ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.
ಕಾವ್ಯಾ ಕಳ್ಳತನ ಮಾಡಿದ್ದಾಳೆ, ಮನೆಯಿಂದ ಓಡಿಸಲು ಇಷ್ಟೆಲ್ಲಾ ನಾಟಕ; ನಟಿ ಮೇಲೆಯೇ ಕುಟುಂಬದವರ ಆರೋಪ
ನಟಿ ಕಾವ್ಯಾ ಗೌಡ ಕುಟುಂಬ ಕಲಹದ ಕುರಿತು ಸೋಮಶೇಖರ್ ಸಹೋದರನ ಪತ್ನಿ ಪ್ರೇಮಾ ತಿರುಗೇಟು ನೀಡಿದ್ದಾರೆ. ಕಾವ್ಯಾ ಆಸ್ತಿ ಕಬಳಿಸಲು ಈ ನಾಟಕವಾಡುತ್ತಿದ್ದಾರೆ, ಹಲ್ಲೆ ಆರೋಪ ಸುಳ್ಳು ಎಂದಿದ್ದಾರೆ. ನಮ್ಮ ಮನೆಯಿಂದ ವಸ್ತು ಕದ್ದಿದ್ದಾರೆ, ಕಿರುಕುಳ ನೀಡಿದ್ದಾರೆ. ಸೋಮಶೇಖರ್ ನನ್ನ ತಂದೆಗೆ ಅವಾಚ್ಯವಾಗಿ ಬೈದಿದ್ದಾರೆ ಎಂದು ಆರೋಪಿಸಿದ್ದಾರೆ.
- Rachappaji Naik S
- Updated on: Jan 27, 2026
- 3:10 pm
ಪತ್ನಿ ಎಲ್ಲಿದ್ದರೂ ಪತಿಗೆ ಗೊತ್ತಾಗ್ತಿತ್ತು ಲೊಕೇಷನ್! ಹೆಂಡ್ತಿ ಮೊಬೈಲ್ಲಿ ಮಾಲ್ವೇರ್ ಅಳವಡಿಸಿದ್ದಾತನ ವಿರುದ್ಧ ಪೊಲೀಸರಿಗೆ ದೂರು
ಬೆಂಗಳೂರಿನಲ್ಲಿ, ಪ್ರತ್ಯೇಕವಾಗಿದ್ದ ಪತ್ನಿಯ ಮೊಬೈಲ್ನಲ್ಲಿ ಪತಿ ಮಾಲ್ವೇರ್ ಆ್ಯಪ್ ಅಳವಡಿಸಿ ಆಕೆಯ ಚಲನವಲನಗಳನ್ನು ಟ್ರ್ಯಾಕ್ ಮಾಡುತ್ತಿದ್ದುದು ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಮಗು ನೋಡುವ ನೆಪದಲ್ಲಿ ಬರುತ್ತಿದ್ದ ಪತಿ ಮೊಬೈಲ್ನಲ್ಲಿ ಮಾಲ್ವೇರ್ ಅಳವಡಿಸಿದ್ದ. ಈ ಖಾಸಗಿತನದ ಹಕ್ಕಿನ ಉಲ್ಲಂಘನೆಯನ್ನು ಪತ್ತೆ ಹಚ್ಚಿದ ಪತ್ನಿ, ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
- Rachappaji Naik S
- Updated on: Jan 27, 2026
- 12:59 pm
ಸಂಬಂಧಿಯಿಂದಲೇ ನಟಿ ಕಾವ್ಯಾ ಗೌಡಗೆ ಬಂತು ರೇಪ್ ಬೆದರಿಕೆ; ಪತಿಯ ಮೇಲೆ ಹಲ್ಲೆ
ಕಾವ್ಯಾ ಗೌಡ ಪತಿ ಸೋಮಶೇಖರ್ ಮೇಲೆ ಕುಟುಂಬ ಕಲಹದ ಹಿನ್ನೆಲೆಯಲ್ಲಿ ಹಲ್ಲೆ ನಡೆದಿದೆ. ನಟಿ ಬಣ್ಣದ ಲೋಕದಿಂದ ದೂರವಿದ್ದರೂ, ಅವರ ಜನಪ್ರಿಯತೆಯನ್ನು ಸಹಿಸದೆ ಈ ಘಟನೆ ನಡೆದಿದೆ ಎಂದು ಆರೋಪಿಸಲಾಗಿದೆ. ಸಂಬಂಧಿ ರವಿಕುಮಾರ್ ಸೋಮಶೇಖರ್ ಮೇಲೆ ಹಲ್ಲೆ ನಡೆಸಿ, ಕಾವ್ಯಾ ಅವರಿಗೆ ಬೆದರಿಕೆ ಹಾಕಿದ್ದಾರೆ.
