18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.
ಉಚಿತ ಹೆಲ್ಮೆಟ್ ಪಡೆಯಲು ಪ್ರವಾಹದಂತೆ ಮುಗಿಬಿದ್ದ ಜನ: ಲಾರಿಯನ್ನೇ ಏರಿ ಹೇಗೆ ದೋಚುತ್ತಿದ್ದಾರೆ ನೋಡಿ!
ಮುಳಬಾಗಿಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆದಿನಾರಾಯಣ ನೇತೃತ್ವದಲ್ಲಿ ಮುಳಬಾಗಿಲು ಪಟ್ಟಣದ ಮೈದಾನದಲ್ಲಿ ಬುಧವಾರ ಆಯೋಜಿಸಿದ್ದ ಉಚಿತ ಹೆಲ್ಮೆಟ್ ವಿತರಣಾ ಕಾರ್ಯಕ್ರಮ ಅಕ್ಷರಶಃ ರಣಾಂಗಣದಂತಾಗಿತ್ತು. ಪರಿಸ್ಥಿತಿ ಕೈಮೀರಿ ಹೋಗಿತ್ತು. ಏಕಾಏಕಿ ಸುನಾಮಿಯಂತೆ ಬಂದ ಜನ ದಾಂಧಲೆ ಎಬ್ಬಿಸಿ ಹೆಲ್ಮೆಟ್ಗಳಿಂದ ಕ್ಯಾಂಟರ್ ಲಾರಿಗಳನ್ನೇ ಏರಿ ಮನಬಂದಂತೆ ಹೊತ್ತೊಯ್ದರು. ವಿಡಿಯೋ ಸಹಿತ ಮಾಹಿತಿ ಇಲ್ಲಿದೆ.
- Rajendra Simha BL
- Updated on: Feb 5, 2026
- 7:02 am
Kolar: ಚೀಟಿ ಹೆಸರಲ್ಲಿ 4 ಕೋಟಿ ಮಕ್ಮಲ್ ಟೋಪಿ; ಕಣ್ಣೀರು ಹಾಕಿದ ಸಂತ್ರಸ್ತರು
ಕೋಲಾರ ನಗರದ ಶಾಂತಿನಗರದಲ್ಲಿ ಚೀಟಿ ಹೆಸರಲ್ಲಿ ಸುಮಾರು 4 ಕೋಟಿ ರೂ. ವಂಚನೆಯ ಆರೋಪ ಕೇಳಿಬಂದಿದೆ. ವೆಂಕಟೇಶಪ್ಪ, ಗೌರಮ್ಮ ಹಾಗೂ ಪದ್ಮಾವತಿ ವಿರುದ್ಧ ದೂರು ದಾಖಲಾಗಿದ್ದು, 500ಕ್ಕೂ ಹೆಚ್ಚು ನಿವಾಸಿಗಳು ತಮಗಾದ ಅನ್ಯಾಯಕ್ಕೆ ನ್ಯಾಯ ಕೋರಿದ್ದಾರೆ. ಸಂತ್ರಸ್ತರು ಪೊಲೀಸ್ ಠಾಣೆ ಬಳಿ ಕಣ್ಣೀರು ಹಾಕಿದ ಪ್ರಸಂಗವೂ ನಡೆದಿದೆ.
- Rajendra Simha BL
- Updated on: Feb 3, 2026
- 5:55 pm
ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ 70ಕ್ಕೂ ಹೆಚ್ಚು ಗೋವುಗಳು ರಕ್ಷಣೆ, ಕೆಲವು ಹಸುಗಳು ಮೃತಪಟ್ಟಿರುವ ಶಂಕೆ
ಮುಳಬಾಗಿಲಿನ ಹನುಮನಹಳ್ಳಿ ಟೋಲ್ ಬಳಿ ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ 70ಕ್ಕೂ ಹೆಚ್ಚು ಗೋವುಗಳನ್ನು ಗೋರಕ್ಷಕರು ರಕ್ಷಿಸಿದ್ದಾರೆ. ಹೈದರಾಬಾದ್ನಿಂದ ಕಸಾಯಿಖಾನೆಗೆ ಸಾಗಿಸುತ್ತಿದ್ದ ಈ ಗೋವುಗಳು ಕಂಟೇನರ್ನಲ್ಲಿ ಗಾಳಿ, ನೀರಿಲ್ಲದೆ ದಯನೀಯ ಸ್ಥಿತಿಯಲ್ಲಿದ್ದವು. ಕೆಲವು ಹಸುಗಳು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಗೋರಕ್ಷಕ ದಳ ಮತ್ತು ಬಜರಂಗದಳದ ಕಾರ್ಯಕರ್ತರು ಈ ಕಾರ್ಯಾಚರಣೆ ನಡೆಸಿದ್ದಾರೆ.
