ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್ ಮಾಧ್ಯಮದಿಂದ. ಒನ್ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.
ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ
ರಾಜಕೀಯ ವಿರೋಧಿಯಾಗಿದ್ದ ಸಿದ್ದರಾಮಯ್ಯನವರ ಅತ್ಯಾಪ್ತ ಕೆಎನ್ ರಾಜಣ್ಣ ಅವರನ್ನು ಡಿಕೆ ಶಿವಕುಮಾರ್ ಎರಡು ಬಾರಿ ಭೇಟಿ ಗಾಳ ಹಾಕಲು ಯತ್ನಿಸಿದ್ದಾರೆ. ಆದ್ರೆ ಇದಕ್ಕೆ ರಾಜಣ್ಣ ಸೊಪ್ಪು ಹಾಕಿಲ್ಲ. ಡಿಕೆಶಿ ಭೇಟಿ ಬಳಿಕ ಇದೀಗ ರಾಜಣ್ಣ ಇಂದು (ಡಿಸೆಂಬರ್ 23) ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ರಹಸ್ಯ ಮಾತುಕತೆ ಮಾಡಿದ್ದಾರೆ.
- Ramesh B Jawalagera
- Updated on: Dec 23, 2025
- 10:36 pm
ಬೆಂಗಳೂರಿನಲ್ಲಿ ಶೂಟೌಟ್: ವಿಚ್ಛೇದನ ಕೋರ್ಟ್ನಲ್ಲಿರುವಾಗಲೇ ಹೆಂಡ್ತಿಯನ್ನ ಗುಂಡಿಕ್ಕಿ ಕೊಂದ ಪತಿ
ದಂಪತಿ ಸಂಸಾರದಲ್ಲಿ ಮನಸ್ತಾಪ ಉಂಟಾಗಿದ್ದು, ಗಂಡ ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಗಂಡ ಅನುಮಾನಪಟ್ಟ ಹಿನ್ನೆಲೆಯಲ್ಲಿ ಹೆಂಡತಿ ವಿಚ್ಛೇದನಕ್ಕಾಗಿ ಕೋರ್ಟ್ ಮೊರೆ ಹೋಗಿದ್ದರು. ಆದ್ರೆ, ಕೋರ್ಟ್ನಲ್ಲಿ ವಿಚ್ಛೇದನ ಅರ್ಜಿ ವಿಚಾರಣೆ ಇರುವಾಗಲೇ ಪತಿ, ಪತ್ನಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ. ಡಿವೋರ್ಸ್ ಸಂಬಂಧ ನ್ಯಾಯಾಲಯದಲ್ಲಿ ವಿಚಾರಣೆ ಮುಗಿಸಿಕೊಂಡು ಬರುತ್ತಿರುವಾಗಲೇ ನಡು ರಸ್ತೆಯಲ್ಲೇ ಗನ್ ತೆಗೆದು ಪತ್ನಿಗೆ ಶೂಟ್ ಮಾಡಿ ಕೊಂದಿದ್ದಾನೆ. ಈ ಶೂಟೌಟ್ನಿಂದ ಬೆಂಗಳೂರು ಬೆಚ್ಚಿಬಿದ್ದಿದೆ.
- Ramesh B Jawalagera
- Updated on: Dec 23, 2025
- 9:56 pm
ತೀವ್ರಗೊಂಡ ಕುರ್ಚಿ ಕಿತ್ತಾಟ: ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಸಿದ್ದರಾಮಯ್ಯ (Siddaramaiah), ಡಿಕೆ ಶಿವಕುಮಾರ್ (DK Shivakumar) ಬಣಗಳಲ್ಲಿ ಗೊಂದಲ ಸೃಷ್ಟಿಸಿದೆ. ಹೇಗಾದರೂ ಮಾಡಿ ಸಿಎಂ ಆಗಲೇಬೇಕೆಂದು ಹಠಕ್ಕೆ ಬಿದ್ದಿರುವ ಡಿಸಿಎಂ ಡಿಕೆ ಶಿವಕುಮಾರ್ ಇಂದು (ಡಿಸೆಂಬರ್ 23) ದೆಹಲಿ ತೆರಳಿದ್ದು, ಅಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಸಾಧ್ಯತೆಗಳಿವೆ. ಆದ್ರೆ, ಇತ್ತ ಸಿದ್ದರಾಮಯ್ಯನವರ ಶಕ್ತಿ ಪ್ರದರ್ಶಿಸಲು ಅಹಿಂದ ಸಮಾವೇಶಕ್ಕೆ ಸಿದ್ಧತೆಗಳು ನಡೆದಿವೆ.
