AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ

Author - TV9 Kannada

rajendra.banavadi@tv9.com

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More
Follow On:
ಕೋಲಾರ: ಬೈಕ್​ಗೆ ಟ್ರ್ಯಾಕ್ಟರ್​ ಡಿಕ್ಕಿ; ಮಗಳು ಸೇರಿ ತಂದೆ-ತಾಯಿ ಸ್ಥಳದಲ್ಲೇ ದುರ್ಮರಣ

ಕೋಲಾರ: ಬೈಕ್​ಗೆ ಟ್ರ್ಯಾಕ್ಟರ್​ ಡಿಕ್ಕಿ; ಮಗಳು ಸೇರಿ ತಂದೆ-ತಾಯಿ ಸ್ಥಳದಲ್ಲೇ ದುರ್ಮರಣ

kolar news: ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ವಿ.ಗುಟ್ಟಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೀಕರ ಅಪಘಾತ ಸಂಭವಿಸಿದೆ. ಬೈಕ್‌ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮುಳಬಾಗಿಲು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತೊಂದು ಪ್ರಕರಣದಲ್ಲಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು ಸವಾರ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಮೆಣಸೆ ಸಮೀಪದ ಶಿಡ್ಲೆ ಬಳಿ ನಡೆದಿದೆ.

ಬಿರಿಯಾನಿಯಲ್ಲಿ ಸತ್ತ ಹಲ್ಲಿ ಪತ್ತೆ: ಒಬ್ಬೊಬ್ಬರೇ ಗ್ರಾಹಕರು ಆಸ್ಪತ್ರೆ ದಾಖಲು

ಬಿರಿಯಾನಿಯಲ್ಲಿ ಸತ್ತ ಹಲ್ಲಿ ಪತ್ತೆ: ಒಬ್ಬೊಬ್ಬರೇ ಗ್ರಾಹಕರು ಆಸ್ಪತ್ರೆ ದಾಖಲು

Kolar News: ಕೋಲಾರ ಜಿಲ್ಲೆಯ ಬಂಗಾರಪೇಟೆ ಪಟ್ಟಣದ‌ ಬಿಜಿಟಿ ಹೋಟೆಲ್​​​ನಲ್ಲಿ ಅನುಹುತವೊಂದು ನಡೆದಿದೆ. ಬಿರಿಯಾನಿ ಮತ್ತು ಮೊಸರು ಬಜ್ಜಿಯಲ್ಲಿ ಸತ್ತ ಹಲ್ಲಿ ಪತ್ತೆ ಆಗಿದೆ. ಆದರೆ ಬಿರಿಯಾನಿ ತಿಂದಿದ್ದ ಗ್ರಹಕರಿಬ್ಬರು ಇದೀಗ ವಾಂತಿ, ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ಸದ್ಯ ಬಿಜಿಟಿ ಹೋಟೆಲ್ ಬಂದ್​ಗೆ ಆದೇಶಿಸಲಾಗಿದೆ.

ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!

ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!

ನಗರದ ಸರ್ ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದ ಬಳಿ ನಿಲ್ಲಿಸಲಾಗಿದ್ದ ಖಾಸಗಿ ಕಂಪನಿಯ ಬಸ್ ಮೇಲೆ ಬೃಹತ್ ಮರದ ಕೊಂಬೆಯೊಂದು ಮುರಿದು ಬಿದ್ದಿರುವ ಘಟನೆ ನಡೆದಿದೆ. ತೀವ್ರ ಗಾಳಿಯ ಹಿನ್ನೆಲೆಯಲ್ಲಿ ಮರದ ಕೊಂಬೆ ಮುರಿದು ಬಿದ್ದ ಪರಿಣಾಮ ಬಸ್ ಸಂಪೂರ್ಣವಾಗಿ ಜಖಂಗೊಂಡಿದೆ. ಈ ಬಸ್ ಖ್ಯಾತ ‘ಟಾಟಾ ಎಲೆಕ್ಟ್ರಾನಿಕ್ಸ್’ ಕಂಪನಿಗೆ ಸೇರಿದ್ದಾಗಿದೆ ಎಂದು ತಿಳಿದುಬಂದಿದೆ. ಘಟನೆ ಸಂಭವಿಸಿದ ವೇಳೆ ಅದೃಷ್ಟವಶಾತ್ ಬಸ್‌ನಲ್ಲಿದ್ದ ಚಾಲಕ ಹಾಗೂ ಕ್ಲೀನರ್ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಮತ್ತು ಸಾರ್ವಜನಿಕರು ಬಸ್ ಮೇಲಿದ್ದ ಕೊಂಬೆಯನ್ನು ತೆರವುಗೊಳಿಸಲು ಕ್ರಮ ಕೈಗೊಂಡಿದ್ದಾರೆ.

