AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ

Author - TV9 Kannada

rajendra.banavadi@tv9.com

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More
Follow On:
‘ಸೋಫಾ ಅಳತೆ ಮಾಡಿಕೊಡು ಬಾ’ ಎಂದು ಕರೆದು ಬರ್ಬರವಾಗಿ ಹತ್ಯೆ; ಬಾರ್ ಎದುರೇ ಯುವಕನ ತಲೆ ಮೇಲೆ ಕಲ್ಲು ಎತ್ತಿಹಾಕಿದ ಆಟೋ ಚಾಲಕ!

‘ಸೋಫಾ ಅಳತೆ ಮಾಡಿಕೊಡು ಬಾ’ ಎಂದು ಕರೆದು ಬರ್ಬರವಾಗಿ ಹತ್ಯೆ; ಬಾರ್ ಎದುರೇ ಯುವಕನ ತಲೆ ಮೇಲೆ ಕಲ್ಲು ಎತ್ತಿಹಾಕಿದ ಆಟೋ ಚಾಲಕ!

ಕೋಲಾರದ ಹೊರವಲಯದಲ್ಲಿ ಯುವಕ ಸಲ್ಮಾನ್ ಪಾಷಾ ಬರ್ಬರ ಕೊಲೆಯಾಗಿದ್ದಾನೆ. ಸೋಫಾ ಆರ್ಡರ್ ನೆಪದಲ್ಲಿ ಕರೆದೊಯ್ದು, ಮದ್ಯ ಹಾಗೂ ಗಾಂಜಾ ಅಮಲಿನಲ್ಲಿದ್ದ ಅಬ್ದುಲ್ ರಶೀದ್ ಕಲ್ಲು ಮತ್ತು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಕುಟುಂಬಸ್ಥರು ದುಃಖದಲ್ಲಿದ್ದು, ಜಿಲ್ಲೆಯಲ್ಲಿ ಮಾದಕವಸ್ತು ಹಾವಳಿ ಹೆಚ್ಚಿರುವುದು ಇಂತಹ ಕೃತ್ಯಗಳಿಗೆ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಬಿಯರ್‌ಗೆ ಭಾರಿ ಡಿಮ್ಯಾಂಡ್: ಚಿಲ್ ಬಿಯರ್​​ ಮೊರೆ ಹೋಗುತ್ತಿರುವ ಮದ್ಯಪ್ರಿಯರು

ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಬಿಯರ್‌ಗೆ ಭಾರಿ ಡಿಮ್ಯಾಂಡ್: ಚಿಲ್ ಬಿಯರ್​​ ಮೊರೆ ಹೋಗುತ್ತಿರುವ ಮದ್ಯಪ್ರಿಯರು

ಕೋಲಾರದಲ್ಲಿ ಬೇಸಿಗೆಯ ಬಿಸಿಲಿನ ತಾಪಮಾನ ಏರಿಕೆಯೊಂದಿಗೆ ಮದ್ಯಪ್ರಿಯರ ಅಭಿರುಚಿ ಬದಲಾಗಿದೆ. ಬಿಸಿಲಿನ ಧಗೆಗೆ ತಂಪು ಪಾನೀಯವಾದ ಬಿಯರ್‌ಗೆ 25-30% ರಷ್ಟು ಬೇಡಿಕೆ ಹೆಚ್ಚಾಗಿದ್ದು, ರಮ್ ಮತ್ತು ಬ್ರಾಂಡಿಯಂತಹ ಪಾನೀಯಗಳ ಬೇಡಿಕೆ ಶೇಕಡಾ 50 ರಷ್ಟು ಕಡಿಮೆಯಾಗಿದೆ. ಆದರೆ, ಹೆಚ್ಚುತ್ತಿರುವ ಬೇಡಿಕೆಗೆ ತಕ್ಕಂತೆ ಬಿಯರ್ ಪೂರೈಕೆ ಇರುವುದಿಲ್ಲ ಎಂದು ಬಾರ್ ಮಾಲೀಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಟ್ರಾಫಿಕ್ ಪೊಲೀಸ್ ಬೈಕ್​ನಲ್ಲಿ ಅಡಗಿತ್ತು ಹಾವು! ವೀಡಿಯೋ ನೋಡಿ