- Rachappaji Naik S
- Updated on: Jan 27, 2026
- 10:50 am
ವಿದೇಶಿ ಪ್ರಜೆಗಳಿಗೆ ಮನೆ ಬಾಡಿಗೆಗೆ ಕೊಡುವವರಿಗೆ ಪೊಲೀಸರಿಂದ ವಾರ್ನಿಂಗ್!
ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಡ್ರಗ್ಸ್ ದಂಧೆ ಮತ್ತು ಅಕ್ರಮ ಚಟುವಟಿಕೆಗಳಲ್ಲಿ ವಿದೇಶಿ ಪ್ರಜೆಗಳ ಕೈವಾಡ ಹೆಚ್ಚಾದ ಕಾರಣ, ಪೊಲೀಸರು ಮನೆ ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ. ವಿದೇಶಿಗರಿಗೆ ಮನೆ ಬಾಡಿಗೆ ನೀಡುವ ಮುನ್ನ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿ, ಫಾರ್ಮ್-16 ಸಲ್ಲಿಸುವುದು ಕಡ್ಡಾಯ. ಈ ನಿಯಮ ಉಲ್ಲಂಘಿಸಿದರೆ ಮನೆ ಮಾಲೀಕರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ವಾರ್ನಿಂಗ್ ಕೊಟ್ಟಿದ್ದಾರೆ.
- Rachappaji Naik S
- Updated on: Jan 27, 2026
- 10:30 am
ಹಫ್ತಾ ವಸೂಲಿ ಮಾಡುತ್ತ ಏರಿಯಾದಲ್ಲಿ ಹವಾ, ಮಸೀದಿ ಪಕ್ಕದ ಜಾಗಕ್ಕಾಗಿ ಬಿತ್ತು ಹೆಣ
ಆತ ನಟೋರಿಯಸ್ ರೌಡಿಶೀಟರ್. ಏರಿಯಾದಲ್ಲಿ ಹಫ್ತಾ ವಸೂಲಿ ಮಾಡುತ್ತಾ ಹವಾ ಇಟ್ಟಿದ್ದ.ಗುಜರಿ ಅಂಗಡಿಯವರನ್ನು ಬಿಡನೆ ಗುನ್ನ ಇಡುತ್ತಿದ್ದ. ಅಲ್ಲದೇ ರಿಯಲ್ ಎಸ್ಟೇಟ್ ದಂಧೆ ಮಾಡುತ್ತಾ ಜಾಗ ಕಬಳಿಸಲು ಹೊಂಚು ಹಾಕಿದ್ದ.ಇದರಿಂದ ಬೇಸತ್ತ ಏರಿಯಾ ಹುಡುಗ್ರು ಗ್ಯಾರೆಜ್ ನಲ್ಲಿ ಕೂತು ಸ್ಕೆಚ್ ಹಾಕಿ ನಟೋರಿಯಸ್ ರೌಡಿಶೀಟರ್ ನನ್ನೇ ಹತ್ಯೆಗೈದಿದ್ದಾರೆ.
- Rachappaji Naik S
- Updated on: Jan 26, 2026
- 10:21 pm
ಟೆಕ್ಕಿ ಶರ್ಮಿಳಾ ಕೊಲೆ ರಹಸ್ಯ ಬಯಲು! ರೇಪ್ ಮಾಡಲು ಯತ್ನಿಸಿದ್ದಾಗಿ ಒಪ್ಪಿಕೊಂಡ ಆರೋಪಿ
ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಟೆಕ್ಕಿ ಶರ್ಮಿಳಾ ಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ನೆರೆಮನೆಯವನಾದ ಕರ್ನಲ್, ಶರ್ಮಿಳಾರನ್ನು ಅತ್ಯಾಚಾರ ಮಾಡಲು ಯತ್ನಿಸಿ, ನಂತರ ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಒಂದುವರೆ ತಿಂಗಳಿಂದ ಆಕೆಯನ್ನು ಹಿಂಬಾಲಿಸುತ್ತಿದ್ದ ಆರೋಪಿ, ಹತ್ಯೆ ನಂತರ ಬೆಂಕಿ ಹಚ್ಚಿ ಅಗ್ನಿಅವಘಡದಿಂದ ಸಾವು ಸಂಭವಿಸಿದೆ ಎಂದು ಬಿಂಬಿಸಲು ಯತ್ನಿಸಿದ್ದ. ಆದರೆ ನಡೆದಿದ್ದೇನು ಎಂಬುದನ್ನು ತನಿಖೆ ವೇಳೆ ಬಾಯ್ಬಿಟ್ಟಿದ್ದಾನೆ.