ಕೋಲಾರದಲ್ಲಿ ವಾಹನಗಳನ್ನು ತಡೆದು, ರಸ್ತೆ ಬಂದ್​ ಮಾಡಿ ಮಾವು ಬೆಳೆಗಾರರ ಪ್ರತಿಭಟನೆ!

ಕೋಲಾರದಲ್ಲಿ ವಾಹನಗಳನ್ನು ತಡೆದು, ರಸ್ತೆ ಬಂದ್​ ಮಾಡಿ ಮಾವು ಬೆಳೆಗಾರರ ಪ್ರತಿಭಟನೆ!

ಮಾವಿನ ಹಣ್ಣಿಗೆ ಸೂಕ್ತ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ಕೋಲಾರ ಜಿಲ್ಲೆಯಲ್ಲಿಂದು ಮಾವು ಬೆಳೆಗಾರರು ‘ಕೋಲಾರ ಬಂದ್’ಗೆ ಕರೆ ನೀಡಿದ್ದಾರೆ. ಜಿಲ್ಲೆಯಾದ್ಯಂತ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ರೈತರು ಬೀದಿಗಿಳಿದು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಒಂದು ಟನ್ ಮಾವಿಗೆ 3,000 ರಿಂದ 4,000 ರೂ. ಮಾತ್ರ ದೊರೆಯುತ್ತಿದ್ದು, ಇದು ರೈತರಿಗೆ ದೊಡ್ಡ ನಷ್ಟ ಉಂಟುಮಾಡುತ್ತಿದೆ. ಮಾವು ಬೆಳೆಗಾರರ ಸಂಘ ಹಾಗೂ ಇತರೆ ಸಂಘಟನೆಗಳು ಸರ್ಕಾರ ಕನಿಷ್ಠ 8,000 ರೂ.ನಿಂದ 10,000 ರೂ. ಬೆಂಬಲ ಬೆಲೆಯನ್ನು ಘೋಷಿಸಬೇಕೆಂದು ಆಗ್ರಹಿಸಿವೆ.

ಮಾವಿಗೆ ಬೆಂಬಲ ಬೆಲೆಗೆ ಬೆಳೆಗಾರರ ಪಟ್ಟು: ಸೋಮವಾರ ಸ್ತಬ್ಧವಾಗುತ್ತಾ ಕೋಲಾರ?

ಮಾವಿಗೆ ಬೆಂಬಲ ಬೆಲೆಗೆ ಬೆಳೆಗಾರರ ಪಟ್ಟು: ಸೋಮವಾರ ಸ್ತಬ್ಧವಾಗುತ್ತಾ ಕೋಲಾರ?

ಮಾವಿನ ಬೆಲೆ ಪಾತಾಳಕ್ಕೆ ಕುಸಿದ ಹಿನ್ನೆಲೆಯಲ್ಲಿ ಬೆಂಬಲ ಬೆಲೆಗೆ ಆಗ್ರಹಿಸಿ ಮಾವು ಬೆಳೆಗಾರರು ಜೂನ್ 22ರ ಸೋಮವಾರ ಕೋಲಾರ ಜಿಲ್ಲಾ ಬಂದ್‌ಗೆ ಕರೆ ನೀಡೋದಾಗಿ ಎಚ್ಚರಿಸಿದ್ದಾರೆ. ಸತತವಾಗಿ 4 ವಾರಗಳಿಂದ ಮಾವು ಬೆಲೆ ಪಾತಾಳಕ್ಕೆ ಕುಸಿದಿದ್ದು, ಸದ್ಯ ಮಾರುಕಟ್ಟೆಯಲ್ಲಿ ಒಂದು ಟನ್ ಮಾವು 3ರಿಂದ 4 ಸಾವಿರ ರೂಪಾಯಿಗೆ ಮಾರಾಟವಾಗುತ್ತಿದೆ. ಹೀಗಾಗಿ ಆಂಧ್ರ ಮಾದರಿಯಲ್ಲಿ ತಕ್ಷಣವೇ ಪರಿಹಾರ ನೀಡುವಂತೆ ರೈತರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ನಾಯಕತ್ವ ಬದಲಾದರೂ ಕೋಲಾರ ಕಾಂಗ್ರೆಸ್​ನಲ್ಲಿ ಮುಗಿಯದ ಬಣ ಬಡಿದಾಟ

