AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್ ಬಿ. ಜವಳಗೇರಾ

ರಮೇಶ್ ಬಿ. ಜವಳಗೇರಾ

Senior Sub Editor - TV9 Kannada

Ramesh.bheemanna@tv9.com

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow On:
ದುಬೈನಲ್ಲಿ ಕುಳಿತು ಕರಾವಳಿಯಲ್ಲಿ ಕೋಮು ಭಾವನೆ ಕೆರಳಿಸಿ ಮಜಾ ತೆಗೆದುಕೊಳ್ಳುತ್ತಿದ್ದವ ಪೊಲೀಸ್ ಖೆಡ್ಡಕ್ಕೆ

ದುಬೈನಲ್ಲಿ ಕುಳಿತು ಕರಾವಳಿಯಲ್ಲಿ ಕೋಮು ಭಾವನೆ ಕೆರಳಿಸಿ ಮಜಾ ತೆಗೆದುಕೊಳ್ಳುತ್ತಿದ್ದವ ಪೊಲೀಸ್ ಖೆಡ್ಡಕ್ಕೆ

ಕರಾವಳಿ ಮೊದಲೇ ಕೋಮುಸೂಕ್ಷ್ಮ ಪ್ರದೇಶ. ಸ್ವಲ್ಪ ಏನಾದರೂ ಹೆಚ್ಚು ಕಮ್ಮಿ ಆದ್ರೆ ಸಾಕು ಹಿಂದೂ ಮುಸ್ಲಿಂ ಗಲಾಟೆಗಳು, ಕೊಲೆಗಳು ಆಗುತ್ತವೆ. ಹೀಗಾಗಿ ಉಡುಪಿ, ದಕ್ಷಿಣ ಕನ್ನಡ ಕೋಮುಸೂಕ್ಷ್ಮ ಜಿಲ್ಲೆಯಾಗಿದೆ. ಹೀಗಿರುವಾಗ ವ್ಯಕ್ತಿಯೋರ್ವ ದೂರದ ದುಬೈನಲ್ಲಿ ಕುಳಿತು ಮಂಗಳೂರಿನಲ್ಲಿ ಕೋಮು ಭಾವನೆ ಕೆರಳಿಸುವಂತಹ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದ. ಇದೀಗ ಆ ಯುವಕ ಪೊಲೀಸರ ಖೆಡಕ್ಕೆ ಬಿದ್ದಿದ್ದಾನೆ.

ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ,  ವಿಡಿಯೋ ನೋಡಿ

ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ

ಚಾಮರಾಜನಗರ ಜಿಲ್ಲೆ ಗಡಿ ತಮಿಳುನಾಡಿನ ಮಾರ್ಗಮಧ್ಯ ಕಾಡಾನೆಗಳ ಓಡಾಟ ಜೋರಾಗಿದೆ. ಎತ್ತಕಟ್ಟಿ ಬೆಟ್ಟ ಹಾಗೂ ತಾಳವಾಡಿ ಸೇರಿದಂತೆ ಅಕ್ಕ ಪಕ್ಕ ಗ್ರಾಮಗಳ ಬಳಿ ಕಾಡಾನೆಗಳು ಕಾಣಿಸಿಕೊಂಡಿದ್ದು, ಸ್ಥಳೀಯರು ಆತಂಕಗೊಂಡಿದ್ದಾರೆ. ಮುಖ್ಯರಸ್ತೆಯಲ್ಲೇ ಕಾಡಾನೆಗಳು, ಓಡಾಡುತ್ತಿವೆ. ಅದರಲ್ಲೂ ಒಂದು ಆನೆ ದಿಂಬಂ ಘಾಟ್​​​ನಲ್ಲಿ ಪೊಲೀಸರ ರೀತಿ ಲಾರಿಗಳನ್ನು ತಪಾಸಣೆ ನಡೆಸಿದೆ. ಹೌದು... ಚಾಮರಾಜನಗರದಿಂದ ತಮಿಳುನಾಡಿನ ಬಣ್ಣಾರಿಗೆ ತೆರಳುವ ರಸ್ತೆ ಮಧ್ಯೆ ಲಾರಿಗಳನ್ನು ಅಡ್ಡ ಹಾಕಿ ಕಬ್ಬು ತರಕಾರಿ ಕೀಳುತ್ತಿವೆ. ಒಂದು ವೇಳೆ ತಿನ್ನಲು ಲಾರಿಯಲ್ಲಿ ಏನು ಇಲ್ಲದಿದ್ದರೆ ಹಾಗೇ ಕಳುಹಿಸುತ್ತಿದೆ. ವಿಡಿಯೋ ನೋಡುತ್ತಿದ್ದರೆ ಥೇಟ್​​ ಸೇಮ್ ​ ಟು ಸೇಮ್​ ಪೊಲೀಸರ ರೀತಿಯಲ್ಲೇ ಕಾಡಾನೆ ವಾಹನಗಳನ್ನ ಅಡ್ಡ ಹಾಕಿ ಪರಿಶೀಲನೆ ಮಾಡುತ್ತಿದೆ.

ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ ಎಸ್​​ಎಸ್

ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ ಎಸ್​​ಎಸ್

ಕೊಡುಗೈ ದಾನಿ, ಶಿಕ್ಷಣ ಸಂಸ್ಥೆಗಳ ಒಡೆಯ, ಪ್ರಭಾವಿ ವೀರಶೈವ ಲಿಂಗಾಯತ ಸಮಾಜದ ಮುಖಂಡ, ಹಿರಿಯ ರಾಜಕಾರಣಿ, ಮಾಜಿ ಮಂತ್ರಿ, ಹಾಲಿ ಶಾಸಕ ಶಾಮನೂರು ಶಿವಶಂಕರಪ್ಪ ನಿಧನರಾಗಿದ್ದಾರೆ. 94 ವರ್ಷದ ಶಾಮನೂರು ಶಿವಶಂಕರಪ್ಪ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ರು. ಕಳೆದ ಒಂದು ತಿಂಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ರು. ಚಿಕಿತ್ಸೆ ಫಲಿಸದೇ ಇಂದು ಸಂಜೆ 6ಗಂಟೆ 45 ನಿಮಿಷಕ್ಕೆ ಕೊನೆಯುಸಿರೆಳೆದಿದ್ದಾರೆ.

ಮತ್ತೊಂದು ಅಚ್ಚರಿ ಆಯ್ಕೆ: ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಯುವ ನಾಯಕನಿಗೆ ಮಣೆ

ಮತ್ತೊಂದು ಅಚ್ಚರಿ ಆಯ್ಕೆ: ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಯುವ ನಾಯಕನಿಗೆ ಮಣೆ

ಹಲವು ತಿಂಗಳಿನಿಂದ ನೆನೆಗುದಿಗೆ ಬಿದ್ದಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ, ಈ ವರ್ಷಾಂತ್ಯದ ವೇಳೆ ಹೆಸರು ಘೋಷಣೆಯಾಗುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಜೆಪಿ ನಡ್ಡಾ ಅವರ ಸ್ಥಾನಕ್ಕೆ ಬೇರೊಬ್ಬರನ್ನು ಕೂರಿಸಲು ಚಿಂತನೆಗಳು ನಡೆದಿದ್ದು, ರಾಷ್ಟ್ರೀಯ ಅಧ್ಯಕ್ಷರ ರೇಸ್​​​ನಲ್ಲಿ ಹಲವರ ಹೆಸರುಳು ಕೇಳಿಬರುತ್ತಿವೆ. ಇದರ ನಡುವೆ ಇದೀಗ ಬಿಜೆಪಿ ರಾಷ್ಟ್ರೀಯ ಕಾರ್ಯಧ್ಯಕ್ಷರನ್ನ ಆಯ್ಕೆ ಮಾಡಲಾಗಿದ್ದು, ಅತ್ಯಂತ ಕಿರಿಯ, ಯುವ ನಾಯಕನಿಗೆ ಮಣೆಹಾಕಲಾಗಿದೆ. ಹಾಗಾದ್ರೆ, ಕಿರಿಯ ವಯಸ್ಸಿನಲ್ಲೇ ಬಿಜೆಪಿ ಕಾರ್ಯಧ್ಯಕ್ಷರಾಗಿ ಆಯ್ಕೆಯಾದವರು ಯಾರು? ಅವರ ರಾಜಕೀಯ ಹಾದಿ ಈ ಕೆಳಗಿನಂತಿದೆ ನೋಡಿ.

