AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್ ಬಿ. ಜವಳಗೇರಾ

ರಮೇಶ್ ಬಿ. ಜವಳಗೇರಾ

Senior Sub Editor - TV9 Kannada

Ramesh.bheemanna@tv9.com

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow On:
ಸತೀಶ್ ಜಾರಕಿಹೊಳಿ ಮೇಲೆ ಇಡಿ ದಾಳಿ:‘ಕೈ’ ಮನೆಯೊಳಗೆ ಷಡ್ಯಂತ್ರದ ಮಾತಿನ ಸದ್ದು:ರಾಜಣ್ಣ ಸ್ಫೋಟಕ ಹೇಳಿಕೆ

ಸತೀಶ್ ಜಾರಕಿಹೊಳಿ ಮೇಲೆ ಇಡಿ ದಾಳಿ:‘ಕೈ’ ಮನೆಯೊಳಗೆ ಷಡ್ಯಂತ್ರದ ಮಾತಿನ ಸದ್ದು:ರಾಜಣ್ಣ ಸ್ಫೋಟಕ ಹೇಳಿಕೆ

ಕರ್ನಾಟಕ ಕಾಂಗ್ರೆಸ್​​ ಮನೆಯೊಳಗೆ ಷಡ್ಯಂತ್ರ, ಪ್ರತಿತಂತ್ರದ ಮಾತುಗಳು ಅಲ್ಲಲ್ಲಿ ಕೇಳಿ ಬರ್ತಿದೆ. ಇಡಿ ದಾಳಿ ಪ್ರಕರಣದಲ್ಲಿ ಸಚಿವ ಸತೀಶ್​ ಜಾರಕಿಹೊಳಿ ಅಂತೂ ನಮ್ಮವರೇ ದೂರು ಕೊಟ್ಟಿರಬಹುದು ಅಂತಾ ಅನುಮಾನವ್ಯಕ್ತಪಡಿಸಿದ್ರು. ಸಿಎಂ ಡಿಕೆಗೂ ಹೇಳಿದ್ದೀನಿ ಅಂದಿದ್ರು. ಆದ್ರೆ ಇದೀಗ ಮಾಜಿ ಸಚಿವ ಕೆ.ಎನ್.ರಾಜಣ್ಣ, ಸತೀಶ್​ ಜಾರಕಿಹೊಳಿ ಪ್ರಕರಣ ಉಲ್ಲೇಖಿಸ್ತಾನೆ, ಮುಡಾ ಕೇಸ್​ನಲ್ಲೂ ದೂರು ಕೊಟ್ಟಿರೋದು ಕಾಂಗ್ರೆಸ್​​ನವರೇ ಅಂತಾ ಹೊಸ ಬಾಂಬ್​ ಸಿಡಿಸಿರೋದು ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಸದ್ದು ಮಾಡ್ತಿದೆ.

ರೇಷನ್ ಕಾರ್ಡ್ ಇ-ಕೆವೈಸಿ ಬಗ್ಗೆ ಬಿಗ್ ಅಪ್ಡೇಟ್ ನೀಡಿದ ಸಚಿವ ರಿಜ್ವಾನ್ ಆರ್ಷದ್, ಬರಲಿದೆ ಮೊಬೈಲ್ ಆ್ಯಪ್

ರೇಷನ್ ಕಾರ್ಡ್ ಇ-ಕೆವೈಸಿ ಬಗ್ಗೆ ಬಿಗ್ ಅಪ್ಡೇಟ್ ನೀಡಿದ ಸಚಿವ ರಿಜ್ವಾನ್ ಆರ್ಷದ್, ಬರಲಿದೆ ಮೊಬೈಲ್ ಆ್ಯಪ್

