ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.
Mysuru: 40 ದಿನಗಳಲ್ಲಿ 22 ಹುಲಿ ಸೆರೆ; ನಿಟ್ಟುಸಿರು ಬಿಟ್ಟ ಕಾಡಂಚಿನ ಜನ
ಮೈಸೂರು ಭಾಗದಲ್ಲಿ ಹೆಚ್ಚಿದ್ದ ಹುಲಿ ದಾಳಿಗಳಿಂದ ಆತಂಕಗೊಂಡಿದ್ದ ಕಾಡಂಚಿನ ಜನರಿಗೆ ಅರಣ್ಯ ಇಲಾಖೆ ರಿಲೀಫ್ ನೀಡಿದೆ. ಕೇವಲ 40 ದಿನಗಳಲ್ಲಿ 22 ಹುಲಿಗಳನ್ನು ಸೆರೆ ಹಿಡಿದು, ಕೂರ್ಗಳ್ಳಿ ಪುನರ್ವಸತಿ ಕೇಂದ್ರದಲ್ಲಿ ಆರೈಕೆ ಮಾಡಲಾಗುತ್ತಿದೆ. ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಇಲಾಖೆ ಹೊಸ ತಂತ್ರಜ್ಞಾನಗಳ ಬಳಕೆ ಜೊತೆಗೆ ಮುಖವಾಡಗಳನ್ನು ಸಹ ವಿತರಿಸಿತ್ತು.
- Ram
- Updated on: Dec 4, 2025
- 6:48 pm
ಸಿಎಂ ತವರು ಜಿಲ್ಲೆಯಲ್ಲಿ ಡಿಕೆ ಶಿವಕುಮಾರ್ ಪರ ಧ್ವನಿ: ಮುಸ್ಲಿಮರಿಂದ ಸಾಮೂಹಿಕ ಪ್ರಾರ್ಥನೆ
ಕರ್ನಾಟಕದಲ್ಲಿ ಕಾಂಗ್ರೆಸ್ ಕುರ್ಚಿ ಕದನ ತೀವ್ರಗೊಂಡಿರುವ ಬೆನ್ನಲ್ಲೇ, ಸಿದ್ದರಾಮಯ್ಯನವರ ತವರು ಜಿಲ್ಲೆ ಮೈಸೂರಿನಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಬೇಕೆಂದು ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ. ಹಜರತ್ ಸಯ್ಯದ್ ಗಮನ್ ಷಾ ಖಾದ್ರಿ ದರ್ಗಾದಲ್ಲಿ ಡಿಕೆ ಶಿವಕುಮಾರ್ ಬೆಂಬಲಿಗರು ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ. ವಿಡಿಯೋ ನೋಡಿ.
- Ram
- Updated on: Nov 30, 2025
- 12:34 pm
ನಾಡದೇವತೆಗೆ ಡಿಕೆಶಿ ಅಭಿಮಾನಿಗಳಿಂದ ವಿಶೇಷ ಪೂಜೆ, ರಥೋತ್ಸವ
ಕರ್ನಾಟಕದಲ್ಲಿ ಮುಖ್ಯಮಂತ್ರಿ ಹುದ್ದೆಯ ಚರ್ಚೆ ತೀವ್ರಗೊಂಡಿರುವ ನಡುವೆ, ಡಿ.ಕೆ. ಶಿವಕುಮಾರ್ ಅಭಿಮಾನಿಗಳು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬೆಳ್ಳಿ ಪಲ್ಲಕ್ಕಿಯಲ್ಲಿ ತಾಯಿ ಚಾಮುಂಡೇಶ್ವರಿಯ ಉತ್ಸವ ಮೂರ್ತಿಯ ಪ್ರದಕ್ಷಿಣೆ ನಡೆಸಿ, ತಮ್ಮ ನೆಚ್ಚಿನ ನಾಯಕ ಡಿಕೆಶಿ ಅವರು ಮುಖ್ಯಮಂತ್ರಿಯಾಗಲೆಂದು ಪ್ರಾರ್ಥಿಸಿದ್ದಾ
- Ram
- Updated on: Nov 28, 2025
- 12:00 pm
ಬೆಳಗ್ಗೆ ನಮಾಜ್ಗೆ ಬಂದವನ ಅಟ್ಟಾಡಿಸಿ ಚುಚ್ಚಿ ಚುಚ್ಚಿ ಕೊಂದ ದುಷ್ಕರ್ಮಿಗಳು: ಸಿಸಿಟಿವಿ ವಿಡಿಯೋ ನೋಡಿ ಬೆಚ್ಚಿಬಿದ್ದ ಮೈಸೂರು ಜನ
ಅವರೆಲ್ಲಾ ಒಂದೇ ಏರಿಯಾದವರು. ಸಾಲದ್ದಕ್ಕೆ ದೋಸ್ತಿಗಳು. ಏರಿಯಾದಲ್ಲಿ ಸುತ್ತಾಡ್ಕೊಂಡು ಗಾಂಜಾ ನಶೆಯಲ್ಲಿ ತೇಲ್ತಾ ಇದ್ದವರು ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಜೊತೆಯಲ್ಲಿದ್ದವನನ್ನೇ ಇರಿದು ಕೊಂದಿದ್ದಾರೆ. ಬುಧವಾರ ಬೆಳಗ್ಗೆ ಮೈಸೂರಿನಲ್ಲಿ ನಡೆದ ಭಯಾನಕ ಕೊಲೆಯ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ವಿಡಿಯೋ ಈಗ ಎಲ್ಲೆಡೆ ಹರಿದಾಡುತ್ತಿದೆ.
