18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.
ನಂದಿನಿ ಸೇರಿ ಹಲವು ಕಂಪನಿಗಳ ನಕಲಿ ಹಾಲು ತಯಾರಿಕಾ ಜಾಲ ಪತ್ತೆ
ಕೆಜಿಎಫ್ನಲ್ಲಿ ಬೃಹತ್ ಕಲಬೆರಕೆ ಹಾಲು ದಂಧೆ ಭೇದಿಸಿದ್ದು, ಪಾಮ್ ಆಯಿಲ್ ಮತ್ತು ಹಾಲಿನ ಪುಡಿ ಬಳಸಿ ನಂದಿನಿ ಸೇರಿದಂತೆ ಹಲವು ಬ್ರ್ಯಾಂಡ್ ಕಂಪನಿಗಳ ನಕಲಿ ಹಾಲು ತಯಾರಿಸುತ್ತಿದ್ದ 8 ಮಂದಿ ಆಂಧ್ರ ಮೂಲದವರನ್ನು ಪೊಲೀಸರು ಬಂಧಿಸಿದ್ದಾರೆ. ದಾಳಿ ವೇಳೆ ಕಲಬೆರಕೆ ಸಾಮಗ್ರಿ ಹಾಗೂ ವಾಹನಗಳನ್ನ ವಶಪಡಿಸಿಕೊಳ್ಳಲಾಗಿದೆ.
- Rajendra Simha BL
- Updated on: Jan 16, 2026
- 10:10 pm
ಹಬ್ಬದಂದೇ ಕೋಲಾರದಲ್ಲಿ ಭೀಕರ ಕೊಲೆ: ಪ್ರಿಯತಮೆಯನ್ನು ಕೊಂದ ಪ್ರಿಯಕರ
ಕೋಲಾರ ಹೊರವಲಯದ ಬಂಗಾರಪೇಟೆ ರಸ್ತೆಯಲ್ಲಿ ಸಂಕ್ರಮಣದ ಹಬ್ಬದಂದೇ ಭೀಕರ ಕೊಲೆ ನಡೆದಿದೆ. ಪ್ರಿಯಕರನಿಂದ ಪ್ರಿಯತಮೆಯ ಬರ್ಬರ ಹತ್ಯೆ ಮಾಡಿರುವಂತಹ ಘಟನೆ ನಡೆದಿದೆ. ಆರೋಪಿಯನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಪ್ರಕರಣ ಕೋಲಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಎಸ್ಪಿ ಕನ್ನಿಕಾ ಸುಕ್ರಿವಾಲ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
- Rajendra Simha BL
- Updated on: Jan 15, 2026
- 3:15 pm
ಒಂದೇ ಬಸ್ಗೆ ಎರಡು ರಾಜ್ಯಗಳ ನಂಬರ್ ಪ್ಲೇಟ್ ಕಂಡು RTO ಅಧಿಕಾರಿಗಳೇ ದಂಗು!
ಕೋಲಾರ ಜಿಲ್ಲೆಯ ಎನ್.ಜಿ. ಹುಲ್ಕೂರು ಗ್ರಾಮದ ಬಳಿ ಸಾರಿಗೆ ಇಲಾಖೆ ಅಧಿಕಾರಿಗಳು ಖಾಸಗಿ ಬಸ್ಸನ್ನು ವಶಪಡಿಸಿಕೊಂಡಿದ್ದಾರೆ. ಒಂದೇ ಬಸ್ ಕರ್ನಾಟಕ ಮತ್ತು ಆಂಧ್ರ ಪ್ರದೇಶ ನೋಂದಣಿಯ ನಂಬರ್ ಪ್ಲೇಟ್ಗಳನ್ನು ಹೊಂದಿದ್ದು, ತೆರಿಗೆ ವಂಚನೆಯ ದೊಡ್ಡ ದೋಖಾ ಬಯಲಾಗಿದೆ. ವೈ.ಜಿ.ಎಸ್. ಟೂರ್ಸ್ ಅಂಡ್ ಟ್ರಾವೆಲ್ಸ್ ಸಂಸ್ಥೆಗೆ ಸೇರಿದ ಈ ವಾಹನದ ದಾಖಲೆಗಳು ಬೋಗಸ್ ಎಂಬುದು ತನಿಖೆಯಲ್ಲಿ ದೃಢಪಟ್ಟಿದೆ.
