AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ್​, ಮೈಸೂರು

ರಾಮ್​, ಮೈಸೂರು

Author - TV9 Kannada

ram.puttaswamy@tv9.com

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಂದ ಸುತ್ತೂರು ಮಠಕ್ಕೆ ಭೇಟಿ: ಮಠದ ಶೈಕ್ಷಣಿಕ ಕೊಡುಗೆಗಳಿಗೆ ಒತ್ತು

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಂದ ಸುತ್ತೂರು ಮಠಕ್ಕೆ ಭೇಟಿ: ಮಠದ ಶೈಕ್ಷಣಿಕ ಕೊಡುಗೆಗಳಿಗೆ ಒತ್ತು

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಮೈಸೂರಿನ ಸುತ್ತೂರು ಮಠದ ಶಾಖಾ ಮಠಕ್ಕೆ ಭೇಟಿ ನೀಡಿದರು. ಅವರು ಬೆಳಗಿನ ಉಪಹಾರ ಸೇವಿಸಿ, ಕೆಎಸ್‌ಒಯುನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಆಗಮಿಸಿದ್ದರು. ಈ ಭೇಟಿಯು ಮಠದ ವೈವಿಧ್ಯಮಯ ಶೈಕ್ಷಣಿಕ ಕಾರ್ಯಕ್ರಮಗಳು, ತಾಯ್ನುಡಿ ಅಭಿವೃದ್ಧಿ, ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಔಷಧ ವಿಜ್ಞಾನ ಕಾಲೇಜುಗಳ ಕುರಿತು ಬೆಳಕು ಚೆಲ್ಲಿತು.

  • Ram
  • Updated on: Mar 26, 2026
  • 11:30 am
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು! ವಿಡಿಯೋ ವೈರಲ್

ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು! ವಿಡಿಯೋ ವೈರಲ್

ರಸ್ತೆ ದಾಟುವುದು ಹೇಗೆ ಗೊತ್ತಾ? ಇಲ್ಲಾಂದ್ರೆ ನಮ್ಮನ್ನು ನೋಡಿ ಕಲಿಯಿರಿ! ಕಾಡಾನೆ ಹಿಂಡು ಆಚೀಚೆ ನಿಂತ ವಾಹನ ಸವಾರರಿಗೆ ಹೀಗೆ ಹೇಳುತ್ತಿರಬಹುದಾ? ಇಂಥದ್ದೊಂದು ಪ್ರಶ್ನೆ ಮೂಡುವಂತೆ ಮಾಡಿದ್ದು, ನಾಗರಹೊಳೆ ಅರಣ್ಯ ವ್ಯಾಪ್ತಿಯ ರಸ್ತೆಯಲ್ಲಿ ಕಂಡುಬಂದ ಕಾಡಾನೆ ಗುಂಪು. ಆನೆಗಳ ಗುಂಪು ಶಿಸ್ತಿನಿಂದ ರಸ್ತೆ ದಾಟುತ್ತಿರುವ ದೃಶ್ಯವನ್ನು ವನ್ಯಜೀವಿ ಛಾಯಾಗ್ರಾಹಕ ಕಿರಣ್ ಮೆಟೊಯ್ ಸೆರೆಹಿಡಿದಿದ್ದು, ಈಗ ವೈರಲ್ ಆಗುತ್ತಿದೆ.

  • Ram
  • Updated on: Mar 23, 2026
  • 10:25 am
ರೈಲ್ವೆ ಹಳಿ ತಡೆಗೋಡೆಯಲ್ಲಿ ಸಿಲುಕಿ ಒದ್ದಾಡಿದ ಒಂಟಿ ಸಲಗ; ಸಿನಿಮೀಯ ರೀತಿಯಲ್ಲಿ ಆನೆ ರಕ್ಷಣೆ!