- Ramesh B Jawalagera
- Updated on: Dec 23, 2025
- 4:55 pm
ಗ್ರೇಟರ್ ಬೆಂಗಳೂರು ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
ಗ್ರೇಟರ್ ಬೆಂಗಳೂರು ಪ್ರಾಧಿಕಾರದ (Greater Bengaluru Authority) ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ (Munish Moudgil) ವಿರುದ್ಧ ನೌಕರರು ಹಾಗೂ ಅಧಿಕಾರಿಗಳ ಪಿತ್ತ ನೆತ್ತಿಗೇರಿದ್ದು, ಕಿರುಕುಳ ಹಾಗೂ ದುರುದ್ದೇಶಪೂರ್ವಕವಾಗಿ ಅಧಿಕಾರಿಗಳನ್ನು ಅಮಾನತು ಮಾಡುವ ಕೆಲಸಕ್ಕೆ ಹಿರಿಯ ಅಧಿಕಾರಿಗಳು ಮುಂದಾಗಿದ್ದಾರೆ ಎಂದು GBA ನೌಕರರು ಪ್ರತಿಭಟನೆಯ ಹಾದಿ ತುಳಿದಿದ್ದಾರೆ.
- Ramesh B Jawalagera
- Updated on: Dec 23, 2025
- 3:39 pm
ಪ್ರೇಯಸಿ ಮದ್ವೆ ಮಂಟಪಕ್ಕೆ ಬರುವಷ್ಟರಲ್ಲೇ ಬೇರೊಂದು ಯುವತಿಗೆ ತಾಳಿಕಟ್ಟಿದ್ದ ಪ್ರಿಯಕರ ಅರೆಸ್ಟ್
ಪ್ರೇಯಸಿಗೆ ವಂಚಿಸಿ ಬೇರೆ ಯುವತಿ ಜತೆ ಮದುವೆಯಾಗಿದ್ದ ಶರತ್ ಎನ್ನುವಾತನ್ನು ಪೊಲೀಸರು ಬಂಧಿಸಿದ್ದು, ಸದ್ಯ ಕೋರ್ಟ್ ನವವಿವಾಹಿತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಚಿಕ್ಕಮಗಳೂರಿನ (Chikkamagaluru) ಶರತ್ ಎನ್ನುವಾತ ಯುವತಿಯನ್ನು ಪ್ರೀತಿಸಿದ್ದ. ಅಲ್ಲದೇ ಮದುವೆಯಾಗುವುದಾಗಿ ಆಕೆಯನ್ನು ಲೈಂಗಿಕವಾಗಿ ಸಹ ಬಳಿಸಿಕೊಂಡಿದ್ದ. ಆದ್ರೆ, ಏಕಾಏಕಿ ಶರತ್ ಇದೇ ಡಿಸೆಂಬರ್ 14ರಂದು ಚಿಕ್ಕಮಗಳೂರಿನ ದೊಡ್ಡೇಗೌಡ ಕಲ್ಯಾಣಮಂಟಪದಲ್ಲಿ ಬೇರೊಂದು ಯುವತಿ ಜತೆ ಮದುವೆಯಾಗಿದ್ದ.
