18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.
ಮೆಡಿಕಲ್ ಸ್ಟೋರ್ ಪರವಾನಗಿ ನವೀಕರಣಕ್ಕಾಗಿ ಲಂಚ: ಲೋಕಾಯುಕ್ತ ಬಲೆಗೆ ಬಿದ್ದ ಕೋಲಾರ ಡ್ರಗ್ ಕಂಟ್ರೋಲರ್
ಮೆಡಿಕಲ್ ಸ್ಟೋರ್ ಪರವಾನಗಿ ನವೀಕರಣಕ್ಕಾಗಿ 38,000 ರೂ. ಲಂಚ ಪ್ರಕರಣ ಸಂಬಂಧ ಕೋಲಾರ ಡ್ರಗ್ ಕಂಟ್ರೋಲರ್ ಶ್ಯಾಮಲಾ ಸೇರಿ ಮೂವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಾಲೂರು ಬಳಿ ದಾಳಿ ವೇಳೆ ಲಂಚದ ಹಣ ಎಸೆದು ಪರಾರಿಯಾಗಲು ಯತ್ನಿಸಿದರೂ, ಲೋಕಾಯುಕ್ತ ಪೊಲೀಸರು ಅವರನ್ನು ಬೆನ್ನಟ್ಟಿ ಬಂಧಿಸಿದ್ದಾರೆ. ಹಣ ಸಿಗದಿದ್ದರೂ, ಲಂಚ ಕೇಳಿದ ಆಡಿಯೋ ಮತ್ತು ಹಣ ಸ್ವೀಕರಿಸಿದ ವಿಡಿಯೋ ಸಾಕ್ಷ್ಯಗಳ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.
- Rajendra Simha BL
- Updated on: Mar 18, 2026
- 12:37 pm
ಆಂಬ್ಯುಲೆನ್ಸ್ನಲ್ಲೇ ಬಂದು ಸ್ಟ್ರೆಚರ್ ಮೇಲೆ ಮಲಗಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ: ವಿಡಿಯೋ ನೋಡಿ
ವಿಧಿಯಾಟಕ್ಕೆ ಸೋಲದ ಅಸಾಮಾನ್ಯ ಪ್ರತಿಭೆ ಕೋಲಾರದ ಧೀಮಂತ ವಿದ್ಯಾರ್ಥಿನಿ ಕುಸುಮಾ. ಈಕೆ ಅಪಘಾತದಲ್ಲಿ ಕಾಲು ಕಳೆದುಕೊಂಡರೂ ಎದೆಗುಂದದೆ, ಆಂಬ್ಯುಲೆನ್ಸ್ನಲ್ಲೇ ಬಂದು ಸ್ಟ್ರೆಚರ್ ಮೇಲೆ ಮಲಗಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವ ಮೂಲಕ ಅಚ್ಚರಿ ಮೂಡಿಸಿದ್ದಾಳೆ. ಸಾವು-ಬದುಕಿನ ಹೋರಾಟದ ನಡುವೆಯೂ ಈಕೆ ತೋರಿದ ಶಿಕ್ಷಣ ಪ್ರೇಮದ ವಿಡಿಯೋ ಇಲ್ಲಿದೆ ನೋಡಿ.
- Rajendra Simha BL
- Updated on: Mar 18, 2026
- 11:49 am
ಬಮೂಲ್ ಬೆನ್ನಲ್ಲೇ ಕೋಮುಲ್ನಿಂದ ಹಾಲು ಉತ್ಪಾದಕರಿಗೆ ಯುಗಾದಿ ಗಿಫ್ಟ್
ಕೋಮುಲ್ ಪ್ರತಿ ಲೀಟರ್ ಹಾಲಿಗೆ 2 ರೂ ಹೆಚ್ಚಳ ಮಾಡಿದೆ. ಆ ಮೂಲಕ ಕೋಲಾರ ಜಿಲ್ಲಾ ಹಾಲು ಉತ್ಪಾದಕರಿಗೆ ಕೋಮುಲ್ ಯುಗಾದಿ ಹಬ್ಬಕ್ಕೆ ಭರ್ಜರಿ ಕೊಡುಗೆ ನೀಡಿದೆ. ಈ ಬಗ್ಗೆ ಕೋಲಾರ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಕೆ.ವೈ.ನಂಜೇಗೌಡ ಮಾಹಿತಿ ನೀಡಿದ್ದಾರೆ.
