18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.
ಮೃತ ಕೋತಿಗೆ ವೈಕುಂಠ ಸಮಾರಾಧನೆ: ನೂರಾರು ಜನರಿಗೆ ಅನ್ನಸಂತರ್ಪಣೆ
ಕೋಲಾರ ತಾಲೂಕಿನ ತೊಟ್ಲಿ ಗ್ರಾಮದಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕೋತಿಗೆ ಗ್ರಾಮಸ್ಥರು ಆಂಜನೇಯನ ಪ್ರತಿರೂಪವೆಂದು ನಂಬಿ ಶಾಸ್ತ್ರೋಕ್ತವಾಗಿ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. 11ನೇ ದಿನದ 'ವೈಕುಂಠ ಸಮಾರಾಧನೆ'ಯನ್ನು ವೈಭವದಿಂದ ಆಚರಿಸಿ, ಮಹಾ ಪ್ರಸಾದ ವಿನಿಯೋಗ ಮಾಡಿದ್ದಾರೆ. ಇದು ಭಾರತೀಯ ಗ್ರಾಮೀಣ ಸಂಸ್ಕೃತಿ ಮತ್ತು ಪ್ರಾಣಿ ಪ್ರೀತಿಯ ಅಪರೂಪದ ಸಂಗಮವಾಗಿದೆ.
- Rajendra Simha BL
- Updated on: Aug 4, 2026
- 12:49 pm
ಕೋಲಾರ–ಚಿಕ್ಕಬಳ್ಳಾಪುರ ಶಾಸಕರ ಪ್ರತ್ಯೇಕ ಸಭೆ: ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಅಸಮಾಧಾನ, ಮುಂದಿನ ನಡೆ ಬಗ್ಗೆ ಚರ್ಚೆ
ಸಚಿವ ಸಂಪುಟ ವಿಸ್ತರಣೆಯಲ್ಲಿ ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಶಾಸಕರ ಪ್ರತ್ಯೇಕ ಸಭೆ ನಡೆಯಲಿದೆ. ಸಾಮೂಹಿಕ ರಾಜೀನಾಮೆ ಅಥವಾ ಹೈಕಮಾಂಡ್ ಮನವೊಲಿಕೆ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದ್ದು, ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಕಾಂಗ್ರೆಸ್ ನಾಯಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
- Rajendra Simha BL
- Updated on: Aug 4, 2026
- 8:21 am
ಖರ್ಗೆ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕೋಲಾರಕ್ಕೆ ದೊಡ್ಡ ಮೋಸ ಮಾಡಿದ್ದಾರೆ: ಶಾಸಕ ನಾರಾಯಣಸ್ವಾಮಿ ಆಕ್ರೋಶ
ಕೋಲಾರ ಜಿಲ್ಲೆಗೆ ಸಚಿವ ಸ್ಥಾನ ಸಿಗದೇ ಇರುವುದಕ್ಕೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೈಕಮಾಂಡ್ ಮತ್ತು ರಾಜ್ಯದ ನಾಯಕರು ಜಿಲ್ಲೆಗೆ ದೊಡ್ಡ ಅನ್ಯಾಯ ಮಾಡಿದ್ದಾರೆ. ತಮ್ಮ ಮಂತ್ರಿಗಿರಿ ತಪ್ಪಿಸಲು ಕೆಲವರು ಪ್ರಯತ್ನಿಸಿದ್ದು, ಕೋಲಾರದ ಜನರು ಮಂತ್ರಿಯಾಗಲು ನಿರೀಕ್ಷಿಸಿದ್ದರು, ಆದರೆ ಈಗ ನಿರಾಸೆ ಮೂಡಿದೆ ಎಂದು ನಾರಾಯಣಸ್ವಾಮಿ ನೋವು ತೋಡಿಕೊಂಡಿದ್ದಾರೆ.
