AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ್​, ಮೈಸೂರು

ರಾಮ್​, ಮೈಸೂರು

ಹಿರಿಯ ಜಿಲ್ಲಾ ವರದಿಗಾರ - TV9 Kannada

ram.puttaswamy@tv9.com

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ದಸರಾ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಗಜಪಡೆಗೆ ಇಸಿಜಿ ಟೆಸ್ಟ್! ಆನೆಗಳ ಆಯ್ಕೆ ಪ್ರಕ್ರಿಯೆ ಶುರು

ದಸರಾ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಗಜಪಡೆಗೆ ಇಸಿಜಿ ಟೆಸ್ಟ್! ಆನೆಗಳ ಆಯ್ಕೆ ಪ್ರಕ್ರಿಯೆ ಶುರು

Mysuru Dasara 2026: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ರ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯು ಗಜಪಡೆಯ ಆಯ್ಕೆ ಪ್ರಕ್ರಿಯೆಯನ್ನು ಆರಂಭಿಸಿದೆ. ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ದಸರಾ ಆನೆಗಳ ಹೃದಯದ ಆರೋಗ್ಯ ತಪಾಸಣೆಗಾಗಿ ಇಸಿಜಿ (ECG) ಪರೀಕ್ಷೆ ಹಾಗೂ ಹೆಣ್ಣಾನೆಗಳಿಗೆ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ನಡೆಸಲಾಗುತ್ತಿರುವುದು ಈ ಬಾರಿಯ ವಿಶೇಷವಾಗಿದೆ.

  • Ram
  • Updated on: Jul 7, 2026
  • 11:45 am
ಸನ್ನಡತೆ ಆಧಾರದ ಮೇಲೆ ಪರಪ್ಪನ ಅಗ್ರಹಾರದಿಂದ 24 ಜೀವಾವಧಿ ಖೈದಿಗಳಿಗೆ ಅವಧಿ ಪೂರ್ವ ಬಿಡುಗಡೆ ಭಾಗ್ಯ

ಸನ್ನಡತೆ ಆಧಾರದ ಮೇಲೆ ಪರಪ್ಪನ ಅಗ್ರಹಾರದಿಂದ 24 ಜೀವಾವಧಿ ಖೈದಿಗಳಿಗೆ ಅವಧಿ ಪೂರ್ವ ಬಿಡುಗಡೆ ಭಾಗ್ಯ

ರಾಜ್ಯಪಾಲರ ಆದೇಶದಂತೆ, ಸನ್ನಡತೆ ಮತ್ತು ಮನಪರಿವರ್ತನೆ ಆಧಾರದ ಮೇಲೆ ರಾಜ್ಯದ 24 ಜೀವಾವಧಿ ಖೈದಿಗಳನ್ನು ಅವಧಿ ಪೂರ್ವ ಬಿಡುಗಡೆ ಮಾಡಲಾಗಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಡುಗಡೆಯ ಆದೇಶ ಪತ್ರಗಳನ್ನು ವಿತರಿಸಿದರು. ಜೈಲಿನಿಂದ ಮುಕ್ತರಾದ ಖೈದಿಗಳು ಹೊಸ ಜೀವನ ಆರಂಭಿಸಲು ಸಿದ್ಧರಾಗಿದ್ದು, ಸಮಾಜಕ್ಕೆ ಮರಳುವ ಭರವಸೆ ಮೂಡಿದೆ.

  • Ram
  • Updated on: Jul 4, 2026
  • 4:15 pm
ಆಷಾಢ ಮಾಸದಲ್ಲಿ ಚಾಮುಂಡಿ ದರ್ಶನ: ಈ ಬಾರಿ 300 ರೂ. ಟಿಕೆಟ್ ರದ್ದು! ಭಕ್ತರು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ

ಆಷಾಢ ಮಾಸದಲ್ಲಿ ಚಾಮುಂಡಿ ದರ್ಶನ: ಈ ಬಾರಿ 300 ರೂ. ಟಿಕೆಟ್ ರದ್ದು! ಭಕ್ತರು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ

ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಜುಲೈ 17ರಿಂದ ಆರಂಭವಾಗಲಿರುವ ಆಷಾಢ ಮಾಸದ ಪೂಜಾ ಮಹೋತ್ಸವಕ್ಕೆ ಈ ಬಾರಿ ಮಹತ್ವದ ಬದಲಾವಣೆ ಮಾಡಲಾಗಿದೆ. ಸಾಮಾನ್ಯ ಭಕ್ತರ ಹಿತದೃಷ್ಟಿಯಿಂದ 300 ರೂ. ವಿಶೇಷ ದರ್ಶನ ಟಿಕೆಟ್ ಅನ್ನು ರದ್ದುಗೊಳಿಸಲಾಗಿದ್ದು, ವಿಐಪಿಗಳ ದರ್ಶನಕ್ಕೆ ಕಟ್ಟುನಿಟ್ಟಿನ ಸಮಯ ನಿಗದಿಪಡಿಸಲಾಗಿದೆ ಎಂದು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.

  • Ram
  • Updated on: Jul 1, 2026
  • 2:51 pm
ಆಷಾಢ ಮಾಸದಲ್ಲಿ ಚಾಮುಂಡಿ ಬೆಟ್ಟಕ್ಕೆ ಹೋಗುವ ಭಕ್ತರೇ ಗಮನಿಸಿ: ಈ ದಿನಗಳಂದು ಖಾಸಗಿ ವಾಹನಗಳ ಪ್ರವೇಶ ಇಲ್ಲ

ಆಷಾಢ ಮಾಸದಲ್ಲಿ ಚಾಮುಂಡಿ ಬೆಟ್ಟಕ್ಕೆ ಹೋಗುವ ಭಕ್ತರೇ ಗಮನಿಸಿ: ಈ ದಿನಗಳಂದು ಖಾಸಗಿ ವಾಹನಗಳ ಪ್ರವೇಶ ಇಲ್ಲ

ಆಷಾಢ ಶುಕ್ರವಾರ, ಶನಿವಾರ ಮತ್ತು ಭಾನುವಾರದಂದು ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶ ನಿಷೇಧಿಸಲಾಗಿದೆ. ಭಕ್ತಾದಿಗಳು ಲಲಿತ ಮಹಲ್ ಬಳಿ ವಾಹನ ನಿಲ್ಲಿಸಿ, ಅಲ್ಲಿಂದ ಕೆಎಸ್ಆರ್ಟಿಸಿ ಬಸ್‌ಗಳಲ್ಲಿ ಪ್ರಯಾಣಿಸಬೇಕು. ಭಕ್ತರ ಅನುಕೂಲಕ್ಕೆ ಮತ್ತು ವಿಐಪಿಗಳಿಂದ ಆಗುವ ತೊಂದರೆ ತಪ್ಪಿಸಲು ಈ ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.

  • Ram
  • Updated on: Jul 1, 2026
  • 1:51 pm
ಮಂಗಳವಾರದಿಂದ ರಾಜ್ಯದಲ್ಲಿ SIR ಪ್ರಕ್ರಿಯೆ ಶುರು: ಜಾಗೃತಿ ವಹಿಸದಿದ್ರೆ ಮಾರಣಹೋಮ ಎಂದ ಸಿದ್ದರಾಮಯ್ಯ

ಮಂಗಳವಾರದಿಂದ ರಾಜ್ಯದಲ್ಲಿ SIR ಪ್ರಕ್ರಿಯೆ ಶುರು: ಜಾಗೃತಿ ವಹಿಸದಿದ್ರೆ ಮಾರಣಹೋಮ ಎಂದ ಸಿದ್ದರಾಮಯ್ಯ

ಕರ್ನಾಟಕದಲ್ಲಿ ಜೂನ್ 30ರಿಂದ ಆರಂಭವಾಗುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಹಿನ್ನೆಲೆ ಕಾಂಗ್ರೆಸ್ ಎಚ್ಚರಿಕೆಯ ಹೆಜ್ಜೆ ಇಟ್ಟಿದೆ. ಬಿಜೆಪಿ ಮತದಾರರ ಪಟ್ಟಿಯಿಂದ ಬಡವರ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಲು ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಮೈಸೂರಿನಲ್ಲಿ ನಡೆದ ಜಾಗೃತಿ ಸಮಾವೇಶದಲ್ಲಿ ಸಿದ್ದರಾಮಯ್ಯ ಜಾಗೃತಿ ವಹಿಸದಿದ್ದರೆ ಮಾರಣಹೋಮ ಎಂದು ಎಚ್ಚರಿಸಿದ್ದಾರೆ.