- Rajendra Simha BL
- Updated on: Feb 3, 2026
- 5:33 pm
ಕೋಲಾರದಲ್ಲಿ ಜೀರೋ ಹೆಸರಿನಲ್ಲಿ ಭೂ ಹಗರಣ: ವಾರಸುದಾರರಿಲ್ಲದ ಭೂಮಿ ಲಪಟಾಯಿಸಿದ ಪ್ರಭಾವಿಗಳು
ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಶಿವಾರಪಟ್ಟಣದಲ್ಲಿ ಸದ್ಯ ಭೂಮಿಗೆ ಚಿನ್ನದ ಬೆಲೆ ಇದೆ. ಇದೀಗ ಈ ಭೂಮಿ ಮೇಲೆ ದುಷ್ಟರು ಕಣ್ಣುಹಾಕಿದ್ದಾರೆ. ವಾರಸುದಾರರಿಲ್ಲದ ಭೂಮಿಯನ್ನು ಅಧಿಕಾರಿಗಳೊಂದಿಗೆ ಸೇರಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಭೂಮಿ ಲಪಟಾಯಿಸುವ ದಂಧೆ ನಡೆದಿರುವ ಬಗ್ಗೆ ಆರೋಪ ಕೇಳಿಬಂದಿದೆ.
- Rajendra Simha BL
- Updated on: Feb 2, 2026
- 6:17 pm
ಸಂಸಾರ ಹಾಳು ಮಾಡಿದವನ ಸಂಹಾರ: ಕೊಲೆ ಮಾಡಿ ಫೇಸ್ಬುಕ್ನಲ್ಲಿ ತಪ್ಪೊಪ್ಪಿಕೊಂಡ ಖದೀಮರು
ಕೋಲಾರದಲ್ಲಿ ನಡೆದ ವ್ಯಕ್ತಿಯೋರ್ವನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಜನವರಿ 27 ರಂದು ನಡೆದ ಈ ಹತ್ಯೆಯ ಆರೋಪಿಗಳು ಫೇಸ್ಬುಕ್ ಮೂಲಕ ತಪ್ಪೊಪ್ಪಿಕೊಂಡಿದ್ದಾರೆ. ಸದ್ಯ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.
- Rajendra Simha BL
- Updated on: Feb 1, 2026
- 4:37 pm
Kolar: ಬಂಗಾರದ ನಗರಿಯ ಫಲಪುಷ್ಪ ಪ್ರದರ್ಶನಕ್ಕೆ ಮಾರುಹೋದ ಜನ: ಇಲ್ಲಿವೆ ಸುಂದರ ಚಿತ್ರಗಳು
ಕೋಲಾರ ತೋಟಗಾರಿಕೆ ಇಲಾಖೆಯ ಫಲಪುಷ್ಪ, ಸಿರಿಧಾನ್ಯ ಮತ್ತು ಸಾವಯವ ಮೇಳ ನೋಡುಗರ ಮನಸೂರೆಗೊಳ್ಳುತ್ತಿದೆ. ಹೂವು-ಹಣ್ಣುಗಳ ವಿಶಿಷ್ಟ ಕಲಾಕೃತಿಗಳು, ಕಲ್ಲಂಗಡಿಯಲ್ಲಿ ಮೂಡಿದ ಸೆಲೆಬ್ರಿಟಿಗಳ ಚಿತ್ರಗಳು ವಿಶೇಷ ಆಕರ್ಷಣೆಯಾಗಿದೆ. ರೈತರಿಗೆ ಸಾವಯವ, ರೇಷ್ಮೆ ಕೃಷಿ ಮಾಹಿತಿ ಹಾಗೂ ಮಕ್ಕಳಿಗೆ ಅಂಬೇಡ್ಕರ್ ಜೀವನ ಚರಿತ್ರೆ ಪ್ರದರ್ಶನವೂ ಇದೆ. ಈ ಮೇಳವು ಮನರಂಜನೆ ಜೊತೆಗೆ ಜ್ಞಾನಾರ್ಜನೆಗೂ ಅವಕಾಶ ನೀಡುತ್ತದೆ.
