AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ

Author - TV9 Kannada

rajendra.banavadi@tv9.com

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More
Follow On:
ಕೋಲಾರ: ಬಂಗಾರ ತಿರುಪತಿ ದೇವಾಲಯದ ಹುಂಡಿ ಹಣ ಕದ್ದು ಸಿಕ್ಕಿಬಿದ್ದ ನೌಕರ

ಕೋಲಾರ: ಬಂಗಾರ ತಿರುಪತಿ ದೇವಾಲಯದ ಹುಂಡಿ ಹಣ ಕದ್ದು ಸಿಕ್ಕಿಬಿದ್ದ ನೌಕರ

ಕೋಲಾರದ ಬಂಗಾರ ತಿರುಪತಿ ನೇತ್ರ ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ಹುಂಡಿ ಎಣಿಕೆ ವೇಳೆ ನೌಕರ ಸಾವಿರಾರು ರೂ ಹಣ ಕದ್ದು ಸಿಕ್ಕಿಬಿದ್ದ ಘಟನೆ ನಡೆದಿದೆ. ಮುಜರಾಯಿ ಅಧಿಕಾರಿಗಳು ಹಣವನ್ನು ವಶಪಡಿಸಿಕೊಂಡು ಕ್ರಮಕ್ಕೆ ಮುಂದಾಗಿದ್ದಾರೆ. ದೇವಾಲಯದ ಮುಖ್ಯ ಹುಂಡಿಯಲ್ಲಿ 13 ಲಕ್ಷ ರೂ ಹಾಗೂ ಅನ್ನದಾಸೋಹ ಹುಂಡಿಯಲ್ಲಿ 53 ಸಾವಿರ ರೂ ಸಂಗ್ರಹವಾಗಿದೆ ಎಂದು ಇಓ ಮಂಜುನಾಥ್ ತಿಳಿಸಿದ್ದಾರೆ.

ಬೇತಾಳ ದೇವಾಲಯದ ಮೇಲೆ ಬೇತಮಂಗಲ ಪೊಲೀಸರಿಂದ ದಿಢೀರ್​​ ದಾಳಿ: ಕಾರಣ ಇಲ್ಲಿದೆ

ಬೇತಾಳ ದೇವಾಲಯದ ಮೇಲೆ ಬೇತಮಂಗಲ ಪೊಲೀಸರಿಂದ ದಿಢೀರ್​​ ದಾಳಿ: ಕಾರಣ ಇಲ್ಲಿದೆ

ಕೋಲಾರ ಜಿಲ್ಲೆ ಕೆಜಿಎಫ್‌ನ ಬೇತಾಳ ದೇವಾಲಯದಲ್ಲಿ ಅಕ್ರಮ ಚಟುವಟಿಕೆಗಳು ಹಾಗೂ ಮಹಿಳೆಯರ ಮೇಲಿನ ಹಿಂಸೆಯ ಆರೋಪದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಅಮಾವಾಸ್ಯೆ ದಿನದಂದು ನಡೆದ ಈ ಕಾರ್ಯಾಚರಣೆಯಲ್ಲಿ ದೇವಾಲಯದ ನಿರ್ಮಾತೃ ಅಗೋರಿ ಚಂದ್ರನಾಥ್ ಗುರೂಜಿಯನ್ನು ವಶಕ್ಕೆ ಪಡೆಯಲಾಗಿದ್ದು, ಅವರ ವಿರುದ್ಧ ಮಾಟಮಂತ್ರ, ಕುಡಿತ ಬಿಡಿಸುವ ನೆಪದಲ್ಲಿ ವಂಚನೆ ಆರೋಪಗಳು ಕೇಳಿಬಂದಿವೆ.