- Ram
- Updated on: Nov 27, 2025
- 7:08 am
ಮೈಸೂರು: ಡಿಕೆ ಶಿವಕುಮಾರ್ ಸಿಎಂ ಆಗಲೆಂದು ಗಣಪತಿಗೆ 101 ತೆಂಗಿನಕಾಯಿ ಒಡೆದು ಪ್ರಾರ್ಥಿಸಿದ ಅಭಿಮಾನಿಗಳು
ಮೈಸೂರಿನ ಅಗ್ರಹಾರದ 101 ಗಣಪತಿ ದೇಗುಲದಲ್ಲಿ ಒಕ್ಕಲಿಗ ಸಂಘ ಮತ್ತು ಕನ್ನಡಪರ ಸಂಘಟನೆಗಳು ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ವಿಶೇಷ ಪೂಜೆ ಸಲ್ಲಿಸಿವೆ. 101 ತೆಂಗಿನಕಾಯಿ ಒಡೆದು, ಅವರ ಭಾವಚಿತ್ರ ಹಿಡಿದು ಪ್ರಾರ್ಥನೆ ಮಾಡಲಾಯಿತು. ಕಾಂಗ್ರೆಸ್ ಹೈಕಮಾಂಡ್ ಡಿಕೆ ಶಿವಕುಮಾರ್ಗೆ ಸಿಎಂ ಸ್ಥಾನ ನೀಡಬೇಕು ಎಂದು ಆಗ್ರಹಿಸಲಾಗಿದ್ದು, ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಲಾಗಿದೆ.
- Ram
- Updated on: Nov 24, 2025
- 12:05 pm
ಡಿಕೆ ಶಿವಕುಮಾರ್ ಸಿಎಂ ಆಗಲೆಂದು ಸಿದ್ದರಾಮಯ್ಯ ತವರು ಜಿಲ್ಲೆಯಲ್ಲೇ ಪೂಜೆ!
ಕರ್ನಾಟಕ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ಗೊಂದಲ ಹೆಚ್ಚುತ್ತಿರುವ ಮಧ್ಯೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪರ ಪೂಜೆ ಸಲ್ಲಿಸಲಾಗಿದೆ. ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಅಯ್ಯಪ್ಪ ದೇಗುಲದಲ್ಲಿ ಶಬರಿಮಲಾ ಯಾತ್ರಿಗಳು ಡಿಕೆ ಶಿವಕುಮಾರ್ ಸಿಎಂ ಆಗಲಿ ಎಂದು ಪೂಜೆ ಸಲ್ಲಿಸಿದ್ದಾರೆ. ವಿಡಿಯೋ ಇಲ್ಲಿದೆ.