ಕರ್ನಾಟಕದಲ್ಲಿ ಪಡಿತರ ಚೀಟಿಯ ಇ-ಕೆವೈಸಿ ಟೆನ್ಷನ್​ ಶುರುವಾಗಿದೆ. ಬಿಪಿಎಲ್​-ಎಪಿಎಲ್​ ಕಾರ್ಡ್​​ದಾರರು ಇ-ಕೆವೈಸಿ ಮಾಡಿಸಲು ಮುಗಿಬಿದ್ದಿದ್ದಾರೆ. ಸೆಪ್ಟೆಂಬರ್​ 30 ರಂದು ಕೊನೆಯ ದಿನಾಂಕ ಹಿನ್ನೆಲೆ ನ್ಯಾಯಬೆಲೆ ಅಂಗಡಿಗಳ ಮುಂದೆ ಸಾಲುಗಟ್ಟಿ ನಿಂತಿದ್ದಾರೆ. ಆದ್ರೆ, ಕೆಲವು ಕಡೆ ಸರ್ವರ್​​​ ಡೌನ್​ ಸಮಸ್ಯೆ ಹೆಚ್ಚಾಗಿದ್ದು, ಜನರು ಹೈರಾಣಾಗಿ ಹೋಗಿದ್ದಾರೆ. ಈ ಹಿನ್ನೆಲೆ ರೇಷನ್​ ಕಾರ್ಡ್​ ಇ-ಕೆವೈಸಿ ಡೆಡ್​ಲೈನ್​​ ಬದಲಾಗುತ್ತಾ? ತಾಂತ್ರಿಕ ಸಮಸ್ಯೆ ಹೆಚ್ಚಿದ ಹಿನ್ನೆಲೆ ಕೆವೈಸಿ ದಿನಾಂಕ ಮುಂದೂಡಿಕೆ ಆಗುತ್ತಾ? ಅನ್ನೋ ಪ್ರಶ್ನೆ ಉದ್ಭವಿಸಿದೆ. ಈ ಸಂಬಂಧ ರಾಜ್ಯ ಆಹಾರ ಸಚಿವ ರಿಜ್ವಾನ್ ಅರ್ಷದ್ ಅಧಿಕಾರಿಗಳ ಜತೆ ಸಭೆ ನಡೆಸಿ ಮಹತ್ವದ ಸೂಚನೆ ನೀಡಿದ್ದಾರೆ.

ಪೊಲೀಸ್ ಅಂದ್ರೆ ಭಕ್ತಿನೂ ಇರಬೇಕು, ಭಯನೂ ಇರಬೇಕು: ಟಿ.ನರಸೀಪುರ ಇನ್ಸ್​​​ಪೆಕ್ಟರ್ ಪರ ಡಿಕೆಶಿ ಬ್ಯಾಟಿಂಗ್

ಪೊಲೀಸ್ ಅಂದ್ರೆ ಭಕ್ತಿನೂ ಇರಬೇಕು, ಭಯನೂ ಇರಬೇಕು: ಟಿ.ನರಸೀಪುರ ಇನ್ಸ್​​​ಪೆಕ್ಟರ್ ಪರ ಡಿಕೆಶಿ ಬ್ಯಾಟಿಂಗ್

ವಿರೋಧ ಪಕ್ಷದ ನಾಯಕರು ಕರೆದುಕೊಂಡು ಹೋಗಿ ಪಾಪಾ ಮಹಾರಾಜರನ್ನು ಕರೆದುಕೊಂಡು ಹೋಗಿ ರಸ್ತೆಯಲ್ಲಿ ಇಳಿಸಿದ್ದಾರೆ. ಯಾಕೆ ಇಂತಹ ಮಟ್ಟಕ್ಕೆ ನಮ್ಮ ವಿಪಕ್ಷ ನಾಯಕರು ಇಳಿದ್ರು . ಇವೆಲ್ಲಾ ಪಂಚಾಯತಿ ಲೆವೆಲ್ ನಲ್ಲಿ ನಡೆಯೋ ಕೆಲಸಗಳು. ವಿಪಕ್ಷ ನಾಯಕ ಅನ್ನೋದು ಸಾಂವಿಧಾನಿಕ ಹುದ್ದೆ. ನಾನು ಅವರಿಂದ ಇನ್ನು ಎತ್ತರವಾಗಿ ನಾನು ನಿರೀಕ್ಷೆ ಮಾಡುತ್ತಿದ್ದೇವೆ. ಇದಕ್ಕೆಲ್ಲ ಅವರು ಇಳಿಯಬಾರದು ಎಂದು ಆರ್ ಅಶೋಕ್​​​ಗೆ ಟಾಂಗ್ ಕೊಟ್ಟಿದ್ದಾರೆ. ಈ ಮೂಲಕ ಇನ್ಸ್​​ಪೆಕ್ಟರ್​ ಧನಂಜಯ್ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ ಖರ್ಗೆ ಗರಂ

ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ ಖರ್ಗೆ ಗರಂ

ಮಸೀದಿ ಮುಂದೆ ಮೆರವಣಿಗೆ ಮಾಡಿ ಪಟಾಕಿ ಹೊಡೆದ್ರೆ ನಿಮ್ ಗ್ರಹಚಾರ ಬಿಡಿಸ್ತೀನಿ ಎನ್ನುವ ಟಿ.ನರಸೀಪುರ ಇನ್ಸ್​​​ಪೆಕ್ಟರ್ ಧನಂಜಯ್ ದರ್ಪದ ಧಮ್ಕಿ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಇನ್ಸ್​​ಪೆಕ್ಟರ್​​ ಧನಂಜಯ್​​ನನ್ನು ಅಮಾನತು ಮಾಡಲೇಬೇಕೆಂದು ವಿಪಕ್ಷ ಬಿಜೆಪಿ ಪಟ್ಟು ಹಿಡಿದಿದೆ. ಇನ್ನು ಈ ಬಗ್ಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದು, ಕ್ರಮ ಬಗ್ಗೆ ನೋಡೋಣ, ಬಿಜೆಪಿಯವರನ್ನು ಕೇಳಿ ಮಾಡಲು ಆಗಲ್ಲ. ಬಿಜೆಪಿಯವರು ಹೇಳಿದಂತೆ ನಾವು ಆಡಳಿತ, ಕೇಳುವುದಕ್ಕೆ ಆಗಲ್ಲ. ಅಶೋಕ್ ಗೃಹ ಸಚಿವರಿದ್ದಾಗ ಸಭೆ ಮಾಡಿಲ್ವಾ, ಸೂಚನೆ ಕೊಟ್ಟಿಲ್ವಾ? ಅಶೋಕ್​ ಇದ್ದಾಗ ಏನು ನಿಯಮ ಇತ್ತೋ ಈಗಲೂ ಅದೇ ನಿಯಮ. ಮೈಸೂರಿನ ನಿರುದ್ಯೋಗಿ ರಾಜಕಾರಣಿಗೆ ಕೆಲಸ ಇಲ್ಲ.

ಟಿ.ನರಸೀಪುರ ಗಣೇಶ ಗಲಾಟೆ: ಇನ್ಸ್​​ಪೆಕ್ಟರ್​​​ ವಿರುದ್ಧದ ಹಳೆ ಪ್ರಕರಣಗಳು ಮುನ್ನೆಲೆಗೆ

ಟಿ.ನರಸೀಪುರ ಗಣೇಶ ಗಲಾಟೆ: ಇನ್ಸ್​​ಪೆಕ್ಟರ್​​​ ವಿರುದ್ಧದ ಹಳೆ ಪ್ರಕರಣಗಳು ಮುನ್ನೆಲೆಗೆ

ಮಸೀದಿ ಮುಂದೆ ಮೆರವಣಿಗೆ ಮಾಡಿ ಪಟಾಕಿ ಹೊಡೆದ್ರೆ ನಿಮ್ ಗ್ರಹಚಾರ ಬಿಡಿಸ್ತೀನಿ ಎಂದು ಗಣೇಶ ಕೂರಿಸುವ ಯುವಕರಿಗೆ ಟಿ.ನರಸೀಪುರ ಇನ್ಸ್​​​ಪೆಕ್ಟರ್ ಧನಂಜಯ್ ದರ್ಪದ ಧಮ್ಕಿ, ಈಗ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೆಂಕಿ ಹೊತ್ತಿಸಿದೆ. ಟಿ.ನರಸೀಪುರದ ಇನ್ಸ್‌ಪೆಕ್ಟರ್ ಧನಂಜಯನನ್ನ ಅಮಾನತು ಮಾಡಬೇಕೆಂದು ಬಿಜೆಪಿ ಪಟ್ಟುಹಿಡಿದೆ. ಈ ಮಧ್ಯೆ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧದ ಹಳೆ ಪ್ರಕರಣಗಳು ಮುನ್ನಲೆಗೆ ಬಂದಿವೆ.

