ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್ ಮಾಧ್ಯಮದಿಂದ. ಒನ್ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.
ಇಸ್ರೇಲ್ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್: ಅಲ್ಲಿನ ಪರಿಸ್ಥಿತಿ ಬಗ್ಗೆ ಬಿಚ್ಚಿಟ್ಟರು
ಇಸ್ರೇಲ್ ಹಾಗೂ ಇರಾನ್ ನಡುವೆ ಸಂಘರ್ಷ ನಡೆಯುತ್ತಿದ್ದು, ಇದರ ಮಧ್ಯೆ ಇಸ್ರೇಲ್ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ಸೇಫ್ ಆಗಿ ವಾಪಸ್ ಆಗಿದ್ದಾರೆ. ಇಸ್ರೇಲ್ ನಲ್ಲಿ ಸಿಲುಕಿದ್ದ 18 ಕನ್ನಡಿಗರು ಕುವೈತ್ ನಿಂದ ಮುಂಬೈಗೆ ಬಂದು ಅಲ್ಲಿಂದ ಇಂದು (ಜೂನ್ 19) ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.
- Ramesh B Jawalagera
- Updated on: Jun 19, 2025
- 6:47 pm
ಕಾರ್ಯಕ್ರಮಗಳಿಗೆ ಹೊಸ ಕಾನೂನು:ಸಮಾರಂಭಕ್ಕೆ ಅನುಮತಿ ಪಡೆಯುವುದ್ಹೇಗೆ? ಮಸೂದೆಯಲ್ಲೇನಿದೆ?
Karnataka Crowd Control Bill 2025: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜೂನ್ 4ರಂದು ಆರ್ ಸಿಬಿ ಗೆಲುವಿನ ವಿಜಯೋತ್ಸ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ಬರೋಬ್ಬರಿ 11 ಆರ್ ಸಿಬಿ ಅಭಿಮಾನಿಳು ಪ್ರಾಣ ಕಳೆದುಕೊಂಡಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ, ಇಂತಹ ದುರಂತಗಳು ಮರುಕಳಿಸದಂತೆ ಮಹತ್ವದ ಕಾನೂನು ಜಾರಿಗೆ ತರಲು ಮುಂದಾಗೊದೆ. ಹಾಗಾದ್ರೆ, ಈ ಕರಡು ಮಸೂದೆಯಲ್ಲಿ ಏನೇನಿದೆ? ಕಾರ್ಯಕ್ರಮಕ್ಕೆ ಅನುಮತಿ ಪಡೆಯುವುದು ಹೇಗೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
- Ramesh B Jawalagera
- Updated on: Jun 19, 2025
- 6:20 pm
ಗುತ್ತಿಗೆ ಬೆನ್ನಲ್ಲೇ ಅಲ್ಪಸಂಖ್ಯಾತರಿಗೆ ಮತ್ತೊಂದು ಯೋಜನೆಯಲ್ಲಿ ಮೀಸಲಾತಿ ಹೆಚ್ಚಳ: ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ
ಸರ್ಕಾರಿ ಯೋಜನೆಗಳ ಕಾಮಗಾರಿಯಲ್ಲಿ ಮುಸ್ಲಿಂ ಗುತ್ತಿಗೆದಾರರಿಗೆ ಶೇ.4 ರಷ್ಟು ಮೀಸಲಾತಿ ನೀಡಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇದೀಗ ಮತ್ತೊಂದು ಮಹತ್ವದ ತೀರ್ಮಾನ ಕೈಗೊಂಡಿದೆ. ಇಂದು (ಜೂನ್ 19) ನಡೆದ ಸಚಿವ ಸಂಪುಟ ಸಭೆಯಲ್ಲಿ, ವಸತಿ ಯೋಜನೆಯಲ್ಲಿ ಅಲ್ಪ ಸಂಖ್ಯಾತರಿಗೆ ಮೀಸಲಾತಿ ಹೆಚ್ಚಳಕ್ಕೆ ಮಹತ್ವದ ತೀರ್ಮಾನ ಕೈಗೊಂಡಿದೆ.