ನಾಯಕತ್ವ ಬದಲಾದರೂ ಕೋಲಾರ ಕಾಂಗ್ರೆಸ್​ನಲ್ಲಿ ಮುಗಿಯದ ಬಣ ಬಡಿದಾಟ

ಕೋಲಾರ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಮುಖಂಡರ ಸಭೆಯಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಹಾಗೂ ಸಚಿವ ಕೆ.ಹೆಚ್.ಮುನಿಯಪ್ಪ ಬೆಂಬಲಿಗರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ. ಈ ಘಟನೆಯಲ್ಲಿ ಕೆ.ಹೆಚ್.ಮುನಿಯಪ್ಪ ಬಣದ ಮಂಜುನಾಥ್ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಫ್ಸರ್ ನಡುವೆ ಅವಾಚ್ಯ ಪದಗಳ ಬಳಕೆ ಸಹಿತ ಗಲಾಟೆ ಸಂಭವಿಸಿದೆ.

ಕೆಂಪು ಸುಂದರಿಗೆ ಮತ್ತೆ ಡಿಮ್ಯಾಂಡ್! ಟೊಮೆಟೊ ಬೆಳೆದ ರೈತರಿಗೆ ಜಾಕ್‌ಪಾಟ್

ಕೆಂಪು ಸುಂದರಿಗೆ ಮತ್ತೆ ಡಿಮ್ಯಾಂಡ್! ಟೊಮೆಟೊ ಬೆಳೆದ ರೈತರಿಗೆ ಜಾಕ್‌ಪಾಟ್

ಯುದ್ಧದ ಎಫೆಕ್ಟ್​ನಿಂದ ತೀವ್ರ ಕುಸಿತ ಕಂಡಿದ್ದ ಕಿಚನ್ ಕ್ವೀನ್ ಟೊಮೆಟೊಗೆ ಇದೀಗ ಮತ್ತೆ ಡಿಮ್ಯಾಂಡ್​ ಬಂದಿದೆ. ಕರ್ನಾಟಕ ಸೇರಿದಂತೆ ಹೊರ ರಾಜ್ಯಗಳಿಂದಲೂ ಟೊಮೆಟೊಗೆ ಬೇಡಿಕೆ ಹೆಚ್ಚಾಗಿದ್ದು, ವ್ಯಾಪಾರಿಗಳು ಕೋಲಾರದಲ್ಲಿ ಬೀಡುಬಿಟ್ಟಿದ್ದಾರೆ. ಸದ್ಯ ಬೆಲೆ ಏರಿಕೆಯಿಂದ ಟೊಮೆಟೊ ಬೆಳೆಗಾರರ ಮುಖದಲ್ಲಿ ಮಂದಹಾಸ ಮೂಡಿದೆ.

ಮಾಲೂರಿನಲ್ಲಿ 80 ಕೋಟಿ ರೂ. ಸರ್ಕಾರಿ ಭೂ ಹಗರಣ: ದಾಖಲೆ ನೋಡ್ತಿದ್ದಂತೆ ಚೇರ್ ಬಿಟ್ಟು ಎದ್ದ ತಹಶೀಲ್ದಾರ್ ರೂಪಾ!

ಮಾಲೂರಿನಲ್ಲಿ 80 ಕೋಟಿ ರೂ. ಸರ್ಕಾರಿ ಭೂ ಹಗರಣ: ದಾಖಲೆ ನೋಡ್ತಿದ್ದಂತೆ ಚೇರ್ ಬಿಟ್ಟು ಎದ್ದ ತಹಶೀಲ್ದಾರ್ ರೂಪಾ!

ಮಾಲೂರಿನಲ್ಲಿ 80 ಕೋಟಿ ರೂ. ಮೌಲ್ಯದ 16 ಎಕರೆ ಸರ್ಕಾರಿ ಭೂಮಿ ನಕಲಿ ದಾಖಲೆಗಳ ಮೂಲಕ ಭೂಗಳ್ಳರು ಕಬಳಿಸಿದ್ದಾರೆ ಎಂದು ಮಾಜಿ ಶಾಸಕ ಕೆ.ಎಸ್. ಮಂಜುನಾಥ್ ಗೌಡ ಆರೋಪಿಸಿದ್ದಾರೆ. ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಅವರು, 1963ರಲ್ಲಿ ಅಧಿಕಾರಿಗಳ ಶಾಮೀಲಿನಿಂದ ಭೂಮಿ ಖಾತೆ ಬದಲಾಯಿಸಲಾಗಿದೆ ಎಂದರು. ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ, ಇಲ್ಲದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.

