ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.
ಈ ಬಾರಿ ಮೈಸೂರು ದಸರಾ ಉದ್ಘಾಟಕರಾಗುತ್ತಾರಾ ಮಾಜಿ ಕ್ರಿಕೆಟರ್? ಇಬ್ಬರಲ್ಲಿ ಯಾರು?
Mysuru dasara 2026: ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾವನ್ನು 11 ದಿನಗಳ ಕಾಲ ವಿಜೃಂಭಣೆಯಿಂದ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಅಕ್ಟೋಬರ್ 11ಕ್ಕೆ ಉದ್ಘಾಟನೆ ಹಾಗೂ ಅಕ್ಟೋಬರ್ 21ಕ್ಕೆ ಜಂಬೂ ಸವಾರಿ ನಡೆಯಲಿದೆ. ಮಳೆ ಇಲ್ಲದೇ ಬರಗಾಲವಿದ್ದರೂ ಸಂಪ್ರದಾಯದಂತೆ ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ. ಈ ಸಂಬಂಧ ದಸರಾ ಕುರಿತು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯವನರು ಕಾರ್ಯಕಾರಿ ಸಭೆ ನಡೆಸಿದ್ದು, ಕೆಲ ಮಹತ್ವ ತೀರ್ಮಾನಗಳನ್ನು ಕೈಗೊಂಡಿದ್ದಾರೆ.
- Ram
- Updated on: Jul 27, 2026
- 3:32 pm
ಕಾಕ್ರೋಚ್ ಹೋರಾಟಗಾರರಿಗೆ ಮುಲ್ಲಾಗಳು ಬಿರಿಯಾನಿ ತಿನ್ನಿಸ್ತಾವಸ್ರೆ, ಇದು ದೇಶವನ್ನು ಅಸ್ಥಿರಗೊಳಿಸುವ ಪಿತೂರಿ: ಪ್ರತಾಪ್ ಸಿಂಹ
ನೀಟ್ ಪ್ರತಿಭಟನೆಗಳ ಹಿಂದೆ ಭಾರತವನ್ನು ಅಸ್ಥಿರಗೊಳಿಸುವ ವ್ಯವಸ್ಥಿತ ಪಿತೂರಿ ಇದೆ ಎಂದು ಮೈಸೂರಿನಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದಾರೆ. ಕಾಕ್ರೋಚ್ ಜನತಾ ಪಾರ್ಟಿ ಜೊತೆ ರಾಜ್ಯ ಮತ್ತು ದೆಹಲಿ ಕಾಂಗ್ರೆಸ್ ಸೇರಿಕೊಂಡಿದ್ದು, ಅಮೆರಿಕನ್ ಡೀಪ್ ಸ್ಟೇಟ್ನಿಂದ ಧನಸಹಾಯ ಪಡೆದು ಪ್ರತಿಭಟನೆಗಳನ್ನು ನಡೆಸಲಾಗುತ್ತಿದೆ. ಮೋದಿ ಸರ್ಕಾರವನ್ನು ದುರ್ಬಲಗೊಳಿಸುವ ಪ್ರಯತ್ನ ಇದಾಗಿದೆ ಎಂದು ಸಿಂಹ ಹೇಳಿದ್ದಾರೆ.
- Ram
- Updated on: Jul 24, 2026
- 2:10 pm
ಮೈಸೂರಿನಲ್ಲಿ ಗುತ್ತಿಗೆದಾರನ ಅಪಹರಣ: 16 ಲಕ್ಷ ರೂ. ನಗದು, ಚಿನ್ನಾಭರಣ ದೋಚಿ ದುಷ್ಕರ್ಮಿಗಳು ಪರಾರಿ
Mysuru News: ಮೈಸೂರು ನಗರದ ಹೊರವಲಯದಲ್ಲಿ ಗುತ್ತಿಗೆದಾರನನ್ನು ಅಪಹರಿಸಿ 16 ಲಕ್ಷ ರೂ. ನಗದು ಹಾಗೂ ಸುಮಾರು 3.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಮೂರು ವಿಶೇಷ ತಂಡಗಳನ್ನು ರಚಿಸಿ ತನಿಖೆ ನಡೆಸುತ್ತಿದ್ದಾರೆ.
