18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.
ಕೋಲಾರದಲ್ಲಿ ಮೃತ್ಯುಕೂಪವಾದ ಕೃಷಿ ಹೊಂಡಗಳು: 15 ದಿನದಲ್ಲಿ 7 ಮಂದಿ ಸಾವು
ಕೋಲಾರ ಜಿಲ್ಲೆಯಲ್ಲಿ ಕೃಷಿ ಹೊಂಡಗಳು ಮೃತ್ಯಕೂಪಗಳಾಗುತ್ತಿವೆ. ಕಳೆದ 15 ದಿನಗಳಲ್ಲಿ ಕೃಷಿ ಹೊಂಡಗಳಿಗೆ ಬಿದ್ದು 7 ಮಂದಿ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಎಂ.ಆರ್. ರವಿ ಅವರು, ವಾರದೊಳಗೆ ಎಲ್ಲಾ ಕೃಷಿ ಹೊಂಡಗಳಿಗೆ ತಂತಿ ಬೇಲಿ ಹಾಕದಿದ್ದರೆ ಹೊಂಡಗಳನ್ನೇ ಮುಚ್ಚುವಂತೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.
- Rajendra Simha BL
- Updated on: May 18, 2026
- 9:21 am
ಕೋಲಾರ: ಜವರಾಯನಾದ ಕೃಷಿ ಹೊಂಡ, ಈಜು ಕಲಿಸಲು ಹೋದ ತಂದೆ ಸೇರಿ ಇಬ್ಬರು ಮಕ್ಕಳು ಜಲಸಮಾಧಿ
ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ನಕ್ಕನಹಳ್ಳಿಯ ಕೃಷಿ ಹೊಂಡದಲ್ಲಿ ನಡೆದ ದುರಂತದಲ್ಲಿ ತಂದೆ ಸೇರಿದಂತೆ ಇಬ್ಬರು ಮಕ್ಕಳು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಮಕ್ಕಳಿಗೆ ಈಜು ಕಲಿಸಲು ಹೋಗಿದ್ದಾಗ ಕಾಲು ಜಾರಿ ಬಿದ್ದು ದಾರುಣ ಘಟನೆ ಸಂಭವಿಸಿದೆ. ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
- Rajendra Simha BL
- Updated on: May 17, 2026
- 5:12 pm
ಅರೇ ಇದೇನಿದು! ರೈತರ ಭೂಮಿಯನ್ನೇ ಒತ್ತುವರಿ ಮಾಡಿದ ಅರಣ್ಯ ಇಲಾಖೆ; ಅಚ್ಚರಿ ಎನ್ನಿಸಿದ್ರೂ ಸತ್ಯ
ಕೋಲಾರ ಜಿಲ್ಲೆಯಲ್ಲಿ ರೈತರು ಮತ್ತು ಅರಣ್ಯ ಇಲಾಖೆ ನಡುವಿನ ಅರಣ್ಯ ಭೂಮಿ ಒತ್ತುವರಿ ವಿವಾದ ಹೊಸ ತಿರುವು ಪಡೆದಿದೆ. ಜಂಟಿ ಸರ್ವೆಯಲ್ಲಿ ಅರಣ್ಯ ಇಲಾಖೆಯೇ ರೈತರ 180 ಎಕರೆ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವುದು ಬಹಿರಂಗವಾಗಿದೆ. ಹೀಗಾಗಿ ರೈತರು ತಮ್ಮ ಜಮೀನು ಮರಳಿ ಪಡೆಯಲು ಹೋರಾಟ ನಡೆಸಿದ್ದಾರೆ.