- Ramesh B Jawalagera
- Updated on: Dec 23, 2025
- 2:57 pm
ಕುಡಿದು ಮಠದಲ್ಲಿ ಸ್ವಾಮೀಜಿ ರಂಪಾಟ: ಮತ್ತಿನಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶ್ರೀ
ಶಂಕರಲಿಂಗೇಶ್ವರ ಸಂಸ್ಥಾನದ ಹಿರೇಮಠದ ಶಾಂತಲಿಂಗ ಶಿವಾಚಾರ್ಯ ಕುಡಿದು ರಂಪಾಟ ಮಾಡಿದ್ದಾರೆ. ಕೆಲ ತಿಂಗಳಿನಿಂದ ನಾಪತ್ತೆಯಾಗಿದ್ದ ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಉಡಚಣ ಗ್ರಾಮದ ಮಠದ ಶಾಂತಲಿಂಗ ಶಿವಾಚಾರ್ಯ, ಇದೀಗ ದಿಢೀರ್ ಮಠದಲ್ಲಿ ಪ್ರತ್ಯಕ್ಷರಾಗಿದ್ದಾರೆ. ಮಠಕ್ಕೆ ಹೊಸ ಪೀಠಾಧಿಪತಿ ನೇಮಕದ ಬಗ್ಗೆ ಚರ್ಚೆ ನಡೆಯುತ್ತಿರುವ ಸುದ್ದಿ ತಿಳಿದು ಸ್ವಾಮೀಜಿ ಮಠಕ್ಕೆ ವಾಪಸ್ ಆಗಿದ್ದಾರೆ. ಆದ್ರೆ, ಕುಡಿದು ಮಠದ ಆವರಣದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಈ ಮೂಲಕ ತಮ್ಮ ವಿರೋಧಿಗಳನ್ನ ಹೆದರಿಸಲು ಗುಂಡು ಹಾರಿಸಿದ್ರಾ ಎನ್ನುವ ಚರ್ಚೆಗಳು ನಡೆದಿದ್ದು, ಸದ್ಯ ಗುಂಡು ಹಾರಿಸಿರುವ ವಿಡಿಯೋ ವೈರಲ್ ಆಗಿದೆ.
- Ramesh B Jawalagera
- Updated on: Dec 22, 2025
- 7:03 pm
ಗೃಹಲಕ್ಷ್ಮೀಯರಿಗೆ ಗುಡ್ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್ ಲಕ್ಷ್ಮೀ ಬರ್ತಾಳೆ
ವಿಪಕ್ಷ ಬಿಜೆಪಿ-ಜೆಡಿಎಸ್ ಹೋರಾಟಕ್ಕೆ ರಾಜ್ಯ ಸರ್ಕಾರ ಮಣಿದಿದೆ. ಗೃಹಲಕ್ಷ್ಮಿ ಯೋಜನೆ 24ನೇ ಕಂತಿನ ಹಣ ಬಿಡುಗಡೆಗೆ ಸರ್ಕಾರ ಮುಂದಾಗಿದೆ. ಬರುವ ಶನಿವಾರದೊಳಗೆ 24ನೇ ಕಂತಿನ ದುಡ್ಡು ಫಲಾನುಭವಿಗಳ ಖಾತೆಗೆ ಸೇರಲಿ.ಇದು ಸಹಜವಾಗಿಯೇ ಫಲಾನುಭವಿಗಳ ಮುಖದಲ್ಲಿ ಮಂದಹಾಸ ಮೂಡಿಸಿದೆ. ಪಂಚ ಗ್ಯಾರಂಟಿಯಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ ಗ್ರಹಣ ಹಿಡಿದಿತ್ತು.
