18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.
ಅಪಘಾತ ತಡೆಯಲು ಮಹತ್ವದ ಕ್ರಮ: ಚೆನ್ನೈ ಬೆಂಗಳೂರು ಎಕ್ಸ್ಪ್ರೆಸ್ ವೇನಲ್ಲಿ ದಂಡಂ ದಶಗುಣಂ
ಬೆಂಗಳೂರು-ಚೆನ್ನೈ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಹೊಸೂರು ಎಲಿವೇಟೆಡ್ ಹೆದ್ದಾರಿಯಲ್ಲಿ ಪ್ರಯಾಣಿಸುವವರಿಗೆ ಬಿಗ್ ಶಾಕ್ ಎದುರಾಗಿದೆ. ಈ ನೂತನ ಚೆನೈ ಬೆಂಗಳೂರು ಎಕ್ಸ್ಪ್ರೆಸ್ ವೇಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ದ್ವಿಚಕ್ರ, ತ್ರಿಚಕ್ರ ವಾಹನಗಳು ಮತ್ತು ಟ್ರಾಕ್ಟರ್ಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಇದರ ಬೆನ್ನಲ್ಲೇ ಇದೀಗ ದಂಡಂ ದಶಗುಣಂ.
- Rajendra Simha BL
- Updated on: Jun 23, 2025
- 9:37 pm
ಅನ್ನದಾತನ ಪಾಲಿಗೆ ಹುಳಿಯಾದ ಮಾವು: ಉಗ್ರ ಹೋರಾಟದ ಎಚ್ಚರಿಕೆ ನೀಡಿದ ರೈತರು
ಹಣ್ಣುಗಳ ರಾಜ ಮಾವಿನ ಹಣ್ಣಿಗೆ ಬೆಂಬಲ ಬೆಲೆ ಇಲ್ಲದ ಹಿನ್ನೆಲೆಯಲ್ಲಿ ಮಾವು ಬೆಳೆಗಾರರು ನಡೆಸಿದ್ದ ಹೋರಾಟಕ್ಕೆ ಸರ್ಕಾರದ ಮಟ್ಟದಲ್ಲಿ ಈವರೆಗೆ ಯಾವುದೇ ಪ್ರತಿಕ್ರಿಯೆ ದೊರೆತಿಲ್ಲ ಎಂಬ ಆರೋಪ ಕೇಳಿಬಂದಿದೆ. ಬೆಲೆ ಕುಸಿತದಿಂದ ಕಂಗಾಲಾಗಿರುವ ಮಾವು ಬೆಳೆಗಾರರು ಮಾವು ಬೆಳೆಯನ್ನು ಕಟಾವು ಮಾಡಿ ಮಾರುಕಟ್ಟೆಗೂ ಹಾಕಲಾಗದೆ, ಬೆಂಬಲ ಬೆಲೆಯ ಘೋಷಣೆ ನಿರೀಕ್ಷೆಯಲ್ಲಿದ್ದಾರೆ.
- Rajendra Simha BL
- Updated on: Jun 16, 2025
- 7:42 pm
ಕರ್ನಾಟಕದಲ್ಲಿ ಮತ್ತೊಂದು ದರೋಡೆ: ಕೋಲಾರದಲ್ಲಿ SBI ಎಟಿಎಂ ದೋಚಿದ ಖದೀಮರು
ಇತ್ತೀಚೆಗೆ ಕರ್ನಾಟಕದಲ್ಲಿ ಬ್ಯಾಂಕ್ ಹಾಗೂ ಎಟಿಎಂ ದರೋಡೆ ಪ್ರಕರಣಗಳು ಹೆಚ್ಚಾಗುತ್ತಿವೆ. ಬೀದರ್, ಕಲಬುರಗಿ, ಮಂಗಳೂರು ಸೇರಿದಂತೆ ಹಲವೆಡೆ ಬ್ಯಾಂಕ್ ಹಾಗೂ ಎಟಿಎಂನಲ್ಲಿ ಕಳ್ಳತನವಾಗಿದ್ದು, ಈ ಪೈಕಿ ಪೊಲೀಸರು, ಕೆಲ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿದ್ದು, ಕೆಲ ಕಳ್ಳರನ್ನು ಹಿಡಿಯಲು ಇದುವರೆಗೂ ಸಾಧ್ಯವಾಗಿಲ್ಲ. ಇದರ ಬೆನ್ನಲ್ಲೇ ಇದೀಗ ಕೋಲಾರದಲ್ಲಿ ಎಟಿಎಂ ದರೋಡೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.