- Rajendra Simha BL
- Updated on: Jan 14, 2026
- 2:55 pm
ಈ ಚಳಿಗೆ ಗ್ರಾಹಕರಿಗೆ ಶಾಕ್ ಕೊಟ್ಟ ಕೋಳಿ: ಗಗನಕ್ಕೇರಿದ ಮಾಂಸ, ಮೊಟ್ಟೆ ಬೆಲೆ
ರಾಜ್ಯದಲ್ಲಿ ಚಳಿ ಹೆಚ್ಚಾಗಿದ್ದು, ಬೆಂಗಳೂರು ಸೇರಿದಂತೆ ಹಲವೆಡೆ ಕೋಳಿ ಮತ್ತು ಮೊಟ್ಟೆ ಬೆಲೆ ಗಗನಕ್ಕೇರಿದೆ. ಶೀತ ವಾತಾವರಣದಿಂದ ಕೋಳಿಗಳ ಬೆಳವಣಿಗೆ ಕುಂಠಿತಗೊಂಡು, ಮೊಟ್ಟೆ ಉತ್ಪಾದನೆಯೂ ಕಡಿಮೆಯಾಗಿದೆ. ಇದರಿಂದ ಬೇಡಿಕೆಗೆ ತಕ್ಕ ಪೂರೈಕೆ ಇಲ್ಲದೆ ಬೆಲೆ ಹೆಚ್ಚಾಗಿದೆ. ಇದು ಮಾಂಸಪ್ರಿಯರಿಗೆ ಆರ್ಥಿಕ ಹೊರೆಯಾಗಿದ್ದು, ಗ್ರಾಹಕರು ಖರೀದಿಗೆ ಹಿಂಜರಿಯುತ್ತಿದ್ದಾರೆ. ಚಳಿಗಾಲದ ಈ ಪರಿಸ್ಥಿತಿ ಕೋಳಿ ಫಾರಂಗಳ ಮೇಲೂ ಪರಿಣಾಮ ಬೀರಿದೆ.
- Rajendra Simha BL
- Updated on: Jan 10, 2026
- 7:24 pm
ಸರ್ಕಾರಿ ಶಾಲೆಯ ಜಾಗ ಕಬಳಿಸಿ ನಿರ್ಮಾಣವಾಗ್ತಿದೆ ಮಸೀದಿ! ಮುಳಬಾಗಿಲು ಗುಂಡ್ಲಹಳ್ಳಿ ಗ್ರಾಮದಲ್ಲಿ ಭಾರಿ ವಿವಾದ
ಸರ್ಕಾರಿ ಶಾಲೆಯ ಜಾಗವನ್ನೇ ಒತ್ತುವರಿ ಮಾಡಿ ಮಸೀದಿ ನಿರ್ಮಾಣಕ್ಕೆ ಮುಂದಾಗಿರುವುದು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಸಿ.ಗುಂಡ್ಲಹಳ್ಳಿ ಗ್ರಾಮದಲ್ಲಿ ತೀವ್ರ ವಿವಾದಕ್ಕೆ ಗುರಿಯಾಗಿದೆ. ಸದ್ಯ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಗ್ರಾಮಸ್ಥರ ದೂರಿನ ಮೇರೆಗೆ ಅಧಿಕಾರಿಗಳು, ಪೊಲೀಸರು ಮಸೀದಿ ನಿರ್ಮಾಣ ಕಾರ್ಯ ಸ್ಥಗಿತಕ್ಕೆ ಸೂಚನೆ ನೀಡಿದ್ದಾರೆ. ಜಮೀನಿನ ಸರ್ವೇ ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ.
- Rajendra Simha BL
- Updated on: Jan 9, 2026
- 1:04 pm
ಕೋಲಾರ: ಬೈಕ್ಗಾಗಿ ಸೆಕ್ಯೂರಿಟಿ ಗಾರ್ಡ್ನ ಬರ್ಬರವಾಗಿ ಕೊಂದ 19 ವರ್ಷದ ಯುವಕ!
ಹೊಸ ಬೈಕ್ ಆಸೆಗೆ 19 ವರ್ಷದ ಯುವಕನೋರ್ವ ಪರಿಚಯಸ್ಥ ಸೆಕ್ಯೂರಿಟಿ ಗಾರ್ಡ್ನ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಚೆನ್ನಾಗಿ ಎಣ್ಣೆ ಪಾರ್ಟಿ ಮಾಡಿದ ಬಳಿಕ ಕಲ್ಲಿನಿಂದ ಹಲ್ಲೆ ನಡೆಸಿ, ವೈರ್ನಿಂದ ಕಾಲು ಕಟ್ಟಿ ಕೆರೆಗೆ ತಳ್ಳಿ ಭೀಕರವಾಗಿ ಮರ್ಡರ್ ಮಾಡಿದ್ದು, ತಾಂತ್ರಿಕ ಸಾಕ್ಷಿಗಳ ಆಧಾರದಲ್ಲಿ ಪೊಲೀಸರು ಯುವಕನನ್ನು ಬಂಧಿಸಿದ್ದಾರೆ.