- Rajendra Simha BL
- Updated on: Aug 3, 2026
- 9:58 pm
2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕೋಲಾರ ಜಿ.ಪಂ ನರೇಗಾ ಇಂಜಿನಿಯರ್
ಕೋಲಾರ ಜಿಲ್ಲಾ ಪಂಚಾಯತ್ನ ನರೇಗಾ ವಿಭಾಗದ ಇಂಜಿನಿಯರ್ ಕೃಷ್ಣಮೂರ್ತಿ ಮತ್ತು ಸಹಾಯಕ ಹುಸೇನ್ ಅಲಿ, ಕಾಮಗಾರಿ ಬಿಲ್ ಮಂಜೂರು ಮಾಡಲು 4 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಗುತ್ತಿಗೆದಾರರ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ, 2 ಲಕ್ಷ ಲಂಚ ಪಡೆಯುವಾಗ ಇಬ್ಬರನ್ನೂ ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
- Rajendra Simha BL
- Updated on: Jul 21, 2026
- 10:07 pm
ಕಂದಾಯ ಇಲಾಖೆಯ ರೆಕಾರ್ಡ್ ರೂಂನಲ್ಲಿ ಕೋತಿಗಳದ್ದೇ ಕಾರುಬಾರು! ವಿಡಿಯೋ ವೈರಲ್
Kolar News: ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕು ಕಚೇರಿಯ ಕಂದಾಯ ಇಲಾಖೆಯ ರೆಕಾರ್ಡ್ ರೂಂನಲ್ಲಿ ಕೋತಿಗಳು ರಾಜಾರೋಷವಾಗಿ ಓಡಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸರ್ಕಾರಿ ದಾಖಲೆಗಳ ಸುರಕ್ಷತೆ ಬಗ್ಗೆ ಸಾರ್ವಜನಿಕರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ವೈರಲ್ ವಿಡಿಯೋ ಸಹಿತ ಮಾಹಿತಿ ಇಲ್ಲಿದೆ.
- Rajendra Simha BL
- Updated on: Jul 21, 2026
- 10:29 am
ವರ್ಕ್ ಫ್ರಮ್ ಹೋಮ್ ಆಮಿಷ: ಕೋಲಾರದಲ್ಲಿ ಊದುಬತ್ತಿ ಕಂಪನಿಯಿಂದ 10 ಕೋಟಿ ರೂ ವಂಚನೆ!
Kolar work from home fraud: ಕೋಲಾರದಲ್ಲಿ ವರ್ಕ್ ಫ್ರಂ ಹೋಂ ಹೆಸರಲ್ಲಿ ಕಂಪನಿಯೊಂದು ಊದುಬತ್ತಿ ಪ್ಯಾಕಿಂಗ್ ಕೆಲಸ ನೀಡುವ ಆಮಿಷವೊಡ್ಡಿ ಸಾವಿರಾರು ಜನರಿಗೆ ಕೋಟ್ಯಂತರ ರೂ ವಂಚನೆ ಮಾಡಿದೆ. ಲಕ್ಷಾಂತರ ರೂ ಹೂಡಿಕೆ ಮಾಡಿದ್ದ ಸಂತ್ರಸ್ತರು ಕಚೇರಿ ಮುಂದೆ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
- Rajendra Simha BL
- Updated on: Jul 20, 2026
- 3:14 pm
ಕೋಲಾರ: ಬಂಗಾರ ತಿರುಪತಿ ದೇವಾಲಯದ ಹುಂಡಿ ಹಣ ಕದ್ದು ಸಿಕ್ಕಿಬಿದ್ದ ನೌಕರ
ಕೋಲಾರದ ಬಂಗಾರ ತಿರುಪತಿ ನೇತ್ರ ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ಹುಂಡಿ ಎಣಿಕೆ ವೇಳೆ ನೌಕರ ಸಾವಿರಾರು ರೂ ಹಣ ಕದ್ದು ಸಿಕ್ಕಿಬಿದ್ದ ಘಟನೆ ನಡೆದಿದೆ. ಮುಜರಾಯಿ ಅಧಿಕಾರಿಗಳು ಹಣವನ್ನು ವಶಪಡಿಸಿಕೊಂಡು ಕ್ರಮಕ್ಕೆ ಮುಂದಾಗಿದ್ದಾರೆ. ದೇವಾಲಯದ ಮುಖ್ಯ ಹುಂಡಿಯಲ್ಲಿ 13 ಲಕ್ಷ ರೂ ಹಾಗೂ ಅನ್ನದಾಸೋಹ ಹುಂಡಿಯಲ್ಲಿ 53 ಸಾವಿರ ರೂ ಸಂಗ್ರಹವಾಗಿದೆ ಎಂದು ಇಓ ಮಂಜುನಾಥ್ ತಿಳಿಸಿದ್ದಾರೆ.