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು? ಆಸ್ಪತ್ರೆ ಮುಖ್ಯಸ್ಥ ಕೊಟ್ಟ ಮಾಹಿತಿ ಹೀಗಿದೆ

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು? ಆಸ್ಪತ್ರೆ ಮುಖ್ಯಸ್ಥ ಕೊಟ್ಟ ಮಾಹಿತಿ ಹೀಗಿದೆ

ಶಾಮನೂರು ಶಿವಶಂಕರಪ್ಪ ನಿಧನದ ಬಗ್ಗೆ ಸ್ಪರ್ಶ ಆಸ್ಪತ್ರೆಯ ಮುಖ್ಯಸ್ಥ, ಅಳಿಯ ಆಗಿರುವ ಡಾ.ಶಾರಣ್ ಶಿವರಾಜ್ ಪಾಟೀಲ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಅಕ್ಟೋಬರ್ 23 ಕ್ಕೆ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ, ಇಂದು 6:20 ಕ್ಕೆ ನಿಧನರಾಗಿದ್ದಾರೆ. ಆಸ್ಪತ್ರೆ ಕಡೆಯಿಂದ ಎಲ್ಲಾ ವ್ಯವಸ್ಥೆ ಮಾಡಿಕೊಂಡಿದ್ದೇವೆ. ಅವರ ಮಗ ಬಂದ ನಂತರ ಮುಂದಿನ ನಿರ್ಧಾರ ಮಾಡಲಾಗುತ್ತೆ ಎಂದು ತಮ್ಮ ಮಾವನ ಸಾವಿನ ಬಗ್ಗೆ ಮಾಹಿತಿ ನೀಡಿದರು.

Shamanur Shivashankarappa Death: ಕಾಂಗ್ರೆಸ್​​​​​ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

Shamanur Shivashankarappa Death: ಕಾಂಗ್ರೆಸ್​​​​​ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

ಶಾಮನೂರು ಶಿವಶಂಕರಪ್ಪ ನಿಧನ: ಕಾಂಗ್ರೆಸ್​​​ನ ಹಿರಿಯ ಶಾಸಕ, ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ (94) ನಿಧನರಾಗಿದ್ದಾರೆ. ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು, ನಾವು ಇನ್ಮುಂದೆ ಜೀವನ ಮಾಡುವುದೇ ಕಷ್ಟ ಎಂದ ಯತ್ನಾಳ್

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು, ನಾವು ಇನ್ಮುಂದೆ ಜೀವನ ಮಾಡುವುದೇ ಕಷ್ಟ ಎಂದ ಯತ್ನಾಳ್

ಶಿವಾಜಿ  ಮಹಾರಾಜರು ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು. ಬಸನಗೌಡ ಇದ್ದವ ನಾನು ಬಷೀರ್‌ ಅಹ್ಮದ್ ಆಗಬೇಕಾಗುತ್ತಿತ್ತು ಎಂದು ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯವಾಡಿದ್ದಾರೆ. ಇಂದು (ಡಿಸೆಂಬರ್ 14) ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ನಡೆದ ಶಿವಾಜಿ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಶಿವಾಜಿ ಮಹಾರಾಜರು ನಮ್ಮ ದೇಶದ ಆದರ್ಶ ವ್ಯಕ್ತಿ. ವಿಜಯಪುರದಲ್ಲಿ ಶಿವಾಜಿ ಪ್ರತಿಮೆ ಕೂರಿಸುವುದು ಸುಲಭ ಅಲ್ಲ, ಏಕೆಂದರೆ ಅಲ್ಲಿ ಪಾಕಿಸ್ತಾನ ಮೇಡ್​ ಬಹಳಷ್ಟಿದೆ ಎಂದು ಕಿಡಿಕಾರಿದರು.