- Rajendra Simha BL
- Updated on: Jan 8, 2026
- 7:29 pm
ಬಳ್ಳಾರಿ ಬೆನ್ನಲ್ಲೆ ಕೋಲಾರದಲ್ಲೂ ಬ್ಯಾನರ್ ಗಲಾಟೆ: ಬಿಜೆಪಿಗರ ನಡೆಗೆ ಕಾಂಗ್ರೆಸ್ ಕೆಂಡ
ಮಾಜಿ ಶಾಸಕರ ಹುಟ್ಟುಹಬ್ಬದ ನಿಮಿತ್ತ ಹಾಕಲಾಗಿದ್ದ ಬ್ಯಾನರ್ನಲ್ಲಿ ನಮ್ಮ ಶಾಸಕ ಎಂದು ಸಂಬೋಧಿಸಿರೋದು ಕೋಲಾರದಲ್ಲಿ ಹೊಸ ವಿವಾದಕ್ಕೆ ಕಾರಣವಾಗಿದೆ. ಇದೇ ವಿಚಾರವಾಗಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಸಾಮಾಜಿಕ ಜಾಲತಾಣದಲ್ಲಿ ಟಾಕ್ವಾರ್ ಕೂಡ ನಡೆದಿದೆ. ಈ ನಡುವೆ ವಿವಾದಿತ ಬ್ಯಾನರ್ನ ನಗರಸಭೆ ತೆರವುಗೊಳಿಸಿದೆ.
- Rajendra Simha BL
- Updated on: Jan 7, 2026
- 11:10 am
ಕಂದಾಯ ಸಚಿವ ಕೃಷ್ಣಬೈರೇಗೌಡ ಕೊರಳಿಗೆ ಭೂ ಕಬಳಿಕೆ ಉರುಳು? ಲೋಕಾಯುಕ್ತಕ್ಕೆ ಬಿಜೆಪಿ ದೂರು
ಕಂದಾಯ ಸಚಿವ ಕೃಷ್ಣಭೈರೇಗೌಡ ವಿರುದ್ಧ ಕೋಲಾರದ ಗರುಡನಪಾಳ್ಯದಲ್ಲಿ 21 ಎಕರೆ ಸರ್ಕಾರಿ ಖರಾಬು ಭೂಮಿ ಕಬಳಿಕೆ ಆರೋಪ ಸಂಬಂಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿದೆ. ಜಿಲ್ಲಾ ಬಿಜೆಪಿ ಅಧ್ಯಕ್ಷ ಓಂ ಶಕ್ತಿ ಚಲಪತಿ ನೇತೃತ್ವದಲ್ಲಿ ಕಂಪ್ಲೇಂಟ್ ನೀಡಲಾಗಿದ್ದು, ಈ ಸಂಬಂಧ ನಿಷ್ಪಕ್ಷಪಾತ ತನಿಖೆಗೆ ಬಿಜೆಪಿ ಆಗ್ರಹಿಸಿದೆ.
- Rajendra Simha BL
- Updated on: Jan 5, 2026
- 1:54 pm
ಕೋಲಾರದಲ್ಲಿ ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು: ಎದ್ನೋ, ಬಿದ್ನೋ ಓಡಿದ ಜನ
ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಭೀಮಗಾನಹಳ್ಳಿ ಗ್ರಾಮದಲ್ಲಿ ಹೆಜ್ಜೇನು ದಾಳಿ ನಡೆಸಿದೆ. ಏಕಾಏಕಿ ನಡೆದ ಈ ದಾಳಿಯಿಂದ ಮೂವರು ಗ್ರಾಮಸ್ಥರು ಮತ್ತು ಶಾಲಾ ಮಕ್ಕಳು ಗಾಯಗೊಂಡಿದ್ದಾರೆ. ಮಕ್ಕಳು ಶಾಲೆಯೊಳಗೆ ರಕ್ಷಣೆ ಪಡೆದಿದ್ದಾರೆ. ಈ ದಾಳಿಯ ವಿಡಿಯೋ ವೈರಲ್ ಆಗಿದೆ. ಹಲವು ವರ್ಷಗಳಿಂದ ಇದ್ದ ಗೂಡನ್ನು ತೆರವುಗೊಳಿಸಲು ಗ್ರಾಮಸ್ಥರು ಮನವಿ ಮಾಡಿದ್ದರು. ಗಾಯಾಳುಗಳಿಗೆ ಬಂಗಾರಪೇಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
- Rajendra Simha BL
- Updated on: Jan 2, 2026
- 4:28 pm
