ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.
ಬೆಂಗಳೂರಿನಲ್ಲೋರ್ವ ವಿಕೃತ ಕಾಮುಕ: ಮಹಿಳೆಯರಿಗೆ ಖಾಸಗಿ ಅಂಗ ತೋರಿಸುವುದೇ ಈತನ ಕಾಯಕ
ಆತ ಇನ್ನೂ 21 ವರ್ಷ ಪ್ರಾಯದ ಯುವಕ. ಆದ್ರೆ ವಿಕೃತ ಕಾಮಿಯಾಗಿದ್ದ. ಕಂಡ ಕಂಡ ಮಹಿಳೆಯರಿಗೆ ಖಾಸಗಿ ಅಂಗ ತೋರಿಸಿ ಲೈಂಗಿಕ ಕ್ರಿಯೆಗೆ ಕರೆಯುತ್ತಿದ್ದ. ಏರಿಯಾದಲ್ಲಿ ಈತನ ಆಟಾಟೋಪ ಮಿತಿ ಮೀರಿತ್ತು..ಇದರಿಂದ ಬೇಸತ್ತು ಬುದ್ಧಿ ಹೇಳಲು ಬಂದವರ ಮೇಲೆಯೇ ಅಟ್ಟಹಾಸ ಮೆರೆದಿದ್ದ. ಕಲ್ಲು,ದೊಣ್ಣೆಯಿಂದ ಹಲ್ಲೆ ಮಾಡಿದವನಿಗೆ ಪೊಲೀಸರು ತಕ್ಕ ಶಾಸ್ತಿ ಮಾಡಿದ್ದಾರೆ.
- Rachappaji Naik S
- Updated on: Apr 18, 2025
- 8:35 pm
ಬೆಂಗಳೂರಿನಲ್ಲಿ ಬೀದಿ ಕಾಮಣ್ಣರ ಹಾವಳಿ: ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದವನ ಬಂಧನ
ಸುದ್ದಗುಂಟೆಪಾಳ್ಯದಲ್ಲಿ ಯುವಕನೊಬ್ಬ ಯುವತಿಗೆ ಕಿರುಕುಳ ನೀಡಿದ್ದ ಘಟನೆ ಇಡೀ ಬೆಂಗಳೂರನ್ನೇ ಬೆಚ್ಚಿಬೀಳಿಸಿತ್ತು. ಬಳಿಕ ಕ್ವೀನ್ಸ್ ರಸ್ತೆಯ ರಾಜೀವ್ ಗಾಂಧಿ ಕಾಲೋನಿಯಲ್ಲಿ ಓರ್ವ ಯುವಕ ಮಹಿಳೆಗೆ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದಿದ್ದ. ಹೀಗಿರುವಾಗಲೇ ಪುಲಕೇಶಿನಗರದಲ್ಲೊಂದು ಘಟನೆ ಬೆಳಕಿಗೆ ಬಂದಿದ್ದು, ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆಟೋ ಚಾಲಕನನ್ನು ಬಂಧಿಸಲಾಗಿದೆ.
- Rachappaji Naik S
- Updated on: Apr 18, 2025
- 10:16 am
ಭೋವಿ ನಿಗಮದಲ್ಲಿ ಅಕ್ರಮ: ಮಾಜಿ ವ್ಯಾವಸ್ಥಾಪಕ ನಿರ್ದೇಶಕಿ ಬಂಧನ
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ 90 ಕೋಟಿ ರೂಪಾಯಿಗಳ ಅವ್ಯವಹಾರ ನಡೆದಿರುವ ಆರೋಪದ ಮೇಲೆ ಇಡಿ ತನಿಖೆ ನಡೆಸುತ್ತಿದೆ. ಇದರ ಭಾಗವಾಗಿ ಮಾಜಿ ವ್ಯವಸ್ಥಾಪಕ ನಿರ್ದೇಶಕಿ ಲೀಲಾವತಿ ಅವರನ್ನು ಬಂಧಿಸಲಾಗಿದೆ. ಸಿಐಡಿ ತನಿಖೆಯಲ್ಲೂ ಹಲವು ಅಕ್ರಮಗಳು ಬೆಳಕಿಗೆ ಬಂದಿವೆ. ನಕಲಿ ಸಂಸ್ಥೆಗಳ ಮೂಲಕ ಹಣ ವರ್ಗಾವಣೆ ಮಾಡಲಾಗಿದೆ ಎಂದು ಇಡಿ ಆರೋಪಿಸಿದೆ.