- Rajendra Simha BL
- Updated on: Jun 16, 2025
- 2:38 pm
ಹೆತ್ತ ಕುಡಿಯನ್ನೇ ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಾಯಂದಿರು: ಕೋಲಾರದಲ್ಲಿ ಒಂದೇ ವಾರದಲ್ಲಿ 2 ಪ್ರಕರಣ
ಕೋಲಾರ ಜಿಲ್ಲೆಯಲ್ಲಿ ಒಂದೇ ವಾರದಲ್ಲಿ ಎರಡು ಮಕ್ಕಳು ಅನಾಥವಾಗಿವೆ. ಕೂಸು ಕಣ್ಣು ಬಿಡುವ ಮುನ್ನವೇ ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿಯಾಗಿದ್ದಾರೆ. ಒಂದು ಮಗುವನ್ನು ತಾಯಿ ಬೇಡ ಎಂದು ಬರೆದು ಕೊಟ್ಟಿದ್ದರೇ, ಮತ್ತೊಂದು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟ ತಾಯಿ ಪರಾರಿಯಾಗಿದ್ದಾಳೆ. ಸದ್ಯ ಜಿಲ್ಲಾಸ್ಪತ್ರೆಯ ಮಕ್ಕಳ ರಕ್ಷಣಾ ಘಟಕದ ಸುಪರ್ದಿಯಲ್ಲಿ ಎರಡೂ ಕಂದಮ್ಮಗಳಿವೆ.
- Rajendra Simha BL
- Updated on: Jun 14, 2025
- 7:03 pm
ಬೆಂಗಳೂರು ಚೆನ್ನೈ ಎಕ್ಸ್ಪ್ರೆಸ್ ವೇಯಲ್ಲಿ ಬೈಕ್, ರಿಕ್ಷಾ, ಟ್ರ್ಯಾಕ್ಟರ್ ಸಂಚಾರ ನಿಷೇಧ
Bengaluru-Chennai Expressway: ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ವೇಯಲ್ಲಿ ಹೆಚ್ಚುತ್ತಿರುವ ಅಪಘಾತಗಳಿಂದಾಗಿ ಕೋಲಾರ ಪೊಲೀಸರು, ದ್ವಿಚಕ್ರ, ತ್ರಿಚಕ್ರ ವಾಹನಗಳು ಮತ್ತು ಟ್ರಾಕ್ಟರ್ಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಹಲವು ಅಪಘಾತಗಳು ಮತ್ತು ಸಾವುಗಳು ಸಂಭವಿಸಿರುವ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹಿಂದಿನ ನಿರ್ದೇಶನವನ್ನು ಅನುಸರಿಸಿಯೇ ಈ ಕ್ರಮ ಕೈಗೊಳ್ಳಲಾಗಿದೆ. ದ್ವಿಚಕ್ರ ವಾಹನಗಳ ಸಂಚಾರ ಮುಂದುವರಿಯುತ್ತಿರುವುದು ಕಂಡುಬಂದ ಕಾರಣ ಪೊಲೀಸರು ಈಗ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.