  • Ram
  • Updated on: Jun 28, 2026
  • 11:02 pm
ಕಾಂಗ್ರೆಸ್​​ ಸೇರ್ತಾರ ಜಿ.ಟಿ. ದೇವೇಗೌಡ?: ಸ್ವತಃ ಸ್ಪಷ್ಟನೆ ಕೊಟ್ಟ ಜೆಡಿಎಸ್​​ ಶಾಸಕ

ಕಾಂಗ್ರೆಸ್​​ ಸೇರ್ತಾರ ಜಿ.ಟಿ. ದೇವೇಗೌಡ?: ಸ್ವತಃ ಸ್ಪಷ್ಟನೆ ಕೊಟ್ಟ ಜೆಡಿಎಸ್​​ ಶಾಸಕ

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಸಿಎಂ ಆಗಬೇಕೆಂದು ಮೊದಲು ಹೇಳಿದ್ದೇ ನಾನು ಎಂದು ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಮೈಸೂರಿನಲ್ಲಿ ಹೇಳಿದ್ದಾರೆ. ಕಾಂಗ್ರೆಸ್ ಸೇರುವ ವದಂತಿಗಳನ್ನು ಅಲ್ಲಗಳೆದ ಅವರು, ತಾವು ಕಳೆದ ಒಂದೂವರೆ ವರ್ಷದಿಂದ ಕುಮಾರಸ್ವಾಮಿ ಜೊತೆ ಮಾತಾಡಿಲ್ಲ ಎಂದು ಸ್ಪಷ್ಟಪಡಿಸಿದರು. ಜೆಡಿಎಸ್‌ನಲ್ಲಿ ಕುಟುಂಬ ರಾಜಕಾರಣದ ಭಿನ್ನಾಭಿಪ್ರಾಯಗಳು ಸಾಮಾನ್ಯ ಎಂದಿದ್ದಾರೆ.

  • Ram
  • Updated on: Jun 28, 2026
  • 11:04 am
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ, ಸ್ವಾಗತ ಹೇಗಿತ್ತು ನೋಡಿ

ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ, ಸ್ವಾಗತ ಹೇಗಿತ್ತು ನೋಡಿ

ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಇದೆ ಮೊದಲ ಬಾರಿಗೆ ಇಂದು (ಜೂನ್ 27) ತವರು ಜಿಲ್ಲೆ ಮೈಸೂರಿಗೆ ಭೇಟಿ ನೀಡಿದ್ದಾರೆ.ಈ ವೇಳೆಮೈಸೂರಿನ ಹೈವೇ ಸರ್ಕಲ್‌ನಲ್ಲಿ ಅಭಿಮಾನಿಗಳು ಬೃಹತ್ ಸೇಬಿನ ಹಾರದೊಂದಿಗೆ ಪಟಾಕಿ ಸಿಡಿಸಿ ಅದ್ಧೂರಿ ಸ್ವಾಗತ ಕೋರಿದ್ದಾರೆ. ಇನ್ನು ಶಾಸಕರಾದ ಸ್ವಾಗತಿಸಿದ ತನ್ವೀರ್ ಸೇಠ್, ಹರೀಶ್ ಗೌಡ ಸೇರಿ ಹಲವರು ಸಿದ್ದರಾಮಯ್ಯನವರನ್ನು ಅದ್ಧೂರಿಯಾಗಿ ಬರಮಾಡಿಕೊಂಡರು. ಇಂದು ರಾತ್ರಿ ಸಿದ್ದರಾಮಯ್ಯನವರು ಮೈಸೂರಿನಲ್ಲೇ ವಾಸ್ತವ್ಯ ಹೂಡಲಿದ್ದು, ನಾಳೆ (ಜೂನ್ 28) ನಡೆಯಲಿರುವ ಎಸ್​​ಐಆರ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

