ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್ ಮಾಧ್ಯಮದಿಂದ. ಒನ್ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.
ಕರ್ನಾಟಕ ವಿಚಾರ ಬಂದಾಗ ನಾವು ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಸಿಎಂ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ದೆಹಲಿಯಲ್ಲಿ ನಡೆದ ಕರ್ನಾಟಕದ ಎಲ್ಲಾ ಸಂಸದರ ಸಭೆ ಅಂತ್ಯವಾಗಿದ್ದು, ಕೇಂದ್ರ ಸರ್ಕಾರದ ಮುಂದೆ ಬಾಕಿ ಇರುವ 13 ಅಂಶಗಳ ಬಗ್ಗೆ ಚರ್ಚೆಯಾಗಿದೆ. ಇನ್ನು ಸಭೆ ಬಳಿಕ ಬಿಜೆಪಿ ಎಂಪಿ ತೇಜಸ್ವಿ ಸೂರ್ಯ ಮಾತನಾಡಿ, ಸಿಎಂ ಮೊದಲ ಬಾರಿಗೆ ರಾಜ್ಯದ ಸಂಸದರ ಸಭೆ ಕರೆದಿದ್ದರು. ರಾಜ್ಯ ಸರ್ಕಾರದ ಬಾಕಿ ಯೋಜನೆಗಳ ಬಗ್ಗೆ ಚರ್ಚಿಸಲಾಗಿದೆ. ರಾಜ್ಯದ ವಿಚಾರ ಬಂದಾಗ ಪಕ್ಷಾತೀತವಾಗಿ ಕೆಲಸ ಮಾಡುತ್ತೇವೆ. ರಾಜ್ಯದ ವಿಚಾರ ಬಂದಾಗ ನಾವು ಸರ್ಕಾರದ ಜೊತೆ ಇರುತ್ತೇವೆ. ರಾಜ್ಯಕ್ಕಾಗಿ ಪಕ್ಷಾತೀತವಾಗಿ ಕೆಲಸ ಮಾಡುವುದು ನಮ್ಮ ಕರ್ತವ್ಯ ಎಂದರು.
- Ramesh B Jawalagera
- Updated on: Jul 27, 2026
- 10:06 pm
ಕರ್ನಾಟಕದ ಎಲ್ಲ ಸಂಸದರ ಜೊತೆ ಡಿಕೆ ಶಿವಕುಮಾರ್ ಸಭೆ , ಏನೇನು ಚರ್ಚೆ ಆಯ್ತು? ಇಲ್ಲಿದೆ ಡಿಟೇಲ್ಸ್
ಸಂಸತ್ ಅಧಿವೇಶನದಲ್ಲಿ ರಾಜ್ಯದ ಪರವಾಗಿ ಒಗ್ಗಟ್ಟಿನಿಂದ ಧ್ವನಿ ಎತ್ತುವ ಉದ್ದೇಶದಿಂದ ಸಿಎಂ ಡಿಕೆ ಶಿವಕುಮಾರ್ ಅವರು ಎಲ್ಲಾ ಪಕ್ಷದ ಸಂಸದರ ಸಭೆ ನಡೆಸಿದರು. ದೆಹಲಿಯ ಕರ್ನಾಟಕದಲ್ಲಿ ಸಭೆ ಮಾಡಿದ್ದು, ಕರ್ನಾಟಕದ ಕೇಂದ್ರ ಸರ್ಕಾರದ ಮುಂದೆ ಬಾಕಿ ಇರುವ ಯೋಜನೆಗಳ ಬಗ್ಗೆ ಚರ್ಚಿಸಿದ್ದಾರೆ. ಹಾಗಾದ್ರೆ, ಸಭೆಯಲ್ಲಿ ಮಂಡನೆಯಾದ ಅಂಶಗಳಾವುವು? ಯಾರು ಏನೇನು ಹೇಳಿದ್ರು ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