- Ram
- Updated on: Jul 18, 2026
- 10:40 am
ಮನೆ ಕೆಲಸದಾಕೆ ಮೇಲಿನ ದೌರ್ಜನ್ಯ ಪ್ರಕರಣ: ಸುಪ್ರೀಂಕೋರ್ಟ್ ನೋಟಿಸ್ ಬಗ್ಗೆ ರೇವಣ್ಣ ಫಸ್ಟ್ ರಿಯಾಕ್ಷನ್
ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರು ಆಷಾಢ ಮಾಸದ ಮೊದಲ ಶುಕ್ರವಾರದಂದು ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮನೆ ಕೆಲಸದಾಕೆ ಮೇಲಿನ ದೌರ್ಜನ್ಯ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್ ನೀಡಿರುವ ನೋಟಿಸ್ ಬಗ್ಗೆ ಪ್ರತಿಕ್ರಿಯಿಸಿದ ಅವರು, ನ್ಯಾಯಾಲಯದ ಬಗ್ಗೆ ತಮಗೆ ನಂಬಿಕೆ ಇದ್ದು, ಸೂಕ್ತ ಸಮಯದಲ್ಲಿ ಎಲ್ಲಾ ವಿಷಯಗಳನ್ನು ಬಹಿರಂಗಪಡಿಸುವುದಾಗಿ ತಿಳಿಸಿದ್ದಾರೆ.
- Ram
- Updated on: Jul 17, 2026
- 12:22 pm
ಡಿಕೆಶಿ ಸಿಎಂ ಆಗಲಿ ಎಂದು ಹರಕೆ ಹೊತ್ತಿದ್ದ ಪತ್ನಿ; ಮೈಸೂರು ಚಾಮುಂಡೇಶ್ವರಿಗೆ ಸೀರೆ ಹರಕೆ ತೀರಿಸಿದ ಉಷಾ ಶಿವಕುಮಾರ್!
ಸಿಎಂ ಡಿ.ಕೆ. ಶಿವಕುಮಾರ್ ಪತ್ನಿ ಉಷಾ ಶಿವಕುಮಾರ್ ಅವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ಪತಿ ಮುಖ್ಯಮಂತ್ರಿಯಾದರೆ ನಾಡದೇವತೆ ಚಾಮುಂಡೇಶ್ವರಿಗೆ ಸೀರೆ ನೀಡುವುದಾಗಿ ಹೊತ್ತಿದ್ದ ಹರಕೆಯನ್ನು ಈಡೇರಿಸಿದ್ದಾರೆ. ಆಷಾಢ ಮಾಸದ ಮೊದಲ ಶುಕ್ರವಾರದಂದು ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಏನಿದು ಸೀರೆ ಹರಕೆ? ಹರಕೆ ಸಲ್ಲಿಸುವ ವಿಧಾನ, ಶುಲ್ಕ ಮತ್ತು ಸಮಯದ ವಿವರಗಳ ಮಾಹಿತಿ ಇಲ್ಲಿದೆ.
- Ram
- Updated on: Jul 17, 2026
- 11:57 am
ಆಷಾಢ ಶುಕ್ರವಾರಕ್ಕೆ ದಿನಗಣನೆ: ಚಾಮುಂಡಿ ಬೆಟ್ಟಕ್ಕೆ ಬರುವ ವಿಐಪಿಗಳಿಗೆ ವಿಶೇಷ ದರ್ಶನ ವ್ಯವಸ್ಥೆ, ಸಮಯ ನಿಗದಿ
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಾಳೆಯಿಂದ ಆರಂಭವಾಗುವ ಆಷಾಢ ಶುಕ್ರವಾರದ ಪೂಜೆಗೆ ಸಿದ್ಧತೆಗಳು ಪೂರ್ಣಗೊಂಡಿವೆ. ವಿಐಪಿ ದರ್ಶನಕ್ಕೆ ಬೆಳಗ್ಗೆ 5:30ರಿಂದ 9:30ರವರೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ಶಿಫಾರಸ್ಸು ಪತ್ರ ತಂದವರಿಗೆ ವಾಹನ ಪ್ರವೇಶವಿಲ್ಲ. ಸಾಮಾನ್ಯ ಭಕ್ತರಿಗೆ ಸುಗಮ ದರ್ಶನಕ್ಕೆ ಆದ್ಯತೆ ನೀಡಲಾಗಿದೆ. 300 ರೂಪಾಯಿ ವಿಶೇಷ ಟಿಕೆಟ್ ದರ್ಶನವನ್ನು ಈ ಬಾರಿ ರದ್ದುಪಡಿಸಲಾಗಿದೆ ಎಂದು ಸಚಿವ ಡಾ. ಯತೀಂದ್ರ ತಿಳಿಸಿದ್ದಾರೆ.