  • Ram
  • Updated on: Jun 27, 2026
  • 7:57 pm
ಸತೀಶ್ ಜಾರಕಿಹೊಳಿ ಬಾಮೈದನಿಗೆ ED ಶಾಕ್:ಮೈಸೂರಿನ ಸ್ನೇಹಿತೆಯ ನಿವಾಸದಲ್ಲೂ ಪರಿಶೀಲನೆ

ಸತೀಶ್ ಜಾರಕಿಹೊಳಿ ಬಾಮೈದನಿಗೆ ED ಶಾಕ್:ಮೈಸೂರಿನ ಸ್ನೇಹಿತೆಯ ನಿವಾಸದಲ್ಲೂ ಪರಿಶೀಲನೆ

ರಾಜ್ಯದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಅಳಿಯ, ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮಂಜುನಾಥಗೆ ಸೇರಿದ ಬೆಳಗಾವಿ, ಬೆಂಗಳೂರು ಸೇರಿದಂತೆ ಎಲ್ಲಾ ಮನೆ ಮೇಲೂ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಮೈಸೂರಿನಲ್ಲಿ ಮಂಜುನಾಥ್ ಅವರ ಸ್ನೇಹಿತಯ ಮನೆ ಮೇಲೆ ದಾಳಿಯಾಗಿದೆ.

  • Ram
  • Updated on: Jun 24, 2026
  • 3:20 pm
ಕಿರುಕುಳ ಆರೋಪ: ನಾಡಿದ್ದು ಹಸೆಮಣೆ ಏರಬೇಕಿದ್ದ ಯುವತಿ ಸೇರಿ ಹೆತ್ತವರ ದಾರುಣ ಅಂತ್ಯ

ಕಿರುಕುಳ ಆರೋಪ: ನಾಡಿದ್ದು ಹಸೆಮಣೆ ಏರಬೇಕಿದ್ದ ಯುವತಿ ಸೇರಿ ಹೆತ್ತವರ ದಾರುಣ ಅಂತ್ಯ

ಮೈಸೂರಿನ ಟಿ.ನರಸೀಪುರದಲ್ಲಿ ನಾಡಿದ್ದು ಮದುವೆಯಾಗಬೇಕಿದ್ದ ಯುವತಿ ಹಾಗೂ ಆಕೆಯ ಹೆತ್ತವರು ಅದೇ ಗ್ರಾಮದ ವ್ಯಕ್ತಿಯೋರ್ವನ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿ ದಾರುಣವಾಗಿ ಅಂತ್ಯ ಕಂಡಿದ್ದಾರೆ. ಮದುವೆ ಸಂಭ್ರಮದಲ್ಲಿರಬೇಕಿದ್ದ ಮನೆಯಲ್ಲೀಗ ಸೂತಕ ಆವರಿಸಿದ್ದು, ಕುಟುಂಬಸ್ಥರ ಆಕ್ರಂದನವೂ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ವರುಣ ಠಾಣೆಯ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • Ram
  • Updated on: Jun 22, 2026
  • 4:46 pm
ನಂಜನಗೂಡು: ಮನೆ ಮಾಲೀಕರು ಆಸ್ಪತ್ರೆಗೆ ಹೋಗಿ ಬರುವಷ್ಟರಲ್ಲಿ ಲಕ್ಷಾಂತರ ರೂ. ನಗದು, ಚಿನ್ನ ದೋಚಿದ ಖದೀಮರು

ನಂಜನಗೂಡು: ಮನೆ ಮಾಲೀಕರು ಆಸ್ಪತ್ರೆಗೆ ಹೋಗಿ ಬರುವಷ್ಟರಲ್ಲಿ ಲಕ್ಷಾಂತರ ರೂ. ನಗದು, ಚಿನ್ನ ದೋಚಿದ ಖದೀಮರು

ಮೈಸೂರು ಜಿಲ್ಲೆಯ ನಂಜನಗೂಡಿನ ಚಾಮುಂಡಿ ಬಡಾವಣೆಯಲ್ಲಿ ಮೋಹನ್ ಎಂಬುವರ ಮನೆಯಲ್ಲಿ ಭಾರಿ ಕಳ್ಳತನ ನಡೆದಿದೆ. ಮಾಲೀಕರು ಆಸ್ಪತ್ರೆಗೆ ತೆರಳಿದ್ದಾಗ, ಕಳ್ಳರು ಅಡುಗೆ ಮನೆ ಕಿಟಕಿ ಮುರಿದು ಒಳನುಗ್ಗಿದ್ದಾರೆ. ಮೇಲ್ಮಹಡಿಯ ಬೀರು ಒಡೆದು 300 ಗ್ರಾಂ ಚಿನ್ನ, 6.5 ಕೆಜಿ ಬೆಳ್ಳಿ ಹಾಗೂ ಲಕ್ಷಾಂತರ ರೂ. ನಗದು ದೋಚಿ ಪರಾರಿಯಾಗಿದ್ದಾರೆ.