ರೈಲ್ವೆ ಹಳಿ ತಡೆಗೋಡೆಯಲ್ಲಿ ಸಿಲುಕಿ ಒದ್ದಾಡಿದ ಒಂಟಿ ಸಲಗ; ಸಿನಿಮೀಯ ರೀತಿಯಲ್ಲಿ ಆನೆ ರಕ್ಷಣೆ!

ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಿಂದ ಆಹಾರ ಅರಸಿ ಹುಣಸೂರು ತಾಲೂಕಿನ ಉಡುವೆಪುರ ಗ್ರಾಮಕ್ಕೆ ಬಂದಿದ್ದ ಆನೆಯೊಂದು ರೈಲ್ವೆ ಹಳಿಗಳ ತಡೆಗೋಡೆಯಲ್ಲಿ ಸಿಲುಕಿಹಾಕಿಕೊಂಡಿತ್ತು. ಜನರ ಚೀರಾಟಕ್ಕೆ ಬೆದರಿ ಕಾಡಿಗೆ ಓಡುವಾಗ ಈ ಘಟನೆ ಸಂಭವಿಸಿತು. ಅರಣ್ಯ ಇಲಾಖೆ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ, ಯಾವುದೇ ಗಾಯವಾಗದಂತೆ ಆನೆಯನ್ನು ಯಶಸ್ವಿಯಾಗಿ ರಕ್ಷಿಸಿದರು. ಇದು ಮಾನವ-ವನ್ಯಜೀವಿ ಸಂಘರ್ಷದ ಮತ್ತೊಂದು ಉದಾಹರಣೆಯಾಗಿದೆ.

  • Ram
  • Updated on: Mar 19, 2026
  • 8:13 am
ಗಾಳಿ ಮಳೆಗೆ ಹಾರಿ ಹೋದ ಶಾಲಾ ಮೇಲ್ಚಾವಣಿ: ಶಿಕ್ಷಕಿಯ ಸಮಯ ಪ್ರಜ್ಞೆಯಿಂದ ಮಕ್ಕಳು ಬಚಾವ್​​

ಗಾಳಿ ಮಳೆಗೆ ಹಾರಿ ಹೋದ ಶಾಲಾ ಮೇಲ್ಚಾವಣಿ: ಶಿಕ್ಷಕಿಯ ಸಮಯ ಪ್ರಜ್ಞೆಯಿಂದ ಮಕ್ಕಳು ಬಚಾವ್​​

ಹುಣಸೂರು ತಾಲೂಕಿನ ದಾಸನಪುರದಲ್ಲಿ ಶಾಲಾ ಶಿಕ್ಷಕಿಯ ಸಮಯ ಪ್ರಜ್ಞೆಯಿಂದ ಸಂಭವನೀಯ ಭಾರಿ ಅನಾಹುತವೊಂದು ತಪ್ಪಿದೆ. ಮಕ್ಕಳಿರುವ ಹೊತ್ತಲ್ಲೇ ಗಾಳಿ ಮಳೆಗೆ ಶಾಲೆಯ ಮೇಲ್ಛಾವಣಿ ಹಾರಿಹೋಗಿದ್ದು, ಶಿಕ್ಷಕಿ ವಿದ್ಯಾರ್ಥಿಗಳನ್ನು ಡೆಸ್ಕ್​​ ಕೆಳಗೆ ಕೂರಿಸಿದ ಕಾರಣ ಎಲ್ಲರೂ ಬಚಾವ್​​ ಆಗಿದ್ದಾರೆ. ಹೀಗಿದ್ದರೂ ಒಂದೊಮ್ಮೆ ಮೇಲ್ಛಾವಣಿ ಕುಸಿದಿದ್ದರೆ ದೊಡ್ಡ ಅನಾಹುತವೇ ನಡೆಯುವ ಸಾಧ್ಯತೆ ಇತ್ತು ಎನ್ನಲಾಗಿದೆ.