- Rachappaji Naik S
- Updated on: Apr 16, 2025
- 9:23 pm
ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಇನ್ನೂ ನಾಲ್ವರ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ
ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಇನ್ನೂ 4 ಜನರ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ ಮಾಡಿದೆ. ಅಬ್ದುಲ್ ರೆಹಮಾನ್, ನೌಷದ್, ಅಬ್ದುಲ್ ನಾಸೀರ್, ಅತೀಕ್ ಅಹ್ಮದ್ ವಿರುದ್ಧ ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿದೆ. ಕಳೆದ ಜನವರಿಯಲ್ಲಿ ಅರೆಸ್ಟ್ ಆಗಿದ್ದ ಅತೀಕ್ ಅಹ್ಮದ್ ನಾಲ್ವರ ಪೈಕಿ ಮೂವರು ಪಿಎಫ್ಐ ಸಂಘಟನೆಗೆ ಸೇರಿದ್ದವರು. ಪ್ರವೀಣ್ ಹತ್ಯೆ ಕೇಸ್ನಲ್ಲಿ ಆರೋಪಿಗಳ ಸಂಖ್ಯೆ 27ಕ್ಕೇರಿಕೆಯಾಗಿದೆ.
- Rachappaji Naik S
- Updated on: Apr 15, 2025
- 9:38 pm
ಸಂವಿಧಾನಕ್ಕೆ ಅಪಚಾರ ಆರೋಪ: ಸಚಿವ ಕೆಎನ್ ರಾಜಣ್ಣ ವಿರುದ್ಧ ದಾಖಲಾಯ್ತು ದೂರು
ಸದನದಲ್ಲಿ ಹನಿಟ್ರ್ಯಾಪ್ ವಿಚಾರ ಪ್ರಸ್ತಾಪಿಸಿ ಸಂವಿಧಾನಕ್ಕೆ ಅಪಚಾರ ಮಾಡಿದ್ದಾರೆಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಭೀಮಪ್ಪ ಗಡಾದವರು ಸಚಿವ ಕೆ.ಎನ್. ರಾಜಣ್ಣ ಅವರ ವಿರುದ್ಧ ಬೆಂಗಳೂರಿನ ಜೆ.ಸಿ. ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. 48 ಗಂಟೆಯೊಳಗೆ ಎಫ್ಐಆರ್ ದಾಖಲಿಸದಿದ್ದರೆ ಸರ್ಕಾರದ ವಿರುದ್ಧ ಹೋರಾಟ ಮಾಡುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.
- Rachappaji Naik S
- Updated on: Apr 14, 2025
- 10:26 pm
ಬೆಂಗಳೂರು: ಬಿಹಾರದ ಯುವತಿಯ ಅಪಹರಿಸಿ ಅತ್ಯಾಚಾರ, ಇಬ್ಬರ ಬಂಧನ
ಬೆಂಗಳೂರಿನಲ್ಲಿ ಮತ್ತೆ ಕಾಮುಕರು ಅಟ್ಟಹಾಸ ಮೆರೆದಿದ್ದಾರೆ. ನಗರದ ಕೆಆರ್ ಪುರಂ ರೈಲ್ವೆ ನಿಲ್ದಾಣದ ಕಡೆಯಿಂದ ಬೈಕ್ನಲ್ಲಿ ತೆರಳುತ್ತಿದ್ದ ಅಣ್ಣ ತಂಗಿಯನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು, ಅಣ್ಣನ ಮೇಲೆ ಹಲ್ಲೆ ನಡೆಸಿದ್ದಲ್ಲದೆ, ಯುವತಿಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ್ದಾರೆ. ಘಟನೆ ಸಂಬಂಧ ಆರೋಪಿಗಳ ಬಂಧನವಾಗಿದೆ. ಅತ್ಯಾಚಾರಕ್ಕೊಳಗಾದ ಯುವತಿ ಬಿಹಾರ ಮೂಲದವರು ಎಂಬುದು ಗೊತ್ತಾಗಿದೆ.
