AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ್​, ಮೈಸೂರು

ರಾಮ್​, ಮೈಸೂರು

Author - TV9 Kannada

ram.puttaswamy@tv9.com

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ಹುಣಸೂರು ಚಿನ್ನದಂಗಡಿ ಕಳ್ಳತನ: ಪೊಲೀಸ್ರು ಚಾಪೆ ಕೆಳಗೆ ನುಗ್ಗಿದ್ರೆ, ರಂಗೋಲಿ ಕೆಳಗಡೆ ತೂರಿದ ದರೋಡೆಕೋರರು

ಹುಣಸೂರು ಚಿನ್ನದಂಗಡಿ ಕಳ್ಳತನ: ಪೊಲೀಸ್ರು ಚಾಪೆ ಕೆಳಗೆ ನುಗ್ಗಿದ್ರೆ, ರಂಗೋಲಿ ಕೆಳಗಡೆ ತೂರಿದ ದರೋಡೆಕೋರರು

ಮೈಸೂರು ಜಿಲ್ಲೆಯ ಹುಣಸೂರಿನ ಸ್ಕೈ ಗೋಲ್ಡ್ ಆ್ಯಂಡ್​ ಡೈಮಂಡ್ ಅಂಗಡಿ ದರೋಡೆ ನಡೆದು 6 ದಿನಗಳಾದರೂ ಕಳ್ಳರು ಪತ್ತೆಯಾಗಿಲ್ಲ. ಸುಮಾರು 10 ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಿದ್ದ ಆರೋಪಿಗಳು ವ್ಯವಸ್ಥಿತವಾಗಿ ಪರಾರಿಯಾಗಿದ್ದಾರೆ. ಈ ಮಧ್ಯೆ ಮೈಸೂರು ಎಸ್ಪಿ ವರ್ಗಾವಣೆಯು ತನಿಖೆಗೆ ಹಿನ್ನಡೆ ಉಂಟುಮಾಡಬಹುದೆಂಬ ಚರ್ಚೆಗಳು ನಡೆದಿವೆ.

  • Ram
  • Updated on: Jan 2, 2026
  • 9:29 pm
ಹೂ, ಎಲೆಗಳ ಸಿಂಗಾರ: ಹೊಸ ವರ್ಷದ ಮೊದಲ ದಿನ ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ

ಹೂ, ಎಲೆಗಳ ಸಿಂಗಾರ: ಹೊಸ ವರ್ಷದ ಮೊದಲ ದಿನ ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಹೊಸ ವರ್ಷ 2026 ಅನ್ನು ಅದ್ದೂರಿಯಾಗಿ ಆಚರಿಸಲಾಯಿತು. ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜಾ ಕೈಂಕರ್ಯಗಳು, ಅಭಿಷೇಕ, ಮಂಗಳಾರತಿ ಹಾಗೂ ಆಕರ್ಷಕ ಪುಷ್ಪಾಲಂಕಾರ ಸೇವೆಗಳು ನೆರವೇರಿದವು. ರಾಜ್ಯ, ಹೊರ ರಾಜ್ಯ ಹಾಗೂ ದೇಶ-ವಿದೇಶಗಳಿಂದಲೂ ಆಗಮಿಸಿದ ಭಕ್ತರು ದೇವಿಯ ದರ್ಶನ ಪಡೆದು ಪುನೀತರಾದರು.

  • Ram
  • Updated on: Jan 1, 2026
  • 12:08 pm
ಹುಣಸೂರು ಚಿನ್ನದಂಗಡಿ ದರೋಡೆ: ರಾಬರಿ ಆಗಿದ್ದು 7 ಕೆ.ಜಿ ಬಂಗಾರ; ಡೈಮಂಡ್​​ ಕೂಡ ಕಳವು