- Ramesh B Jawalagera
- Updated on: Jul 27, 2026
- 9:46 pm
ಡಿಕೆ ಶಿವಕುಮಾರ್ ಗೆ ಹೈ ಸೆಕ್ಯೂರಿಟಿ: ದೆಹಲಿಯಲ್ಲಿ ಸಿಎಂಗೆ ವಿಶೇಷ ಭದ್ರತೆ ನೀಡಿರುವುದು ಇದೇ ಮೊದಲು
ದೆಹಲಿಯಲ್ಲೂ ಸಹ ಮುಖ್ಯಮಂತ್ರಿ ಡಿಕೆ ಶಿವಕುಮಾರ್ಗೆ ಭದ್ರತೆ ಒದಗಿಸಲಾಗಿದೆ. ಬೆಂಗಳೂರಿನ ಭದ್ರತೆ ವ್ಯವಸ್ಥೆ ಮಾದರಿಯಲ್ಲೇ ದೆಹಲಿಯಲ್ಲಿ ಪೊಲೀಸ್ ಭದ್ರತೆ ನೀಡಲಾಗಿದೆ. ಸಚಿವ ಸಂಪುಟ ಹಾಗೂ ಕೇಂದ್ರ ಸಚಿವರ ಭೇಟಿಗೆಂದು ದೆಹಲಿಗೆ ತೆರಳಿರುವ ಡಿಕೆ ಶಿವಕುಮಾರ್ ಅವರಿಗೆ ಇದೇ ಮೊದಲ ಬಾರಿಗೆ ದೆಹಲಿಯಲ್ಲಿ ಭದ್ರತೆ ಒದಗಿಸಲಾಗಿದೆ. ರಾಜ್ಯದ ಮುಖ್ಯಮಂತ್ರಿಯೊಬ್ಬರಿಗೆ ದೆಹಲಿಯಲ್ಲಿ ಇಷ್ಟೊಂದು ವಿಶೇಷ ಭದ್ರತಾ ವ್ಯವಸ್ಥೆ ಕಲ್ಪಿಸಿರುವುದು ಇದೇ ಮೊದಲು ಎನ್ನಲಾಗಿದೆ. ಬೆಂಗಳೂರಿನಿಂದ ಆಗಮಿಸಿದ 7 ಮಂದಿ ಪೊಲೀಸರ ವಿಶೇಷ ತಂಡವು ಸಿಎಂ ಡಿ.ಕೆ.ಶಿವಕುಮಾರ್ ಭದ್ರತೆಯ ಜವಾಬ್ದಾರಿ ವಹಿಸಿಕೊಂಡಿದ್ದು, ಎಸ್ಪಿ, ಇನ್ಸ್ಪೆಕ್ಟರ್ ಸೇರಿದಂತೆ ಹಲವು ಹಂತದ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.
- Ramesh B Jawalagera
- Updated on: Jul 27, 2026
- 6:19 pm
ಪಶುವೈದ್ಯಾಧಿಕಾರಿಗಳ ನೇಮಕಾತಿಗೆ ತಡೆ: ಅಕ್ರಮ ತನಿಖೆಗೆ ಆಂತರಿಕ ವಿಚಾರಣಾ ಉಪಸಮಿತಿ ರಚನೆ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ಇತ್ತ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ) ಅಕ್ರಮಗಳು ಮುನ್ನೆಲೆಗೆ ಬಂದಿದ್ದು, ಕೆಪಿಎಸ್ಸಿ ವಿರುದ್ಧ ಪ್ರತಿಭಟನೆ ಯಾವಾಗ ಎನ್ನುವ ಚರ್ಚೆಗಳು ನಡೆದಿವೆ. ಇದರ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ, ಮೇಜರ್ ಸರ್ಜರಿಗೆ ಮುಂದಾಗಿದೆ.