- Rachappaji Naik S
- Updated on: Apr 3, 2025
- 9:13 am
ನಟಿ ರನ್ಯಾ ರಾವ್ಗೆ ಬಿಗ್ ಶಾಕ್: ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಲು ಪತಿ ಜತಿನ್ ಸಿದ್ಧತೆ
ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜೈಲುಪಾಲಾಗಿರುವ ನಟಿ ರನ್ಯಾಗೆ ಇದೀಗ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ಪತಿ ಜತಿನ್ ಹುಕ್ಕೇರಿ ರನ್ಯಾಳಿಂದ ವಿಚ್ಛೇದನ ಪಡೆಯಲು ಕೋರ್ಟ್ಗೆ ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಮದುವೆ ಬಳಿಕ ನಿರಂತರ ಸಮಸ್ಯೆಗಳನ್ನು ಎದುರಿಸುತ್ತಿರುವ ಜತಿನ್, ರನ್ಯಾಳಿಂದ ಅಂತರ ಕಾಯ್ದುಕೊಂಡಿದ್ದಾರೆ.
- Rachappaji Naik S
- Updated on: Apr 2, 2025
- 12:20 pm
ವಿನಯ್, ರಜತ್ಗೆ ಹೆಚ್ಚಿದ ಸಂಕಷ್ಟ; ತಡರಾತ್ರಿ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್
ಬಿಗ್ ಬಾಸ್ ಮಾಜಿ ಸ್ಪರ್ಧಿಗಳು ರಜತ್ ಕಿಶನ್ ಮತ್ತು ವಿನಯ್ ಗೌಡ ಅವರು ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣಕ್ಕಾಗಿ ಬಂಧನಕ್ಕೊಳಗಾಗಿದ್ದಾರೆ. ಮಾರ್ಚ್ 25 ರಂದು ಬಂಧಿಸಲ್ಪಟ್ಟ ಅವರಿಗೆ ಒಂದು ದಿನದ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮಚ್ಚು ನಾಪತ್ತೆಯಾಗಿರುವುದರಿಂದ ಆರೋಪಿಗಳನ್ನು ಒಂದು ವಾರ ಪೊಲೀಸ್ ಕಸ್ಟಡಿಗೆ ಕೇಳುತ್ತಿದ್ದಾರೆ.
- Rachappaji Naik S
- Updated on: Mar 26, 2025
- 7:08 am
ಮಧ್ಯರಾತ್ರಿ ಬಿಡುಗಡೆ ಆದ ವಿನಯ್, ರಜತ್; ಮಾರ್ಮಿಕ ಪೋಸ್ಟ್ ಹಾಕಿದ ಬಿಗ್ ಬಾಸ್ ‘ಆನೆ’
ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ವಿನಯ್ ಗೌಡ ಮತ್ತು ರಜತ್ ಕಿಶನ್ ಅವರು ಮಚ್ಚಿನೊಂದಿಗೆ ರೀಲ್ಸ್ ಮಾಡಿದ್ದಕ್ಕಾಗಿ ಬಂಧಿಸಲ್ಪಟ್ಟರು. ಮಾರ್ಚ್ 24 ರಂದು ಬಂಧಿಸಲ್ಪಟ್ಟ ಅವರು, ನೋಟೀಸ್ ನೀಡಿದ ಬಳಿಕ ಅದೇ ದಿನ ರಾತ್ರಿ ಬಿಡುಗಡೆಯಾದರು. ಆದರೆ, ಅವರು ಮತ್ತೆ ವಿಚಾರಣೆಗೆ ಹಾಜರಾಗಬೇಕಾಗಿದೆ.