- Rajendra Simha BL
- Updated on: Mar 17, 2026
- 3:16 pm
ಬೆಂಗಳೂರಿನಲ್ಲಿ ಪಬ್ಗಳಿಗೂ ಸಿಲಿಂಡರ್ ಸಮಸ್ಯೆ: ಕೋಲಾರದಲ್ಲಿ ಹೋಟೆಲ್ ಗ್ರಾಹಕರಿಗೆ ಕಲ್ಯಾಣ ಮಂಟಪದ ಊಟ!
ಕರ್ನಾಟಕದಲ್ಲಿ ವಾಣಿಜ್ಯ LPG ಸಿಲಿಂಡರ್ಗಳ ತೀವ್ರ ಕೊರತೆ ಎದುರಾಗಿದೆ. ಎಂಟು ದಿನಗಳಿಂದ ಬಗೆಹರಿಯದ ಈ ಸಮಸ್ಯೆ ಬೆಂಗಳೂರಿನ ಪಬ್ಗಳಲ್ಲೂ ತಾಂಡವವಾಡಿದ್ದು, ಫೈರ್ಲೆಸ್ ಅಡುಗೆಗೆ ಮುಂದಾಗಿವೆ. ಕೋಲಾರದ ಹೋಟೆಲ್ಗಳೂ ಸೌದೆ ಒಲೆ, ಇದ್ದಿಲು ಒಲೆಗಳನ್ನು ಆಶ್ರಯಿಸಿದ್ದು, ಕೆಲವು ಹೋಟೆಲ್ಗಳು ಕಲ್ಯಾಣ ಮಂಟಪಗಳಲ್ಲಿ ಊಟ ತಯಾರಿಸುತ್ತಿವೆ.
- Rajendra Simha BL
- Updated on: Mar 17, 2026
- 2:11 pm
ಇರಾನ್-ಇಸ್ರೇಲ್ ಯುದ್ಧ ಪರಿಣಾಮ: ತರಕಾರಿ ಬೆಲೆ ದಿಢೀರ್ ಕುಸಿತ! ಯಾವ ತರಕಾರಿಗೆ ಎಷ್ಟಾಗಿದೆ ನೋಡಿ
ಇರಾನ್-ಇಸ್ರೇಲ್ ಯುದ್ಧದ ಪರಿಣಾಮವಾಗಿ ವಾಣಿಜ್ಯ ಬಳಕೆಯ ಸಿಲಿಂಡರ್ ಲಭ್ಯತೆ ಕುಸಿದಿದ್ದು, ಹೋಟೆಲ್ ಉದ್ಯಮಕ್ಕೆ ಭಾರಿ ನಷ್ಟವಾಗಿದೆ. ಬೆಂಗಳೂರು ಸೇರಿದಂತೆ ಹಲವೆಡೆ ಹೋಟೆಲ್ಗಳು ಮುಚ್ಚಿರುವುದರಿಂದ ತರಕಾರಿ ಬೇಡಿಕೆ ತೀವ್ರವಾಗಿ ಕುಸಿದಿದೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯಲ್ಲಿ ತರಕಾರಿ ಬೆಲೆಗಳು ದಿಢೀರ್ ಕುಸಿತ ಕಂಡಿದ್ದು, ರೈತರು ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸುತ್ತಿದ್ದಾರೆ.