- Rajendra Simha BL
- Updated on: Jan 26, 2026
- 4:20 pm
ಧರ್ಮ ಪ್ರಚಾರ ವಾಹನವಾದ ಪಂಚಾಯ್ತಿ ಸ್ವಚ್ಚತಾ ವಾಹನ: ಕಸ ಸಂಗ್ರಹಿಸುತ್ತ ಸಿಬ್ಬಂದಿಯಿಂದ ಕರಪತ್ರ ಹಂಚಿಕೆ
ಗ್ರಾಮ ಪಂಚಾಯಿತಿ (Gram Panchayat ) ಸ್ವಚ್ಛತಾ ವಾಹನ ಇರುವುದು ವಾರ್ಡ್ ವಾರ್ಡ್ಗಳಲ್ಲಿ ಸಂಚರಿಸಿ ಕಸ ಸಂಗ್ರಹಿಸಲು. ಆದ್ರೆ, ಕೋಲಾರ (Kolar) ಜಿಲ್ಲೆ ಬಂಗಾರಪೇಟೆ ತಾಲ್ಲುಕು ಗುಲ್ಲಹಳ್ಳಿ ಗ್ರಾಮದ ಪಂಚಾಯ್ತಿ ಸ್ವಚ್ಛತಾ ವಾಹನ ಧರ್ಮ ಪ್ರಚಾರ ನಡೆಸಿದ ಎನ್ನುವ ಆರೋಪ ಕೇಳಿಬಂದಿದೆ. ಹೌದು...ಗುಲ್ಲಹಳ್ಳಿ ಗ್ರಾಮ ಪಂಚಾಯಿತಿಯ ಸ್ಚಚ್ಛತಾ ವಾಹನದಲ್ಲಿ ಕ್ರಿಶ್ಚಿಯನ್ ಧರ್ಮ ಪ್ರಚಾರದ ಕರಪತ್ರಗಳು ಪತ್ತೆಯಾಗಿದ್ದು, ಸಿಬ್ಬಂದಿಗಳೇ ಕಸ ಸಂಗ್ರಹಿಸುತ್ತಾ ಮನೆ ಮನೆಗೆ ಕರಪತ್ರ ಹಂಚಿಕೆ ಮಾಡಿ ಕ್ರಿಶ್ಚಿಯನ್ ಧರ್ಮ ಪ್ರಚಾರ ನಡೆಸಿದ್ದಾರೆ
- Rajendra Simha BL
- Updated on: Jan 24, 2026
- 5:07 pm
ಕೋಲಾರ: ಮಾಸ್ತಿ ಗ್ರಾಮದಲ್ಲಿ ಏಕಾಏಕಿ ನೂರಾರು ವಲಸಿಗರು! ಬಾಂಗ್ಲಾದಿಂದ ಬಂದವರೆಂಬ ಶಂಕೆ
ಕೋಲಾರದ ಮಾಲೂರು ತಾಲ್ಲೂಕಿನ ಮಾಸ್ತಿ ಗ್ರಾಮದಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ನೂರಾರು ಸಂಖ್ಯೆಯಲ್ಲಿ ಇರುವ ಬಗ್ಗೆ ಗಂಭೀರ ಅನುಮಾನ ವ್ಯಕ್ತವಾಗಿದೆ. ಅಪರಿಚಿತರ ಸಂಖ್ಯೆ ಹೆಚ್ಚಿದ್ದು, ಮಾಸ್ತಿಯಲ್ಲಿ ಏಕಾಏಕಿ ಹೆಚ್ಚಿದ ಜನಸಂಚಾರ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸರ್ಕಾರ ಮತ್ತು ಪೊಲೀಸ್ ಇಲಾಖೆ ತಕ್ಷಣ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
- Rajendra Simha BL
- Updated on: Jan 23, 2026
- 2:06 pm
ಉರುಸ್ ಮೆರವಣಿಗೆ ವೇಳೆ ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರ ಮೇಲೆ ಹಲ್ಲೆ
ಬಂಗಾರಪೇಟೆ ಉರುಸ್ ವೇಳೆ ನೈತಿಕ ಪೊಲೀಸ್ಗಿರಿ ಘಟನೆ ನಡೆದಿದೆ. ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿದ್ದಾರೆ. ಚಾಂದಿನಿ ದೂರಿನ ಮೇರೆಗೆ 10 ಆರೋಪಿಗಳನ್ನು ಬಂಧಿಸಲಾಗಿದ್ದು, ಪ್ರಕರಣ ದಾಖಲಾಗಿದೆ. ಕೆಜಿಎಫ್ ಎಸ್ಪಿ ಸ್ಥಳಕ್ಕೆ ಭೇಟಿ ನೀಡಿದ್ದು, ಬಂಗಾರಪೇಟೆ ಪೊಲೀಸರಿಂದ ತನಿಖೆ ಮುಂದುವರಿದಿದೆ. ಸಮಾಜದಲ್ಲಿ ಇಂತಹ ಘಟನೆಗಳು ಶಾಂತಿ ಕದಡುತ್ತವೆ.