- Rachappaji Naik S
- Updated on: Jan 26, 2026
- 12:57 pm
Winzo game Fraud: ಎಐ ಬಳಸಿ 700 ಕೋಟಿ ರೂ. ವಂಚನೆ! ವಿಂಜೋ ಗೇಮಿಂಗ್ ವಿರುದ್ಧ ಇ.ಡಿ ಚಾರ್ಜ್ಶೀಟ್
ವಿಂಜೋ ಗೇಮಿಂಗ್ ಆ್ಯಪ್ ಅಕ್ರಮ ಹಣಕಾಸು ಮತ್ತು ವಂಚನೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ತನಿಖೆ ಪೂರ್ಣಗೊಳಿಸಿ ಚಾರ್ಜ್ಶೀಟ್ ಸಲ್ಲಿಸಿದೆ. 3,522 ಕೋಟಿ ರೂ. ಅಕ್ರಮ ಹಣಕಾಸು ವಹಿವಾಟು ಹಾಗೂ ಬಳಕೆದಾರರಿಗೆ 734 ಕೋಟಿ ರೂ. ವಂಚಿಸಿರುವುದು ಪತ್ತೆಯಾಗಿದೆ. ಎಐ ತಂತ್ರಜ್ಞಾನ ಬಳಸಿ ಗ್ರಾಹಕರಿಗೆ ಕೋಟಿ ರೂಗಳ ವಂಚನೆ ಮಾಡಲಾಗಿದೆ ಎಂದು ತನಿಖೆ ವೇಳೆ ತಿಳಿದುಬಂದಿದ್ದು, 690 ಕೋಟಿ ರೂ. ಆಸ್ತಿ ಜಪ್ತಿ ಮಾಡಲಾಗಿದೆ.
- Rachappaji Naik S
- Updated on: Jan 26, 2026
- 10:02 am
ಕಳ್ಳರನ್ನು ಬಂಧಿಸಿ ಠಾಣೆಗೆ ಕರೆತಂದ ಪೊಲೀಸರಿಗೆ ಕಾದಿತ್ತು ಶಾಕ್! ಕಳ್ಳತನ ಮಾಡಿದ್ದು ಅವನಲ್ಲ ಅವಳು!
ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸರು ಹುಡುಗರ ವೇಷದಲ್ಲಿ ಹಗಲು ಹೊತ್ತಿನಲ್ಲೇ ಮನೆಗಳಿಗೆ ಕನ್ನ ಹಾಕುತ್ತಿದ್ದ ಇಬ್ಬರು ಕಳ್ಳಿಯರನ್ನು ಬಂಧಿಸಿದ್ದಾರೆ. ಈ ಯುವತಿಯರು ಬೈಕ್ನಲ್ಲಿ ಓಡಾಡಿಕೊಂಡು ಮಾಲೀಕರಿಲ್ಲದ ಮನೆಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದರು. ಸಿಸಿಟಿವಿ ದೃಶ್ಯಾವಳಿ ಆಧರಿಸಿ ಪೊಲೀಸರು ಇವರನ್ನು ಬಂಧಿಸಿದ್ದು, ಠಾಣೆಗೆ ಕರೆತಂದ ಪೊಲೀಸರು ಶಾಕ್ ಆಗಿದ್ದಾರೆ.
- Rachappaji Naik S
- Updated on: Jan 16, 2026
- 12:46 pm
ಕಾರುಣ್ಯ ರಾಮ್ ಮುಖ ನೋಡಿ ಸಾಲ ಕೊಡಿ ಎಂದಿದ್ದರು, ಈಗ ಧಮ್ಕಿ ಹಾಕ್ತಾರೆ: ಪ್ರಜ್ವಲ್
ಕಾರುಣ್ಯ ರಾಮ್ ಸಹೋದರಿ ಸಮೃದ್ಧಿ ರಾಮ್ ಅವರು ಸಾಲದ ಸುಳಿಗೆ ಸಿಲುಕಿದ್ದಾರೆ. ಸಾಲ ಕೊಟ್ಟವರು ಹಣ ವಾಪಸ್ ಕೇಳಿದ್ದಕ್ಕೆ ಕಾರುಣ್ಯ ರಾಮ್ ಈಗ ಪೊಲೀಸರಿಗೆ ದೂರು ನೀಡಿದ್ದಾರೆ. ಸಮೃದ್ಧಿ ಅವರಿಗೆ ಸಾಲ ನೀಡಿರುವ ಪ್ರಜ್ವಲ್ ಟಿವಿ9 ಜತೆ ಮಾತಾಡಿ ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ.
