ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.
PSI ಬಳಿಕ ಆರ್ಮಿ ಪರೀಕ್ಷೆಯಲ್ಲೂ ಕಳ್ಳಾಟ: ಎಲೆಕ್ಟ್ರಾನಿಕ್ ಡಿವೈಸ್ ಪತ್ತೆ
ಪಿಎಸ್ಐ ನೇಮಕಾತಿ ಹಗರಣದ ಬಳಿಕ ಇದೀಗ ಆರ್ಮಿ ಪರೀಕ್ಷೆಯಲ್ಲೂ ಕಳ್ಳಾಟ ನಡೆದಿರುವ ಆರೋಪ ಕೇಳಿಬಂದಿದೆ. ಪರೀಕ್ಷಾ ಆವರಣದಲ್ಲಿ ಎಲೆಕ್ಟ್ರಾನಿಕ್ ಡಿವೈಸ್ಗಳು ಪತ್ತೆ ಆಗಿವೆ. ಇನ್ನು ಪರೀಕ್ಷೆಯಲ್ಲಿ ನಕಲು ಮಾಡಿದ ಆರೋಪದಡಿ 18 ಅಭ್ಯರ್ಥಿಗಳನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Rachappaji Naik S
- Updated on: Feb 9, 2026
- 7:56 pm
ಜಪಾನ್, ಡಚ್ ರಾಯಭಾರಿ ಕಚೇರಿಗೆ ಬಾಂಬ್ ಬೆದರಿಕೆ: ತಮಿಳುನಾಡು ಡಿಸಿಎಂ ಹೆಸರು ಉಲ್ಲೇಖ
ಬೆಂಗಳೂರಿನ ಜಪಾನ್ ಮತ್ತು ಡಚ್ ರಾಯಭಾರಿ ಕಚೇರಿಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಕಳೆದ 10 ದಿನಗಳಲ್ಲಿ ದೂತವಾಸ ಕಚೇರಿಗಳಿಗೆ ಇದು ಎರಡನೇ ಬೆದರಿಕೆಯಾಗಿದ್ದು, ಶ್ವಾನದಳ ಮತ್ತು ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಇದು ಹುಸಿ ಬಾಂಬ್ ಕರೆ ಎಂದು ಸ್ಪಷ್ಟಪಡಿಸಿವೆ. ಈ ಹಿಂದೆ ನೆದರ್ಲ್ಯಾಂಡ್ ಮತ್ತು ಇಟಾಲಿ ಕಾನ್ಸುಲೇಟ್ಗಳಿಗೂ ಇದೇ ರೀತಿಯ ಬೆದರಿಕೆ ಬಂದಿತ್ತು ಎಂಬುದಿಲ್ಲಿ ಗಮನಾರ್ಹ.
- Rachappaji Naik S
- Updated on: Feb 9, 2026
- 5:18 pm
ವರ್ಷಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಶಂಕಿತ ಉಗ್ರ ಚಿಕಿತ್ಸೆ ಫಲಿಸದೆ ಸಾವು!
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿತನಾಗಿದ್ದ ಶಂಕಿತ ಭಯೋತ್ಪಾದಕ ಸಾದಿಕ್ ಪಾಷಾ (47) ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸುದ್ದಗುಂಟೆಪಾಳ್ಯ ಸ್ಫೋಟಕ ವಸ್ತು ಸಂಗ್ರಹ ಪ್ರಕರಣದಲ್ಲಿ ಎನ್ಐಎನಿಂದ ಬಂಧಿತರಾಗಿದ್ದ ಸಾದಿಕ್, ಕಳೆದ ಆರು ತಿಂಗಳಿಂದ ಲೋ ಬಿಪಿ ಮತ್ತು ಹೈ ಶುಗರ್ನಿಂದ ಬಳಲುತ್ತಿದ್ದರು. ಜೈಲು ಅಧಿಕಾರಿಗಳು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು, ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
- Rachappaji Naik S
- Updated on: Feb 7, 2026
- 11:46 am
ಆರ್ಯನ್ ಖಾನ್ ಅಸಭ್ಯ ವರ್ತನೆ ಕೇಸ್ಗೆ ಇತಿಶ್ರೀ; ದೊಡ್ಡವರ ಒತ್ತಡ?
