18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.
ಕೋಲಾರ: ಮೈತುಂಬಾ ಗಾಯ, ಇನ್ಫೆಕ್ಷನ್ ಭೀತಿ; ಕೆಜಿಎಫ್ನಲ್ಲಿ ಅದೊಂದು ಹುಳು ಕಾಟಕ್ಕೆ ಜನರು ತತ್ತರ
Kolar News: ಕೋಲಾರದ ಕೆಜಿಎಫ್ ಬೋರಿಲಾಲ್ ಪೇಟೆಯಲ್ಲಿ ಲಕ್ಷಾಂತರ ಕಂಬಳಿ ಹುಳುಗಳ ಕಾಟದಿಂದ ಜನರು ತತ್ತರಿಸಿದ್ದಾರೆ. ಚರ್ಮದ ತುರಿಕೆ, ಗಾಯಗಳಿಂದ ನಿವಾಸಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸ್ವಚ್ಛತೆಯ ಕೊರತೆ ಮತ್ತು ಹರಳು ಗಿಡಗಳ ಹೆಚ್ಚಳ ಇದಕ್ಕೆ ಕಾರಣವೆಂದಿದ್ದಾರೆ.
- Rajendra Simha BL
- Updated on: Aug 27, 2026
- 9:25 pm
ಕೋಲಾರ ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ಜಿಲ್ಲೆಯಲ್ಲಿ ಅರಣ್ಯ ಭೂಮಿ ಒತ್ತುವರಿ ವಿಚಾರ ಕಳೆದ ನಾಲ್ಕು ವರ್ಷಗಳಿಂದ ಅರಣ್ಯ ಇಲಾಖೆ ಮತ್ತು ರೈತರ ನಡುವಿನ ಸಂಘರ್ಷಕ್ಕೆ ಕಾರಣವಾಗಿದೆ. ಈ ನಡುವೆ ಕೋಲಾರ ಉಸ್ತುವಾರಿ ವಹಿಸಿಕೊಂಡಿರುವ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಅವರು ಜಂಟಿ ಸರ್ವೆ ಮಾಡಿ ತೆರವು ಮಾಡಿ ಯಾವುದೇ ಬೆದರಿಕೆಗೆ ಹೆದರಲ್ಲ ಒತ್ತುವರಿಯಾಗಿದ್ರೆ ಬಿಡೋ ಮಾತಿಲ್ಲ ಎಂದಿದ್ದಾರೆ. ಕಳೆದ ನಾಲ್ಕು ವರ್ಷಗಳ ಹಿಂದೆ ಅಂದರೆ 23-ಆಗಸ್ಟ್-2023 ರಂದು ಜಿಲ್ಲೆಯಲ್ಲಿ ಆರಂಭವಾದ ಅರಣ್ಯ ಒತ್ತುವರಿ ತೆರವು ಬಹುದೊಡ್ಡ ಕಾರ್ಯಾಚರಣೆ ಇನ್ನೂ ನಿಂತಿಲ್ಲ. ಈವರೆಗೆ ಸರಾಸರಿ 3500 ಎಕರೆಯಷ್ಟು ಅರಣ್ಯ ಒತ್ತುವರಿ ತೆರವು ಮಾಡಲಾಗಿದೆ ಆದರೂ, ಮುಂದಿನ ತೆರವು ಕಾರ್ಯಾಚರಣೆ ಹಲವು ಅಡೆತಡೆಗಳು ಉಂಟಾಗುತ್ತಿವೆ.
- Rajendra Simha BL
- Updated on: Aug 23, 2026
- 7:01 pm
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ: ಆಗಿದ್ದೇನು?
ವಿಮೆ ಹಣಕ್ಕಾಗಿ ತನ್ನದೇ ಕೊಲೆ ನಾಟಕವಾಡಿದ್ದ ಕೋಲಾರದ ಅರುಣ್ ಕುಮಾರ್ ಅನ್ನು 11 ವರ್ಷಗಳ ಬಳಿಕ ಚೆನ್ನೈನಲ್ಲಿ ಬಂಧಿಸಲಾಗಿದೆ. 2015ರಲ್ಲಿ ಈ ವಂಚಕ ಸತ್ತವರ ದೇಹ ಬಳಸಿಕೊಂಡು ತನ್ನ ಹತ್ಯೆಯಾಗಿದೆ ಎಂದು ನಂಬಿಸಿದ್ದ. ಪೊಲೀಸರ ತನಿಖೆಯಿಂದ ಸತ್ಯ ಬಯಲಾಗಿ, ಕೊಲೆ ಪ್ರಕರಣವು ವಂಚನೆಯಾಗಿ ಬದಲಾಗಿತ್ತು. ಕೋರ್ಟ್ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕ್ಯಾಸಂಬಳ್ಳಿ ಪೊಲೀಸರು ಸೆರೆ ಹಿಡಿದಿದ್ದಾರೆ.
