AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್ ಬಿ. ಜವಳಗೇರಾ

ರಮೇಶ್ ಬಿ. ಜವಳಗೇರಾ

Senior Sub Editor - TV9 Kannada

Ramesh.bheemanna@tv9.com

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow On:
ಪೊಲೀಸರ ವಿರುದ್ಧದ ಲಾಕಪ್ ಡೆತ್ ಕೇಸಿಗೆ ಟ್ವಿಸ್ಟ್: ದರ್ಶನ್ ಕೊಲೆ ರಹಸ್ಯ ಬಯಲು

ಪೊಲೀಸರ ವಿರುದ್ಧದ ಲಾಕಪ್ ಡೆತ್ ಕೇಸಿಗೆ ಟ್ವಿಸ್ಟ್: ದರ್ಶನ್ ಕೊಲೆ ರಹಸ್ಯ ಬಯಲು

ದರ್ಶನ ಎನ್ನುವ ಯುವಕನ ಸಾವು ಪ್ರಕರಣ ಸಂಬಂಧ ಲಾಕ್ ಡೆತ್ ಎಂದು ಪೊಲೀಸರ ವಿರುದ್ಧವೇ ಕೊಲೆ ಕೇಸ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಕೂಡ ಸಸ್ಪೆಂಡ್ ಆಗಿ ಸಿಐಡಿ ತನಿಖೆಗೆ ಇಳಿದಿತ್ತು. ಇದೀಗ ಸಿಐಡಿ ತನಿಖೆಯಲ್ಲಿ ಯುವಕನ ಕೊಲೆಯ ರಹಸ್ಯ ಬಯಲಾಗಿದೆ. ಹಾಗಾದ್ರೆ ದರ್ಶನ್​​ನನ್ನು ಕೊಲೆ ಮಾಡಿದ್ಯಾರು? ಪೊಲೀಸರನ್ನೇ ಕೊಲೆ ಕೇಸಿನಲ್ಲಿ ತಗಲಾಕಿಸಿದ್ಯಾರು? ಇಲ್ಲಿದೆ ಸಿಐಡಿಯ ತನಿಖೆಯ ಸತ್ಯಾಂಶ

ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಗಾಂಧಿ​ ಮಹತ್ವದ ಸಂದೇಶ

ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಗಾಂಧಿ​ ಮಹತ್ವದ ಸಂದೇಶ

ಸಿಎಂ ಹುದ್ದೆ ಬೇಕೆಂದು ಪಟ್ಟು ಹಿಡಿದಿರುವ ಡಿಸಿಎಂ ಡಿಕೆ ಶಿವಕುಮಾರ್, ಈ ಹಿಂದಿನಿಂದಲೂ ದೆಹಲಿಗೆ ಹೋಗಿ ರಾಹುಲ್ ಭೇಟಿಗೆ ಯತ್ನಿಸಿದ್ದರೂ ಅದು ಸಾಧ್ಯವಾಗಿರಲಿಲ್ಲ. ಆದ್ರೆ, ಇಂದು(ಜನವರಿ 13) ಕೊನೆಗೂ ಮೈಸೂರಿನಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುವ ಅವಕಾಶ ಸಿಕ್ಕಿದೆ. ಹೌದು...ತಮಿಳುನಾಡಿಗೆ ತೆರಳು ದೆಹಲಿಯಿಂದ ವಿಮಾನದ ಮೂಲಕ ಮೈಸೂರಿಗೆ ಬಂದಿದ್ದ ರಾಹುಲ್ ಗಾಂಧಿಯವರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಸ್ವಾಗತಿಸಿದರು. ಆದ್ರೆ, ಈ ವೇಳೆ ಡಿಕೆ ಶಿವಕುಮಾರ್ ಅವರು ಸಿಕ್ಕಿದ್ದೇ ಚಾನ್ಸ್ ಎಂದು ರಾಹುಲ್ ಗಾಂಧಿಯವರನ್ನು ಸೈಡಿಗೆ ಕರೆದುಕೊಂಡು ಹೋಗಿ ಮಾತುಕತೆ ನಡೆಸಿದ್ದಾರೆ. ಇದು ಸಿಎಂ ಕುರ್ಚಿಯ ಚರ್ಚೆಯೇ ಎಂಬ ಕುತೂಹಲಕ್ಕೆ ಕಾರಣವಾಗಿದೆ.

