ಪತ್ರಿಕೋದ್ಯಮಕ್ಕೆ ಕಾಲಿಟ್ಟು ಏಳು ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.
ಶನಿವಾರವರೇ ನಡೆಯಿತು ಎಲಿಮಿನೇಷನ್; ಪ್ರಮುಖ ಸ್ಪರ್ಧಿಯೇ ಔಟ್
Bigg Boss Kannada 12 Elimination: ಬಿಗ್ ಬಾಸ್ ಕನ್ನಡ 12ರಲ್ಲಿ ಈ ವಾರ ಸುದೀಪ್ ಅನುಪಸ್ಥಿತಿಯಲ್ಲಿ ಶನಿವಾರವೇ ಅನಿರೀಕ್ಷಿತ ಎಲಿಮಿನೇಷನ್ ನಡೆದಿದೆ. ಮನೆಯವರಿಗೆ ಶಾಕ್ ನೀಡಿ ಒಬ್ಬರನ್ನು ಹೊರಹಾಕಲಾಗಿದೆ. ಡಬಲ್ ಎಲಿಮಿನೇಷನ್ ಭಾನುವಾರ ನಡೆಯುತ್ತದೆ ಎಂದು ನಿರೀಕ್ಷಿಸಲಾಗಿತ್ತು, ಆದರೆ ಮೊದಲೇ ಒಬ್ಬರು ಔಟ್ ಆಗಿರುವುದು ಕುತೂಹಲ ಮೂಡಿಸಿದೆ.
- Rajesh Duggumane
- Updated on: Dec 28, 2025
- 7:14 am
ಬಿಗ್ ಬಾಸ್ ಆದೇಶಕ್ಕೆ ನಲುಗಿ ಹೋದ ಗಿಲ್ಲಿ ನಟ; ಇದಕ್ಕೆ ಕಾರಣ ರಘು-ಸೂರಜ್?
ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಗಿಲ್ಲಿ ನಟರು ತಾವು ಈ ವಾರ ಕ್ಯಾಪ್ಟನ್ ಎಂದು ಭಾವಿಸಿದ್ದರು. ಫ್ಯಾಮಿಲಿ ವೀಕ್ನಲ್ಲಿ ಅವರಿಗೆ ಹೆಚ್ಚು ವೋಟ್ ಬಿದ್ದಿದ್ದವು. ಆದರೆ, ಬಿಗ್ ಬಾಸ್ ಅನಿರೀಕ್ಷಿತ ಟ್ವಿಸ್ಟ್ ನೀಡಿದ್ದು, ಗಿಲ್ಲಿಗೆ ಮತ್ತೊಬ್ಬ ಸ್ಪರ್ಧಿಯೊಂದಿಗೆ ಟಾಸ್ಕ್ ಆಡಿ ಕ್ಯಾಪ್ಟನ್ ಆಗುವ ಸವಾಲು ಎದುರಾಯಿತು. ಅಂತಿಮವಾಗಿ ಗಿಲ್ಲಿ ಟಾಸ್ಕ್ ಗೆದ್ದು ಕ್ಯಾಪ್ಟನ್ ಆದರು.
- Rajesh Duggumane
- Updated on: Dec 27, 2025
- 9:42 pm
‘ಅಕ್ಷಯ್ ಖನ್ನಾಗೆ ಯಶಸ್ಸು ತಲೆಗೇರಿದೆ’; ದೊಡ್ಡ ನಿರ್ಧಾರ ತೆಗೆದುಕೊಂಡ ನಿರ್ಮಾಪಕ
ಸಂಭಾವನೆ ವಿವಾದ ಮತ್ತು ವಿಗ್ ಹಠದಿಂದ ಅಕ್ಷಯ್ ಖನ್ನಾ 'ದೃಶ್ಯಂ 3' ಚಿತ್ರದಿಂದ ಹೊರನಡೆದಿದ್ದಾರೆ. ನಿರ್ಮಾಪಕ ಕುಮಾರ್ ಮಂಗತ್, ಅಕ್ಷಯ್ ಅವರ ವೃತ್ತಿಪರತೆ ಇಲ್ಲದ ನಡವಳಿಕೆ ಮತ್ತು ಯಶಸ್ಸು ತಲೆಗೇರಿದ್ದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬದಲಾವಣೆಯಿಂದಾಗಿ, ನಿರ್ಮಾಪಕರು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಈ ನಿರ್ಧಾರ ಅಭಿಮಾನಿಗಳಿಗೆ ಆಶ್ಚರ್ಯ ತಂದಿದೆ.