  • Ram
  • Updated on: Jun 22, 2026
  • 9:13 am
ಮೈಸೂರಿನಲ್ಲಿ ಬಾಂಗ್ಲಾ ವಲಸಿಗರನ್ನು ಹಿಡಿದು ಪೊಲೀಸ್ರಿಗೆ ಒಪ್ಪಿಸಿದ ಹಿಂದೂ ಕಾರ್ಯಕರ್ತರು

ಮೈಸೂರಿನಲ್ಲಿ ಬಾಂಗ್ಲಾ ವಲಸಿಗರನ್ನು ಹಿಡಿದು ಪೊಲೀಸ್ರಿಗೆ ಒಪ್ಪಿಸಿದ ಹಿಂದೂ ಕಾರ್ಯಕರ್ತರು

ಮೈಸೂರಿಗೆ 40ಕ್ಕೂ ಅಧಿಕ ಶಂಕಿತ ಬಾಂಗ್ಲಾ ವಲಸಿಗರು ಬಂದಿರುವ ಆರೋಪ ಕೇಳಿಬಂದಿದೆ. ಪಶ್ಚಿಮ ಬಂಗಾಳದ ವಿಳಾಸವಿರುವ ನಕಲಿ ಗುರುತಿನ ಚೀಟಿಗಳೊಂದಿಗೆ ಬಂದಿದ್ದ ಇವರನ್ನು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ತಡೆದಿದ್ದಾರೆ. ತೀವ್ರ ಹೈಡ್ರಾಮಾ ಬಳಿಕ ಪೊಲೀಸರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

  • Ram
  • Updated on: Jun 21, 2026
  • 6:12 pm
ಒಂದೇ ದಿನ ಜಯದೇವ ಆಸ್ಪತ್ರೆಯಲ್ಲಿ 11 ರೋಗಿಗಳ ಸಾವು: ಆಗಿದ್ದೇನು? ಸ್ಪಷ್ಟನೆ ನೀಡಿದ ನಿರ್ದೇಶಕ

ಒಂದೇ ದಿನ ಜಯದೇವ ಆಸ್ಪತ್ರೆಯಲ್ಲಿ 11 ರೋಗಿಗಳ ಸಾವು: ಆಗಿದ್ದೇನು? ಸ್ಪಷ್ಟನೆ ನೀಡಿದ ನಿರ್ದೇಶಕ

ರಾಜ್ಯದ ಪ್ರತಿಷ್ಠಿತ ಜಯದೇವ ಹೃದ್ರೋಗ ಆಸ್ಪತ್ರೆಯ ಮೈಸೂರು ಶಾಖೆಯಲ್ಲಿ ಕಳೆದ 24 ಗಂಟೆಗಳಲ್ಲಿ 11 ರೋಗಿಗಳು ಸಾವನ್ನಪ್ಪಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ರಾತ್ರಿ ಪಾಳಯದಲ್ಲಿ ವೈದ್ಯರೇ ಇರಲಿಲ್ಲ ಎಂದು ಮೃತ ರೋಗಿಗಳ ಕುಟುಂಬಸ್ಥರು ಆರೋಪಿಸಿದ್ದಾರೆ. ಘಟನೆ ತೀವ್ರ ಚರ್ಚೆಗೆ ಗ್ರಾಸವಾಗುತ್ತಿದ್ದಂತೆ ಸಂಸ್ಥೆಯ ನಿರ್ದೇಶಕರು ಸ್ಪಷ್ಟನೆ ನೀಡಿದ್ದಾರೆ.

  • Ram
  • Updated on: Jun 17, 2026
  • 9:26 pm