ಹುಣಸೂರು ಚಿನ್ನದಂಗಡಿ ದರೋಡೆ: ರಾಬರಿ ಆಗಿದ್ದು 7 ಕೆ.ಜಿ ಬಂಗಾರ; ಡೈಮಂಡ್​​ ಕೂಡ ಕಳವು

ಹುಣಸೂರು ಬಸ್ ನಿಲ್ದಾಣದ ಹಿಂಭಾಗದ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ʼ ಚಿನ್ನಂಗಡಿಯಲ್ಲಿ ಕಳುವಾಗಿರೋದು ಸುಮಾರು 7 ಕೆಜಿ ಬಂಗಾರ ಮತ್ತು ಡೈಮಂಡ್​​ ಎಂಬುದು ಪೊಲೀಸ್​​ ತನಿಖೆ ವೇಳೆ ದೃಢಪಟ್ಟಿದೆ. ಕೇವಲ ಐದೇ ಐದು ನಿಮಿಷಗಳಲ್ಲಿ ಗೋಲ್ಡ್​​ ಶಾಪ್​​ ರಾಬರಿ ನಡೆಸಲಾಗಿದ್ದು, ಶಾಪ್​​ನ ಮ್ಯಾನೇಜರ್​​ ಮತ್ತು ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಪೂರ್ತಿ ಅಂಗಡಿ ದರೋಡೆ ತಪ್ಪಿದೆ ಎನ್ನಲಾಗಿದೆ.

  • Ram
  • Updated on: Dec 29, 2025
  • 1:02 pm
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಗ್ಯಾಂಗ್​​ ಎಸ್ಕೇಪ್​

ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಗ್ಯಾಂಗ್​​ ಎಸ್ಕೇಪ್​

ಚಿನ್ನದಂಗಡಿಗೆ ನುಗ್ಗಿದ ಗ್ಯಾಂಗ್​​ ಕೇವಲ ಐದೇ ನಿಮಿಷಗಳಲ್ಲಿ ಕೆಜಿಗಟ್ಟಲೆ ಬಂಗಾರ ದರೋಡೆ ನಡೆಸಿ ಎಸ್ಕೇಪ್​​ ಆಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಲ್ಲಿ ನಡೆದಿದೆ. ರಾಬರಿ ನಡೆಸಿ ಆರೋಪಿಗಳು ಎಸ್ಕೇಪ್​​ ಆಗುತ್ತಿರುವ Exclusive ದೃಶ್ಯ ಟಿವಿ9ಗೆ ಲಭ್ಯವಾಗಿದ್ದು, ರಾಬರಿ ಗ್ಯಾಂಗ್​​ ಪ್ಲ್ಯಾನ್​​ ಕಂಡು ಪೊಲೀಸರೇ ಶಾಕ್​​ ಆಗಿದ್ದಾರೆ.

  • Ram
  • Updated on: Dec 29, 2025
  • 11:47 am
ಹುಣಸೂರಿನಲ್ಲಿ ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ

ಹುಣಸೂರಿನಲ್ಲಿ ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ

ಹುಣಸೂರು (Hunsur) ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ (Robbery) ನಡೆದಿದೆ. ಹುಣಸೂರು ಬಸ್ ನಿಲ್ದಾಣದ (Hunsur Bus Stand) ಹಿಂಭಾಗದಲ್ಲಿ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ʼ ಚಿನ್ನಂಗಡಿಗೆ ನುಗ್ಗಿದ 5ಕ್ಕೂ ಹೆಚ್ಚು ಜನರ ಗ್ಯಾಂಗ್‌, ಸಿಬ್ಬಂದಿಗೆ ಗನ್ ತೋರಿಸಿ 4 ರಿಂದ 5 ಕೋಟಿ ರೂ. ಮೌಲ್ಯದ ಚಿನ್ನ ಮತ್ತು ವಜ್ರಾಭರಣಗಳನ್ನ ದರೋಡೆ ಮಾಡಿ ಪರಾರಿಯಾಗಿದೆ.