- Ramesh B Jawalagera
- Updated on: Jun 19, 2025
- 4:03 pm
ತಂದೆ ಬರ್ತ್ ಡೇ ದಿನ ದುರಂತ: ಮರ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಅಕ್ಷಯ್ ಬದುಕಲಿಲ್ಲ
ಮರದ ಕೊಂಬೆ ಬಿದ್ದು ಪ್ರಜ್ಞೆ ಕಳೆದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಕ್ಷಯ್ ಸಾವನ್ನಪ್ಪಿದ್ದಾನೆ. ಜೂನ್ 15 ಭಾನುವಾರ ತಂದೆ ಹುಟ್ಟು ಹಬ್ಬದಂದು ಮಟನ್ ತರಲು ಹೋಗಿ ವಾಪಸ್ ಬರುತ್ತಿದ್ದಾಗ ಬೆಂಗಳೂರಿನ ಶ್ರೀನಿವಾಸ್ ನಗರದ ಬ್ರಹ್ಮ ಮಂದಿರದ ಬಳಿ ಮರದ ಕೊಂಬೆ ಮುರಿದು ಅಕ್ಷಯ್ ತಲೆ ಮೇಲೆ ಬಿದ್ದಿತ್ತು. ಇದರಿಂದ ಗಂಭೀರ ಗಾಯಗೊಂಡಿದ್ದ ಅಕ್ಷಯ್ ಕಳೆದ ಐದು ದಿನಗಳಿಂದ ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿ ಕೊನೆಯುಸಿರೆಳೆದಿದ್ದಾರೆ. ಅಜ್ಜ-ಅಜ್ಜಿಯ ಹೋಮ ಹವನಗಳು, ಪ್ರಾರ್ಥನೆ ಫಲಿಸಲಿಲ್ಲ.
- Ramesh B Jawalagera
- Updated on: Jun 19, 2025
- 3:37 pm
ಮಳೆಹಾನಿ ಸಂತ್ರಸ್ತರಿಗೆ ಪರಿಹಾರ ಬಿಡುಗಡೆ ಮಾಡಿದ ಸರ್ಕಾರ, ಯಾರಿಗೆ ಎಷ್ಟು ಹಣ ಸಿಗುತ್ತೆ?
ಮುಂಗಾರು ಮುನ್ನವೇ ಕರ್ನಾಟಕದಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಜನ ಜೀವನ ಅಸ್ತವ್ಯಸ್ಥವಾಗಿದೆ. ಕೆಲವರು ಮನೆ, ಬೆಳೆ ಕಳೆದುಕೊಂಡು ಕಂಗಾಲಾಗಿದ್ದಾರೆ. ಇದರಿಂದ ರಾಜ್ಯ ಸರ್ಕಾರ 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕಳೆದ 1 ತಿಂಗಳಿನಲ್ಲಿ ಉಂಟಾದ ಅತಿವೃಷ್ಟಿ / ಪ್ರವಾಹದಿಂದ ಹಾನಿಯಾದ ಮನೆಗಳ ಹಾಗೂ ಮನೆಯ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ಥರಿಗೆ ಪರಿಹಾರ ಬಿಡುಗಡೆ ಮಾಡಿದೆ.
- Ramesh B Jawalagera
- Updated on: Jun 18, 2025
- 6:46 pm
ಮರದ ಕೊಂಬೆ ಬಿದ್ದು ಅಕ್ಷಯ್ ಬ್ರೈನ್ ಡೆಡ್: ಮೊಮ್ಮಗನಿಗಾಗಿ ದೇವರ ಮೊರೆ ಹೋದ ಅಜ್ಜ-ಅಜ್ಜಿ
ಬೆಂಗಳೂರಿನ ಬನಶಂಕರಿ 2ನೇ ಹಂತದ ಶ್ರೀನಿವಾಸ ನಗರದಲ್ಲಿ ಮರದ ಕೊಂಬೆ ಬೈಕ್ ಸವಾರನ ಮೇಲೆ ಮುರಿದು ಬಿದ್ದ ಪರಿಣಾಮ ಅಕ್ಷಯ್ ಆರೋಗ್ಯ ಗಂಭೀರವಾಗಿದೆ. ಸಾವು ಬದುಕಿನ ನಡುವೆ ಹೋರಾಡುತ್ತಿರುವ ಬೈಕ್ ಸವಾರ ಅಕ್ಷಯ್ ಸದ್ಯ ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿದ್ದು, ಇತ್ತ ಮೊಮ್ಮಗನ ಜೀವಕ್ಕಾಗಿ ಅಜ್ಜ ಅಜ್ಜಿ ದೇವರ ಮೊರೆ ಹೋಗಿದ್ದಾರೆ.