- Rajesh Duggumane
- Updated on: Dec 27, 2025
- 8:29 pm
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ? ಉತ್ತರಿಸಿದ ಹೀರೋ
ಕಿಚ್ಚ ಸುದೀಪ್ ಅವರನ್ನು ಅನೇಕರು ಹತ್ತಿರದಿಂದ ನೋಡಿರುತ್ತಾರೆ. ಅವರೆಲ್ಲರಿಗೂ ಸುದೀಪ್ ಉತ್ತರ ಕೊಟ್ಟಿದ್ದಾರೆ. ಈಗ ಅವರನ್ನು ಹತ್ತಿರದಿಂದ ನೋಡಿದವರು ಸಾಕಷ್ಟು ವಿಷಯಗಳನ್ನು ಹೇಳಿದ್ದಾರೆ. ತಮಿಳು ನಟ ನವೀನ್ ಅವರು ಈ ಬಗ್ಗೆ ಮಾತನಾಡಿದ್ದಾರೆ. ಸುದೀಪ್ ಅವರು ಹತ್ತಿರದಿಂದ ನೋಡಿದಾಗ ಹೇಗೆ ಕಾಣುತ್ತಾರೆ ಎಂಬುದನ್ನು ಹೇಳಿದ್ದಾರೆ.
- Rajesh Duggumane
- Updated on: Dec 27, 2025
- 7:16 pm
ಥಿಯೇಟರ್ ಕಾಲ್ತುಳಿತ ಪ್ರಕರಣದಲ್ಲಿ ಚಾರ್ಜ್ಶೀಟ್ ಸಲ್ಲಿಕೆ; ಅಲ್ಲು ಅರ್ಜುನ್ ಎಷ್ಟನೇ ಆರೋಪಿ?
ಪುಷ್ಪ 2 ಸಿನಿಮಾ ಪ್ರದರ್ಶನದ ವೇಳೆ ಹೈದರಾಬಾದ್ನಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಒಂದು ವರ್ಷದ ಬಳಿಕ ಚಾರ್ಜ್ಶೀಟ್ ಸಲ್ಲಿಕೆಯಾಗಿದೆ. ಅಲ್ಲು ಅರ್ಜುನ್ ಅವರನ್ನು A11 ಆರೋಪಿ ಎಂದು ಹೆಸರಿಸಲಾಗಿದೆ. ಸಂಧ್ಯಾ ಥಿಯೇಟರ್ ಮ್ಯಾನೇಜ್ಮೆಂಟ್ ಪ್ರಮುಖ ಆರೋಪಿಯಾಗಿದೆ. ಈ ದುರ್ಘಟನೆಯಲ್ಲಿ ಒಬ್ಬ ಮಹಿಳೆ ಮೃತಪಟ್ಟು, ಅವರ ಮಗ ಗಾಯಗೊಂಡಿದ್ದರು. ಸಂತ್ರಸ್ತರ ಕುಟುಂಬಕ್ಕೆ ಪರಿಹಾರ ನೀಡಲಾಗಿದೆ.
- Rajesh Duggumane
- Updated on: Dec 27, 2025
- 6:47 pm
‘ಟಾಕ್ಸಿಕ್’ಗೆ ಹೆದರಿ ಸಂಪ್ರದಾಯ ಮುರಿದ ನಟ ಸಲ್ಮಾನ್ ಖಾನ್; ಇದು ಯಶ್ ಪವರ್
ಸಲ್ಮಾನ್ ಖಾನ್ ಯಶ್ ಅವರ ‘ಟಾಕ್ಸಿಕ್’ ಸಿನಿಮಾಗೆ ಹೆದರಿ ತಮ್ಮ ಈದ್ ಬಿಡುಗಡೆ ಸಂಪ್ರದಾಯ ಮುರಿದಿದ್ದಾರೆ. ಈ ಹಿಂದೆ ಯಶ್ ‘ಕೆಜಿಎಫ್’ ಚಿತ್ರಗಳು ಬಾಕ್ಸ್ ಆಫೀಸ್ನಲ್ಲಿ ದೊಡ್ಡ ಹೆಸರು ಮಾಡಿದ್ದವು. ಮಾರ್ಚ್ 19ರಂದು ‘ಟಾಕ್ಸಿಕ್’ ಜೊತೆಗೆ ‘ಧುರಂಧರ್ 2’ ಸಹ ತೆರೆಗೆ ಬರಲಿದ್ದು, ದೊಡ್ಡ ಕ್ಲಾಶ್ ನಿರೀಕ್ಷಿಸಲಾಗಿದೆ. ಸಲ್ಮಾನ್ ತಮ್ಮ ‘ಗಲ್ವಾನ್’ ಚಿತ್ರವನ್ನು ಏಪ್ರಿಲ್ 17ಕ್ಕೆ ಮುಂದೂಡಿದ್ದಾರೆ.