- Rajendra Simha BL
- Updated on: Jun 12, 2025
- 8:54 am
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಮಗು ಬಿಟ್ಟು ಹೋದ ವ್ಯಕ್ತಿ: ತಾಯಿ ಪತ್ತೆ, ತಂದೆ ನಿಗೂಢ
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಒಂದು ನವಜಾತ ಶಿಶುವನ್ನು ಬಿಟ್ಟು ಪರಾರಿಯಾದ ವ್ಯಕ್ತಿಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಶಿಶುವಿನ ತಾಯಿಯನ್ನು ಪತ್ತೆಹಚ್ಚಲಾಗಿದ್ದರೂ, ತಂದೆಯ ಮಾಹಿತಿಯನ್ನು ನೀಡಲು ಅವರು ನಿರಾಕರಿಸಿದ್ದಾರೆ. ಮಕ್ಕಳ ರಕ್ಷಣಾ ಘಟಕವು ಡಿಎನ್ಎ ಪರೀಕ್ಷೆಗೆ ಮುಂದಾಗಿದೆ. ತಂದೆಯ ಗುರುತು ಪತ್ತೆಹಚ್ಚಲು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
- Rajendra Simha BL
- Updated on: Jun 10, 2025
- 7:23 pm
ಕೋಲಾರ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಅಪಘಾತ: ಐವರ ಸಾವು
ಕೋಲಾರ ಜಿಲ್ಲೆಯಲ್ಲಿ ಒಂದೇ ದಿನ ಎರಡು ಭೀಕರ ರಸ್ತೆ ಅಪಘಾತಗಳು ಸಂಭವಿಸಿ ಐವರು ಮೃತಪಟ್ಟಿದ್ದಾರೆ. ಚೆನ್ನೈ-ಬೆಂಗಳೂರು ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಸ್ವಿಫ್ಟ್ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ಮೂವರು ಸಾವನ್ನಪ್ಪಿದ್ದಾರೆ. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿಯೂ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿದ್ದಾರೆ. ಇತರ ಅಪಘಾತಗಳಲ್ಲಿಯೂ ಗಾಯಗೊಂಡವರಿದ್ದಾರೆ.
- Rajendra Simha BL
- Updated on: Jun 9, 2025
- 9:42 pm
ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು
ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಡಿವೈಡರ್ಗೆ ಕಾರ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕಳೆದ ರಾತ್ರಿ ಭೀಕರ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಐವರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
- Rajendra Simha BL
- Updated on: Jun 9, 2025
- 11:21 am
ಕೋಲಾರದಲ್ಲಿ ಹೇಯ ಕೃತ್ಯ: ಹಣಕ್ಕಾಗಿ 80ರ ವೃದ್ದೆ ಮೇಲೆ ಅತ್ಯಾಚಾರವೆಸಗಿ ಕೊಲೆ
ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ 80 ವರ್ಷದ ವೃದ್ಧೆ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿರುವಂತಹ ಘಟನೆ ನಡೆದಿದೆ. ಆರೋಪಿ ಅತ್ಯಾಚಾರವೆಸಗಿ ವೃದ್ಧೆ ಬಳಿಯಿದ್ದ 15,000 ರೂ ಹಣವನ್ನು ದೋಚಿ ಪರಾರಿಯಾಗಿದ್ದ. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ. ಪೊಲೀಸರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
- Rajendra Simha BL
- Updated on: Jun 4, 2025
- 11:01 am
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಪಾಕಿಸ್ತಾನದ ವಿರುದ್ಧ ಭಾರತದ ಆಪರೇಷನ್ ಸಿಂಧೂರ್ ಯಶ್ವಸಿಯಾಗಿದೆ. ಈ ಹಿನ್ನೆಲೆಯಲೇ ಭಾರತೀಯರಲ್ಲಿ ಸಂಭ್ರಮ ಮನೆ ಮಾಡಿದೆ. ಹೀಗಾಗಿ ಆಪರೇಷನ್ ಸಿಂಧೂರ್ ಈಗ ಫುಲ್ ಟ್ರೆಂಡಿಂಗ್ ಆಗಿದೆ. ಎಲ್ಲಿ ನೋಡಿದರೂ ಆಪರೇಷನ್ ಸಿಂಧೂರ್ ಜಪ. ಇನ್ನೊಂದೆಡೆ ಕೋಲಾರ ಜಿಲ್ಲಾ ಬಿಜೆಪಿ ಅಧ್ಯಕ್ಷ ಓಂ ಶಕ್ತಿ ಚಲಪತಿ ಅವರು ತಮ್ಮ ಕಾರಿನ ಮೇಲೆ ಅಪರೇಷನ್ ಸಿಂಧೂರ್ ಸಿಕ್ಟರ್ ಹಾಕಿಸಿ ಗಮನಸೆಳೆದಿದ್ದಾರೆ
- Rajendra Simha BL
- Updated on: May 16, 2025
- 7:30 pm
`ಆಪರೇಷನ್ ಸಿಂಧೂರ’ ಕುರಿತು ಲೇವಡಿ ಮಾಡಿದ್ದ ಕಾಂಗ್ರೆಸ್ ಶಾಸಕ ಯುಟರ್ನ್..ಈಗ ಹೇಳಿದ್ದೇನು?