- Ramesh B Jawalagera
- Updated on: Dec 21, 2025
- 9:19 pm
ಸಹಾಯ ಮಾಡೋ ನೆಪದಲ್ಲಿ ಮಂಚಕ್ಕೆ ಕರೆದ, ಮಹಿಳೆಯ ಜೀವಕ್ಕೆ ಕುತ್ತು ತಂದ ಸೋಶಿಯಲ್ ಮೀಡಿಯಾ ಫ್ರೆಂಡ್
ಸೋಶಿಯಲ್ ಮೀಡಿಯಾದಲ್ಲಿ ಫ್ರೆಂಡ್ ರಿಕ್ವೆಸ್ಟ್ ಕಳಿಸಿದ್ರು ಅಂತ ಅಕ್ಸೆಪ್ಟ್ ಮಾಡಿ ಚಾಟ್ ಮಾಡುವ ಹೆಣ್ಮಕ್ಳೇ ಹುಷಾರಾಗಿರಿ. ಯಾಕಂದ್ರೆ ಮಾನ ಮರ್ಯಾದೆ ಜೊತೆಗೆ ಸಂಸಾರ ಹಾಳುಮಾಡಿಕೊಂಡು ಜೀವನ ಬರ್ಬಾದ್ ಆಗುತ್ತೆ. ಕೆಲವರು ನಿಮ್ಮ ಜೊತೆ ಗೆಳೆತನ ನಾಟಕವಾಡಿ ಏನೇನೋ ಸ್ಕೆಚ್ ಹಾಕಿರುತ್ತಾರೆ. ಹೌದು...ಬೆಂಗಳೂರಿನಲ್ಲಿ ಮಹಿಳೆಯೊಬ್ಬರಿಗೆ ಆಗಿದ್ದೂ ಅದೆ.
- Ramesh B Jawalagera
- Updated on: Dec 21, 2025
- 8:30 pm
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ, ವಿಡಿಯೋ ಇಲ್ಲಿದೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ ಪುಟ್ಟಪನಗುಡಿ ಬೀದಿಯಲ್ಲಿರುವ ಪುರಾತನ ಕಾಲದ ಕಲ್ಯಾಣಿಯ ಆಳದಲ್ಲಿ ಶಿವಲಿಂಗ ಪತ್ತೆಯಾಗಿದೆ. ಸ್ಥಳೀಯ ಸೇರಿಕೊಂಡು ಕಲ್ಯಾಣಿಯಲ್ಲಿ ತುಂಬಿಕೊಂಡಿದ್ದ ಹೂಳು ತೆಗೆದು ಸ್ವಚ್ಚತೆ ಮಾಡುತ್ತಿದ್ದು, ನೀರು ಖಾಲಿಯಾಗುತ್ತಿದ್ದಂತೆ ಕಲ್ಯಾಣಿ ಮಧ್ಯ ಭಾಗದಲ್ಲಿ ಶಿವಲಿಂಗ ಕಂಡುಬಂದಿದೆ. ಶಿವಲಿಂಗ ಕಣ್ಣಿಗೆ ಬೀಳುತ್ತಿದ್ದಂತೆಯೇ ಸ್ಥಳಿಯರು ಅಚ್ಚರಿಗೊಂಡು ಪೂಜೆ ಸಲ್ಲಿಸಿದರು.
- Ramesh B Jawalagera
- Updated on: Dec 21, 2025
- 6:54 pm
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಇಂದಿನ ಬದಲಾಗುತ್ತಿರುವ ಡಿಜಿಟಲ್ (Digital) ಯುಗದಲ್ಲಿ ಮೊಬೈಲ್ (Mobile), ಟಿವಿ (Tv), ಓಟಿಟಿ (Ott), ವೆಬ್ಸೀರಿಸ್ಗಳು ನಮ್ಮ ಜೀವನದ ಅವಿಭಾಜ್ಯ ಅಂಗವಾಗಿವೆ. ಆದರೆ ಈ ತಂತ್ರಜ್ಞಾನ ಅವಲಂಬನೆ ಹೆಚ್ಚಾದಂತೆ ಮಕ್ಕಳ ಬಾಲ್ಯದ ಆಟಗಳು, ಕುಟುಂಬದ ಒಡನಾಟ, ಸಂಸ್ಕೃತಿ ಮತ್ತು ಸಾಮಾಜಿಕ ಮೌಲ್ಯಗಳು ನಿಧಾನವಾಗಿ ಮರೆಯಾಗುತ್ತಿವೆ. ಮಕ್ಕಳು ಮೊಬೈಲ್ಗಳಲ್ಲೇ ಮುಳುಗಿದರೆ, ವಯಸ್ಕರು ಕೂಡಾ ಟಿವಿ, ವಿಡಿಯೋ ಗೇಮ್ಸ್, ಓಟಿಟಿ, ಸಾಮಾಜಿಕ ಜಾಲತಾಣಗಳಲ್ಲಿ ಸಮಯ ಕಳೆಯುತ್ತಿದ್ದಾರೆ. ಇದರ ಪರಿಣಾಮವಾಗಿ ನಮ್ಮ ಆಚಾರ-ವಿಚಾರ, ಸಂಸ್ಕೃತಿಯೇ ಪತನದ ಅಂಚಿಗೆ ತಲುಪಿದೆ ಎಂಬ ಆತಂಕ ದಿನೇದಿನೇ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿಯ (Belagavi) ಹಲಗಾ ಗ್ರಾಮ ಡಿಜಿಟಲ್ ಆಫ್ ಪ್ರಯೋಗಕ್ಕೆ ಮುಂದಾಗಿದೆ.