- Rajendra Simha BL
- Updated on: Aug 23, 2026
- 6:26 pm
ರೈತರ ಮೊಗದಲ್ಲಿ ನಗು ತಂದ ವರಮಹಾಲಕ್ಷ್ಮಿ: ಬರಗಾಲದಲ್ಲೂ ಹೂವು ಬೆಳೆಗಾರರಿಗೆ ಒಲಿದ ಭಾಗ್ಯಲಕ್ಷ್ಮಿ
Kolar Flower Prices Hike: ಬರಗಾಲದ ಮಧ್ಯೆ ಬಂದಿರುವ ವರಮಹಾಲಕ್ಷ್ಮಿ ಹಬ್ಬ ಹೂವು ಬೆಳೆಗಾರರಿಗೆ ಸಾಕಷ್ಟು ಸಂತಸ ತಂದಿದೆ. ಏಕೆಂದರೆ ಕೋಲಾರ ಮಾರುಕಟ್ಟೆಯಲ್ಲಿ ಹೂವಿನ ಬೆಲೆ ಗಗನಕ್ಕೇರಿದೆ. ಹೀಗಾಗಿ ಹೂ ಬೆಳೆದ ರೈತನಿಗೆ ಭಾಗ್ಯಲಕ್ಷ್ಮಿಯೇ ಒಲೆದಿದ್ದಾಳೆ. ಆದರೆ ಬೆಲೆ ಏರಿಕೆಯಿಂದ ಗ್ರಾಹಕರು ಶಾಕ್ ಆಗಿದ್ದಾರೆ.
- Rajendra Simha BL
- Updated on: Aug 20, 2026
- 9:35 pm
ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ಲೀಟರ್ಗೆ ₹10 ದರ ಏರಿಕೆಗೆ ಆಗ್ರಹ
Kolar News: ಕೋಲಾರದಲ್ಲಿ ಹಾಲು ಉತ್ಪಾದಕರು ಬುಧವಾರ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ನಡೆಸಿದರು. ಹಾಲಿನ ಖರೀದಿ ದರವನ್ನು ಲೀಟರ್ಗೆ 10 ರೂಪಾಯಿಗೆ ಹೆಚ್ಚಿಸುವುದು, ಪಶು ಆಹಾರದ ಬೆಲೆ ಇಳಿಸುವುದು ಹಾಗೂ ಪ್ರೋತ್ಸಾಹಧನವನ್ನು 5 ರೂ.ನಿಂದ 7 ರೂ.ಗೆ ಏರಿಸುವಂತೆ ಆಗ್ರಹಿಸಿದರು.
- Rajendra Simha BL
- Updated on: Aug 19, 2026
- 12:50 pm
ಕೋಲಾರ: ವರ್ಕ್ ಫ್ರಂ ಹೋಂ, ಹಣ ಡಬಲ್ ಆಮಿಷ; ಕೋಟ್ಯಂತರ ರೂ ವಂಚನೆ: ನಾಲ್ವರ ಬಂಧನ
Kolar Work-From-Home Scam: ಮನೆಯಲ್ಲೇ ಕುಳಿತ ಕೆಲಸ ಮಾಡಿ ಸಾವಿರಾರು ರೂ ಹಣ ಸಂಪಾದನೆ ಮಾಡಬಹುದು ಎಂದು ಹೇಳಿ, ಜನರು ಹೂಡಿಕೆ ಮಾಡಿದ ಹಣಕ್ಕೆ ಡಬಲ್ ಹಣ ಕೊಡುವುದಾಗಿ ನಂಬಿಸಿ ಕೋಟಿ ಕೋಟಿ ರೂ ವಂಚನೆ ಮಾಡಿರುವ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.
