ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.
ಹಾನೂರು ಶೂಟೌಟ್ ಕೇಸ್: ಕುಟುಂಬಸ್ಥರನ್ನ ಮನವೊಲಿಸುವಲ್ಲಿ ಹನೂರು ಶಾಸಕ ಸಕ್ಸಸ್, ಕೊಟ್ಟ ಭರವಸೆ ಏನು?
ಚಾಮರಾಜನಗರದ ಹಾನೂರು ತಾಲೂಕಿನ ಶಾಗ್ಯ ಗ್ರಾಮದ ಸಮೀಪದ ಮರಿಮಂಗಲ ಬೀಟ್ನಲ್ಲಿ ಶನಿವಾರ ಮುಂಜಾನೆ ನಡೆದ ಗುಂಡಿನ ದಾಳಿಯಲ್ಲಿ ತೊಮಿಯರ್ ಪಾಳ್ಯದ ಮೂವರು ಮೃತಪಟ್ಟಿರುವ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಮೃತ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಸೇರಿಕೊಂಡು ಭಾರೀ ಪ್ರತಿಭಟನೆ ನಡೆಸಿದ್ದಾರೆ. ಡಿಸಿ, ಪೊಲೀಸ್ ಅಧಿಕಾರಿಗಳ ಮನವಿಗೂ ಕ್ಯಾರೇ ಎನ್ನದೇ ಧರಣೆ ನಡೆಸಿದ್ದು, ಕೊನೆ ಹಾನೂರು ಶಾಸಕ ಕೊಟ್ಟ ಭರವಸೆಯಿಂದಾಗಿ ಪ್ರತಿಭಟನೆ ವಾಪಸ್ ಪಡೆದುಕೊಂಡಿದ್ದಾರೆ.
- Ram
- Updated on: Aug 16, 2026
- 3:31 pm
ಅರಣ್ಯ ಇಲಾಖೆ ಸಿಬ್ಬಂದಿ ಗುಂಡೇಟಿಗೆ ಮೂವರ ಬಲಿ ಪ್ರಕರಣ: ಮೃತರ ಕುಟುಂಬಸ್ಥರ ಒಪ್ಪಿಗೆ ಇಲ್ಲದೆಯೇ ಮುಗಿಯಿತಾ ಪೋಸ್ಟ್ಮಾರ್ಟಮ್?
ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿಯಾದ ಪ್ರಕರಣದಲ್ಲಿ ಮೈಸೂರಿನ ಕೆ.ಆರ್. ಆಸ್ಪತ್ರೆ ಬಳಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮೃತರ ಕುಟುಂಬಸ್ಥರ ಒಪ್ಪಿಗೆ ಇಲ್ಲದೆ, ಪಂಚನಾಮೆ ಹೆಸರಲ್ಲಿ ಸಹಿ ಪಡೆದು ಪೊಲೀಸರು ಪೋಸ್ಟ್ಮಾರ್ಟಮ್ ಮುಗಿಸಿದ್ದಾರೆ ಎಂದು ಮೃತನ ಸಹೋದರಿ ಹಾಗೂ ನರ್ಸ್ ಮಾರ್ಗರೇಟ್ ಗಂಭೀರ ಆರೋಪ ಮಾಡಿದ್ದಾರೆ. ಕೆ.ಆರ್. ಆಸ್ಪತ್ರೆ ಶವಾಗಾರದ ಬಳಿ ಉದ್ವಿಗ್ನ ವಾತಾವರಣ ಮುಂದುವರಿದಿದೆ.
- Ram
- Updated on: Aug 16, 2026
- 2:23 pm
ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಮೈಸೂರಿನ ಬಾಲಕಿ
Mysuru Yukti K: ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಮೈಸೂರಿನ ಯುಕ್ತಿ ಕೆ. ಯು-16 ಲಾಂಗ್ ಜಂಪ್ನಲ್ಲಿ ಚಿನ್ನದ ಪದಕ ಗೆದ್ದು ಹೊಸ ದಾಖಲೆ ನಿರ್ಮಿಸಿದ್ದಾರೆ. ಕೋಚ್ ಪ್ರಭಾಕರ್ ಮಾರ್ಗದರ್ಶನದಲ್ಲಿ ಯುಕ್ತಿ ಈ ಮಹತ್ವದ ಸಾಧನೆ ಮಾಡುವ ಮೂಲಕ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.
