ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.
ದಕ್ಷಿಣದ ಇಬ್ಬರೂ ಸೂಪರ್ ಸ್ಟಾರ್ಗಳು ಒಂದೇ ಸಿನಿಮಾದಲ್ಲಿ; ನಡೆದಿದೆ ದೊಡ್ಡ ಯೋಜನೆ
‘ಸರಿಪೋದಾ ಶನಿವಾರಂ’ ಚಿತ್ರದ ಯಶಸ್ಸಿನ ಬಳಿಕ ವಿವೇಕ್ ಆತ್ರೇಯ ಅವರು ಬಾಲಕೃಷ್ಣ ಅವರಿಗಾಗಿ ಔಟ್ ಅಂಡ್ ಔಟ್ ಮಾಸ್ ಎಂಟರ್ಟೈನರ್ ಕಥೆಯೊಂದನ್ನು ಸಿದ್ಧಪಡಿಸುತ್ತಿದ್ದಾರೆ. ಆರಂಭದಲ್ಲಿ ಈ ಚಿತ್ರದಲ್ಲಿ ಬಾಲಯ್ಯ ದ್ವಿಪಾತ್ರದಲ್ಲಿ ನಟಿಸಲಿದ್ದಾರೆ ಎನ್ನಲಾಗಿತ್ತು. ಆದರೆ, ಕಥೆಯ ಮತ್ತೊಂದು ಪ್ರಮುಖ ಪಾತ್ರಕ್ಕೆ ಅಷ್ಟೇ ತೂಕವಿರುವ ಬೇರೆ ನಟರೊಬ್ಬರನ್ನು ಹಾಕಿಕೊಳ್ಳಲು ನಿರ್ದೇಶಕರು ನಿರ್ಧರಿಸಿದ್ದಾರೆ.
- Rajesh Duggumane
- Updated on: May 23, 2026
- 3:15 pm
ಕಾನ್ ಸಿನಿಮೋತ್ಸವದಲ್ಲಿ ಫ್ಲೈಯಿಂಗ್ ಕಿಸ್ ಕೊಟ್ಟ ಐಶ್ವರ್ಯಾ ರೈ
ವಿಶ್ವಪ್ರಸಿದ್ಧ ಕಾನ್ ಚಿತ್ರೋತ್ಸವದ ರೆಡ್ ಕಾರ್ಪೆಟ್ ಮೇಲೆ ಬಾಲಿವುಡ್ ನಟಿ ಐಶ್ವರ್ಯಾ ರೈ ನೀಲಿ ಬಣ್ಣದ ಆಕರ್ಷಕ ಉಡುಪಿನಲ್ಲಿ ಮಿನುಗಿದ್ದಾರೆ. ಈ ವೇಳೆ ನೆರೆದಿದ್ದ ಕ್ಯಾಮೆರಾಗಳಿಗೆ ಪೋಸ್ ನೀಡುತ್ತಾ, ಅಭಿಮಾನಿಗಳಿಗೆ ತಮ್ಮದೇ ಸಿಗ್ನೇಚರ್ ಶೈಲಿಯಲ್ಲಿ ಫ್ಲೈಯಿಂಗ್ ಕಿಸ್ ನೀಡಿ ಎಲ್ಲರ ಗಮನ ಸೆಳೆದಿದ್ದಾರೆ.
- Rajesh Duggumane
- Updated on: May 23, 2026
- 1:48 pm
ತನಿಷಾ ಕುಪ್ಪಂಡ ಜೊತೆ ಅಸಭ್ಯವಾಗಿ ವರ್ತಿಸಿದ ಫೋಟೋಗ್ರಾಫರ್; ನಟಿಯ ನೇರ ಕ್ಲಾಸ್
Tanisha Kuppanda: ನಟಿ ತನಿಷಾ ಕುಪ್ಪಂಡ ತಮ್ಮೊಂದಿಗೆ ಅಸಭ್ಯವಾಗಿ ವರ್ತಿಸಿದ ಫೋಟೋಗ್ರಾಫರ್ಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಮಹಿಳಾ ಕಲಾವಿದರನ್ನು ಗುರಿಯಾಗಿಸಿ ನಡೆಯುವ ಕಿರುಕುಳವನ್ನು ತೀವ್ರವಾಗಿ ಖಂಡಿಸಿದ್ದಾರೆ. ಈ ನಡೆ ಕಿಡಿಗೇಡಿಗಳಿಗೆ ಸ್ಪಷ್ಟ ಸಂದೇಶ ರವಾನಿಸಿದೆ. ನಟಿಯ ಬೆಂಬಲಕ್ಕೆ ಎಲ್ಲರೂ ನಿಂತಿದ್ದಾರೆ.
