ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.
ಬೆತ್ತಲೆ ಓಡಾಟ, ಫೋನ್ ನೋಡಿ ಲೈಂಗಿಕ ಕ್ರಿಯೆಗೆ ಒತ್ತಾಯ: ಸೈಕೋ ಪತಿ ಕಾಟಕ್ಕೆ ಪತ್ನಿ ಕಂಗಾಲು
ಪತಿಯ ವಿಚಿತ್ರ ವರ್ತನೆ ಮತ್ತು ಲೈಂಗಿಕ ಕಿರುಕುಳದಿಂದ ಬೇಸತ್ತ ಪತ್ನಿ ಪೊಲೀಸರಿಗೆ ದೂರು ನೀಡಿರುವ ಪ್ರಸಂಗ ಬೆಂಗಳೂರಲ್ಲಿ ನಡೆದಿದೆ. ಮದುವೆಯ ನಂತರ ಪತಿ ಸೈಕೋ ರೀತಿ ವರ್ತಿಸುತ್ತಿದ್ದು, ಫೋನ್ ನೋಡಿ ಲೈಂಗಿಕ ಕ್ರಿಯೆಗೆ ಒತ್ತಾಯಿಸುತ್ತಾನೆ. ಮನೆಯವರ ಮುಂದೆಯೇ ಬೆತ್ತಲೆಯಾಗಿ ಓಡಾಡಿ ಮುಜುಗರ ಉಂಟುಮಾಡುತ್ತಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾಳೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- Rachappaji Naik S
- Updated on: Dec 30, 2025
- 1:06 pm
ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ
ಬೆಂಗಳೂರಿನ ಕುಂದಲಹಳ್ಳಿಯ ಸೆವೆನ್ ಹಿಲ್ಸ್ ಶ್ರೀ ಸಾಯಿ ಪಿಜಿಯಲ್ಲಿ ಸಂಜೆ 6 ಗಂಟೆಗೆ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಮೂವರು ಗಾಯಗೊಂಡಿದ್ದಾರೆ. ಹೆಚ್ಎಎಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಪಿಜಿಗಳಲ್ಲಿನ ಸುರಕ್ಷತಾ ಲೋಪಗಳ ಬಗ್ಗೆ ತೀವ್ರ ಕಳವಳ ವ್ಯಕ್ತವಾಗಿದೆ.
- Rachappaji Naik S
- Updated on: Dec 29, 2025
- 9:29 pm
ಡ್ರಗ್ ಫ್ಯಾಕ್ಟರಿ ಪತ್ತೆ ಮಾಡಿದ ಮಹಾ ಪೊಲೀಸ್: ಬೆಂಗಳೂರಿನ ಮೂವರು ಇನ್ಸ್ಪೆಕ್ಟರ್ಗಳ ತಲೆದಂಡ
ಮಹಾರಾಷ್ಟ್ರ ಪೊಲೀಸರು ಬಂದು ಬೆಂಗಳೂರಿನಲ್ಲಿದ್ದ ಡ್ರಗ್ಸ್ ಫ್ಯಾಕ್ಟರಿಯನ್ನು ಪತ್ತೆ ಮಾಡಿದ್ದಾರೆ. ಫ್ಯಾಕ್ಟರಿ ತಯಾರಿಸಲು ದಂಧೆಕೋರರು ಆಲ್ ಇಂಡಿಯಾ ಪ್ಲಾನ್ ಮಾಡಿದ್ದರಂತೆ. ಕೇವಲ 8 ಕಿ.ಮೀ ವ್ಯಾಪ್ತಿಯಲ್ಲಿ ದಂಧೆ ನಡೆಸಲು ಪಕ್ಕಾ ಸೆಟಪ್ ಮಾಡಿದ್ದರು. ಇದರ ಮಧ್ಯೆ ಡ್ರಗ್ಸ್ ದಂಧೆಯನ್ನು ಭೇದಿಸಿದ್ದಾರೆ. ಈ ಸಂಬಂಧ ಬೆಂಗಳೂರಿನ ವಿವಿಧ ಪೊಲೀಸ್ ಠಾಣೆ ಮೂವರು ಇನ್ಸ್ಪೆಕ್ಟರ್ಗಳನ್ನು ಅಮಾನತು ಮಾಡಲಾಗಿದೆ.
- Rachappaji Naik S
- Updated on: Dec 29, 2025
- 9:06 pm
ಮದುವೆಯಾಗು ಎಂದಿದ್ದಕ್ಕೆ ಕತ್ತು ಸೀಳಿ ಕೊಂದ ಪ್ರಿಯಕರ: ನರ್ಸ್ ಮನೆಯಲ್ಲಿ ಹರಿದಿದ್ದು ರಕ್ತದೋಕುಳಿ!
ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ನಲ್ಲಿ ಜಯದೇವ ಆಸ್ಪತ್ರೆಯ ಸ್ಟಾಫ್ ನರ್ಸ್ ಅವರನ್ನು ಕತ್ತು ಕೊಯ್ದು ಬರ್ಬರವಾಗಿ ಕೊಲೆ ಮಾಡಲಾಗಿದೆ. ಡಿಸೆಂಬರ್ 24ರಂದು ರಾತ್ರಿ ಕೃತ್ಯ ನಡೆದಿದ್ದು, 25ರಂದು ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದೆ. ಮಾಹಿತಿ ತಿಳಿದ ಪೊಲೀಸರು ಶೋಧ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಆಕೆ ಒಬ್ಬರೇ ಇರುವುದನ್ನು ನೋಡಿಕೊಂಡು ಬಂದಿದ್ದ ಆಕೆಯ ಪ್ರಿಯಕರ ಈ ಕೃತ್ಯವೆಸಗಿದ್ದಾನೆಂದು ತನಿಖೆ ವೇಳೆ ತಿಳಿದುಬಂದಿದೆ.
- Rachappaji Naik S
- Updated on: Dec 26, 2025
- 11:35 am
ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಬೆಚ್ಚಿಬೀಳಿಸುವ ಕೃತ್ಯ; ನರ್ಸ್ಗಳು ಬಟ್ಟೆ ಬದಲಿಸುವ ವಿಡಿಯೋ ಮಾಡುತ್ತಿದ್ದ ಸೈಕೋ ಅಂದರ್!
ಬೆಂಗಳೂರಿನ ನಾಗರಬಾವಿ ಆಸ್ಪತ್ರೆಯೊಂದರಲ್ಲಿ ಸಿಬ್ಬಂದಿಯೊಬ್ಬ ಮಹಿಳಾ ನರ್ಸ್ಗಳ ಬಟ್ಟೆ ಬದಲಿಸುವ ವಿಡಿಯೋ ಮಾಡುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ಈ ಕೃತ್ಯ ವೈದ್ಯರ ಗಮನಕ್ಕೆ ಬಂದ ತಕ್ಷಣ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ತನಿಖೆ ವೇಳೆ ಆತನ ಮೊಬೈಲ್ನಲ್ಲಿ ಹಲವು ನರ್ಸ್ಗಳ ಖಾಸಗಿ ವಿಡಿಯೋಗಳು ಪತ್ತೆಯಾಗಿದೆ.
- Rachappaji Naik S
- Updated on: Dec 26, 2025
- 10:12 am
ಪೊಲೀಸ್ರು ಹೋದಾಗ ಯುವತಿ ಬಾಲ್ಕನಿಯಿಂದ ಜಿಗಿದ ಕೇಸಿಗೆ ಟ್ವಿಸ್ಟ್: ಸಿಕ್ಕ ಸಾಕ್ಷಿ ಏನು?
ಬೆಂಗಳೂರಿನ ಹೋಟೆಲ್ನಲ್ಲಿ ವೈಷ್ಣವಿ ಎಂಬ ಯುವತಿ ಬಾಲ್ಕನಿಯಿಂದ ಜಿಗಿದು ಗಾಯಗೊಂಡ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಪೊಲೀಸರು ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪ ನಿರಾಧಾರ ಎಂದು ತನಿಖೆಯಿಂದ ಬಯಲಾಗಿದೆ. ಹಾಗಾದರೆ ಹೋಟೆಲ್ನಲ್ಲಿ ನಡೆದ್ದದರು ಏನು? ಪೊಲೀಸರು ನಡೆಸಿದ ತನಿಖೆಯಲ್ಲಿ ಮಹತ್ವದ ವಿಚಾರಗಳು ಬಯಲಾಗಿದೆ. ಈ ಬಗ್ಗೆ ಪೊಲೀಸರೇ ಸ್ಪಷ್ಟನೆ ನೀಡಿದ್ದಾರೆ. ಪೊಲೀಸರಿಗೆ ಸಿಕ್ಕ ಮಾಹಿತಿ ಏನು? ಎಂಬುದು ಇಲ್ಲಿದೆ ನೋಡಿ.
- Rachappaji Naik S
- Updated on: Dec 16, 2025
- 7:55 pm
ಪರಪ್ಪನ ಅಗ್ರಹಾರದಲ್ಲಿ ಅಕ್ರಮ ತಡೆಗೆ ಅಲೋಕ್ ಕುಮಾರ್ ಮಾಸ್ಟರ್ ಪ್ಲ್ಯಾನ್: ಇಲ್ಲಿದೆ ಮಾಹಿತಿ
ಡಿಜಿಪಿ ಅಲೋಕ್ ಕುಮಾರ್ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ಕಠಿಣ ಪರಿಶೀಲನೆ ನಡೆಸಿದ್ದಾರೆ. ಕೈದಿಗಳ ಅಕ್ರಮ ಚಟುವಟಿಕೆಗಳ ವಿರುದ್ಧ 15 ದಿನಗಳ ಗಡುವು ನೀಡಿದ್ದು, ಸೂಕ್ತ ಕ್ರಮಕ್ಕೆ ಸೂಚಿಸಿದ್ದಾರೆ. ದರ್ಶನ್ ಸೇರಿದಂತೆ ವಿಐಪಿ ಕೈದಿಗಳ ಸೆಲ್ಗಳಿಗೂ ಭೇಟಿ ನೀಡಿ ಸೌಲಭ್ಯಗಳ ಕುರಿತು ಮಾಹಿತಿ ಪಡೆದಿದ್ದಾರೆ. ಜೈಲು ಸುಧಾರಣೆಗೆ ಸಿಬ್ಬಂದಿ ಕೊರತೆ ನೀಗಿಸಲು ಎಐ ತಂತ್ರಜ್ಞಾನ ಬಳಕೆಗೆ ಒತ್ತು ನೀಡೋದಾಗಿ ತಿಳಿಸಿದ್ದಾರೆ.
- Rachappaji Naik S
- Updated on: Dec 16, 2025
- 12:03 pm
ಒಂದು ತಿಂಗಳಲ್ಲಿ 8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಪೊಲೀಸರ ಕಳ್ಳಾಟ
ಕಳೆದ ಒಂದು ತಿಂಗಳಲ್ಲಿ ಎಂಟು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಲಂಚ, ದರೋಡೆ ಹಾಗೂ ಹಲ್ಲೆ ಆರೋಪಗಳು ಪೊಲೀಸ್ ಇಲಾಖೆಯ ಮೇಲೆ ಸರಣಿ ಕಪ್ಪು ಚುಕ್ಕೆ ಇಟ್ಟಿವೆ. ಇತ್ತೀಚೆಗೆ ಕುಂದನಹಳ್ಳಿಯಲ್ಲಿ ಹಣಕ್ಕಾಗಿ ಬೆದರಿಸಿ ಯುವತಿ ಆತ್ಮಹತ್ಯೆ ಯತ್ನಕ್ಕೆ ಕಾರಣವಾದ ಪ್ರಕರಣವೂ ಬೆಳಕಿಗೆ ಬಂದಿದೆ. ಈ ಎಲ್ಲಾ ವಿಚಾರಗಳು ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಚರ್ಚೆಗೆ ಬರಲಿವೆ.
- Rachappaji Naik S
- Updated on: Dec 16, 2025
- 10:35 am
ಪಾರ್ಟಿ ಮಾಡುತ್ತಿದ್ದವರ ಬಳಿ ಹಣ ಕೇಳಿದ ಪೊಲೀಸರು; ಹೆದರಿ ಬಿಲ್ಡಿಂಗ್ನಿಂದ ಕೆಳಗೆ ಹಾರಿದ ಯುವತಿ?
ಕಳ್ಳನಿಂದಲೇ ಹಣ ಪಡೆತಂತಹ ಹಲವು ಆರೋಪಗಳು ಬೆಂಗಳೂರು ಪೊಲೀಸರ ವಿರುದ್ಧ ಕೇಳಿ ಬಂದಿತ್ತು. ಇದೇ ಬೆನ್ನಲ್ಲೇ ಬೆಂಗಳೂರು ಪೊಲೀಸರ ವಿರುದ್ಧ ಹಣ ವಸೂಲಿಯ ಗಂಭೀರ ಆರೋಪ ಕೇಳಿಬಂದಿದೆ. ಪಾರ್ಟಿ ನಡೆಸುತ್ತಿದ್ದ ಯುವಕರಿಂದ ಪೊಲೀಸರು ಹಣ ಕೇಳಿದಾಗ, ಭಯಭೀತಳಾದ 21 ವರ್ಷದ ವೈಷ್ಣವಿ ಹೋಟೆಲ್ ಬಾಲ್ಕನಿಯಿಂದ ಜಿಗಿದು ಗಂಭೀರವಾಗಿ ಗಾಯಗೊಂಡಿದ್ದಾಳೆ. ಆಕೆ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದು, ಘಟನೆ ಕುರಿತು ಹೆಚ್ಎಎಲ್ ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ.
- Rachappaji Naik S
- Updated on: Dec 15, 2025
- 10:46 am
ಸಂಜೆಯಾದ್ರೆ ಸಾಕು ಒಂಟಿಯಾಗಿ ಓಡಾಡೋ ಹೆಣ್ಣು ಮಕ್ಕಳೇ ಈತನ ಟಾರ್ಗೆಟ್: ಬೆಂಗಳೂರಿನಲ್ಲೊಬ್ಬ ವಿಚಿತ್ರ ಸೈಕೋ!
ಬೆಂಗಳೂರಿನಲ್ಲಿ ಓಡಾಡುವ ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡುತ್ತಿದ್ದ ವಿಚಿತ್ರ ಸೈಕೋಪಾತ್ನನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಈತ ಒಂದು ತಿಂಗಳಿನಿಂದ ಸಂಜೆ ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ. ಡಿ.2ರಂದೂ ಇದೇ ರೀತಿ ಮಹಿಳೆಯೊಬ್ಬರಿಗೆ ಕಿರುಕುಳ ನೀಡಿದಾಗ, ಮಹಿಳೆಯ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮಹಿಳೆಯರು ಇಂತಹ ಪ್ರಕರಣಗಳ ಬಗ್ಗೆ ತಕ್ಷಣ ದೂರು ನೀಡಲು ಪೊಲೀಸರು ಮನವಿ ಮಾಡಿದ್ದಾರೆ.
- Rachappaji Naik S
- Updated on: Dec 15, 2025
- 8:34 am
New Year: ಬೆಂಗಳೂರಿನಲ್ಲಿ ನ್ಯೂ ಇಯರ್ ಸೆಲೆಬ್ರೆಷನ್ ತಯಾರಿ ಜೋರು, ನಗರದಾದ್ಯಂತ ಪೊಲೀಸರು ಹೈ ಅಲರ್ಟ್
2026ರ ನ್ಯೂ ಇಯರ್ ಸೆಲೆಬ್ರೆಷನ್ಗೆ ದಿನಗಣನೆ ಆರಂಭವಾಗಿದೆ. ಈಗಿನಿಂದಲೇ ಬೆಂಗಳೂರು ನಗರದಲ್ಲಿ ಹೊಸ ವರ್ಷಾಚರಣೆಯ ವೈಬ್ ಶುರುವಾಗಿದೆ. ಹೀಗಾಗಿ ಪೊಲೀಸರು ಕೂಡ ಈಗಿನಿಂದಲೇ ಹೈ ಅಲರ್ಟ್ ಆಗಿದ್ದಾರೆ. ರಾತ್ರಿ ವೇಳೆ ನಗರದಾದ್ಯಂತ ಪೊಲೀಸರ ಸ್ಪೆಷಲ್ ಡ್ರೈವ್ ನಡೆಸಿ ಪಬ್, ರೆಸ್ಟೋರೆಂಟ್ಗಳಲ್ಲಿ ಪರಿಶೀಲನೆ ನಡೆಸಿದ್ದಾರೆ.
- Rachappaji Naik S
- Updated on: Dec 15, 2025
- 7:41 am
ಹೊಸ ವರ್ಷಕ್ಕೆ ಕೌಂಟ್ಡೌನ್: ಬೆಂಗಳೂರಲ್ಲಿ ಅದಾಗಲೇ ಫೀಲ್ಡ್ಗೆ ಇಳಿದಿದ್ದೇಕೆ ಖಾಕಿ?
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಪೂರ್ವಭಾವಿಯಾಗಿ ಪೊಲೀಸರು ಬಿಗಿ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಸಂಭಾವ್ಯ ಅಹಿತಕರ ಘಟನೆಗಳನ್ನು ತಡೆಯಲು ನಗರದ ಎಲ್ಲ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ವಾಹನಗಳ ತಪಾಸಣೆ ನಡೆಸಲಾಗ್ತಿದೆ. ಪಬ್, ರೆಸ್ಟೋರೆಂಟ್ಗಳ ಭದ್ರತೆ, ಸಿಸಿಟಿವಿ ಮತ್ತು ತುರ್ತು ನಿರ್ಗಮನ ವ್ಯವಸ್ಥೆಗಳನ್ನು ಪರಿಶೀಲಿಸಲಾಗುತ್ತಿದೆ.
- Rachappaji Naik S
- Updated on: Dec 14, 2025
- 6:55 am