ರೇಷನ್ ಕಾರ್ಡ್ ಇ-ಕೆವೈಸಿ ವೇಳೆ ತಾಂತ್ರಿಕ ಸಮಸ್ಯೆ ಬಗ್ಗೆ ಡಿಸಿಎಂ ಪರಮೇಶ್ವರ್ ಹೇಳಿದ್ದಿಷ್ಟು

ರೇಷನ್ ಕಾರ್ಡ್ ಇ-ಕೆವೈಸಿ ವೇಳೆ ತಾಂತ್ರಿಕ ಸಮಸ್ಯೆ ಬಗ್ಗೆ ಡಿಸಿಎಂ ಪರಮೇಶ್ವರ್ ಹೇಳಿದ್ದಿಷ್ಟು

ಡಿಸಿಎಂ ಪರಮೇಶ್ವರ್, ರೇಷನ್ ಕಾರ್ಡ್ ಇ-ಕೆವೈಸಿ ವೇಳೆ ತಾಂತ್ರಿಕ ಸಮಸ್ಯೆ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ಮಾಡುತ್ತೇವೆ.​ ಸದ್ಯ ಸರಣಿ ರಜೆ ಬಂದಿದೆ, ತಾಂತ್ರಿಕ ಸಮಸ್ಯೆ ಬಗ್ಗೆ ಚರ್ಚಿಸುತ್ತೇವೆ. ತಾಂತ್ರಿಕ ಸಮಸ್ಯೆ ಇದ್ದರೆ ದಿನಾಂಕ ವಿಸ್ತರಣೆ ಮಾಡೋ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಡಿಕೆ ಶಿವಕುಮಾರ್ ಸರ್ಕಾರಕ್ಕೆ 100ರ ಸಂಭ್ರಮ :ಬಿಕೆ ಹರಿಪ್ರಸಾದ್ ಅಸಮಾಧಾನ!

ಡಿಕೆ ಶಿವಕುಮಾರ್ ಸರ್ಕಾರಕ್ಕೆ 100ರ ಸಂಭ್ರಮ :ಬಿಕೆ ಹರಿಪ್ರಸಾದ್ ಅಸಮಾಧಾನ!

ಡಿಕೆ ಶಿವಕುಮಾರ್ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ್ದು, ಈ ಶತದಕ ಸಂಭ್ರಮವನ್ನು ಡಿಕೆ ಶಿವಕುಮಾರ್ ಮೊನ್ನೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಅದ್ಧೂರಿಯಾಗಿ ಆಚರಿಸಿದ್ದಾರೆ. ಇನ್ನು ಈ ಕಾರ್ಯಕ್ರಮವನ್ನು ಮಾಜಿ ಸಿಎಂ ಸಿದ್ದರಾಮಯ್ಯನವರಿಂದ ಉದ್ಘಾಟಿಸಿದ್ದು ವಿಶೇಷ. ಆದ್ರೆ, ಈ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​​ನಲ್ಲಿ ಅಸಮಧಾನ ಭುಗಿಲೆದ್ದಿದೆ. ಹೌದು...ಸ್ವತಃ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಅಸಮಾಧಾನಗೊಂಡಿದ್ದಾರೆ.

ಭೂ ವಿವಾದ ಬಗೆಹರಿಸಿಕೊಡಿ: ಪ್ರಧಾನಿ ಮೋದಿ ಭೇಟಿ ಮಾಡಿ ಸಿಬಿಐ ತನಿಖೆಗೆ ಸ್ಕೂಲ್‌ಮೇಟ್ ಮನವಿ

ಭೂ ವಿವಾದ ಬಗೆಹರಿಸಿಕೊಡಿ: ಪ್ರಧಾನಿ ಮೋದಿ ಭೇಟಿ ಮಾಡಿ ಸಿಬಿಐ ತನಿಖೆಗೆ ಸ್ಕೂಲ್‌ಮೇಟ್ ಮನವಿ

ದಶಕಗಳಷ್ಟು ಹಳೆಯದಾದ ಭೂ ವಿವಾದದಲ್ಲಿ ಮಧ್ಯ ಪ್ರವೇಶಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಶಾಲಾ ಸಹಪಾಠಿ ಮನವಿ ಮಾಡಿದ್ದಾರೆ. ಸ್ಥಳೀಯ ಆಡಳಿತ, ಪೊಲೀಸ್ ಠಾಣೆ ಮೆಟ್ಟಿಲೇರಿದರೂ ಪ್ರಯೋಜನವಾಗಿಲ್ಲ. ಅಂತಿಮವಾಗಿ ಬಾಲ್ಯದ ಸ್ನೇಹಿತ ಪ್ರಧಾನಿ ನರೇಂದ್ರ ಮೋದಿಯವರ ಮೊರೆ ಹೋಗಿದ್ದು, ಪ್ರಕರಣ ತನಿಖೆಯನ್ನು ಸಿಬಿಐಗೆ ನೀಡುವಂತೆ ಕೋರಿದ್ದಾರೆ. ಹಾಗಾದ್ರೆ, ಏನಿದು ಪ್ರಕರಣ? ಯಾರು ಈ ಬಾಲ್ಯದ ಸ್ನೇಹಿತ ಎನ್ನುವ ವಿವರ ಇಲ್ಲಿದೆ.