- Rajendra Simha BL
- Updated on: May 15, 2026
- 7:13 pm
ಕೋಲಾರ: ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು, ಸಿಸಿಟಿವಿಲಿ ಸೆರೆಯಾಯ್ತು ಖದೀಮರ ಕೈಚಳಕ
ಕೋಲಾರದ ಬೇತಮಂಗಲದಲ್ಲಿ ಬ್ಯಾಂಕ್ನಿಂದ ಹಣ ತರುತ್ತಿದ್ದ ವ್ಯಕ್ತಿಯನ್ನು ಗುರಿಯಾಗಿಸಿಕೊಂಡು ಬೈಕ್ ಬಾಕ್ಸ್ನಲ್ಲಿದ್ದ ಒಂದು ಲಕ್ಷ ರೂ. ದೋಚಿದ ಕಳ್ಳರನ್ನು ಸಾರ್ವಜನಿಕರು ಬೆನ್ನಟ್ಟಿ ಹಿಡಿದಿದ್ದಾರೆ. ಪೊಲೀಸ್ ಠಾಣೆ ಎದುರೇ ನಡೆದ ಈ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪೊಲೀಸರ ವಿಳಂಬ ಧೋರಣೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
- Rajendra Simha BL
- Updated on: May 14, 2026
- 9:49 am
ಕೋಲಾರ ಗಡಿಯಲ್ಲಿ ಭಾರಿ ಪ್ರಮಾಣದ ಲೈವ್ ಬುಲೆಟ್ ಪತ್ತೆ: 1969ರ ಬ್ಯಾಚ್ನ ಗುಂಡುಗಳನ್ನು ವಶಪಡಿಸಿಕೊಂಡ ಪೊಲೀಸರು
ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ತಮಿಳುನಾಡು ಗಡಿಯಲ್ಲಿ ಭಾರಿ ಪ್ರಮಾಣದ 214 ಬುಲೆಟ್ಗಳು ಪತ್ತೆಯಾಗಿವೆ. ಇವುಗಳಲ್ಲಿ 135 ಜೀವಂತ ಗುಂಡುಗಳಾಗಿವೆ. ಎಸ್ಎಲ್ಆರ್ ಗನ್ಗಳಿಗೆ ಬಳಸುವ ಈ ಬುಲೆಟ್ಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿವೆ. ಕಾಮಸಮುದ್ರ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಗುಂಡುಗಳ ಮೂಲ ಮತ್ತು ಉದ್ದೇಶದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಇದು ಗಂಭೀರ ಭದ್ರತಾ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
- Rajendra Simha BL
- Updated on: May 13, 2026
- 8:52 pm
ಮನುಷ್ಯರಿಗಷ್ಟೇ ಅಲ್ಲ, ಇನ್ಮುಂದೆ ಬೆಳೆಗಳಿಗೂ ಬರಲಿದೆ ಕ್ಲಿನಿಕ್: ಕೋಲಾರ ಜಿಲ್ಲಾಡಳಿತದಿಂದ ಮಹತ್ವದ ಹೆಜ್ಜೆ!
ಮನುಷ್ಯರಂತೆ ಬೆಳೆಗಳಿಗೂ ಚಿಕಿತ್ಸೆ ನೀಡಲು ಕೋಲಾರ ಜಿಲ್ಲಾಡಳಿತವು 'ಅಗ್ರಿ ಕ್ಲಿನಿಕ್' ಎಂಬ ನೂತನ ಯೋಜನೆಯ ಕಾಪಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಅವೈಜ್ಞಾನಿಕ ಕೀಟನಾಶಕಗಳ ಬಳಕೆ ತಡೆದು, ಮಣ್ಣಿನ ಸತ್ವ ರಕ್ಷಿಸಲು ಪ್ರತಿ ರೈತ ಸಂಪರ್ಕ ಕೇಂದ್ರದಲ್ಲಿ ತಜ್ಞರನ್ನು ನೇಮಿಸುವ ಈ ಕ್ರಾಂತಿಕಾರಿ ಯೋಜನೆಯ ಸಂಪೂರ್ಣ ವಿವರ ಇಲ್ಲಿದೆ. ಮಣ್ಣು ಮತ್ತು ಬೆಳೆಗಳ ಆರೋಗ್ಯಕ್ಕಾಗಿ ಕೈಗೊಳ್ಳಲಿರುವ ದೇಶದ ಮೊದಲ ಪ್ರಯತ್ನ ಇದಾಗಿದೆ.