- Rachappaji Naik S
- Updated on: Jan 15, 2026
- 3:03 pm
ಕೊಲೆ ಪ್ರಕರಣಗಳನ್ನು ಭೇದಿಸುವಲ್ಲಿ ಕಿಂಗ್ ಈ ಡಿಟೆಕ್ಟಿವ್ ಡಾಗ್ ಜಿನ್ನಿ! ಬೆಂಗಳೂರು ಪೊಲೀಸರ ಹೆಮ್ಮೆಯ ಶ್ವಾನವಿದು
ಬೆಂಗಳೂರು ಪೊಲೀಸರ ಪತ್ತೆದಾರಿ ಶ್ವಾನವೊಂದು ಇದೀಗ ಎಲ್ಲರ ಗಮನ ಸೆಳೆಯುತ್ತಿದೆ. ಕೊಲೆ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಕಿಂಗ್ ಆಗಿರುವ ಈ ‘ಜಿನ್ನಿ’, ಕಳೆದ ತಿಂಗಳಷ್ಟೇ ಮಗು ನಾಪತ್ತೆ ಪ್ರಕರಣ ಒಂದನ್ನು ಸುಲಭವಾಗಿ ಭೇದಿಸಲು ಪೊಲೀಸರಿಗೆ ನೆರವಾಗಿ ಗಮನ ಸೆಳೆದಿತ್ತು. ಬೆಂಗಳೂರು ಪೊಲೀಸರ ಅಚ್ಚುಮೆಚ್ಚಿನ ಶ್ವಾನ ಜಿನ್ನಿ ಕುರಿತು ಇಲ್ಲಿದೆ ಮಾಹಿತಿ.
- Rachappaji Naik S
- Updated on: Jan 10, 2026
- 11:34 am
ವಿಚ್ಛೇದಿತ ಮಹಿಳೆಗೆ ಬಾಳು ಕೊಡುವುದಾಗಿ ಮಗು ಮಾಡಿ, 36 ಲಕ್ಷ ರೂ. ತೆಗೆದುಕೊಂಡು ವ್ಯಕ್ತಿ ಪರಾರಿ!
ವಿಚ್ಛೇದಿತ ಮಹಿಳೆಯನ್ನು ಮದುವೆಯಾದ ವ್ಯಕ್ತಿಯೊಬ್ಬ ಮಗು ಜನಿಸಿದ ಬಳಿಕ 36 ಲಕ್ಷ ರೂ. ವಂಚಿಸಿ ಪರಾರಿಯಾದ ಘಟನೆ ಬೆಂಗಳೂರಿನ ಬನಶಂಕರಿಯಲ್ಲಿ ನಡೆದಿದೆ. ಘಟನೆ ಸಂಬಂಧ ಮಹಿಳೆ ಪೊಲೀಸರ ವಿರುದ್ಧವೂ ಗಂಭೀರ ಆರೋಪ ಮಾಡಿದ್ದಾರೆ. ಸದ್ಯ ಕೊನೆಗೂ ಮಹಿಳೆಯ ದೂರಿನ ಮೇರೆಗೆ ಎಫ್ಐಆರ್ ದಾಖಲಾಗಿದೆ.
- Rachappaji Naik S
- Updated on: Jan 10, 2026
- 9:03 am
ಬಳ್ಳಾರಿ ಬ್ಯಾನರ್ ಗಲಾಟೆ ಕೇಸ್ ತನಿಖೆ ಹೊಣೆ ಸಿಐಡಿಗೆ: ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆ ವೇಳೆ ಗುಂಡಿನ ದಾಳಿ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲಾಗಿದೆ. ಈ ಸಂಬಂಧ ಎಲ್ಲಾ ಕೇಸ್ ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಗಲಾಟೆ ಪ್ರಕರಣದ ತನಿಖೆ ಬಗ್ಗೆ ಶಾಸಕ ಜನಾರ್ದನ ರೆಡ್ಡಿ ಭಾರಿ ಅಸಮಾಧಾನ ಹೊರ ಹಾಕಿದ್ದರು. ಘಟನೆ ನಡೆದು 9 ದಿನಗಳಾದರೂ ಒಬ್ಬ ಗನ್ಮ್ಯಾನ್ ಮಾತ್ರ ಬಂಧನ ಮಾಡಲಾಗಿದೆ. ಭರತ್ ರೆಡ್ಡಿಯನ್ನು ಯಾಕೆ ಬಂಧಿಸಿಲ್ಲ ಎಂದು ರೆಡ್ಡಿ ಪ್ರಶ್ನಿಸಿದ್ದರು. ಜೊತೆಗೆ ಕೇಸ್ ತನಿಖೆ ಸಿಬಿಐನಿಂದ ನಡೆಯಬೇಕು ಎಂದಿದ್ದರು.
- Rachappaji Naik S
- Updated on: Jan 9, 2026
- 7:55 pm