  • Ram
  • Updated on: Mar 18, 2026
  • 5:57 pm
ಮೈಸೂರು ಪಾಲಿಕೆಯಿಂದಲೇ ಫುಟ್​ಪಾತ್ ಒತ್ತುವರಿ! ಅರಮನೆ ಮುಂಭಾಗದ ರಾಜಮಾರ್ಗ ಒಡೆದು ಟಾಂಗಾ ಸ್ಟ್ಯಾಂಡ್​

ಮೈಸೂರು ಪಾಲಿಕೆಯಿಂದಲೇ ಫುಟ್​ಪಾತ್ ಒತ್ತುವರಿ! ಅರಮನೆ ಮುಂಭಾಗದ ರಾಜಮಾರ್ಗ ಒಡೆದು ಟಾಂಗಾ ಸ್ಟ್ಯಾಂಡ್​

ಸಾಂಸ್ಕೃತಿಕ ಹಾಗೂ ಪಾರಂಪರಿಕ ನಗರಿ ಮೈಸೂರಿನಲ್ಲಿ ಈಗ ಫುಟ್​ಪಾತ್ ರಾಜಕೀಯ ಶುರುವಾಗಿದೆ. ಸಾರ್ವಜನಿಕರು ಓಡಾಡುವ ಜಾಗದಲ್ಲಿ ಟಾಂಗಾ ಸ್ಟ್ಯಾಂಡ್ ನಿರ್ಮಿಸಲು ಮುಂದಾಗಿರುವ ಪಾಲಿಕೆ ವಿರುದ್ಧ ಜನ ಕೆಂಡಾಮಂಡಲವಾಗಿದ್ದಾರೆ. ಅರಮನೆ ಮುಂಭಾಗದ ಮತ್ತು ದಸರಾ ಮೆರವಣಿಗೆ ಸಾಗುವ ಪಾರಂಪರಿಕ ರಾಜಮಾರ್ಗವನ್ನು ಒಡೆದು, ಪಾದಚಾರಿಗಳ ಹಾದಿಗೆ ಮುಳ್ಳು ಹಾದಿ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ತೀವ್ರ ವಿರೋಧ ವ್ಯಕ್ತವಾಗಿದೆ.

  • Ram
  • Updated on: Mar 18, 2026
  • 9:09 am
ಲಂಚ ಪಡೆಯುವಾಗ ಲೋಕಾಯುಕ್ತ ಟ್ರ್ಯಾಪ್: ಸಿಕ್ಕಿಬೀಳುತ್ತಿದ್ದಂತೆ ಕೈ ಕೊಯ್ದುಕೊಂಡು ಮಹಿಳಾ ಪಿಡಿಒ ಹೈಡ್ರಾಮಾ!

ಲಂಚ ಪಡೆಯುವಾಗ ಲೋಕಾಯುಕ್ತ ಟ್ರ್ಯಾಪ್: ಸಿಕ್ಕಿಬೀಳುತ್ತಿದ್ದಂತೆ ಕೈ ಕೊಯ್ದುಕೊಂಡು ಮಹಿಳಾ ಪಿಡಿಒ ಹೈಡ್ರಾಮಾ!

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಮುಳ್ಳೂರು ಗ್ರಾಮ ಪಂಚಾಯಿತಿ ಪಿಡಿಒ ಮಂಜುಳಾ ಅವರು ಮೃತ ನೀರುಗಂಟಿಯ ಬಾಕಿ ಸಂಬಳ ಬಿಡುಗಡೆ ಮಾಡಲು 50,000 ರೂ. ಲಂಚಕ್ಕೆ ಬೇಡಿಕೆ ಇಟ್ಟು, 25,000 ರೂ. ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದಿದ್ದಾರೆ. ಬಂಧನದಿಂದ ತಪ್ಪಿಸಿಕೊಳ್ಳಲು ಕಚೇರಿಯಲ್ಲೇ ಹರಿತ ಆಯುಧದಿಂದ ಕೈ ಕೊಯ್ದುಕೊಂಡು ನಾಟಕವಾಡಿದ್ದಾರೆ. ಸದ್ಯ ಆಸ್ಪತ್ರೆಗೆ ದಾಖಲಾಗಿದ್ದು, ಲೋಕಾಯುಕ್ತ ತನಿಖೆ ಮುಂದುವರಿದಿದೆ.

