗಳ ಭದ್ರತೆ, ಸಿಸಿಟಿವಿ ಮತ್ತು ತುರ್ತು ನಿರ್ಗಮನ ವ್ಯವಸ್ಥೆಗಳನ್ನು ಪರಿಶೀಲಿಸಲಾಗುತ್ತಿದೆ.
- Rachappaji Naik S
- Updated on: Dec 14, 2025
- 6:55 am
ಬೆಳ್ಳಂಬೆಳಗ್ಗೆ ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆದು ಕಾಂಪೌಂಡ್ ಗೇಟ್ಗೆ ಗುದ್ದಿದ ಬಿಎಂಟಿಸಿ ಬಸ್
BMTC Bus Accident: ಯಲಹಂಕ ನ್ಯೂಟೌನ್ನಿಂದ ಮೆಜೆಸ್ಟಿಕ್ಗೆ ತೆರಳುತ್ತಿದ್ದ ಬಿಎಂಟಿಸಿ ಬಸ್ಸೊಂದು ಕಾವೇರಿ ಜಂಕ್ಷನ್ನಲ್ಲಿ ಟ್ರಾಕ್ಟರ್ಗೆ ಡಿಕ್ಕಿಹೊಡೆದು ಕೌಂಪೌಂಡ್ಗೆ ನುಗ್ಗಿದ ಕಾರಣ ಅಪಘಾತ ಸಂಭವಿಸಿದೆ. ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಭಾರಿ ಅನಾಹುತ ಸ್ವಲದರಲ್ಲೇ ತಪ್ಪಿದೆ. ಅಪಘಾತದ ಬಗ್ಗೆ ವಿಡಿಯೋ ಸಹಿತ ಮಾಹಿತಿ ಇಲ್ಲಿದೆ.
- Rachappaji Naik S
- Updated on: Dec 13, 2025
- 11:47 am
ಆಳಂದ ಮತಗಳ್ಳತನ ಪ್ರಕರಣ: ಪ್ರಭಾವಿ ನಾಯಕ ಸೇರಿ 7 ಮಂದಿ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದ ಸಿಐಡಿ
ಕಲಬುರಗಿ ಆಳಂದ ಮತಗಳ್ಳತನ ಪ್ರಕರಣದಲ್ಲಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಸಿಐಡಿ ಎಸ್ಐಟಿ ಬೆಂಗಳೂರಿನ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದೆ. 2023ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ 5,994 ಮತದಾರರ ಹೆಸರುಗಳನ್ನು ಅಳಿಸಿದ್ದ ಆರೋಪದ ಮೇಲೆ 22,000 ಪುಟಗಳ ಚಾರ್ಜ್ಶೀಟ್ ಸಲ್ಲಿಸಲಾಗಿದೆ.
- Rachappaji Naik S
- Updated on: Dec 13, 2025
- 12:30 pm
ಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್: ಹೊಸಕೆರೆಹಳ್ಳಿ ನೈಸ್ ರಸ್ತೆಯಲ್ಲಿ ಇಬ್ಬರು ಮಹಿಳಾ ಕಾರ್ಮಿಕರು ಸಾವು
ನೈಸ್ ರಸ್ತೆ ಬದಿ ಹುಲ್ಲು ತೆಗೆಯುತ್ತಿದ್ದ ಮಹಿಳಾ ಕಾರ್ಮಿಕರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಮೃತಪಟ್ಟ ಘಟನೆ ಹೊಸಕೆರೆಹಳ್ಳಿ ನೈಸ್ ರಸ್ತೆಯಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ. ಮೃತರು ಯಾದಗಿರಿ ಮೂಲದವರಾಗಿದ್ದಾರೆ. ಕೆಂಗೇರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಚಾಲಕನ ಪತ್ತೆಗೆ ಕ್ರಮ ಕೈಗೊಳ್ಳಲಾಗುತ್ತಿದೆ.
- Rachappaji Naik S
- Updated on: Dec 13, 2025
- 6:51 am
ಗೋವಾದಲ್ಲಿ ಭೀಕರ ಅಗ್ನಿ ಅವಘಡ: ನೆರೆ ರಾಜ್ಯದ ಘೋರ ದುರಂತದಲ್ಲಿ ಕನ್ನಡಿಗನೂ ಬಲಿ!
ನೆರೆ ರಾಜ್ಯ ಗೋವಾ ಕ್ಲಬ್ನಲ್ಲಿ ಸಂಭವಿಸಿರುವ ಭೀಕರ ಅಗ್ನಿ ಅವಘಡದಲ್ಲಿ ಬರೋಬ್ಬರಿ 25 ಜನರು ಸಜೀವ ದಹನವಾಗಿದ್ದಾರೆ. ಈ ದುರಂತದಲ್ಲಿ ಬೆಂಗಳೂರಿನ ನಿವಾಸಿ ಕೂಡ ಮೃತಪಟ್ಟಿದ್ದಾರೆ. ನಿನ್ನೆ ಐವರು ಸ್ನೇಹಿತರ ಜೊತೆ ಗೋವಾಗೆ ಹೋಗಿದ್ದ ವೇಳೆ ಘಟನೆ ಸಂಭವಿಸಿದೆ. ಇಂದು ರಾತ್ರಿಯೇ ಮೃತದೇಹ ಬೆಂಗಳೂರಿಗೆ ಬರುವ ಸಾಧ್ಯತೆ ಇದೆ.
- Rachappaji Naik S
- Updated on: Dec 7, 2025
- 9:37 pm
ಬೆಂಗಳೂರಿನಲ್ಲಿ ಲವ್ ಜಿಹಾದ್; ದೆಹಲಿ ಕೇಸ್ನಂತೆ ನಿನ್ನನ್ನು ತುಂಡು-ತುಂಡು ಮಾಡ್ತೀನಿ ಎಂದ ಪ್ರೇಮಿ
ಬೆಂಗಳೂರಿನಲ್ಲಿ ಲವ್ ಜಿಹಾದ್ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಹಿಂದೂ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿದ, ಹಣ ದೋಚಿದ ಮುಸ್ಲಿಂ ಯುವಕ ಉಸ್ಮಾನ್ ವಿರುದ್ಧ ಆರೋಪ ಕೇಳಿಬಂದಿದೆ. ಖಾಸಗಿ ಫೋಟೋ ಬಳಸಿ ಬ್ಲಾಕ್ ಮೇಲ್ ಮಾಡಿ, ಮತಾಂತರಕ್ಕೆ ಒತ್ತಡ ಹಾಕಲಾಗಿದೆ ಎಂದು ಯುವತಿ ಆರೋಪಿಸಿದ್ದು, 9 ತಿಂಗಳ ಹಿಂದೆಯೇ ದೂರು ನೀಡಿದರೂ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.
- Rachappaji Naik S
- Updated on: Dec 5, 2025
- 9:06 am