‘ಲಕ್ಷಾಂತರ ರೂ. ಅನುದಾನ ಕೊಟ್ಟರೂ ಜಿಲ್ಲೆಯಲ್ಲಿ ಗಾಂಜಾ, ಬೆಟ್ಟಿಂಗ್ ನಿಂತಿಲ್ಲ ಯಾಕೆ’?: ಕೋಲಾರ ಎಸ್ಪಿಗೆ ಶಾಸಕ ಸಮೃದ್ಧಿ ಮಂಜುನಾಥ್ ತರಾಟೆ

‘ಲಕ್ಷಾಂತರ ರೂ. ಅನುದಾನ ಕೊಟ್ಟರೂ ಜಿಲ್ಲೆಯಲ್ಲಿ ಗಾಂಜಾ, ಬೆಟ್ಟಿಂಗ್ ನಿಂತಿಲ್ಲ ಯಾಕೆ’?: ಕೋಲಾರ ಎಸ್ಪಿಗೆ ಶಾಸಕ ಸಮೃದ್ಧಿ ಮಂಜುನಾಥ್ ತರಾಟೆ

ಕೋಲಾರ ಜಿಲ್ಲೆಯಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ ಮತ್ತು ಅಪರಾಧ ಕೃತ್ಯಗಳ ಹೆಚ್ಚಳ ಕುರಿತು ಮುಳಬಾಗಿಲು ಶಾಸಕ ಸಮೃದ್ಧಿ ಮಂಜುನಾಥ್ ಅವರು ಜಿಲ್ಲಾ ಪಂಚಾಯತ್ ದಿಶಾ ಸಭೆಯಲ್ಲಿ ಎಸ್ಪಿ ಕನ್ನಿಕಾ ಸಿಕ್ರಿವಾಲ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಅಪ್ರಾಪ್ತರ ಮೇಲಿನ ಅತ್ಯಾಚಾರ, ಡ್ರಗ್ಸ್, ಗಾಂಜಾ ಮಾರಾಟ ಹಾಗೂ ಕ್ರಿಕೆಟ್ ಬೆಟ್ಟಿಂಗ್ ಜಾಲದ ಬಗ್ಗೆ ಪ್ರಶ್ನಿಸಿ, ಪೊಲೀಸ್ ಇಲಾಖೆಯ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದರು.

ಸಚಿವ ಸ್ಥಾನಕ್ಕಾಗಿ ದಿಲ್ಲಿಯಲ್ಲಿ ಕೋಲಾರ ಜಿಲ್ಲೆಯ ಶಾಸಕರಿಂದ ಲಾಬಿ: ಇತ್ತ ಕ್ಷೇತ್ರದಲ್ಲಿ ಅಭಿಮಾನಿಗಳಿಂದ ಪೂಜೆ ಪುನಸ್ಕಾರ

ಸಚಿವ ಸ್ಥಾನಕ್ಕಾಗಿ ದಿಲ್ಲಿಯಲ್ಲಿ ಕೋಲಾರ ಜಿಲ್ಲೆಯ ಶಾಸಕರಿಂದ ಲಾಬಿ: ಇತ್ತ ಕ್ಷೇತ್ರದಲ್ಲಿ ಅಭಿಮಾನಿಗಳಿಂದ ಪೂಜೆ ಪುನಸ್ಕಾರ

ಜೂನ್​ 3ರಂದು ಡಿಕೆ ಶಿವಕುಮಾರ್​ ಸಿಎಂ ಆಗಿ ಪಟ್ಟಾಭಿಷೇಕ ನಡೆಯಲಿದೆ. ಡಿಕೆ ಶಿವಕುಮಾರ್​ ಪಟ್ಟಾಭಿಷೇಕದ ಜೊತೆಗೆ ಸಚಿವರಾಗಿ ಯಾರೆಲ್ಲಾ ಪ್ರಮಾಣವಚನ ಸ್ವೀಕರಿಸ್ತಾರೆಂಬ ಕುತೂಹಲ ಗರಿಗೆದರಿದೆ. ಈಗಾಗಲೇ ಕಾಂಗ್ರೆಸ್​ ನಾಯಕರು ದೆಹಲಿ ತೆರಳಿದ್ದು ಲಾಬಿ ಜೋರಾಗಿದೆ. ಅತ್ತ ನಾಯಕರು ಸಚಿವ ಸಂಪುಟ ಸೇರಲು ಕೋಲಾರ ಜಿಲ್ಲೆಯ ಶಾಸಕರಿಂದ ಕಸರತ್ತು ನಡೆಸಿದ್ದರೆ, ಇತ್ತ ಅವರ ಬೆಂಬಲಿಗರಿಂದ ಪೂಜೆ ಪುನಸ್ಕಾರ ಮಾಡಲಾಗುತ್ತಿದೆ.