- Ramesh B Jawalagera
- Updated on: Jul 26, 2026
- 10:13 pm
ನೀಟ್ ಕೇಸ್ ಬಳಿಕ ಎಚ್ಚೆತ್ತ ಕೇಂದ್ರ: ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ದಿಟ್ಟ ನಿರ್ಧಾರ ಕೈಗೊಂಡ ಮೋದಿ, ಏನದು?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ತೀವ್ರ ಸ್ವರೂಪ ಪಡೆದಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವಂತಾಗಿದೆ. ಇದೊಂದು ಕೇಂದ್ರ ಸರ್ಕಾರಕ್ಕೆ ಒಂದು ಕಪ್ಪು ಚುಕ್ಕೆಯಾಗಿದೆ. ಈ ಪ್ರಕರಣ ಬೆನ್ನಲ್ಲೇ ಎಚ್ಚೆತ್ತ ಪ್ರಧಾನಿ ನರೇಂದ್ರ ಮೋದಿ ಮುಂದಿನ ದಿನಗಳಲ್ಲಿ ಈ ರೀತಿಯಾಗದಂತೆ ಬಹುದೊಡ್ಡ ತೀರ್ಮಾನ ಕೈಗೊಂಡಿದ್ದಾರೆ. ಹೌದು.....ಪರೀಕ್ಷಾ ಸುಧಾರಣೆಗಳಿಗಾಗಿ ಟಾಸ್ಕ್ ಫೋರ್ಸ್ ರಚಿಸುವುದಾಗಿ ಖುದ್ದು ಮೋದಿಯೇ ಘೋಷಣೆ ಮಾಡಿದ್ದಾರೆ. ಈ ಸಂಬಂಧ ವಿಡಿಯೋ ಹೇಳಿಕೆ ಬಿಡುಗಡೆ ಪ್ರಧಾನಿ ಮೋದಿ, ಮಾಡಿರುವ ನಂದನ್ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಕಾರ್ಯಪಡೆ ರಚಿಸುವುದಾಗಿ ಘೋಷಣೆ ಮಾಡಿದ್ದಾರೆ.
- Ramesh B Jawalagera
- Updated on: Jul 26, 2026
- 8:33 pm
PM Modi Interaction: ಯುವಕರೊಂದಿಗೆ ಮೋದಿ ಸಂವಾದ ಹೇಗಿತ್ತು? ವಿದ್ಯಾರ್ಥಿಗಳು ಹೇಳಿದ್ದೇನು?
Viksit Vibrant Village Programme 2026: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ‘ವಿಕಸಿತ ರೋಮಾಂಚಕ ಗ್ರಾಮ ಕಾರ್ಯಕ್ರಮ-2026’ದಲ್ಲಿ ಭಾಗವಹಿಸಿದವರೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಂವಾದ ನಡೆಸಿದರು. ‘ಮೈ ಭಾರತ್’ ಮೂಲಕ ಜಾರಿಗೆ ತರಲಾದ ‘ವಿಕಸಿತ ರೋಮಾಂಚಕ ಗ್ರಾಮ ಕಾರ್ಯಕ್ರಮ’ವನ್ನು ಭಾರತದ ಗಡಿ ಗ್ರಾಮಗಳನ್ನು ರಾಷ್ಟ್ರದ ಮೊದಲ ಗ್ರಾಮಗಳೆಂದು ಪರಿಗಣಿಸುವ ಮತ್ತು ವಿಕಸಿತ ಭಾರತದ ಪ್ರಯಾಣದಲ್ಲಿ ಅವುಗಳನ್ನು ಸಕ್ರಿಯ ಪಾಲುದಾರರನ್ನಾಗಿ ಮಾಡುವ ಪ್ರಧಾನಮಂತ್ರಿಯವರ ದೂರದೃಷ್ಟಿಯನ್ನು ಸಾಕಾರಗೊಳಿಸಲು ರೂಪಿಸಲಾಗಿದೆ.
- Ramesh B Jawalagera
- Updated on: Jul 26, 2026
- 6:41 pm
ಚುನಾವಣಾ ರಾಜಕೀಯ ನಿವೃತ್ತಿ ಘೋಷಣೆ ಹಿಂದಿನ ಕಾರಣ ಬಿಚ್ಚಿಟ್ಟ ಸಿದ್ದರಾಮಯ್ಯ
ಕಾಂಗ್ರೆಸ್ ಕರ್ನಾಟಕದಲ್ಲಿ ಪಕ್ಷ ಸಂಘಟನೆ ಬಲಗೊಳಿಸುತ್ತಿದೆ. ಒಂದೆಡೆ ಆಡಳಿತದಲ್ಲಿ ಹಲವು ಅಡೆ ತಡೆ ಎದುರಾದರು ಎಲ್ಲವನ್ನು ಸಮರ್ಥವಾಗಿ ಮುನ್ನಡೆಸಿಕೊಂಡು ಮುನ್ನಡೆಯುತ್ತಿದೆ. ಸಿದ್ದರಾಮಯ್ಯ ಬಳಿಕ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ರಾಜ್ಯದ ಜವಾಬ್ದಾರಿ ಹೊತ್ತುಕೊಂಡಿದ್ದರೆ, ಇತ್ತ ಸಿದ್ದರಾಮಯ್ಯ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ಇನ್ನು ಈ ಬಗ್ಗೆ ತಮ್ಮ ಮನದ ಮಾತು ಹಂಚಿಕೊಂಡಿದ್ದಾರೆ.