- Ram
- Updated on: Aug 13, 2026
- 9:36 pm
ಮೈಸೂರು ಭಾಗದ ಅಸಮಾಧಾನಿತ ಶಾಸಕರ ಸಭೆ: ವಿಚಾರ ತಿಳಿದು ಓಡೋಡಿ ಬಂದ ಯತೀಂದ್ರ
ರಾಜ್ಯದಲ್ಲಿ ನೂತನವಾಗಿ ಡಿಕೆ ಶಿವಕುಮಾರ್ (DK Shivakumar) ನೇತೃತ್ವದ ಸರ್ಕಾರ ಆಡಳಿತಕ್ಕೆ ಬಂದ ಬಳಿಕ, ಅದರಲ್ಲೂ ಸಚಿವ ಸಂಪುಟ ಪುನಾರಚನೆ (Karnataka Cabinet Expansion) ಆದ ಬಳಿಕ ಕಾಂಗ್ರೆಸ್ (Karnataka Congress) ಒಳಗೆ ಅಸಮಾಧಾನದ ಹೊಗೆ ಬಹಿರಂಗವಾಗಿ ಭುಗಿಲೇಳುತ್ತಿದೆ. ಸಚಿವ ಸಂಪುಟ ವಿಸ್ತರಣೆಯಾಗಿ ವಾರ ಕಳೆದರೂ ಇನ್ನೂ ಭಿನ್ನಮತ ಶಮನವಾಗುವ ಲಕ್ಷಣ ಕಾಣುತ್ತಿಲ್ಲ. ಸಿಎಂ ಡಿಕೆ ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಖುದ್ದು ಅಸಮಾಧಾನಿತ ಹಿರಿಯ ಶಾಸಕರ ಮನೆಗೆ ತೆರಳಿ ಮನವೊಲಿಸುವ ಯತ್ನ ನಡೆಸಿದ್ದಾರೆ. ಆದರೂ ಸಹ ಕೆಲ ಹಿರಿಯ ಶಾಸಕರ ಅಸಮಾಧಾನ ತಣ್ಣಗಾಗಿಲ್ಲ. ಇದಕ್ಕೆ ಪೂರಕವೆಂಬಂತೆ ಮೈಸೂರಿನ ಸರ್ಕಾರಿ ಅತಿಥಿ ಗೃಹದಲ್ಲಿ ಮಾಜಿ ಸಚಿವ, ಹಿರಿಯ ನಾಯಕ ಹೆಚ್.ಸಿ ಮಹದೇವಪ್ಪ, ಕೆ. ವೆಂಕಟೇಶ್ ಮತ್ತು ತನ್ವೀರ್ ಸೇಠ್ ಸಭೆ ನಡೆಸಿದ್ದಾರೆ.
- Ram
- Updated on: Aug 11, 2026
- 4:47 pm
ಮೈಸೂರಿನಲ್ಲಿ ಛಿದ್ರವಾಯ್ತಾ ಮಾಜಿ ಸಿಎಂ ಸಿದ್ದರಾಮಯ್ಯ ಟೀಂ?: ಕುತೂಹಲ ಮೂಡಿಸಿದ ಸಚಿವ ಸ್ಥಾನ ವಂಚಿತ ಶಾಸಕರ ಸಭೆ
Karnataka Politics: ಸಚಿವ ಸಂಪುಟ ಸ್ಥಾನ ವಂಚಿತರಾದ ಎಚ್.ಸಿ. ಮಹದೇವಪ್ಪ, ಕೆ. ವೆಂಕಟೇಶ್ ಮತ್ತು ತನ್ವೀರ್ ಸೇಠ್ ಅವರು ಮೈಸೂರಿನಲ್ಲಿ ಪ್ರತ್ಯೇಕ ಸಭೆ ನಡೆಸಿರೋದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಮಾಜಿ ಸಿಎಂ ಸಿದ್ದರಾಮಯ್ಯ ತಂಡದಲ್ಲಿ ಭಿನ್ನಮತದ ಪ್ರಶ್ನೆಗಳು ಉದ್ಭವಿಸಿದೆ. ಆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
- Ram
- Updated on: Aug 11, 2026
- 1:57 pm
ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ
HD Kumaraswamy: ಮೈಸೂರಿನ ಚಾಮುಂಡಿಬೆಟ್ಟಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭೇಟಿ ನೀಡಿದರು. ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಜೆಡಿಎಸ್ ಶಾಸಕರು ಕುಮಾರಸ್ವಾಮಿಗೆ ಸಾಥ್ ನೀಡಿದ್ದಾರೆ. ಬಿಡದಿ ಪಾದಯಾತ್ರೆಗೆ ಚಾಲನೆಗೂ ಮುನ್ನ ಅವರು ದೇಗುಲಕ್ಕೆ ಭೇಟಿ ನೀಡಿರುವುದು ಗಮನ ಸೆಳೆದಿದೆ.