  • Ram
  • Updated on: Dec 28, 2025
  • 6:11 pm
ಮೈಸೂರಿನಲ್ಲಿ  ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ

ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ

ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಹಾಡಹಗಲೇ ಚಿನ್ನದಂಗಡಿ ದರೋಡೆಯಾಗಿದೆ. ಹುಣಸೂರು ಬಸ್ ನಿಲ್ದಾಣ ಹಿಂಭಾಗ ಇರುವ ಸ್ಕೈ ಗೋಲ್ಡ್ಸ್ ಆಂಡ್ ಡೈಮಂಡ್ಸ್ ಚಿನ್ನದ ಅಂಗಡಿಗೆ ನುಗ್ಗಿದ ಐವರು ಮುಸುಕುಧಾರಿ ದರೋಡೆಕೋರರು, ಗನ್ ತೋರಿಸಿ ಸುಮಾರು 4 ರಿಂದ 5 ಕೋಟಿ ರೂಪಾಯಿ ಮೌಲ್ಯದ ಚಿನ್ನ ಮತ್ತು ವಜ್ರಾಭರಣಗಳನ್ನು ಲೂಟಿ ಮಾಡಿಕೊಂಡು ಪರಾರಿಯಾಗಿದ್ದಾರೆ. ಬೈಕ್‌ಗಳಲ್ಲಿ ಬಂದಿದ್ದ ಈ ಐವರು ದರೋಡೆಕೋರರು ಅಂಗಡಿಗೆ ನುಗ್ಗಿ ಸಿಬ್ಬಂದಿಯನ್ನು ಗನ್​​​ನಿಂದ ಹೆದರಿಸಿ, ಚೀಲದಲ್ಲಿ ಚಿನ್ನಾಭರಣಗಳನ್ನು ದೋಚಿಕೊಂಡು ಹೋಗಿದ್ದಾರೆ. ಹಾಡಹಗಲೇ ಈ ದರೋಡೆಯಿಂದಾಗಿ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ತನಿಖೆ ನಡೆಸಿದ್ದಾರೆ.

  • Ram
  • Updated on: Dec 28, 2025
  • 5:19 pm
ಮೈಸೂರು ಅರಮನೆ ಬಳಿ ಭಾರಿ ಭದ್ರತಾ ಲೋಪ? ಅತ್ಯಾಧುನಿಕ ಸಿಸಿಟಿವಿ ಕ್ಯಾಮರಾ ಇದ್ದರೂ ಸೆರೆಯಾಗಿಲ್ಲ ಸ್ಫೋಟದ ದೃಶ್ಯ!

ಮೈಸೂರು ಅರಮನೆ ಬಳಿ ಭಾರಿ ಭದ್ರತಾ ಲೋಪ? ಅತ್ಯಾಧುನಿಕ ಸಿಸಿಟಿವಿ ಕ್ಯಾಮರಾ ಇದ್ದರೂ ಸೆರೆಯಾಗಿಲ್ಲ ಸ್ಫೋಟದ ದೃಶ್ಯ!

ಮೈಸೂರು ಅರಮನೆ ಬಳಿ ಹೀಲಿಯಂ ಸಿಲಿಂಡರ್ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿದೆ. ಘಟನೆ ನಡೆದ ಸ್ಥಳದಲ್ಲೇ ಸಲೀಂ ಸಾವನ್ನಪ್ಪಿದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮಂಜುಳಾ ಮತ್ತು ಲಕ್ಷ್ಮೀ ಮೃತಪಟ್ಟಿದ್ದಾರೆ. ಅತ್ಯಾಧುನಿಕ ಸಿಸಿಟಿವಿ ಕ್ಯಾಮೆರಾಗಳಿದ್ದರೂ ಘಟನೆಯ ದೃಶ್ಯಗಳು ಸೆರೆಯಾಗದಿರುವುದು ಭದ್ರತಾ ಲೋಪದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

  • Ram
  • Updated on: Dec 27, 2025
  • 11:01 am
ಮೈಸೂರು ಸ್ಫೋಟ ಪ್ರಕರಣ: ಮುಂದುವರೆದ ಸಾವಿನ ಸರಣಿ, ಮರ್ತೋವ ಮಹಿಳೆ ಸಾವು

