ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್ ಮಾಧ್ಯಮದಿಂದ. ಒನ್ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.
ಬೆಂಗಳೂರಿನಲ್ಲಿ ದಿನಕ್ಕೆ ಎಷ್ಟು HMT ವಾಚ್ ತಯಾರಾಗುತ್ತೆ ಗೊತ್ತಾ? ಮಾಹಿತಿ ನೀಡಿದ ಕುಮಾರಸ್ವಾಮಿ
ಬೆಂಗಳೂರಿನಲ್ಲಿರುವ ಹೆಚ್ಎಂಟಿ ಕಾರ್ಖಾನೆ ಬಗ್ಗೆ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಪ್ರಸ್ತಾಪ ಮಾಡಿದ್ದು, ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಹೆಚ್ ಎಂ ಟಿ ಜಮೀನಿನಲ್ಲಿ ರಿಯಲ್ ಎಸ್ಟೇಟ್ ಮಾಡೋಕೆ ಹೊರಟಿದ್ದಿರಾ? ನಾನು ಆಕಸ್ಮಿಕವಾಗಿ ಕೇಂದ್ರದಲ್ಲಿ ಕೈಗಾರಿಕೆ ಸಚಿವನಾಗಿದ್ದೇನೆ. ನನ್ನಕರ್ತವ್ಯ ನಿರ್ವಹಿಸುತ್ತೇನೆ. ನಾನು ಮಂತ್ರಿ ಆದ ಬಳಿಕ ಹೆಚ್ ಎಂಟಿದು ಶುರು ಮಾಡಿದ್ದಾರೆ. ಹೇಗೆ ನಾಶ ಮಾಡಬೇಕಂತ ಹೊರಟಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
- Ramesh B Jawalagera
- Updated on: Jul 6, 2026
- 3:20 pm
Karnataka Weather Forecast: ಆರಂಭದಲ್ಲಿ ಕೈಕೊಟ್ಟಿದ್ದ ಮುಂಗಾರು ಚುರುಕು, ಮುಂದಿನ 5 ದಿನಗಳ ಕಾಲ ಕರ್ನಾಟಕದಲ್ಲಿ ಭಾರಿ ಮಳೆ
Karnataka Monsoon Rain: ಕರ್ನಾಟಕದಲ್ಲಿ ಆರಂಭದಲ್ಲಿ ಕೈಕೊಟ್ಟಿದ್ದ ಮುಂಗಾರು ಮಳೆ ಇದೀಗ ಚುರುಕುಗೊಳ್ಳುತ್ತಿದೆ. ಮುಂದಿನ ಐದು ದಿನಗಳ ಕಾಲ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ, ಎಲ್ಲೆಲ್ಲಿ ಮಳೆಯಾಗಲಿದೆ ಎನ್ನುವ ಹವಾಮಾನ ವರದಿ ಇಲ್ಲಿದೆ.
- Ramesh B Jawalagera
- Updated on: Jul 5, 2026
- 5:41 pm
ಬೆಂಗಳೂರಿಗೆ ಹೊಸ ಪಾರ್ಕಿಂಗ್ ನೀತಿ: ಖಾಲಿ ನಿವೇಶನದಲ್ಲಿ ಪಾರ್ಕಿಂಗ್ ಕೊಟ್ಟರೆ 35 ವರ್ಷ ಟ್ಯಾಕ್ಸ್ ಫ್ರೀ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮತ್ತು ಸಂಚಾರ ಪೊಲೀಸರು ಜಂಟಿಯಾಗಿ ರೂಪಿಸುತ್ತಿರುವ ಪಾರ್ಕಿಂಗ್ ನೀತಿ-2026 ಕರಡು ಪ್ರಕಟವಾಗುವ ಮುನ್ನವೇ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಖಾಲಿ ನಿವೇಶನಗಳಲ್ಲಿ ಮಲ್ಟಿ-ಸ್ಟೋರಿ ಅಥವಾ ಆಟೋಮೇಟೆಡ್ ಪಾರ್ಕಿಂಗ್ ನಿರ್ಮಿಸಿದರೆ 15 ರಿಂದ 35 ವರ್ಷಗಳವರೆಗೆ ಆಸ್ತಿ ತೆರಿಗೆ ವಿನಾಯಿತಿ ನೀಡುವುದಾಗಿ ಸರ್ಕಾರ ಹೇಳಿದೆ. ಆದರೆ ಈ ಆಫರ್ ಹಿಂದೆ ದೊಡ್ಡ ಜಾಲ ಅಡಗಿದೆ ಎಂಬುದು ಆಸ್ತಿ ಮಾಲೀಕರ ಆರೋಪ.