- Ram
- Updated on: Jul 15, 2026
- 2:27 pm
‘ಮೈಸೂರು ದಸರಾದಲ್ಲಿ ಕಂಬಳ ಬೇಡ’: ಯಾಕೆಂಬ ಕಾರಣ ನೀಡಿದ ಡಾ. ಶೆಲ್ವಪಿಳ್ಳೈ ಅಯ್ಯಂಗಾರ್!
ಮೈಸೂರು ದಸರಾದಲ್ಲಿ ಕಂಬಳ ಆಚರಣೆಗೆ ಇತಿಹಾಸ ತಜ್ಞ ಡಾ. ಶೆಲ್ವಪಿಳ್ಳೈ ಅಯ್ಯಂಗಾರ್ ವಿರೋಧ ವ್ಯಕ್ತಪಡಿಸಿದ್ದಾರೆ. ಕಂಬಳ ಕರಾವಳಿಯ ವಿಶಿಷ್ಟ ಕ್ರೀಡೆಯಾಗಿದ್ದು, ಮೈಸೂರು ದಸರಾದ ಪರಂಪರೆಗೆ ಅದು ಅನ್ಯ. ತಮ್ಮ ವೈವಿಧ್ಯತೆಯನ್ನು ಕಾಪಾಡಿಕೊಂಡು, ಆಯಾ ಪ್ರದೇಶದ ಆಚರಣೆಗಳನ್ನು ಆಯಾ ಸ್ಥಳದಲ್ಲೇ ಉತ್ತೇಜಿಸಬೇಕು. ಕರಾವಳಿಗೆ ಕಂಬಳ, ಮೈಸೂರಿಗೆ ದಸರಾ ಸುಂದರ ಎಂದು ಪ್ರತಿಪಾದಿಸಿದ್ದಾರೆ.
- Ram
- Updated on: Jul 15, 2026
- 12:05 pm
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ ಕಡಿದ ಆರೋಪ; ಎಫ್ಐಆರ್ ದಾಖಲು
ಮೈಸೂರು ದಸರಾ 2026ರಲ್ಲಿ ಕಂಬಳ ಸೇರ್ಪಡೆ ನಿರ್ಧಾರ ಹೊಸ ವಿವಾದಕ್ಕೆ ಕಾರಣವಾಗಿದೆ. ಸಾತಗಳ್ಳಿಯಲ್ಲಿ ಕಂಬಳಕ್ಕಾಗಿ ಮರಗಳನ್ನು ಕಡಿಯುವ ಪ್ರಸ್ತಾಪಕ್ಕೆ ಪರಿಸರವಾದಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಇದಲ್ಲದೆ, ಅನುಮತಿಯಿಲ್ಲದೆ ಮರ ಕಡಿದ ಆರೋಪದ ಮೇಲೆ ಯುವಜನ ಸಬಲೀಕರಣ ಇಲಾಖೆಯ ಉಪನಿರ್ದೇಶಕರು ಸೇರಿದಂತೆ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
- Ram
- Updated on: Jul 13, 2026
- 2:54 pm
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಸಚಿವ ಯತೀಂದ್ರ
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಗಾಯಕಿ ಎಸ್. ಜಾನಕಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ನಂತರ ಹೆಚ್.ಡಿ.ಕೋಟೆ ತಾಲೂಕಿನ ಕಣಿಯರಹುಂಡಿಯಲ್ಲಿ ಅಂತಿಮ ಸಂಸ್ಕಾರ ನೆರವೇರಲಿದೆ. ಸ್ಮಾರಕ ನಿರ್ಮಾಣದ ಬೇಡಿಕೆ ಬಗ್ಗೆ ಸಚಿವ ಯತೀಂದ್ರ ಅವರು ಮುಖ್ಯಮಂತ್ರಿಗಳ ಗಮನಕ್ಕೆ ತರುವುದಾಗಿ ತಿಳಿಸಿದ್ದಾರೆ.