ಪ್ರೀತಿಸಿ ಮೋಸ:  ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ

ಮೊನ್ನೆ ಅಷ್ಟೇ ರಾಯಚೂರಿನಲ್ಲಿ ಯುವತಿಯೋರ್ವಳು, ಪ್ರಿಯಕರನ ಮದುಗೆಗೆ ನುಗ್ಗಿ ಮದ್ವೆಯನ್ನೇ ತಡೆಯುವಲ್ಲಿ ಯಶಸ್ವಿಯಾಗಿದ್ದಳು.  ಹುಡುಗ ತಾಳಿ ಕಟ್ಟುವ ಮುನ್ನವೇ ಸ್ಥಳಕ್ಕೆ ಬಂದು ಮದುವೆ ನಿಲ್ಲಿಸಿದ್ದಳು. ಇದೇ ಮಾದರಿಯ ಮತ್ತೊಂದು ಘಟನೆ ಚಿಕ್ಕಮಗಳೂರಿನಲ್ಲಿ ಬೆಳಕಿಗೆ ಬಂದಿದೆ. ಆದ್ರೆ, ಪ್ರೇಯಿಸಿ ಮಂಟಪ್ಪಕ್ಕೆ ಬರುವಷ್ಟರಲ್ಲೇ ಪ್ರಿಯಕರ ಮತ್ತೋರ್ವ ಯುವತಿಯ ಕುತ್ತಿಗೆ ತಾಳಿ ಕಟ್ಟಿದ್ದ.

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ

ಸಕ್ಕರೆ ನಾಡು ಮಂಡ್ಯ ಕೃಷಿ ಪ್ರಧಾನ ಜಿಲ್ಲೆ. ಇಲ್ಲಿನ ಜನರ ಜೀವನಕ್ಕೆ ಕೃಷಿಯೇ ಆಧಾರ.‌‌ ಒಂದುಕಡೆ ರೈತರು ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ‌ ಸಿಗದೆ ಸಂಕಷ್ಟಕ್ಕೆ ಸಿಲುಕಿದ್ರೆ ಮತ್ತೊಂದೆಡೆ ರೈತರು ತಮ್ಮ ಗಂಡು ಮಕ್ಕಳಿಗೆ ಮದುವೆ ಮಾಡೋದಕ್ಕೆ ಪರಿತಪಿಸುವಂತಾಗಿದೆ. ಕಾರಣ ಹೆಣ್ಣೆತ್ತವರು ರೈತರ ಮಕ್ಕಳಿಗೆ ಹೆಣ್ಣು ಕೊಡೋದಕ್ಕೆ ಹಿಂದೇಟು ಹಾಕ್ತಿದ್ದಾರೆ. ಇದು ಸದ್ಯ ಸಾಮಾಜಿಕ ಪಿಡುಗಾಗಿ ಮಾರ್ಪಾಡಾಗಿದೆ. ಇನ್ನು 35 ವರ್ಷ ಕಳೆದರೂ ಹೆಣ್ಣು ಸಿಗದ್ದಿದ್ದಕ್ಕೆ ಇತ್ತೀಚೆಗೆ ಅವಿವಾಹಿತರು ಮಾದಪ್ಪನ ಮೊರೆಯೋಗಿದ್ರು. ಹೆಣ್ಣು ಸಿಗಲಿ ಅಂತ ಹರಕೆ ಕಟ್ಟಿಕೊಂಡು‌ ಪಾದಯಾತ್ರೆ ನಡೆಸಿದ್ರು. ಇದೀಗ ಅವರ ಪರವಾಗಿ ಬಿಜೆಪಿ ಕಾರ್ಯಕರ್ತರು ವಿನೂತನವಾಗಿ ಪ್ರತಿಭಟನೆ ನಡೆಸಿದ್ದು, ಹೊಸದೊಂದು‌ ಯೋಜನೆ ಜಾರಿಗೆ ತರುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ದರ್ಗಾ ಸಮೀಪ ಕಾರ್ತಿಕ ದೀಪ ಹಚ್ಚಲು ಅನುಮತಿ: ಜಡ್ಜ್ ಪದಚ್ಯುತಿಗೆ ಸಹಿ ಹಾಕಿದ ಕರ್ನಾಟಕದ ಕೈ ಸಂಸದರು

ದರ್ಗಾ ಸಮೀಪ ಕಾರ್ತಿಕ ದೀಪ ಹಚ್ಚಲು ಅನುಮತಿ: ಜಡ್ಜ್ ಪದಚ್ಯುತಿಗೆ ಸಹಿ ಹಾಕಿದ ಕರ್ನಾಟಕದ ಕೈ ಸಂಸದರು