- Ramesh B Jawalagera
- Updated on: Jul 26, 2026
- 6:52 pm
PM Narendra Modi Interaction Live: ವಿಕಸಿತ್ ವೈಬ್ರೆಂಟ್ ವಿಲೇಜ್-2026: ಯುವಕರೊಂದಿಗೆ ನರೇಂದ್ರ ಮೋದಿ ಸಂವಾದ ನೇರ ಪ್ರಸಾರ
PM Modi Interaction with Participants of Viksit Vibrant Village Program 2026 Live Streaming: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ‘ವಿಕಸಿತ ರೋಮಾಂಚಕ ಗ್ರಾಮ ಕಾರ್ಯಕ್ರಮ-2026’ದಲ್ಲಿ ಭಾಗವಹಿಸಿದವರೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಂವಾದ ನಡೆಸಿದ್ದಾರೆ. ‘ಮೈ ಭಾರತ್’ ಮೂಲಕ ಜಾರಿಗೆ ತರಲಾದ ‘ವಿಕಸಿತ ರೋಮಾಂಚಕ ಗ್ರಾಮ ಕಾರ್ಯಕ್ರಮ’ವನ್ನು ಭಾರತದ ಗಡಿ ಗ್ರಾಮಗಳನ್ನು ರಾಷ್ಟ್ರದ ಮೊದಲ ಗ್ರಾಮಗಳೆಂದು ಪರಿಗಣಿಸುವ ಮತ್ತು ವಿಕಸಿತ ಭಾರತದ ಪ್ರಯಾಣದಲ್ಲಿ ಅವುಗಳನ್ನು ಸಕ್ರಿಯ ಪಾಲುದಾರರನ್ನಾಗಿ ಮಾಡುವ ಪ್ರಧಾನಮಂತ್ರಿಯವರ ದೂರದೃಷ್ಟಿಯನ್ನು ಸಾಕಾರಗೊಳಿಸಲು ರೂಪಿಸಲಾಗಿದೆ.
- Ramesh B Jawalagera
- Updated on: Jul 26, 2026
- 5:04 pm
ಮೊದಲ ಸಭೆಯಲ್ಲೇ ಅಧಿಕಾರಿಗಳಿಗೆ ಖಡಕ್ ಸಲಹೆ ಸೂಚನೆಗಳನ್ನ ನೀಡಿದ ಪ್ರಲ್ಹಾದ ಜೋಶಿ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ದೇಶದೆಲ್ಲೆಡೆ ಪ್ರತಿಭಟನೆಗಳು ಜೋರಾಗುತ್ತಿದ್ದಂತೆಯೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ನಿನ್ನೆ (ಜುಲೈ 25) ರಾಜೀನಾಮೆ ನೀಡಿದ್ದು, ರಾಷ್ಟ್ರಪತಿ ರಾಜೀನಾಮೆ ಅಂಗೀಕರಿಸುತ್ತಿದ್ದಂತೆಯೇ ಶಿಕ್ಷಣ ಇಲಾಖೆ ಜವಾಬ್ದಾರಿಯನ್ನು ಪ್ರಲ್ಹಾದ್ ಜೋಶಿಗೆ ಅವರಿಗೆ ನೀಡಲಾಗಿದೆ. ಇದರ ಬೆನ್ನಲ್ಲೇ ಜೋಶಿಯವರು ಇಂದು (ಜುಲೈ 26) ಅಧಿಕಾರ ಸ್ವೀಕಾರ ಮಾಡಿದ್ದು, ಮೊದಲ ಸಭೆಯಲ್ಲೇ ಅಧಿಕಾರಿಗಳಿಗೆ ಖಡಕ್ ಸಲಹೆ ಸೂಚನೆಗಳನ್ನ ನೀಡಿದ್ದಾರೆ.