ಟ್ರಾಫಿಕ್ ಪೊಲೀಸ್ ಬೈಕ್​ನಲ್ಲಿ ಅಡಗಿತ್ತು ಹಾವು! ವೀಡಿಯೋ ನೋಡಿ

ಜಿಲ್ಲೆಯ ಪೆಟ್ರೋಲ್ ಬಂಕ್ ಬಳಿ ನಿಲ್ಲಿಸಿದ್ದ ಸಂಚಾರಿ ಪೊಲೀಸ್ ದ್ವಿಚಕ್ರ ವಾಹನದಲ್ಲಿ ಸೇರಿಕೊಂಡಿದ್ದ ಅಪರೂಪದ ಬಿಲ್ಲೂರ ಹಾವನ್ನು ಉರಗ ರಕ್ಷಕ ನಾಗರಾಜ್ ಯಶಸ್ವಿಯಾಗಿ ರಕ್ಷಿಸಿದ್ದಾರೆ. ವಾಹನ ಚಾಲನೆ ಮಾಡುವ ಸಂದರ್ಭದಲ್ಲಿ ಹಾವಿರುವುದು ಪತ್ತೆಯಾಗಿದ್ದು, ಕೂಡಲೇ ನಾಗರಾಜ್ ಅವರಿಗೆ ಕರೆ ಮಾಡಲಾಗಿತ್ತು. ಸ್ಥಳಕ್ಕೆ ಧಾವಿಸಿದ ಅವರು ಹಾವನ್ನು ಸುರಕ್ಷಿತವಾಗಿ ಹೊರತೆಗೆದು, ನಂತರ ಸಮೀಪದ ಅರಣ್ಯ ಪ್ರದೇಶಕ್ಕೆ ಬಿಟ್ಟು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಕೋಲಾರ: SSLC ಪರೀಕ್ಷೆ ಪಾಸ್​ ಆದ ಖುಷಿಯಲ್ಲಿ ಈಜಲು ಹೋದ ವಿದ್ಯಾರ್ಥಿ ನೀರುಪಾಲು

ಕೋಲಾರ: SSLC ಪರೀಕ್ಷೆ ಪಾಸ್​ ಆದ ಖುಷಿಯಲ್ಲಿ ಈಜಲು ಹೋದ ವಿದ್ಯಾರ್ಥಿ ನೀರುಪಾಲು

ಕೋಲಾರದಲ್ಲಿ SSLC ಫಲಿತಾಂಶದ ಸಂಭ್ರಮದಲ್ಲಿದ್ದ ವಿದ್ಯಾರ್ಥಿಯೋರ್ವ ಈಜಲು ಹೋಗಿ ದುರಂತ ಅಂತ್ಯ ಕಂಡಿದ್ದಾನೆ. ಸ್ನೇಹಿತರ ಜೊತೆ ಈತ ಈಜಲು ತೆರಳಿದ್ದ ವೇಳೆ ಬಾವಿಯ ನೀರಲ್ಲಿ ಮುಳುಗಿ ಅವಘಡ ನಡೆದಿದೆ. ಘಟನೆ ಬೆನ್ನಲ್ಲೇ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಬಾಲಕನ ಶವಕ್ಕಾಗಿ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಹುಡುಕಾಟ ನಡೆಯುತ್ತಿದೆ.