- Ramesh B Jawalagera
- Updated on: Jun 18, 2025
- 5:56 pm
ಒಂದೇ ದಿನದಲ್ಲಿ 103 ಬೈಕ್ ಟ್ಯಾಕ್ಸಿ ಸೀಜ್: ವೈಟ್ ಬೋರ್ಡ್ ವಾಹನಗಳಿಗೆ ಎಚ್ಚರಿಕೆ ಸಂದೇಶ
ನ್ಯಾಯಾಲಯದ ಆದೇಶದಂತೆ ರಾಜ್ಯದಲ್ಲಿ ಇಂದಿನಿಂದ ಅನಧಿಕೃತ ಬೈಕ್ ಟ್ಯಾಕ್ಸಿ ಸ್ಥಗಿತಗೊಳ್ಳಲಿದೆ. ಆದರೂ ಕೋರ್ಟ್ ಆದೇಶ ಮೀರಿ ಬೆಂಗಳೂರಿನಲ್ಲಿ ಓಡಾಡುತ್ತಿದ್ದ ಕೆಲ ರ್ಯಾಪಿಡೊ, ಊಬರ್, ಓಲಾ ಬೈಕ್ ಟ್ಯಾಕ್ಸಿಗಳನ್ನು ಆರ್ ಟಿಓ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಬೆಂಗಳೂರಿನ ಮೊದಲ ದಿನವೇ 103 ಬೈಕ್ ಟ್ಯಾಕ್ಸಿಗಳನ್ನು ಸೀಜ್ ಮಾಡಲಾಗಿದೆ.
- Ramesh B Jawalagera
- Updated on: Jun 16, 2025
- 9:18 pm
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ವಿಶ್ವ ವಿಖ್ಯಾತ ಜೋಗ ಜಲಪಾತಕ್ಕೆ ಮತ್ತೆ ಜೀವ ಕಳೆಬಂದಿದೆ. ಮುಂಗಾರು ಆರಂಭಕ್ಕೂ ಮುನ್ನ ಮಲೆನಾಡು ಭಾಗದಲ್ಲಿ ಭರ್ಜರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೋಗ ಜಲಪಾತ ಮೈದುಂಬಿ ಧುಮ್ಮುಕ್ಕುತ್ತಿದ್ದು, ಪ್ರವಾಸಿಗರನ್ನು ಮತ್ತೆ ಕೈಬಿಸಿ ಕರೆಯುತ್ತಿದೆ. ಪ್ರಕೃತಿಯ ತಾಣದ ಸೊಬಗನ್ನು ಸವಿಯಲು ಸಹಸ್ರಾರು ಜನ ಬರುತ್ತಿದ್ದು, ಜೋಗದ ಗತವೈಭವಕ್ಕೆ ಮತ್ತೆ ಮೆರಗು ಬಂದಿದೆ.
- Ramesh B Jawalagera
- Updated on: Jun 16, 2025
- 7:58 pm
ಬೆಂಗಳೂರಿಗರ ಗಮನಕ್ಕೆ: ನಗರದಲ್ಲಿ ಈ ದಿನ ಕಾವೇರಿ ನೀರು ಪೂರೈಕೆ ಸ್ಥಗಿತ
ಕಾವೇರಿ 5ನೇ ಹಂತದ ಕಾಮಗಾರಿ ಹಾಗೂ ವಿದ್ಯುತ್ ನಿರ್ವಹಣೆ ಕಾರಣದಿಂದಾಗಿ ಕಾವೇರಿ ನೀರು ಸರಬರಾಜು ಸ್ಥಗಿತ ಅನಿವಾರ್ಯವಾಗಿದೆ. ಹೀಗಾಗಿ ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಈ ಎರಡು ದಿನ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ನಾಗರಿಕರು ಮುಂಜಾಗ್ರತೆಯಾಗಿ ನೀರು ಸಂಗ್ರಹಿಸಿಕೊಳ್ಳುವಂತೆ BWSSB ಮನವಿ ಮಾಡಿದೆ.
- Ramesh B Jawalagera
- Updated on: Jun 16, 2025
- 6:35 pm
ಯುವತಿ ಮೇಲೆ ರ್ಯಾಪಿಡೊ ಚಾಲಕ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..!
ಯುವತಿ ಮೇಲೆ ರ್ಯಾಪಿಡೊ (Rapido) ಬೈಕ್ ಚಾಲಕ ಹಲ್ಲೆ ನಡೆಸಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಮೊದಲು ಆ ಯುವತಿಯೇ ನನ್ನ ಮೇಲೆ ಹಲ್ಲೆ ಮಾಡಿದ್ದು ಎಂದು ಬೈಕ್ ಚಾಲಕ (Bike Rider) ಸುಹಾಸ್ ಆರೋಪಿಸಿದ್ದಾನೆ. ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಶ್ರೇಯಾ ಮೇಲೆ ಹಲ್ಲೆ ಮಾಡಿದ ಬೈಜ್ ಟ್ಯಾಕ್ಸಿ ಚಾಲಕ ಸುಹಾಸ್ ಪ್ರತಿಕ್ರಿಯಿಸಿ ಸ್ಪಷ್ಟನೆ ನೀಡಿದ್ದಾನೆ.