- Rajendra Simha BL
- Updated on: Jul 16, 2026
- 4:51 pm
ಬೇತಾಳ ದೇವಾಲಯದ ಮೇಲೆ ಬೇತಮಂಗಲ ಪೊಲೀಸರಿಂದ ದಿಢೀರ್ ದಾಳಿ: ಕಾರಣ ಇಲ್ಲಿದೆ
ಕೋಲಾರ ಜಿಲ್ಲೆ ಕೆಜಿಎಫ್ನ ಬೇತಾಳ ದೇವಾಲಯದಲ್ಲಿ ಅಕ್ರಮ ಚಟುವಟಿಕೆಗಳು ಹಾಗೂ ಮಹಿಳೆಯರ ಮೇಲಿನ ಹಿಂಸೆಯ ಆರೋಪದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಅಮಾವಾಸ್ಯೆ ದಿನದಂದು ನಡೆದ ಈ ಕಾರ್ಯಾಚರಣೆಯಲ್ಲಿ ದೇವಾಲಯದ ನಿರ್ಮಾತೃ ಅಗೋರಿ ಚಂದ್ರನಾಥ್ ಗುರೂಜಿಯನ್ನು ವಶಕ್ಕೆ ಪಡೆಯಲಾಗಿದ್ದು, ಅವರ ವಿರುದ್ಧ ಮಾಟಮಂತ್ರ, ಕುಡಿತ ಬಿಡಿಸುವ ನೆಪದಲ್ಲಿ ವಂಚನೆ ಆರೋಪಗಳು ಕೇಳಿಬಂದಿವೆ.
- Rajendra Simha BL
- Updated on: Jul 14, 2026
- 5:26 pm
ಕೋಲಾರದಲ್ಲಿ ಪಾತಾಳ ಕಂಡ ಟೊಮ್ಯಾಟೋ ಬೆಲೆ: ರಸ್ತೆ ಬದಿ ತಂದು ಬೆಳೆ ಸುರಿದ ರೈತರು
ಕೋಲಾರ ಜಿಲ್ಲೆಯಲ್ಲಿ ಟೊಮ್ಯಾಟೊ ಬೆಲೆ ದಿಢೀರ್ ಕುಸಿತದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಒಂದು ತಿಂಗಳ ಹಿಂದೆ 700-800 ರೂ. ಇದ್ದ 15 ಕೆಜಿ ಬಾಕ್ಸ್ ಟೊಮ್ಯಾಟೊ ಬೆಲೆ ಈಗ 50-200 ರೂ.ಗೆ ಕುಸಿದಿದೆ. ಉತ್ಪಾದನಾ ವೆಚ್ಚವೂ ಸಿಗದ ಕಾರಣ ರೈತರು ತಮ್ಮ ಬೆಳೆಗಳನ್ನು ರಸ್ತೆ ಬದಿ ಮತ್ತು ಕೆರೆಗಳಲ್ಲಿ ಸುರಿಯುತ್ತಿದ್ದಾರೆ. ರೈತರು ಸರ್ಕಾರದಿಂದ ಬೆಂಬಲ ಬೆಲೆಗೆ ಮನವಿ ಮಾಡಿದ್ದಾರೆ. ಬೇಡಿಕೆಗಿಂತ ಹೆಚ್ಚು ಉತ್ಪಾದನೆಯೇ ಬೆಲೆ ಇಳಿಕೆಗೆ ಪ್ರಮುಖ ಕಾರಣ ಎನ್ನಲಾಗಿದೆ.