ಕೋಲಾರ: ಪತ್ನಿಯ ಶೀಲ ಶಂಕಿಸಿ ಮಚ್ಚಿನಿಂದ ಕೊಚ್ಚಿ ಕೊಂದ ಪತಿ

ಕೋಲಾರ: ಪತ್ನಿಯ ಶೀಲ ಶಂಕಿಸಿ ಮಚ್ಚಿನಿಂದ ಕೊಚ್ಚಿ ಕೊಂದ ಪತಿ

ಕೋಲಾರದ ಕೆಜಿಎಫ್ ತಾಲೂಕಿನ ಚಿನ್ನದ ಗಣಿ ಗ್ರಾಮದಲ್ಲಿ ಪತ್ನಿಯ ನಡತೆಯ ಮೇಲೆ ಸಂಶಯ ವ್ಯಕ್ತಪಡಿಸಿದ ಪತಿಯೊಬ್ಬ ಆಕೆಯನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಆಂಧ್ರಪ್ರದೇಶ ಮೂಲದ ಗೋಪಿನಾಥ್ ತನ್ನ ಪತ್ನಿ ಈಶ್ವರಮ್ಮ ಅವರನ್ನು ಹತ್ಯೆ ಮಾಡಿದ್ದಾನೆ. ಊರಿಗಾಂ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಸಿನಿಮೀಯ ಶೈಲಿಯಲ್ಲಿ ಬೆನ್ನಟ್ಟಿ ಬಂಧಿಸಿದ್ದಾರೆ. ರಾಜ್ಯದಲ್ಲಿ ಇಂತಹ ಅಕ್ರಮ ಸಂಬಂಧದ ಪ್ರಕರಣಗಳು ಹೆಚ್ಚುತ್ತಿದ್ದು, ಇದು ಮತ್ತೊಂದು ಉದಾಹರಣೆಯಾಗಿದೆ.

ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ; ಬಾಲ ಕಾರ್ಮಿಕ ಪದ್ಧತಿ ವಿರುದ್ಧ ಅಧಿಕಾರಿಗಳ ಭರ್ಜರಿ ದಾಳಿ!

ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ; ಬಾಲ ಕಾರ್ಮಿಕ ಪದ್ಧತಿ ವಿರುದ್ಧ ಅಧಿಕಾರಿಗಳ ಭರ್ಜರಿ ದಾಳಿ!

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಎನ್.ಕೆ.ಎನ್ ಇಟ್ಟಿಗೆ ಕಾರ್ಖಾನೆಯ ಮೇಲೆ ಅಧಿಕಾರಿಗಳು ದಾಳಿ ನಡೆಸಿ 10 ಜೀತ ಕಾರ್ಮಿಕರನ್ನು ರಕ್ಷಿಸಿದ್ದಾರೆ. ರಕ್ಷಿಸಲ್ಪಟ್ಟವರಲ್ಲಿ ಇಬ್ಬರು ಬಾಲ ಕಾರ್ಮಿಕರು ಸೇರಿದ್ದಾರೆ. ಕೋಲಾರ ಉಪವಿಭಾಗಾಧಿಕಾರಿ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕಾರ್ಮಿಕರಿಗೆ ಬಿಡುಗಡೆ ಪತ್ರ ನೀಡಿ ಅವರ ಊರುಗಳಿಗೆ ಕಳುಹಿಸುವ ವ್ಯವಸ್ಥೆ ಮಾಡಲಾಗುತ್ತಿದೆ.

ಆಂಬ್ಯುಲೆನ್ಸ್ ನಲ್ಲಿ ಬಂದು ಎಸ್ಎಸ್ಎಲ್​ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿಗೆ ಸುರೇಶ್ ಕುಮಾರ್ ಆರ್ಥಿಕ ನೆರವು!

ಆಂಬ್ಯುಲೆನ್ಸ್ ನಲ್ಲಿ ಬಂದು ಎಸ್ಎಸ್ಎಲ್​ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿಗೆ ಸುರೇಶ್ ಕುಮಾರ್ ಆರ್ಥಿಕ ನೆರವು!

ಕೋಲಾರ ಕೆಜಿಎಫ್‌ನ ಕುಸುಮಾ ಅಪಘಾತದಲ್ಲಿ ಕಾಲು ಕಳೆದುಕೊಂಡರೂ ಸ್ಟ್ರೆಚರ್‌ನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದು ಎಲ್ಲರೂ ಉಬ್ಬೇರಿಸುವಂತೆ ಮಾಡಿದ್ದಳು. ಆದರೆ ಇತ್ತೀಚೆಗೆ ಆಕೆಯ ಚಿಕಿತ್ಸಾ ವೆಚ್ಚಕ್ಕೆ ತಂದೆ ಹರಸಾಹಸ ಪಡುತ್ತಿದ್ದಾಗ, ಮಾಜಿ ಸಚಿವ ಸುರೇಶ್ ಕುಮಾರ್ ನೆರವಿಗೆ ಬಂದಿದ್ದಾರೆ. ಮುಖ್ಯಮಂತ್ರಿಗಳ ನಿಧಿಯಿಂದ ಚಿಕಿತ್ಸೆ ಕೊಡಿಸಲು ಮುಂದಾಗಿ, ಬಾಲಕಿಯ ಕುಟುಂಬಕ್ಕೆ ಆಶಾಕಿರಣವಾಗಿದ್ದಾರೆ.