ಪ್ರಧಾನಿ ಮೋದಿ ಸಾರ್ವಜನಿಕ ಸೇವೆಗೆ 25ರ ಮೈಲಿಗಲ್ಲು: ಸೆ.17 ರಿಂದ ಅ.17ರವರೆಗೆ ‘ಸೇವಾ ಸಂಕಲ್ಪ’ ಅಭಿಯಾನ

ಪ್ರಧಾನಿ ಮೋದಿ ಸಾರ್ವಜನಿಕ ಸೇವೆಗೆ 25ರ ಮೈಲಿಗಲ್ಲು: ಸೆ.17 ರಿಂದ ಅ.17ರವರೆಗೆ ‘ಸೇವಾ ಸಂಕಲ್ಪ’ ಅಭಿಯಾನ

ಪ್ರಧಾನಿ ನರೇಂದ್ರ ಮೋದಿಯವರ 25 ವರ್ಷಗಳ ರಾಜಕೀಯ ಜೀವನದ ಅಂಗವಾಗಿ, ಎನ್​​ಡಿಎ ಮೈತ್ರಿಕೂಟ ಸೆ.17ರಿಂದ ಒಂದು ತಿಂಗಳ 'ಸೇವಾ ಸಂಕಲ್ಪ' ಅಭಿಯಾನವನ್ನು ಹಮ್ಮಿಕೊಂಡಿದೆ. ಈ ಅಭಿಯಾನದಡಿ ದೇಶಾದ್ಯಂತ ಸರ್ಕಾರಿ ಯೋಜನೆಗಳ ಜಾಗೃತಿ, ರಕ್ತದಾನ, ಸ್ವಚ್ಛತೆ, ಸಂವಾದ, ಯಾತ್ರೆಗಳು ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ಬಗ್ಗೆ ಸ್ವತಃ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಹಿತಿ ಹಂಚಿಕೊಂಡಿದ್ದಾರೆ.

‘ಮುಂದಿನ ಜನ್ಮ ಇದ್ದರೆ ನಿನ್ನವನಾಗಿ ಹುಟ್ಟುವೆ’: ಇನ್ಸ್ಟಾದಲ್ಲಿ ಪೋಸ್ಟ್ ಹಾಕಿ ಯುವಕ ಸಾವು

‘ಮುಂದಿನ ಜನ್ಮ ಇದ್ದರೆ ನಿನ್ನವನಾಗಿ ಹುಟ್ಟುವೆ’: ಇನ್ಸ್ಟಾದಲ್ಲಿ ಪೋಸ್ಟ್ ಹಾಕಿ ಯುವಕ ಸಾವು

ಪ್ರೀತಿ ಮಾಯೆ ಹುಷಾರು, ಕಣ್ಣೀರ್ ಬಜಾರು ಎಂಬ ಸಿನಿಮಾ ಹಾಡು ನಿಮಗೆಲ್ಲಾ ಗೊತ್ತೇ ಇದೆ. ಹೌದು ಪ್ರೀತಿ ಎಂಬುದು ಮಾಯೆ. ಇಂಥಹ ಪ್ರೀತಿಯ ಮಾಯಾಜಾಲಕ್ಕೆ ಸಿಲುಕಿ ಯುವಕನೋರ್ವ ತನ್ನ ಜೀವವನ್ನೇ ಕಳೆದುಕೊಂಡಿದ್ದಾನೆ. ಮುಂದಿನ ಜನ್ಮ ಅಂತ ಇದ್ದರೆ ನಾನು ನಿನ್ನವನಾಗಿ ಹುಟ್ಟುವೆ ಎಂದು ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿ ಜೀವ ಬಿಟ್ಟಿದ್ದಾನೆ.