- Rajendra Simha BL
- Updated on: Mar 16, 2026
- 9:29 am
ಕೋಲಾರ: ಹೋಟೆಲ್, ಬೇಕರಿಗಳಲ್ಲಿ ಅಕ್ರಮವಾಗಿ ಬಳಕೆ ಮಾಡುತ್ತಿದ್ದ 21 ಗೃಹಬಳಕೆ ಸಿಲಿಂಡರ್ ವಶಕ್ಕೆ
ಸದ್ಯ ರಾಜ್ಯದಲ್ಲಿ ಎಲ್ಲೆಡೆ ಗ್ಯಾಸ್ ಸಿಲಿಂಡರ್ ಕೊರತೆ ಉಂಟಾಗಿದೆ. ಈ ಮಧ್ಯೆ ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ ಹೋಟೆಲ್ ಹಾಗೂ ಬೇಕರಿಗಳಲ್ಲಿ ವಾಣಿಜ್ಯ ಸಿಲಿಂಡರ್ ಬದಲು ಅಕ್ರಮವಾಗಿ ಗೃಹಬಳಕೆ ಸಿಲಿಂಡರ್ಗಳನ್ನು ಬಳಸುತ್ತಿರುವುದು ಪತ್ತೆ ಆಗಿದೆ. ಸದ್ಯ 21 ಗೃಹಬಳಕೆ ಸಿಲಿಂಡರ್ಗಳನ್ನು ವಶಕ್ಕೆ ಪಡೆಯಲಾಗಿದೆ.
- Rajendra Simha BL
- Updated on: Mar 15, 2026
- 4:31 pm
ಕೆರೆಗೆ ಕಾರು ಬಿದ್ದು ರೈತ ಸಂಘದ ಜಿಲ್ಲಾಧ್ಯಕ್ಷ ಸಾವು: ತಡೆಗೋಡೆ ಇಲ್ಲದಿರುವುದೇ ಅಪಘಾತಕ್ಕೆ ಕಾರಣವಾಯ್ತಾ?
ಕೋಲಾರ ಜಿಲ್ಲೆಯ ರೈತ ಸಂಘದ ಅಧ್ಯಕ್ಷ ಹಾಗೂ ಸಿಪಿಎಂ ಮುಖಂಡ ಮುದುವಾಡಿ ಕೆರೆಗೆ ಕಾರು ಬಿದ್ದು ದುರಂತ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ರೈತ ಸಂಘದ ರಾಜ್ಯ ಸಮ್ಮೇಳನದ ಸಿದ್ಧತೆ ಮುಗಿಸಿ ವಾಪಸ್ಸಾಗುವಾಗ ಅವಘಡ ಸಂಭವಿದೆ. ಕೆರೆಗೆ ತಡೆಗೋಡೆ ಇಲ್ಲದಿರುವುದು ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ.
- Rajendra Simha BL
- Updated on: Mar 8, 2026
- 3:34 pm
UPSC result 2025: ಕೋಲಾರದ ರೈತನ ಮಗ ಯುಪಿಎಸ್ಸಿ ಪಾಸ್ ಮಾಡಿದ್ದು ಹೇಗೆ ಗೊತ್ತಾ?
ಯುಪಿಎಸ್ಸಿ 2026ರ ಫಲಿತಾಂಶ ಪ್ರಕಟವಾಗಿದ್ದು, ಕೋಲಾರ ಜಿಲ್ಲೆಯ ಅಣ್ಣಿನಹಳ್ಳಿಯ ರೈತನ ಮಗ ಸಾಗರ್ 641ನೇ ಅಖಿಲ ಭಾರತ ರ್ಯಾಂಕ್ ಪಡೆದು ಗಮನ ಸೆಳೆದಿದ್ದಾರೆ. ರಾಜ್ಯದಿಂದ 22ಕ್ಕೂ ಹೆಚ್ಚು ಅಭ್ಯರ್ಥಿಗಳು ಈ ಬಾರಿ ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಐಎಎಸ್ ಮತ್ತು ಐಪಿಎಸ್ ಶ್ರೇಣಿಗಳಿಗೆ ಆಯ್ಕೆಯಾಗುತ್ತಿದ್ದಾರೆ. ಸಾಗರ್ ಎ. ಅವರು ತಮ್ಮ ಸಾಧನೆಯನ್ನು ಟಿವಿ9 ಜೊತೆ ಹಂಚಿಕೊಂಡಿದ್ದಾರೆ.