- Rajendra Simha BL
- Updated on: Jan 22, 2026
- 2:08 pm
ಮಾಟ-ಮಂತ್ರ ಮಾಡುತ್ತಿದ್ದ ಪೂಜಾರಿಯ ಬರ್ಬರ ಹತ್ಯೆ: ಅಮಾವಾಸ್ಯೆಯಂದೇ ಕೃತ್ಯವೆಸಗಿದ ದುಷ್ಕರ್ಮಿಗಳು
ಕೋಲಾರದ ಮಾಲೂರು ತಾಲೂಕಿನ ಹುಲ್ಕೂರಿನ ಕಾಳಿ ದೇವಾಲಯದ ಪೂಜಾರಿ ಬರ್ಬರವಾಗಿ ಹತ್ಯೆಯಾಗಿದ್ದಾರೆ. ಪುಷ್ಯ ಅಮಾವಾಸ್ಯೆ ಪೂಜೆ ಮುಗಿಸಿ ಬರುವಾಗ ದುಷ್ಕರ್ಮಿಗಳು ಲಾಂಗಿನಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ. ಮಾಟ-ಮಂತ್ರ, ದೆವ್ವ ಬಿಡಿಸುವ ಕೆಲಸ ಮಾಡುತ್ತಿದ್ದ ಪೂಜಾರಿಯ ಹತ್ಯೆಗೆ ವೈಯಕ್ತಿಕ, ಆರ್ಥಿಕ ಅಥವಾ ಸ್ಮಶಾನ ಒತ್ತುವರಿ ವಿವಾದ ಕಾರಣವಿರಬಹುದೆಂದು ಮಾಲೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- Rajendra Simha BL
- Updated on: Jan 19, 2026
- 6:39 pm
ನಂದಿನಿ ಸೇರಿ ಹಲವು ಕಂಪನಿಗಳ ನಕಲಿ ಹಾಲು ತಯಾರಿಕಾ ಜಾಲ ಪತ್ತೆ
ಕೆಜಿಎಫ್ನಲ್ಲಿ ಬೃಹತ್ ಕಲಬೆರಕೆ ಹಾಲು ದಂಧೆ ಭೇದಿಸಿದ್ದು, ಪಾಮ್ ಆಯಿಲ್ ಮತ್ತು ಹಾಲಿನ ಪುಡಿ ಬಳಸಿ ನಂದಿನಿ ಸೇರಿದಂತೆ ಹಲವು ಬ್ರ್ಯಾಂಡ್ ಕಂಪನಿಗಳ ನಕಲಿ ಹಾಲು ತಯಾರಿಸುತ್ತಿದ್ದ 8 ಮಂದಿ ಆಂಧ್ರ ಮೂಲದವರನ್ನು ಪೊಲೀಸರು ಬಂಧಿಸಿದ್ದಾರೆ. ದಾಳಿ ವೇಳೆ ಕಲಬೆರಕೆ ಸಾಮಗ್ರಿ ಹಾಗೂ ವಾಹನಗಳನ್ನ ವಶಪಡಿಸಿಕೊಳ್ಳಲಾಗಿದೆ.
- Rajendra Simha BL
- Updated on: Jan 16, 2026
- 10:10 pm
ಹಬ್ಬದಂದೇ ಕೋಲಾರದಲ್ಲಿ ಭೀಕರ ಕೊಲೆ: ಪ್ರಿಯತಮೆಯನ್ನು ಕೊಂದ ಪ್ರಿಯಕರ
ಕೋಲಾರ ಹೊರವಲಯದ ಬಂಗಾರಪೇಟೆ ರಸ್ತೆಯಲ್ಲಿ ಸಂಕ್ರಮಣದ ಹಬ್ಬದಂದೇ ಭೀಕರ ಕೊಲೆ ನಡೆದಿದೆ. ಪ್ರಿಯಕರನಿಂದ ಪ್ರಿಯತಮೆಯ ಬರ್ಬರ ಹತ್ಯೆ ಮಾಡಿರುವಂತಹ ಘಟನೆ ನಡೆದಿದೆ. ಆರೋಪಿಯನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಪ್ರಕರಣ ಕೋಲಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಎಸ್ಪಿ ಕನ್ನಿಕಾ ಸುಕ್ರಿವಾಲ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
- Rajendra Simha BL
- Updated on: Jan 15, 2026
- 3:15 pm