  • Ram
  • Updated on: Mar 17, 2026
  • 10:25 am
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಹುಟ್ಟಿದ್ದೇ ಒಂದು ಭೀಕರ ಅಗ್ನಿದುರಂತದಿಂದ! ಇದರ ಹಿಂದಿರುವ ಅರಮನೆಯ ಆ ರಹಸ್ಯ ನಿಮಗೆ ಗೊತ್ತೇ?

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಹುಟ್ಟಿದ್ದೇ ಒಂದು ಭೀಕರ ಅಗ್ನಿದುರಂತದಿಂದ! ಇದರ ಹಿಂದಿರುವ ಅರಮನೆಯ ಆ ರಹಸ್ಯ ನಿಮಗೆ ಗೊತ್ತೇ?

ಈ ಆಸ್ಪತ್ರೆ ಕೇವಲ ಕಟ್ಟಡವಲ್ಲ, ಇದೊಂದು ತ್ಯಾಗದ ಪ್ರತೀಕ ಎಂಬುದು ನಿಮಗೆ ಗೊತ್ತೇ? ಈ ಆಸ್ಪತ್ರೆಗೆ ರೋಚಕ ಇತಿಹಾಸವಿದೆ ಎಂದರೆ ನೀವು ನಂಬಲೇಬೇಕು. ಮೈಸೂರು ರಾಜಮನೆತನದ ಕಾರ್ಯಕ್ರಮದಲ್ಲಿ ಸಂಭವಿಸಿದ ಒಂದು ಮಹಾ ಅಗ್ನಿ ದುರಂತ ಈ ಆಸ್ಪತ್ರೆಯ ಹುಟ್ಟಿಗೆ ಕಾರಣ ಆಗಿದ್ಹೇಗೆ? ಅಷ್ಟಕ್ಕೂ ವಿಕ್ಟೋರಿಯಾ ಆಸ್ಪತ್ರೆ ಎಂಬ ಹೆಸರು ಬಂದಿದ್ಹೇಗೆ? ಎಲ್ಲ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ.

  • Ram
  • Updated on: Mar 16, 2026
  • 10:01 am
ಮೈಸೂರು ಚಾಮುಂಡೇಶ್ವರಿ ದೇವಿ ಲಡ್ಡು ಪ್ರಸಾದಕ್ಕೂ ಗ್ಯಾಸ್ ಕೊರತೆ ಬಿಸಿ: ಲಡ್ಡು ತಯಾರಿಸಲು ನಿರ್ಮಾಣವಾಗ್ತಿದೆ ವಿಶೇಷ ಸೌದೆ ಒಲೆ!

ಮೈಸೂರು ಚಾಮುಂಡೇಶ್ವರಿ ದೇವಿ ಲಡ್ಡು ಪ್ರಸಾದಕ್ಕೂ ಗ್ಯಾಸ್ ಕೊರತೆ ಬಿಸಿ: ಲಡ್ಡು ತಯಾರಿಸಲು ನಿರ್ಮಾಣವಾಗ್ತಿದೆ ವಿಶೇಷ ಸೌದೆ ಒಲೆ!