- Rajendra Simha BL
- Updated on: Jul 9, 2026
- 7:06 pm
ಚಿನ್ನದ ನಾಡು ಕೆಜಿಎಫ್ನಲ್ಲಿ ಬಹುದೊಡ್ಡ ಲ್ಯಾಂಡ್ ಸ್ಕ್ಯಾಮ್, ಬಲಾಢ್ಯರ ಪಾಲಾಗುತ್ತಿದೆ ಸರ್ಕಾರಿ ಜಮೀನು
Kolar News: ಅದು ಬರೋಬ್ಬರಿ 150 ಕೋಟಿ ರೂಪಾಯಿ ಬೆಲೆ ಬಾಳುವ ಸುಮಾರು 60 ಎಕರೆ ಸರ್ಕಾರಿ ಜಮೀನು. ಈ ಸರ್ಕಾರಿ ಜಮೀನಿಗೆ ರಾತ್ರೋ ರಾತ್ರಿ ನಕಲಿ ದಾಖಲೆಗಳನ್ನು ಸೃಷ್ಟಿಮಾಡಿಕೊಂಡು ಮಾಲೀಕರು ಪ್ರತ್ಯಕ್ಷರಾಗಿದ್ದಾರೆ. ಇದರ ಹಿಂದೆ ಬಹುದೊಡ್ಡ ಅಕ್ರಮವೇ ನಡೆದಿದೆ ಅನ್ನೋ ಆರೋಪ ಕೇಳಿ ಬಂದಿದ್ದು, ಇದೀಗ ಚಿನ್ನದ ನಾಡಿನಲ್ಲಿ ದೊಡ್ಡದೊಂದು ಲ್ಯಾಂಡ್ ಸ್ಕ್ಯಾಮ್ ಬಟಾಬಯಲಾಗಿದೆ.
- Rajendra Simha BL
- Updated on: Jul 7, 2026
- 8:14 pm
ಆಷಾಢ ಆರಂಭದಲ್ಲೇ ಮಾಂಸಪ್ರಿಯರಿಗೆ ಶಾಕ್: ಚಿಕನ್, ಮೊಟ್ಟೆ ಬೆಲೆಯಲ್ಲಿ ದಾಖಲೆಯ ಏರಿಕೆ
ಆಷಾಡ ಮಾಸ ಆರಂಭದಲ್ಲೇ ಕೋಲಾರದಲ್ಲಿ ಕೋಳಿ ಮತ್ತು ಮೊಟ್ಟೆ ಬೆಲೆಯಲ್ಲಿ ದಾಖಲೆ ಏರಿಕೆ ಕಂಡಿವೆ. ಕೋಳಿ ಫಾರಂಗಳಲ್ಲಿ ಉತ್ಪಾದನೆ ಕುಸಿತ, ವಾತಾವರಣ ಏರುಪೇರು, ರೋಗಗಳು ಇದಕ್ಕೆ ಮುಖ್ಯ ಕಾರಣ. ಮಾಂಸಪ್ರಿಯರು ಮತ್ತು ಹೋಟೆಲ್ ಮಾಲೀಕರಿಗೆ ಇದು ದೊಡ್ಡ ಆರ್ಥಿಕ ಹೊರೆಯಾಗಿದೆ. ಮುಂದಿನ ಒಂದು-ಎರಡು ತಿಂಗಳು ಇದೇ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆಯಿದೆ.
- Rajendra Simha BL
- Updated on: Jul 6, 2026
- 5:07 pm
ದುರಂತ್ ಎಕ್ಸ್ಪ್ರೆಸ್ ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ಕೋಲ್ಕತ್ತಾದಿಂದ ಬೆಂಗಳೂರಿಗೆ ಬರುತ್ತಿದ್ದ ದುರಂತ್ ಎಕ್ಸ್ಪ್ರೆಸ್ಗೆ ಬಾಂಬ್ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ ರೈಲನ್ನು ನಿಲ್ಲಿಸಿ ತೀವ್ರ ಪರಿಶೀಲನೆ ನಡೆಸಲಾಯಿತು. ರೈಲ್ವೆ, ಸ್ಥಳೀಯ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನದಳದೊಂದಿಗೆ ಸಂಪೂರ್ಣ ತಪಾಸಣೆ ಮಾಡಿದರು. ಈ ಸಂಬಂಧ ಬಾಂಬ್ ಬೆದರಿಕೆ ಕರೆ ಮಾಡಿದ್ದ ಓರ್ವ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
- Rajendra Simha BL
- Updated on: Jul 5, 2026
- 4:06 pm