ಬೆಂಗಳೂರಿನಲ್ಲಿ ಆರ್ಯನ್ ಖಾನ್ ಅಸಭ್ಯ ವರ್ತನೆ ಪ್ರಕರಣಕ್ಕೆ ಬೆಂಗಳೂರು ಪೊಲೀಸರು ಸಾಕ್ಷ್ಯಾಧಾರಗಳ ಕೊರತೆಯಿಂದ ಇತಿಶ್ರೀ ಹಾಡಲು ಸಿದ್ಧತೆ ನಡೆಸಿದ್ದಾರೆ. ಕಳೆದ ವರ್ಷ ನವೆಂಬರ್ನಲ್ಲಿ ಪಬ್ ಉದ್ಘಾಟನೆ ವೇಳೆ ಮಧ್ಯ ಬೆರಳು ತೋರಿಸಿ ವಿಡಿಯೋ ವೈರಲ್ ಆಗಿತ್ತು. ಕಬ್ಬನ್ ಪಾರ್ಕ್ ಪೊಲೀಸರು ತನಿಖೆ ನಡೆಸಿ, ಉದ್ದೇಶಪೂರ್ವಕ ವರ್ತನೆಯಲ್ಲ ಎಂದು ನಿರ್ಧರಿಸಿದ್ದಾರೆ. ಇದರಿಂದ ದೂರುದಾರ ವಕೀಲ ಹುಸೇನ್ ಅಸಮಾಧಾನಗೊಂಡಿದ್ದಾರೆ.
- Rachappaji Naik S
- Updated on: Feb 6, 2026
- 10:58 am
ಬೆಂಗಳೂರು: ಇಟಲಿ, ಜಪಾನ್ ಬಳಿಕ ನೆದರ್ಲ್ಯಾಂಡ್ ರಾಯಭಾರಿ ಕಚೇರಿಗೆ ಬಾಂಬ್ ಬೆದರಿಕೆ ಸಂದೇಶ
ಬೆಂಗಳೂರಿನಲ್ಲಿ ಬಾಂಬ್ ಬೆದರಿಕೆ ಸಂದೇಶಗಳ ಹಾವಳಿ ಮತ್ತೆ ಮುಂದುವರಿದಿದೆ. ಜನವರಿ 29 ರಂದು ಇಟಲಿ ಮತ್ತು ಜಪಾನ್ ಕಾನ್ಸುಲೇಟ್ ಕಚೇರಿಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು. ಅದಾದ ನಂತರ ನೆದರ್ಲ್ಯಾಂಡ್ ಕಾನ್ಸುಲೇಟ್ ಕಚೇರಿಗೂ ಬಾಂಬ್ ಬೆದರಿಕೆ ಸಂದೇಶ ಬಂದಿರುವುದು ಈಗ ಬೆಳಕಿಗೆ ಬಂದಿದ್ದು, ದೂರು ದಾಖಲಾಗಿದೆ. ಭದ್ರತೆಯನ್ನೂ ಹೆಚ್ಚಿಸಲಾಗಿದೆ.
- Rachappaji Naik S
- Updated on: Feb 6, 2026
- 10:03 am
ಮ್ಯೂಲ್ ಅಕೌಂಟ್ ಸೈಬರ್ ದಂಧೆಗೆ ಸಿಐಡಿ ಶಾಕ್: ರಾಜ್ಯಾದ್ಯಂತ ಮೆಗಾ ದಾಳಿ, 13 ಮಾಸ್ಟರ್ ಮೈಂಡ್ಗಳ ಬಂಧನ
ರಾಜ್ಯದಲ್ಲಿ ಹೆಚ್ಚುತ್ತಿರುವ ಸೈಬರ್ ಪ್ರಕರಣಗಳಿಗೆ ಕಡಿವಾಣ ಹಾಕಲು ಸಿಐಡಿ ಸೈಬರ್ ಕ್ರೈಂ ಮಹತ್ವದ ಕಾರ್ಯಾಚರಣೆ ನಡೆಸಿದೆ. ಫೆಬ್ರವರಿ 6ರಂದು ನಡೆದ ದಾಳಿಯಲ್ಲಿ, 40 ಸಾವಿರಕ್ಕೂ ಹೆಚ್ಚು ಮ್ಯೂಲ್ ಖಾತೆಗಳನ್ನು ಪತ್ತೆ ಹಚ್ಚಿ, 13 ಪ್ರಮುಖ ವಂಚಕರನ್ನು ಬಂಧಿಸಲಾಗಿದೆ. ಅಮಾಯಕರ ಬ್ಯಾಂಕ್ ವಿವರಗಳನ್ನು ದುರ್ಬಳಕೆ ಮಾಡಿಕೊಂಡು ನಡೆಯುತ್ತಿದ್ದ ಆನ್ಲೈನ್ ವಂಚನೆಗೆ ಇದರಿಂದ ಬ್ರೇಕ್ ಬಿದ್ದಿದೆ. ಹೆಚ್ಚಿನ ತನಿಖೆ ಮುಂದುವರಿದಿದೆ.