ದರ್ಗಾದ ಸಮೀಪದಲ್ಲಿರುವ ಸ್ಥಳದಲ್ಲಿ ಕಾರ್ತಿಕ ದೀಪ ಬೆಳಗಿಸಲು ಅನುಮತಿ ನೀಡಿ ಕೋರ್ಟ್ ಅನುಮತಿ ನೀಡಿದ್ದು, ಇದರು ಭಾರೀ ಪರ ವಿರೋಧದ ಚರ್ಚೆಗೆ ಗ್ರಾಸವಾಗಿದೆ. ಇದೀಗ ಆದೇಶ ನೀಡಿದ ನ್ಯಾಯಮೂರ್ತಿಯನ್ನು ಪದಚ್ಯುತಿಗೊಳಿಸಬೇಕೆಂಬ ಆಗ್ರಹ ವ್ಯಕ್ತವಾಗಿದ್ದು, ಮಹಾಭಿಯೋಗ ನೋಟೀಸ್‌ಗೆ ಕರ್ನಾಟಕ ಕಾಂಗ್ರೆಸ್​​ನ ಮೂವರು ಸಂಸದರು ಸಹಿ ಹಾಕಿದ್ದಾರೆ.ಈ ಮೂಲಕ ಹಿಂದೂಗಳ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಏನಿದು ಪ್ರಕರಣ? ಸಹಿ ಹಾಕಿದ ಕರ್ನಾಟಕದ ಸಂಸದರು ಯಾರು ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ

ಪ್ರೀತಿಸಿ, ದೈಹಿಕ ಸಂಪರ್ಕ ಬೆಳೆಸಿ ನಂತರ ಮದುವೆಯ ನಾಟಕವಾಡಿ ಮೋಸ ಮಾಡಿದ ಆರೋಪದ ಮೇಲೆ ಯುವಕನೊಬ್ಬನ ಅದ್ಧೂರಿ ಮದುವೆಯನ್ನು (Marriage) ಸಂತ್ರಸ್ತ ಯುವತಿ ನಿಲ್ಲಿಸಿದ ಘಟನೆ ರಾಯಚೂರು (Raichur) ನಗರದಲ್ಲಿ ನಡೆದಿದೆ. ಬಳ್ಳಾರಿಯಲ್ಲಿ ಓದುತ್ತಿದ್ದ ವೇಳೆ ರಿಷಬ್, ಕೊಪ್ಪಳದ ಯುವತಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ಗರ್ಭಪಾತ ಮಾಡಿಸಿ ಕೈಕೊಟ್ಟಿದ್ದು, ಇದೀಗ ಬೇರೆ ಯುವತಿ ಜತೆ ಮದುವೆ ಮಾಡಿಕೊಳ್ಳಲು ಮುಂದಾಗಿದ್ದ.

ಗೃಹ ಲಕ್ಷ್ಮೀ ಯೋಜನೆ ಬಗ್ಗೆ ತಪ್ಪು ಲೆಕ್ಕ ಕೊಟ್ಟ  ಲಕ್ಷ್ಮೀ ಹೆಬ್ಬಾಳ್ಕರ್: 5 ಸಾವಿರ ಕೋಟಿ‌ ಹಣ ಎಲ್ಲಿ ಹೋಯ್ತು?

ಗೃಹ ಲಕ್ಷ್ಮೀ ಯೋಜನೆ ಬಗ್ಗೆ ತಪ್ಪು ಲೆಕ್ಕ ಕೊಟ್ಟ ಲಕ್ಷ್ಮೀ ಹೆಬ್ಬಾಳ್ಕರ್: 5 ಸಾವಿರ ಕೋಟಿ‌ ಹಣ ಎಲ್ಲಿ ಹೋಯ್ತು?

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಈ ವೇಳೆ ಗೃಹ ಲಕ್ಷ್ಮೀ ಯೋಜನೆ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​​ ತಪ್ಪು ಲೆಕ್ಕ ಕೊಟ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. 2025ರ ಆಗಸ್ಟ್​​ ತಿಂಗಳ ವರೆಗೂ ಗೃಹ ಲಕ್ಷ್ಮೀ ಹಣವನ್ನು ಫಲಾನುಭಿಗಳ ಖಾತೆಗಳಿಗೆ ಹಾಕಲಾಗಿದೆ ಎಂದಿದ್ದಾರೆ. ಆದ್ರೆ, ಹಣ ಮಾತ್ರ ಖಾತೆಗಳಿಗೆ ಜಮೆ ಆಗಿಲ್ಲ. ಈ ಬಗ್ಗೆ ಬಿಜೆಪಿ ಶಾಸಕ ದಾಖಲೆ ಬಿಡುಗಡೆ ಮಾಡಿದ್ದು, 5 ಸಾವಿರ ಕೋಟಿ ರೂ. ಹಣದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.