- Rajesh Duggumane
- Updated on: May 23, 2026
- 1:23 pm
ರುಕ್ಮಿಣಿ ವಸಂತ್ ಬಿಕಿನಿ ವಿಡಿಯೋಗೆ ಸಿಕ್ತು ಸ್ಪಷ್ಟನೆ; ಗರಂ ಆದ ನಟಿ
ನಟಿ ರುಕ್ಮಿಣಿ ವಸಂತ್ ಅವರ ವೈರಲ್ ಆಗಿದ್ದ ಬಿಕಿನಿ ಫೋಟೋ, ವಿಡಿಯೋಗಳು ಡೀಪ್ಫೇಕ್ ಎಂದು ಸ್ಪಷ್ಟಪಡಿಸಿದ್ದಾರೆ. ಇವು ಕೃತಕ ಬುದ್ಧಿಮತ್ತೆ ಬಳಸಿ ಸೃಷ್ಟಿಸಲಾದ ನಕಲಿ ವಿಡಿಯೋಗಳಾಗಿವೆ ಎಂದು ತಿಳಿಸಿದ್ದಾರೆ. ಕಿಡಿಗೇಡಿಗಳ ವಿರುದ್ಧ ಸೈಬರ್ ಕ್ರೈಂಗೆ ದೂರು ನೀಡಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿರುವ ಅವರು, ಸಾರ್ವಜನಿಕರು ಇಂತಹ ನಕಲಿ ವಿಡಿಯೋಗಳನ್ನು ನಂಬಬಾರದು ಮತ್ತು ಹಂಚಿಕೊಳ್ಳಬಾರದು ಎಂದು ವಿನಂತಿಸಿದ್ದಾರೆ.
- Rajesh Duggumane
- Updated on: May 23, 2026
- 12:25 pm
ಅಂದುಕೊಂಡಿದ್ದಕ್ಕಿಂತ ಮೊದಲೇ ಬರಲಿದೆ ‘ರಾಮಾಯಣ’ ಸಿನಿಮಾ; ‘ಟಾಕ್ಸಿಕ್’ ಮೇಲೆ ಒತ್ತಡ?
ರಣಬೀರ್ ಕಪೂರ್, ಯಶ್, ಸಾಯಿ ಪಲ್ಲವಿ ಅಭಿನಯದ ‘ರಾಮಾಯಣ: ಪಾರ್ಟ್ 1’ ಸಿನಿಮಾ ಅಂದುಕೊಂಡಿದ್ದಕ್ಕಿಂತ ಮೊದಲೇ ತೆರೆಗೆ ಬರಲಿದೆ. ದೀಪಾವಳಿ ರಜೆಗಳ ಮುಂಚೆ ಬಾಯ್ಮಾತಿನ ಪ್ರಚಾರ ಗಳಿಸಿ, ಎರಡನೇ ವಾರದಲ್ಲಿ ಭಾರಿ ಕಲೆಕ್ಷನ್ ಮಾಡುವ ತಂತ್ರ ಇದರ ಹಿಂದಿದೆ. ಆದರೆ, ಈ ನಿರ್ಧಾರದಿಂದ ಯಶ್ ಅವರ ಮತ್ತೊಂದು ಬಹುನಿರೀಕ್ಷಿತ 'ಟಾಕ್ಸಿಕ್' ಚಿತ್ರ ಆಗಸ್ಟ್ಗೆ ಮುನ್ನವೇ ಬಿಡುಗಡೆಯಾಗಬೇಕಾದ ಒತ್ತಡಕ್ಕೆ ಸಿಲುಕಿದೆ.
- Rajesh Duggumane
- Updated on: May 23, 2026
- 11:14 am
ಕಾನ್ ಫಿಲ್ಮ್ ಫೆಸ್ಟಿವಲ್ಗೆ ಆರಾಧ್ಯ ಬಚ್ಚನ್ ಎಂಟ್ರಿ; ಮಗಳ ಜೊತೆ ಮಿಂಚಿದ ಐಶ್ವರ್ಯಾ ರೈ
ಕಾನ್ 2026ರಲ್ಲಿ ಐಶ್ವರ್ಯಾ ರೈ ಮತ್ತು ಆರಾಧ್ಯ ಬಚ್ಚನ್ ರೆಡ್ ಕಾರ್ಪೆಟ್ ಮೇಲೆ ಐತಿಹಾಸಿಕ ಹೆಜ್ಜೆ ಇಟ್ಟಿದ್ದಾರೆ. ಪ್ರತಿ ವರ್ಷ ತಾಯಿಯೊಂದಿಗೆ ಬರುತ್ತಿದ್ದ ಆರಾಧ್ಯ, ಈ ಬಾರಿ ಅಧಿಕೃತವಾಗಿ ಕೆಂಪು ಹಾಸಿನ ಮೇಲೆ ಕಾಣಿಸಿಕೊಂಡರು. ಲೊರಿಯಲ್ ಪ್ಯಾರಿಸ್ನ ಕಾರ್ಯಕ್ರಮದಲ್ಲಿ ತಾಯಿ-ಮಗಳ ಜೋಡಿ ಎಲ್ಲರ ಗಮನ ಸೆಳೆಯಿತು.