- Ramesh B Jawalagera
- Updated on: Dec 21, 2025
- 5:31 pm
ನೀವೇ ಎಂಎಲ್ಸಿ ಅಂತ ಗ್ಯಾರಂಟಿ ಏನು? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ನೀವು ಎಂಎಲ್ಸಿ ಎನ್ನುವುದನ್ನು ಏನು ಗ್ಯಾರಂಟಿ ಎಂದು ಬಿಜೆಪಿ ವಿಧಾನಪರಿಷತ್ ಸದಸ್ಯ ಕೇಶವ ಪ್ರಸಾದ್ ಅವರನ್ನು ಟೋಲ್ ಸಿಬ್ಬಂದಿ ಪ್ರಶ್ನಿಸಿದ್ದು, ಬರೋಬ್ಬರಿ 1 ಗಂಟೆಗಳ ಕಾಲ ತಡೆ ನಿಲ್ಲಿಸಿದ್ದಾನೆ. ವಿಜಯಪುರ ಹೊರವಲಯದಲ್ಲಿರುವ ಟೋಲ್ ನಲ್ಲಿ ಈ ಘಟನೆ ನಡೆದಿದೆ. ನಾಳೆ ಕೆಡಿಪಿ ಸಭೆ ಹಿನ್ನೆಲೆಯಲ್ಲಿ ಕೇಶವಪ್ರಸಾದ್ ಅವರು ಇಂದು (ಡಿಸೆಂಬರ್ 21) ವಿಜಯಪುರಕ್ಕೆ ಹೊರಟ್ಟಿದ್ದರು. ಮಾರ್ಗಮಧ್ಯೆ ಟೋಲ್ ಸಿಬ್ಬಂದಿ ಕಾರು ಬಿಡದೇ ನಿಲ್ಲಿಸಿದ್ದಾನೆ.
- Ramesh B Jawalagera
- Updated on: Dec 21, 2025
- 5:05 pm
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಪಟ್ಟಣದಲ್ಲಿ ವೃದ್ಧರ ಮದುವೆ ಸಂಘರ್ಷ ನಡೆದಿದ್ದು, ಇಳಿ ವಯಸ್ಸಿನಲ್ಲಿ ಮದುವೆಯಾದ ತಂದೆ ವಿರುದ್ಧ ಮಕ್ಕಳ ಆಕ್ರೋಶಗೊಂಡಿದ್ದಾರೆ. ಮೊದಲ ಪತ್ನಿ ಮೃತಪಟ್ಟಿದ್ದರಿಂದ 68 ವರ್ಷದ ರಾಜಣ್ಣ ಎನ್ನುವರು ಪತಿಯಿಂದ ದೂರವಾಗಿರುವ 58 ವರ್ಷದ ಗೀತಾ ಎನ್ನುವರನ್ನು ಎರಡನೇ ಮದುವೆಯಾಗಿದ್ದಾರೆ. ಆದ್ರೆ, ಇದೀಗ ಈ ವಯಸ್ಸಿಯನಲ್ಲೇ ತಂದೆ ಮದುವೆಯಾಗಿದ್ದಕ್ಕೆ ಮಕ್ಕಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
- Ramesh B Jawalagera
- Updated on: Dec 21, 2025
- 5:12 pm