ಮಳೆ ಅಬ್ಬರಕ್ಕೆ ಕೆಜಿಎಫ್​​ನಲ್ಲಿ ಕುಸಿದ ಕಟ್ಟಡದ ಗೋಡೆ: 7 ಮಂದಿ ಬದುಕಿದ್ದೇ ಪವಾಡ!

ಮಳೆ ಅಬ್ಬರಕ್ಕೆ ಕೆಜಿಎಫ್​​ನಲ್ಲಿ ಕುಸಿದ ಕಟ್ಟಡದ ಗೋಡೆ: 7 ಮಂದಿ ಬದುಕಿದ್ದೇ ಪವಾಡ!

ಕೋಲಾರದ ಕೆಜಿಎಫ್‌ನಲ್ಲಿ ಭಾರಿ ಮಳೆಗೆ ಕಟ್ಟಡವೊಂದರ ಗೋಡೆ ಕುಸಿದಿದ್ದು, 7 ಮಂದಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವರುಣಾರ್ಬಟಕ್ಕೆ ಜಿಲ್ಲೆಯ ವಿವಿಧೆಡೆ ಹಲವು ಅವಾಂತರಗಳು ನಡೆದಿದ್ದು, ರಾಬರ್ಟ್ ಸನ್ ಪೇಟೆಯಲ್ಲಿ ಬೃಹತ್ ಮರಗಳು ಧರೆಗುರುಳಿದ್ದರೂ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸದ ಅಧಿಕಾರಿಗಳ ವಿರುದ್ಧ ಸ್ಥಳೀಯರು ಕಿಡಿ ಕಾರಿದ್ದಾರೆ.

ಹಂಪಿಯಿಂದ ಕೋಲಾರಕ್ಕೆ ಶಿಫ್ಟ್: ಸ್ಥಳ ಬದಲಾಗಿದ್ದಕ್ಕೆ ವಿಚಲಿತವಾಗಿ ಆರ್ಭಟಿಸಿದ ಲಕ್ಷ್ಮೀ ಆನೆ

ಹಂಪಿಯಿಂದ ಕೋಲಾರಕ್ಕೆ ಶಿಫ್ಟ್: ಸ್ಥಳ ಬದಲಾಗಿದ್ದಕ್ಕೆ ವಿಚಲಿತವಾಗಿ ಆರ್ಭಟಿಸಿದ ಲಕ್ಷ್ಮೀ ಆನೆ

ಹಂಪಿಯ ವಿರುಪಾಕ್ಷೇಶ್ವರ ದೇವಾಲಯದ ಲಕ್ಷ್ಮೀ ಆನೆಯನ್ನು ಅನಾರೋಗ್ಯ ಹಿನ್ನೆಲೆ ಕೋಲಾರದ ನರಸಾಪುರ ಬಳಿಯ ರಾಜ್ಯದ ಏಕೈಕ ಆನೆ ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಹೊಸ ಪರಿಸರಕ್ಕೆ ಹೊಂದಿಕೊಳ್ಳುವಾಗ ಆನೆ ಕೊಂಚ ವಿಚಲಿತವಾಗಿ ಆರ್ಭಟಿಸಿದೆ. ಆನೆ ಸ್ಥಳಾಂತರಕ್ಕೆ ಭಕ್ತರು ಪ್ರತಿಭಟನೆ ನಡೆಸಿದ್ದು, ಮೂರು ತಿಂಗಳ ಚಿಕಿತ್ಸೆ ನಂತರ ಲಕ್ಷ್ಮೀ ಆನೆಯನ್ನು ವಾಪಸ್ ತರುವ ಭರವಸೆ ಮೇರೆಗೆ ಪ್ರತಿಭಟನೆ ಹಿಂಪಡೆಲಾಯಿತು.