- Rajesh Duggumane
- Updated on: May 23, 2026
- 10:12 am
ರಾಯರ ಬಗ್ಗೆ ಆಲ್ಬಂ ಸಾಂಗ್ ಮಾಡಲು ಕಾರಣ ಏನು? ವಿವರಿಸಿದ ಅಜನೀಶ್
ಅಜನೀಶ್ ಲೋಕನಾಥ್ ಅವರ ಸಂಗೀತ ಸಂಯೋಜನೆಯಲ್ಲಿ ರಾಯರ ಆಲ್ಬಂ ಸಾಂಗ್ ಮೂಡಿ ಬಂದಿದೆ. ಇದರ ಟೀಸರ್ ಅನ್ನು ತಂಡ ಬಿಡುಗಡೆ ಮಾಡಿದೆ. ಈ ಬಗ್ಗೆ ಮಾತನಾಡುವಾಗ ಅಜನೀಶ್ ಅವರು ಹಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ. ಈ ಹಾಡನ್ನು ಮಾಡಲು ಕಾರಣ ಆದ ವಿಷಯ ಏನು ಎಂಬುದನ್ನು ಅವರು ಹೇಳಿದ್ದಾರೆ.
- Rajesh Duggumane
- Updated on: May 23, 2026
- 8:37 am
ಗೋಲ್ಡನ್ ಅವರ್ ಕಳೆದುಕೊಳ್ತಿದೆ ‘ಜನ ನಾಯಗನ್’ ಟೀಂ; ನಡೆಯಿತು ಮತ್ತೊಂದು ದೊಡ್ಡ ತಪ್ಪು
ಕಾಲಿವುಡ್ ಸೂಪರ್ಸ್ಟಾರ್ ದಳಪತಿ ವಿಜಯ್ ಅವರ ಕೊನೆಯ ಸಿನಿಮಾ 'ಜನ ನಾಯಗನ್' ಬಿಡುಗಡೆಗೆ ತೀವ್ರ ಅಡೆತಡೆ ಎದುರಾಗಿದೆ. ವಿಜಯ್ ಸಿಎಂ ಆದ ನಂತರ ನಿರೀಕ್ಷೆ ಹೆಚ್ಚಿದ್ದರೂ, ಸೆನ್ಸಾರ್ ಪ್ರಮಾಣಪತ್ರ ನಿರಾಕರಣೆ, ಆನ್ಲೈನ್ ಪೈರಸಿ ಮತ್ತು ಕಾನೂನು ಹೋರಾಟಗಳಿಂದ ಚಿತ್ರತಂಡ ಹೈರಾಣಾಗಿದೆ. ಸದ್ಯ ಜೂನ್ನಲ್ಲಿ ಬಿಡುಗಡೆಗೆ ಸಿದ್ಧವಾಗಿದ್ದರೂ, ವಿಳಂಬದಿಂದ ಚಿತ್ರದ ಹೈಪ್ ಕಮರುತ್ತಿದ್ದು, ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.
- Rajesh Duggumane
- Updated on: May 23, 2026
- 7:43 am
‘ದೃಶ್ಯಂ 3’ ದಾಖಲೆಯ ಕಲೆಕ್ಷನ್; 100 ಕೋಟಿ ಸನಿಹದಲ್ಲಿ ಮೋಹನ್ಲಾಲ್ ಚಿತ್ರ
ಮೋಹನ್ಲಾಲ್ ಮತ್ತು ಜೀತು ಜೋಸೆಫ್ ಅವರ 'ದೃಶ್ಯಂ 3' ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಎರಡೇ ದಿನಗಳಲ್ಲಿ ವಿಶ್ವದಾದ್ಯಂತ ಒಳ್ಳೆಯ ಗಳಿಕೆ ಮಾಡಿ, 100 ಕೋಟಿ ಕ್ಲಬ್ಗೆ ಹತ್ತಿರವಾಗಿದೆ. ಮೋಹನ್ಲಾಲ್ ಅವರ ಅದ್ಭುತ ನಟನೆ ಮತ್ತು ಜೀತು ಅವರ ಚುರುಕು ನಿರ್ದೇಶನ ಈ ಯಶಸ್ಸಿಗೆ ಕಾರಣ. ಭಾರತೀಯ ಚಿತ್ರರಂಗದಲ್ಲಿ ಹೊಸ ಅಲೆ ಎಬ್ಬಿಸಿರುವ ಈ ಚಿತ್ರ, ಮಲಯಾಳಂ ಸಿನೆಮಾದ ಹೆಮ್ಮೆಯಾಗಿದೆ.