- Ram
- Updated on: Jul 12, 2026
- 4:07 pm
ಹಿರಿಯ ಗಾಯಕಿ ಎಸ್. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ
S Janaki Passes Away: ಮೈಸೂರಿನಲ್ಲಿ ತಮ್ಮ ಅಜ್ಜಿ ಎಸ್. ಜಾನಕಿ ಅವರ ಪಾರ್ಥಿವ ಶರೀರವನ್ನು ನೋಡಿದ ನಂತರ, ಅವರ ಮೊಮ್ಮಗಳು ಅಪ್ಸರಾ ಮಾಧ್ಯಮಗಳೊಂದಿಗೆ ಭಾವುಕರಾಗಿ ಮಾತನಾಡಿದ್ದಾರೆ. ಇದು ತಮ್ಮ ಕುಟುಂಬಕ್ಕೆ ಮಾತ್ರವಲ್ಲದೆ ಇಡೀ ದೇಶಕ್ಕೆ ದೊಡ್ಡ ನಷ್ಟ ಎಂದು ಅಪ್ಸರಾ ಹೇಳಿದ್ದಾರೆ. ಕರ್ನಾಟಕದ ಜನತೆ ಅಜ್ಜಿಗೆ ಅಪಾರ ಪ್ರೀತಿ ತೋರಿದ್ದಾರೆ ಎಂಬುದನ್ನು ಈ ವೇಳೆ ಸ್ಮರಿಸಿದ್ದಾರೆ.
- Ram
- Updated on: Jul 12, 2026
- 8:00 am
ಪಿಆರ್ಸಿ ಜಟಾಪಟಿ: ಆದೇಶ ವಾಪಸ್ ಪಡೆಯುವಂತೆ ಆರ್ ಅಶೋಕ್ ಆಗ್ರಹ
ಶಾಶ್ವತ ನಿವಾಸ ಪ್ರಮಾಣಪತ್ರ ನೀಡುವ ಸರ್ಕಾರದ ಆದೇಶಕ್ಕೆ ಆರ್. ಅಶೋಕ್ ವಿರೋಧಿಸಿದ್ದಾರೆ. ಈ ಆದೇಶವು ಸಂವಿಧಾನದ ಉಲ್ಲಂಘನೆಯಾಗಿದ್ದು, ಕೇಂದ್ರ ಸರ್ಕಾರದ ಅಧಿಕಾರ ವ್ಯಾಪ್ತಿಗೆ ಸೇರಿದೆ ಎಂದು ಅವರು ಆರೋಪಿಸಿದ್ದಾರೆ. ವಿದೇಶಿಯರಿಗೆ ಪೌರತ್ವ ನೀಡುವ ಹುನ್ನಾರ ಇದಾಗಿದೆ ಎಂದು ಹೇಳಿರುವ ಅಶೋಕ್, ಕೂಡಲೇ ಆದೇಶ ಹಿಂಪಡೆಯುವಂತೆ ಆಗ್ರಹಿಸಿದ್ದಾರೆ.
- Ram
- Updated on: Jul 11, 2026
- 5:30 pm
Video: ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ? ಇಲ್ಲಿದೆ ಮಾಹಿತಿ
ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತ ಮಾನವ ನಿರ್ಮಿತ ದುರಂತ ಎಂದು ಆರೋಪಿಸಲಾಗಿದೆ. ಕಲ್ಲಾಡಿ ಗ್ರಾಮದ ಬಳಿ ನಡೆಯುತ್ತಿದ್ದ ಸುರಂಗ ಕಾಮಗಾರಿಯಿಂದ ಹೊರತೆಗೆದ ಮಣ್ಣನ್ನು ಅವೈಜ್ಞಾನಿಕವಾಗಿ ಸಂಗ್ರಹಿಸಿದ್ದೇ ಇದಕ್ಕೆ ಕಾರಣ. ಜಿಲ್ಲಾಡಳಿತದ ಎಚ್ಚರಿಕೆಗಳನ್ನು ನಿರ್ಲಕ್ಷಿಸಿದ್ದು ದುರಂತದ ತೀವ್ರತೆಗೆ ಕಾರಣವಾಯಿತು. ಇದು ಪ್ರಕೃತಿ ವಿಕೋಪಕ್ಕಿಂತ ಹೆಚ್ಚಾಗಿ ಮಾನವ ನಿರ್ಲಕ್ಷ್ಯದ ಫಲಿತಾಂಶವಾಗಿದೆ.
- Ram
- Updated on: Jul 10, 2026
- 10:52 am