- Ramesh B Jawalagera
- Updated on: Jul 3, 2026
- 10:24 pm
ಕೇವಲ 1 ತಿಂಗಳಲ್ಲಿ ಡಿಕೆಶಿ ಸಾಕಷ್ಟು ಕನಸಿನ ಯೋಜನೆ, ಹತ್ತಾರು ಸವಾಲುಗಳನ್ನ ಮೆಟ್ಟಿ ಆಡಳಿತಕ್ಕೆ ಚುರುಕು
ನೂರಾರು ಸವಾಲು.. ಸಾಕಷ್ಟು ಸಮಸ್ಯೆಗಳು.. ಹಿರಿಯರು, ಕಿರಿಯರು ಒತ್ತಡ.. ತಮ್ಮ ಆಡಳಿತದಲ್ಲಿ ಸಾಕ್ಷಿ ಗುಡ್ಡೆ ಬಿಟ್ಟು ಹೋಗಬೇಕೆಂಬ ಆಸೆ. ಇಷ್ಟೆಲ್ಲಾ ಮನದಲ್ಲಿಟ್ಟುಕೊಂಡ ಡಿಕೆ ಶಿವಕುಮಾರ್ (DK Shivakumar), ತಾವು ಮುಖ್ಯಮಂತ್ರಿ ಯಾಗಿ ಅಧಿಕಾರ ಸ್ವೀಕರಿಸಿಕೊಂಡು ಇಂದಿಗೆ ಬರೋಬ್ಬರಿ ಒಂದು ತಿಂಗಳು ಕಳೆದಿದೆ. ಇದೊಂದು ತಿಂಗಳಲ್ಲಿ ಸಿಎಂ ಡಿಕೆ, ತೆಗೆದುಕೊಂಡ ನಿರ್ಧಾರ, ಎದುರಿಸಿದ ಸಮಸ್ಯೆ, ಸವಾಲುಗಳು ಸಾಕಷ್ಟಿದ್ದರೂ ಆಡಳತಕ್ಕೆ ಹಾಕಿದ ಅಡಿಪಾಯ ರಾಜ್ಯದ ಜನರ ಗಮನ ಸೆಳೆದಿದೆ.
- Ramesh B Jawalagera
- Updated on: Jul 3, 2026
- 8:09 pm
ಕಾವೇರಿ 2.0 ಮೂಲಕ ಕಾಗದ ರಹಿತ ಆಸ್ತಿ ನೋಂದಣಿ ಹೇಗೆ? ಇಲ್ಲಿದೆ ಸರಳ ವಿಧಾನಗಳು
ಆಸ್ತಿ ನೋಂದಣಿಗೆ ಸಾರ್ವಜನಿಕರು ಇಲಾಖೆಗೆ ಅರ್ಜಿಗಳನ್ನು ಸಲ್ಲಿಸಿ ದಿನಗಳಗಟ್ಟಲೆ ಅಲೆದಾಡಬೇಕಾಗಿತ್ತು. ಜೊತೆಗೆ ಮಧ್ಯವರ್ತಿಗಳ ಹಾವಳಿ, ಇವೆರಡನ್ನು ತಪ್ಪಿಸಲು ಕಾವೇರಿ-2.0 ಎಂಬ ಹೊಸ ತಂತ್ರಾಂಶವನ್ನು ಪರಿಚಯಿಸಿದೆ. ಹೀಗಾಗಿ ಆಸ್ತಿ ನೋಂದಣಿಗೆ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ಕಾಯುವ ಅಗತ್ಯವಿಲ್ಲ. ಇದರಿಂದ ನೋಂದಣಿ ಪ್ರಕ್ರಿಯೆ ಕೇವಲ 10 ನಿಮಿಷಗಳಲ್ಲಿ ಪೂರ್ಣಗೊಳ್ಳಲಿದ್ದು, ಡಿಜಿಟಲ್ ದಾಖಲೆಗಳು ಲಭ್ಯವಾಗಲಿದೆ. ಹಾಗಾದ್ರೆ, ಕಾವೇರಿ 2.0 ಮೂಲಕ ಕಾಗದ ರಹಿತ ಆಸ್ತಿ ನೋಂದಣಿ ಹೇಗೆ? ಎನ್ನುವ ಡಿಟೇಲ್ಸ್ ಇಲ್ಲಿದೆ.