- Rajendra Simha BL
- Updated on: Aug 15, 2026
- 7:38 pm
ಕೋಲಾರ: ಸ್ವಾತಂತ್ರ್ಯ ದಿನಾಚರಣೆ ವೇಳೆ ಖಡ್ಗ ಪ್ರದರ್ಶಿಸಿ ರಾಷ್ಟ್ರಧ್ವಜಕ್ಕೆ ಅಗೌರವ; ಓರ್ವನ ಬಂಧನ
ಕೋಲಾರದಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಖಡ್ಗ ಪ್ರದರ್ಶಿಸಿದ ಆರೋಪದಲ್ಲಿ ಮೊಹಮ್ಮದ್ ಪೀರ್ ಅಲಿಯಾಸ್ ಜಾವಾ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಮಹಾಲಕ್ಷ್ಮೀ ಬಡಾವಣೆಯಲ್ಲಿ ಧ್ವಜಾರೋಹಣ ಸಂದರ್ಭದಲ್ಲಿ ಮುಸ್ತಫಾ ಎಂಬುವರಿಗೆ ಉಡುಗೊರೆ ನೀಡಲು ತಂದಿದ್ದ ಖಡ್ಗವನ್ನು ಪ್ರದರ್ಶಿಸಲಾಗಿತ್ತು. ಈ ಘಟನೆಯು ರಾಷ್ಟ್ರಧ್ವಜಕ್ಕೆ ಅಗೌರವ ತೋರಿದ ಆರೋಪಕ್ಕೆ ಗುರಿಯಾಗಿದ್ದು, ಕೋಲಾರ ನಗರ ಠಾಣೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
- Rajendra Simha BL
- Updated on: Aug 15, 2026
- 5:28 pm
ನನ್ನ ಬೆನ್ನಿಗೆ ಚೂರಿ ಹಾಕಿದ್ರು: ಸಚಿವ ಕೆ.ಎಚ್. ಮುನಿಯಪ್ಪ ವಿರುದ್ಧ ಕಿಡಿಕಾರಿದ ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ
ಕೋಲಾರ ಕಾಂಗ್ರೆಸ್ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆಹಾರ ಸಚಿವ ಕೆ.ಎಚ್. ಮುನಿಯಪ್ಪ ತಮ್ಮ ಬೆನ್ನಿಗೆ ಚೂರಿ ಹಾಕಿದ್ದಾರೆಂದು ನೇರ ಆರೋಪಿಸಿದ್ದಾರೆ. ಸಿಎಂ ಕಾರ್ಯಕ್ರಮದಲ್ಲಿ ಮುನಿಯಪ್ಪ ಅವರನ್ನು ಅತಿಯಾಗಿ ಹೊಗಳಿದ್ದಕ್ಕೆ ನಾರಾಯಣಸ್ವಾಮಿ ಬೇಸರಗೊಂಡಿದ್ದಾರೆ. ಬಲಗೈ ಸಮುದಾಯದ ಮತಗಳ ಮಹತ್ವದ ಬಗ್ಗೆಯೂ ಪ್ರಶ್ನಿಸಿದ್ದು, ಮುಂದಿನ ನಡೆ ಕುತೂಹಲ ಮೂಡಿಸಿದೆ.
- Rajendra Simha BL
- Updated on: Aug 11, 2026
- 5:28 pm
ಮಾನವೀಯತೆ ಮೆರೆದ ಬಂಗಾರಪೇಟೆ ಶಾಸಕ: ಅಪಘಾತದಲ್ಲಿ ಗಾಯಗೊಂಡ ಬೈಕ್ ಸವಾರನ ನೆರವಿಗೆ ಧಾವಿಸಿದ ಎಸ್.ಎನ್.ನಾರಾಯಣಸ್ವಾಮಿ
ಕೋಲಾರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡ ಬೈಕ್ ಸವಾರನ ನೆರವಿಗೆ ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಧಾವಿಸಿದರು. ಅವರು ತಕ್ಷಣ ತುರ್ತು ಸೇವೆಗೆ (108) ಕರೆ ಮಾಡಿ, ಗಾಯಾಳುವನ್ನು ಆಸ್ಪತ್ರೆಗೆ ಸೇರಿಸುವ ತನಕ ಸ್ಥಳದಲ್ಲಿದ್ದರು. ಶಾಸಕರ ಈ ಮಾನವೀಯ ಕಾರ್ಯಕ್ಕೆ ಸಾರ್ವಜನಿಕರು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ. ಅವರ ಸಕಾಲಿಕ ಸ್ಪಂದನೆ ಜೀವ ಉಳಿಸಲು ನೆರವಾಯಿತು.