- Rachappaji Naik S
- Updated on: Feb 6, 2026
- 9:43 am
ಜೈಲಿನಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಬ್ರೇಕ್ ಹಾಕಲು ಹೊಸ ಅಸ್ತ್ರ ಪ್ರಯೋಗಿಸಿದ ಡಿಜಿಪಿ ಅಲೋಕ್ ಕುಮಾರ್
ಡಿಜಿಪಿ ಅಲೋಕ್ ಕುಮಾರ್ ರಾಜ್ಯದ ಜೈಲುಗಳಲ್ಲಿನ ಭ್ರಷ್ಟಾಚಾರ ಮತ್ತು ಕೈದಿಗಳಿಗೆ ನೀಡುವ ರಾಜಾತಿಥ್ಯ ತಡೆಯಲು 'ವರ್ಗಾವಣೆ ಅಸ್ತ್ರ' ಪ್ರಯೋಗಿಸಿದ್ದಾರೆ. ಪರಪ್ಪನ ಅಗ್ರಹಾರ ಜೈಲು ಸೇರಿದಂತೆ ವಿವಿಧ ಕಾರಾಗೃಹಗಳಲ್ಲಿ ದೀರ್ಘಕಾಲ ಒಂದೇ ಕಡೆ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯನ್ನು ವರ್ಗಾಯಿಸಲು ನಿರ್ಧರಿಸಲಾಗಿದೆ. ಹಣ ಪಡೆದು ವಿಶೇಷ ಸೌಲಭ್ಯ ನೀಡುವ ಆರೋಪಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಜೈಲುಗಳಲ್ಲಿ ಶಿಸ್ತು ಮತ್ತು ಪಾರದರ್ಶಕತೆ ತರುವುದು ಇದರ ಮುಖ್ಯ ಉದ್ದೇಶವಾಗಿದೆ.
- Rachappaji Naik S
- Updated on: Feb 5, 2026
- 2:54 pm
ಕದಿಯಲು ಹೋಗಿ ಸಿಕ್ಕಿಬಿದ್ದವನಿಂದ ತಾನು ಕಳ್ಳತನಕ್ಕೆ ಯತ್ನಿಸಿದ ಮನೆಯವರ ವಿರುದ್ಧವೇ ದೂರು!
ಬೆಂಗಳೂರಿನಲ್ಲಿ ನಡೆದ ವಿಚಿತ್ರ ಪ್ರಕರಣವೊಂದರಲ್ಲಿ, ಮೊದಲ ಬಾರಿಗೆ ಕಳ್ಳತನಕ್ಕೆ ಹೋಗಿ ಸಿಕ್ಕಿಬಿದ್ದ ವ್ಯಕ್ತಿ ಮನೆ ಮಾಲೀಕರಿಂದ ಹಲ್ಲೆಗೊಳಗಾಗಿದ್ದಾನೆ. ತಾನು ಕೂಡ ಮನೆ ಮಾಲೀಕರ ಮೇಲೆ ಹಲ್ಲೆ ಮಾಡಿದ್ದರೂ ತನ್ನ ಮೇಲೆ ಹಲ್ಲೆ ನಡೆದಿದೆ ಎಂದು ಆರೋಪಿಸಿ ಅವರ ವಿರುದ್ಧವೇ ದೂರು ದಾಖಲಿಸಿದ್ದಾನೆ. ಸದ್ಯ ಪೊಲೀಸರು ಆತನನ್ನು ಬಂಧಿಸಿ, ಕಳ್ಳತನ ಮತ್ತು ಹಲ್ಲೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
- Rachappaji Naik S
- Updated on: Feb 5, 2026
- 12:52 pm
ಜೈಲಿಂದ ಹೊರಬರ್ತಿದ್ದಂತೆಯೇ ಮತ್ತೆ ಬಾಲಬಿಚ್ಚಿದ ಖತರ್ನಾಕ್ ವಂಚಕ: ಅಮಿತ್ ಶಾ ಆಪ್ತನೆಂದು ಹೇಳಿಕೊಂಡು ಮತ್ತಷ್ಟು ವಂಚನೆ
ಕೇಂದ್ರ ಸಚಿವ ಅಮಿತ್ ಶಾ ಆಪ್ತನೆಂದು ಹೇಳಿಕೊಂಡು ವಂಚಿಸುತ್ತಿದ್ದ ಸುಜಯೇಂದ್ರನ ವಿರುದ್ಧ ಮತ್ತೊಂದು FIR ದಾಖಲಾಗಿದೆ. ರಾಜ್ಯಪಾಲರ ನಕಲಿ ಸಹಿ, ಲೋಕಭವನದ ನಕಲಿ ಲೆಟರ್ಹೆಡ್ ಬಳಸಿ ಕಾಲೇಜು ಸೀಟುಗಳಿಗಾಗಿ ಹಲವರಿಗೆ ವಂಚಿಸಿದ್ದ. ಈ ಹಿಂದೆ ₹2.5 ಕೋಟಿ ವಂಚಿಸಿ ಬಂಧಿಯಾಗಿದ್ದ. ಜಾಮೀನಿನ ಮೇಲೆ ಹೊರಬಂದ ನಂತರ ಹಳೆಯ ಹಗರಣಗಳು ಬಯಲಾಗುತ್ತಿದ್ದು, ಇದು ದೊಡ್ಡ ಜಾಲವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