ಮೈಸೂರಿನಲ್ಲಿ ಡಿಕೆಶಿ, ಸಿದ್ದರಾಮಯ್ಯ ಜತೆ  ಪ್ರತ್ಯೇಕವಾಗಿ ರಾಹುಲ್ ರಹಸ್ಯ ಮಾತು!

ಮೈಸೂರಿನಲ್ಲಿ ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗಿ ರಾಹುಲ್ ರಹಸ್ಯ ಮಾತು!

ತಮಿಳುನಾಡಿಗೆ ತೆರಳಲು ದೆಹಲಿಯಿಂದ ವಿಮಾನದ ಮೂಲಕ ಮೈಸೂರಿಗೆ ಬಂದ ರಾಹುಲ್ ಗಾಂಧಿಯನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸ್ವಾಗತಿಸಿದರು. ಆದ್ರೆ, ಇದೇ ವೇಳೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಪ್ರತ್ಯೇಕವಾಗಿ ರಾಹುಲ್ ಗಾಂಧಿ ಜತೆ ಮಾತುಕತೆ ನಡೆಸಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಡಿಕೆ ಶಿವಕುಮಾರ್ ರಾಹುಲ್ ಗಾಂಧಿಯನ್ನು ಸೈಡಿಗೆ ಕರೆದುಕೊಂಡು ಹೋಗಿ ಮಾತನಾಡಿದ್ದಾರೆ. ಬಳಿಕ ರಾಹುಲ್ ಗಾಂಧಿ ಡಿಕೆಶಿಯನ್ನು ಬಿಟ್ಟು ಸಿದ್ದರಾಮಯ್ಯನವರನ್ನು ಪಕ್ಕಕ್ಕೆ ಕರೆದುಕೊಂಡು ಚರ್ಚಿಸಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ  ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ: ಪಿಣರಾಯಿಗೆ ಸಿದ್ದರಾಮಯ್ಯ ಕರೆ ಮಾಡುವರೇ?

ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ: ಪಿಣರಾಯಿಗೆ ಸಿದ್ದರಾಮಯ್ಯ ಕರೆ ಮಾಡುವರೇ?

ಹಲವು ದಿನಗಳ ಕಾಲ ಅಯ್ಯಪ್ಪನ ಮಾಲೆ ಧರಿಸಿ ವ್ರತ ಮಾಡಿ ಇದೀಗ ಮಕರ ಜ್ಯೋತಿ ನೋಡಲು ಶಬರಿಮಲೆಯತ್ತ ಹೆಜ್ಜೆ ಹಾಕುತ್ತಿದ್ದಾರೆ. ಆದ್ರೆ,  ಕರ್ನಾಟಕದ ಶಬರಿಮಲೆ (Shabarimale) ಯಾತ್ರಿಗಳಿಗೆ ಕೇರಳದಲ್ಲಿ ನಿರ್ಬಂಧಿಸಲಾಗಿದೆ. ಕರ್ನಾಟಕದ ಅಯ್ಯಪ್ಪ ಭಕ್ತ ವಾಹನಗಳನ್ನು ಶಬರಿಮಲೆಯಿಂದ 60 ಕಿಮೀ ದೂರದಲ್ಲೇ ಅಂದರೆ ಎರುಮಲೈಯಲ್ಲಿ ಕೇರಳ ಪೊಲಿಸರು ತಡೆಯುತ್ತಿದ್ದು, ವಾಹನಗಳನ್ನು ಇಲ್ಲೇ ನಿಲ್ಲಿಸಿ ಶಬರಿಮಲೆಗೆ ಕೇರಳ ಬಸ್​​ನಲ್ಲೇ ತೆರಳುವಂತೆ ತಾಕೀತು ಮಾಡಿದ್ದಾರೆ. ಚಿಕ್ಕಮಗಳೂರು, ಬಾಗಲಕೋಟೆ, ಶಿವಮೊಗ್ಗ, ಸೇರಿದಂತೆ ವಿವಿಧ ಜಿಲ್ಲೆಯಿಂದ ತೆರಳಿದ ಅಯ್ಯಪ್ಪ ಮಾಲಾಧಾರಿಗಳು ಕಂಗಾಲಾಗಿದ್ದು, ಟಿಪಿ ಕಟ್ಟಿ ಬಂದರೂ ಸಹ ನಮ್ಮ ವಾಹನಗಳನ್ನು ತಡೆದಿದ್ದಾರೆ ಎಂದು ಆರೋಪಿಸಿದ್ದಾರೆ. ಇನ್ನು ಕೇರಳ ಪೊಲೀಸರ ವಿರುದ್ಧ ಅಯ್ಯಪ್ಪ ಭಕ್ತರು ರಸ್ತೆಯಲ್ಲೇ ಪ್ರತಿಭಟನೆ ನಡೆಸಿದ್ದು, ಕೇರಳ ಪೊಲೀಸರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಖಾಸಗಿ ಕಂಪನಿ

ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಖಾಸಗಿ ಕಂಪನಿ

ನಾನ್ ಕನ್ನಡಿಗ ಹೆಚ್‌ಆರ್ (Non Kannadiga HR) ಕೆಲಸಕ್ಕೆ ಬೇಕು ಎಂದು ಪ್ರಕಟಣೆ ಹೊರಡಿಸಿ ಕನ್ನಡಿಗರನ್ನು ಕೆರಳಿಸಿದ್ದ ಬೆಂಗಳೂರಿನ ಖಾಸಗಿ ಕಂಪನಿ ಇದೀಗ ಕ್ಷಮೆಯಾಚಿಸಿದೆ. ಬೆಂಗಳೂರಿನ ಜೆಪಿ ನಗರದಲ್ಲಿರುವ ಸ್ಕಿಲ್ ಸೋನಿಕ್ಸ್ (Skill Sonics) ಎಂಬ ಕಂಪನಿ ನಾನ್ ಕನ್ನಡಿಗ ಹೆಚ್‌ಆರ್ ಕೆಲಸಕ್ಕೆ ಬೇಕು ಎಂದು ನೌಕರಿ ಡಾಟ್ ಕಾಮ್‌ನಲ್ಲಿ ಪ್ರಕಟಣೆ ಹೊರಡಿಸಿತ್ತು. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿತ್ತು. ಕನ್ನಡ ಸಂಘಟನೆಯವರು ಜೆಪಿ ನಗರದ ಸಂಸ್ಥೆಯ ವಿರುದ್ಧ ಪ್ರತಿಭಟನೆಗೆ ಸಜ್ಜಾಗಿದ್ದರು. ಸಾಮಾಜಿಕ ಜಾಲಾತಾಣದಲ್ಲಿಯೂ ಈ ಪ್ರಕಟಣೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಈ ಸುದ್ದಿಯನ್ನು ಟಿವಿ9 ಕನ್ನಡ ಸಹ ವರದಿ ಬಿತ್ತರಿಸಿತ್ತು. ವರದಿ ಬೆನ್ನಲ್ಲೇ ಸ್ಕಿಲ್ ಸೋನಿಕ್ಸ್ ಕಂಪನಿ ಮ್ಯಾನೇಜರ್ ಕ್ಷಮೆಯಾಚಿಸಿದ್ದಾರೆ.

ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಕೈ ಶಾಸಕಿ

ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಕೈ ಶಾಸಕಿ

ಮೂಡಿಗೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಅವರ ವಿರುದ್ಧ ಇನ್‌ಸ್ಟಾಗ್ರಾಂನಲ್ಲಿ ಅಶ್ಲೀಲ ಹಾಗೂ ಅವಮಾನಕಾರಿ ಕಾಮೆಂಟ್‌ಗಳನ್ನು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ರಾಮನಗರ ಮೂಲದ ಯಕ್ಷಿತ್ ರಾಜ್ ಎಂಬ ಯುವಕನನ್ನು ಮೂಡಿಗೆರೆ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಸಂಬಂಧ ಖುದ್ದು ‘ಕೈ’ ಶಾಸಕಿ ನಯನಾ ಮೋಟಮ್ಮ ಪ್ರತಿಕ್ರಿಯಿಸಿದ್ದು, ಪರ್ಸನಲ್ ಮತ್ತು ರಾಜಕೀಯ ವಿಚಾರವಾಗಿ 2 ಇನ್​​ಸ್ಟಾಗ್ರಾಮ್ ಖಾತೆ ಇದೆ. ಈ ನಡುವೆ ಪರ್ಸನಲ್ ಖಾತೆಗೆ ಕೆಟ್ಟ ಕಮೆಂಟ್ ಮಾಡುತ್ತಿದ್ದಾರೆ. ವ್ಯಾಯಾಮ ಮಾಡಿದ್ರೂ ತಪ್ಪು, ಬರ್ತ್​​ಡೇ ಆಚರಿಸಿದ್ರೆ ತಪ್ಪಾ? ವಿಶೇಷವಾಗಿ ನಾನು ಮಹಿಳೆಯರ ಪರ ಧ್ವನಿ ಎತ್ತಿದ್ದೇನೆ.ಅಶ್ಲೀಲ ಕಮೆಂಟ್ ಸಂಬಂಧ ಕಾರ್ಯಕರ್ತರು ದೂರು ನೀಡಿದ್ದಾರೆ.ಈಗಾಗಲೇ ಆರೋಪಿಗಳನ್ನು ಅರೆಸ್ಟ್​ ಕೂಡ ಮಾಡಿದ್ದಾರೆ. ನಾನು ಧೈರ್ಯವಾಗಿ ಜೀವನ ಮಾಡ್ತೇನೆ, ನನಗೆ ಯಾರ ಭಯವಿಲ್ಲ ಎಂದು ಗುಡುಗಿದರು.

ಹತ್ತಾರು ಬೈಕ್ ಸುಟ್ಟು ಭಸ್ಮ, 15 ಮನೆಗಳಿಗೆ ಹಾನಿ: ಆಕಸ್ಮಿಕ ಬೆಂಕಿಯೋ, ದ್ವೇಷದ ಕಿಡಿಯೋ?

ಹತ್ತಾರು ಬೈಕ್ ಸುಟ್ಟು ಭಸ್ಮ, 15 ಮನೆಗಳಿಗೆ ಹಾನಿ: ಆಕಸ್ಮಿಕ ಬೆಂಕಿಯೋ, ದ್ವೇಷದ ಕಿಡಿಯೋ?

ಅವರೆಲ್ಲಾ ದಿನಕೂಲಿ ನಂಬಿ ಬದುಕೋರು.. ಆದ್ರೆ ಅವರ ಬದುಕು ಇಂದು ದುಸ್ತರವಾಗಿದೆ. ಜೀವನಕ್ಕೆ ಆಧಾರವಾಗಿದ್ದ ಸ್ಪಂಜುಗಳು ಹೊತ್ತಿ ಉರಿದಿದ್ದು ಸಾಕಷ್ಟು ನಷ್ಟವಾಗಿದೆ. ಹೌದು... ನಿನ್ನೆ ತಡರಾತ್ರಿ 2:30ರ ಸುಮಾರಿಗೆ ಎಲ್ಲರೂ ಕೂಡ ಗಾಢ ನಿದ್ರೆಯಲ್ಲಿದ್ರು. ಆದ್ರೆ ಏಕಾಏಕಿ ಹೊತ್ತಿ ಉರಿದ ಬೆಂಕಿ ಕೂಲಿನಗರದ ನಿವಾಸಿಗಳ ನಿದ್ದೆಯನ್ನ ಹಾಳು ಮಾಡಿ ಬದುಕನ್ನ ಬೀದಿಗೆ ತಂದಿದೆ. ನಂದಿನಿ‌ಲೇಔಟ್‌‌ನ ಕೂಲಿನಗರದ ನಿವಾಸಿಗಳು ಸ್ಪಾಂಜ್‌ಗಳನ್ನ‌ ಮಾರಿ ಜೀವನ ಸಾಗಿಸೋರು. ಹೀಗಾಗಿ ತಮ್ಮ ಮನೆಗಳ ಮೇಲೆ ಸ್ಪಾಂಜ್‌ಗಳ ಮೂಟೆಯನ್ನ ಇರಿಸಿದ್ರು. ಆದ್ರೆ ತಡರಾತ್ರಿ ಏಕಾಏಕಿ ಸ್ಪಾಂಜು ಹೊತ್ತಿ ಉರಿದಿದೆ.