ಗಣೇಶ ಕೇವಲ ಬಿಜೆಪಿ ಆಸ್ತಿಯಲ್ಲ,ಎಲ್ಲರ ಆಸ್ತಿ, ಎಲ್ಲಿ ಬೇಕಾದ್ರೂ ಹೋಗಲಿ: ಸಿಎಂ

ಗಣೇಶ ಕೇವಲ ಬಿಜೆಪಿ ಆಸ್ತಿಯಲ್ಲ,ಎಲ್ಲರ ಆಸ್ತಿ, ಎಲ್ಲಿ ಬೇಕಾದ್ರೂ ಹೋಗಲಿ: ಸಿಎಂ

ಟಿ.ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದಂತೆ ಪೊಲೀಸ್ ಇನ್‌ಸ್ಪೆಕ್ಟರ್ ನೀಡಿದ ಎಚ್ಚರಿಕೆಯು ತೀವ್ರ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಟಿ. ನರಸೀಪುರಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ಭೇಟಿ ನೀಡಿದ್ದಾರೆ. ಅಲ್ಲದೇ ಇನ್ಸ್​​ಪೆಕ್ಟರ್​​​ನ ಅಮಾನತು ಮಾಡುವಂತೆ ಆಗ್ರಹಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಇನ್ನೊಂದೆಡೆ ಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಅಶಾಂತಿ ಮೂಡಿಸೋಕೆ ದೊಡ್ಡ ಕುತಂತ್ರ ನಡೆಯುತ್ತಿದೆ. ದೊಡ್ಡ ಕುತಂತ್ರ ನಡೆಯುತ್ತಿದೆ ಎಂದು ನಮಗೆ ಅರಿವಿದೆ. ಅವರು ಏನೂ ಬೇಕಾದ್ರೂ ಮಾಡಲಿ. ಪೊಲೀಸರಿಗೆ ಹುಷಾರಾಗಿರಿ ಎಂದು ನಾವು ಹೇಳಿದ್ದೇವೆ. ಗಣೇಶ ಕೇವಲ ಬಿಜೆಪಿ ಆಸ್ತಿಯಲ್ಲ, ಗಣೇಶ ಎಲ್ಲರ ಆಸ್ತಿ. ಎಲ್ಲಿ ಬೇಕಾದ್ರೂ ಹೋಗಲಿ, ಏನು ಬೇಕಾದ್ರೂ ಮಾಡಲಿ. ಅವರ ಪರಿಮಿತಿಯಲ್ಲಿ ಅವರು ಮಾಡಲಿ ಅಷ್ಟೇ ಎಂದು ಸ್ಪಷ್ಟಪಡಿಸಿದರು.

ಕಡಿಮೆ ಬೆಲೆಯಲ್ಲಿ Dolby Soundbars ಬಿಡುಗಡೆ ಮಾಡಿದ ಬೋಟ್: ಎಂಆರ್​​ಪಿ ಮೇಲೆ ಶೇ.66ರಷ್ಟು ಡಿಸ್ಕೌಂಟ್

ಕಡಿಮೆ ಬೆಲೆಯಲ್ಲಿ Dolby Soundbars ಬಿಡುಗಡೆ ಮಾಡಿದ ಬೋಟ್: ಎಂಆರ್​​ಪಿ ಮೇಲೆ ಶೇ.66ರಷ್ಟು ಡಿಸ್ಕೌಂಟ್