ಕೋಲಾರದಲ್ಲಿ ಪಾತಾಳ ಕಂಡ ಟೊಮ್ಯಾಟೋ ಬೆಲೆ: ರಸ್ತೆ ಬದಿ ತಂದು ಬೆಳೆ ಸುರಿದ ರೈತರು

ಕೋಲಾರದಲ್ಲಿ ಪಾತಾಳ ಕಂಡ ಟೊಮ್ಯಾಟೋ ಬೆಲೆ: ರಸ್ತೆ ಬದಿ ತಂದು ಬೆಳೆ ಸುರಿದ ರೈತರು

ಕೋಲಾರ ಜಿಲ್ಲೆಯಲ್ಲಿ ಟೊಮ್ಯಾಟೊ ಬೆಲೆ ದಿಢೀರ್ ಕುಸಿತದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಒಂದು ತಿಂಗಳ ಹಿಂದೆ 700-800 ರೂ. ಇದ್ದ 15 ಕೆಜಿ ಬಾಕ್ಸ್ ಟೊಮ್ಯಾಟೊ ಬೆಲೆ ಈಗ 50-200 ರೂ.ಗೆ ಕುಸಿದಿದೆ. ಉತ್ಪಾದನಾ ವೆಚ್ಚವೂ ಸಿಗದ ಕಾರಣ ರೈತರು ತಮ್ಮ ಬೆಳೆಗಳನ್ನು ರಸ್ತೆ ಬದಿ ಮತ್ತು ಕೆರೆಗಳಲ್ಲಿ ಸುರಿಯುತ್ತಿದ್ದಾರೆ. ರೈತರು ಸರ್ಕಾರದಿಂದ ಬೆಂಬಲ ಬೆಲೆಗೆ ಮನವಿ ಮಾಡಿದ್ದಾರೆ. ಬೇಡಿಕೆಗಿಂತ ಹೆಚ್ಚು ಉತ್ಪಾದನೆಯೇ ಬೆಲೆ ಇಳಿಕೆಗೆ ಪ್ರಮುಖ ಕಾರಣ ಎನ್ನಲಾಗಿದೆ.

ಚಿನ್ನದ ನಾಡು ಕೆಜಿಎಫ್​​​​ನಲ್ಲಿ ಬಹುದೊಡ್ಡ ಲ್ಯಾಂಡ್​ ಸ್ಕ್ಯಾಮ್​, ಬಲಾಢ್ಯರ ಪಾಲಾಗುತ್ತಿದೆ ಸರ್ಕಾರಿ ಜಮೀನು

ಚಿನ್ನದ ನಾಡು ಕೆಜಿಎಫ್​​​​ನಲ್ಲಿ ಬಹುದೊಡ್ಡ ಲ್ಯಾಂಡ್​ ಸ್ಕ್ಯಾಮ್​, ಬಲಾಢ್ಯರ ಪಾಲಾಗುತ್ತಿದೆ ಸರ್ಕಾರಿ ಜಮೀನು

Kolar News: ಅದು ಬರೋಬ್ಬರಿ 150 ಕೋಟಿ ರೂಪಾಯಿ ಬೆಲೆ ಬಾಳುವ ಸುಮಾರು 60 ಎಕರೆ ಸರ್ಕಾರಿ ಜಮೀನು. ಈ ಸರ್ಕಾರಿ ಜಮೀನಿಗೆ ರಾತ್ರೋ ರಾತ್ರಿ ನಕಲಿ ದಾಖಲೆಗಳನ್ನು ಸೃಷ್ಟಿಮಾಡಿಕೊಂಡು ಮಾಲೀಕರು ಪ್ರತ್ಯಕ್ಷರಾಗಿದ್ದಾರೆ. ಇದರ ಹಿಂದೆ ಬಹುದೊಡ್ಡ ಅಕ್ರಮವೇ ನಡೆದಿದೆ ಅನ್ನೋ ಆರೋಪ ಕೇಳಿ ಬಂದಿದ್ದು, ಇದೀಗ ಚಿನ್ನದ ನಾಡಿನಲ್ಲಿ ದೊಡ್ಡದೊಂದು ಲ್ಯಾಂಡ್​ ಸ್ಕ್ಯಾಮ್​ ಬಟಾಬಯಲಾಗಿದೆ.