ವರದಾ-ಬೇಡ್ತಿ ನದಿ ಪ್ರಾಜೆಕ್ಟ್ ಖಂಡಿಸಿ ಬೃಹತ್ ಪ್ರತಿಭಟನೆ: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್

ವರದಾ-ಬೇಡ್ತಿ ನದಿ ಪ್ರಾಜೆಕ್ಟ್ ಖಂಡಿಸಿ ಬೃಹತ್ ಪ್ರತಿಭಟನೆ: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್

ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದಲ್ಲಿ ಹರಿಯುವ ಅಘನಾಶಿನಿ-ಬೇಡ್ತಿ ನದಿ ತಿರುವು ಮಾಡಲು ಸರ್ಕಾರ ಮುಂದಾಗಿದೆ. ಈ ಯೋಜನೆಗಳು ಇಡೀ ಜಿಲ್ಲೆಗೆ ಮಾರಕ ಎಂದು ಜಿಲ್ಲೆಯ ಜನರು ಹೋರಾಟಕ್ಕೆ ಮುಂದಾಗಿದ್ದು, ಜಿಲ್ಲೆಯ ಶಿರಸಿಯಲ್ಲಿ ಜನ ಸಮಾವೇಶ ಮೂಲಕ ಸಾವಿರಾರು ಜನರು ಸೇರಿ ಸರ್ಕಾರದ ನಡೆ ವಿರೋಧಿಸಿದ್ದಾರೆ. ಇಂದು (ಜನವರಿ 11) ಶಿರಸಿಯ ಸೋಂದಾ ಸ್ವರ್ಣವಲ್ಲಿ ಮಠದ ಗಂಗಾಧರೇಂದ್ರ ಸ್ವಾಮಿಗಳ ನೇತೃತ್ವದಲ್ಲಿ ಹೋರಾಟ ನಡೆದಿದ್ದು, ಜಿಲ್ಲೆಯ ಎಲ್ಲಾ ಪಕ್ಷದ ಜನಪ್ರತಿನಿಧಿಗಳು, ಮಠಾಧೀಶರು ಸೇರಿದಂತೆ ಸಾವಿರಾರು ಜನರು ಒಂದೆಡೆ ಸೇರಿ ಒಕ್ಕೊರಲಿನಿಂದ ಯೋಜನೆಗೆ ವಿರೋಧ ವ್ಯಕ್ತಪಡಿಸಲಾಯಿತು.

ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಫುಲ್ ಕ್ಲಾಸ್

ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಫುಲ್ ಕ್ಲಾಸ್

ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ವಿಫಲವಾದ ಹಿನ್ನೆಲೆಯಲ್ಲಿ ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಗರಂ ಆಗಿದ್ದು, ಅಧಿಕಾರಿಗೆ ತರಾಟೆಗೆ ತೆಗೆದುಕೊಂಡಿರುವ ಪ್ರಸಂಗ ನಡೆದಿದೆ. ಇಂದು (ಜನವರಿ 11) ಸಿಎಂ ಸಿದ್ದರಾಮಯ್ಯನವರ ತವರು ಕ್ಷೇತ್ರ ವರುಣ ವ್ಯಾಪ್ತಿಯ ಹನುಮನಪುರದಲ್ಲಿ ಯತೀಂದ್ರ ಅವರು ಜನಸಂಪರ್ಕ ಸಭೆ ನಡೆಸಿದ್ದು, ಈ ವೇಳೆ ರೈತರು ಕೆರೆ ನೀರಿನ ಸಮಸ್ಯೆ ಬಗ್ಗೆ ಹೇಳಿಕೊಂಡಿದ್ದಾರೆ. ಇದರಿಂದ ಕೆರಳಿದ ಯತೀಂದ್ರ, ಅಧಿಕಾರಿಗೆ ಕರೆ ಮಾಡಿ ಮುಖ್ಯಮಂತ್ರಿಗಳ ಕ್ಷೇತ್ರದಲ್ಲೇ ಹೀಗೆ ಮಾಡಿದರೆ ಏನು? ಜನಸಂಪರ್ಕ ಸಭೆ ಸುಮ್ಮನೆ ಮಾಡುತ್ತಿದ್ದೀವಾ? ಎಂದು ಕೆಂಡಮಂಡಲರಾಗಿದ್ದು, ಕೂಡಲೇ ಅಧಿಕಾರಿ ಮೇಲೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಖಡಕ್ ಎಚ್ಚರಿಕೆ

ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಖಡಕ್ ಎಚ್ಚರಿಕೆ

ವರದಾ-ಬೇಡ್ತಿ ನದಿ ಜೋಡಣೆ ವಿವಾದ ಇದೀಗ ಮತ್ತೊಮ್ಮೆ ಮುನ್ನಲೆಗೆ ಬಂದಿದೆ. ವ್ಯಾಪಕ ವಿರೋಧದ ನಡುವೆಯೂ ಬೇಡ್ತಿ ಹಾಗೂ ವರದಾ ನದಿಗಳ ಜೋಡಣೆಗೆ ವಿಸ್ತೃತ ಯೋಜನಾ ವರದಿ (ಡಿಪಿಆರ್) ತಯಾರಿಸಲು ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. ಇದರ ಬೆನ್ನಲ್ಲೇ ಉತ್ತರ ಕನ್ನಡದ ಜನರ, ಅದರಲ್ಲೂ ಯಲ್ಲಾಪುರ-ಶಿರಸಿ ಭಾಗದ ಜನರ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಯೋಜನೆಯನ್ನ ವಿರೋಧಿಸಿ ​ಸೋಂದಾ ಸ್ವರ್ಣವಲ್ಲಿ ಮಠಾಧೀಶರಾದ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ನೇತೃತ್ವದಲ್ಲಿ ಇಂದು (ಜನವರಿ 11) ಜನಜಾಗೃತಿ ಸಮಾವೇಶವೂ ನಡೆದಿದ್ದು, ಹೋರಾಟ ತೀವ್ರಗತಿ ಪಡೆದುಕೊಂಡಿದೆ. ಈ ಯೋಜನೆ ಜಿಲ್ಲೆಗೆ ಮಾರಕ ಎಂದು ಒಕ್ಕೊರಲಿನಿಂದ ಖಂಡಿಸಲಾಗಿದ್ದು, ಯೋಜನೆಯನ್ನು ಕೈ ಬಿಡುವಂತೆ ಒತ್ತಾಯಿಸಲಾಗಿದೆ.

ಕೆಲಸಕ್ಕೆ ಬೇಕು, ಆದ್ರೆ ಕನ್ನಡಿಗರು ಬೇಡ್ವಂತೆ: ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ

ಕೆಲಸಕ್ಕೆ ಬೇಕು, ಆದ್ರೆ ಕನ್ನಡಿಗರು ಬೇಡ್ವಂತೆ: ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ

ಖಾಸಗಿ ಕಂಪನಿಗಳು ಕನ್ನಡ ನೆಲದಲ್ಲಿದ್ರೂ, ಕನ್ನಡಿಗರನ್ನ ಕಡೆಗಣಿಸೋದ್ರಲ್ಲಿ ಮುಂದಾಗಿದ್ದಾರೆ. ಕಳೆದ ವಾರ ಕಾಲೇಜ್ ನಲ್ಲಿ ಕನ್ನಡ ಮಾತನಾಡುವುದಕ್ಕೆ ದೊಡ್ಡ ಗಲಾಟೆಯೇ ನಡೆದಿತ್ತು. ಇದೀಗ ಬೆಂಗಳೂರಿನ ಜೆ ಪಿ ನಗರದಲ್ಲಿರುವ 'ಸ್ಕಿಲ್ಸ್ ಸೋನಿಕ್ಸ್' ಅನ್ನೋ ಖಾಸಗಿ ಕಂಪನಿಯಿಂದ ನೌಕ್ರಿ ಡಾಟ್ ಕಾಂ ನಲ್ಲಿ ನೌಕರಿಗಾಗಿ ಪ್ರಕಟಣೆ ಹೊರಡಿಸಿದ್ದು, ಕನ್ನಡ ಗೊತ್ತಿಲ್ಲದ ಅಭ್ಯರ್ಥಿಗಳಿಗೆ ಆದ್ಯತೆ "NON KANNADA HR" ಬೇಕು ಅಂತ ಪ್ರಕಟಣೆ ಕೊಟ್ಟದ್ದಾರೆ. ಈ ಪ್ರಕಟಣೆ ಕನ್ನಡಿಗರನ್ನ ಕೆರಳಿಸಿದ್ದು, ಎಕ್ಸ್ ನಲ್ಲಿ ಭಾರೀ ಟೀಕೆಗೆಗೆ ಗುರಿಯಾಗಿದೆ. ಕೂಡಲೇ ಈ ಪೋಸ್ಟ್ ವಾಪಸ್ಸು ತೆಗೆದುಕೊಳ್ಳಬೇಕು ಇಲ್ಲವಾದ್ರೆ ಉಗ್ರ ಹೋರಾಟ ಮಾಡಲಾಗುತ್ತೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಬೆಂಗಳೂರಿನಲ್ಲಿ ಮಹಿಳಾ ಟೆಕ್ಕಿ ನಿಗೂಢ ಸಾವು ಪ್ರಕರಣಕ್ಕೆ ಟ್ವಿಸ್ಟ್​: ತನಿಖೆಯಲ್ಲಿ ಕೊಲೆ ರಹಸ್ಯ ಬಯಲು!

ಬೆಂಗಳೂರಿನಲ್ಲಿ ಮಹಿಳಾ ಟೆಕ್ಕಿ ನಿಗೂಢ ಸಾವು ಪ್ರಕರಣಕ್ಕೆ ಟ್ವಿಸ್ಟ್​: ತನಿಖೆಯಲ್ಲಿ ಕೊಲೆ ರಹಸ್ಯ ಬಯಲು!

ಬೆಂಗಳೂರಿನ ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಟೆಕ್ಕಿ ಮಹಿಳೆಯ ನಿಗೂಢ ಸಾವು ಪ್ರಕರಣಕ್ಕೆ ಇದೀಗ ಸ್ಪೋಟಕ ತಿರುವು ಸಿಕ್ಕಿದೆ. ಆರಂಭದಲ್ಲಿ ಟೆಕ್ಕಿ ಶರ್ಮಿಳಾ ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾದ ಬೆಂಕಿ ಅವಘಡದಲ್ಲಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿತ್ತು. ಆದ್ರೆ, ಇದೀಗ ವಾಸ್ತವವಾಗಿ ಕೊಲೆ ಎಂಬುದು ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಹಾಗಾದ್ರೆ, ಕೊಲೆ ಮಾಡಿದ್ಯಾರು? ಎನ್ನುವ ವಿವರ ಇಲ್ಲಿದೆ.

ಪ್ರಯಾಗರಾಜ್ ಮಾಘ ಮೇಳದ ಶಿಬಿರದಲ್ಲಿ ಬೆಂಕಿ ಅವಘಡ; 15 ಡೇರೆಗಳು ಸುಟ್ಟು ಭಸ್ಮ
ಪ್ರಯಾಗರಾಜ್ ಮಾಘ ಮೇಳದ ಶಿಬಿರದಲ್ಲಿ ಬೆಂಕಿ ಅವಘಡ; 15 ಡೇರೆಗಳು ಸುಟ್ಟು ಭಸ್ಮ
ಪುದುಚೆರಿಯ ಕಾಲೇಜುಗಳಲ್ಲಿ ಇಂದೇ ಸಂಕ್ರಾಂತಿ ಸಂಭ್ರಮ
ಪುದುಚೆರಿಯ ಕಾಲೇಜುಗಳಲ್ಲಿ ಇಂದೇ ಸಂಕ್ರಾಂತಿ ಸಂಭ್ರಮ
ಯಶ್ ಹುಟ್ಟುಹಬ್ಬಕ್ಕೆ ಮನೆ ಮುಂದೆ ಬ್ಯಾನರ್ ಹಾಕಿದ್ದಕ್ಕೆ ಎಫ್​ಐಆರ್ ದಾಖಲು
ಯಶ್ ಹುಟ್ಟುಹಬ್ಬಕ್ಕೆ ಮನೆ ಮುಂದೆ ಬ್ಯಾನರ್ ಹಾಕಿದ್ದಕ್ಕೆ ಎಫ್​ಐಆರ್ ದಾಖಲು
ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?