- Rajesh Duggumane
- Updated on: Dec 27, 2025
- 5:44 pm
‘ಮಾರ್ಕ್’ ಚಿತ್ರದ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸಿಕ್ತು ಸ್ಪಷ್ಟನೆ
‘ಮಾರ್ಕ್’ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇತ್ತು. ಆ ನಿರೀಕ್ಷೆಯನ್ನು ಮೀರಿ ಸಿನಿಮಾ ಗೆಲುವು ಕಾಣುತ್ತಿದೆ. ಈ ಚಿತ್ರದ ಸಕ್ಸಸ್ ಮೀಟ್ನ ಆಯೋಜನೆ ಮಾಡಲಾಗಿತ್ತು. ಈ ವೇಳೆ ಸುದೀಪ್ ಅವರು ಒಂದಷ್ಟು ವಿಷಯಗಳನ್ನು ಹಂಚಿಕೊಂಡಿದ್ದಾರೆ. ಕಲೆಕ್ಷನ್ ಬಗ್ಗೆಯೂ ಅವರು ಮಾಹಿತಿ ನೀಡಿದ್ದಾರೆ.
- Rajesh Duggumane
- Updated on: Dec 27, 2025
- 4:26 pm
‘45’ ಚಿತ್ರದ ಬಗ್ಗೆ ಅಪಪ್ರಚಾರ ಮಾಡುವವರಿಗೆ ಕಾನೂನು ಕ್ರಮದ ಎಚ್ಚರಿಕೆ
ಶಿವರಾಜ್ಕುಮಾರ್, ರಾಜ್ ಬಿ. ಶೆಟ್ಟಿ ಅಭಿನಯದ '45' ಸಿನಿಮಾ ವಿರುದ್ಧದ ನೆಗೆಟಿವ್ ಪ್ರಚಾರಕ್ಕೆ ಚಿತ್ರತಂಡ ಗಂಭೀರ ಎಚ್ಚರಿಕೆ ನೀಡಿದೆ. ಬೆಂಗಳೂರಿನ ನ್ಯಾಯಾಲಯವು ಮಧ್ಯಂತರ ಆದೇಶ ಹೊರಡಿಸಿದ್ದು, ಚಿತ್ರಕ್ಕೆ ಹಾನಿಯುಂಟು ಮಾಡುವ ಅವಹೇಳನಕಾರಿ ವಿಷಯಗಳನ್ನು ಹರಡುವುದನ್ನು ನಿರ್ಬಂಧಿಸಿದೆ. ನ್ಯಾಯಾಲಯದ ಆದೇಶ ಉಲ್ಲಂಘಿಸುವವರ ವಿರುದ್ಧ ಎಫ್ಐಆರ್ ದಾಖಲಿಸಿ ಬಂಧನ ಸೇರಿದಂತೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು '45' ತಂಡ ಸ್ಪಷ್ಟಪಡಿಸಿದೆ.
- Rajesh Duggumane
- Updated on: Dec 27, 2025
- 3:48 pm
ನಮ್ಮವರು ಬೇರೆ ಭಾಷೆಗೆ ಹೋಗ್ತಾರೆ, ಆದ್ರೆ ಪರಭಾಷೆಯವರು ಬರಲ್ಲ; ಸುದೀಪ್ ಬೇಸರ
Kichcha Sudeep: ಸದ್ಯ ಸುದೀಪ್ ಹೇಳಿದ ಮಾತನ್ನು ಅನೇಕರು ಬೆಂಬಲಿಸಿದ್ದಾರೆ. ಸಂಜಯ್ ದತ್ ಸೇರಿದಂತೆ ಅನೇಕ ಕಲಾವಿದರು ದೊಡ್ಡ ದೊಡ್ಡ ಬಜೆಟ್ ಸಿನಿಮಾಗಳಲ್ಲಿ ವಿಲನ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದನ್ನು ಹೊರತುಪಡಿಸಿದರೆ ಯಾರೊಬ್ಬರೂ ನಮ್ಮ ಸಿನಿಮಾಗಳಲ್ಲಿ ಅತಿಥಿ ಪಾತ್ರ ಮಾಡುತ್ತಿಲ್ಲ ಎಂಬುದು ಬೇಸರದ ವಿಷಯ.