- Ramesh B Jawalagera
- Updated on: Jul 3, 2026
- 6:43 pm
ಹಾವೇರಿಯಲ್ಲಿ ಮೋಡ ಬಿತ್ತನೆಗೆ ತೀರ್ಮಾನ: 1 ಗಂಟೆ ಮೋಡ ಬಿತ್ತನೆಗೆ ಎಷ್ಟು ಖರ್ಚು? ವಿವರಿಸಿದ ಶಾಸಕ ಪ್ರಕಾಶ್ ಕೋಳಿವಾಡ
ಮುಂಗಾರು ಮಳೆ ಕೊರತೆಯ ಪರಿಣಾಮ ರಾಜ್ಯದಲ್ಲಿ ಸ್ಪಷ್ಟವಾಗಿ ಗೋಚರಿಸಲಾರಂಭಿಸಿದೆ. ಈ ಹೊತ್ತಿಗಾಗಲೇ ಕೃಷಿ ಚಟುವಟಿಕೆಗಳಲ್ಲಿ ನಿರತರಾಗಿರಬೇಕಿದ್ದ ರೈತರು, ಆಗಸ ನೋಡುತ್ತ ಕುಳಿತಿದ್ದಾರೆ. ಬಿತ್ತನೆ ಚಟುವಟಿಕೆಗಳು ಕುಂಠಿತಗೊಂಡಿದ್ದು, ಬಿತ್ತನೆ ಪ್ರಮಾಣವು ವಾಡಿಕೆಯ ಕಾಲು ಭಾಗವನ್ನೂ ದಾಟಿಲ್ಲ. ಹೀಗಾಗಿ ಈ ಬಾರಿ ಬರಗಾಲ ಆತಂಕ ಮನೆ ಮಾಡಿದೆ. ಇನ್ನೊಂದೆಡೆ ಹಾವೇರಿಯಲ್ಲಿ ಮಳೆಗಾಗಿ ಮೋಡ ಬಿತ್ತನೆಗೆ ಜಿಲ್ಲೆಯ ಶಾಸಕರು ಮುಂದಾಗಿದ್ದಾರೆ. ಹೌದು...ಹಾವೇರಿ ಜಿಲ್ಲೆಯ ಎಲ್ಲಾ ಶಾಸಕರು ಸೇರಿಕೊಂಡು ಸ್ವಂತ ಹಣದಲ್ಲಿ ಮೂರು ದಿನಗಳ ಕಾಲ ಮೋಡ ಬಿತ್ತನೆ ಮಾಡಲು ತಿರ್ಮಾನಿಸಿದ್ದಾರೆ. ಹಾಗಾದ್ರೆ, ಮೋಡ ಬಿತ್ತನೆ ಹೇಗೆ? ಎಷ್ಟು ಹಣ ಖರ್ಚಾಗುತ್ತೆ ಎನ್ನುವುದನ್ನು ಶಾಸಕ ಪ್ರಕಾಶ್ ಕೋಳಿವಾಡ ಮಾಹಿತಿ ಹಂಚಿಕೊಂಡಿದ್ದಾರೆ.
- Ramesh B Jawalagera
- Updated on: Jul 3, 2026
- 4:30 pm
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿದ ಬಳಿಕ ಡಿಕೆಶಿ ಹೇಳಿದ್ದೇನು?