ಮೈಸೂರು ಸ್ಫೋಟ ಪ್ರಕರಣ: ಮುಂದುವರೆದ ಸಾವಿನ ಸರಣಿ, ಮರ್ತೋವ ಮಹಿಳೆ ಸಾವು

ಮೈಸೂರು ಅರಮನೆ ಬಳಿ ನಡೆದ ಹೀಲಿಯಂ ಸಿಲಿಂಡರ್ ಸ್ಫೋಟ ದುರಂತದಲ್ಲಿ ಮೃತರ ಸಂಖ್ಯೆ 3ಕ್ಕೇರಿದೆ. ಕುಟುಂಬದವರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬೆಂಗಳೂರು ಮೂಲದ ಮಹಿಳೆ ಚಿಕಿತ್ಸೆ ಫಲಿಸದೆ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇಂದು ಮಧ್ಯಾಹ್ನ ಕೂಡ ಓರ್ವ ಮಹಿಳೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದರು.

  • Ram
  • Updated on: Dec 26, 2025
  • 10:31 pm
ಮೈಸೂರು ಪ್ಯಾಲೆಸ್ ಮುಂಭಾಗ ಸ್ಫೋಟ: ಸಾವಿನ ಸಂಖ್ಯೆ 2ಕ್ಕೆ ಏರಿಕೆ, ಪ್ರಕರಣದ ಸುತ್ತ ಅನುಮಾದ ಹುತ್ತ

ಮೈಸೂರು ಪ್ಯಾಲೆಸ್ ಮುಂಭಾಗ ಸ್ಫೋಟ: ಸಾವಿನ ಸಂಖ್ಯೆ 2ಕ್ಕೆ ಏರಿಕೆ, ಪ್ರಕರಣದ ಸುತ್ತ ಅನುಮಾದ ಹುತ್ತ

Mysuru balloon gas cylinder Blast: ನಿನ್ನೆ(ಡಿಸೆಂಬರ್ 25) ಕ್ರಿಸ್ಮಸ್ ಹಾಲಿಡೇ ದಿನವೇ ಮೈಸೂರು ಅರಮನೆ ಮುಂಭಾಗದಲ್ಲಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ಈಗಾಗಲೇ ಓರ್ವ ಸಾವನ್ನಪ್ಪಿದ್ದು, ಗಾಯಗೊಂಡಿದ್ದ ಮಹಿಳೆಯೋರ್ವಳು ಸಹ ಮೃತಪಟ್ಟಿದ್ದಾಳೆ. ಇದರೊಂದಿಗೆ ಸಾವಿನ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ. ಇನ್ನು ಈ ಪ್ರಕರಣದ ಸುತ್ತ ಹಲವು ಅನುಮಾಗಳು ವ್ಯಕ್ತವಾಗಿದ್ದು, ಪೊಲೀಸರು ಬೇರೆ ಬೇರೆ ಆಯಾಮಗಳಲ್ಲಿ ತನಿಖೆ ನಡೆಸಿದ್ದಾರೆ.

  • Ram
  • Updated on: Dec 26, 2025
  • 5:12 pm
ಕೇವಲ 2 ಸಾವಿರದಲ್ಲಿ BJP ಮಾಜಿ ಎಂಎಲ್​​ಸಿಯ 30 ಕೋಟಿ ರೂ ಆಸ್ತಿ ಲಪಟಾಯಿಸಲು ಯತ್ನ