ಆಷಾಢ ಆರಂಭದಲ್ಲೇ ಮಾಂಸಪ್ರಿಯರಿಗೆ ಶಾಕ್: ಚಿಕನ್, ಮೊಟ್ಟೆ ಬೆಲೆಯಲ್ಲಿ ದಾಖಲೆಯ ಏರಿಕೆ

ಆಷಾಢ ಆರಂಭದಲ್ಲೇ ಮಾಂಸಪ್ರಿಯರಿಗೆ ಶಾಕ್: ಚಿಕನ್, ಮೊಟ್ಟೆ ಬೆಲೆಯಲ್ಲಿ ದಾಖಲೆಯ ಏರಿಕೆ

ಆಷಾಡ ಮಾಸ ಆರಂಭದಲ್ಲೇ ಕೋಲಾರದಲ್ಲಿ ಕೋಳಿ ಮತ್ತು ಮೊಟ್ಟೆ ಬೆಲೆಯಲ್ಲಿ ದಾಖಲೆ ಏರಿಕೆ ಕಂಡಿವೆ. ಕೋಳಿ ಫಾರಂಗಳಲ್ಲಿ ಉತ್ಪಾದನೆ ಕುಸಿತ, ವಾತಾವರಣ ಏರುಪೇರು, ರೋಗಗಳು ಇದಕ್ಕೆ ಮುಖ್ಯ ಕಾರಣ. ಮಾಂಸಪ್ರಿಯರು ಮತ್ತು ಹೋಟೆಲ್ ಮಾಲೀಕರಿಗೆ ಇದು ದೊಡ್ಡ ಆರ್ಥಿಕ ಹೊರೆಯಾಗಿದೆ. ಮುಂದಿನ ಒಂದು-ಎರಡು ತಿಂಗಳು ಇದೇ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆಯಿದೆ.

ದುರಂತ್ ಎಕ್ಸ್​ಪ್ರೆಸ್ ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!

ದುರಂತ್ ಎಕ್ಸ್​ಪ್ರೆಸ್ ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!

ಕೋಲ್ಕತ್ತಾದಿಂದ ಬೆಂಗಳೂರಿಗೆ ಬರುತ್ತಿದ್ದ ದುರಂತ್​ ಎಕ್ಸ್‌ಪ್ರೆಸ್‌ಗೆ ಬಾಂಬ್ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ ರೈಲನ್ನು ನಿಲ್ಲಿಸಿ ತೀವ್ರ ಪರಿಶೀಲನೆ ನಡೆಸಲಾಯಿತು. ರೈಲ್ವೆ, ಸ್ಥಳೀಯ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನದಳದೊಂದಿಗೆ ಸಂಪೂರ್ಣ ತಪಾಸಣೆ ಮಾಡಿದರು. ಈ ಸಂಬಂಧ ಬಾಂಬ್ ಬೆದರಿಕೆ ಕರೆ ಮಾಡಿದ್ದ ಓರ್ವ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದೇಗುಲದ ಆವರಣದಲ್ಲಿ ಎಸ್​ಐಆರ್​​ ಪ್ರಕ್ರಿಯೆ: ಚರ್ಚೆಗೆ ಗ್ರಾಸವಾದ ಅಧಿಕಾರಿಗಳ ನಡೆ

ದೇಗುಲದ ಆವರಣದಲ್ಲಿ ಎಸ್​ಐಆರ್​​ ಪ್ರಕ್ರಿಯೆ: ಚರ್ಚೆಗೆ ಗ್ರಾಸವಾದ ಅಧಿಕಾರಿಗಳ ನಡೆ

SIR protocol violation: ಕೋಲಾರದ ಕುರುಬರಪೇಟೆಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್​ಐಆರ್​) ಪ್ರಕ್ರಿಯೆಯಲ್ಲಿ ಹೊಸ ಪದ್ಧತಿ ಅನುಸರಿಸಲಾಗಿದೆ. ಮನೆ ಮನೆಗೆ ಭೇಟಿ ನೀಡುವ ಬದಲು, ಮತದಾರರನ್ನು ದೇಗುಲದ ಆವರಣಕ್ಕೆ ಕರೆಸಿ ಅರ್ಜಿಗಳನ್ನು ಭರ್ತಿ ಮಾಡಿಸಲಾಗುತ್ತಿದೆ. ಈ ಪರ್ಯಾಯ ವ್ಯವಸ್ಥೆಯು ಆಯೋಗದ ಸೂಚನೆಗಳಿಗೆ ವಿರುದ್ಧವಾಗಿದ್ದು, ಪ್ರಕ್ರಿಯೆಯ ಸಕ್ರಮತೆ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಬಾಲ್ಯ ವಿವಾಹ ತಡೆದದ್ದೇ ತಪ್ಪಾಯ್ತು!: ಕೋಲಾರದಲ್ಲಿ ಅಂಗನವಾಡಿ ಕಾರ್ಯಕರ್ತೆಯ ಕುತ್ತಿಗೆಗೆ ವೇಲ್ ಬಿಗಿದು ಕೊಲೆಗೆ ಯತ್ನಿಸಿದ ಅಪ್ರಾಪ್ತ ಬಾಲಕಿ

