18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.
ಕೆಜಿಎಫ್ನಲ್ಲಿವೆ ಸಾಕಷ್ಟು ಚಿನ್ನದ ನಿಕ್ಷೇಪಗಳು! ಸಂಶೋಧನೆಗಳಿಂದ ತಿಳಿದುಬಂತು ಅಚ್ಚರಿಯ ಅಂಶ
ಅದು ವಿಶ್ವಪ್ರಸಿದ್ದ ಚಿನ್ನದ ಗಣಿ. ಅದಕ್ಕೆ ಬೀಗ ಹಾಕಿ 24 ವರ್ಷಗಳೇ ಕಳೆದು ಹೋಗಿದೆ. ಅಷ್ಟು ವರ್ಷಗಳಿಂದ ಅದರ ಪುನರಾರಂಭ ಆಗುತ್ತಾ ಎಂದು ಆಸೆಗಣ್ಣುಗಳಿಂದ ನೋಡುತ್ತಿದ್ದ ಸಾವಿರಾರು ಜನರ ಕಣ್ಣಗಳಲ್ಲಿ ಈಗ ಹೊಸದೊಂದು ಆಶಾಭಾವನೆ ಮೂಡುವ ಸಂದರ್ಭ ಬಂದಿದೆ. ಇತ್ತೀಚಿನ ದಿನಗಳಲ್ಲಿ ಚಿನ್ನದ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದೆ. ಈನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮತ್ತೆ ಕೆಜಿಎಫ್ನಲ್ಲಿ ಚಿನ್ನದ ಗಣಿಗಾರಿಕೆ ಆರಂಭ ಮಾಡುತ್ತಾ ಎಂಬ ಪ್ರಶ್ನೆ ಉದ್ಭವಿಸಿದೆ. ಇದಕ್ಕೆ ಕಾರಣವೂ ಇದೆ. ಅದೇನೆಂಬುದು ಇಲ್ಲಿದೆ.
- Rajendra Simha BL
- Updated on: Mar 16, 2025
- 6:19 pm
ಕರ್ನಾಟಕದಲ್ಲೊಂದು ಹೀನ ಕೃತ್ಯ: ಮಗಳನ್ನೇ ಗರ್ಭಿಣಿ ಮಾಡಿದ ನೀಚ ತಂದೆ
ಹೆಣ್ಣುಮಕ್ಕಳಿಗೆ ಅಪ್ಪನೇ ಸೂಪರ್ ಹೀರೋ ಎಂಬ ಮಾತುಗಳು ನಾವು ಹಾಗಾಗ ಕೇಳುತ್ತಿರುತ್ತೇವೆ. ಅದರಂತೆ ಹೆಣ್ಣುಮಕ್ಕಳು ಸಹ ತಾಯಿಗಿಂತ ಅಪ್ಪನ ಮೇಲೆ ವಿಶೇಷ ಪ್ರೀತಿಯನ್ನು ಹೊಂದಿರುತ್ತಾರೆ. ಆದರೆ ಇಲ್ಲೋರ್ವ ವ್ಯಕ್ತಿ ಅಪ್ಪ ಎಂಬ ಪದಕ್ಕೆ ಮಸಿ ಬಳಿದಿದ್ದಾನೆ. ಮಗಳು ಎನ್ನುವುದನ್ನು ನೋಡದೇ ತಂದೆಯೇ ಆಕೆ ಮೇಲೆ ತನ್ನ ವಿಕೃತ ಕಾಮದ ತೀಟೆ ತೀರಿಸಿಕೊಂಡಿದ್ದಾನೆ. ಪರಿಣಾಮ ಇದೀಗ ಮಗಳು ಗರ್ಭಿಣಿಯಾಗಿದ್ದಾಳೆ.
- Rajendra Simha BL
- Updated on: Mar 12, 2025
- 11:00 pm
ಕಮಿಷನ್ ದಂಧೆ ಆರೋಪ: ಬೆಳ್ಳಂಬೆಳಗ್ಗೆ ಉಪ ಲೋಕಾಯುಕ್ತರ ನೇತೃತ್ವದಲ್ಲಿ ಕೋಲಾರ ಎಪಿಎಂಸಿ ಮಾರುಕಟ್ಟೆಗೆ ದಾಳಿ
ಕೋಲಾರ ಎಪಿಎಂಸಿಯಲ್ಲಿ ಅಕ್ರಮಗಳು ನಡೆಯುತ್ತಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಉಪಲೋಕಾಯುಕ್ತರು ದಾಳಿ ನಡೆಸಿದ್ದಾರೆ. ರೈತರು ತರುವ ತರಕಾರಿಗಳಿಗೆ ಶೇ 8ರಷ್ಟು ಕಮಿಷನ್ ಪಡೆಯುವ, 3 ರಿಂದ 5 ಕೆಜಿ ತರಕಾರಿ ಕಡಿತಗೊಳಿಸುವ ಬಗ್ಗೆ ರೈತರ ಆರೋಪದ ಕಾರಣ ಈ ದಾಳಿ ನಡೆದಿದೆ.
- Rajendra Simha BL
- Updated on: Mar 10, 2025
- 10:11 am
ನನ್ನ ಫೀಲಿಂಗ್ಗಿಂತ ಅವನಿಗೆ ನನ್ನ ಮೇಲೆ ಫೀಲಿಂಗ್ ಶೇ 7 ರಷ್ಟು ಹೆಚ್ಚರಲಿ: ತಿಮ್ಮಪ್ಪನಲ್ಲಿ ಯುವತಿಯ ಪ್ರೇಮ ನಿವೇದನೆ
ಮಾಲೂರು ತಾಲೂಕಿನ ಚಿಕ್ಕತಿರುಪತಿ ದೇವಾಲಯದ ಹುಂಡಿ ಎಣಿಕೆಯಲ್ಲಿ ೪೯ ಲಕ್ಷ ರೂಪಾಯಿಗಳಿಗೂ ಅಧಿಕ ಕಾಣಿಕೆ ಪತ್ತೆಯಾಗಿದೆ. ಹುಂಡಿ ಎಣಿಕೆಯ ಸಮಯದಲ್ಲಿ ಒಬ್ಬ ಯುವತಿ ಬರೆದ ಪ್ರೇಮ ಪತ್ರವೂ ಸಿಕ್ಕಿದೆ. ಈ ಪತ್ರದಲ್ಲಿ ತನ್ನ ಪ್ರೇಮಿಯ ಜೊತೆ ಒಂದಾಗುವಂತೆ ದೇವರನ್ನು ಬೇಡಿಕೊಂಡಿದ್ದಾಳೆ. ಮೂರು ತಿಂಗಳಲ್ಲಿ 49,09,660 ರೂ. ನಗದು, ಚಿನ್ನ, ಬೆಳ್ಳಿ ಮತ್ತು ವಿದೇಶಿ ಕರೆನ್ಸಿಗಳು ಸಂಗ್ರಹವಾಗಿವೆ.
- Rajendra Simha BL
- Updated on: Mar 5, 2025
- 7:49 am
ಹೊಸ ಹೈವೇನಲ್ಲಿ ನಾಲ್ವರು ಬಲಿ: ಕಾರಿನ ಏರ್ ಬ್ಯಾಗ್ ಓಪನ್ ಆಗಿದ್ರೂ ಉಳಿಯಲಿಲ್ಲ ಜೀವಗಳು
ಕೋಲಾರದ ಬಳಿ ಹೊಸದಾಗಿ ಆರಂಭವಾದ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒಂದೇ ಕುಟುಂಬದ ಎಂಟು ಜನರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಸವಾರನ ಅಜಾಗರೂಕತೆಯಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಗರ್ಭಿಣಿ ಮಹಿಳೆಯೊಬ್ಬರು ಸೇರಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
- Rajendra Simha BL
- Updated on: Mar 3, 2025
- 10:03 pm
ಕೋಲಾರ: ಚೆನ್ನೈ-ಬೆಂಗಳೂರು ಹೈವೆಯಲ್ಲಿ ಅಪಘಾತ, ಮಗು ಸೇರಿ ನಾಲ್ವರು ಸ್ಥಳದಲ್ಲೇ ಸಾವು
ಬಂಗಾರಪೇಟೆ ಬಳಿಯ ಚೆನ್ನೈ-ಬೆಂಗಳೂರು ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಇನ್ನೋವಾ ಕಾರು ಮತ್ತು ಬೈಕ್ ನಡುವಿನ ಘರ್ಷಣೆಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಮೂವರು ಮತ್ತು ಬೈಕ್ ಸವಾರ ಮೃತಪಟ್ಟವರು. ಘಟನೆ ಬಂಗಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
- Rajendra Simha BL
- Updated on: Mar 3, 2025
- 11:15 am
ಭಕ್ತರ ಒತ್ತಾಯಕ್ಕೆ ಉಯ್ಯಾಲೆಯಲ್ಲಿ ಕೂತು ಸಂತಸಪಟ್ಟ ಪೇಜಾವರ ಶ್ರೀಗಳು
ಪೇಜಾವರ ಶ್ರೀಗಳು ಕೋಲಾರಕ್ಕೆ ಭೇಟಿ ನೀಡಿ, ಭಕ್ತರೊಬ್ಬರ ಮನೆಯಲ್ಲಿ ಉಯ್ಯಾಲೆಯಲ್ಲಿ ಕೂತು ಸಂತೋಷಪಟ್ಟರು. ಭಕ್ತರ ಒತ್ತಾಯದ ಮೇರೆಗೆ ಉಯ್ಯಾಲೆಯಲ್ಲಿ ಕುಳಿತು ಸಂತಸಪಟ್ಟ ಶ್ರೀಗಳು ನಂತರ ಕೋಲಾರದ ರಾಘವೇಂದ್ರ ಸ್ವಾಮಿಗಳ ದೇವಾಲಯಕ್ಕೆ ಭೇಟಿ ನೀಡಿದರು. ಈ ಘಟನೆಯು ಸ್ಥಳೀಯರಲ್ಲಿ ಸಂತೋಷವನ್ನುಂಟುಮಾಡಿತು. ಶ್ರೀಗಳ ಈ ಅಪರೂಪದ ಭೇಟಿ ಅನೇಕರಿಗೆ ಸ್ಮರಣೀಯವಾಯಿತು.
- Rajendra Simha BL
- Updated on: Mar 1, 2025
- 3:20 pm
ಶಿವರಾತ್ರಿ ಸ್ಮಶಾನ ಪೂಜೆ; ಕೋಲಾರದ ಈ ಆಚರಣೆ ನೋಡಿದರೆ ಮೈ ಜುಮ್ಮೆನ್ನೋದು ಗ್ಯಾರಂಟಿ
ಶಿವರಾತ್ರಿಯೆಂದರೆ ಬಹುತೇಕರು ಕಟ್ಟುನಿಟ್ಟಾಗಿ ಉಪವಾಸವಿದ್ದು ಶಿವರಾತ್ರಿಯನ್ನು ಆಚರಣೆ ಮಾಡುತ್ತಾರೆ. ಅದೇ ರೀತಿ ಇಲ್ಲೊಂದಷ್ಟು ಜನ ಶಿವರಾತ್ರಿಯನ್ನು ಶಿವರಾತ್ರಿಯ ನಂತರ ಬರುವ ಅಮಾವಾಸ್ಯೆಯ ದಿನ ಸ್ಮಶಾನವಾಸಿಯಾದ ಶಿವನನ್ನು ವಿಭಿನ್ನವಾಗಿ ಪೂಜಿಸಿ, ಆರಾಧಿಸಿ, ಕಾಳಿ ಮಾತೆಯ ವೇಷದಾರಿಯಾಗಿ ನರಕಾಸುರ ಸಂಹಾರವನ್ನು ಮಾಡಿ ಬಲಿ ಕೊಟ್ಟು ಪೂಜಿಸುತ್ತಾರೆ. ಅಲ್ಲಿನ ಆಚರಣೆ ಹೇಗಿತ್ತು ಎಂಬುದರ ಮಾಹಿತಿ ಇಲ್ಲಿದೆ.
- Rajendra Simha BL
- Updated on: Feb 27, 2025
- 8:58 pm
ಕೋಲಾರ ಜಿಲ್ಲಾ ಕಾಂಗ್ರೆಸ್ನಲ್ಲಿ ನಿಲ್ಲದ ಬಣ ರಾಜಕೀಯ: ಶಾಸಕರ ನಡುವೆ ಮುಸುಕಿನ ಗುದ್ದಾಟ
ಕೋಲಾರ ಜಿಲ್ಲಾ ಕಾಂಗ್ರೆಸ್ನಲ್ಲಿನ ಗುಂಪುಗಾರಿಕೆಗಳು ಜಿಲ್ಲಾ ಅಭಿವೃದ್ಧಿಗೆ ತೀವ್ರ ಅಡ್ಡಿಯಾಗುತ್ತಿದೆ. ಶಾಸಕರ ನಡುವಿನ ಆಂತರಿಕ ಕಲಹ, ಅಕ್ರಮ ಆರೋಪಗಳು ಮತ್ತು ಅಧಿಕಾರ ಹೋರಾಟಗಳು ಜಿಲ್ಲೆಯ ಪ್ರಗತಿಯನ್ನು ಹಾಳುಮಾಡುತ್ತಿವೆ. ಹಾಲು ಒಕ್ಕೂಟ ಮತ್ತು ಡಿಸಿಸಿ ಬ್ಯಾಂಕ್ನಲ್ಲಿನ ಅಕ್ರಮಗಳ ಆರೋಪಗಳು ಮತ್ತಷ್ಟು ಗೊಂದಲ ಸೃಷ್ಟಿಸಿವೆ. ಗುಂಪುಗಾರಿಗೆಯಿಂದ ಅಭಿವೃದ್ಧಿ ಕುಂಠಿತವಾಗಿ ತೀವ್ರ ತೊಂದರೆಯಾಗುತ್ತಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
- Rajendra Simha BL
- Updated on: Feb 25, 2025
- 8:01 am
ರೇಷ್ಮೆ ನಾಡು ಕೋಲಾದಲ್ಲಿ ರೇಷ್ಮೆ ಬೆಳೆಗೆ ಸಂಕಷ್ಟ: ದಿನದಿಂದ ದಿನಕ್ಕೆ ಕುಸಿಯುತ್ತಿದೆ ಬೆಳೆಗಾರರ ಸಂಖ್ಯೆ
ಕೋಲಾರ ಜಿಲ್ಲೆಯಲ್ಲಿ ರೇಷ್ಮೆ ಬೆಳೆಗಾರರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ರೋಗಗಳು, ಕೀಟಗಳ ಹಾವಳಿ, ಮತ್ತು ಸರ್ಕಾರದಿಂದ ಸೂಕ್ತ ಪ್ರೋತ್ಸಾಹದ ಕೊರತೆಯಿಂದ ರೇಷ್ಮೆ ಬೆಳೆಯುವುದನ್ನು ರೈತರು ಕೈಬಿಡುತ್ತಿದ್ದಾರೆ. ಹೀಗಾಗಿ ಸರ್ಕಾರ ಮತ್ತು ರೇಷ್ಮೆ ಇಲಾಖೆ ತಕ್ಷಣವೇ ಮಧ್ಯಪ್ರವೇಶಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದು ಅಗತ್ಯವಾಗಿದೆ.
- Rajendra Simha BL
- Updated on: Feb 22, 2025
- 7:06 pm
ವೈದ್ಯನ ಎಡವಟ್ಟಿನಿಂದ ಯುವಕ ಸಾವು: ಬಾಳಿ ಬದುಕಬೇಕಿದ್ದವನನ್ನು ಬಲಿ ಪಡೆತಾ ಆ ಒಂದು ಇಂಜೆಕ್ಷನ್?
ಕೋಲಾರ ತಾಲೂಕಿನ ವಕ್ಕಲೇರಿಯಲ್ಲಿ ಜ್ವರದಿಂದ ಬಳಲುತ್ತಿದ್ದ ಯುವಕನಿಗೆ ಬಿಎಎಂಎಸ್ ವೈದ್ಯ ಇಂಜೆಕ್ಷನ್ ನೀಡಿದ್ದಾನೆ. ಕೆಲವೇ ಹೊತ್ತಿನಲ್ಲಿ ಯುವಕ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ವೈದ್ಯನ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಗ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ ವ್ಯಕ್ತವಾಗಿದೆ.
- Rajendra Simha BL
- Updated on: Feb 21, 2025
- 9:08 pm
ಕ್ಷುಲ್ಲಕ ಕಾರಣಕ್ಕೆ ಗಲಾಟೆ: ರಸ್ತೆ ಜಗಳ ಕೊಲೆಯಲ್ಲಿ ಅಂತ್ಯ, ಇಬ್ಬರ ಬಂಧನ
ಕೋಲಾರ ಜಿಲ್ಲೆಯ ಕಣ್ಣೂರು ಗ್ರಾಮದಲ್ಲಿ ರಸ್ತೆ ವಿವಾದದಿಂದಾಗಿ ಚಾಲಕ ಮಂಜುನಾಥ್ ಹತ್ಯೆಯಾಗಿದೆ. ಮನೆಯ ಮುಂದೆ ಸೌದೆ ಇಟ್ಟಿದ್ದಕ್ಕೆ ಮಂಜುನಾಥ್ ಮತ್ತು ಮುನಿವೆಂಕಟಪ್ಪ ನಡುವೆ ಜಗಳ ನಡೆದು, ಮುನಿವೆಂಕಟಪ್ಪ ಮತ್ತು ಅವನ ಸ್ನೇಹಿತ ರಾಜೇಶ್ ಹಾರೆಯಿಂದ ಮಂಜುನಾಥ್ನನ್ನು ಕೊಲೆ ಮಾಡಿದ್ದಾರೆ. ಸದ್ಯ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
- Rajendra Simha BL
- Updated on: Feb 21, 2025
- 7:52 pm