- Ram
- Updated on: Nov 24, 2025
- 8:00 am
ಇದಪ್ಪ ರೂಲ್ಸ್ ಅಂದ್ರೆ: ಸಿಎಂ ಸಿದ್ದರಾಮಯ್ಯ ಹೊಸ ಮನೆಗೂ ಸಿಕ್ಕಿಲ್ಲ ವಿದ್ಯುತ್ ಸಂಪರ್ಕ
ರೂಲ್ಸ್ ಅಂದ್ರೆ ರೂಲ್ಸ್ ದೇಶದ ಪ್ರತಿ ಪ್ರಜೆಗೂ ಒಂದೇ ರೂಲ್ಸ್. ಮುಖ್ಯಮಂತ್ರಿ (Chief Minister) ಆಗ್ಲಿ ಮಿನಿಸ್ಟರ್ ಆಗಲಿ ಎಲ್ಲರಿಗೂ ಸಹ ಒಂದೇ ರೂಲ್ಸ್ ಅನ್ವಯ. ಇದನ್ನು ಏಕೆ ಹೇಳುತ್ತಿದ್ದೇವೆ ಅಂದ್ರೆ ಮೈಸೂರಿನ ಕುವೆಂಪು ನಗರದಲ್ಲಿ (Kuvempu Nagara) ನಿರ್ಮಾಣಗೊಂಡಿರುವ ಸಿದ್ದರಾಮಯ್ಯ (Siddaramaiah) ಅವರ ಹೊಸ ನಿವಾಸಕ್ಕೆ ವಿದ್ಯುತ್ ಸಂಪರ್ಕಕ್ಕೆ ತೊಡಕು ಉಂಟಾಗಿದೆ.
- Ram
- Updated on: Nov 21, 2025
- 8:31 pm
ಸಿದ್ದರಾಮಯ್ಯ ಕ್ಷೇತ್ರ ವರುಣಾ ಪಂಚಾಯ್ತಿ ಲೇಡಿ ಕಾರ್ಯದರ್ಶಿ ಆತ್ಮಹತ್ಯೆಗೆ ಯತ್ನ: ಕಾರಣವೇನು?
ಮೈಸೂರಿನ ವರುಣಾ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಕಚೇರಿಯಲ್ಲೇ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ಮೈಸೂರು ತಾಲೂಕಿನ ವರುಣಾ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ವರ್ಗಾವಣೆ ವಿಚಾರಕ್ಕೆ ಮಾನಸಿಕ ಕಿರುಕುಳ ಆರೋಪ ಕೇಳಿಬಂದಿದೆ. ಸದ್ಯ ವರುಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Ram
- Updated on: Nov 21, 2025
- 6:54 pm
ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು: ಪುರುಷೋತ್ತಮ ಬಿಳಿಮಲೆ ವಿವಾದಾತ್ಮಕ ಹೇಳಿಕೆ
ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಯಕ್ಷಗಾನ ಕಲಾವಿದರು ಮೇಳಕ್ಕೆಂದು 6-8 ತಿಂಗಳು ತಿರುಗಾಟದಲ್ಲೇ ಇರುವುದರಿಂದ ಅವರಿಗೆ ಯಾರೂ ಹೆಣ್ಣು ಕೊಡುತ್ತಿರಲಿಲ್ಲ. ಸ್ತ್ರೀವೇಷದ ಕಲಾವಿದ ಏನಾದರೂ ಸಲಿಂಗಕಾಮ ನಿರಾಕರಿಸಿದ್ದರೆ, ಭಾಗವತರು ಮರು ದಿವಸ ಅವರಿಗೆ ಪದ್ಯವನ್ನೇ ಕೊಡುತ್ತಿರಲಿಲ್ಲ ಎಂದಿದ್ದಾರೆ.
- Ram
- Updated on: Nov 19, 2025
- 10:13 am
ಶಾಸಕ ರವಿಶಂಕರ್ರಿಂದ ಹಲ್ಲೆ ಆರೋಪ: ಸಂತ್ರಸ್ತ ಎನ್ನಲಾದ ವ್ಯಕ್ತಿಯಿಂದಲೇ ಸ್ಪಷ್ಟನೆ
ಕೆ.ಆರ್. ನಗರ ಶಾಸಕ ರವಿಶಂಕರ್ ತಮ್ಮ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪವನ್ನು ಕುಡ್ಲೂರು ಪಂಚಾಯತಿ ಕಾರ್ಯಕ್ರಮದಲ್ಲಿ ಪ್ರಶ್ನಿಸಿದ್ದ ವ್ಯಕ್ತಿ ನಿರಾಕರಿಸಿದ್ದಾರೆ. ಶಾಸಕರು ಕೇವಲ ಗೊಂದಲ ಕಡಿಮೆ ಮಾಡಲು ತಮ್ಮನ್ನು ಪಕ್ಕಕ್ಕೆ ಕೂರಿಸಿದ್ದಾಗಿ ಅವರು ತಿಳಿಸಿದ್ದು, ಯಾವುದೇ ಹಲ್ಲೆ ನಡೆದಿಲ್ಲ ಎಂದಿದ್ದಾರೆ. ಈ ಆರೋಪಗಳು ಬೇಕು ಎಂದು ಮಾಡುತ್ತಿರುವ ಅಪಪ್ರಚಾರ ಎಂದು ಸ್ಪಷ್ಟಪಡಿಸಿದ್ದಾರೆ.
- Ram
- Updated on: Nov 18, 2025
- 12:12 pm
ಹುಲಿ ದಾಳಿ ತಡೆಗೆ ಸುಂದರ್ಬನ್ಸ್ ವಿಧಾನ: ಏನಿದು ಅರಣ್ಯ ಇಲಾಖೆಯ ಹೊಸ ಪ್ಲ್ಯಾನ್?
ಮೈಸೂರಿನಲ್ಲಿ ಹೆಚ್ಚಿದ ಹುಲಿ ದಾಳಿ ಪ್ರಕರಣಗಳ ನಿಯಂತ್ರಣಕ್ಕೆ ಅರಣ್ಯ ಇಲಾಖೆ ಹೊಸ ಯೋಜನೆ ರೂಪಿಸಿದೆ. ಸುಂದರ್ಬನ್ಸ್ ಮಾದರಿಯಂತೆ ರೈತರು ಮತ್ತು ದನಗಾಹಿಗಳಿಗೆ ಮುಖವಾಡಗಳನ್ನು ವಿತರಿಸುತ್ತಿದೆ. ಹುಲಿಗಳು ಹಿಂಬದಿಯಿಂದ ದಾಳಿ ಮಾಡುವುದನ್ನು ತಡೆಯಲು ಈ ಮುಖವಾಡಗಳು ಸಹಾಯಕವಾಗಲಿವೆ. ಅರಣ್ಯ ಇಲಾಖೆ 10,000 ಮುಖವಾಡಗಳನ್ನು ವಿತರಿಸಿದ್ದು, ಕಾಡು ಪ್ರಾಣಿಗಳೊಂದಿಗೆ ಹೇಗೆ ವರ್ತಿಸ ಬೇಕು ಎಂಬ ಬಗ್ಗೆಯೂ ಜಾಗೃತಿ ಕೆಲಸ ನಡೆಸುತ್ತಿದೆ.
- Ram
- Updated on: Nov 17, 2025
- 5:13 pm
ಜನರ ಮೇಲೆ ಹುಲಿ ದಾಳಿ ಮಾಡದಂತೆ ಮಾನವ ಮುಖವಾಡದ ಮಾಸ್ಕ್: ಹೇಗೆ ವರ್ಕ್ ಆಗುತ್ತೆ?
ಮೈಸೂರು-ಚಾಮರಾಜನಗರ ಭಾಗದಲ್ಲಿ ಮನಷ್ಯರ ಮೇಲೆ ಹುಲಿ ದಾಳಿ ಪ್ರಕರಣಗಳು ಹೆಚ್ಚುತ್ತಲೇ ಇವೆ. ಇದರಿಂದ ಕಾಡಾಂಚಿನ ಭಾಗದ ಜನರಲ್ಲಿ ಆತಂಕ ಮನೆ ಮಾಡಿದ್ದು, ಮನೆಯಿಂದ ಆಚೆ ಬರದಂತಾಗಿದೆ. ಹೀಗಾಗಿ ಇದಕ್ಕೆ ಕಡಿವಾಳ ಹಾಕಲು ಅರಣ್ಯ ಇಲಾಖೆ ಒಂದು ವಿನೂತನ ಕ್ರಮಕ್ಕೆ ಮುಂದಾಗಿದೆ. ಹೌದು...ಹುಲಿಗಳು ಮನಷ್ಯರ ಮೇಲೆ ದಾಳಿ ಮಾಡದಂತೆ ಕ್ರಮಕೈಗೊಳ್ಳಲಾಗಿದ್ದು, ಮಾನವ ಮುಖವಾಡದ ಮಾಸ್ಕ್ ಅನ್ನು ಜನರು ತಮ್ಮ ತಲೆ ಹಿಂದೆ ಧರಿಸಬೇಕೆಂದು ತಿಳಿಸಿದ್ದಾರೆ. ಇನ್ನು ಇದು ಹೇಗೆ ವರ್ಕ್ ಆಗುತ್ತೆ ಎನ್ನುವುದನ್ನು ಟಿವಿ9ಗೆ ಮೈಸೂರು ಡಿಸಿಎಫ್ ಪರಮೇಶ್ವರ್ ವಿವರಿಸಿದ್ದಾರೆ.
- Ram
- Updated on: Nov 17, 2025
- 3:58 pm