ಕೇವಲ 2 ಸಾವಿರದಲ್ಲಿ BJP ಮಾಜಿ ಎಂಎಲ್​​ಸಿಯ 30 ಕೋಟಿ ರೂ ಆಸ್ತಿ ಲಪಟಾಯಿಸಲು ಯತ್ನ

ಮೈಸೂರಿನಲ್ಲಿ ಮಾಜಿ ಎಂಎಲ್‌ಸಿಗೆ ಸೇರಿದ 30 ಕೋಟಿ ರೂ ಮೌಲ್ಯದ 22 ನಿವೇಶನಗಳನ್ನು ನಕಲಿ ದಾಖಲೆ ಸೃಷ್ಟಿಸಿ ಲಪಟಾಯಿಸಲು ಖದೀಮರು ಯತ್ನಿಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ನಕಲಿ ಆಧಾರ್, ಪಾನ್‌ ಬಳಸಿ ಇ-ಖಾತಾ ಪಡೆದು ಉಪನೋಂದಣಾಧಿಕಾರಿ ಕಚೇರಿಯಲ್ಲಿ ನೋಂದಣಿಗೆ ಮುಂದಾಗಿದ್ದರು. ಮಾಹಿತಿ ತಿಳಿದು ಸ್ಥಳಕ್ಕಾಗಮಿಸುತ್ತಿದ್ದಂತೆ ಆರೋಪಿಗಳು ಎಸ್ಕೇಪ್ ಆಗಿದ್ದಾರೆ.

  • Ram
  • Updated on: Dec 26, 2025
  • 3:25 pm
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ? ಯಾರು ಏನು ಬೇಕಾದ್ರೂ ಮಾರಾಟ ಮಾಟಬಹುದಾ? ಸಚಿವರು ಹೇಳಿದ್ದಿಷ್ಟು

ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ? ಯಾರು ಏನು ಬೇಕಾದ್ರೂ ಮಾರಾಟ ಮಾಟಬಹುದಾ? ಸಚಿವರು ಹೇಳಿದ್ದಿಷ್ಟು

Mysuru Blast: ಮೈಸೂರು ಅರಮನೆ ಆವರಣದಲ್ಲಿ ಹೀಲಿಯಂ ಸಿಲಿಂಡರ್ ಸ್ಫೋಟಗೊಂಡ ಘಟನೆ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್​ಸಿ ಮಹದೇವಪ್ಪ ಪ್ರತಿಕ್ರಿಯಿಸಿದ್ದಾರೆ. ಪ್ರವಾಸಿ ತಾಣಗಳಲ್ಲಿ ಇಂತಹ ಘಟನೆಗಳನ್ನು ತಪ್ಪಿಸಲು ವ್ಯಾಪಾರಿಗಳ ಮೇಲೆ ನಿಗಾ ಇರಿಸುವ ಮತ್ತು ಅಪಾಯಕಾರಿ ರಾಸಾಯನಿಕಗಳ ಬಳಕೆಯನ್ನು ನಿಷೇಧಿಸುವ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

  • Ram
  • Updated on: Dec 26, 2025
  • 2:01 pm
ಮೈಸೂರು ಅರಮನೆ ಬಳಿ ಸ್ಫೋಟ: ಹತ್ತಾರು ಅನುಮಾನ; ಇಬ್ಬರ ವಿಚಾರಣೆ

ಮೈಸೂರು ಅರಮನೆ ಬಳಿ ಸ್ಫೋಟ: ಹತ್ತಾರು ಅನುಮಾನ; ಇಬ್ಬರ ವಿಚಾರಣೆ

ಮೈಸೂರು ಅರಮನೆ ಬಳಿ ನಡೆದ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಆರಂಭದಲ್ಲಿ ಸಾಮಾನ್ಯವೆಂದು ಭಾವಿಸಲಾಗಿದ್ದ ಈ ಸ್ಫೋಟದಲ್ಲಿ ಗಂಭೀರ ವಿಚಾರಗಳಿರುವ ಸಾಧ್ಯತೆ ಅನುಮಾನಕ್ಕೆ ಕಾರಣವಾಗಿದೆ. ಎನ್‌ಐಎ ಅಧಿಕಾರಿಗಳ ತಂಡ ಮೈಸೂರಿಗೆ ಆಗಮಿಸಿ, ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸಿ ಸಂಪೂರ್ಣ ಮಾಹಿತಿ ಕಲೆ ಹಾಕಲಿದೆ.

  • Ram
  • Updated on: Dec 26, 2025
  • 1:56 pm