ಬಾಲ್ಯ ವಿವಾಹ ತಡೆದದ್ದೇ ತಪ್ಪಾಯ್ತು!: ಕೋಲಾರದಲ್ಲಿ ಅಂಗನವಾಡಿ ಕಾರ್ಯಕರ್ತೆಯ ಕುತ್ತಿಗೆಗೆ ವೇಲ್ ಬಿಗಿದು ಕೊಲೆಗೆ ಯತ್ನಿಸಿದ ಅಪ್ರಾಪ್ತ ಬಾಲಕಿ

ಕೋಲಾರದಲ್ಲಿ ಬಾಲ್ಯ ವಿವಾಹ ತಡೆದ ಅಂಗನವಾಡಿ ಕಾರ್ಯಕರ್ತೆ ಪದ್ಮಾವತಿ ಮೇಲೆ ಅಪ್ರಾಪ್ತ ಬಾಲಕಿಯಿಂದ ಮಾರಣಾಂತಿಕ ಹಲ್ಲೆ ನಡೆದಿದೆ. ಮುಳಬಾಗಿಲು ತಾಲೂಕಿನ ಜೆ.ಕುರುಬರಹಳ್ಳಿಯಲ್ಲಿ ಈ ಘಟನೆ ಜರುಗಿದೆ. ಮದುವೆ ತಡೆದಿದ್ದಕ್ಕೆ ಆಕ್ರೋಶಗೊಂಡ ಅಪ್ರಾಪ್ತೆ, ಪದ್ಮಾವತಿ ಅವರ ಕುತ್ತಿಗೆಗೆ ವೇಲ್ ಬಿಗಿದು ಕೊಲೆಗೆ ಯತ್ನಿಸಿದ್ದಾಳೆ. ಗಾಯಗೊಂಡ ಪದ್ಮಾವತಿ ಆಸ್ಪತ್ರೆ ಸೇರಿದ್ದು, ಪೊಲೀಸರ ನಿರ್ಲಕ್ಷ್ಯಕ್ಕೆ ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿದೆ.

ಬರಗಾಲದ ಸೂಚನೆ ಕೊಡುತ್ತಾ ನೇರಳೆ ಹಣ್ಣು? ಈ ವಿಚಿತ್ರ ನಂಬಿಕೆಯ ಅಸಲಿಯತ್ತು ಏನು?

ಬರಗಾಲದ ಸೂಚನೆ ಕೊಡುತ್ತಾ ನೇರಳೆ ಹಣ್ಣು? ಈ ವಿಚಿತ್ರ ನಂಬಿಕೆಯ ಅಸಲಿಯತ್ತು ಏನು?

ಕೋಲಾರದಲ್ಲಿ ಈ ವರ್ಷ ನೇರಳೆ ಫಸಲು ಸಮೃದ್ಧವಾಗಿದ್ದು, ರೈತರು ಉತ್ತಮ ಆದಾಯ ಗಳಿಸುತ್ತಿದ್ದಾರೆ. ಆದರೆ ಈ ಮಧ್ಯೆ ನೇರಳೆ ಫಸಲು ಚೆನ್ನಾಗಿ ಬಂದರೆ ಬರಗಾಲ ಬರುತ್ತದೆ ಎಂಬ ಮಾತುಗಳು ಕೇಳಿಬರುತ್ತಿದ್ದು, ಆತಂಕಕ್ಕೆ ಕೂಡ ಕಾರಣವಾಗಿದೆ. ಹಾಗಾದರೆ ಈ ವಿಚಿತ್ರ ನಂಬಿಕೆಯ ಅಸಲಿಯತ್ತು ಏನು?