ಮೈಸೂರಿನ ಪ್ರಸಿದ್ಧ ಚಾಮುಂಡೇಶ್ವರಿ ದೇಗುಲದಲ್ಲಿ ಲಡ್ಡು ಪ್ರಸಾದ ತಯಾರಿಕೆಗೆ ಗ್ಯಾಸ್ ಸಿಲಿಂಡರ್ ಕೊರತೆ ತೀವ್ರವಾಗಿದೆ. ಇದರಿಂದಾಗಿ, ಪ್ರತಿದಿನ ಸಾವಿರಾರು ಲಡ್ಡುಗಳನ್ನು ತಯಾರಿಸಲು ದೇವಾಲಯ ಪ್ರಾಧಿಕಾರ ವಿಶೇಷ ಸೌದೆ ಒಲೆಯನ್ನು ನಿರ್ಮಿಸುತ್ತಿದೆ. ಗ್ಯಾಸ್ ಕೊರತೆಯಿಂದ ಪ್ರಸಾದ ವಿತರಣೆಗೆ ಯಾವುದೇ ಅಡಚಣೆಯಾಗದಂತೆ ಈ ಪರ್ಯಾಯ ವ್ಯವಸ್ಥೆ ಮಾಡಲಾಗುತ್ತಿದೆ.

  • Ram
  • Updated on: Mar 15, 2026
  • 12:25 pm
ತಮ್ಮ ಕ್ಷೇತ್ರದ ಜಾತ್ರೆಗೆ ಪ್ರಭಾವ ಬಳಸಿ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?

ತಮ್ಮ ಕ್ಷೇತ್ರದ ಜಾತ್ರೆಗೆ ಪ್ರಭಾವ ಬಳಸಿ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?

ಗಲ್ಫ್ ರಾಷ್ಟ್ರದಲ್ಲಿ ಯುದ್ಧ ನಡೆಯುತ್ತಿರುವುದರಿಂದ ಭಾರತದಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಉಂಟಾಗಿದೆ. ಇದು​​ ಹೋಟೆಲ್ ಉದ್ಯಮದ ಕತ್ತು ಹಿಸುಕುವಂತೆ ಮಾಡಿದೆ. ಗ್ಯಾಸ್ ಎಮರ್ಜೆನ್ಸಿ ಗ್ರಾಹಕರ ಉಸಿರುಗಟ್ಟಿಸಿದೆ. ಕಮರ್ಷಿಯಲ್ ಸಿಲಿಂಡರ್​ಗಳು ಸಿಗುತ್ತಿಲ್ಲ. ಕಾಳಸಂತೆಯಲ್ಲಿ ಒನ್ ಟು ಡಬಲ್ ರೇಟ್​ಗೆ ಸೇಲ್ ಮಾಡುತ್ತಿದ್ದಾರೆ. 1 ಸಾವಿರ 950 ರೂಪಾಯಿ ಇರುವ ಸಿಲಿಂಡರ್​ನ 5 ಸಾವಿರ ರೂಪಾಯಿಗೆ ಮಾರಾಟ ಮಾಡುತ್ತಿದ್ದಾರೆ.ಇದರಿಂದ ಸಾಕಷ್ಟು ತೊಂದರೆಗಳು ಆಗುತ್ತಿವೆ. ಇದರ ಮಧ್ಯೆ ಸಿಎಂ ಸಿದ್ದರಾಮಯ್ಯನವರು ತಮ್ಮ ವರುಣಾ ಕ್ಷೇತ್ರದ ವರಕೋಡು ಗ್ರಾಮದ ಜಾತ್ರೆಗೆ ಪ್ರಭಾವ ಬಳಿಸಿ ಒಂದು ಲೋಡ್ ಗ್ಯಾಸ್ ಸಿಲಿಂಡರ್ ಕೊಡಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಹೀಗಂತ ಮೈಸೂರು ಜಿಲ್ಲಾ‌ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ ನಾರಾಯಣ ಗೌಡ ಅವರು ಆರೋಪಿಸಿದ್ದಾರೆ.