ಮಾಗಡಿ ರಸ್ತೆಯ ಮಾದಪಟ್ಟಣ ಬಳಿ ಕಲ್ಲು ಕ್ವಾರಿಯಲ್ಲಿ ದುರಂತದಲ್ಲಿ ಏಳು ಜನ ಸಾವನ್ನಪ್ಪಿದ್ದು, ಐದಾರು ಕಾರ್ಮಿಕರು ಗಾಯಗೊಂಡಿದ್ದಾರೆ. ಇನ್ನು ಗಾಯಗೊಂಡಿರುವರನ್ನು ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಇದೀಗ ಸಿಎಂ ಡಿಕೆ ಶಿವಕುಮಾರ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು
- Ramesh B Jawalagera
- Updated on: Jul 2, 2026
- 9:17 pm
ದೇಶದ ಆಹಾರ ಭದ್ರತಾ ವ್ಯವಸ್ಥೆ ಬಲಪಡಿಸಲು ದಿಟ್ಟ ನಿರ್ಧಾರ: ಗುಣಮಟ್ಟದ ಅಕ್ಕಿ ಪೂರೈಕೆಗೆ ಕೇಂದ್ರ ಅನುಮೋದನೆ
ಕೇಂದ್ರ ಸರ್ಕಾರವು ದೇಶದ ಆಹಾರ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಐತಿಹಾಸಿಕ ನಿರ್ಧಾರ ಕೈಗೊಂಡಿದೆ. ದೇಶಾದ್ಯಂತ 80 ಕೋಟಿಗೂ ಹೆಚ್ಚು ಅರ್ಹ ಫಲಾನುಭವಿಗಳಿಗೆ ಶ್ರೇಷ್ಠ ಗುಣಮಟ್ಟದ ಆಹಾರ ಧಾನ್ಯ ವಿತರಿಸುವ ನಿಟ್ಟಿನಲ್ಲಿ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರು ಮಹತ್ತರ ಬದಲಾವಣೆಗೆ ನಾಂದಿ ಹಾಡಿದ್ದು, ಇದೀಗ ಕೇಂದ್ರ ಸಚಿವ ಸಂಪುಟ ಗೌರವಯುತ ಆಹಾರ ಪೂರೈಕೆಗೆ ಅನುಮೋದನೆ ನೀಡಿದೆ.
- Ramesh B Jawalagera
- Updated on: Jul 2, 2026
- 8:38 pm
ಮಾಗಡಿ ಬಳಿಯ ಕಲ್ಲು ಕ್ವಾರಿ ದುರಂತದಲ್ಲಿ 7 ಜನ ಸಾವು: ಪ್ರಧಾನಿ ಮೋದಿ ಸಂತಾಪ
ಬೆಂಗಳೂರು ದಕ್ಷಿಣ ತಾಲೂಕಿನ ಮಾದಾಪಟ್ಟಣ ಬಳಿ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವಿಗೀಡಾಗಿರುವ ಘಟನೆ ಇಂದು ನಸುಕಿನ ಜಾವ ನಡೆದಿದೆ. ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಕಾವೇರಿ ಕ್ರಷರ್ನಲ್ಲಿ ನಡೆದಿದೆ. ಇನ್ನು ಅಪಘಡದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ ಸೂಚಿಸಿದ್ದಾರೆ.
- Ramesh B Jawalagera
- Updated on: Jul 2, 2026
- 7:00 pm
ಹಿರಿಯ IAS ಅಧಿಕಾರಿಗಳ ವರ್ಗಾವಣೆ: ಹೊಸ ಪ್ರಜಾಸೇವೆ ಇಲಾಖೆಗೆ ಪ್ರಧಾನ ಕಾರ್ಯದರ್ಶಿ ನೇಮಕ
ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆಯೇ ಪ್ರಮುಖ ಹುದ್ದೆಯ ಅಧಿಕಾರಿಗಳ ವರ್ಗಾವಣೆ ಪರ್ವ ಶುರುವಾಗಿದೆ. ಇನ್ಸ್ಪೆಕ್ಟರ್ನಿಂದ ಹಿಡಿದು ಹಿರಿಯ ಐಎಎಸ್ ಅಧಿಕಾರಿಗಳ ವರ್ಗಾವಣೆ ಆಗುತ್ತಿದೆ. ಅದರಲ್ಲೂ ಮುಖ್ಯವಾಗಿ ಐಎಎಸ್ ಅಧಿಕಾರಿಗಳ ಸಾಲು ಸಾಲು ವರ್ಗಾವಣೆಯಾಗುತ್ತಿದ್ದು, ಇಂದು (ಜುಲೈ 02) ಮತ್ತೆ ಐದು ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಹೊಸದಾಗಿ ಸೃಷ್ಟಿಸಲಾಗಿರುವ ಪ್ರಜಾ ಸೇವಾ ಇಲಾಖೆಗೆ ಪ್ರಧಾನ ಕಾರ್ಯದರ್ಶಿಯನ್ನು ನೇಮಕ ಮಾಡಲಾಗಿದೆ.