- Rajendra Simha BL
- Updated on: May 12, 2026
- 11:31 am
ಕೋಲಾರ: ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಕೋಲಾರ ತಾಲ್ಲೂಕಿನ ಮಲ್ಲಸಂದ್ರದಲ್ಲಿ ಖದೀಮರು ಮನೆಯೊಂದರಿಂದ ನಗದು, ಚಿನ್ನಾಭರಣ ಕಳವು ಮಾಡಿದ್ದಾರೆ. ನಂತರ ಈ ಕೃತ್ಯದ ಬಗ್ಗೆ ಯಾರಿಗೂ ಅನುಮಾನ ಬರಬಾರದೆಂದು ಮನೆಗೇ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಇದರಿಂದ ಬಡ ಮಹಿಳೆಯ ಕುಟುಂಬ ಬೀದಿಗೆ ಬಿದ್ದಿದೆ. ವೇಮಗಲ್ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
- Rajendra Simha BL
- Updated on: May 8, 2026
- 10:22 am
ಕೋಲಾರದ ರೇಷ್ಮೆ ಬೆಳೆಗಾರರಿಗೆ ತಟ್ಟಿದ ಬಿಸಿಲ ಧಗೆ: ಗೂಡು ಕಟ್ಟದ ಹುಳುಗಳು; ತಾಪಮಾನ ನಿಯಂತ್ರಣಕ್ಕೆ ಹರಸಾಹಸ
ದಿನದಿಂದ ದಿನಕ್ಕೆ ಏರುತ್ತಿರುವ ಬಿಸಿಲ ತಾಪಮಾನದಿಂದ ಕೋಲಾರ ರೇಷ್ಮೆ ಬೆಳೆಗಾರರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. 37-38 ಡಿಗ್ರಿ ತಾಪಮಾನದಲ್ಲಿ ರೇಷ್ಮೆ ಹುಳುಗಳು ಗೂಡು ಕಟ್ಟುತ್ತಿಲ್ಲ. ಹೀಗಾಗಿ ರೇಷ್ಮೆ ಹುಳುಗಳ ರಕ್ಷಣೆಗೆ ಬೆಳೆಗಾರರು ನಾನಾ ಕಸರತ್ತು ಮಾಡುತ್ತಿದ್ದಾರೆ. ಇನ್ನೊಂದೆಡೆ ದರ ಕುಸಿತದಿಂದ ಆರ್ಥಿಕವಾಗಿ ಹೊಡೆತ ಬಿದ್ದಿದೆ.
- Rajendra Simha BL
- Updated on: May 3, 2026
- 9:44 pm
ಕೋಲಾರದಲ್ಲಿ ಬಿಸಿಲ ತಾಪಕ್ಕೆ ತತ್ತರಿಸಿದ ವಾನರ ಸೈನ್ಯ: ಅನ್ನ, ನೀರಿಲ್ಲದೇ ನರಳಾಟ; ನಾಲ್ಕೈದು ಕೋತಿಗಳು ಸಾವು
ಕೋಲಾರದ ಅಂತರಗಂಗೆಯಲ್ಲಿ ಪ್ರಸಕ್ತ ವರ್ಷದ ಭೀಕರ ಬಿಸಿಲ ಬೇಗೆಗೆ ಕೋತಿಗಳು ಬಸವಳಿದು ಸಾಯುತ್ತಿವೆ. ಗಂಗೆ ನಿರಂತರವಾಗಿ ಹರಿಯುವ ತಾಣದಲ್ಲೂ ನೀರು, ಆಹಾರವಿಲ್ಲದೆ ಪ್ರಾಣಿಗಳು ಸಾವಪ್ಪುತ್ತಿರುವುದಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ. ಕಳೆದ ಒಂದು ವಾರದಲ್ಲಿ 4-5 ಕೋತಿಗಳು ಮೃತಪಟ್ಟಿವೆ. ಅರಣ್ಯ, ಮುಜರಾಯಿ, ಪ್ರವಾಸೋದ್ಯಮ ಇಲಾಖೆಗಳ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎನ್ನಲಾಗುತ್ತಿದೆ.