  • Ram
  • Updated on: Mar 14, 2026
  • 5:34 pm
ಗ್ಯಾಸ್ ಸಿಲಿಂಡರ್​​ ಇಲ್ಲದಿದ್ದರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಸಿಗುತ್ತೆ ಹೊಟ್ಟೆ ತುಂಬ ಪ್ರಸಾದ

ಗ್ಯಾಸ್ ಸಿಲಿಂಡರ್​​ ಇಲ್ಲದಿದ್ದರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಸಿಗುತ್ತೆ ಹೊಟ್ಟೆ ತುಂಬ ಪ್ರಸಾದ

ಅಮೆರಿಕ, ಇಸ್ರೇಲ್ ಹಾಗೂ ಇರಾನ್ ದೇಶಗಳ ನಡೆಯುತ್ತಿರುವ ಯುದ್ಧವು ತೀವ್ರ ಸ್ವರೂಪವನ್ನು ಪಡೆದುಕೊಂಡಿದ್ದು, ಭಾರತದಲ್ಲಿ ವಾಣಿಜ್ಯ ಹಾಗೂ ಅಡುಗೆ ಅನಿಲ ಸಿಲಿಂಡರ್ ಕೊರತೆಯ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಗ್ಯಾಸ್ ಸಿಲಿಂಡರ್ ಅಭಾವದಿಂದಾಗಿ ಕರ್ನಾಟಕದ ದೇವಸ್ಥಾನದ ಪ್ರಸಾದಕ್ಕೂ ಬಿಸಿ ತಟ್ಟಿದೆ. ಹೌದು...ದೇವಸ್ಥಾನಗಳಲ್ಲಿ ಭಕ್ತರಿಗೆ ತಯಾರಿಸುವ ಪ್ರಸಾದಕ್ಕೆ ಗ್ಯಾಸ್ ಸಮಸ್ಯೆ ಎದುರಾಗಿದೆ. ಹೀಗಾಗಿ ಕೆಲ ದೇವಾಲಯಗಳು ಸೌದೆ ಒಲೆ ಮೊರೆ ಹೋಗಿವೆ. ಹೌದು.. ಮೈಸೂರು ಇತಿಹಾಸ ಪ್ರಸಿದ್ಧ ಚಾಮುಂಡೇಶ್ವರಿ ದೇವಾಲಯದಲ್ಲೂ ಸಹ ಸೌದೆ ಒಲೆಯಿಂದಲೇ ಪ್ರಸಾದ ತಯಾರಿಸಲಾಗುತ್ತಿದೆ. ಹೀಗಾಗಿ ಗ್ಯಾಸ್ ಇಲ್ಲದಿದ್ದರೂ ಸಹ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಹೊಟ್ಟೆ ತುಂಬ ಪ್ರಸಾದ ದೊರೆಯುತ್ತಿದೆ.

  • Ram
  • Updated on: Mar 14, 2026
  • 2:55 pm
ಫಾರಂಹೌಸ್‌ಗೆ ನುಗ್ಗಿ ನಾಯಿ ಮೇಲೆ ಚಿರತೆ ಅಟ್ಯಾಕ್! ಸಿಸಿ ಕ್ಯಾಮೆರಾದಲ್ಲಿ ಸೆರೆಯಾಯ್ತು ಭೀಕರ ದೃಶ್ಯ

ಫಾರಂಹೌಸ್‌ಗೆ ನುಗ್ಗಿ ನಾಯಿ ಮೇಲೆ ಚಿರತೆ ಅಟ್ಯಾಕ್! ಸಿಸಿ ಕ್ಯಾಮೆರಾದಲ್ಲಿ ಸೆರೆಯಾಯ್ತು ಭೀಕರ ದೃಶ್ಯ

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹೊರಳವಾಡಿ ಗೇಟ್ ಬಳಿಯ ಫಾರಂಹೌಸ್‌ಗೆ ಚಿರತೆಯೊಂದು ನುಗ್ಗಿ ನಾಯಿಯ ಮೇಲೆ ದಾಳಿ ಮಾಡಿದೆ. ಸಿಸಿಟಿವಿಯಲ್ಲಿ ಸೆರೆಯಾದ ಈ ಘಟನೆಯು ಸ್ಥಳೀಯರಲ್ಲಿ ಭೀತಿ ಮೂಡಿಸಿದೆ. ಅರಣ್ಯ ಇಲಾಖೆಗೆ ಪದೇ ಪದೇ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಬಗ್ಗೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ತೀವ್ರ ಖಂಡನೆ ವ್ಯಕ್ತವಾಗಿದೆ.