ಕೋಲಾರದಲ್ಲಿ ಗರ್ಭಿಣಿಯರ ಮರಣ ಪ್ರಮಾಣ ತಗ್ಗಿಸಲು RRR ಸಂಜೀವಿನಿ: ಏನಿದು RRR ಫಾರ್ಮುಲಾ?

ಕೋಲಾರದಲ್ಲಿ ಗರ್ಭಿಣಿಯರ ಮರಣ ಪ್ರಮಾಣ ತಗ್ಗಿಸಲು RRR ಸಂಜೀವಿನಿ: ಏನಿದು RRR ಫಾರ್ಮುಲಾ?

ಪ್ರತಿಯೊಬ್ಬ ಮಹಿಳೆಯ ಪಾಲಿಗೆ ಹೆರಿಗೆ ಎಂಬುದು ಮರುಜನ್ಮದ ಸಮಾನ. ಆದರೆ, ಹೆರಿಗೆಯ ಸಂದರ್ಭದಲ್ಲಿ ಸಂಭವಿಸುವ ಸಾವುಗಳು ಇಂದಿಗೂ ದೊಡ್ಡ ಸವಾಲಾಗಿವೆ. ಈ ಆತಂಕವನ್ನು ಹೋಗಲಾಡಿಸಲು ಕೋಲಾರ ಜಿಲ್ಲಾಡಳಿತ ರೂಪಿಸಿದ ಒಂದು ವಿಶೇಷ ಸೂತ್ರ ಇದೀಗ ಎಲ್ಲರ ಗಮನ ಸೆಳೆದಿದೆ. ಹಾಗಾದರೆ ಆ ಸೂತ್ರ ಏನು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಳ್ಳಂ ಬೆಳಿಗ್ಗೆ ರೌಡಿಶೀಟರ್‌ಗಳ ಬೆವರಿಳಿಸಿದ ಕೆಜಿಎಫ್​​ ಪೊಲೀಸರು: ದಾಳಿ ವೇಳೆ ಪತ್ತೆಯಾದ ಮಾರಾಕಾಸ್ತ್ರಗಳ ಜಪ್ತಿ

ಬೆಳ್ಳಂ ಬೆಳಿಗ್ಗೆ ರೌಡಿಶೀಟರ್‌ಗಳ ಬೆವರಿಳಿಸಿದ ಕೆಜಿಎಫ್​​ ಪೊಲೀಸರು: ದಾಳಿ ವೇಳೆ ಪತ್ತೆಯಾದ ಮಾರಾಕಾಸ್ತ್ರಗಳ ಜಪ್ತಿ

ಕೋಲಾರ ಜಿಲ್ಲೆಯ ಕೆಜಿಎಫ್ ಮತ್ತು ಬಂಗಾರಪೇಟೆ ವ್ಯಾಪ್ತಿಯಲ್ಲಿ ರೌಡಿಶೀಟರ್‌ಗಳ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಕೆಜಿಎಫ್ ಎಸ್‌ಪಿ ಶಿವಾಂಶು ರಜಪೂತ್ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ 10 ರೌಡಿಗಳ ಮನೆಗಳನ್ನು ಶೋಧಿಸಲಾಗಿದ್ದು, ಲಾಂಗ್, ಮಚ್ಚು ಸೇರಿದಂತೆ ಹಲವು ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ತಾಯಲೂರು PDO ವಿರುದ್ಧ ಶಾಸಕ ಸಮೃದ್ಧಿ ಮಂಜುನಾಥ್ ಫುಲ್​​ ಗರಂ: ಕಾರಣ ಇಲ್ಲಿದೆ