- Rachappaji Naik S
- Updated on: Feb 5, 2026
- 11:23 am
ಪೋಷಕರು ಬೈದಿದ್ದಕ್ಕೆ ಬಸ್ ಫ್ರೀ ಎಂದು ತಮ್ಮನ ಜೊತೆ ಮನೆಬಿಟ್ಟು ಹೋಗಿ ಊರೂರು ಸುತ್ತಿದ ಬಾಲಕಿ
ಪೋಷಕರು ಬೈದಿದ್ದಕ್ಕೆ ಬೆಂಗಳೂರಿನ ಅಕ್ಕ-ತಮ್ಮಂದಿರು ಮನೆ ಬಿಟ್ಟು ಹೋಗಿ ಊರೂರು ಸುತ್ತಿರುವ ಅಘಾತಕಾರಿ ಘಟನೆ ನಡೆದಿದೆ. 13 ವರ್ಷದ ಬಾಲಕಿ ಮಹಿಳೆಯರ ಉಚಿತ ಬಸ್ ಯೋಜನೆ ಬಳಸಿಕೊಂಡು ತಮ್ಮನೊಂದಿಗೆ ರಾಜ್ಯದ ಹಲವೆಡೆ ಸುತ್ತಾಡಿದ್ದಾಳೆ. ಮಕ್ಕಳು ಕಾಣೆಯಾಗಿದ್ದಾರೆ ಎಂದು ಪೋಷಕರು ದೂರು ನೀಡಿದ ನಂತರ ಪೊಲೀಸರು ಶೋಧ ಕಾರ್ಯ ನಡೆಸಿದ್ದು, ಸಿಸಿಟಿವಿ ಮತ್ತು ಸಾರ್ವಜನಿಕರ ಮಾಹಿತಿ ಆಧರಿಸಿ ಮಕ್ಕಳನ್ನು ಪತ್ತೆ ಹಚ್ಚಿ ಪೋಷಕರ ಮಡಿಲಿಗೆ ಸೇರಿಸಿದ್ದಾರೆ.
- Rachappaji Naik S
- Updated on: Feb 4, 2026
- 9:31 am
ಸುದೀಪ್ಗೆ ಈ ವಿಷಯ ಗೊತ್ತಾದ್ರೆ ಚಕ್ರವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಕೆ ಮಂಜು
ನಿರ್ಮಾಪಕರು ಹೀರೋಗಳಿಗೆ ಕಾಂಡೋಮ್ ಕೊಡುತ್ತಾರೆ ಎಂದು ಸುದೀಪ್ ಆಪ್ತ ಚಕ್ರವರ್ತಿ ಚಂದ್ರಚೂಡ್ ಹೇಳಿದ್ದರು. ಅದನ್ನು ‘ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘ’ ಖಂಡಿಸಿದೆ. ಹಿರಿಯ ನಿರ್ಮಾಪಕ ಕೆ. ಮಂಜು ಈ ಬಗ್ಗೆ ಮಾತನಾಡಿದ್ದು, ಸುದೀಪ್ ಅವರಿಗೆ ಈ ವಿಷಯ ಗೊತ್ತಾದರೆ ಚಕ್ರವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ ಎಂದಿದ್ದಾರೆ.
- Rachappaji Naik S
- Updated on: Feb 4, 2026
- 6:59 pm
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಕಿಚ್ಚ ಸುದೀಪ್ ಅವರ ಆಪ್ತರಾದ ಚಕ್ರವರ್ತಿ ಚಂದ್ರಚೂಡ್ ಅವರು ನಿರ್ಮಾಪಕರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಯನ್ನು ನಿರ್ಮಾಪಕರು ಖಂಡಿಸುತ್ತಿದ್ದಾರೆ. ನಟಿ, ನಿರ್ಮಾಪಕಿ ಪ್ರಿಯಾ ಹಾಸನ್ ಕೂಡ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಟಿವಿ9 ಜೊತೆ ಅವರು ಮಾತನಾಡಿದ್ದಾರೆ. ವಿಡಿಯೋ ನೋಡಿ..
- Rachappaji Naik S
- Updated on: Feb 2, 2026
- 9:18 pm