- Rachappaji Naik S
- Updated on: Mar 25, 2025
- 7:35 am
ಬೆಂಗಳೂರು: ಲಕ್ಕಿ ಭಾಸ್ಕರ್ ಸಿನಿಮಾ ಮಾದರಿಯಲ್ಲಿ ವೃದ್ಧೆಗೆ 50 ಲಕ್ಷ ರೂ. ವಂಚಿಸಿದ ಬ್ಯಾಂಕ್ ಡೆಪ್ಯೂಟಿ ಮ್ಯಾನೇಜರ್
ಬೆಂಗಳೂರಿನ ಗಿರಿನಗರದಲ್ಲಿ ಖಾಸಗಿ ಬ್ಯಾಂಕ್ ಉಪ ವ್ಯವಸ್ಥಾಪಕಿ ಮೇಘನಾ ವೃದ್ಧೆಯೊಬ್ಬರಿಗೆ 50 ಲಕ್ಷ ರೂಪಾಯಿ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. "ಲಕ್ಕಿ ಭಾಸ್ಕರ್" ಚಲನಚಿತ್ರದ ಮಾದರಿಯಲ್ಲಿ ನಡೆದ ಈ ವಂಚನೆಯಲ್ಲಿ ಮೇಘನಾ ಸೇರಿದಂತೆ ನಾಲ್ವರನ್ನು ಗಿರಿನಗರ ಪೊಲೀಸರು ಬಂಧಿಸಿದ್ದಾರೆ. ಆರ್ಟಿಜಿಎಸ್ ಮೂಲಕ ಹಣ ವರ್ಗಾವಣೆ ಮಾಡಿ ಮೋಸ ಮಾಡಲಾಗಿದೆ. ಪೊಲೀಸರು ವಶಪಡಿಸಿಕೊಂಡ ಹಣವನ್ನು ವೃದ್ಧೆಯ ಕುಟುಂಬಕ್ಕೆ ಹಿಂತಿರುಗಿಸುವ ಪ್ರಯತ್ನ ನಡೆಸುತ್ತಿದ್ದಾರೆ.
- Rachappaji Naik S
- Updated on: Mar 16, 2025
- 7:58 am
ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆ ವೈದ್ಯೆಯಿಂದ ಅತ್ತೆ-ಮಾವನ ಮೇಲೆ ಹಲ್ಲೆ
ವಿಕಟೋರಿಯಾ ಆಸ್ಪತ್ರೆಯ ವೈದ್ಯೆ ಪ್ರಿಯದರ್ಶಿನಿ ಅವರು ತಮ್ಮ ವೃದ್ಧ ಅತ್ತೆ ಮತ್ತು ಮಾವರ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ವೈದ್ಯೆ ಪ್ರಿಯದರ್ಶಿನಿ ಅತ್ತೆ-ಮಾವನ ಮೇಲೆ ಹಲ್ಲೆ ಮಾಡಿರುವ ವಿಡಿಯೋ ವೈರಲ್ ಆಗಿದೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ವೈದ್ಯೆಯವರಿಗೆ ನೋಟಿಸ್ ಜಾರಿಗೊಳಿಸಿದ್ದಾರೆ.
- Rachappaji Naik S
- Updated on: Apr 11, 2025
- 5:48 pm
ಬೆಂಗಳೂರಿನಲ್ಲಿ ಬಾಸ್ಕೆಟ್ ಬಾಲ್ ಆಟಗಾರ್ತಿ ಸೋನಿಯಾ ನಿಗೂಢ ಸಾವು
ಬೆಂಗಳೂರಿನಲ್ಲಿ ಬಾಸ್ಕೆಟ್ ಬಾಲ್ ಕೋಚ್ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಕಳೆದ ಏಳೆಂಟು ವರ್ಷಗಳಿಂದ ಬಾಸ್ಕೆಟ್ ಬಾಲ್ ಕ್ರೀಡೆಯಲ್ಲಿ ಗುರುತಿಸಿಕೊಂಡು ಸ್ಟೇಟ್, ನ್ಯಾಷನಲ್ ಲೆವೆಲ್ ಬಾಸ್ಕೆಟ್ ಬಾಲ್ ಟೂರ್ನಿಗಳಲ್ಲಿ ಭಾಗಿಯಾಗಿದ್ದ ಸೋನಿಯಾ ಸಾವನ್ನಪ್ಪಿದ್ದು, ಈ ಸಾವಿನ ಹಿಂದೆ ಹಲವು ಅನುಮಾನಗಳು ವ್ಯಕ್ತವಾಗಿವೆ. ಕೆಲವರು ಆತ್ಮಹತ್ಯೆ ಎಂದು ಹೇಳುತ್ತಿದ್ದರೆ, ಕುಟುಂಬಸ್ಥರು ಮಾತ್ರ ಬಾತ್ ರೂಮ್ನಲ್ಲಿ ಬಿದ್ದು ಸಾವನ್ನಪ್ಪಿದ್ದಾಳೆ ಎನ್ನುತ್ತಿದ್ದಾರೆ.
- Rachappaji Naik S
- Updated on: Mar 13, 2025
- 3:47 pm