- Ram
- Updated on: Aug 9, 2026
- 9:06 am
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ಮತ್ತೆ ಕಬಿನಿ ಡ್ಯಾಂನಿಂದ ನೀರು ಬಿಡುಗಡೆ ಬಗ್ಗೆ ನದಿ ಪಾತ್ರದವರಿಗೆ ಅಲರ್ಟ್ ನೀಡಲಾಗಿದೆ. ಜಲಾಶಯದ ನೀರಿನ ಮಟ್ಟ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಬಿನಿ ಡ್ಯಾಂನಿಂದ ನೀರು ಹೊರಬಿಡಲು ನಿರ್ಧರಿಸಲಾಗಿದೆ. ಆರಂಭದಲ್ಲಿ 7,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದ್ದು, ಅಗತ್ಯಕ್ಕೆ ಅನುಗುಣವಾಗಿ 10,000-15,000 ಕ್ಯೂಸೆಕ್ವರೆಗೆ ನೀರು ಹೆಚ್ಚಳ ಸಾಧ್ಯತೆ ಇದೆ. ಹೀಗಾಗಿ ನದಿ ಪಾತ್ರದ ಜನರಿಗೆ ಎಚ್ಚರಿಕೆಯಿಂದಿರಲು ಸೂಚನೆ ನೀಡಲಾಗಿದೆ.
- Ram
- Updated on: Aug 7, 2026
- 6:43 pm
ಇಂದು ಕೊನೆಯ ಆಷಾಢ ಶುಕ್ರವಾರ: ನಾಡ ದೇವಿ ಚಾಮುಂಡಿ ಬೆಟ್ಟದಲ್ಲಿ ಭಕ್ತ ಸಾಗರ
ಇಂದು ಆಷಾಢ ಮಾಸದ ಕೊನೆಯ ಶುಕ್ರವಾರದ ಹಿನ್ನೆಲೆಯಲ್ಲಿ ಮೈಸೂರಿನ ನಾಡದೇವಿ ಚಾಮುಂಡೇಶ್ವರಿ ದೇವಾಲಯದಲ್ಲಿ ಭಕ್ತಸಾಗರವೇ ಹರಿದುಬಂದಿದೆ. ದೇವಿಗೆ ಮಹಾಲಕ್ಷ್ಮಿ ಅಲಂಕಾರ ಮಾಡಲಾಗಿದ್ದು, ಭಕ್ತರು ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆಯುತ್ತಿದ್ದಾರೆ. ಸಚಿವರಾದ ಶೋಭಾ ಕರಂದ್ಲಾಜೆ ಮತ್ತು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಸೇರಿದಂತೆ ಅನೇಕ ಗಣ್ಯರು ದೇವಾಲಯಕ್ಕೆ ಭೇಟಿ ನೀಡಿದ್ದಾರೆ.
- Ram
- Updated on: Aug 7, 2026
- 11:35 am
ಬಿಜೆಪಿ-ಕಾಂಗ್ರೆಸ್ ನಡುವೆ ‘ಹಿಂದೂ ರಾಷ್ಟ್ರ’ ಸಮರ: ಸಚಿವ ಯಂತೀಂದ್ರ ಹೇಳಿಕೆ ಬೆನ್ನಲ್ಲೇ ಹೊತ್ತಿಕೊಂಡ ಕಿಡಿ
ಮೈಸೂರಿನಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ನೀಡಿದ "ಹಿಂದೂ ರಾಷ್ಟ್ರ" ಕುರಿತಾದ ಹೇಳಿಕೆಯು ಆಡಳಿತಾರೂಢ ಕಾಂಗ್ರೆಸ್ ಹಾಗೂ ವಿಪಕ್ಷ ಬಿಜೆಪಿಯ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿದೆ. ಭಾರತವನ್ನು ಹಿಂದೂ ರಾಷ್ಟ್ರ ಮಾಡಲು ಹೊರಟರೆ ಜಾತಿ ವ್ಯವಸ್ಥೆ ಹೆಚ್ಚುತ್ತದೆ ಎಂಬ ಸಚಿವ ಯತೀಂದ್ರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ವಿಪಕ್ಷ ನಾಯಕ ಆರ್. ಅಶೋಕ್, ಕಾಂಗ್ರೆಸ್ಗೆ ಹಿಂದುತ್ವದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಕಿಡಿಕಾರಿದ್ದಾರೆ.