  • Ram
  • Updated on: Mar 14, 2026
  • 8:02 am
ಏಯ್‌.. ಏಯ್‌ ಅಂದ್ರೂ ಕೇಳದ ಯುವಕ ಸ್ಟೇಜ್​​​​ ಮೇಲೇರಿ ಸಿಎಂಗೆ ಹೇಳಿದ್ದೇನು ಗೊತ್ತಾ?

ಏಯ್‌.. ಏಯ್‌ ಅಂದ್ರೂ ಕೇಳದ ಯುವಕ ಸ್ಟೇಜ್​​​​ ಮೇಲೇರಿ ಸಿಎಂಗೆ ಹೇಳಿದ್ದೇನು ಗೊತ್ತಾ?

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು (ಮಾರ್ಚ್ 13) ತವರು ಕ್ಷೇತ್ರ ಮೈಸೂರಿನ ವರುಣಾಕ್ಕೆ ಭೇಟಿ ನೀಡಿದ್ದು, ಶ್ರೀ ಬೀರೇಶ್ವರ ಸ್ವಾಮಿ ದೇವಾಲಯದ ಸಂಪ್ರೋಕ್ಷಣ, ಪುನರ್ ಪ್ರತಿಷ್ಠಾಪನೆ, ಕುಂಭಾಭಿಷೇಕ ಹಾಗೂ ಮಹಾದ್ವಾರದ ಪೂಜಾ ಮಹೋತ್ಸವಕ್ಕೆ ಚಾಲನೆ ನೀಡಿದರು. ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪುತ್ರ ಯತೀಂದ್ರ ಸಿದ್ದರಾಮಯ್ಯನವರನ್ನು ಅದ್ಧೂರಿಯಾಗಿ ತೆರೆ ವಾಹನದಲ್ಲಿ ಮೆರವಣಿಗೆ ಮೂಲಕ ಬರಮಾಡಿಕೊಂಡರು. ಇನ್ನು ಸಿದ್ದರಾಮ್ಯಯ ಕಾರ್ಯಕ್ರಮದಲ್ಲಿ ಭಾಷಣ ಮಾಡುವ ವೇಳೆ ಯುವಕನೋರ್ವ ಏಕಾಏಕಿ ವೇದಿಕೆ ನುಗ್ಗಿದ್ದು, ನಮ್ಮ ಹುಡುಗರು ನಿಮ್ಮ ಜೊತೆ ಫೋಟೋ ತೆಗೆದುಕೊಳ್ಳಬೇಕೆಂದಿದ್ದಾರೆ. ಆದ್ದರಿಂದ ಸ್ವಲ್ಪ ಬಿಡುವು ಮಾಡಿಕೊಳ್ಳಿ ಎಂದು ಮನವಿ ಮಾಡಿದ್ದಾನೆ.

  • Ram
  • Updated on: Mar 13, 2026
  • 6:54 pm
‘ಡೆವಿಲ್’ ಎದುರು ‘ಕರ್ನಾಟಕದ ಅಳಿಯ’ ತೆರೆ ಕಾಣಲಿಲ್ಲ: ಕಾರಣ ತಿಳಿಸಿದ ಪ್ರಥಮ್
‘ಡೆವಿಲ್’ ಎದುರು ‘ಕರ್ನಾಟಕದ ಅಳಿಯ’ ತೆರೆ ಕಾಣಲಿಲ್ಲ: ಕಾರಣ ತಿಳಿಸಿದ ಪ್ರಥಮ್
ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ
ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?
ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?
ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು
ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು