ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.
ಪರಸ್ತ್ರೀಗಾಗಿ ಪತ್ನಿ ಹತ್ಯೆಗೆ ಸ್ಕೆಚ್ ಹಾಕಿದ್ರಾ ಬೆಂಗಳೂರಿನ ಪೊಲೀಸ್ ಅಧಿಕಾರಿ? ವಾಟ್ಸಪ್ ಗುಟ್ಟು ರಟ್ಟು
ಪರಸ್ತ್ರೀಗಾಗಿ ಪತ್ನಿಯನ್ನೇ ಹತ್ಯೆಗೆ ಸಂಚು ರೂಪಿಸಿರುವ ಆರೋಪ ಬೆಂಗಳೂರಿನ ಆಗ್ನೇಯ ವಿಭಾಗದ ಸೆನ್ ಎಸಿಪಿ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಆಗ್ನೇಯ ವಿಭಾಗದ ಸೆನ್ ಎಸಿಪಿ ಗೋವರ್ಧನ್ ಅವರು ಮಹಿಳಾ ಪ್ರೊಬೇಷನರಿ ಡಿವೈಎಸ್ಪಿ ಜೊತೆ ಸಂಪರ್ಕ ಹೊಂದಿದ್ದು, ಇದನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆ ಮಾಡಿದ್ದಾರೆ ಎಂದು ಎಸಿಪಿ ಗೋವರ್ಧನ್ ವಿರುದ್ಧ ವೇ ಪತ್ನಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
- Rachappaji Naik S
- Updated on: Feb 13, 2025
- 2:29 pm
ಸಂಜನಾ ಗಲ್ರಾನಿ ಕೇಸ್ನಲ್ಲಿ ಸುಪ್ರೀಂಕೋರ್ಟ್ ಮೊರೆ ಹೋಗಲು ಸಿಸಿಬಿ ರೆಡಿ
ಸಂಜನಾ ಗಲ್ರಾನಿ ಅವರ ಡ್ರಗ್ ಪ್ರಕರಣ ಹೈಕೋರ್ಟ್ನಲ್ಲಿ ವಜಾಗೊಂಡಿದ್ದರೂ, ಸಿಸಿಬಿ ಪೊಲೀಸರು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಇದರಿಂದ ಸಂಜನಾ ಅವರು ಮತ್ತೆ ಕಾನೂನು ಹೋರಾಟ ಎದುರಿಸಬೇಕಾಗಬಹುದು. ಪೊಲೀಸ್ ಆಯುಕ್ತರು ಈ ಬಗ್ಗೆ ಮಾಹಿತಿ ನೀಡಿದ್ದು, ಪ್ರಕರಣದ ಮುಂದಿನ ಹಂತದ ಬಗ್ಗೆ ಕುತೂಹಲ ಹೆಚ್ಚಾಗಿದೆ.
- Rachappaji Naik S
- Updated on: Feb 11, 2025
- 1:00 pm
ಕೇರಳ ಮೂಲದ ಕುಖ್ಯಾತ ಕಳ್ಳ ಬೆಂಗಳೂರಲ್ಲಿ ನಿಗೂಢ ಸಾವು: ಸುಳಿವು ನೀಡಿತು ಟ್ಯಾಟೂ
ಬೆಂಗಳೂರಿನಲ್ಲಿ ಕುಖ್ಯಾತ ಕಳ್ಳನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಸಿಕ್ಕಿದೆ. ಅವನ ಮೇಲೆ 30ಕ್ಕೂ ಹೆಚ್ಚು ಕೇಸ್ಗಳಿವೆ. ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದಾರೆ. ಮೊಬೈಲ್ ಫೋನ್ ಮೂಲಕ ಕೇರಳದಲ್ಲಿರುವ ವ್ಯಕ್ತಿಯನ್ನು ಪತ್ತೆ ಹಚ್ಚಿ ಪ್ರಕರಣದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಸದ್ಯ ಸಾವು ನಿಗೂಢವಾಗಿದೆ.
- Rachappaji Naik S
- Updated on: Feb 7, 2025
- 7:36 pm
ಬೆಂಗಳೂರಿನಲ್ಲಿ ಪೊಲೀಸ್ ಬಲೆಗೆ ಬಿದ್ದ ಲಕ್ಕಿ ಭಾಸ್ಕರ್ ಮಾದರಿ ಗ್ಯಾಂಗ್: ಎಟಿಎಂ ಹಣ ಎಗರಿಸುತ್ತಿದ್ದವರು ಅರೆಸ್ಟ್
ಇತ್ತೀಚೆಗೆ ಬಿಡುಗಡೆಯಾಗಿದ್ದ ಲಕ್ಕಿ ಭಾಸ್ಕರ್ ತೆಲಗು ಸಿನಿಮಾ ಬಾಕ್ಸ್ ಆಫಿಸ್ನಲ್ಲಿ ಧೂಳೆಬ್ಬಿಸಿತ್ತು. ಬ್ಯಾಂಕ್ ಉದ್ಯೋಗಿ ಆಗಿದ್ದ ನಾಯಕ ಅಲ್ಲಿಂದಲೇ ಹಣ ಕದ್ದು ಬ್ಯುಸಿನೆಸ್ ಮಾಡ್ತಿದ್ದ. ಆದರೆ ಅದು ಕಾಲ್ಪನಿಕ ಕಥೆ. ಆದರೆ ಬೆಂಗಳೂರಲ್ಲಿ ಅಂಥದ್ದೇ ಒಂದು ಗ್ಯಾಂಗ್ ಪೊಲೀಸರ ಬಲೆಗೆ ಬಿದ್ದಿದೆ. ಮತ್ತೊಂದು ಕಡೆ ಕೆಲಸ ಮಾಡುತ್ತಿದ್ದ ಮಾಲೀಕನಿಗೆ ವಂಚಿಸಿ ಹಣ ದೋಚಿದ್ದ ಆಸಾಮಿ ಕೂಡ ಖಾಕಿ ಬಲೆಗೆ ಬಿದ್ದಿದ್ದಾನೆ.
- Rachappaji Naik S
- Updated on: Feb 7, 2025
- 5:01 pm
ಕಳ್ಳ ಮಗನ ಮೃತದೇಹ ಬೇಡವೆಂದು ಹೊರಟ ತಾಯಿ: ಬೆಂಗಳೂರಿನಲ್ಲೊಂದು ಕರುಣಾಜನಕ ಕಥೆ
ತಾಯಿಗೆ ಹೆಗ್ಗಣ ಮುದ್ದು ಅಂತಾರೆ. ಮಗ ಎಷ್ಟೇ ಕೆಟ್ಟವನಾದರೂ ತಾಯಿ ಆತನ ತಪ್ಪುಗಳನ್ನು ಕ್ಷಮಿಸುತ್ತಾಳೆ. ಆದರೆ, ಈ ತಾಯಿಗೆ ತನ್ನ ಮಗ ಕಳ್ಳನೆಂದು ಬೇಸರ ಮತ್ತು ಸಿಟ್ಟಿನಿಂದ ಆತನ ಮೃತದೇಹವನ್ನು ಸ್ವೀಕರಿಸಲು ಹಿಂದೇಟು ಹಾಕಿದ್ದಾಳೆ. ಇದು, ಕೆಲದಿನಗಳ ಹಿಂದೆ ಬೆಂಗಳೂರಿನಲ್ಲಿ ಮೃತಪಟ್ಟ ಕುಖ್ಯಾತ ಕಳ್ಳನ ಕರುಣಾಜನಕ ಕಥಯಾಗಿದೆ. ಈ ಸ್ಟೋರಿ ಓದಿ
- Rachappaji Naik S
- Updated on: Feb 7, 2025
- 9:51 am
ಸ್ನೇಹಿತೆಗೆ 3 ಕೋಟಿ ರೂ. ಮೌಲ್ಯದ ಮನೆ ಕಟ್ಟಿಸಿಕೊಟ್ಟಿದ್ದ ಕಳ್ಳನಿಗಿತ್ತು ಪ್ರಖ್ಯಾತ ನಟಿ ಜೊತೆ ನಂಟು
ಮಡಿವಾಳ ಪೊಲೀಸರು 37 ವರ್ಷದ ಪಂಚಾಕ್ಷರಿ ಸ್ವಾಮಿ ಎಂಬ ಕಳ್ಳನನ್ನು ಬಂಧಿಸಿದ್ದಾರೆ. ಈತನು ಕಳ್ಳತನದಿಂದ ಗಳಿಸಿದ ಹಣದಿಂದ ತನ್ನ ಸ್ನೇಹಿತೆಗೆ 3 ಕೋಟಿ ರೂಪಾಯಿ ಮೌಲ್ಯದ ಮನೆಯನ್ನು ಕಟ್ಟಿಸಿಕೊಟ್ಟಿದ್ದಾನೆ ಎಂದು ತಿಳಿದುಬಂದಿದೆ. ಇವನಿಗೆ ಓರ್ವ ಪ್ರಸಿದ್ಧ ನಟಿಯ ಜೊತೆ ಸಂಪರ್ಕ ಇತ್ತು ಪೊಲೀಸರು ತಿಳಿಸಿದ್ದಾರೆ. ಆರೋಪಿಯ ಮೇಲೆ 180ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.
- Rachappaji Naik S
- Updated on: Feb 4, 2025
- 11:58 am
ಸಹಾಯವಾಣಿ ಹೆಸರಿನಲ್ಲಿ ಕರೆ ಮಾಡಿ ವಂಚನೆ: ಒಂದನ್ನು ಒತ್ತಿ 2 ಲಕ್ಷ ರೂ. ಕಳೆದುಕೊಂಡ ಮಹಿಳೆ
ಬೆಂಗಳೂರಿನ 58 ವರ್ಷದ ಮಹಿಳೆಯೊಬ್ಬರಿಗೆ ಬ್ಯಾಂಕ್ ಸಹಾಯವಾಣಿ ಹೆಸರಿನಲ್ಲಿ ವಂಚಿಸಲಾಗಿದೆ. ವಂಚಕರು 2 ಲಕ್ಷ ರೂಪಾಯಿ ದೋಚಿದ್ದಾರೆ. ಮಹಿಳೆ ರಾಷ್ಟ್ರೀಯ ಸೈಬರ್ ಕ್ರೈಮ್ ಸಹಾಯವಾಣಿ 1930ಗೆ ದೂರು ನೀಡಿದ್ದಾರೆ. ಮತ್ತು ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆಯು ಬ್ಯಾಂಕ್ ಸಹಾಯವಾಣಿಗಳನ್ನು ದುರ್ಬಳಕೆ ಮಾಡಿಕೊಳ್ಳುವ ಸೈಬರ್ ಅಪರಾಧಗಳ ಬಗ್ಗೆ ಎಚ್ಚರಿಕೆ ನೀಡುತ್ತದೆ.
- Rachappaji Naik S
- Updated on: Feb 4, 2025
- 8:30 am
ನಂಬಿದ್ದ ಗೆಳೆಯನಿಂದ ಮೋಸ: ಬೆಂಗಳೂರು ವಿವಿ ವಿದ್ಯಾರ್ಥಿನಿ ಹಾಸ್ಟೆಲ್ನಲ್ಲಿ ನೇಣಿಗೆ ಶರಣು
ಬೆಂಗಳೂರು ವಿಶ್ವವಿದ್ಯಾಲಯದ ದ್ವಿತೀಯ ವರ್ಷದ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿ ಹಾಸ್ಟೆಲ್ನಲ್ಲಿ ನೇಣಿಗೆ ಶರಣಾಗಿರುವಂತಹ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಹೆಬ್ಬಲಗುಪ್ಪೆ ಗ್ರಾಮದ ನಿವಾಸಿ. ಡೆತ್ನೋಟ್ನಲ್ಲಿ ಗೆಳೆಯನೊಬ್ಬ ಮೋಸ ಮಾಡಿರುವುದಾಗಿ ಬರೆದುಕೊಂಡಿದ್ದಾರೆ. ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Rachappaji Naik S
- Updated on: Feb 3, 2025
- 4:47 pm
ಜ್ಯೂಸ್ ಪ್ಯಾಕೆಟ್ ಹೆಸರಲ್ಲಿ ನಕಲಿ ಸಿಗರೇಟ್ ಸ್ಮಗ್ಲಿಂಗ್: ಲಕ್ಷಾಂತರ ಮೌಲ್ಯದ ನಕಲಿ ಸಿಗರೇಟ್ ಸೀಜ್
ಬೆಂಗಳೂರಿನ ವಿಲ್ಸನ್ ಗಾರ್ಡನ್ ಪೊಲೀಸರು ದೆಹಲಿಯಿಂದ ಬರುತ್ತಿದ್ದ 27 ಲಕ್ಷ ರೂಪಾಯಿ ಮೌಲ್ಯದ ನಕಲಿ ಸಿಗರೇಟ್ಗಳನ್ನು ವಶಪಡಿಸಿಕೊಂಡಿದ್ದಾರೆ. ಕೇರಳ ಮೂಲದ ಯೂಸಫ್ ಎಂಬಾತನನ್ನು ಬಂಧಿಸಲಾಗಿದೆ. ಐಟಿಸಿ ಕಂಪನಿಯ ಸಿಗರೇಟ್ಗಳನ್ನು ಅದೇ ರೀತಿ ತಯಾರಿಸಲಾಗಿದ್ದ ನಕಲಿ ಸಿಗರೇಟ್ಗಳು ಜ್ಯೂಸ್ ಪ್ಯಾಕೆಟ್ಗಳ ರೂಪದಲ್ಲಿ ಸಾಗಿಸಲಾಗುತ್ತಿತ್ತು.
- Rachappaji Naik S
- Updated on: Feb 2, 2025
- 6:37 pm
ಬೆಂಗಳೂರು: ಕೆಆರ್ ಮಾರ್ಕೆಟ್ ಬಳಿ ಮಹಿಳೆಯ ರೇಪ್, ಚಿನ್ನಾಭರಣ, ಹಣ ದೋಚಿದ ದುಷ್ಕರ್ಮಿಗಳು
ಕರ್ನಾಟಕದಲ್ಲಿ ನಡೆಯುತ್ತಿರುವ ದರೋಡೆ ಪ್ರಕರಣಗಳು ಜನರಲ್ಲಿ ಆತಂಕ ಮೂಡಿಸಿದೆ. ಈ ನಡುವೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿರುವ ರೇಪ್ ಬೆಚ್ಚಿ ಬೀಳಿಸಿದೆ. ಕೆಆರ್ ಮಾರುಕಟ್ಟೆ ಬಸ್ ನಿಲ್ದಾಣದಲ್ಲಿ ಕುಳಿತಿದ್ದ ಮಹಿಳೆಯನ್ನು ಹೊತ್ತೊಯ್ದು ಅತ್ಯಾಚಾರ ಎಸಗಿದ ದುಷ್ಕರ್ಮಿಗಳು ಚಿನ್ನಾಭರಣ, ನಗದು, ಹಣ ದೋಚಿದ್ದಾರೆ.
- Rachappaji Naik S
- Updated on: Jan 21, 2025
- 6:51 am
ಅವಾಚ್ಯ ಶಬ್ಧ ಬಳಕೆ ಕೇಸ್: ವಾಯ್ಸ್ ಸ್ಯಾಂಪಲ್ ನೀಡಲು ನಿರಾಕರಿಸಿದ ಸಿಟಿ ರವಿ ಕೋರ್ಟ್ ಬಿಗ್ ಶಾಕ್!
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದಿದ್ದ ಚಳಿಗಾಲದ ಅಧಿವೇಶನದ ವೇಳೆ ವಿಧಾನ ಪರಿಷತ್ ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಳ್ಕರ್ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದ ಎಂಎಲ್ ಸಿ ಸಿಟಿ ರವಿಗೆ ಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. ವಾಯ್ಸ್ ಸ್ಯಾಂಪಲ್ ನೀಡಲು ನಿರಾಕರಿಸುತ್ತಿದ್ದ ಸಿಟಿ ರವಿ ವಿರುದ್ಧ ಸಿಐಡಿ ಅಧಿಕಾರಿಗಳು ಕೋರ್ಟ್ ಮೆಟ್ಟಿಲೇರಿದ್ದು. ಇದೀಗ ಕೋರ್ಟ್ ಸಿಟಿ ರವಿಗೆ ಮಹತ್ವದ ಸೂಚನೆ ನೀಡಿದೆ.
- Rachappaji Naik S
- Updated on: Jan 17, 2025
- 3:03 pm
ದರ್ಶನ್ ಮತ್ತು ಗ್ಯಾಂಗ್ಗೆ ಮತ್ತೆ ಜೈಲು ಸೇರುವ ಭಯ; ಜ.24ಕ್ಕೆ ಸುಪ್ರೀಂನಲ್ಲಿ ಅರ್ಜಿ ವಿಚಾರಣೆ
ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದ ಆರೋಪಿ ದರ್ಶನ್ ಅವರು ಪೂರ್ಣ ಪ್ರಮಾಣದ ಜಾಮೀನು ಪಡೆದು ಕೋರ್ಟ್ನಿಂದ ಹೊರ ಬಂದಿದ್ದಾರೆ. ಅವರ ಜೊತೆ ಆಪ್ತೆ ಪವಿತ್ರಾ ಗೌಡ, ಮ್ಯಾನೇಜರ್ ನಾಗರಾಜು ಸೇರಿ ಅನೇಕರಿಗೆ ಜಾಮೀನು ಸಿಕ್ಕಿದೆ. ದರ್ಶನ್ ಜಾಮೀನು ರದ್ದು ಕೋರಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಈ ಅರ್ಜಿ ವಿಚಾರಣೆ ಜನವರಿ 24ರಂದು ನಡೆಯಲಿದೆ.
- Rachappaji Naik S
- Updated on: Jan 17, 2025
- 10:45 am