- Ramesh B Jawalagera
- Updated on: Jul 2, 2026
- 4:07 pm
ಒಕ್ಕಲಿಗರ ಸಂಘದಲ್ಲಿ ಅವ್ಯವಹಾರದ ವಾಸನೆ: ನೇಮಕದಲ್ಲಿ ಕೋಟಿ ಕೋಟಿ ಭ್ರಷ್ಟಾಚಾರ
ರಾಜ್ಯದ ಪ್ರತಿಷ್ಠಿತ ಸಮುದಾಯ ಸಂಸ್ಥೆಗಳಲ್ಲಿ ಒಂದಾದ ರಾಜ್ಯ ಒಕ್ಕಲಿಗರ ಸಂಘ ದಲ್ಲಿ ಭಾರಿ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಪ್ರೊಫೆಸರ್, ನರ್ಸಿಂಗ್ ನೇಮಕಾತಿಯಲ್ಲಿ ಕೋಟಿ ಕೋಟಿ ಲಂಚದ ಜೊತೆಗೆ 10 ವರ್ಷದ ಬದಲಿಗೆ ಕೇವಲ 3.5 ವರ್ಷ ಅನುಭವ ಇದ್ದವರಿಗೆ ಪ್ರಮೋಷನ್ ಭಡ್ತಿ ನೀಡಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ. ಅಲ್ಲದೇ ವೈದ್ಯಕೀಯ ಉಪಕರಣಗಳ ಖರೀದಿ, ನಕಲಿ ದಾಖಲೆ ಸೃಷ್ಟಿಸಿ ವಂಚನೆ ಮಾಡಲಾಗಿದೆ ಎನ್ನಲಾಗಿದೆ.
- Ramesh B Jawalagera
- Updated on: Jul 1, 2026
- 10:27 pm
KPSC ಅಧ್ಯಕ್ಷರ ಅಧಿಕಾರ ದುರುಪಯೋಗ ಆರೋಪ : ಸಿಎಂಗೆ ಜೋಶಿ ಬರೆದ ಪತ್ರದಲ್ಲೇನಿದೆ?
ಕೆಪಿಸಿಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರು ಪುತ್ರಿಯರಿಗೆ ಸರ್ಕಾರ ಹುದ್ದೆ ಕೊಡಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳೀಬಂದಿದ್ದು, ಒಬ್ಬ ಮಗಳಿಗೆ ಈಗಾಗಲೇ ಸರ್ಕಾರಿ ಉದ್ಯೋಗ ಕೊಡಿಸಿದ್ದಾರೆ, ಮತ್ತೊಬ್ಬ ಮಗಳಿಗೆ ಹುದ್ದೆ ಕೊಡಿಸಲು ಯತ್ನಿಸಿದ್ದಾರೆ ಎನ್ನಲಾಗಿದ್ದು, ಇದಕ್ಕಾಗಿ ಸುಳ್ಳು ಆದಾಯದ ಪ್ರಮಾಣ ಪತ್ರ ಸಲ್ಲಿಕೆಗೂ ಸಹಕರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಕೆಪಿಎಸ್ಸಿ ಅಧ್ಯಕ್ಷರ ಅಧಿಕಾರ ದುರುಪಯೋಗ ಸಂಬಂಧ ಉನ್ನತ ತನಿಖೆಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದ್ದು, ಈ ಸಂಬಂಧ ಸಿಎಂ ಹಾಗೂ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.
- Ramesh B Jawalagera
- Updated on: Jul 1, 2026
- 9:42 pm