ಭಾರತದ ಪ್ರಮುಖ audio brandsನಲ್ಲಿ ಒಂದಾದ boAt ತನ್ನ ಹೊಸ product boAt Aavante Prime 5.1 5000D soundbar ಅನ್ನು ಬಿಡುಗಡೆ ಮಾಡಿದೆ. MRP ಮೇಲೆ ಸುಮಾರು ಶೇಕಡಾ 66ರಷ್ಟು ರಿಯಾಯಿತಿ ಸಹ ಇದೆ. ಇದರ ಜೊತೆ ವಾರಂಟಿ ಸಹ ನೀಡುತ್ತಿದೆ. ಹಾಗಾದ್ರೆ, ಇದರಲ್ಲಿ ವಿಶೇಷತೆಗಳೇನು? ಎಂಆರ್​​ಪಿ ಎಷ್ಟು? ಎಷ್ಟಕ್ಕೆ ನೀಡಲಾಗುತ್ತಿದೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಿಬಿಎ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡರಿಂದ ಕ್ಲಾಸ್​​
ಜಿಬಿಎ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡರಿಂದ ಕ್ಲಾಸ್​​
ತುರಹಳ್ಳಿ ಅರಣ್ಯ ಕ್ಲೀನ್ ಮಾಡಿ ಸಿಟಿ ಜನರಿಗೆ ಜಾಗೃತಿ ಮೂಡಿಸಿದ ತಬಾಹಿ
ತುರಹಳ್ಳಿ ಅರಣ್ಯ ಕ್ಲೀನ್ ಮಾಡಿ ಸಿಟಿ ಜನರಿಗೆ ಜಾಗೃತಿ ಮೂಡಿಸಿದ ತಬಾಹಿ
ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳಿಗೂ ಎಸ್ಐಟಿ ತನಿಖೆ ಬಿಸಿ ಸಾಧ್ಯತೆ
ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳಿಗೂ ಎಸ್ಐಟಿ ತನಿಖೆ ಬಿಸಿ ಸಾಧ್ಯತೆ
ಬಸ್‌ಗಾಗಿ ಬೇಡಿಕೆಯಿಟ್ಟ 140 ವಿದ್ಯಾರ್ಥಿಗಳು
ಬಸ್‌ಗಾಗಿ ಬೇಡಿಕೆಯಿಟ್ಟ 140 ವಿದ್ಯಾರ್ಥಿಗಳು
ಹೊಳೆಯಂತಾದ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್, ಟ್ರಾಫಿಕ್ ಜಾಮ್
ಹೊಳೆಯಂತಾದ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್, ಟ್ರಾಫಿಕ್ ಜಾಮ್
ಹುಳ ಇರುವ ಕುಡಿಯುವ ನೀರನ್ನು ಗ್ರಾಮಸಭೆಗೇ ತಂದ ರಾರಾವಿ ಗ್ರಾಮಸ್ಥರು!
ಹುಳ ಇರುವ ಕುಡಿಯುವ ನೀರನ್ನು ಗ್ರಾಮಸಭೆಗೇ ತಂದ ರಾರಾವಿ ಗ್ರಾಮಸ್ಥರು!
ಮಸೀದಿಯೊಳಗೆ ಗಣಪತಿ ಪ್ರತಿಷ್ಠಾಪಿಸಿ ಭಾವೈಕ್ಯತೆ ಮೆರೆದ ಮುಸ್ಲಿಂ ಯುವಕರು!
ಮಸೀದಿಯೊಳಗೆ ಗಣಪತಿ ಪ್ರತಿಷ್ಠಾಪಿಸಿ ಭಾವೈಕ್ಯತೆ ಮೆರೆದ ಮುಸ್ಲಿಂ ಯುವಕರು!
ಫುಟ್​ಪಾತ್​ನಲ್ಲಿ ಕಸ ಸುರಿದ ಕಟ್ಟಡ ಮಾಲೀಕನಿಗೆ 50,000 ರೂ. ದಂಡ!
ಫುಟ್​ಪಾತ್​ನಲ್ಲಿ ಕಸ ಸುರಿದ ಕಟ್ಟಡ ಮಾಲೀಕನಿಗೆ 50,000 ರೂ. ದಂಡ!
ಧಾರಾಕಾರ ಮಳೆಯಿಂದ ಬಾಗಲಕುಂಟೆಯಲ್ಲಿ ಮನೆಗಳಿಗೆ ನುಗ್ಗಿದ ನೀರು!
ಧಾರಾಕಾರ ಮಳೆಯಿಂದ ಬಾಗಲಕುಂಟೆಯಲ್ಲಿ ಮನೆಗಳಿಗೆ ನುಗ್ಗಿದ ನೀರು!
ನಾಮಿನೇಷನ್ ವಿಷಯದಲ್ಲಿ ಉರಿದುಬಿದ್ದ ಶಾಸ್ತ್ರಿ; ನಡೆಯಿತು ಮತ್ತೊಂದು ಜಗಳ
ನಾಮಿನೇಷನ್ ವಿಷಯದಲ್ಲಿ ಉರಿದುಬಿದ್ದ ಶಾಸ್ತ್ರಿ; ನಡೆಯಿತು ಮತ್ತೊಂದು ಜಗಳ