ಏನ್ ಯುದ್ಧ ಮಾಡಿದ್ರು, ಏನೂ ಮಾಡಿಲ್ಲ. ಏನ್ ಮಾಡಿದ್ದಾರೆ. ಸುಮ್ನೆ ಬೂಟಾಟಿಕೆಗೆ ನಾಲ್ಕು ಫ್ಲೈಟ್ ಕಳಿಸಿಬಿಟ್ಟು ಬಂದ್ಬಿಟ್ಟು ಇದು ಮಾಡೋದಾ? ಇದಕ್ಕೆ ಪರಿಹಾರಾನಾ ಇದು. ನಮ್ಮ 28 ಜನ, 26 ಜನ ನಮ್ಮ ಭಾರತೀಯರು ಸತ್ತರಲ್ಲ. ಆ ಹೆಣ್ಮಕ್ಕಳಿಗೆ ಇದೇನಾ ಪರಿಹಾರ ಕೊಡೋದು? ಆ ಹೆಣ್ಮಕ್ಕಳಿಗೆ ಇದೇನಾ ನೀವು ಸಮಾಧಾನ ಮಾಡೋದು. ಆ ಹೆಣ್ಮಕ್ಕಳಿಗೆ ಇದೇನಾ ನೀವು ಗೌರವ ಕೊಡೋದು ಎಂದು ಶಾಸಕ ಕೊತ್ತೂರು ಮಂಜುನಾಥ್ ಹೇಳಿ ವಿವಾದಾತ್ಮಕ ಸೃಷ್ಟಿಸಿಕೊಂಡಿದ್ದರು. ಇದಕ್ಕೆ ಆಕ್ಷೇಪಗಳು ವ್ಯಕ್ತವಾಗುತ್ತಿದ್ದಂತೆಯೇ ತಮ್ಮ ಹೇಳಿಕೆಗೆ ಇದೀಗ ಸ್ಪಷ್ಟನೆ ನೀಡಿದ್ದಾರೆ.
- Rajendra Simha BL
- Updated on: May 16, 2025
- 4:19 pm
ಭಾರತ ಬೂಟಾಟಿಕೆಗೆ ನಾಲ್ಕು ಫ್ಲೈಟ್ ಕಳ್ಸಿದ್ದು ಬಿಟ್ರೆ ಏನೂ ಮಾಡಿಲ್ಲ: ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್
ಕೋಲಾರದ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಅವರು ‘ಆಪರೇಷನ್ ಸಿಂದೂರ್’ ಕುರಿತು ವ್ಯಾಪಕ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಭಾರತದ ಪ್ರತಿಕ್ರಿಯೆ ಸಾಕಷ್ಟಿಲ್ಲ ಎಂದು ಅವರು ಹೇಳಿದ್ದು, ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಭಾರತದ ಭದ್ರತಾ ವೈಫಲ್ಯದ ಬಗ್ಗೆ ಪ್ರಶ್ನಿಸಿರುವ ಅವರು, ಕೇವಲ ನಾಲ್ಕು ಫ್ಲೈಟ್ ಕಳುಹಿಸಿ ಸುಮ್ಮನಾಗಿದ್ದಾರೆ ಎಂದಿದ್ದಾರೆ.
- Rajendra Simha BL
- Updated on: May 16, 2025
- 9:49 am