ಕೋಲಾರ: ಒಂದುವರೆ ಗಂಟೆಯಲ್ಲಿ 21 ಜನರಿಗೆ ಕಚ್ಚಿ ಗಾಯ ಮಾಡಿದ ಬೀದಿ ನಾಯಿ
ಕೋಲಾರದಲ್ಲಿ ಒಂದೇ ಬೀದಿ ನಾಯಿ 21 ಜನರಿಗೆ ಕಚ್ಚಿದ ಘಟನೆ ರಾಜ್ಯದಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿಯನ್ನು ಎತ್ತಿ ತೋರಿಸಿದೆ. ಒಂದೂವರೆ ಗಂಟೆಯಲ್ಲಿ ಸಾರ್ವಜನಿಕರ ಮೇಲೆ ದಾಳಿ ಮಾಡಿದ ನಾಯಿಯನ್ನು ಅಂತಿಮವಾಗಿ ಹೊಡೆದು ಕೊಲ್ಲಲಾಗಿದೆ. ನಗರಸಭೆಯ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಬೀದಿ ನಾಯಿಗಳ ಹಾವಳಿಯಿಂದ ಸುರಕ್ಷತೆ ಕಳವಳ ತೀವ್ರಗೊಂಡಿದೆ.
- Rajendra Simha BL
- Updated on: Dec 31, 2025
- 3:21 pm
ನಡುರಾತ್ರಿ ರೌಡಿ ಶೀಟರ್ಗಳ ಬೆವರಿಳಿಸಿದ ಕೆಜಿಎಫ್ ಎಸ್ಪಿ: ಖಡಕ್ ವಾರ್ನಿಂಗ್ ಕೊಟ್ಟ ಶಿವಾಂಶು ರಜಪೂತ್
ಕೋಲಾರ ಜಿಲ್ಲೆಯ ಕೆಜಿಎಫ್ನಲ್ಲಿ ಎಸ್ಪಿ ಶಿವಾಂಶು ರಜಪೂತ್ ಅವರು ರೌಡಿಶೀಟರ್ಗಳ ಮನೆಗಳಿಗೆ ರಾತ್ರೋರಾತ್ರಿ ಭೇಟಿ ನೀಡಿ ಎಚ್ಚರಿಕೆ ನೀಡಿದ್ದಾರೆ. ಗಲಾಟೆ ಬಿಟ್ಟು ಶಾಂತಿಯುತವಾಗಿ ಬದುಕು ನಡೆಸುವಂತೆ ಮತ್ತು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವಂತೆ ಸೂಚಿಸಿದ್ದಾರೆ. ಸಮಸ್ಯೆಗಳಿದ್ದರೆ ಪೊಲೀಸರಿಗೆ ತಿಳಿಸುವಂತೆ ತಿಳಿಸಿ, ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಅಗತ್ಯ ಕ್ರಮಕ್ಕೆ ಮುಂದಾಗಿದ್ದಾರೆ.
- Rajendra Simha BL
- Updated on: Dec 28, 2025
- 11:26 am
ಕುಡಿದ ಮತ್ತಲ್ಲಿ ಕಿರಿಕ್: ಬಾಯಿ ಚಪಲಕ್ಕೆ ಬಿಹಾರ ಮೂಲದ ಕಾರ್ಮಿಕ ಬಲಿ!
ಕೋಲಾರದ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಕುಡಿದ ಮತ್ತಿನಲ್ಲಿ ಕಾರ್ಮಿಕರ ನಡುವೆ ನಡೆದ ಕಿರಿಕ್ ಕೊಲೆಯಲ್ಲಿ ಅಂತ್ಯವಾಗಿದೆ. ಬಿಹಾರ ಮೂಲದ ವ್ಯಕ್ತಿ ಬರ್ಬರ ಕೊಲೆಯಾಗಿದ್ದು, ಘಟನೆ ಸಂಬಂಧ ಮೂರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಕೆಲವೊಮ್ಮೆ ಅನಗತ್ಯ ಮಾತಾಡದೇ ಇದ್ದರೆ ಮುಂದಿನ ಅನಾಹುತ ತಪ್ಪಿಸಬಹುದು ಎಂಬುದಕ್ಕೆ ಈ ಘಟನೆ ಕೈಗನ್ನಡಿಯಂತಿದೆ.
- Rajendra Simha BL
- Updated on: Dec 26, 2025
- 6:19 pm