- Rajesh Duggumane
- Updated on: Dec 27, 2025
- 9:33 am
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ಆರಂಭದಲ್ಲೇ ನಿಯಮ ಮುರಿದಿದ್ದಕ್ಕೆ ಬಿಗ್ ಬಾಸ್ ಎಚ್ಚರಿಕೆ
ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಗಿಲ್ಲಿ ನಟ ಅವರು ಕ್ಯಾಪ್ಟನ್ ಆಗಿದ್ದಾರೆ. ಅದು ಕೂಡ ಟಾಸ್ಕ್ ಆಡಿ ಎಂಬುದು ವಿಶೇಷ. ಗಿಲ್ಲಿ ನಟ ಅವರು ಇಷ್ಟು ದಿನ ಕ್ಯಾಪ್ಟನ್ ಆಗಿಲ್ಲ ಎಂಬ ಬೇಸರ ಇತ್ತು. ಈ ಬೇಸರ ಪೂರ್ಣಗೊಳ್ಳುವ ಸಮಯ ಬಂದಿದೆ. ಅವರು ಕ್ಯಾಪ್ಟನ್ ಆಗಿ ಕಾಣಿಸಿಕೊಂಡಿದ್ದಾರೆ ಎಂಬುದು ವಿಶೇಷ.
- Rajesh Duggumane
- Updated on: Dec 27, 2025
- 9:03 am
‘ಕೆಡಿ’ ರಿಲೀಸ್ ದಿನಾಂಕ ಘೋಷಣೆ ಮಾಡಿದ ಪ್ರೇಮ್? ಯಾರ ಜೊತೆ ಕ್ಲ್ಯಾಶ್?
ಜೋಗಿ ಪ್ರೇಮ್ ನಿರ್ದೇಶನದ 'ಕೆಡಿ' ಸಿನಿಮಾದ ಬಿಡುಗಡೆ ದಿನಾಂಕ ಪ್ರಕಟವಾಗಿದೆ. 2026ರ ಏಪ್ರಿಲ್ನಲ್ಲಿ ಈ ಚಿತ್ರ ತೆರೆ ಕಾಣಲಿದೆ. 'ಅಣ್ತಮ್ಮ ಜೋಡೆತ್ತು ಕಣೋ' ಎಂಬ ಹೊಸ ಹಾಡನ್ನು ಸಹ ಬಿಡುಗಡೆ ಮಾಡಲಾಗಿದ್ದು, ಇದು ಧ್ರುವ, ರಮೇಶ್ ಅರವಿಂದ್, ಸಂಜಯ್ ದತ್ ಅವರ ರೆಟ್ರೋ ಲುಕ್ನಲ್ಲಿ ಸ್ನೇಹದ ಕುರಿತು ಮೂಡಿಬಂದಿದೆ.
- Rajesh Duggumane
- Updated on: Dec 26, 2025
- 3:01 pm
ಕ್ರಿಸ್ಮಸ್ ದಿನ ಆಪ್ತರನ್ನು ಕರೆದು ಪಾರ್ಟಿ ಕೊಟ್ಟ ಮೇಘನಾ ರಾಜ್
ನಟಿ ಮೇಘನಾ ರಾಜ್ ಅವರು ಪ್ರತಿ ವರ್ಷ ಕ್ರಿಸ್ಮಸ್ ಹಬ್ಬವನ್ನು ಅದ್ದೂರಿಯಾಗಿ ಆಚರಿಸುತ್ತಾರೆ. ಈ ವರ್ಷವೂ ಆ ಸಂಪ್ರದಾಯವನ್ನು ಮುಂದುವರಿಸಿಕೊಂಡು ಹೋಗಿದ್ದಾರೆ. ಅವರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಗಮನ ಸೆಳೆದಿವೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ನಾನಾ ರೀತಿಯ ಕಮೆಂಟ್ಗಳು ಬಂದಿವೆ. ಎಲ್ಲರೂ ಮೇಘನಾಗೆ ವಿಶ್ ಮಾಡಿದ್ದಾರೆ.
- Rajesh Duggumane
- Updated on: Dec 26, 2025
- 1:24 pm