- Ramesh B Jawalagera
- Updated on: Jul 26, 2026
- 2:32 pm
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಗೀಕಾರ, ಪ್ರಲ್ಹಾದ್ ಜೋಶಿಗೆ ಕೇಂದ್ರ ಶಿಕ್ಷಣ ಖಾತೆ ಹೆಚ್ಚುವರಿ ಹೊಣೆ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ ನಿರಂತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಧರ್ಮೇಂದ್ರ ಪ್ರಧಾನ್ ಅವರು ಕೇಂದ್ರ ಶಿಕ್ಷಣ ಖಾತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದೀಗ ಈ ಖಾತೆ ಹೊಣೆಯನ್ನು ಕನ್ನಡಿಗರೊಬ್ಬರಿಗೆ ನೀಡಲಾಗಿದೆ.
- Ramesh B Jawalagera
- Updated on: Jul 25, 2026
- 10:49 pm
ಅತ್ತ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಇತ್ತ ರಾಜ್ಯದ ಸಂಪುಟ ವಿಸ್ತರಣೆ ಸನ್ನಿಹಿತ
ಕರ್ನಾಟಕ ಸಂಪುಟ ವಿಸ್ತರಣೆಗೆ ಹಿಡಿದ ಗ್ರಹಣ ಬಿಡುವ ಲಕ್ಷಣಗಳು ಕಾಣುತ್ತಿವೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿಚಾರದಲ್ಲಿ ಧರ್ಮೇಂದ್ರ ಪ್ರಧಾನ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಹುಲ್ ಗಾಂಧಿ ಹೋರಾಟ ಅಂತ್ಯವಾದಂತಾಗಿದೆ. ಹೀಗಾಗಿ ಇದೀಗ ಕರ್ನಾಟಕದ ಬೆಳವಣಿಗೆ ಕಡೆ ಗಮನ ಕೊಡಲಿದ್ದು, ಮುಂದಿನ ವಾರ ಸಂಪುಟ ವಿಸ್ತರಣೆ ಸಾಧ್ಯತೆ ದಟ್ಟವಾಗಿದೆ. ಈ ಕುರಿತು ಒಂದು ರಿಪೋರ್ಟ್ ಇಲ್ಲಿದೆ.
- Ramesh B Jawalagera
- Updated on: Jul 25, 2026
- 8:20 pm
Karnataka Weather Forecast: ಕರ್ನಾಟಕದಲ್ಲಿ ತಿಂಗಳಾಂತ್ಯದವರೆಗೂ ಮಳೆ,7 ದಿನ ವರುಣನ ಆರ್ಭಟ
ಕರ್ನಾಟಕದಲ್ಲಿ ಈ ಬಾರಿ ವಾಡಿಕೆಗಿಂತ ಮಳೆಯಾಗಿದ್ದು, ಹಲವು ಜಿಲ್ಲೆಗಳಲ್ಲಿ ಬರ ಛಾಯೆ ಆವರಿಸಿದೆ. ಇದರ ನಡುವೆ ಈ ತಿಂಗಳಾಂತ್ಯದಲ್ಲಿ ಮುಂಗಾರು ಮಳೆ ಬಿರುಸುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು...ಮುಂದಿನ ಏಳು ದಿನಗಳ ಕಾಲ ಕರ್ನಾಟಕದ ಹಲವೆಡೆ ಗುಡುಗು, ಗಾಳಿಯೊಂದಿಗೆ ಮಳೆಯಾಗಲಿದೆ ಎಂದಿದೆ. ಹಾಗಾದ್ರೆ, ಎಲ್ಲೆಲ್ಲಿ ಮಳೆಯಾಗಲಿದೆ ಎನ್ನುವ ಹವಾಮಾನ ವರದಿ ಇಲ್ಲಿದೆ.
- Ramesh B Jawalagera
- Updated on: Jul 25, 2026
- 5:48 pm