- Rajendra Simha BL
- Updated on: May 2, 2026
- 9:34 pm
ಕೋಲಾರ ಹಾಲು ಒಕ್ಕೂಟದಲ್ಲಿ ಕೋಟ್ಯಂತರ ರೂ ಹಗರಣ ಆರೋಪ: ರಾಜಕೀಯ ಕೆಸರೆರೆಚಾಟಕ್ಕೆ ವೇದಿಕೆಯಾದ ರೈತರ ಸಂಸ್ಥೆ
ಕೋಲಾರ ಹಾಲು ಒಕ್ಕೂಟದಲ್ಲಿ ಕೋಟ್ಯಂತರ ರೂ ಹಗರಣ ಆರೋಪ ಕೇಳಿಬಂದಿದ್ದು, ಸದ್ಯ ಇದು ರಾಜಕೀಯ ಕೆಸರೆರೆಚಾಟಕ್ಕೆ ಕಾರಣವಾಗಿದೆ. ಹಾಲಿ ಮತ್ತು ಮಾಜಿ ಶಾಸಕರ ನಡುವೆ ಆರೋಪ-ಪ್ರತ್ಯಾರೋಪಗಳು ಹೆಚ್ಚಾಗಿದೆ. ಸದ್ಯ ಲೋಕಾಯುಕ್ತ ಮತ್ತು ಜಾರಿ ನಿರ್ದೇಶನಾಲಯ ಅಧಿಕಾರಿಗಳು ತನಿಖೆ ನಡೆಸಿದ್ದು, ಸತ್ಯಾಸತ್ಯತೆ ಹೊರಬರಬೇಕಿದೆ.
- Rajendra Simha BL
- Updated on: May 1, 2026
- 6:12 pm
‘ಸೋಫಾ ಅಳತೆ ಮಾಡಿಕೊಡು ಬಾ’ ಎಂದು ಕರೆದು ಬರ್ಬರವಾಗಿ ಹತ್ಯೆ; ಬಾರ್ ಎದುರೇ ಯುವಕನ ತಲೆ ಮೇಲೆ ಕಲ್ಲು ಎತ್ತಿಹಾಕಿದ ಆಟೋ ಚಾಲಕ!
ಕೋಲಾರದ ಹೊರವಲಯದಲ್ಲಿ ಯುವಕ ಸಲ್ಮಾನ್ ಪಾಷಾ ಬರ್ಬರ ಕೊಲೆಯಾಗಿದ್ದಾನೆ. ಸೋಫಾ ಆರ್ಡರ್ ನೆಪದಲ್ಲಿ ಕರೆದೊಯ್ದು, ಮದ್ಯ ಹಾಗೂ ಗಾಂಜಾ ಅಮಲಿನಲ್ಲಿದ್ದ ಅಬ್ದುಲ್ ರಶೀದ್ ಕಲ್ಲು ಮತ್ತು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಕುಟುಂಬಸ್ಥರು ದುಃಖದಲ್ಲಿದ್ದು, ಜಿಲ್ಲೆಯಲ್ಲಿ ಮಾದಕವಸ್ತು ಹಾವಳಿ ಹೆಚ್ಚಿರುವುದು ಇಂತಹ ಕೃತ್ಯಗಳಿಗೆ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
- Rajendra Simha BL
- Updated on: Apr 28, 2026
- 7:34 pm
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಬಿಯರ್ಗೆ ಭಾರಿ ಡಿಮ್ಯಾಂಡ್: ಚಿಲ್ ಬಿಯರ್ ಮೊರೆ ಹೋಗುತ್ತಿರುವ ಮದ್ಯಪ್ರಿಯರು
ಕೋಲಾರದಲ್ಲಿ ಬೇಸಿಗೆಯ ಬಿಸಿಲಿನ ತಾಪಮಾನ ಏರಿಕೆಯೊಂದಿಗೆ ಮದ್ಯಪ್ರಿಯರ ಅಭಿರುಚಿ ಬದಲಾಗಿದೆ. ಬಿಸಿಲಿನ ಧಗೆಗೆ ತಂಪು ಪಾನೀಯವಾದ ಬಿಯರ್ಗೆ 25-30% ರಷ್ಟು ಬೇಡಿಕೆ ಹೆಚ್ಚಾಗಿದ್ದು, ರಮ್ ಮತ್ತು ಬ್ರಾಂಡಿಯಂತಹ ಪಾನೀಯಗಳ ಬೇಡಿಕೆ ಶೇಕಡಾ 50 ರಷ್ಟು ಕಡಿಮೆಯಾಗಿದೆ. ಆದರೆ, ಹೆಚ್ಚುತ್ತಿರುವ ಬೇಡಿಕೆಗೆ ತಕ್ಕಂತೆ ಬಿಯರ್ ಪೂರೈಕೆ ಇರುವುದಿಲ್ಲ ಎಂದು ಬಾರ್ ಮಾಲೀಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
- Rajendra Simha BL
- Updated on: Apr 26, 2026
- 2:44 pm