- Ramesh B Jawalagera
- Updated on: Jun 16, 2025
- 5:15 pm
ಬೆಂಗಳೂರಿನ MP, MLAಗಳ ಮೌಲ್ಯಮಾಪನ ರಿಪೋರ್ಟ್ ಕಾರ್ಡ್: ಬಿಜೆಪಿ ಶಾಸಕ ನಂ.1 ಶ್ರೀಮಂತ
ಬೆಂಗಳೂರಿನಿಂದ ಆಯ್ಕೆಯಾಗಿರುವ ನಾಲ್ವರು ಸಂಸದರು ಹಾಗೂ 32 ಶಾಸಕರ ಸಾಧನೆ ಕುರಿತಾಗಿ 'ಸಿವಿಕ್' ಎನ್ನುವ ಸಂಸ್ಥೆ ವರದಿ ಬಿಡುಗಡೆ ಮಾಡಿದೆ. ಕರ್ನಾಟಕ ಸರ್ಕಾರಕ್ಕೆ ಎರಡು ವರ್ಷ ಹಾಗೂ ಕೇಂದ್ರ ಸರ್ಕಾರ ಒಂದು ವರ್ಷ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ “ನಮ್ಮ ನೇತಾ- ನಮ್ಮ ರಿವ್ಯೂ’ ಹೆಸರಿನಲ್ಲಿ ಸಿವಿಕ್ ಎಂಬ ಸಂಸ್ಥೆ ಬಿಡುಗಡೆ ಮಾಡಿರುವ ವರದಿಯಲ್ಲಿ ಬೆಂಗಳೂರಿನ 32 ಶಾಸಕರು ಹಾಗೂ 4 ಸಂಸದರ ಕಾರ್ಯಕ್ಷಮತೆ ಮೌಲ್ಯಮಾಪನ ವಿವರಗಳನ್ನು ಬಹಿರಂಗಪಡಿಸಿದೆ. ಹಾಗೇ ಶಾಸಕರ ಆದಾಯವನ್ನು ಸಹ ಬಿಚ್ಚಿಟ್ಟಿದ್ದು, ಬಿಜೆಪಿ ಶಾಸಕ ಶ್ರೀಮಂತ ಎಂಎಲ್ ಎನಿಸಿಕೊಂಡಿದ್ದಾರೆ. ಹಾಗಾದ್ರೆ, ವರದಿಯಲ್ಲಿ ಏನೇನಿದೆ ಎನ್ನುವ ಸಂಪೂರ್ಣ ವಿವರ ಈ ಕೆಳಗಿನಂತಿದೆ ನೋಡಿ.
- Ramesh B Jawalagera
- Updated on: Jun 16, 2025
- 4:40 pm
NEET UG 2025 ಫಲಿತಾಂಶ: ಕರ್ನಾಟಕದ ನಿಖಿಲ್ಗೆ 17ನೇ ರ್ಯಾಂಕ್: ಇಲ್ಲಿದೆ ಕನ್ನಡಿಗರ ಸಾಧನೆ
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) NEET UG 2025ರ ಫಲಿತಾಂಶವನ್ನು ಪ್ರಕಟಿಸಿದ್ದು, ದೇಶದಾದ್ಯಂತ ಒಟ್ಟು 12.36 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ವೈದ್ಯಕೀಯ ಕೋರ್ಸ್ಗಳಿಗೆ ಪ್ರವೇಶಕ್ಕಾಗಿ ಅರ್ಹತೆ ಪಡೆದಿದ್ದಾರೆ. ಈ ಪೈಕಿ ರಾಜಸ್ಥಾನದ ಮಹೇಶ್ ಕುಮಾರ್ ಫ್ಟಸ್ಟ್ ರ್ಯಾಂಕ್ ಪಡೆದುಕೊಂಡಿದ್ದರೆ, ಕರ್ನಾಟಕದ ನೀಖಿಲ್ ಸೋನದ್ ದೇಶಕ್ಕೆ 17ನೇ ರ್ಯಾಂಕ್ ಪಡೆದುಕೊಂಡಿದ್ದಾರೆ. ಇನ್ನು ಟಾಪ್ 100ರಲ್ಲಿ ಸ್ಥಾನ ಪಡೆದ ರಾಜ್ಯದ ವಿದ್ಯಾರ್ಥಿಗಳ ಪಟ್ಟಿ ಇಲ್ಲಿದೆ.
- Ramesh B Jawalagera
- Updated on: Jun 14, 2025
- 4:37 pm