ತಾಯಲೂರು PDO ವಿರುದ್ಧ ಶಾಸಕ ಸಮೃದ್ಧಿ ಮಂಜುನಾಥ್ ಫುಲ್​​ ಗರಂ: ಕಾರಣ ಇಲ್ಲಿದೆ

ಕೋಲಾರ ಜಿಲ್ಲೆಯ ಮುಳಬಾಗಿಲು ಶಾಸಕ ಸಮೃದ್ಧಿ ಮಂಜುನಾಥ್ ಅವರು ತಾಯಲೂರು ಗ್ರಾ.ಪಂ. ಪಿಡಿಒ ಶ್ರೀನಿವಾಸರೆಡ್ಡಿ ವಿರುದ್ಧ ಜನಸ್ಪಂದನ ಕಾರ್ಯಕ್ರಮದಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. 78 ಅರ್ಜಿಗಳ ಪೈಕಿ 56 ಅರ್ಜಿಗಳ ಕಾರ್ಯವೈಖರಿ ಬಗ್ಗೆ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಶಾಸಕರು ಅಸಮಾಧಾನಗೊಂಡ ಪ್ರಸಂಗ ನಡೆಯಿತು.

ಮಾಲೂರು ತಾಲೂಕಿನ ಟೇಕಲ್ ಗ್ರಾಮದಲ್ಲಿ ಬಿರು ಬಿಸಿಲಲ್ಲೂ ಬಿರಿಯಾನಿ, ಸೀರೆಗಾಗಿ ಮುಗ್ಗಿಬಿದ್ದ ಜನ

ಮಾಲೂರು ತಾಲೂಕಿನ ಟೇಕಲ್ ಗ್ರಾಮದಲ್ಲಿ ಬಿರು ಬಿಸಿಲಲ್ಲೂ ಬಿರಿಯಾನಿ, ಸೀರೆಗಾಗಿ ಮುಗ್ಗಿಬಿದ್ದ ಜನ

ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಟೇಕಲ್ ಗ್ರಾಮದಲ್ಲಿ ನೂತನ ಐಟಿಐ ಕಾಲೇಜು ಕಟ್ಟಡ ಲೋಕಾರ್ಪಣೆ ಹಾಗೂ ಕಟ್ಟಡ ಕಾರ್ಮಿಕರ ವಸತಿ ಶಾಲೆಯ ಗುದ್ದಲಿ ಪೂಜೆ ಸಮಾರಂಭದಲ್ಲಿ ಬಿರಿಯಾನಿ ಮತ್ತು ಉಚಿತ ಸೀರೆಗಾಗಿ ನೂಕುನುಗ್ಗಲು ಉಂಟಾಗಿದೆ. ಒಬ್ಬರ ಮೇಲೊಬ್ಬರು ಬಿದ್ದ ಪರಿಣಾಮ ಜನರನ್ನು ನಿಯಂತ್ರಿಸಲು ಹರಸಾಹಸ ಪಡಬೇಕಾದ ಸ್ಥಿತಿ ನಿರ್ಮಾಣವಾಗಿತ್ತು.

ಕೋಲಾರದಲ್ಲೊಂದು ವಿಚಿತ್ರ ಘಟನೆ: ಮನುಷ್ಯರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಣಿಗಳ ರಕ್ತ ಪರೀಕ್ಷೆ

ಕೋಲಾರದಲ್ಲೊಂದು ವಿಚಿತ್ರ ಘಟನೆ: ಮನುಷ್ಯರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಣಿಗಳ ರಕ್ತ ಪರೀಕ್ಷೆ

ಅದು ಸರ್ಕಾರಿ ಜಿಲ್ಲಾಸ್ಪತ್ರೆ ಅಲ್ಲಿಗೆ ನಿತ್ಯ ಸಾವಿರಾರು ಜನ ರೋಗಿಗಳು ಬಂದು ತಮ್ಮ ಆರೋಗ್ಯ ಹಾಗೂ ರಕ್ತ ಸೇರಿದಂತೆ ವಿವಿದ ಪರೀಕ್ಷೆ ಮಾಡಿಕೊಂಡು ಹೋಗುತ್ತಾರೆ,. ಆದರೆ ಅದೇ ಮನುಷ್ಯರ ಆಸ್ಪತ್ರೆಯಲ್ಲಿ ಪ್ರಾಣಿಗಳ ರಕ್ತ ಸಹ ಪರೀಕ್ಷೆ ಮಾಡಿರುವ ಅಪರೂಪದ ಪ್ರಕರಣ ಬೆಳಕಿಗೆ ಬಂದಿದೆ. ಅಚ್ಚರಿ ಅನ್ನಿಸಿದರೂ ಸತ್ಯ.