ಕೋಲಾರ: ಬೈಕ್​ಗೆ ಟ್ರ್ಯಾಕ್ಟರ್​ ಡಿಕ್ಕಿ; ಮಗಳು ಸೇರಿ ತಂದೆ-ತಾಯಿ ಸ್ಥಳದಲ್ಲೇ ದುರ್ಮರಣ

ಕೋಲಾರ: ಬೈಕ್​ಗೆ ಟ್ರ್ಯಾಕ್ಟರ್​ ಡಿಕ್ಕಿ; ಮಗಳು ಸೇರಿ ತಂದೆ-ತಾಯಿ ಸ್ಥಳದಲ್ಲೇ ದುರ್ಮರಣ

kolar news: ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ವಿ.ಗುಟ್ಟಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೀಕರ ಅಪಘಾತ ಸಂಭವಿಸಿದೆ. ಬೈಕ್‌ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮುಳಬಾಗಿಲು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತೊಂದು ಪ್ರಕರಣದಲ್ಲಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು ಸವಾರ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಮೆಣಸೆ ಸಮೀಪದ ಶಿಡ್ಲೆ ಬಳಿ ನಡೆದಿದೆ.

ಬಿರಿಯಾನಿಯಲ್ಲಿ ಸತ್ತ ಹಲ್ಲಿ ಪತ್ತೆ: ಒಬ್ಬೊಬ್ಬರೇ ಗ್ರಾಹಕರು ಆಸ್ಪತ್ರೆ ದಾಖಲು

ಬಿರಿಯಾನಿಯಲ್ಲಿ ಸತ್ತ ಹಲ್ಲಿ ಪತ್ತೆ: ಒಬ್ಬೊಬ್ಬರೇ ಗ್ರಾಹಕರು ಆಸ್ಪತ್ರೆ ದಾಖಲು

Kolar News: ಕೋಲಾರ ಜಿಲ್ಲೆಯ ಬಂಗಾರಪೇಟೆ ಪಟ್ಟಣದ‌ ಬಿಜಿಟಿ ಹೋಟೆಲ್​​​ನಲ್ಲಿ ಅನುಹುತವೊಂದು ನಡೆದಿದೆ. ಬಿರಿಯಾನಿ ಮತ್ತು ಮೊಸರು ಬಜ್ಜಿಯಲ್ಲಿ ಸತ್ತ ಹಲ್ಲಿ ಪತ್ತೆ ಆಗಿದೆ. ಆದರೆ ಬಿರಿಯಾನಿ ತಿಂದಿದ್ದ ಗ್ರಹಕರಿಬ್ಬರು ಇದೀಗ ವಾಂತಿ, ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ಸದ್ಯ ಬಿಜಿಟಿ ಹೋಟೆಲ್ ಬಂದ್​ಗೆ ಆದೇಶಿಸಲಾಗಿದೆ.

ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!

ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!

ನಗರದ ಸರ್ ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದ ಬಳಿ ನಿಲ್ಲಿಸಲಾಗಿದ್ದ ಖಾಸಗಿ ಕಂಪನಿಯ ಬಸ್ ಮೇಲೆ ಬೃಹತ್ ಮರದ ಕೊಂಬೆಯೊಂದು ಮುರಿದು ಬಿದ್ದಿರುವ ಘಟನೆ ನಡೆದಿದೆ. ತೀವ್ರ ಗಾಳಿಯ ಹಿನ್ನೆಲೆಯಲ್ಲಿ ಮರದ ಕೊಂಬೆ ಮುರಿದು ಬಿದ್ದ ಪರಿಣಾಮ ಬಸ್ ಸಂಪೂರ್ಣವಾಗಿ ಜಖಂಗೊಂಡಿದೆ. ಈ ಬಸ್ ಖ್ಯಾತ ‘ಟಾಟಾ ಎಲೆಕ್ಟ್ರಾನಿಕ್ಸ್’ ಕಂಪನಿಗೆ ಸೇರಿದ್ದಾಗಿದೆ ಎಂದು ತಿಳಿದುಬಂದಿದೆ. ಘಟನೆ ಸಂಭವಿಸಿದ ವೇಳೆ ಅದೃಷ್ಟವಶಾತ್ ಬಸ್‌ನಲ್ಲಿದ್ದ ಚಾಲಕ ಹಾಗೂ ಕ್ಲೀನರ್ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಮತ್ತು ಸಾರ್ವಜನಿಕರು ಬಸ್ ಮೇಲಿದ್ದ ಕೊಂಬೆಯನ್ನು ತೆರವುಗೊಳಿಸಲು ಕ್ರಮ ಕೈಗೊಂಡಿದ್ದಾರೆ.