- Ram
- Updated on: Aug 6, 2026
- 3:48 pm
ಸಿದ್ದರಾಮಯ್ಯ ಹೈಕಮಾಂಡ್ಗೆ ಕೊಟ್ಟ ಪಟ್ಟಿಯಲ್ಲಿ ಹೆಚ್ಸಿ ಮಹದೇವಪ್ಪ ಹೆಸರಿದ್ದರೂ ಸಚಿವ ಸ್ಥಾನ ತಪ್ಪಿದೆ: ಯತೀಂದ್ರ
ಮೈಸೂರು ಉಸ್ತುವಾರಿ ಸಚಿವರಾಗಿ ಅಧಿಕೃತವಾಗಿ ನೇಮಕಗೊಂಡ ಯತೀಂದ್ರ ಸಿದ್ದರಾಮಯ್ಯ, ಹೆಚ್ಸಿ ಮಹದೇವಪ್ಪ ಅವರಿಗೆ ಸಚಿವ ಸ್ಥಾನ ತಪ್ಪಿದ ಕುರಿತು ಮಾತನಾಡಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಹದೇವಪ್ಪ ಹೆಸರನ್ನು ಶಿಫಾರಸು ಮಾಡಿದ್ದರೂ ಹೈಕಮಾಂಡ್ ಈ ಬಾರಿ ಪರಿಗಣಿಸಿಲ್ಲ ಎಂದರು. ಕುರುಬ ಸಮುದಾಯದ ಅಸಮಾಧಾನ ಮತ್ತು ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಬಿಟ್ಟಿದ್ದರಿಂದ ತನಗೆ ಸಚಿವ ಸ್ಥಾನ ಲಭಿಸಿದೆ ಎಂದು ಯತೀಂದ್ರ ತಿಳಿಸಿದ್ದಾರೆ.
- Ram
- Updated on: Aug 6, 2026
- 12:55 pm
Chamundeshwari Vardhanti Mahotsav: ನಾಡದೇವಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವದ ಸಂಭ್ರಮ!
ನಾಡದೇವಿ ಶ್ರೀ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಚಾಮುಂಡೇಶ್ವರಿ ದೇವಸ್ಥಾನವು ಹಬ್ಬದ ವಾತಾವರಣದಿಂದ ಕಂಗೊಳಿಸುತ್ತಿತ್ತು. ಈ ಮಹತ್ವದ ದಿನದಂದು ದೇವಸ್ಥಾನದಲ್ಲಿ ವಿಶೇಷ ಪೂಜಾ ಕೈಂಕರ್ಯಗಳನ್ನು ಹಮ್ಮಿಕೊಳ್ಳಲಾಗಿತ್ತು. ಬೆಳಗ್ಗೆ 5 ಗಂಟೆಯಿಂದಲೇ ಶ್ರೀ ಚಾಮುಂಡೇಶ್ವರಿ ತಾಯಿಗೆ ವಿಶೇಷ ಅಭಿಷೇಕ ಮತ್ತು ಪೂಜೆಗಳನ್ನು ನೆರವೇರಿಸಲಾಯಿತು.
- Ram
- Updated on: Aug 4, 2026
- 10:06 am
5.50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಎಸಿ ಕಾವ್ಯಾರಾಣಿ
ಮೈಸೂರು ಜಿಲ್ಲೆಯ ಹುಣಸೂರು ಉಪ ವಿಭಾಗಾಧಿಕಾರಿ ಕಾವ್ಯಾರಾಣಿ ಅವರು 5.50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಜಮೀನು ಕಂದಾಯ ಮೇಲ್ಮನವಿ ಇತ್ಯರ್ಥಕ್ಕೆ 10 ಲಕ್ಷ ರೂ. ಬೇಡಿಕೆ ಇಟ್ಟಿದ್ದರು. ದೂರಿನ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ಮಿಂಚಿನ ದಾಳಿ ನಡೆಸಿ ಎಸಿ ಮತ್ತು ಗುಮಾಸ್ತನನ್ನು ವಶಕ್ಕೆ ಪಡೆದಿದ್ದಾರೆ. ಭ್ರಷ್ಟಾಚಾರದ ವಿರುದ್ಧದ ಹೋರಾಟದಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.
- Ram
- Updated on: Aug 3, 2026
- 6:48 pm