- Rajendra Simha BL
- Updated on: Mar 7, 2026
- 12:09 pm
ಅಂದಿನ ಗೊರಜು ಭೂಮಿಗೆ ಇಂದು ಬಂಗಾರದ ಬೆಲೆ: ಏನಿದು ನೂರಾರು ಕೋಟಿ ಬೆಲೆಬಾಳುವ ಭೂಮಿಯ ಕಥೆ
ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಚೆನ್ನಿಗರಾಯಪುರ ಗ್ರಾಮದಲ್ಲಿ 250 ಕೋಟಿ ರೂ. ಬೆಲೆಬಾಳುವ 81 ಎಕರೆ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿರುವ ಆರೋಪ ಕೇಳಿಬಂದಿದೆ. 44 ವರ್ಷಗಳ ಹಿಂದೆ ಕೃಷಿಗೆ ಯೋಗ್ಯವಲ್ಲ ಎಂದು ತಿರಸ್ಕರಿಸಿದ್ದ ಭೂಮಿ ಇಂದು ಬಂಗಾರದ ಬೆಲೆ ಪಡೆದಿದೆ. ಅಧಿಕಾರಿಗಳು ಹಾಗೂ ಪ್ರಭಾವಿಗಳ ಶಾಮೀಲಾಗಿದ್ದಾರೆ ಎನ್ನಲಾಗಿದ್ದು, ಜಿಲ್ಲಾ ಸಚಿವರು ತನಿಖೆಗೆ ಆದೇಶಿಸಿದ್ದಾರೆ.
- Rajendra Simha BL
- Updated on: Mar 6, 2026
- 7:51 pm
ಬೈಕ್ಗೆ ಕಾರು ಡಿಕ್ಕಿ ಹೊಡೆದು ಬಳಿಕ ಡಿವೈಡರ್ಗೆ ಗುದ್ದಿ ಪಲ್ಟಿ: ಓರ್ವ ವ್ಯಕ್ತಿ ಸಾವು
ಶ್ರೀನಿವಾಸಪುರ ತಾಲೂಕಿನ ಹಕ್ಕಿಪಿಕ್ಕಿ ಕಾಲೋನಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಅತಿ ವೇಗದ ಕಾರು ಬೈಕ್ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ದುರ್ಘಟನೆಯಲ್ಲಿ ಕಾರಿನಲ್ಲಿದ್ದ ಆಂಧ್ರಪ್ರದೇಶ ಮೂಲದ ಬಶೀರ್ (40) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಬೈಕ್ ಸವಾರರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ರಾಯಲ್ಪಾಡು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
- Rajendra Simha BL
- Updated on: Mar 4, 2026
- 9:42 pm
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ SP
ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಇಬ್ಬರು ಮಕ್ಕಳೊಂದಿಗೆ ತಾಯಿ ನೀರಿನ ಸಂಪಿಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ್ದು, ಅದೃಷ್ಟವಶಾತ್ ತಾಯಿಯನ್ನು ಸ್ಥಳೀಯರೊಬ್ಬರು ರಕ್ಷಣೆ ಮಾಡಿದ್ದಾರೆ. ಆದ್ರೆ, ದುರದೃಷ್ಟವಶಾತ್ ಎರಡು ಅವಳಿ ಕಂದಮ್ಮಗಳು ಸಾವನ್ನಪ್ಪಿವೆ. ಈ ದಾರುಣ ಘಟನೆ ಇಂದು (ಮಾರ್ಚ್ 02) ಕೋಲಾರದಲ್ಲಿ ನಡೆದಿದೆ. ಕೌಟುಂಬಿಕ ಕಲಹದಿಂದ ಬೇಸತ್ತ ಗೃಹಿಣಿಯೊಬ್ಬಳು ತನ್ನ ಇಬ್ಬರು ಅವಳಿ ಗಂಡುಮಕ್ಕಳೊಂದಿಗೆ ಪ್ರಸಿದ್ದ ಹೈದರಾಲಿಯ ಜನ್ಮ ಸ್ಥಳ ಬೂದಿಕೋಟಿಯ ಹೈದರಾಲಿ ಕೋಟೆಗೆ ಬಂದು ಅಲ್ಲಿರುವಂತಹ ಸಂಪಿನಲ್ಲಿ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಅದೃಷ್ಟವಶಾತ್ ಅಲ್ಲಿದ್ದ ಪ್ರವಾಸಿ ಮಿತ್ರ ಸಿಬ್ಬಂದಿ ಅನುಮಾನ ಬಂದು ನೋಡಿದ್ದಾರೆ, ಅಷ್ಟೊತ್ತಿಗಾಗಲೇ ಆಕೆ ತನ್ನಿಬ್ಬರು ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ಸಾಯಿಸಿದ್ದಳು. ನಂತರ ತಾನೂ ಕೂಡಾ ನೀರಿನಲ್ಲಿ ಮುಳುಗಿ ಆತ್ಮಹತ್ಯಗೆ ಪ್ರಯತ್ನಿಸುತ್ತಿದ್ದ ವೇಳೆ ಪ್ರವಾಸಿ ಮಿತ್ರ ಶ್ರೀನಿವಾಸ್ ಆಕೆಯನ್ನು ರಕ್ಷಣೆ ಮಾಡಿದ್ದಾರೆ. ಇನ್ನು ಮೃತ ಮಕ್ಕಳು ಹಾಗೂ ಮಹಿಳೆಯನ್ನು ಕೋಡಗುರ್ಕಿ ಗ್ರಾಮದ ಉಷಾ(28) ಹಾಗೂ ಮೂರು ವರ್ಷದ ಮಕ್ಕಳಾದ ಹರ್ಷಿತ್ ಮತ್ತು ಹಿತೇಶ್ ಎಂದು ತಿಳಿದುಬಂದಿದೆ.
- Rajendra Simha BL
- Updated on: Mar 2, 2026
- 9:10 pm
ಅವಳಿ ಮಕ್ಕಳ ಜೊತೆ ಬಾವಿಗೆ ಹಾರಿದ ತಾಯಿ: ಮಹಿಳೆಯ ರಕ್ಷಣೆ, ಪುಣಾಣಿಗಳು ಸಾವು
ಆ ಅವಳಿ ಮಕ್ಕಳಿನ್ನೂ ಸರಿಯಾಗಿ ಪ್ರಪಂಚವನ್ನೇ ನೋಡಿರಲಿಲ್ಲ. ಅಷ್ಟರಲ್ಲಾಗಲೇ ಹೆತ್ತ ತಾಯಿಯ ದುಡುಕಿನ ನಿರ್ಧಾರ ಕಂದಮ್ಮಗಳನ್ನು ಬಲಿ ಪಡೆದಿದೆ. ಕೌಟುಂಬಿಕ ಕಲಹಕ್ಕೆ ಬೇಸತ್ತ ತಾಯಿ ಮಕ್ಕಳ ಜೊತೆ ಬಾವಿಗೆ ಹಾರಿದ್ದು, ಆಕೆಯ ರಕ್ಷಣೆ ಮಾಡಲಾಗಿದ್ದರೆ ಏನೂ ಅರಿಯದ ಪುಟಾಣಿಗಳ ಜೀವ ಹೋಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಘಟನೆ ನಡೆದಿದ್ದೆಲ್ಲಿ ಎಂಬಿತ್ಯಾದಿ ಮಾಹಿತಿಗಳು ಇಲ್ಲಿವೆ.
- Rajendra Simha BL
- Updated on: Mar 2, 2026
- 2:12 pm