- Rajesh Duggumane
- Updated on: May 23, 2026
- 7:08 am
ಥಿಯೇಟರ್ನಲ್ಲಿ 65ದಿನ ಪೂರೈಸಿದ ‘ಧುರಂಧರ್ 2’; ಒಟ್ಟೂ ಗಳಿಕೆ ಎಷ್ಟು?
ರಣವೀರ್ ಸಿಂಗ್ ಅವರ ‘ಧುರಂಧರ್ 2’ ಚಿತ್ರ 50 ದಿನಗಳ ಯಶಸ್ವಿ ಪ್ರದರ್ಶನ ಕಂಡಿದೆ. ಈ ಆ್ಯಕ್ಷನ್ ಎಂಟರ್ಟೈನರ್ ಜಾಗತಿಕವಾಗಿ 1,799.09 ಕೋಟಿ ರೂಪಾಯಿ ಗಳಿಸಿ ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದಿದೆ. ಪಾಕಿಸ್ತಾನ ಮತ್ತು ಸೌದಿ ದೇಶಗಳಲ್ಲಿ ನಿಷೇಧಿತವಾಗಿದ್ದರೂ, ವಿಶ್ವಾದ್ಯಂತ ಹವಾ ಸೃಷ್ಟಿಸಿದೆ. ಇದೀಗ ಜೂನ್ 4 ರಂದು ಹಾಟ್ಸ್ಟಾರ್ನಲ್ಲಿ ಇದರ OTT ಬಿಡುಗಡೆ ದಿನಾಂಕ ಅಧಿಕೃತವಾಗಿದೆ.
- Rajesh Duggumane
- Updated on: May 22, 2026
- 3:06 pm
ಸ್ಪೇನ್ನಲ್ಲಿ ಏನ್ ಮಾಡ್ತಿದ್ದಾರೆ ಆಶಿಕಾ ರಗನಾಥ್?
ಆಶಿಕಾ ರಂಗನಾಥ್ ಅವರು ಸ್ಪೇನ್ ಬೀದಿಗಳಲ್ಲಿ ಸುತ್ತಾಡಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.
- Rajesh Duggumane
- Updated on: May 22, 2026
- 1:32 pm
ಜೀ ಕನ್ನಡದಲ್ಲಿ ಪ್ರಸಾರ ಕಾಣಲಿದೆ ‘ಲ್ಯಾಂಡ್ ಲಾರ್ಡ್’ ಸಿನಿಮಾ; ಇಲ್ಲಿದೆ ವಿವರ
ಜೀ ಕನ್ನಡದಲ್ಲಿ ಕನ್ನಡದ ಬ್ಲಾಕ್ಬಸ್ಟರ್ ಸಿನಿಮಾ ‘ಲ್ಯಾಂಡ್ ಲಾರ್ಡ್’ ಮೇ 23ರಂದು ಸಂಜೆ 4 ಗಂಟೆಗೆ ಪ್ರಸಾರವಾಗಲಿದೆ. ದುನಿಯಾ ವಿಜಯ್, ರಚಿತಾ ರಾಮ್ ಮತ್ತು ರಾಜ್ ಬಿ. ಶೆಟ್ಟಿ ನಟನೆಯ ಈ ಚಿತ್ರ, ಸಾಮಾಜಿಕ ಅಸಮಾನತೆ ಮತ್ತು ದಬ್ಬಾಳಿಕೆಯ ವಿರುದ್ಧ ಹೋರಾಡುವ ಕಥೆಯನ್ನು ಹೊಂದಿದೆ. ಕುಟುಂಬ ಸಮೇತ ನೋಡಬಹುದಾದ ಈ ಸಿನಿಮಾ, ನ್ಯಾಯಕ್ಕಾಗಿ ಸಾಮಾನ್ಯ ಜನರು ಹೇಗೆ ಧ್ವನಿ ಎತ್ತುತ್ತಾರೆ ಎಂಬುದನ್ನು ತೋರಿಸುತ್ತದೆ.
- Rajesh Duggumane
- Updated on: May 22, 2026
- 4:07 pm