- Rajendra Simha BL
- Updated on: Aug 11, 2026
- 2:29 pm
ಮೃತ ಕೋತಿಗೆ ವೈಕುಂಠ ಸಮಾರಾಧನೆ: ನೂರಾರು ಜನರಿಗೆ ಅನ್ನಸಂತರ್ಪಣೆ
ಕೋಲಾರ ತಾಲೂಕಿನ ತೊಟ್ಲಿ ಗ್ರಾಮದಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕೋತಿಗೆ ಗ್ರಾಮಸ್ಥರು ಆಂಜನೇಯನ ಪ್ರತಿರೂಪವೆಂದು ನಂಬಿ ಶಾಸ್ತ್ರೋಕ್ತವಾಗಿ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. 11ನೇ ದಿನದ 'ವೈಕುಂಠ ಸಮಾರಾಧನೆ'ಯನ್ನು ವೈಭವದಿಂದ ಆಚರಿಸಿ, ಮಹಾ ಪ್ರಸಾದ ವಿನಿಯೋಗ ಮಾಡಿದ್ದಾರೆ. ಇದು ಭಾರತೀಯ ಗ್ರಾಮೀಣ ಸಂಸ್ಕೃತಿ ಮತ್ತು ಪ್ರಾಣಿ ಪ್ರೀತಿಯ ಅಪರೂಪದ ಸಂಗಮವಾಗಿದೆ.
- Rajendra Simha BL
- Updated on: Aug 4, 2026
- 12:49 pm
ಕೋಲಾರ–ಚಿಕ್ಕಬಳ್ಳಾಪುರ ಶಾಸಕರ ಪ್ರತ್ಯೇಕ ಸಭೆ: ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಅಸಮಾಧಾನ, ಮುಂದಿನ ನಡೆ ಬಗ್ಗೆ ಚರ್ಚೆ
ಸಚಿವ ಸಂಪುಟ ವಿಸ್ತರಣೆಯಲ್ಲಿ ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಶಾಸಕರ ಪ್ರತ್ಯೇಕ ಸಭೆ ನಡೆಯಲಿದೆ. ಸಾಮೂಹಿಕ ರಾಜೀನಾಮೆ ಅಥವಾ ಹೈಕಮಾಂಡ್ ಮನವೊಲಿಕೆ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದ್ದು, ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಕಾಂಗ್ರೆಸ್ ನಾಯಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
- Rajendra Simha BL
- Updated on: Aug 4, 2026
- 8:21 am
ಖರ್ಗೆ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕೋಲಾರಕ್ಕೆ ದೊಡ್ಡ ಮೋಸ ಮಾಡಿದ್ದಾರೆ: ಶಾಸಕ ನಾರಾಯಣಸ್ವಾಮಿ ಆಕ್ರೋಶ
ಕೋಲಾರ ಜಿಲ್ಲೆಗೆ ಸಚಿವ ಸ್ಥಾನ ಸಿಗದೇ ಇರುವುದಕ್ಕೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೈಕಮಾಂಡ್ ಮತ್ತು ರಾಜ್ಯದ ನಾಯಕರು ಜಿಲ್ಲೆಗೆ ದೊಡ್ಡ ಅನ್ಯಾಯ ಮಾಡಿದ್ದಾರೆ. ತಮ್ಮ ಮಂತ್ರಿಗಿರಿ ತಪ್ಪಿಸಲು ಕೆಲವರು ಪ್ರಯತ್ನಿಸಿದ್ದು, ಕೋಲಾರದ ಜನರು ಮಂತ್ರಿಯಾಗಲು ನಿರೀಕ್ಷಿಸಿದ್ದರು, ಆದರೆ ಈಗ ನಿರಾಸೆ ಮೂಡಿದೆ ಎಂದು ನಾರಾಯಣಸ್ವಾಮಿ ನೋವು ತೋಡಿಕೊಂಡಿದ್ದಾರೆ.
- Rajendra Simha BL
- Updated on: Aug 3, 2026
- 9:58 pm